Tag: separatist

  • ಖಲಿಸ್ತಾನ್ ಪ್ರತ್ಯೇಕತಾವಾದಿ ಬೆಂಗಳೂರಲ್ಲಿ ಅರೆಸ್ಟ್

    ಖಲಿಸ್ತಾನ್ ಪ್ರತ್ಯೇಕತಾವಾದಿ ಬೆಂಗಳೂರಲ್ಲಿ ಅರೆಸ್ಟ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಾಂಗ್ಲಾ ಉಗ್ರರಾಯ್ತು. ಇದೀಗ ಖಲಿಸ್ತಾನ್ ಉಗ್ರರ ಸರದಿ ಶುರುವಾಗಿದೆ. ಇದನ್ನೆಲ್ಲ ನೋಡುತ್ತಿದ್ದರೆ ಉಗ್ರರ, ಜಿಹಾದಿಗಳ, ಪ್ರತ್ಯೇಕತಾವಾದಿಗಳ ಅಡ್ಡವಾವಾಗುತ್ತಿದೆಯಾ ಬೆಂಗಳೂರು ಎಂಬ ಆತಂಕ ಕಾಡಲಾರಂಭಿಸಿದೆ.

    ಬೆಂಗಳೂರು ಸಿಸಿಬಿ ಪೊಲೀಸರಿಂದ ಬಹುದೊಡ್ಡ ಕಾರ್ಯಾಚರಣೆ ನಡೆದಿದ್ದು, ಖಲಿಸ್ತಾನದ ಪ್ರತ್ಯೇಕತಾವಾದಿ ಜರ್ನಲ್ ಸಿಂಗ್ ಸಿದ್ದು ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾನೆ. ಕಳೆದ 6 ತಿಂಗಳಿಂದ ಬೆಂಗಳೂರಿನಲ್ಲಿ ಇದ್ದ ಜರ್ನಲ್ ಸಿಂಗ್ ಸಿದ್ದು, ಸಂಪಿಗೆಹಳ್ಳಿ ರಾಧಾಕೃಷ್ಣ ಪಿಜಿಯಲ್ಲಿ ವಾಸವಿದ್ದನು. ಮೂಲತಃ ತೆಲಂಗಾಣದ ಹೈದರಾಬಾದ್‍ನವನಾದ ಜರ್ನಲ್ ಸಿಂಗ್ ಸಿದ್ದು, ಎಂಜಿನಿಯರಿಂಗ್ ಮಾಡಿಕೊಂಡು ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ.

    ನಗರದ ಬಾಗಮನೆ ಟೆಕ್ ಪಾರ್ಕ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಪ್ರತ್ಯೇಕ ಖಲಿಸ್ತಾನ ದೇಶಕ್ಕಾಗಿ ಹೋರಾಟ ನಡೆಸುತ್ತಿದ್ದ. ಸಿಖ್ ಧರ್ಮದವರಿಗಾಗಿಯೇ ಪ್ರತ್ಯೇಕ ದೇಶಬೇಕು ಎಂದು ಹೋರಾಟ ಮಾಡುತ್ತಿದ್ದ. ಪಂಜಾಬ್ ಅನ್ನು ಪ್ರತ್ಯೇಕ ಖಲಿಸ್ತಾನ ಮಾಡಬೇಕೆಂದು ನಿರಂತರ ಹೋರಾಟದಲ್ಲಿ ನಿರತನಾಗಿದ್ದ. ತೆಲಂಗಾಣದವನಾಗಿದ್ದರು ಪಂಜಾಬ್‍ನಲ್ಲಿ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಈತ, ಸಿಖ್ ಧರ್ಮದ ವಿರುದ್ಧ ಕೆಲಸ ಮಾಡುವವರ ವಿರುದ್ಧ ಸಮರ ನಡೆಸುತ್ತಿದ್ದ.

    ಇದೇ ರೀತಿಯ ಗಲಾಟೆಯೊಂದರಲ್ಲಿ ಪಂಜಾಬ್‍ನ ಮೊಹಾಲಿಯಲ್ಲಿ ಈತನ ಮೇಲೆ ಪ್ರಕರಣ ಕೂಡ ದಾಖಲಾಗಿತ್ತು. 2019ರ ಫೆಬ್ರವರಿಯಲ್ಲಿ ಮೊಹಾಲಿ ಐಎಸ್‍ಡಿ ಪ್ರಕರಣ ದಾಖಲಿಸಿ, ಪಂಜಾಬ್ ರಾಜ್ಯ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಬೆಂಗಳೂರಿಗೆ ಎಸ್ಕೇಪ್ ಆಗಿದ್ದ ಇಂಗ್ ಮೊಹಾಲಿಯಿಂದ ಬೆಂಗಳೂರಿಗೆ ಬಂದಿದ್ದ. ಪಾಕಿಸ್ತಾನದ ಐಎಸ್‍ಐ ಜೊತೆ ನಿರಂತರ ಸಂಪರ್ಕದಲ್ಲಿದ್ದ ಜರ್ನಲ್ ಸಿಂಗ್ ಸಿದ್ದು. ಮೊಹಾಲಿಯ ಐಎಸ್‍ಐ ಏಜೆಂಟ್ ನಿಹಾಲ್ ಸಿಂಗ್ ಸ್ನೇಹಿತನಾಗಿದ್ದ.

    ಪ್ರತ್ಯೇಕ ಖಲಿಸ್ತಾನದ ಹೋರಾಟಕ್ಕೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದ. ಆದರೆ ಸದ್ಯ ಸಿಸಿಬಿಯ ಒಸಿಡಬ್ಲ್ಯೂ ವಿಂಗ್ ನಿಂದ ಜರ್ನಲ್ ಸಿಂಗ್ ಅರೆಸ್ಟ್ ಆಗಿದ್ದಾನೆ. ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ನಡೆದಿದ್ದ ಆಪರೇಷನ್ ನಲ್ಲಿ ಆರೋಪಿಯನ್ನು ಬಂಧಿಸಿ ಪಂಜಾಬ್ ಪೊಲೀಸರಿಗೆ ಒಪ್ಪಿಸಿದ್ದಾರೆ.

  • 30 ವರ್ಷದ ಕೇಸ್ ಓಪನ್ – ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಅರೆಸ್ಟ್

    30 ವರ್ಷದ ಕೇಸ್ ಓಪನ್ – ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಅರೆಸ್ಟ್

    ಶ್ರೀನಗರ: ದೇಶದ ಲಾಭವನ್ನು ಪಡೆಯುತ್ತಾ ಉಗ್ರರಿಗೆ ಸಹಕಾರ ನೀಡುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ ಎನ್ನುವ ಆಗ್ರಹದ ಬೆನ್ನಲ್ಲೇ ಸಿಬಿಐ 30 ವರ್ಷದ ಹಿಂದಿನ ಪ್ರಕರಣವನ್ನು ಮತ್ತೆ ಓಪನ್ ಮಾಡಿ ಜಮ್ಮು ಕಾಶ್ಮೀರದ ಪ್ರತ್ಯೇಕತವಾದಿ ನಾಯಕ, ಜಮ್ಮು ಕಾಶ್ಮೀರದ ಲಿಬರೇಷನ್ ಫ್ರಂಟ್ ಮುಖ್ಯಸ್ಥ, ಯಾಸಿನ್ ಮಲಿಕ್ ನನ್ನು ಬಂಧಿಸಿ ಜೈಲಿಗಟ್ಟಿದೆ.

    ಫೆ.22 ರ ರಾತ್ರಿ ಮೈಸುಮಾ ಪ್ರದೇಶದ ಮನೆಯಿಂದ ಆತನನ್ನು ಬಂಧಿಸಿ ಕೊಥಿಬಾಗ್ ಪೊಲೀಸ್ ಠಾಣೆಯ ಜೈಲಿನಲ್ಲಿ ಇಡಲಾಗಿತ್ತು. ಸಾರ್ವಜನಿಕ ಸುರಕ್ಷತಾ ಕಾಯ್ದೆಯ (ಪಿಎಸ್‍ಎ) ಅಡಿ ಈ ಪ್ರಕರಣವನ್ನು ಸಿಬಿಐ ದಾಖಲಿಸಿದ್ದು, ಸದ್ಯ ಈತನನ್ನು ಕೋಟ್ ಬಲ್ವಾಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    https://twitter.com/ShobhaBJP/status/1103579632333275137

    ಯಾಸಿನ್ ಮಲಿಕ್ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರಿ ಓಪನ್ ಮಾಡಲು ಸಿಬಿಐ ಜಮ್ಮು ಕಾಶ್ಮೀರ ಹೈಕೋರ್ಟ್ ನಲ್ಲಿ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಈ ಪ್ರಕರಣವನ್ನು ಜಮ್ಮುವಿನಿಂದ ಶ್ರೀನಗರಕ್ಕೆ ವರ್ಗಾಯಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದೆ. ಜಮ್ಮು ಕಾಶ್ಮೀರ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಗೀತಾ ಮಿತ್ತಲ್ ಈ ಸಂಬಂಧ ಒಂದು ದಿನದಲ್ಲಿ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಲು ಮಲ್ಲಿಕ್ ಗೆ ಸೂಚಿಸಿದ್ದಾರೆ. ಮುಂದಿನ ಅರ್ಜಿ ವಿಚಾರಣೆ ಮಾರ್ಚ್ 11 ರಂದು ನಡೆಯಲಿದೆ.

    ಏನಿದು ಪ್ರಕರಣ?
    1990 ರಲ್ಲಿ ಐವರು ವಾಯುಸೇನೆಯ ಯೋಧರನ್ನು ಕಿಡ್ನಾಪ್ ಮಾಡಿ ಕೊಲೆಗೈದಿರುವ ಹಾಗೂ ಜಮ್ಮು ಕಾಶ್ಮೀರದ ಮಾಜಿ ಸಿಎಂ ರುಬಿಯಾ ಸೈಯಾದ್ ಮಗಳನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಮುಖ ಯಾಸೀನ್ ಮಲ್ಲಿಕ್ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ನ್ಯಾ. ನೀಲಕಂಠ ಗಂಜು ಅವರ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಜಮ್ಮು ಕಾಶ್ಮೀರದ ಲಿಬರೇಷನ್ ಫ್ರಂಟ್ ಮುಖ್ಯಸ್ಥನಾಗಿದ್ದ ಮಾಕ್ಬುಲ್ ಭಟ್‍ಗೆ ನ್ಯಾ. ನೀಲಕಂಠ ಗಂಜು ಮರಣದಂಡನೆ ಶಿಕ್ಷೆ ವಿಧಿಸಿದ್ದರು. ಆತನನ್ನ 1984 ಫೆ.11 ರಂದು ನೇಣಿಗೇರಿಸಲಾಗಿತ್ತು.

    ಫೆ.14ರ ಪುಲ್ವಾಮಾದ ಉಗ್ರರ ದಾಳಿಯ ಬಳಿಕಯಲ್ಲಿ 40 ಸಿಆರ್ ಪಿಎಫ್ ಯೋಧರ ಹುತ್ಮಾತರಾದ ಮರುದಿನವೇ ಸರ್ಕಾರ ಬಹುದೊಡ್ಡ ಸರ್ಚ್ ಆಪರೇಷನ್ ನಡೆಸಿ ಪ್ರತ್ಯೇಕವಾದಿಗಳನ್ನು ಬಂಧಿಸಿತ್ತು. ಅಲ್ಲದೇ ಫೆ.17 ರಂದು ಪ್ರತ್ಯೇಕವಾದಿಗಳಿಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಸರ್ಕಾರ ಹಿಂಪಡೆದಿತ್ತು.

    ಪುಲ್ವಾಮಾ ದಾಳಿಗೂ ಮುನ್ನ ದೇಶದಲ್ಲಿ ಇರುವ ಪ್ರತ್ಯೇಕವಾದಿಗಳು ಪಾಕಿಸ್ತಾನ ಹಾಗೂ ಐಸಿಸ್ ನಿಂದ ಹಣ ಸಂದಾಯ ಆಗಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ಫೆ.26 ರಂದು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಅಧಿಕಾರಿಗಳು ಶ್ರೀನಗರ ಯಾಸಿನ್ ಮಲಿಕ್ ಮನೆಯ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ಸಂಗ್ರಹಿಸಿತ್ತು.

    ಪಿಎಸ್‍ಎ ಕಾಯ್ದೆ ಏನು ಹೇಳುತ್ತೆ?
    ಸಾರ್ವಜನಿಕರ ಸುರಕ್ಷತಾ ಕಾಯ್ದೆ(ಪಿಎಸ್‍ಎ) ಅಡಿ ಪ್ರಕರಣ ದಾಖಲಾದರೆ ಆ ವ್ಯಕ್ತಿಯನ್ನು 6 ತಿಂಗಳ ಕಾಲ ನ್ಯಾಯಾಲಯಕ್ಕೆ ಹಾಜರು ಪಡಿಸುವ ಅಗತ್ಯ ಇರುವುದಿಲ್ಲ. 2 ವರ್ಷಗಳ ಕಾಲ ನ್ಯಾಯಾಂಗ ಸಹ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್!

    ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್!

    – ಜಮಾತ್-ಇ-ಇಸ್ಲಾಂನ 70 ಪ್ರತ್ಯೇಕತಾವಾದಿಗಳ ಆಸ್ತಿ ಜಪ್ತಿ

    ನವದೆಹಲಿ: ಪುಲ್ವಾಮ ದಾಳಿ ಮಾಡಿದ ಭಯೋತ್ಪಾದಕರಿಗೆ ಹಣ ನೀಡಿರುವ ಆರೋಪದ ಮೇಲೆ ಕಾಶ್ಮೀರದ 70 ಪ್ರತ್ಯೇಕತಾವಾದಿಗಳ ಆಸ್ತಿಗಳನ್ನು ಕೇಂದ್ರ ಸರ್ಕಾರ ಜಪ್ತಿ ಮಾಡಿದೆ. ಅಲ್ಲದೆ ಉಗ್ರರಿಗೆ ಬೆಂಬಲಿಸುವ ಎಲ್ಲಾ ಪ್ರತ್ಯೇಕವಾದಿಗಳ ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

    ಹೌದು, ಫೆ. 14ರಂದು ನಡೆದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ ಈ ಪ್ರತ್ಯೇಕತಾವಾದಿಗಳು ಹಣ ನೀಡಿದ್ದರು. ಅಲ್ಲದೆ ಭಾರತದಲ್ಲೇ ಇದ್ದುಕೊಂಡು ಉಗ್ರರಿಗೆ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಹಣವನ್ನು ನೀಡಿ ಬೆಂಬಲಿಸುತ್ತಿದ್ದರು ಎಂಬ ಆರೋಪದ ಮೇಲೆ ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಸೆಕ್ಷನ್ 42 ಸಂಬಂಧಿಸಿದಂತೆ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ ಅಡಿಯಲ್ಲಿ ಈ ಆದೇಶವನ್ನು ಮಾಡಲಾಗಿದೆ. ದಿನಕ್ಕೊಂದು ಶಾಕ್ ನೀಡುತ್ತಿರುವ ಸರ್ಕಾರದ ನಡೆಗೆ ಪ್ರತ್ಯೇಕತಾವಾದಿಗಳು ಇದೀಗ ಕಂಗಾಲಾಗಿದ್ದಾರೆ.

    ಸೆಕ್ಷನ್ 42 ರ ಪ್ರಕಾರ, ಕೇಂದ್ರವು “ಸೆಕ್ಷನ್ 7, ಸೆಕ್ಷನ್ 8 ಈ ಎರಡು ಸೆಕ್ಷನ್ ಅಡಿಯಲ್ಲಿ ಬಳಸಿಕೊಳ್ಳಬಹುದಾದ ಎಲ್ಲಾ ಅಧಿಕಾರವನ್ನು ಪ್ರತಿನಿಧಿಸಬಹುದು”. ಸೆಕ್ಷನ್ 7ರಲ್ಲಿ ಕಾನೂನು ಬಾಹಿರ ಸಂಘದ ನಿಧಿ ಬಳಸುವುದನ್ನು ನಿಷೇಧಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡಲಾಗಿದೆ. ಹಾಗೆಯೇ ಸೆಕ್ಷನ್ 8ರ ಪ್ರಕಾರ ಕಾನೂನು ಬಾಹಿರ ಉದ್ದೇಶಕ್ಕಾಗಿ ಬಳಸಲಾಗುವ ಸ್ಥಳಗಳ ಮೇಲೆ ಕ್ರಮ ತೆಗೆದುಕೊಳ್ಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಂಘಟನೆ ನಿಷೇಧ:
    ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ನೆರವು ನೀಡಿ ಯುವಕರಲ್ಲಿ ದೇಶ ವಿರೋಧಿ ಭಾವನೆ ಬಿತ್ತುತ್ತಿರುವ ಆರೋಪದ ಮೇರೆಗೆ ಕೇಂದ್ರ ಸರ್ಕಾರ ಜಮಾತ್-ಇ-ಇಸ್ಲಾಮಿ (ಜೆಇಐ) ಸಂಘಟನೆಯನ್ನು ನಿಷೇಧ ಮಾಡಿದೆ. ಕಾನೂನು ಬಾಹಿರ ಚಟುವಟಿಕೆ ಕಾಯ್ದೆ 1967ರ ಸೆಕ್ಷನ್ 3ರ ಅಡಿಯಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿತ್ತು.

    ಮುಂದಿನ ಐದು ವರ್ಷಗಳ ಕಾಲ ಈ ಸಂಘಟನೆಯನ್ನು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶಾದ್ಯಂತ ನಿಷೇಧಿಸಲಾಗಿದ್ದು, ಸಂಘಟನೆಯು ಯಾವುದೇ ರೀತಿಯ ಬಹಿರಂಗ ಸಭೆ ಕಾರ್ಯಕ್ರಮ ನಡೆಸಿದರೂ ಅದು ಕಾನೂನು ಬಾಹಿರ ಎಂದು ಸೂಚಿಸಿದೆ. 1953ರಲ್ಲಿ ಬಂದ ಜೆಇಐ ಸಂಘಟನೆ ಕಾಶ್ಮೀರದಲ್ಲಿ ಪ್ರಮುಖ ಪ್ರತ್ಯೇಕತಾವಾದಿ ಸಂಘಟನೆಯಾಗಿತ್ತು. 1987ರವರೆಗೂ ಈ ಸಂಘಟನೆ ಕಾಶ್ಮೀರದ ಎಲ್ಲ ರೀತಿಯ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುತ್ತಿತ್ತು. ಅಲ್ಲದೆ ಕಾಶ್ಮೀರದ ಹುರಿಯತ್ ಮುಖಂಡ ಸೈಯ್ಯದ್ ಅಲಿ ಶಾ ಗಿಲಾನಿ ಕೂಡ ಈ ಹಿಂದೆ ಇದೇ ಸಂಘಟನೆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. 1989ರಲ್ಲಿ ಮೊದಲ ಬಾರಿಗೆ ಉಗ್ರ ಸಂಘಟನೆಗಳೊಂದಿಗೆ ಕೈ ಜೋಡಿಸಿದ್ದ ಈ ಜೆಇಐ ಸಂಘಟನೆ ಚುನಾವಣೆಗಳಿಂದ ದೂರ ಉಳಿದಿತ್ತು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತ್ಯೇಕತಾವಾದಿಗಳ ಪರ ಕಣಿವೆ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv