Tag: serial

  • ಯಜಮಾನ-ರಾಮಾಚಾರಿ; ವಾರಪೂರ್ತಿ ಒಂದು ಗಂಟೆಯ ಮಹಾಸಂಚಿಕೆ

    ಯಜಮಾನ-ರಾಮಾಚಾರಿ; ವಾರಪೂರ್ತಿ ಒಂದು ಗಂಟೆಯ ಮಹಾಸಂಚಿಕೆ

    ವ್ ಮ್ಯಾರೇಜೂ ಅಲ್ಲದ, ಅರೇಂಜ್ ಮ್ಯಾರೇಜೂ ಅಲ್ಲದ ಪಕ್ಕಾ ಅಗ್ರಿಮೆಂಟ್ ಮ್ಯಾರೇಜ್ ಕತೆಯಲ್ಲಿ ಈಗ ನಾಯಕ ನಿಜವಾಗಲೂ ಯಾರಿಗೆ ‘ಯಜಮಾನ’ ಆಗ್ತಾನೆ ಅನ್ನೋ ಪ್ರಶ್ನೆಯ ಮೇಲೆ ಧಾರಾವಾಹಿ ನಡೀತಿದೆ. ಒಂದುಕಡೆ ರಾಘುವನ್ನ ಅಗ್ರಿಮೆಂಟ್ ಮ್ಯಾರೇಜ್ ಆಗಿರೋ ಆಗರ್ಭ ಶ್ರೀಮಂತೆ ಝಾನ್ಸಿ ತನ್ನ ಪ್ರೀತಿ ಪಡೆಯೋದಕ್ಕೆ, ಎಂತಹ ಕಷ್ಟವನ್ನಾದರೂ ಎದುರಿಸ್ತಾಳೆ. ಇನ್ನೊಂದು ಕಡೆ ಅರೇಂಜ್ ಮ್ಯಾರೇಜ್ ಆಗ್ಬೇಕಾಗಿರೋ ಅನಿತಾಗೆ ಹಸೆಮಣೆ ಮೇಲೆ ಮದುವೆ ನಿಂತಿರೋದು ಆಘಾತವಾಗಿ, ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಇಬ್ಬರಿಗೂ ತಮ್ಮ ‘ಯಜಮಾನ’ ರಾಘುವೇ ಆಗಬೇಕೆಂಬ ಹಠ. ಈ ಸಮಸ್ಯೆಗೆ ಪರಿಹಾರವಾಗಿ ಮನೆಯವರೆಲ್ಲ ಸೇರಿ ಝಾನ್ಸಿ-ಅನಿತಾ ನಡುವೆ ‘ನಾನಾ- ನೀನಾ’ ಸ್ಪರ್ಧೆ ಏರ್ಪಡಿಸಿದ್ದಾರೆ.

    ಝಾನ್ಸಿ ಸರಿಯಾದ ರೀತಿಯಲ್ಲಿ ಆಡಿ ಜಯಿಸಿದರೂ, ಎಲ್ಲರೂ ಸೇರಿ ಪೂರ್ವನಿರ್ಧಾರದಂತೆ, ಸೋತರೂ ಅನಿತಾಳದ್ದೇ ಗೆಲುವು ಎಂದು ತೀರ್ಮಾನಿಸುವುದು ಇಲ್ಲಿಯವರೆಗಿನ ಕತೆ. ದಿನದಿಂದ ದಿನಕ್ಕೆ ಈ ಪಂದ್ಯ ಕುತೂಹಲಕಾರಿಯಾಗಿ ಸಾಗುತ್ತಿದೆ. ಎಷ್ಟೇ ಆದರೂ ಇಡೀ ಕುಟುಂಬ ಅನಿತಾಳ ಬೆಂಬಲಕ್ಕಿದೆ. ರಾಘು ಸೇರಿದಂತೆ ಇನ್ನಿಬ್ಬರಿಗೆ ಮನಸ್ಸಲ್ಲಿ ಝಾನ್ಸಿಯೇ ಗೆಲ್ಲಬೇಕೆಂಬ ಆಸೆಯಿದ್ದರೂ, ಅದನ್ನು ತೋರಿಸಿಕೊಳ್ಳಲು ಅವರ ಪರಿಸ್ಥಿತಿ ಬಿಡುತ್ತಿಲ್ಲ. ಇದೀಗ ಝಾನ್ಸಿಯ ಪ್ರೀತಿಯನ್ನ ಗೆಲ್ಲಿಸೋಕೆ, ಅವಳಿಗೆ ಸಪೋರ್ಟ್ ಸಿಸ್ಟಮ್ ಆಗಿ ಜೊತೆಯಲ್ಲಿ ನಿಲ್ಲೋಕೆ ಕರುನಾಡೇ ಮೆಚ್ಚಿದ, ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ಜನ ಮೆಚ್ಚಿದ ಜೋಡಿ ರಾಮಾಚಾರಿ-ಚಾರು ಬರ್ತಿದಾರೆ. ಇದನ್ನೂ ಓದಿ: ಸಿನಿಮಾ ನಿರ್ಮಾಣದತ್ತ ಹೆಜ್ಜೆ ಇಟ್ಟ ಪ್ರಜ್ವಲ್ ದೇವರಾಜ್

    ಯಜಮಾನ-ರಾಮಾಚಾರಿ ಮಹಾಸಂಚಿಕೆ, ಕರುನಾಡಿಗೆ ಮನರಂಜನೆಯ ರಸದೌತಣವನ್ನ ಕೊಡಲು ಸಜ್ಜಾಗಿದೆ. ಎರಡು ಬ್ಯೂಟಿಫುಲ್ ಜೋಡಿಗಳ ಕ್ಯೂಟ್ ರೊಮ್ಯಾನ್ಸ್, ಎರಡು ಪವರ್‌ಫುಲ್ ಹೀರೋಗಳ ಸಖತ್ ಫೈಟ್, ಎರಡು ಹೀರೋಯಿನ್‌ಗಳ ಇಮೋಷನಲ್ ಸೀನ್ಸ್, ವಿಲನ್‌ಗಳ ಅಟ್ಟಹಾಸ, ಅದನ್ನ ಅಡಗಿಸೋ ಒಳ್ಳೆತನ, ನಾನ್-ಸ್ಟಾಪ್ ನಗು, ‘ನಾನಾ-ನೀನಾ’ ಪಂದ್ಯದ ಕುತೂಹಲ… ಹೀಗೆ ಮಹಾಸಂಚಿಕೆ ವಿಶೇಷವಾಗಿ ಮೂಡಿಬರಲಿದೆ. ನಿಜವಾಗ್ಲೂ ಮನೆಯವರ ವೋಟ್ ಪಡೆದು ಮನೆಯ ‘ಸೊಸೆ’ ಪಟ್ಟ ದಕ್ಕಿಸಿಕೊಳ್ಳೋರು ಯಾರು? ‘ಯಜಮಾನ’ನ ಅಸಲಿ ಯಜಮಾನಿ ಆಗೋದ್ಯಾರು? ಮನೆಯಿಂದಾಚೆ ಹೋಗೋರು ಯಾರು ಅನ್ನೋದು ಇಲ್ಲಿ ನಿರ್ಧಾರವಾಗಲಿದೆ. ಯಜಮಾನ-ರಾಮಾಚಾರಿ ವಾರಪೂರ್ತಿ ಒಂದು ಗಂಟೆಯ ಮಹಾಸಂಚಿಕೆ ಸೆಪ್ಟಂಬರ್ 8ರಿಂದ ರಾತ್ರಿ 9:30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ.

  • ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ

    ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ

    ನ್ನಡ ಕಿರುತೆರೆ ವೀಕ್ಷಕರಿಗೆ ವಿಭಿನ್ನತೆಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ (Star Suvarna) ವಾಹಿನಿಯು ಇದೀಗ ನೀ ಇರಲು ಜೊತೆಯಲ್ಲಿ (Nee Iralu Jotheyalli) ಎಂಬ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ.

    ಮಾತಿನಲ್ಲಿ ತುಂಟತನವನ್ನೊಳಗೊಂಡ ಕಥಾನಾಯಕ ಕೃಷ್ಣನದ್ದು ಸ್ವಾತಂತ್ಯ ಹೋರಾಟಗಾರರ ಕುಟುಂಬ. ಕೆಲಸದಲ್ಲಿ ಜಾಣ್ಮೆ, ನಿಪುಣತೆ ಹೊಂದಿರುವ ಈತ, ತಂತ್ರದಲ್ಲಿ ಕಪಟಿಯಾಗಿದ್ದರೂ ಮಾಡಿದ ಸಹಾಯಕ್ಕೆ ಪ್ರತಿಫಲವನ್ನು ನಿರೀಕ್ಷಿಸದ ಅಧುನಿಕ ಯುಗದ ಶ್ರೀ ಕೃಷ್ಣ. ಆದರೆ ಈ ಕೃಷ್ಣನಿಗೆ ಪೂತನಿಯಂತೆ ಕಾಟ ಕೊಡೋಳು ಅತ್ತಿಗೆ ಊರ್ಮಿಳಾ ದಿವಾನ್. ನನ್ನದೇ ನಡಿಬೇಕು, ನನ್ನಿಂದಲೇ ಎಲ್ಲಾ ಎಂಬ ಸೊಕ್ಕಿನಿಂದ ಮೆರಿತಿರೋ ಊರ್ಮಿಳಾ, ಅಹಂಕಾರವನ್ನೇ ಒಡವೆಯನ್ನಾಗಿಸಿಕೊಂಡು ಮನೆಮಂದಿಯನ್ನೆಲ್ಲಾ ತನ್ನ ಕೈಗೊಂಬೆಯಾಗಿಸಿರ್ತಾಳೆ.

    ಇನ್ನು ತಂದೆಯ ಮುದ್ದಿನ ಮಗಳು ಕಥಾನಾಯಕಿ ರಚನಾ ಪಟೇಲ್. ಓದಿನಲ್ಲಿ ಅತ್ಯಂತ ಪ್ರತಿಭಾವಂತೆ. ಯಾರನ್ನು ನೋಯಿಸದ ಮಾತೃ ಹೃದಯಿ. ಸೌಂದರ್ಯವನ್ನು ಮುಖದಲ್ಲಿ ಮಾತ್ರವಲ್ಲದೆ ನಡವಳಿಕೆಯಲ್ಲಿಯೂ ಒಗ್ಗೂಡಿಸಿರುವ ಈಕೆಗೆ, ಸಾಧನೆಯ ಶಿಖರವೇರಿರುವ ಊರ್ಮಿಳಾ ದಿವಾನೇ ಆದರ್ಶ. ಆಕೆಯಂತೆ ಏನನ್ನಾದರೂ ಸಾಧಿಸಬೇಕೆಂಬ ಛಲ ರಚನಾಳದ್ದು. ಹೀಗೆ ಸೊಕ್ಕಿನಿಂದ ಮೆರಿತಿರೋ ಊರ್ಮಿಳಾಗೆ ಮುಂದೆ ಕೃಷ್ಣ ತಕ್ಕ ಪಾಠ ಕಲಿಸ್ತಾನ? ತದ್ವಿರುದ್ಧ ಭಾವಗಳನ್ನು ಹೊಂದಿರುವ ಕೃಷ್ಣ,ರಚನಾ ಹೇಗೆ ಒಂದಾಗ್ತಾರೆ? ರಚನಾಗೆ ಆದರ್ಶವಾಗಿರೋ ಊರ್ಮಿಳಾ, ತನ್ನನ್ನೇ ಎದುರಾಳಿಯಾಗಿ ನೋಡಿದ್ರೆ ಮುಂದೇನಾಗಬಹುದು? ಎಂಬುದೇ ಮುಖ್ಯ ಕಥಾ ಹಂದರ. ಇದನ್ನೂ ಓದಿ: ‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ

    ಕನ್ನಡ ಕಿರುತೆರೆಯಲ್ಲಿ ಸುವರ್ಣ ಇತಿಹಾಸ ಬರೆದಿರೋ `ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜಿನಿ, ವರ್ಷಗಳ ಬಳಿಕ ಈ ಕಥೆಯ ಮೂಲಕ ಸುವರ್ಣ ಪರಿವಾರಕ್ಕೆ ಕಮ್‌ಬ್ಯಾಕ್ ಆಗಿದ್ದು ಊರ್ಮಿಳಾ ದಿವಾನ್ ಎಂಬ ಮುಖ್ಯ ಖಳನಾಯಕಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ನಾಯಕನಾಗಿ ಪವನ್ ರವೀಂದ್ರ ಹಾಗೂ ನಾಯಕಿಯಾಗಿ ಸಲೋಮಿ ಡಿಸೋಜಾ ಬಣ್ಣ ಹಚ್ಚಿದ್ದಾರೆ. ಜೊತೆಗೆ ನಟ ಮೋಹನ್ ಸೇರಿದಂತೆ ಇನ್ನು ಅನೇಕ ಪ್ರತಿಭಾನ್ವಿತ ನಟ-ನಟಿಯರು ಅಭಿನಯಿಸುತ್ತಿದ್ದಾರೆ.

    ಮುದ್ದುಲಕ್ಷ್ಮಿ, ಮರಳಿ ಬಂದಳು ಸೀತೆ, ಮರಳಿ ಮನಸಾಗಿದೆ ಸೇರಿದಂತೆ ಇನ್ನೂ ಅನೇಕ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ.ರಮೇಶ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ನೀ ಇರಲು ಜೊತೆಯಲ್ಲಿ ಧಾರಾವಾಹಿ ಮೂಡಿ ಬರಲಿದೆ. ಈ ಧಾರಾವಾಹಿ ಇದೇ ಆಗಸ್ಟ್ 11ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

  • ‘ರಾಮಾಚಾರಿ’ಯಲ್ಲಿ ಬಿಗ್ ಟ್ವಿಸ್ಟ್ : ವಿಲನ್ ಗ್ಯಾಂಗ್ ಹಾಕೇ ಬಿಡ್ತು ಚೂರಿ !

    ‘ರಾಮಾಚಾರಿ’ಯಲ್ಲಿ ಬಿಗ್ ಟ್ವಿಸ್ಟ್ : ವಿಲನ್ ಗ್ಯಾಂಗ್ ಹಾಕೇ ಬಿಡ್ತು ಚೂರಿ !

    ಲರ್ಸ್ ಕನ್ನಡದಲ್ಲಿ (Colors Kannada) ರಾತ್ರಿ ಹತ್ತಕ್ಕೆ ಪ್ರಸಾರವಾಗುತ್ತಿರುವ ಧಾರಾವಾಹಿ ರಾಮಾಚಾರಿ (Ramachaari) ಜನಪ್ರಿಯ ಧಾರಾವಾಹಿಗಳಲ್ಲಿ ಒಂದು. ಧಾರಾವಾಹಿಯು ಈಗ ಅತ್ಯಂತ ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಇದೇ ಗುರುವಾರ ಪ್ರಸಾರವಾಗಲಿರುವ ಸಂಚಿಕೆಯಲ್ಲಿ ‘ರಾಮಾಚಾರಿ’ಯನ್ನು ಚೂರಿ ಚುಚ್ಚಿ ಕೊಲ್ಲುವ ಮತ್ತು ಆ ನಂತರದ ದಿನಗಳಲ್ಲಿ ರಾಮಾಚಾರಿಯ ಸಾವಿನ ಪರಿಣಾಮದಿಂದ ಆಗುವ ಎಪಿಸೋಡ್ ಗಳು ಪ್ರಸಾರವಾಗಲಿವೆ.

    ‘ರಾಮಾಚಾರಿ’ ಧಾರಾವಾಹಿಯ ವಿಲನ್ ಗಳ ಗ್ಯಾಂಗ್ – ಮಾನ್ಯತಾ, ನವದೀಪ್, ರುಕ್ಕು ಮತ್ತು ಜಿಕೆ. ಇವರೆಲ್ಲ ಸೇರಿ ರಾಮಾಚಾರಿಯನ್ನು ಕೊಲ್ಲುವ ಯೋಜನೆಯನ್ನು ರೂಪಿಸುತ್ತಾರೆ. ಅವನನ್ನು ಕಟ್ಟಡವೊಂದಕ್ಕೆ ಮೋಸದಿಂದ ಕರೆದೊಯ್ಯುತ್ತಾರೆ. ಅಲ್ಲಿ ಒಂದು ನಾಟಕೀಯ ಮತ್ತು ತೀವ್ರ ಹೋರಾಟದ ದೃಶ್ಯ ಬಿಚ್ಚಿಕೊಳ್ಳುತ್ತದೆ. ಇದನ್ನೂ ಓದಿ: ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ

    ರಾಮಾಚಾರಿ ಎಷ್ಟೇ ಪ್ರತಿರೋಧ ತೋರಿಸಿದರೂ ಗ್ಯಾಂಗ್ ಅವನನ್ನು ಚೂರಿ ಚುಚ್ಚಿ ಕೊಲ್ಲಲು ಯಶಸ್ವಿಯಾಗುತ್ತದೆ. ತಮ್ಮ ಶತ್ರುವನ್ನು ನಾಶಪಡಿಸಿದ ಖುಷಿಯಲ್ಲಿ ಅವರು ಸಂಭ್ರಮಿಸುತ್ತಾರೆ. ಈ ನಡುವೆ ಚಾರು, ಉಳಿದ ಕುಟುಂಬ ಮತ್ತು ಅಗ್ರಹಾರದ ಜನರು ತಮ್ಮ ಪ್ರೀತಿಯ ರಾಮಾಚಾರಿಯ ಸಾವಿನ ಶೋಕಾಚರಣೆಯಲ್ಲಿರುತ್ತಾರೆ.

  • ಪಾರ್ಟಿ, ಪಬ್‌ಗೆ ಹೋಗಿ ಸಮಯವಲ್ಲದ ಸಮಯಕ್ಕೆ ಮನೆಗೆ ಬರ್ತಿದ್ಳು: ಕಿರುತೆರೆ ನಟಿ ಶ್ರುತಿ ಪತಿಯ ಆರೋಪ

    ಪಾರ್ಟಿ, ಪಬ್‌ಗೆ ಹೋಗಿ ಸಮಯವಲ್ಲದ ಸಮಯಕ್ಕೆ ಮನೆಗೆ ಬರ್ತಿದ್ಳು: ಕಿರುತೆರೆ ನಟಿ ಶ್ರುತಿ ಪತಿಯ ಆರೋಪ

    ಬೆಂಗಳೂರು: ಪಾರ್ಟಿ, ಪಬ್ ಅಂತಾ ಹೋಗಿ ಸಮಯವಲ್ಲದ ಸಮಯಕ್ಕೆ ಮನೆ ಬರ್ತಿದ್ಳು ಎಂದು ಕಿರುತೆರೆ ನಟಿ ಶ್ರುತಿ (Actress Shruti) ವಿರುದ್ಧ ಪತಿ (Husband) ಅಂಬರೀಶ್ ಪೊಲೀಸ್ ವಿಚಾರಣೆ ವೇಳೆ ಸಾಲು ಸಾಲು ಆರೋಪ ಮಾಡಿದ್ದಾರೆ.

    ಮಂಜುಳಾ ಅಲಿಯಾಸ್ ಶ್ರುತಿಗೆ ಜು. 4ರಂದು ಚಾಕು ಇರಿದಿದ್ದ ಪತಿ ಅಂಬರೀಶ್‌ನನ್ನು ಬಂಧಿಸಿದ್ದ ಹನುಮಂತ ನಗರ ಪೊಲೀಸರು (Hanumantha nagara Police) ವಿಚಾರಣೆ ಮಾಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿ ಪತಿ, ಪತ್ನಿಯ ಮೇಲೆ ಸಾಲು ಸಾಲು ಆರೋಪಗಳನ್ನ ಮಾಡಿದ್ದಾನೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್‌

    ನನ್ನ ಪತ್ನಿ ಮಂಜುಳಾಗೆ ಕುಟುಂಬದ ಜವಾಬ್ದಾರಿ ಇರಲಿಲ್ಲ. ಇಬ್ಬರು ಹೆಣ್ಣುಮಕ್ಕಳಿಗೆ ತಾಯಿ ಪ್ರೀತಿ ಅನ್ನೋದು ತೋರಿಸಿಲ್ಲ. ಪಾರ್ಟಿ ಪಬ್ ಅಂತ ಹೋಗಿ ಸಮಯವಲ್ಲದ ಸಮಯಕ್ಕೆ ಮನೆಗೆ ಬರುತ್ತಿದ್ದಳು. ಹೊರಗಡೆ ಹೋದರೆ ವಾರ, 15 ದಿನ ಮನೆಗೆ ಬರುತ್ತಿರಲಿಲ್ಲ. ಇತ್ತೀಚೆಗೆ ಕುಂಭಮೇಳಕ್ಕೆ ಅಂತ ಹೋಗಿ 15 ದಿನ ಮನೆಗೆ ಬಂದಿರಲಿಲ್ಲ. ಈ ವಿಚಾರವಾಗಿ ಗಲಾಟೆ ಆಗಿತ್ತು ಎಂದು ದೂರಿದ್ದಾರೆ. ಇದನ್ನೂ ಓದಿ: ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

    ನನ್ನ ಮೇಲೆ ಒಮ್ಮೆ ಶ್ರುತಿ ದೂರು ಕೂಡ ನೀಡಿದ್ದಳು. 25 ಲಕ್ಷ ರೂ. ಹಣ ಕೊಟ್ಟು ಅಪಾರ್ಟ್ಮೆಂಟ್‌ನಲ್ಲಿ ಮನೆ ಭೋಗ್ಯಕ್ಕೆ ಹಾಕಿಕೊಂಡಿದ್ದೆ. ಭೋಗ್ಯ ಕ್ಯಾನ್ಸಲ್ ಮಾಡಿ ಆ ದುಡ್ಡಿನೊಂದಿಗೆ ಮನೆ ಬಿಟ್ಟು ಹೋಗಲು ಶ್ರುತಿ ಪ್ಲಾನ್ ಕೂಡ ಮಾಡಿದ್ದಳು. ಹಾಗಾಗಿ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ಆಗುತ್ತಿತ್ತು. ಮೊನ್ನೆ ಕೂಡ ಗಲಾಟೆ ಆದಾಗ ರೂಡಾಗಿ ನಡೆದುಕೊಂಡಿದ್ದಕ್ಕೆ ದುಡುಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾಗಿ ಆರೋಪಿ ಪತಿ ಪೊಲೀಸರ ತನಿಖೆಯ ವೇಳೆ ಹೇಳಿಕೊಂಡಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

  • ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್‌

    ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್‌

    ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ (Husband) ಚಾಕು ಇರಿದ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ.

    ಮಂಜುಳ @ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ (Serials) ಶ್ರುತಿ ನಟಿಸಿದ್ದಾರೆ. ಜುಲೈ 4 ರಂದು ಚೂರಿ ಇರಿದಿದ್ದು ತಡವಾಗಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ (Actress Shruti) ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನ ಗುಂಡಿಕ್ಕಿ ಕೊಂದ ತಂದೆ

    ಏನಿದು ಘಟನೆ?
    20 ವರ್ಷದ ಹಿಂದೆ ಅಂಬರೀಶ್ ಎಂಬಾತನ ಪ್ರೀತಿಸಿ ಶ್ರುತಿ ಮದುವೆಯಾಗಿದ್ದರು. ಮದುವೆಯಾಗಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹನುಮಂತ ನಗರದಲ್ಲಿ ಲೀಸ್‌ಗೆ ಮನೆ ಪಡೆದು ದಂಪತಿ ವಾಸವಾಗಿದ್ದರು. ಕೆಲ ತಿಂಗಳಿನಿಂದ ಶ್ರುತಿ ನಡವಳಿಕೆ ಗಂಡ ಅಂಬರೀಶ್‌ಗೆ ಇಷ್ಟವಾಗುತ್ತಿರಲಿಲ್ಲ. ಶೀಲ ಶಂಕಿಸಿ ಜಗಳ ಮಾಡುತ್ತಿದ್ದ.

    ಇಬ್ಬರ ಮಧ್ಯೆ ಲೀಸ್‌ ಹಣಕ್ಕೆ ಸಂಬಂಧಿಸಿದಂತೆ ಆಗಾಗ ಜಗಳ ನಡೆಯುತ್ತಿತ್ತು. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಹಿಂದೆ ಶ್ರುತಿ ದೂರು ನೀಡಿದ್ದರು. ಇಬ್ಬರ ನಡುವೆ ಹೊಂದಾಣಿಕೆ ಸರಿ ಇಲ್ಲದ ಕಾರಣ ಕಳೆದ ಏಪ್ರಿಲ್‌ನಲ್ಲಿ ಪತಿಯಿಂದ ದೂರವಾಗಿ ಅಣ್ಣನ ಮನೆಯಲ್ಲಿ ಶ್ರುತಿ ನೆಲೆಸಿದ್ದರು.

    ಜುಲೈ 3 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಪತಿ, ಪತ್ನಿ ರಾಜಿಯಾಗಿ ಒಂದಾಗಿದ್ದರು. ಆದರೆ ಜುಲೈ 4 ರಂದು ಮಕ್ಕಳು ಕಾಲೇಜಿಗೆ ಹೋಗಿದ್ದಾಗ ಪೆಪ್ಪರ್ ಸ್ಪ್ರೇ ಮಾಡಿ ಪತ್ನಿಯ ಕೊಲೆಗೆ ಅಂಬರೀಶ್‌ ಯತ್ನಿಸಿದ್ದಾನೆ.

    ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಸಿನಿಮಾ ಸ್ಟೈಲ್ ನಲ್ಲಿ ತಲೆ ಕೂದಲು ಹಿಡಿದು ಗೋಡೆ ತಲೆ ಗುದ್ದಿಸಿ ಕೊಲೆಗೆ ಅಂಬರೀಶ್‌ ಯತ್ನಿಸಿದ್ದಾನೆ.

    ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರುವುದಾಗಿ ಶ್ರುತಿ ದೂರು ನೀಡಿದ್ದು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕೊಲೆಯತ್ನ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಅಂಬರೀಶ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

  • ನಂದಗೋಕುಲ ಧಾರಾವಾಹಿಯಲ್ಲಿ ಹೈಡ್ರಾಮಾ..!

    ನಂದಗೋಕುಲ ಧಾರಾವಾಹಿಯಲ್ಲಿ ಹೈಡ್ರಾಮಾ..!

    ಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕಥೆಗಳ ಮೂಲಕ ಜನಪ್ರಿಯವಾಗಿದೆ. ಅಂತಹ ಜನ ಮೆಚ್ಚಿದ ಧಾರಾವಾಹಿಯಲ್ಲಿ `ನಂದಗೋಕುಲ’ ಸೀರಿಯಲ್ ಕೂಡಾ ಒಂದು. `ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕಥೆ’ಯನ್ನು ಹೇಳುವ `ನಂದಗೋಕುಲ’ ರಾತ್ರಿ 9ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದು ಹೊಸ ತಿರುವುಗಳೊಂದಿಗೆ ಪ್ರೇಕ್ಷಕರ ಮನವನ್ನು ಗೆಲ್ಲುತ್ತಿದೆ.

    ನಂದಕುಮಾರ್ ಒಬ್ಬ ಕಟ್ಟುನಿಟ್ಟಾದ ನಡವಳಿಕೆಯ ಆತ್ಮವಿಶ್ವಾಸದಿಂದ ಕೂಡಿದ ವ್ಯಕ್ತಿ, `ಗಿರಿಜಾ ಸ್ಟೋರ್ಸ್’ ಎಂಬ ದಿನಸಿ ಅಂಗಡಿ ನಡೆಸುವ ನಂದನಿಗೆ ತನ್ನ ಕುಟುಂಬವೆಂದರೆ ಪ್ರಾಣ. ಆದರೆ ಎದುರು ಮನೆಯಲ್ಲೇ ಇರುವ ಸೂರ್ಯಕಾಂತ್ ಮತ್ತು ಚಂದ್ರಕಾಂತ್ ಕುಟುಂಬವೆಂದರೆ ನಂದಕುಮಾರ್‌ಗೆ ಕೆಂಡದಂಥ ಕೋಪ, ವೈಷಮ್ಯ. ತನ್ನ ಹೆಂಡತಿ ಗಿರಿಜಾಳ ಸಹೋದರರೇ ಇವರಿಬ್ಬರೂ! ಈ ದ್ವೇಷಕ್ಕೆ ಕಾರಣ ನಂದಕುಮಾರ್ ಹಾಗೂ ಗಿರಿಜಾ 25 ವರ್ಷಗಳ ಹಿಂದೆ ಓಡಿಹೋಗಿ ಮದುವೆಯಾಗಿದ್ದು, ಈ ಎರಡೂ ಕುಟುಂಬಗಳ ನಡುವೆ ಅಂದಿನಿಂದಲೂ ಆಕ್ರೋಶ. ಇದನ್ನೂ ಓದಿ: 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

    ನಂದಕುಮಾರ್ ಮತ್ತು ಗಿರಿಜಾರ ಮಕ್ಕಳಾದ ಧನ್ಯಾ, ಮಾಧವ, ಕೇಶವ, ವಲ್ಲಭ ಮತ್ತು ಅನನ್ಯಾ ತಂದೆಯ ಕಟ್ಟುನಿಟ್ಟಾದ ನಿರೀಕ್ಷೆಗಳ ನಡುವೆ ಬೆಳೆದವರು. ತನ್ನ ಮಕ್ಕಳು ತನ್ನಂತೆ ಪ್ರೀತಿಸಿ ಮದುವೆಯಾದರೆ ನೋವನುಭವಿಸಬೇಕಾಗುತ್ತದೆ. ನೆಮ್ಮದಿಯೂ ಇರುವುದಿಲ್ಲ ಎಂದು ನಿರ್ಧರಿಸಿ ಮಕ್ಕಳಿಂದ `ನೀವ್ಯಾರೂ ಪ್ರೀತಿಸಿ ಮದ್ವೆ ಆಗೊಲ್ಲ ಅಂತ ನನಗೆ ಮಾತು ಕೊಡಿ!’ ಎಂದು ನಂದಕುಮಾರ್ ಭಾಷೆ ತೆಗೆದುಕೊಂಡಿರುತ್ತಾನೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ನಯಾ ಲುಕ್.. ಬ್ಯೂಟಿಫುಲ್..!

    ಆದರೆ ಎರಡನೇ ಮಗ ಕೇಶವ, ಮೀನಾಳನ್ನು ಪ್ರೀತಿಸುತ್ತಾನೆ. ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಮೀನಾಳ ತಂದೆ ಬೇರೊಬ್ಬ ಹುಡುಗನ ಜೊತೆ ಮದುವೆ ಫಿಕ್ಸ್ ಮಾಡುತ್ತಾನೆ. ಇತ್ತ ನಂದಕುಮಾರ್‌ಗೂ ಮಗ ಕೇಶವನ ಪ್ರೀತಿಯ ವಿಷಯ ಗೊತ್ತಾಗುತ್ತದೆ. ದೊಡ್ಡ ಮಗ ಮಾಧವನಿಗೆ ಹೆಣ್ಣು ನೋಡುತ್ತಿದ್ದಾಗ ಕೇಶವನಿಗೂ ಮದುವೆ ಮಾಡಿಸುವ ಯೋಚನೆಯಲ್ಲಿ ಒಂದೇ ಮನೆಯ ಅಕ್ಕ ತಂಗಿಯರನ್ನು ನೋಡಿ ಮದುವೆ ಕೂಡಾ ಫಿಕ್ಸ್ ಆಗುತ್ತದೆ.

    ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮೀನಾಳ ಮದುವೆ ಇನ್ನೊಬ್ಬ ಹುಡುಗನ ಜೊತೆ ನೆರವೇರುತ್ತಿರುತ್ತದೆ. ಆಗ ನಂದಕುಮಾರ್‌ನ ಮೂರನೇ ಮಗ ವಲ್ಲಭ ತನ್ನ ಅಣ್ಣನ ಪ್ರೀತಿಯನ್ನು ಒಂದು ಮಾಡಲು ನಿರ್ಧರಿಸುತ್ತಾನೆ. ಬೇಸರದಲ್ಲಿಯೇ ಮದುವೆ ಮಂಟಪಕ್ಕೆ ಹೋಗಲು ಸಜ್ಜಾಗಿರೋ ಮೀನಾಳನ್ನು ಯಾರ ಕಣ್ಣಿಗೂ ಬೀಳದಂತೆ ಅಲ್ಲಿಂದ ಕರೆದೊಯ್ಯುತ್ತಾನೆ. ಇದನ್ನೂ ಓದಿ: `ನಾನು ಪಾರ್ಟ್ ಟೈಂ ನಟಿ’ ಎಂದ ಕೇಂದ್ರ ಮಾಜಿ ಸಚಿವೆ ಸ್ಮೃತಿ ಇರಾನಿ..? ಫುಲ್‌ಟೈಂ ಏನ್ ಗೊತ್ತಾ?

    ವಲ್ಲಭನಿಗೆ ಕೇಶವನ ಮದುವೆ ಮೀನಾಳ ಜೊತೆ ಮಾಡಿಸಬೇಕಿದೆ. ವಲ್ಲಭ ಅಣ್ಣನ ಮದುವೆಯನ್ನು ಮಾಡಿಸಲು ಯಶಸ್ವಿಯಾಗುತ್ತಾನಾ? ತನ್ನ ಮಕ್ಕಳು ತಾನು ಹಾಕಿದ ಗೆರೆ ದಾಟಲ್ಲ ಎಂದು ಭಾವಿಸಿರುವ ನಂದಕುಮಾರ್‌ಗೆ ತನ್ನ ಮಗ ಕೇಶವ ಪ್ರೀತಿಸಿ ಮದುವೆಯಾದರೆ ಆಗುವ ಆಘಾತವೇನು? ಅಪ್ಪಿತಪ್ಪಿ ಮದುವೆಯಾದಲ್ಲಿ ಆ ಮದುವೆಯನ್ನು ಒಪ್ಪಲು ಸಾಧ್ಯವೇ? ವರ್ಷಾನುಗಟ್ಟಲೆಯಿಂದ ಬೆಳೆಸಿಕೊಂಡು ಬಂದ ಪರಂಪರೆಯನ್ನು ಉಳಿಸಿಕೊಳ್ಳುವ ಸವಾಲನ್ನು ನಂದಕುಮಾರ್ ಹೇಗೆ ಎದುರಿಸುತ್ತಾನೆ?

    `ನಂದ ಗೋಕುಲ’ದಂಥ ಕುಟುಂಬ ತಮ್ಮದಿರಬೇಕು. ಎಲ್ಲರೂ ಜೊತೆಯಾಗಿ ಸಂತೋಷದಿಂದ ಬಾಳಿ ಬದುಕಬೇಕು ಎಂಬ ಕನಸು ಕಾಣುತ್ತಿರುವ ನಂದಕುಮಾರ್ ಕನಸು ತನ್ನ ಮಕ್ಕಳ ಆಯ್ಕೆಯಿಂದ ಏರುಪೇರಾಗುತ್ತದೆಯೇ? ಚೆಂದದ ಮನಸ್ಸುಗಳು ಸೇರಿದ ತುಂಬಿದ ಮನೆ ಜೇನಿನ ಗೂಡಾಗಿ ಇರುತ್ತದೆಯೇ? ಭೂಮಿಗೆ ಒಟ್ಟಿಗೆ ಬಂದವರು ಒಗ್ಗಟ್ಟಾಗಿರುವರೇ? ಭಿನ್ನ ಅಭಿರುಚಿ ಇದ್ದವರು ಒಂದೇ ಸೂರಿನಡಿ ಇರಬಲ್ಲರೇ? ಒಂದೇ ಮನಸ್ಸಿನ ಮಂದಿ ಮನಸ್ಸು ಮುರಿದು ಹೋಗುವಂತ ಸ್ಥಿತಿಗೆ ಬಂದರೇ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇದೇ ವಾರ `ನಂದಗೋಕುಲ’ ಧಾರಾವಾಹಿಯಲ್ಲಿ ಉತ್ತರ ಸಿಗಲಿದೆ. ಇದನ್ನೂ ಓದಿ: ನಯನತಾರಾಗೆ ನೋಟಿಸ್ : 5 ಕೋಟಿ ರೂಪಾಯಿಗೆ ಡಿಮಾಂಡ್

    `ಬಣ್ಣ ಟಾಕೀಸ್’ ನಿರ್ಮಿಸುತ್ತಿರುವ `ನಂದ ಗೋಕುಲ’ ಧಾರಾವಾಹಿಯ ತಾರಾಗಣದಲ್ಲಿ ಅರವಿಂದ್ ರಾವ್, ಅಮೃತಾ ನಾಯ್ಡು, ರವಿ ಚೇತನ್, ರಘು ಮಂಡ್ಯ, ಅಭಿಷೇಕ್ ದಾಸ್, ಯಶವಂತ್, ವಿಜಯ್ ಚಂದ್ರ, ಊರ್ಜಿತ ವಲ್ತಾಜೆ, ಅರ್ಚನಾ ಗಾಯಕ್ವಾಡ್, ನವ್ಯಾ, ಮೇಘಾ, ಕೃಷ್ಣಪ್ರಿಯ, ಶೈಲಜಾ ಮುಂತಾದವರು ಇದ್ದಾರೆ.

  • ಜನಪ್ರಿಯ ವಾಹಿನಿಯಲ್ಲಿ ಧಾರಾವಾಹಿ ಆಯ್ತು ರೇಣುಕಾಸ್ವಾಮಿ ಮರ್ಡರ್

    ಜನಪ್ರಿಯ ವಾಹಿನಿಯಲ್ಲಿ ಧಾರಾವಾಹಿ ಆಯ್ತು ರೇಣುಕಾಸ್ವಾಮಿ ಮರ್ಡರ್

    ಟ ದರ್ಶನ್‍ ಮರ್ಡರ್ ಮಾಡಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಹತ್ಯೆಯ ಕಥೆಯನ್ನೇ ಹೋಲುವಂಥ ಧಾರಾವಾಹಿಯನ್ನು ಕಲರ್ಸ್ ಕನ್ನಡ ವಾಹಿನಿಯು ನಿರ್ಮಿಸಿದೆ. ಹೌದು, ನಿನ್ನೆ  ಶಾಂತಂ ಪಾಪಂ ಸರಣಿಯಲ್ಲಿ ಪ್ರಸಾರವಾದ ‘ಡೇರ್ ಡೆವಿಲ್ ದೇವದಾಸ್’ ಬಹುತೇಕ ರೇಣುಕಾಸ್ವಾಮಿ ಮರ್ಡರ್ ಕಥೆಯನ್ನೇ ಹೋಲುತ್ತದೆ ಎನ್ನುವ ಅಭಿಪ್ರಾಯವನ್ನು ಅನೇಕ ನೋಡುಗರ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಭಾರೀ ಚರ್ಚೆ ನಡೆದಿದೆ.

    ಸ್ನೇಹಿತೆ ಪವಿತ್ರಾ ಗೌಡಗಾಗಿ ದರ್ಶನ್ ರೇಣುಕಾಸ್ವಾಮಿ ಕೊಲ್ಲಿಸಿದ್ದಾರೆ ಎನ್ನುವ ಆರೋಪ ಹೊತ್ತಿದ್ದಾರೆ. ಈಗಾಗಲೇ ದರ್ಶನ್ ಜೈಲು ಪಾಲಾಗಿದ್ದಾರೆ. ದರ್ಶನ್ ಅಂಡ್ ಗ್ಯಾಂಗ್‍ ಹೇಗೆಲ್ಲ ರೇಣುಕಾಸ್ವಾಮಿಯನ್ನು ಕೊಂದಿತು ಎನ್ನುವ ವಿಚಾರಗಳನ್ನು ತನಿಖಾಧಿಕಾರಿಗಳು ಕೋರ್ಟ್ ಗೆ ಸಲ್ಲಿಸಿದ್ದಾರೆ. ಕೊಲೆಯಾದ ಶೆಡ್‍, ಅದಕ್ಕೂ ಮುನ್ನ ಪಾರ್ಟಿ.. ರೇಣುಕಾಸ್ವಾಮಿಯನ್ನು ಖೆಡ್ಡಾಗೆ ಕೆಡವಿದ್ದು ಹೇಗೆ ಎನ್ನುವ ಕುರಿತಂತೆ ಎಳೆ ಎಳೆಯಾಗಿ ತನಿಖಾಧಿಕಾರಿಗಳು ಬಿಡಿಸಿಟ್ಟಿದ್ದಾರೆ. ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಕಂಡ ಕಥೆಯೂ ಹೀಗೆಯೇ ಇದೆ.

    ಶಾಂತಂ ಪಾಪಂ ಸರಣಿಯಲ್ಲಿ ಪ್ರಸಾರ ಕಂಡ ‘ಡೇರ್ ಡೆವಿಲ್ ದೇವದಾಸ್’ ಕಥೆ ಶುರುವಾಗೋದು ನಟಿಯ ಸಲುವಾಗಿ ಅಣ್ಣ ಒಂದು ಕೊಲೆ ಮಾಡಿಸಿದ್ದಾನೆ ಎನ್ನುವ ಮೂಲಕ. ದೇವ ದೊಡ್ಡ ಉದ್ಯಮಿ. ಶ್ರೀಮಂತ. ಅವನಿಗೆ ಪುಟ್ಟದೊಂದು ಸಂಸಾರವಿದೆ. ಮುದ್ದಿನಂತೆ ಹೆಂಡ್ತಿ ಮತ್ತು ಮಗ. ಈ ದೇವನ ಬಾಳಲ್ಲಿ ನಟಿಯೊಬ್ಬಳ ಪ್ರವೇಶವಾಗುತ್ತದೆ. ನಟಿಯ ಪ್ರವೇಶದ ನಂತರ ಕಟ್ಟಿಕೊಂಡ ಹೆಂಡ್ತಿಗೆ ಸಾಕಷ್ಟು ಟಾರ್ಚರ್ ಕೊಡೋಕೆ ಶುರು ಮಾಡ್ತಾನೆ. ನಟಿಯ ಸಲುವಾಗಿ ಆತ ಏನು ಮಾಡೋಕು ರೆಡಿ ಆಗ್ತಾನೆ.

    ನಟಿಗೆ ಹಿಂಸೆ ಕೊಡುತ್ತಿದ್ದ ವಿಚಾರ ದೇವನಿಗೆ ಗೊತ್ತಾಗುತ್ತದೆ. ಜೊತೆಗೆ ನಟಿಯು ಕೂಡ ಈ ವಿಚಾರವನ್ನು ದೇವನ ಜೊತೆ ಹಂಚಿಕೊಳ್ಳುತ್ತಾಳೆ. ತನ್ನ ಸಹಾಯಕರನ್ನು ಗುಂಪು ಮಾಡಿಕೊಂಡು ನಟಿಗೆ ಅಶ್ಲೀಲ ಕಾಮೆಂಟ್ ಮಾಡ್ತಿದ್ದವನನ್ನು ಹಿಡಿದು ಹಾಕ್ತಾರೆ. ಶೆಡ್‍ಗೆ ಕರೆಯಿಸಿಕೊಂಡು ಕೊಡಬಾರದ ಹಿಂಸೆ ಕೊಟ್ಟು ಸಾಯಿಸ್ತಾರೆ. ಕೊನೆಗೆ ಶ್ರೀಮಂತ ಉದ್ಯಮಿ ಜೈಲು ಪಾಲಾಗ್ತಾನೆ. ಹೀಗೆ ಕಥೆಯನ್ನು ಅದು ಹೊಂದಿದೆ. ಈ ಕಥೆಗೂ ದರ್ಶನ್ ಪ್ರಕರಣಕ್ಕೂ ಸಾಮ್ಯತೆಯನ್ನು ನೋಡುಗರ ಕಲ್ಪಿಸುತ್ತಿದ್ದಾರೆ.

    ಮೊನ್ನೆಯಿಂದಲೂ ಈ ಧಾರಾವಾಹಿಯ ಪ್ರೊಮೋ ಸಾಕಷ್ಟು ವೈರಲ್ ಆಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಅನೇಕರು ದರ್ಶನ್ ಪ್ರಕರಣವನ್ನೇ ನೆನಪಿಸಿಕೊಂಡಿದ್ದರು. ಆದರೆ, ವಾಹಿನಿಯು ಮಾತ್ರ ಕಥೆಯ ವಿಚಾರವಾಗಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಜೊತೆಗೆ ಇದೊಂದು ಕಾಲ್ಪನಿಗೆ ಕಥೆ ಅನ್ನುವಂತೆ ಪ್ರಸಾರ ಮಾಡಲಾಗಿದೆ.

  • ಅಯೋಧ್ಯೆಯಲ್ಲಿ ‘ಕನ್ಯಾದಾನ’ ಧಾರಾವಾಹಿ ಶೂಟಿಂಗ್

    ಅಯೋಧ್ಯೆಯಲ್ಲಿ ‘ಕನ್ಯಾದಾನ’ ಧಾರಾವಾಹಿ ಶೂಟಿಂಗ್

    ಮನರಂಜನೆಯ ಮಹಾರಾಜ ಅಂತಾನೇ ಮನೆಮಾತಾಗಿರುವ ಉದಯ ಟಿವಿ ಸಮಾಜಮುಖಿ ಧಾರಾವಾಹಿಗಳಿಂದ ವೀಕ್ಷಕರನ್ನ ಮನರಂಜಿಸುತ್ತಲೇ ಬಂದಿದೆ. ಸೀರಿಯಲ್‌ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸೂಪರ್‌ ಹಿಟ್‌ ಧಾರಾವಾಹಿ (Serial) ಉದಯ ವಾಹಿನಿಯ ‘ಕನ್ಯಾದಾನ’ (Kanyadaan). ತನ್ನ ಐದು ಜನ ಹೆಣ್ಣುಮಕ್ಕಳ ಜೀವನ ನೆಮ್ಮದಿದಾಯಕವಾಗಿರಬೇಕು ಅಂತ ಪರಿತಪಿಸೋ ತಂದೆಯ ಭಾವನಾತ್ಮಕ ಹೋರಾಟದ ಕಥೆ ಈಗಾಗಲೇ ಕನ್ನಡಿಗರ ಮನ ಗೆದ್ದಿದೆ.

    ಎಂಟುನೂರು ಸಂಚಿಕೆಗಳನ್ನ ಪೂರೈಸುವ ಹಂತದಲ್ಲಿರುವ, ಕನ್ನಡಿಗರ ಮನೆಮಾತಾಗಿರುವ ಕನ್ಯಾದಾನ ಮಹಿಳೆಯರ ದೈನಂದಿನ ಜೀವನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ವಿಭಿನ್ನ ಪ್ರಯೋಗಗಳ ಮೂಲಕ ಸಂಚಿಕೆಗಳಲ್ಲಿ ಹೊಸತನ ತರುವ ಪ್ರಯತ್ನದಲ್ಲಿ ಕನ್ಯಾದಾನ ಧಾರಾವಾಹಿಯು ಕಿರುತೆರೆ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿದೆ. ಮುಖ್ಯ ಭೂಮಿಕೆಯ ಕಲಾವಿದರಷ್ಟೇ ಅಲ್ಲದೇ ಬೆಳ್ಳಿತೆರೆಯ ಜನಪ್ರಿಯ ಕಲಾವಿದರೂ ಸಹ ಧಾರಾವಾಹಿಯಲ್ಲಿ ಕಾಣಿಸಿಕೊಂಡು ಮನರಂಜನೆ ನೀಡಿದ ನಿದರ್ಶನಗಳು ಹಲವಾರು. ಈ ಹಿಂದೆ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಸುಧಾರಾಣಿಯವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಧಾರಾವಾಹಿಗೆ ಮೆರುಗು ನೀಡಿದ್ದರು. ಅದೇ ರೀತಿ ಇತ್ತೀಚಿನ ಸಂಚಿಕೆಗಳಲ್ಲಿ “ಗಾಳಿಪಟ” ಹಾರಿಸಿ ಮಿಂಚಿದ್ದ ನಟಿ ನೀತು ಸಹ ಬಹುಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀರಾಮನವಮಿಯ ಪ್ರಯುಕ್ತ ವಿಶೇಷ ಸಂಚಿಕೆಗಳು ಬಹು ಸೊಗಸಾಗಿ ಪ್ರಸಾರವಾಗಲಿದ್ದು ವೀಕ್ಷಕರು ಇದೇ ಏಪ್ರಿಲ್ 15ರಿಂದ ಈ ಅಪರೂಪದ ಸಂಚಿಕೆಗಳನ್ನ ವೀಕ್ಷಿಸಬಹುದು.

    ಕನ್ನಡ ಧಾರಾವಾಹಿ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಐತಿಹಾಸಿಕ ಅಯೋಧ್ಯೆಯಲ್ಲಿ (Ayodhya) ವಿಶೇಷ ಸಂಚಿಕೆಗಳನ್ನ ಚಿತ್ರೀಕರಣ ಮಾಡಿರುವ ಹೆಗ್ಗಳಿಕೆ ಉದಯ ಟಿವಿಯ ʼಕನ್ಯಾದಾನʼ ತಂಡಕ್ಕೆ ಸಂದಿದೆ. ಇತ್ತೀಚೆಗಷ್ಟೇ ವಿಶ್ವಪ್ರಸಿದ್ಧ ಅಯೋಧ್ಯೆಯ ರಾಮಮಂದಿರಕ್ಕೆ ತೆರಳಿದ ʼಕನ್ಯಾದಾನʼ ತಂಡವು ತನ್ನ ಪ್ರೇಕ್ಷಕರಿಗೆ ಮೈನವೀರೇಳಿಸುವಂತಹ ವಿಶೇಷ ಸಂಚಿಕೆಗಳನ್ನ ಹೊತ್ತು ತಂದಿದೆ. ಶ್ರೀರಾಮಚಂದ್ರನ ಸನ್ನಿಧಿಯಲ್ಲಿ ಧಾರಾವಾಹಿಯ ಪ್ರಮುಖ ಪಾತ್ರಗಳು ಪ್ರೇಮವೆಂಬ ಜೀವನ್ಮುಖಿಯತ್ತ ತಮ್ಮನ್ನು ತಾವು ಹೇಗೆ ಕಂಡುಕೊಳ್ಳುತ್ತವೆ ಎಂಬುದು ವಿಶೇಷ! ʼಕನ್ಯಾದಾನʼದ ಕುಟುಂಬಗಳಲ್ಲಿ ಅಶ್ವತ್ಥನ ಹೆಣ್ಣುಮಕ್ಕಳ ಸಂಸಾರಗಳು ಶ್ರೀರಾಮನವಮಿಯ ವಿಶೇಷ ಸಂದರ್ಭದಲ್ಲಿ ಎದುರಾಗುವ ಅಗ್ನಿಪರೀಕ್ಷೆಗಳನ್ನ ಶ್ರೀರಾಮನ ಕೃಪೆಯಿಂದ ಹೇಗೆ ಮೆಟ್ಟಿ ನಿಲ್ಲುತ್ತವೆ ಎಂಬುದು ವಿಶೇಷ ಸಂಚಿಕೆಗಳ ತಿರುಳಾಗಿದೆ. ಹಾಗೆಯೇ ಅಯೋಧ್ಯೆಯ ಬಾಲರಾಮನ ದರ್ಶನದಿಂದ ಕಾರ್ತಿಕ್‌ನ ದಾಂಪತ್ಯದಲ್ಲಿ ಉಂಟಾಗುವ ಸಕಾರಾತ್ಮಕ ಬದಲಾವಣೆಗಳು ಹಾಗೂ ಆತನ ತಂಗಿಯ ಬಾಳಲ್ಲಿರುವ ಗೊಂದಲಗಳಿಗೆ ಅಂತಿಮವಾಗಿ ತೆರೆ ಬೀಳುವ ಸನ್ನಿವೇಶಗಳು ಎದುರಾಗುತ್ತವೆ.

    ಕನ್ಯಾದಾನ ಧಾರಾವಾಹಿಯಲ್ಲಿನ ಪಾತ್ರಗಳು ಮದುವೆಯ ನಂತರ ಪ್ರತಿ ಹೆಣ್ಣುಮಗಳಿಗೆ ಬದುಕಿನ ಪರೀಕ್ಷೆಗಳನ್ನು ಎದುರಿಸಲು ಮನೋಸ್ಥೈರ್ಯ ತುಂಬುತ್ತವೆ. ಈ ಧಾರಾವಾಹಿಯಲ್ಲಿ ಬರುವ ಪ್ರತಿಯೊಂದು ಪಾತ್ರವೂ ನಿಜಜೀವನದಲ್ಲಿ ನೋಡುಗರಿಗೆ ತುಂಬಾ ಹತ್ತಿರವಾಗಿರುವುದರಿಂದ ಮನರಂಜನೆಯ ಜೊತೆ ಸಮಾಜಕ್ಕೆ ಒಳ್ಳೆಯ ಸಂದೇಶವನ್ನೂ ನೀಡುತ್ತದೆ.

     

    ಕನ್ಯಾದಾನ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ಸಂಜೆ 6 ಗಂಟೆಗೆ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತದೆ.

  • ʻಮೈನಾʼ ಧಾರಾವಾಹಿಯಲ್ಲಿ ಕಾಣಿಸಿಕೊಂಡ ಚಿತ್ರತಾರೆ ಭವ್ಯಾ

    ʻಮೈನಾʼ ಧಾರಾವಾಹಿಯಲ್ಲಿ ಕಾಣಿಸಿಕೊಂಡ ಚಿತ್ರತಾರೆ ಭವ್ಯಾ

    ದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ (Maina) ಧಾರಾವಾಹಿಯಲ್ಲಿ (Serial) 90ರ ದಶಕದ ಬಹುಬೇಡಿಕೆಯ ನಾಯಕಿ, ಚಿತ್ರತಾರೆ ಭವ್ಯಾ (Bhavya) ನಟಿಸುತ್ತಿದ್ದಾರೆ. ಪ್ರೇಮಪರ್ವ, ಪ್ರಳಯಾಂತಕ, ನೀ ಬರೆದ ಕಾದಂಬರಿ, ಕೃಷ್ಣ ನೀ ಬೇಗನೆ ಬಾರೋ, ಕರುಣಾಮಯಿ, ಹೃದಯಗೀತೆ, ಮತ್ತೆ ಹಾಡಿತು ಕೋಗಿಲೆ, ಹೃದಯ ಹಾಡಿತು‌, ಸಾಂಗ್ಲಿಯಾನ ಇತ್ಯಾದಿ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ವಿಷ್ಣುವರ್ಧನ್‌, ಶಂಕರನಾಗ್‌, ಅಂಬರೀಶ್‌, ರವಿಚಂದ್ರನ್ ಮತ್ತಿತರ ದಿಗ್ಗಜ ಕಲಾವಿದರ ಜೊತೆ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ಭವ್ಯಾ, ಟಿವಿ ಧಾರಾವಾಹಿಯಲ್ಲಿ ನಟಿಸುತ್ತಿರುವುದು ಇದೇ ಮೊದಲು.

    ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್‌ ಮುಖ್ಯಸ್ಥೆ ಅರುಂಧತಿಯ ಪಾತ್ರ. ಕಟ್ಟುನಿಟ್ಟಾದರೂ ತಾಯಿ ಹೃದಯಿ. ಊರು ಬಿಟ್ಟು ಪರವೂರಿಗೆ ಬಂದಿರುವ ಹೆಣ್ಣುಮಕ್ಕಳೇ ಹೆಚ್ಚಿರುವ ಜಾಗದಲ್ಲಿ ಎಲ್ಲರನ್ನೂ ನಿಯಂತ್ರಿಸುತ್ತ ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸುತ್ತ ಎಲ್ಲರ ಭಾವನೆಗಳಿಗೂ ಬೆಲೆ ಕೊಡುವ ಅಪರೂಪದ ಪಾತ್ರ. ಮೈನಾ ಜೀವನದಲ್ಲಿ ಹಠಾತ್ತನೆ ಬರುವ ಅನಿರೀಕ್ಷಿತ ತಿರುವು ಕಂಗೆಡಿಸಿದಾಗ ಅವಳಿಗೆ ಆಸರೆಯಾಗಿ ನಿಲ್ಲುತ್ತಾಳೆ ಅರುಂಧತಿ. ಹಾಗೆಯೇ ಇವರ ಮಹಿಳಾ ಹಾಸ್ಟೆಲ್‌ನಲ್ಲಿರುವ ಇತರ ನಾಲ್ಕು ಹೆಣ್ಣುಮಕ್ಕಳೂ ʻಮೈನಾʼ ಧಾರಾವಾಹಿಯ ಮಹತ್ವದ ಪಾತ್ರಗಳಾಗಿ ಬರುತ್ತಾರೆ.

     

    ಮಹಿಳಾ ಹಾಸ್ಟೆಲ್‌ ಈ ಧಾರಾವಾಹಿಯಲ್ಲಿ ಒಂದು ಬಹುಮುಖ್ಯ ಅಂಗವೇ ಆಗಿದೆ.  ʻಮೈನಾʼ ಧಾರಾವಾಹಿ ಪ್ರತಿದಿನ(ಸೋಮವಾರದಿಂದ ಭಾನುವಾರ) ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.

  • ಕಿರುತೆರೆ ಲೋಕದಲ್ಲಿ ಮತ್ತೊಂದು ಹೊಸ ಧಾರಾವಾಹಿ: ಕಿರಿಮಗಳ ಹಿರಿ ಜವಾಬ್ದಾರಿ ಕಥೆ ಮೈನಾ

    ಕಿರುತೆರೆ ಲೋಕದಲ್ಲಿ ಮತ್ತೊಂದು ಹೊಸ ಧಾರಾವಾಹಿ: ಕಿರಿಮಗಳ ಹಿರಿ ಜವಾಬ್ದಾರಿ ಕಥೆ ಮೈನಾ

    ದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಜನನಿ, ಗೌರಿಪುರದ ಗಯ್ಯಾಳಿಗಳು ವೈವಿಧ್ಯಮಯ ನೈಜ ಕತೆಗಳಿಂದ ಜನಮನ ಗೆದ್ದಿವೆ. ಹೊಸ ಧಾರಾವಾಹಿ (Serial) ʼಮೈನಾʼ (Maina) ಈ ಸಾಲಿಗೆ ವಿಶಿಷ್ಟ ಸೇರ್ಪಡೆ. ಫೆಬ್ರುವರಿ 19 ರಿಂದ ಪ್ರತಿದಿನ ರಾತ್ರಿ 9 ಗಂಟೆಗೆ ʻಮೈನಾʼ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

    ಮೈಲಾರಕೋಟೆ ಮೈನಾ ಮನೆಗೆ ಕಿರಿಮಗಳು. ಊರಲ್ಲಿ ಅಲೆಮಾರಿ, ಪರರಿಗೆ ಉಪಕಾರಿ. ಚಿಕ್ಕ ಪೆಟ್ಟಿಗೆ ಅಂಗಡಿ ನಡೆಸುತ್ತಿರುವ ನೀತಿವಂತ ಅಪ್ಪ ಮುತ್ತಣ್ಣ, ಅವರಿವರ ಹೊಲದಲ್ಲಿ ಕೂಲಿ ಮಾಡಿ ಸಂಸಾರದ ನೊಗಕ್ಕೆ ಹೆಗಲು ಕೊಟ್ಟಿರುವ ಅಮ್ಮ, ಸೀತೆಯಂಥ ಅಕ್ಕ ರಾಧೆ, ಕಾಲೇಜಿಗೆ ಹೋಗುತ್ತಿರುವ ಅಣ್ಣ.. ಮೈನಾಳ ಪುಟ್ಟ ಗೂಡಲ್ಲಿ ದುಡ್ಡಿಗೆ ಕೊರತೆ; ಪ್ರೀತಿ ವಾತ್ಸಲ್ಯಕ್ಕಲ್ಲ.

    ಅಕ್ಕ ರಾಧೆಗೆ ಮದುವೆ ವಯಸ್ಸು ಮೀರುತ್ತಿದೆ; ಸಂಬಂಧ ಕೂಡಿ ಬರುತ್ತಿಲ್ಲ. ಒಂದೊಂದು ಸಲವೂ ಒಂದೊಂದು ಕಾರಣಕ್ಕೆ ಮದುವೆ ಮುರಿದುಹೋಗುತ್ತಿದೆ. ಕೆಲವೊಂದು ಸಂಬಂಧ ಮುರಿಯಲು ಮೈನಾ ನೆಪವಾಗುತ್ತಾಳೆ. ಕಟ್ಟಕಡೆಯದಾಗಿ, ಜವಾಬ್ದಾರಿ ಹೊರಬೇಕಾದ ಅಣ್ಣನೇ ಕೈ ಕೊಟ್ಟು ಹೋದಾಗ ಕಿರಿಮಗಳಾದ ಮೈನಾ ಅಕ್ಕನ ಮದುವೆಯ ಹಿರಿಯ ಜವಾಬ್ದಾರಿ ಹೊತ್ತು ಪಟ್ಟಣಕ್ಕೆ ಹೊರಡುತ್ತಾಳೆ. ಅಲ್ಲಿಂದ ಅವಳ ಪ್ರಯಾಣ ಅನೂಹ್ಯ ತಿರುವುಗಳನ್ನು ಪಡೆದುಕೊಳ್ಳುತ್ತದೆ.

    ಮೈನಾ ಪಾತ್ರದಲ್ಲಿ ಜನಪ್ರಿಯ ಕಲಾವಿದೆ ವಿಜಯಲಕ್ಷ್ಮಿ ನಟಿಸುತ್ತಿದ್ದಾರೆ.  ನಾಗಾಭರಣ (Nagabharana), ಅಪೂರ್ವ, ಅಂಜಲಿ, ಮಾನಸಿ ಜೋಶಿ, ಸಚಿನ್, ಸಿದ್ದಾರ್ಥ್, ಪ್ರಭಂಜನ, ಸಾಗರ್, ಹರ್ಷಾರ್ಜುನ್, ಯಶಸ್ವಿನಿ, ಆಶಾ, ಅನುಷಾ, ಕು.ತಿಶ್ಯ, ಮಾ.ಅರುಣ್, ಮಾ.ರಣವೀರ್ ಮುಂತಾದವರ ತಾರಾಗಣವಿದೆ. ಚಿತ್ರತಾರೆ ಭವ್ಯ ಅಪರೂಪದ ವಿಶಿಷ್ಟ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಈ ಧಾರಾವಾಹಿಯ ನಿರ್ದೇಶಕರು ಸಂತೋಷ್ ಗೌಡ ಹಾಸನ,  ಛಾಯಾಗ್ರಹಣ ಜಗದೀಶ್ ವಾಲಿ ಹಾಗೂ ದಯಾಕರ್, ಸಂಗೀತ ಮಣಿಕಾಂತ ಕದ್ರಿ, ಸಾಹಿತ್ಯ ಕೆ. ಕಲ್ಯಾಣ್, ಸಂಕಲನ ಪ್ರಕಾಶ ಕಾರಿಂಜ ಅವರದ್ದು.

     

    ಆನಂದ್ ಆಡಿಯೋ ಕಂಪನಿಯ ಸಹಸಂಸ್ಥೆ ʻಕೋಮಲ್ ಎಂಟರ್ಪ್ರೈಸಸ್ʼ ಬ್ಯಾನರ್ ಅಡಿ ಈ ಧಾರಾವಾಹಿ ನಿರ್ಮಾಣವಾಗುತ್ತಿದೆ. ಮಹಿಳೆಯರ ಆತ್ಮಬಲದ ಪ್ರತೀಕವಾಗಿ ʻಮೈನಾʼ ಮೂಡಿಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸುತ್ತಾರೆ ಉದಯ ಟಿವಿ ಕಾರ್ಯಕ್ರಮ ಮುಖ್ಯಸ್ಥರು. ʻಮೈನಾʼ ಧಾರಾವಾಹಿ ಫೆಬ್ರುವರಿ 19 ರಿಂದ ಪ್ರತಿದಿನ (ಸೋಮವಾರದಿಂದ ಭಾನುವಾರ) ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.