Tag: selfie video

  • ಉಕ್ರೇನ್‍ನಲ್ಲಿ ಸಿಲುಕಿಕೊಂಡಿರೋ ಬೀದರ್ ಮೂಲದ ವಿದ್ಯಾರ್ಥಿ – ಸೆಲ್ಫಿ ವೀಡಿಯೋ ವೈರಲ್

    ಉಕ್ರೇನ್‍ನಲ್ಲಿ ಸಿಲುಕಿಕೊಂಡಿರೋ ಬೀದರ್ ಮೂಲದ ವಿದ್ಯಾರ್ಥಿ – ಸೆಲ್ಫಿ ವೀಡಿಯೋ ವೈರಲ್

    ಬೀದರ್: ಉಕ್ರೇನ್‍ನ ಮೆಟ್ರೋದಲ್ಲಿ ಸಿಲುಕಿಕೊಂಡಿರುವ ಬೀದರ್ ಮೂಲದ ವೈದ್ಯಕೀಯ ವಿದ್ಯಾರ್ಥಿ ಅಮಿತ್ ಸೆಲ್ಫಿ ವೀಡಿಯೋ ಮಾಡಿ ಉಕ್ರೇನ್ ಸದ್ಯದ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

    ಬೀದರ್‌ನ ಮಂಗಲಪೇಟೆ ನಿವಾಸಿ ಅಮಿತ್ ಚಂದ್ರಕಾಂತ್ ಸಿರೆಂಜ್ ಸೆಲ್ಫಿ ವೀಡಿಯೋ ಮಾಡಿ ಮೆಟ್ರೋದಲ್ಲಿ ಸೇಫಾಗಿರುವ ಕನ್ನಡಗರನ್ನು ತೋರಿಸಿದ್ದಾರೆ. ನಾವೆಲ್ಲ ಮೆಟ್ರೋದಲ್ಲಿ ಸೇಫಾಗಿ ಇದ್ದು ಪೋಷಕರು, ಸ್ನೇಹಿತರು, ಸಂಬಂಧಿಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ದೇಶದಲ್ಲಿ ಸಿಲುಕಿದ ಹಾವೇರಿಯ 9 ವೈದ್ಯಕೀಯ ವಿದ್ಯಾರ್ಥಿಗಳು – ಪೋಷಕರಲ್ಲಿ ಆತಂಕ

    Bidar

    ಎಂಬ್ಯೇಸಿ ಮತ್ತು ಉಕ್ರೇನ್ ಸರ್ಕಾರ ನಮ್ಮ ಜೊತೆಗೆ ಇದೆ. ನಿಮ್ಮ ಮೆಸೇಜಿಗೆ ನಾನು ರಿಪ್ಲೇ ಮಾಡುವುದಕ್ಕೆ ಆಗುತ್ತಿಲ್ಲ. ಏಕೆಂದರೆ ಇಂಟರ್​ನೆಟ್ ಹಾಗೂ ಬ್ಯಾಟರಿ ಚಾರ್ಜ್ ಇಲ್ಲ. ಜೊತೆಗೆ ಹತ್ತಿರದ ಮೆಟ್ರೋ ಸ್ಟೇಷನ್‍ಗೆ ಹೋಗಿ ಸೇಫಾಗಿರಿ ಎಂದು ಭಾರತ ಸರ್ಕಾರ ಹೇಳಿದೆ ಎಂದು ಬೀದರ್‌ನ ಮಂಗಲಪೇಟೆ ನಿವಾಸಿ ಅಮಿತ್ ಚಂದ್ರಕಾಂತ್ ಸಿರೆಂಜ್ ಸೆಲ್ಫಿ ವೀಡಿಯೋದಲ್ಲಿ ಹೇಳಿದ್ದಾರೆ.  ಇದನ್ನೂ ಓದಿ: Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?

  • ಎಜುಕೇಶನ್ ಸಿಸ್ಟಮ್ ಸರಿಯಿಲ್ಲ- ಸೆಲ್ಫಿ ವೀಡಿಯೋ ಮಾಡಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಎಜುಕೇಶನ್ ಸಿಸ್ಟಮ್ ಸರಿಯಿಲ್ಲ- ಸೆಲ್ಫಿ ವೀಡಿಯೋ ಮಾಡಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಹಾಸನ: ಈಗಿನ ಎಜುಕೇಶನ್ ಸಿಸ್ಟಮ್ ನಲ್ಲಿ ಸುಧಾರಣೆ ಆಗಲಿ. ಈಗಿನ ಎಜುಕೇಶನ್ ಸಿಸ್ಟಂ ಇದ್ದರೂ ಇಲ್ಲದಂತಾಗಿದೆ ಎಂದು ಸಿಎಂ ಮತ್ತು ವಿಶ್ವವಿದ್ಯಾಲಯಗಳ ವಿಸಿಗೆ ಸೆಲ್ಫಿ ವೀಡಿಯೋದಲ್ಲಿ ಮನವಿ ಮಾಡಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಿನ್ನೆ ನಡೆದಿದೆ.

    ಹೇಮಂತ್ ಗೌಡ(20) ಮೃತ ದುರ್ದೈವಿ. ಈತ ಅರಸೀಕೆರೆ ಮೂಲದವನಾಗಿದ್ದಾನೆ. ಹಾಸನ ನಗರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಈತ, ನಿನ್ನೆ ಹಾಸ್ಟೆಲ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಹೇಮಂತ್ ಗೌಡ ಸಾಯುವ ಮುನ್ನ ಸುಮಾರು 13 ನಿಮಿಷ 21 ಸೆಕೆಂಡ್ ಸೆಲ್ಫಿ ವೀಡಿಯೋ ಮಾಡಿದ್ದಾನೆ. ಅದರಲ್ಲಿ ಸಿಎಂ, ವಿಸಿಗಳು, ಎಲ್ಲಾ ಪಕ್ಷದ ದೊಡ್ಡ ದೊಡ್ಡ ಗಣ್ಯಾತಿಗಣ್ಯರು ಈ ಎಜುಕೇಶನ್ ಸಿಸ್ಟಮ್ ಬದಲಾವಣೆಗೆ ಬೆಂಬಲ ಕೊಡಿ. ನ್ಯೂಸ್ ಚಾನಲ್, ಟ್ವಿಟ್ಟರ್, ಫೇಸ್‍ಬುಕ್, ವ್ಯಾಟ್ಸಪ್ ಎಲ್ಲದರಲ್ಲೂ ಈ ವೀಡಿಯೋ ಅಪ್ ಲೋಡ್ ಮಾಡಿ. ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    ನನ್ನ ಸುಟ್ಟರೆ ಬೂದಿಯಾಗುತ್ತೆ, ಮಣ್ಣು ಮಾಡಿದರೆ ಕೊಳೆಯುತ್ತದೆ. ಆದ್ದರಿಂದ, ನನ್ನ ಅಂಗಾಂಗಳನ್ನು ದಾನ ಮಾಡಿ. ಜಗದ್ಗುರು ಶ್ರೀ ನಿರ್ಮಲಾನಂಧನಾಥ ಸ್ವಾಮೀಜಿ ಆಶೀರ್ವಾದ ಪಡೆಯುವುದು ನನ್ನ ಜೀವನದ ಆಸೆಯಾಗಿತ್ತು. ಸಿಎಂ, ಎಜುಕೇಶನ್ ಮಿನಿಸ್ಟರ್, ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ನನ್ನ ಅಂತ್ಯಕ್ರಿಯೆ ನಡೆಯಬೇಕು. ಅಪ್ಪ-ಅಮ್ಮ ನಾನು ಬೋಡಿರ್ಂಗ್‍ನಲ್ಲಿ ಇದ್ದಾಗಲೂ ನಿಮ್ಮ ಪ್ರೀತಿಯನ್ನ ಮಿಸ್ ಮಾಡ್ಕಂಡೆ. ಈಗಲೂ ನಿಮ್ಮ ಪ್ರೀತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ವೀಡಿಯೋದಲ್ಲಿ ಹೇಳಿದ್ದಾನೆ. ಅಷ್ಟೇ ಅಲ್ಲದೆ ತನ್ನ ಗೆಳತಿಗೆ ಥ್ಯಾಂಕ್ಸ್ ಹೇಳಿರುವ ಆತ, ತನ್ನ ಅಂತ್ಯಕ್ರಿಯೆಯಲ್ಲಿ ಮಾಲ್ಗೊಳ್ಳವಂತೆ ಗೆಳತಿಗೆ ಮನವಿ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: 5 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ – ಇಬ್ಬರ ಬಂಧನ

  • ಡೆತ್ ನೋಟ್ ಬರೆದು, ಸೆಲ್ಫಿ ವೀಡಿಯೋ ಮಾಡಿ ಅರ್ಚಕ ಆತ್ಮಹತ್ಯೆ

    ಡೆತ್ ನೋಟ್ ಬರೆದು, ಸೆಲ್ಫಿ ವೀಡಿಯೋ ಮಾಡಿ ಅರ್ಚಕ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ದಿನೇ ದಿನೇ ಮೀಟರ್ ಬಡ್ಡಿ ದಂಧೆಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಎಲ್ಲರನ್ನು ಬಲಿ ಪಡೆದುಕೊಳ್ಳುತ್ತಿರುವ ಬಡ್ಡಿ ದಂಧೆ ಇದೀಗ ದೇವರಿಗೆ ಪೂಜೆ ಮಾಡುವ ದೇವಸ್ಥಾನದ ಅರ್ಚಕನ ಪ್ರಾಣವನ್ನು ಬಲಿ ತೆಗೆದುಕೊಂಡಿದೆ.

    ಒಂದಲ್ಲ ಅಂತ ಮೂರು ದೇವಸ್ಥಾನಗಳಲ್ಲಿ ದೇವರಿಗೆ ಪೂಜೆ ಮಾಡುವುದರ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದ್ದ ಯುವ ಅರ್ಚಕನೋರ್ವ ಸಾಲಗಾರರ ಕಿರುಕುಳ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸುಲ್ತಾನಪೇಟೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಆತ್ಮಹತ್ಯೆ ಮಾಡಿಕೊಂಡ ಆರ್ಚಕ ಕೆ.ವಿ.ರಾಘವೇಂದ್ರ(30) ಎಂದು ಗುರುತಿಸಲಾಗಿದೆ. ಸುಲ್ತಾನಪೇಟೆ ಗ್ರಾಮದ ಸಪ್ಪಲಮ್ಮ ದೇವಸ್ಥಾನ ಹಾಗೂ ನಂದಿಗ್ರಾಮದ ಮಾರಮ್ಮ ದೇವಸ್ಥಾನ ಸೇರಿದಂತೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕನಾಗಿದ್ದ ರಾಘವೇಂದ್ರ, ಅಕ್ಷತಾ ಕೋ ಆಪರೇಟಿವ್ ಸಂಘದಲ್ಲಿ ಏಜೆಂಟ್ ಆಗಿ ನಷ್ಟವಾದಾಗ ನಂದಿ ಗ್ರಾಮದ ಜೆ.ಸಿ.ಬಿ ಮಂಜುನಾಥ್, ಗುರುಮೂರ್ತಿ, ಅಜಯೇಂದ್ರ ಬಾಬು, ಪ್ರಾಧ್ಯಾಪಕ ರಾಮಚಂದ್ರಪ್ಪ, ಎನ್.ಎಂ.ಮುನಿರಾಜು, ಎನ್.ಎಲ್ ನರೇಂದ್ರ ಬಾಬು ಬಳಿ ಸಾಲ ಪಡೆದಿದ್ದಾರೆ.

    ಆದ್ರೆ ಇತ್ತೀಚೆಗೆ ಸಾಲಗಾರರು ಮೀಟರ್ ಬಡ್ಡಿ ವಿಧಿಸಿ ಹಣ ಕೊಡುವಂತೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿದ್ಧಾರೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಘವೇಂದ್ರ ಡೆತ್ ನೋಟ್ ಬರೆದು, ಸೆಲ್ಫಿ ವೀಡಿಯೋನಲ್ಲಿ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರಿಂದ ಮೃತನ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನ್ಯಾಯಕ್ಕಾಗಿ ನಂದಿಗಿರಿಧಾಮದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಆತ್ಮಹತ್ಯೆಗೆ ಶರಣಾಗಿದ್ದ ರಾಘವೇಂದ್ರನನ್ನು ಮಂಗಳವಾರ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದರು. ಆದ್ರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿರಲಿಲ್ಲ. ಈ ಮಧ್ಯೆ ಮನೆ ಕ್ಲೀನ್ ಮಾಡುವ ವೇಳೆ ಸಿಕ್ಕ ಡೆತ್ ನೋಟ್ ಹಾಗೂ ಡೆತ್ ನೋಟ್‍ನಲ್ಲಿ ಮೊಬೈಲ್‍ನಲ್ಲಿ ವೀಡಿಯೋ ಮಾಡಿರುವ ಬಗ್ಗೆ ರಾಘವೇಂದ್ರ ಬರೆದಿದ್ದು, ಫೋನ್ ಆನ್‍ಲಾಕ್ ಹೇಗೆ ಮಾಡಬೇಕೆಂಬುವುದನ್ನು ಸಹ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಬಳಿಕ ರಾಘವೇಂದ್ರ ಮೊಬೈಲ್ ಫೋನ್ ಪರಿಶೀಲಿಸಿದಾಗ ಸಾವಿನ ಸತ್ಯ ಬಹಿರಂಗಗೊಂಡಿದೆ.

  • ಅತ್ತೆ, ಮಾವ, ಪತ್ನಿ, ಪ್ರಿಯಕರನೇ ಕಾರಣ – ಸೆಲ್ಫಿ ವೀಡಿಯೋ ಮಾಡಿ ವಿವಾಹಿತ ಆತ್ಮಹತ್ಯೆ

    ಅತ್ತೆ, ಮಾವ, ಪತ್ನಿ, ಪ್ರಿಯಕರನೇ ಕಾರಣ – ಸೆಲ್ಫಿ ವೀಡಿಯೋ ಮಾಡಿ ವಿವಾಹಿತ ಆತ್ಮಹತ್ಯೆ

    ತುಮಕೂರು: ಪತ್ನಿ ಅತ್ತೆ ಹಾಗೂ ಮಾವನ ಕಿರುಕುಳದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತುರುವೇಕೆರೆ ತಾಲೂಕು ರಂಗನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ.

    ಲೋಕೇಶ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಸೆಲ್ಫಿ ವೀಡಿಯೋ ಮಾಡಿ ಕೀಟನಾಶಕ ಸೇವಿಸಿ ಆತ್ಮಹತೆಗೆ ಶರಣಾಗಿದ್ದಾನೆ. ಈ ಘಟನೆ ನವೆಂಬರ್ 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ವೀಡಿಯೋದಲ್ಲಿ ಲೋಕೇಶ್ ಹೇಳಿದ್ದೇನು..?
    ನನ್ನ ಸಾವಿಗೆ ಹೆಂಡತಿ ಹೇಮಾ, ಅತ್ತೆ ಧನಲಕ್ಷಿ, ಮಾವ ರಾಜು ಹಾಗೂ ಹೆಂಡತಿಯ ಪ್ರಿಯಕರ ಚೇತನ್ ಕಾರಣ. ಪ್ರತಿ ನಿತ್ಯ ಬ್ಲಾಕ್ ಮೇಲ್, ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ನಾವು ಹೇಗೆ ಬದುಕಲಿ ಎಂದು ಲೋಕೇಶ್ ಅಳಲು ತೋಡಿಕೊಂಡಿದ್ದಾನೆ.

    ವಿಡಿಯೋ ಮಾಡಿಟ್ಟು ಲೋಕೇಶ್ ಕೀಟನಾಶಕ ಸೇವಿಸಿದ್ದಾನೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆದರೆ ಪೊಲೀಸರು ಪ್ರಕರಣದ ತನಿಖೆಯನ್ನೇ ಮಾಡುತ್ತಿಲ್ಲ ಅಂತ ಮೃತನ ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ.

  • ನಾವು ಸಾಯುವರೆಗೂ ನಮ್ಮೊಂದಿಗಿರೋರನ್ನ ಪ್ರೀತಿಸಿ – ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ನಾವು ಸಾಯುವರೆಗೂ ನಮ್ಮೊಂದಿಗಿರೋರನ್ನ ಪ್ರೀತಿಸಿ – ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    – ಯಾರನ್ನೂ ಲವ್ ಮಾಡಬೇಡಿ
    – ಪ್ರೀತಿ ನಿರಾಕರಿಸಿದ್ದಕ್ಕೆ ಸೆಲ್ಫಿ ವಿಡಿಯೋ ಮಾಡಿ ಸೂಸೈಡ್

    ಹೈದರಾಬಾದ್: ಯುವತಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಸಪ್ತಗಿರಿ ಕಾಲೋನಿಯ ನಿವಾಸಿ ಸಾಯಿ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ. ಗೆಳತಿ ತನ್ನ ಪ್ರೀತಿಯನ್ನು ಒಪ್ಪದೆ ಮೋಸ ಮಾಡಿದ್ದಾಳೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೂಸೈಡ್ ಮಾಡಿಕೊಳ್ಳುವ ಮೊದಲು ಸಾಯಿ ಸೆಲ್ಫಿ ವಿಡಿಯೋ ಮಾಡಿ ನಂತರ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಮೃತ ಸಾಯಿ ಕೆಲವು ತಿಂಗಳಿನಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಇತ್ತೀಚೆಗೆ ಆಕೆಗೆ ಪ್ರಪೋಸ್ ಕೂಡ ಮಾಡಿದ್ದನು. ಆದರೆ ಆ ಹುಡುಗಿ ಸಾಯಿ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಪ್ರೀತಿಯಲ್ಲಿ ಮೋಸ ಹೋದೆ ಎಂದು ಮೂರು ದಿನಗಳ ಹಿಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ತಕ್ಷಣ ಗಮನಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಸಾಯಿ ಸಾವನ್ನಪ್ಪಿದ್ದಾನೆ.

    ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಪೊಲೀಸರು ಸಾಯಿಯ ಫೋನ್ ಪರಿಶೀಲನೆ ಮಾಡಿದ್ದಾರೆ. ಅದರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವುದು ಪತ್ತೆಯಾಗಿದೆ. ಅದರಲ್ಲಿ ನನ್ನ ಸಾವಿಗೆ ಕಾರಣ ಪ್ರೀತಿ, ಹೀಗಾಗಿ ಯಾರನ್ನೂ ಪ್ರೀತಿಸಬೇಡಿ ಎಂದು ತನ್ನ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಹೇಳಿದ್ದಾನೆ.

    ಜೊತೆಗೆ ನಾವು ಸಾಯುವವರೆಗೂ ನಮ್ಮೊಂದಿಗಿರುವವರನ್ನು ಪ್ರೀತಿಸುವಂತೆ ಹೇಳಿದ್ದು, ತನ್ನ ಸ್ನೇಹಿತರು ಮತ್ತು ಸಂಬಂಧಿಕರಿಗೆ ವಿದಾಯ ಹೇಳಿದ್ದಾನೆ. ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

  • ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

    ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

    ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ನಡೆದಿದೆ.

    ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದೇ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಮೋಸಕ್ಕೆ ಬಲಿಯಾದ ನಟಿ ಸೆಲ್ಫಿ ವಿಡಿಯೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೃತ ಚಂದನಾ ಮತ್ತು ಪ್ರಿಯಕರ ದಿನೇಶ್ ಸುಮಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಎರಡು ಮನೆಯಲ್ಲೂ ಇವರ ಮದುವೆಗೆ ಒಪ್ಪಿಗೆ ನೀಡಲಾಗಿತ್ತು. ದಿನೇಶ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಹಣವನ್ನು ಪಡೆದುಕೊಂಡಿದ್ದನು. ಅಷ್ಟೇ ಅಲ್ಲದೇ ಆರೋಪಿ ಚಂದನಾರನ್ನು ನಂಬಿಸಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದನು. ಅಲ್ಲದೇ ಆರೋಪಿ ದಿನೇಶ್ ಚಂದನಾರಿಗೆ ಗರ್ಭಪಾತ ಕೂಡ ಮಾಡಿಸಿದ್ದನು ಎಂದು ತಿಳಿದು ಬಂದಿದೆ.

    ಕೊನೆಗೆ ಲಕ್ಷ, ಲಕ್ಷ ಹಣ ಪಡೆದು ಮದುವೆಯಾಗಲು ನಿರಾಕರಿಸಿದ್ದಾನೆ. ಅಲ್ಲದೇ ಆರೋಪಿ ಚಂದನಾರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದನು. ಇದರಿಂದ ನೊಂದು ಚಂದನಾ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಕುರಿತು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ನಟಿ ಆತ್ಮಹತ್ಯೆ ಮಾಡಿಕೊಂಡ ನಂತರ ಪ್ರಿಯಕರ ತನ್ನ ಕುಟುಂಬದವರ ಜೊತೆ ಪರಾರಿಯಾಗಿದ್ದಾನೆ. ಈಗ ಚಂದನಾ ಪೋಷಕರು ದಿನೇಶ್ ಮತ್ತು ಆತನ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಆರೋಪಿ ದಿನೇಶ್‍ಗಾಗಿ ಹುಡುಕಾಟ ಆರಂಭಿಸಿದ್ದಾರೆ.

  • ಸೆಲ್ಫಿ ವಿಡಿಯೋ ಮೂಲಕ ಬಾಲ್ಯದ ನೆನಪು ಹಂಚಿಕೊಂಡ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ

    ಸೆಲ್ಫಿ ವಿಡಿಯೋ ಮೂಲಕ ಬಾಲ್ಯದ ನೆನಪು ಹಂಚಿಕೊಂಡ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ

    ಗದಗ: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ನೇಮಕಗೊಂಡ ಟೀಂ ಇಂಡಿಯಾದ ಮಾಜಿ ಆಟಗಾರ ಗದಗದ ಸುನಿಲ್ ಜೋಶಿ ತಮ್ಮ ಬಾಲ್ಯದ ನೆನಪುಗಳನ್ನ ಸೆಲ್ಫಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

    ಬಾಲ್ಯದ ತುಂಟಾಟ, ಶಾಲಾ-ಕಾಲೇಜ್, ಆಟ-ಹುಡುಗಾಟದ ದಿನಗಳನ್ನು ನೆನಪಿಸಿಕೊಂಡು ವಿಡಿಯೋ ಒಂದನ್ನು ಮಾಡಿ ಗದಗದ ವಕೀಲಚಾಳ್ ವಾರಿಯರ್ಸ ವಾಟ್ಸಪ್ ಗ್ರೂಪ್‍ಗೆ ಕಳುಹಿಸಿದ್ದಾರೆ. ಈ ಒಂದು ವಿಡಿಯೋ ಗದಗ ಫ್ರೆಂಡ್ಸ್ ಗ್ರೂಪ್ ಮತ್ತು ಆ ಬಡಾವಣಿಯ ಜನರ ಸಂತಸ ಹೆಚ್ಚಿಸಿದ್ದು, ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಜೋಶಿ ಅವರು ಮಾತನಾಡಿದ್ದು ವಕೀಲಚಾಳ್ ಮಂದಿಯ ಸಂತಸವನ್ನು ಇನ್ನಷ್ಟು ಇಮ್ಮುಡಿಗೊಳಿಸಿದೆ.

    ಸುನಿಲ್ ಜೋಷಿ ವಿಡಿಯೋದ ಸಂಭಾಷಣೆ:
    ನಮಸ್ಕಾರ ಎಲ್ಲಾ ಗದಗನ ವಕೀಲಚಾಳ್ ವಾರಿಯರ್ಸ್‍ಗೆ. ಏನು ಹೇಳಬೇಕು ಸಿಕ್ಕಾಪಟ್ಟೆ ಖುಷಿ ಆಗ್ತಿದೆ. ಏನಂತಂದ್ರ ವಕೀಲಚಾಳ್‍ದಲ್ಲಿ ಹುಟ್ಟಿ, ವಕೀಲಚಾಳ್‍ನಲ್ಲಿ ನೀರು ಕುಡಿದು, ವಕೀಲಚಾಳ್‍ದಲ್ಲಿ ಬೆಳದು ಇವತ್ತು ನಿಮ್ಮೆಲರ ಪ್ರೋತ್ಸಾಹದಿಂದ ಇಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದೇನೆ. ನಮ್ಮೆಲ್ಲಾ ಸೀನಿಯರ್ಸ್, ನನ್ನ ಸ್ನೇಹಿತರು ಪ್ರೋತ್ಸಾಹಿಸಿದ್ದಾರೆ. ಸ್ನೇಹಿತರ ಜೊತೆ ಗುಂಡಾ ಆಡಿರಬಹುದು, ಚಿಣಿಪಣಿ, ಸರಿಬಡಗಿ, ಛಾಪಾ ಆಡಿರಬಹುದು ಎಲ್ಲಾ ನೆನೆಸಿಕೊಂಡರೆ ಖುಷಿ ಆಗ್ತದ. ಎಲ್ಲಾ ನಿಮ್ಮ ಆಶೀರ್ವಾದ. ಬೆಸ್ಟ್ ವಿಷಸ್ ಅಂದ್ರೆ ನಮ್ಮ ಓಣಿ ಒಳಗ್ ಏನ್ ಒಗ್ಗಟ್ಟು ಇತ್ತು. ಯಾವುದೇ ಹಬ್ಬ ಬರಲಿ, ಕಾರ ಹುಣ್ಣಿಮೆ ಬರಲಿ, ಪಟಾ ಹಾರಸೋದ ಇರಲಿ, ಹೋಳಿ ಹುಣ್ಣಿಮೆ ಬಂದ್ರ ಕಟ್ಟಿಗಿ ಕಳವು ಮಾಡುವುದು ಇರ್ಲಿ, ಎಷ್ಟು ಖುಷಿ ಕೊಡ್ತಿತ್ತು ಅಂದ್ರ ಇವತ್ತಿನ ದಿನ ಈ ಸ್ಟೇಜಿಗೆ ಬಂದಿನಿ ಅಂದ್ರೆ ನಿಮ್ಮೆದೆಲ್ಲಾ ಸಪೋರ್ಟ್ ಕಾರಣ. ನನ್ನ ಜೊತೆ ನಿಮ್ಮ ಆಶಿರ್ವಾದ ಇರಲಿ. ನಾನು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥನಾಗಿ ನೇಮಕಗೊಂಡ ಬಳಿಕ ನನಗೆ ಶುಭಕೋರಿದ ಎಲ್ಲರಿಗೂ ಧನ್ಯವಾದ. ನಿಮ್ಮ ಪ್ರೀತಿ, ಪ್ರೋತ್ಸಾಹ ನೋಡಿ ಖುಷಿ ಆಗುತ್ತಿದೆ ಎಂದು ತಾವೇ ಒಂದು ಸೆಲ್ಫಿ ವಿಡಿಯೋ ಮಾಡಿ ವಕೀಲಚಾಳ್ ವಾರಿಯರ್ಸ್ ಗ್ರೂಪ್‍ನಲ್ಲಿ ಹಾಕಿದ್ದಾರೆ.

    ದೊಡ್ಡ ಸ್ಥಾನದಲ್ಲಿ ಇದ್ದರೂ ಸಹ ಬಾಲ್ಯದ ದಿನಗಳನ್ನು ಮರೆಯದೆ, ನೆನಪಿನಲ್ಲಿ ಇಟ್ಟುಕೊಂಡಿರುವ ಸುನಿಲ್ ಜೋಶಿ ಅವರ ಬಗ್ಗೆ ಹೆಮ್ಮೆ ಅನಿಸುತ್ತದೆ ಅಂತ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದರು.

  • ಬಿಜೆಪಿ ಸಂಸದರ ಸ್ವಗ್ರಾಮದಲ್ಲಿ ವೈದ್ಯರೇ ನಾಪತ್ತೆ- ಚಿಕಿತ್ಸೆ ಸಿಗದೇ ಮಹಿಳೆ ನರಳಾಟ

    ಬಿಜೆಪಿ ಸಂಸದರ ಸ್ವಗ್ರಾಮದಲ್ಲಿ ವೈದ್ಯರೇ ನಾಪತ್ತೆ- ಚಿಕಿತ್ಸೆ ಸಿಗದೇ ಮಹಿಳೆ ನರಳಾಟ

    ದಾವಣಗೆರೆ: ಬಿಜೆಪಿ ಸಂಸದರ ಸ್ವಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರೇ ನಾಪತ್ತೆಯಾಗಿದ್ದು, ಚಿಕಿತ್ಸೆ ಸಿಗದೆ ರೋಗಿಗಳು ಹೈರಾಣರಾಗಿದ್ದಾರೆ.

    ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಅರಸೀಕೆರೆ ಗ್ರಾಮ ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪನವರ ಸ್ವಗ್ರಾಮ. ಆದರೂ ಕೂಡ ಈ ಗ್ರಾಮದ ದುಸ್ಥಿತಿ ಕೇಳುವವರೇ ಇಲ್ಲ. ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಇದೆ.

    ಬುಧವಾರ ರಾತ್ರಿ ಕೆರೆಗುಡಿಹಳ್ಳಿ ಗ್ರಾಮದ ಯಂಕಮ್ಮ ಬೆನ್ನು ಮೂಳೆ ಮುರಿದುಕೊಂಡಿದ್ದರು. ಆದ್ದರಿಂದ ಚಿಕಿತ್ಸೆಗಾಗಿ ಅರಸೀಕೆರೆ ಸಮುದಾಯದ ಆರೋಗ್ಯ ಕೇಂದ್ರಕ್ಕೆ ರಾತ್ರಿ ಬಂದಿದ್ದರು. ಆದರೆ ಅತ್ತ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ, ಇತ್ತ ಕೊನೆ ಪಕ್ಷ ಪ್ರಥಮ ಚಿಕಿತ್ಸೆ ನೀಡುವ ಯಾವುದೇ ಸಿಬ್ಬಂದಿ ಕೂಡ ಇಲ್ಲದೆ ಮಹಿಳೆ ನರಳಾಡಿದ್ದಾರೆ.

    ನರಳಾಡುತ್ತಿರುವ ತಾಯಿಯನ್ನು ನೋಡಲಾಗದೆ, ಮಕ್ಕಳು ಸೆಲ್ಫಿ ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ನಮ್ಮ ತಾಯಿ ನರಳಾಡುತ್ತಿದ್ದರೂ ಯಾರೂ ಕೂಡ ಇಲ್ಲಿಗೆ ಬಂದು ಚಿಕಿತ್ಸೆ ನೀಡುತ್ತಿಲ್ಲ. ವೈದ್ಯರು ಸಹ ಇಲ್ಲ. ನಮಗೆ ಯಾರೂ ಚಿಕಿತ್ಸೆ ನೀಡುತ್ತಾರೆ? ಖಾಸಗಿ ಆಸ್ಪತ್ರೆಗೆ ಹೋಗಲು, ಜಿಲ್ಲಾ ಕೇಂದ್ರಕ್ಕೆ ಹೋಗಲು ನಮ್ಮ ಬಳಿ ಹಣವಿಲ್ಲ. ಇತ್ತ ಸಮುದಾಯ ಕೇಂದ್ರ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಈಗ ನಮ್ಮ ಪರಿಸ್ಥಿತಿ ಏನು ಎಂದು ತಮ್ಮ ಆಳಲನ್ನು ಹೇಳಿಕೊಂಡಿದ್ದಾರೆ.

    ಹೆಸರಿಗೆ ಮಾತ್ರ ಇದು ಸಂಸದ ದೇವೇಂದ್ರಪ್ಪ ಅವರ ಸ್ವಗ್ರಾಮ. ಆದರೆ ಇಲ್ಲಿನ ಸಮುದಾಯ ಕೇಂದ್ರ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಇರಲಿ, ರೋಗಿಗಳಿಗೆ ಪ್ರಥಮ ಚಿಕಿತ್ಸೆ ಕೊಡಲು ಕೂಡ ಯಾರು ಇಲ್ಲ. ಈಗಲಾದರೂ ಅಧಿಕಾರಿಗಳು, ಸಂಸದರು ಗಮನಕೊಟ್ಟು ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೌಲಭ್ಯ ಒದಗಿಸಬೇಕು. ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

  • ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ -ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು

    ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ -ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು

    ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.

    ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ.

    ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು. ಈ ವೇಳೆ ಮನೆ ಮಾಲೀಕ ಸೋಮಶೇಖರ್, ಗೀತಾ ಮತ್ತು ಬಿಂದು ಪೊಲೀಸರ ಮುಂದೆಯೇ ಮಂಜುಳಾ ಮತ್ತು ಪತಿ ಸುಬ್ರಮಣಿಗೆ ಹಲ್ಲೆ ಮಾಡಿದ್ದರು. ಇದರಿಂದ ಮನನೊಂದ ಮಂಜುಳಾ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ದೂರು ಕೊಡಲು ಪೊಲೀಸ್ ಠಾಣೆಗೆ ಹೋದಾಗ ನನ್ನ ಮಾಂಗಲ್ಯವನ್ನು ಕಿತ್ತುಕೊಂಡು ತುಂಬಾನೇ ಹಿಂಸೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಸೋಮಶೇಖರ್, ಗೀತಾ ಮತ್ತು ಬಿಂದು ಮೂವರೂ ನನಗೆ ಮತ್ತು ಪತಿಗೆ ಚೆನ್ನಾಗಿ ಹೊಡೆದಿದ್ದಾರೆ. ಆದರೆ ಪೊಲೀಸರು ಯಾಕೆ ಹೊಡೆಯುತ್ತಿದ್ದೀರಿ ಎಂದು ಕೂಡ ಕೇಳಿಲ್ಲ. ನಾನು ಪತಿಯನ್ನು ಆಸ್ಪತ್ರೆಗೆ ಕಳುಹಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಈ ಮೂವರು ಕಾರಣರಾಗಿದ್ದು ಅವರನ್ನು ಬಿಡಬೇಡಿ. ಬಡವರಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರೇಮ ವಿವಾಹಕ್ಕೆ ಪೋಷಕರ ಅಡ್ಡಿ – ಸೆಲ್ಫಿ ವಿಡಿಯೋ ಮಾಡಿ ಯುವ ಜೋಡಿ ಆತ್ಮಹತ್ಯೆ

    ಪ್ರೇಮ ವಿವಾಹಕ್ಕೆ ಪೋಷಕರ ಅಡ್ಡಿ – ಸೆಲ್ಫಿ ವಿಡಿಯೋ ಮಾಡಿ ಯುವ ಜೋಡಿ ಆತ್ಮಹತ್ಯೆ

    ಹೈದರಾಬಾದ್: ಪ್ರೇಮಿಗಳ ಮದುವೆಗೆ ಪೋಷಕರು ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನೆಯಿಂದ ಹೊರ ನಡೆದ ಯುವಕ, ಯುವತಿ ಮದುವೆಯಾಗಿ ಬಳಿಕ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಂಡಲ ಪ್ರದೇಶದಲ್ಲಿ ನಡೆದಿದೆ.

    ಧನಂಜಯ್ (20), ಪಲ್ಲವಿ (16) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೆಲ್ಫಿ ವಿಡಿಯೋ ಮಾಡಿ ತಮ್ಮಂತಹ ಪ್ರೇಮಿಗಳನ್ನು ಬೇರೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

    ಏನಿದು ಪ್ರಕರಣ: ಶ್ರೀಕಾಳಹಸ್ತಿ ಮೂಲದ ದಂಪತಿಗಳ ಪುತ್ರಿ ಪಲ್ಲವಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದು, ಕಳೆದ 1 ವರ್ಷದಿಂದ ಮುರುವಪಲ್ಲಿ ಮೂಲಕ ಧನಂಜಯ್ ಎಂಬ ಯುವಕನ್ನು ಪ್ರೀತಿಸುತ್ತಿದ್ದಳು. ಈತ ವೃತ್ತಿಯಲ್ಲಿ ಜೆಸಿಬಿ ಚಾಲಕನಾಗಿದ್ದು, ಇಬ್ಬರು ಮದುವೆ ಆಗಲು ನಿರ್ಧರಿಸಿ ಮನೆಯಲ್ಲಿ ತಮ್ಮ ಪ್ರೀತಿಯನ್ನು ತಿಳಿಸಿದ್ದರು. ಆದರೆ ಇಬ್ಬರ ಜಾತಿ ಬೇರೆ ಆದ ಕಾರಣದಿಂದ ಇವರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದರು.

    ಕಳೆದ ಮೂರು ದಿನಗಳ ಹಿಂದೆ ಕಾಲೇಜಿನಲ್ಲಿ ಪರೀಕ್ಷೆಯ ಫಲಿತಾಂಶ ನೋಡಿಕೊಂಡು ಬರುವುದಾಗಿ ತಿಳಿಸಿದ್ದ ಯುವತಿ ನಾಪತ್ತೆಯಾಗಿದ್ದಳು. ಆ ಬಳಿಕ ಇಬ್ಬರು ದೇವಾಲಯಕ್ಕೆ ತೆರಳಿ ಮದುವೆಯಾಗಿ ಫೋಟೋಗಳನ್ನು ತೆಗೆದುಕೊಂಡಿದ್ದರು. ಆದರೆ ಇಂದು ಮುಂಜಾನೆ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಂಡಲ ಮುರವಪಲ್ಲಿ ಬಳಿ ರೈಲ್ವೇ ಹಳಿ ಬಳಿ ಇಬ್ಬರ ಮೃತ ದೇಹ ಪತ್ತೆಯಾಗಿದ್ದು. ಆ ಅವರ ಬಳಿ ದೊರೆತ ಮೊಬೈಲ್ ನಲ್ಲಿ ವಿಡಿಯೋ ಲಭ್ಯವಾಗಿದೆ.

    ನಮ್ಮನ್ನು ಕ್ಷಮಿಸಿ, ಇದು ನಮ್ಮ ಕೊನೆಯ ವಿಡಿಯೋ. ಈ ನೋಡಿದ ಬಳಿಕವಾದರು ನಮ್ಮಂತ ಬೇರೆ ಪ್ರೇಮಿಗಳನ್ನು ಬೇರೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಪೋಷಕರಿಗೆ ಕ್ಷಮಿಸುವಂತೆ ಕೋರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ದೇಹಗಳು ರೈಲ್ವೇ ಹಳಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಕುರಿತು ಪಾಕಾಲ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.