Tag: Sendoff

  • ಶಿಕ್ಷಕಿಯರ ವರ್ಗಾವಣೆ- ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿಗಳು

    ಶಿಕ್ಷಕಿಯರ ವರ್ಗಾವಣೆ- ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿಗಳು

    – ಭಾವುಕರಾದ ಶಿಕ್ಷಕಿಯರು

    ಬೆಂಗಳೂರು: ಇಬ್ಬರು ಪ್ರೌಢಶಾಲಾ ಶಿಕ್ಷಕಿಯರ ವರ್ಗಾವಣೆ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳಿಗೆ ಕಣ್ಣೀರಿನಲ್ಲಿಯೇ ಬೀಳ್ಕೊಟ್ಟ ಅಪರೂಪದ ದೃಶ್ಯ ಕಂಡು ಬಂದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದೊಡ್ಡಬೆಲೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಹಾಗೂ ವರ್ಗಾವಣೆ ಶಿಕ್ಷಕಿಯರ ನಡುವೆ ಭಾವ ಲಹರಿಯೇ ಏರ್ಪಟ್ಟಿದೆ. ಶಿಕ್ಷಕಿಯರಾದ ಪ್ರತಿಭಾ ಮತ್ತು ಸೌಮ್ಯ ದೊಡ್ಡಬೆಲೆ ಶಾಲೆಯಲ್ಲಿ ಕಳೆದ 15 ವರ್ಷಗಳಿಗೂ ಅಧಿಕ ಕಾಲ ಹಿಂದಿ ಮತ್ತು ಸಮಾಜ ವಿಜ್ಞಾನ ಶಿಕ್ಷಕಿಯರಾಗಿ ಕಾರ್ಯನಿರ್ವಹಿಸಿ ಮಕ್ಕಳ ಪ್ರೀತಿಗೆ ಪಾತ್ರರಾಗಿದ್ದರು.

    ವಿದ್ಯಾರ್ಥಿಗಳು ಬಿಕ್ಕಿಬಿಕ್ಕಿ ಅತ್ತು ಭಾವುಕರಾದರೆ, ಮಕ್ಕಳನ್ನು ನೋಡಿ ಶಿಕ್ಷಕಿಯರೂ ಭಾವುಕರಾಗಿದ್ದಾರೆ. ತಮ್ಮ ಮಕ್ಕಳಂತೆ ತಬ್ಬಿ ಶಿಕ್ಷಕಿಯರು ಸಮಾಧಾನಪಡಿಸಿದ ಕ್ಷಣಗಳು ಎಂಥವರನ್ನು ಮೂಕ ವಿಸ್ಮಿತರನ್ನಾಗಿಸಿತು. ಈ ಗುರು ಶಿಷ್ಯರ ಸಂಬಂಧ ಜನುಮಜನಮದ ಅನುಬಂಧಕ್ಕೆ ಈ ಇಡೀ ಕ್ಷಣ ಸಾಕ್ಷಿಯಾಗಿದೆ.

    ಈ ಘಟನೆ ನೋಡಿದರೆ ಹಿಂದೆ ಮೈಸೂರಲ್ಲಿ ಶಿಕ್ಷಕರಾಗಿ ವರ್ಗಾವಣೆಯಾದ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ರೈಲು ನಿಲ್ದಾಣದ ತನಕ ಯಾವ ರೀತಿ ಬಿಳ್ಕೊಟ್ಟರೋ, ಅದೇ ರೀತಿ ಸರದಿ ಸಾಲಿನಲ್ಲಿ ನಿಂತು, ಶಿಕ್ಷಕಿಯರು ಕಾರು ಏರುವ ತನಕ ಮಕ್ಕಳು ಜೊತೆಯಲ್ಲಿಯೇ ಇದ್ದರು. ಈ ಇಬ್ಬರು ಶಿಕ್ಷಕಿಯರು, ಪಾಠ ಪ್ರವಚನದಲ್ಲಿ ವಿದ್ಯಾರ್ಥಿಗಳ ಮನಗೆದ್ದು, ಎಲ್ಲರಿಗೂ ಮನೆ ಮಾತಾಗಿದ್ದರು.

  • ಜೀವ ಉಳಿಸಿದ ವೀರಯೋಧರಿಗೆ ರಾಖಿ ಕಟ್ಟಿ ಕಣ್ಣೀರಿನ ಬೀಳ್ಕೊಡುಗೆ

    ಜೀವ ಉಳಿಸಿದ ವೀರಯೋಧರಿಗೆ ರಾಖಿ ಕಟ್ಟಿ ಕಣ್ಣೀರಿನ ಬೀಳ್ಕೊಡುಗೆ

    ಚಿಕ್ಕಮಗಳೂರು: ಜೀವ ಉಳಿಸಿದ ವೀರ ಯೋಧರಿಗೆ ಗ್ರಾಮಸ್ಥರು ರಾಖಿ ಕಟ್ಟುವ ಮೂಲಕ ಬೀಳ್ಕೊಡುಗೆ ಕೊಟ್ಟಿದ್ದಾರೆ.

    ಚಿಕ್ಕಮಗಳೂರಿನ ಮೂಡಿಗೆರೆ ಗ್ರಾಮಸ್ಥರು, ನಿಮ್ಮಿಂದ ನಮ್ಮ ಜೀವ ಉಳಿದಿದೆ ಎಂದು ಕಣ್ಣೀರಿಟ್ಟು ಪ್ರತಿಯೊಬ್ಬ ಸೈನಿಕರಿಗೂ ರಾಖಿ ಕಟ್ಟಿದ್ದಾರೆ. ಈ ವೇಳೆ ಸೈನಿಕರು ತಂದಿದ್ದ ಹಣ್ಣು, ಬಿಸ್ಕೆಟ್‍ಗಳನ್ನು ಸಂತ್ರಸ್ತರಿಗೆ ಹಂಚಿದ್ದಾರೆ.

    ಯೋಧರ ರಕ್ಷಣಾ ಕಾರ್ಯಾಚರಣೆ ನೋಡಿ ನೂರಾರು ಜನರು ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೆ ಇಂಡಿಯನ್ ಆರ್ಮಿ ಸದಾ ನಿಮ್ಮ ಜೊತೆ ಇರುತ್ತದೆ. ನೀವು ಯಾವಾಗ ಕರೆದರೂ ನಿಮ್ಮ ಸೇವೆಗೆ ಸಿದ್ಧ ಎಂದು ಭಾರತೀಯ ಸೇನೆ ತಿಳಿಸಿದೆ. ಸದ್ಯ ಮಿಲಿಟರಿ ಪಡೆ ಕಾರ್ಯಾಚರಣೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಗ್ರಾಮಸ್ಥರು ಕಣ್ಣೀರು ಹಾಕುತ್ತಲೇ ಯೋಧರಿಗೆ ಬೀಳ್ಕೊಡುಗೆ ಕೊಟ್ಟಿದ್ದಾರೆ.

    ಮೂಡಿಗೆರೆ ತಾಲೂಕಿನ ಹಲಗಡಕ ಗ್ರಾಮದಲ್ಲಿ ಗುಡ್ಡ ಕುಸಿತವಾಗಿತ್ತು. ಹೀಗಾಗಿ ಗ್ರಾಮದ ಮಾರ್ಗ ಬಂದ್ ಆಗಿ ಕಳೆದ 6 ದಿನಗಳಿಂದ ಗ್ರಾಮದಲ್ಲಿ ಸಿಲುಕಿಕೊಂಡಿದ್ದ 10ಕ್ಕೂ ಮಂದಿಯನ್ನು ಸೇನಾಪಡೆ ಸೋಮವಾರ ರಕ್ಷಣೆ ಮಾಡಿದೆ. ವಾಹನ ವ್ಯವಸ್ಥೆ ಇಲ್ಲದ ಕಾರಣಕ್ಕೆ 4 ರೋಗಿಗಳನ್ನು 5 ಕಿ.ಮೀ. ಹೆಗಲ ಮೇಲೆಯೇ ಹೊತ್ತು ಸಾಗಿಸುವ ಮೂಲಕ ತಂಡ ಸುರಕ್ಷಿತ ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದಾರೆ.