Tag: serial actor

  • ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್

    ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್

    ತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್‌ನ್ನು (Ashish Kapoor) ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ಈ ಕುರಿತು ಸಂತ್ರಸ್ತೆ ನಟ ಆಶಿಶ್ ಕಪೂರ್ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಶಿಶ್ ಕಪೂರ್ ಹಾಗೂ ನಾನು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದು, ಬಳಿಕ ಆಗಸ್ಟ್ ತಿಂಗಳಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯೊಂದಕ್ಕೆ ಆಹ್ವಾನಿಸಿದ್ದರು. ಹೀಗಾಗಿ ನಾನು ಪಾರ್ಟಿಗೆ ಹೋಗಿದ್ದೆ. ಈ ವೇಳೆ ವಾಶ್ ರೂಂನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಜೊತೆಗೆ ವಿಡಿಯೋ ಚಿತ್ರೀಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ದರ್ಶನ್ ಜೈಲಲ್ಲಿರೋದಕ್ಕೆ ಬರ್ತ್‌ಡೇ ಸೆಲೆಬ್ರೇಷನ್ ಬೇಡವೆಂದ ಧನ್ವೀರ್

    ಪೊಲೀಸರ ಮಾಹಿತಿ ಪ್ರಕಾರ, ಸಂತ್ರಸ್ತೆ ದೂರಿನ ಆಧಾರದ ಮೇಲೆ ಆ.11ರಂದು ಆಶಿಶ್, ಆತನ ಸ್ನೇಹಿತ, ಸ್ನೇಹಿತನ ಪತ್ನಿ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ಆಶಿಶ್ ಮತ್ತು ಆತನ ಸ್ನೇಹಿತ ಅತ್ಯಾಚಾರ ಎಸಗಿದ್ದು, ಓರ್ವ ಮಹಿಳೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆ.18ರಂದು ಸಂತ್ರಸ್ತೆ ಮತ್ತೊಂದು ಹೇಳಿಕೆ ನೀಡಿದ್ದರು. ಅದಾದ ಬಳಿಕ ಆ.21ರಂದು ಆಶಿಶ್ ಸ್ನೇಹಿತ ಹಾಗೂ ಆತನ ಪತ್ನಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

    ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಇವುಗಳ ಆಧಾರದ ಮೇಲೆ ಸಂತ್ರಸ್ತೆ ಹಾಗೂ ಕಪೂರ್ ಪಾರ್ಟಿ ನಡೆದ ದಿನ ವಾಶ್‌ರೂಮ್‌ಗೆ ಪ್ರವೇಶಿಸಿದ್ದಾರೆ. ಇವರಿಬ್ಬರು ಕೆಲಕಾಲ ಹೊರಗೆ ಬರದಿದ್ದಾಗ ಅವರ ಸ್ನೇಹಿತರು ಬಾಗಿಲು ಬಡಿಯಲು ಪ್ರಾರಂಭಿಸಿದ್ದಾಗಿ ತಿಳಿದುಬಂದಿದೆ.

    ಸದ್ಯ ನಟ ಆಶಿಶ್ ಕಪೂರ್‌ನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರೆದಿದೆ.ಇದನ್ನೂ ಓದಿ: ಮದ್ವೆಯಲ್ಲಿ ಅನುಶ್ರೀ ಉಟ್ಟ ಸೀರೆಯ ಬೆಲೆ 2.5 ಲಕ್ಷ ಅಲ್ಲ ಕೇವಲ 2,700 ರೂ.

  • ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಕೇಸ್; ಸುಲಿಗೆ, ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು

    ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಕೇಸ್; ಸುಲಿಗೆ, ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು

    – ಪ್ರಕರಣ ದಾಖಲಾಗ್ತಿದ್ದಂತೆ ನಟ ನಾಪತ್ತೆ

    ಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಸುಲಿಗೆ, ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

    ಕಿರುತೆರೆ ನಟ ಚರಿತ್ ಬಾಲಪ್ಪ ಅಲಿಯಾಸ್ ಧ್ರುವಂತ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಬ್ಲಾಕ್‌ಮೇಲ್ ಮಾಡಿ ಹಣ ಸುಲಿಗೆ, ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ನೀಡಲಾಗಿತ್ತು. ದೂರು ದಾಖಲಾಗ್ತಿದ್ದಂತೆ ಚರಿತ್ ಬಾಲಪ್ಪ ನಾಪತ್ತೆಯಾಗಿದ್ದಾರೆ. ಈ ಹಿಂದೆಯೂ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಟ ಜೈಲು ಸೇರಿದ್ದರು.

    ಆರೋಪ ಏನು?
    ಸೀರಿಯಲ್ ಶೂಟಿಂಗ್ ನೋಡಲು ಹೋದಾಗ ಸಂತ್ರಸ್ತೆಗೆ ಚರಿತ್ ಪರಿಚಯವಾಗಿತ್ತು. ಬಳಿಕ ಚರಿತ್ ಒತ್ತಾಯದ ಮೇರೆಗೆ ಇಬ್ಬರ ನಡುವೆ ಪ್ರೀತಿ ಶುರುವಾಯಿತು. ಬಳಿಕ ಸಂತ್ರಸ್ತೆ ಬಿಟ್ಟು ಚರಿತ್ ಬೇರೆಯವರ ಮದುವೆಯಾಗಿದ್ದ. ಮದುವೆಯಾಗಿದ್ದರೂ ದೈಹಿಕ ಸಂಪರ್ಕ ಇಟ್ಟುಕೊಳ್ಳಲು ಸಂತ್ರಸ್ತೆಗೆ ಒತ್ತಾಯ ಮಾಡಿದ್ದ. ನಿರಾಕರಿಸಿದಾಗ ಸಂತ್ರಸ್ತೆ ಮನೆ, ಕೆಲಸ ಮಾಡುವ ಸ್ಥಳದಲ್ಲಿ ಗಲಾಟೆ ಮಾಡಿದ್ದ. ಪೊಲೀಸರಿಗೆ ದೂರು ನೀಡಿದ ಬಳಿಕ 2 ವರ್ಷ ಸುಮ್ಮನಿದ್ದ.

    2022ರಲ್ಲಿ ಪತ್ನಿಯಿಂದ ನಟ ವಿಚ್ಛೇದನ ಪಡೆದಿದ್ದ. ಬಳಿಕ ಸಂತ್ರಸ್ತೆಗೆ ಪ್ರೀತಿಸುವಂತೆ, ದೈಹಿಕ ಸಂಬಂಧ ಇಟ್ಟುಕೊಳ್ಳುವಂತೆ ಬಲವಂತ ಮಾಡಿದ್ದ. ಒಪ್ಪದ ಕಾರಣ ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ್ದ. ಖಾಸಗಿ ಫೋಟೋ ಶೇರ್ ಮಾಡುವುದಾಗಿ ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದ. ಹಣ, 4-5 ಕೆಜಿ ಬೆಳ್ಳಿ, 23 ಕಂಚಿ ರೇಷ್ಮೆ ಸೀರೆ ಪಡೆದಿದ್ದ. ಪದೇ ಪದೆ ಬ್ಲ್ಯಾಕ್‌ಮೇಲ್‌ನಿಂದ ನೊಂದು ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ.

  • ಲೈಂಗಿಕ ದೌರ್ಜನ್ಯ ಆರೋಪ – `ಮುದ್ದುಲಕ್ಷ್ಮಿ’ ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ

    ಲೈಂಗಿಕ ದೌರ್ಜನ್ಯ ಆರೋಪ – `ಮುದ್ದುಲಕ್ಷ್ಮಿ’ ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ

    ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪ (Charith Balappa) ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಚರಿತ್ ಬಾಳಪ್ಪ ಖ್ಯಾತಿ ಪಡೆದಿದ್ದರು.ಇದನ್ನೂ ಓದಿ: ಸಿಲಿಂಡರ್ ಸ್ಫೋಟ ಪ್ರಕರಣ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು; ಮೃತರ ಸಂಖ್ಯೆ 3ಕ್ಕೆ ಏರಿಕೆ

    ನಟ ಚರಿತ್‌ನನ್ನು ಆರ್‌ಆರ್ ನಗರ (RR Nagar) ಪೊಲೀಸರು ಬಂಧಿಸಿದ್ದು, ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ಆರೋಪಿಸಿದ್ದಾರೆ.

    ನಿನ್ನನ್ನ ಪ್ರೀತಿಸುತ್ತೇನೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

    ಇದಕ್ಕೂ ಮುನ್ನ ನಟ ಚರಿತ್ ಹಾಗೂ ಪತ್ನಿ ಮಂಜುಶ್ರೀ ಡಿವೋರ್ಸ್ ಪಡೆದಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಬೆದರಿಕೆ ಹಾಕಿದ್ದಾರೆಂದು ಚರಿತ್ ವಿರುದ್ಧ ಪತ್ನಿ ಮಂಜುಶ್ರೀ ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.ಇದನ್ನೂ ಓದಿ: ಎಲ್‌ಐಸಿ ಹಣಕ್ಕಾಗಿ ತಂದೆಯನ್ನೆ ಕೊಂದ ಮಗ – ಸಾವಿನ ಸುದ್ದಿ ತಿಳಿದು ಇನ್ನೊಬ್ಬ ಮಗ ಆತ್ಮಹತ್ಯೆ!

  • ಮನೆ ಕಟ್ಟೋಕೆ ಮೆಟೀರಿಯಲ್ ಕೊಡಿಸ್ತೀನೆಂದು ಕಿರುತೆರೆ ನಟನಿಂದ ಮೋಸ

    ಮನೆ ಕಟ್ಟೋಕೆ ಮೆಟೀರಿಯಲ್ ಕೊಡಿಸ್ತೀನೆಂದು ಕಿರುತೆರೆ ನಟನಿಂದ ಮೋಸ

    ಬೆಂಗಳೂರು: ಸಿನಿಮಾ ಮತ್ತು ಕಿರುತೆರೆಯಲ್ಲಿ ನಟಿಸಲು ಚಾನ್ಸ್ ಕೊಡಿಸುತ್ತೇನೆ ಎಂದು ಕೆಲವರು ಮೋಸ ಮಾಡುತ್ತಾರೆ. ಆದರೆ ಇಲ್ಲೊಬ್ಬ ನಟ ಮನೆ ಕಟ್ಟುವುದಕ್ಕೆ ಮೆಟೀರಿಯಲ್ ಕೊಡಿಸುತ್ತೇನೆ ಎಂದು ಮೋಸ ಮಾಡಿದ್ದಾನೆ.

    ಆಕರ್ಶ್ ಆದಿತ್ಯ ಬ್ಯುಸಿನೆಸ್ ಹೆಸರಲ್ಲಿ ವಂಚನೆ ಮಾಡಿರುವ ಕಿರುತರೆ ನಟ. ಈತ ‘ಮಮತೆಯ ಕರೆಯೋಲೆ’ ಸೇರಿ ಹಲವು ಧಾರವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾನೆ. ಆದರೆ ಇದೀಗ ಮನೆ ಕಟ್ಟುವುದಕ್ಕೆ ಮೆಟೀರಿಯಲ್ ಕೊಡಿಸುತ್ತೇನೆ ಎಂದು ಹೇಳಿ ಮೋಸ ಮಾಡಿದ್ದಾನೆ.

    ಆಕರ್ಶ್ ಆದಿತ್ಯ, ಮಹಿಳೆಯೊಬ್ಬಳ ಜೊತೆ ಪಾರ್ಟ್ನರ್‌ ಆಗಿ ನಂದಿನಿ ಲೇಔಟ್‍ನಲ್ಲಿ ವೋವ್ ಎಂಟರ್ಪ್ರೈಸ್ ನಡೆಸುತ್ತಿದ್ದರು. ವೋವ್ ಎಂಟರ್ಪ್ರೈಸ್ ಮೂಲಕ ಕಾಮಗಾರಿ ಮೆಟೀರಿಯಲ್ ಡೀಲ್ ಮಾಡಿಸುವ ಕೆಲಸ ಮಾಡಿಸುತ್ತಿರುತ್ತಾರೆ. ಬಿಲ್ಡರ್ಸ್ ಫಸ್ಟ್ ಕಂಪನಿಯ ಮಾಲೀಕ ವೈಭವ್ ಕುಮಾರ್ ಅಗರ್ವಾಲ್ ಕಡೆಯಿಂದ ಲಕ್ಷಾಂತರ ರೂಪಾಯಿಯ ಕಾಮಗಾರಿ ಮೇಟಿರಿಯಲ್ ಗಳನ್ನು ಕೊಡಿಸಿದ್ದಾನೆ. ಆದರೆ ಹಣ ಕೊಡದೆ ಮೋಸ ಮಾಡಿದ್ದಾನೆ.

    ಸುಮಾರು 5 ತಿಂಗಳ ಹಿಂದೆ ಮನೆ ಕಟ್ಟುವವರಿಗೆ ಮೆಟೀರಿಯಲ್ ಖರೀದಿ ಮಾಡಿಕೊಡಿಸಿದ್ದಾರೆ. ಆದರೆ ಹಣವನ್ನು ನಟನ ಬಳಿ ಕೇಳಿದಾಗ ಆತ ಉಡಾಫೆಯ ಉತ್ತರ ನೀಡುತ್ತಿದ್ದಾನೆ. ಇಬ್ಬರ ಫೋನ್ ಕೋಡ ಸ್ವಿಚ್ಛ್ ಆಫ್ ಆಗಿದೆ. ಅತ್ತ ಮನೆ ಮಾಲೀಕರ ಬಳಿ ಹಣ ಪಡೆದು ಮನೆ ಮೆಟೀರಿಯಲ್ ಡಿಸೈನ್ ಮಾಡಿಸದೆ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಅಗರ್ವಾಲ್ ಹೇಳಿದ್ದಾರೆ.

    ಸದ್ಯಕ್ಕೆ ಕಿರುತರೆ ನಟನ ಮತ್ತು ಜೊತೆಗಾರ್ತಿ ಮಹಿಳೆಯ ವಿರುದ್ಧ ಮಾಲೀಕ ಅಗರ್ವಾಲ್ ಪೀಣ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡು ಕಿರುತರೆ ನಟನನ್ನು ಸಂಪರ್ಕ ಮಾಡಿದರೆ ಆತ ಕಥೆ ಹೇಳಿಕೊಂಡು ಕಾಲ ದೂಡುತ್ತಿದ್ದಾನೆಂದು ಅಗರ್ವಾಲ್ ಆರೋಪಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮನೆ ಬಾಡಿಗೆ ಕೇಳಿದ್ದಕ್ಕೆ ಮಾಲೀಕನಿಗೇ ಸುನಾಮಿ ಕಿಟ್ಟಿ ಅವಾಜ್

    ಮನೆ ಬಾಡಿಗೆ ಕೇಳಿದ್ದಕ್ಕೆ ಮಾಲೀಕನಿಗೇ ಸುನಾಮಿ ಕಿಟ್ಟಿ ಅವಾಜ್

    ಬೆಂಗಳೂರು: ಕಿಡ್ನಾಪ್ ಆಯ್ತು, ಒರಾಯಾನ್ ಮಾಲ್ ಗಲಾಟೆಯಾಯ್ತು, ಇದೀಗ ಮತ್ತೊಂದು ವಿಚಾರಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಸುನಾಮಿ ಕಿಟ್ಟಿ ಕಿರಿಕ್ ಮಾಡಿದ್ದಾನೆ.

    ಹೌದು. ಸುನಾಮಿ ಕಿಟ್ಟಿ ನಗರದ ಶಂಕರ ಮಠದಲ್ಲಿರೋ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದನು. ಆದ್ರೆ ಇತ್ತೀಚೆಗೆ ಆತ ಬಾಡಿಗೆ ಹಣವನ್ನು ನೀಡುತ್ತಿರಲಿಲ್ಲ. ಹೀಗಾಗಿ ಮನೆ ಮಾಲೀಕ ಶಿವಣ್ಣ ಬಾಡಿಗೆ ನೀಡುವಂತೆ ಹೇಳಿದ್ದಾರೆ. ಇದರಿಂದ ಸಿಟ್ಟುಗೊಂಡ ಕಿಟ್ಟಿ, ಶಿವಣ್ಣ ಅವರಿಗೆ ಅವಾಜ್ ಹಾಕಿದ್ದಾನೆ.

    ಬಾಡಿಗೆ ಎಷ್ಟು?:
    ಕಿಟ್ಟಿ ತಿಂಗಳಿಗೆ 22 ಸಾವಿರದಂತೆ ಶಿವಣ್ಣ ಅವರ ಮನೆಯಲ್ಲಿ ವಾಸವಾಗಿದ್ದನು. ಆದ್ರೆ 4 ತಿಂಗಳ ಬಾಡಿಗೆ 88 ಸಾವಿರ ಕೊಡದೆ ಮನೆ ಮಾಲೀಕನಿಗೆ ಕಿಟ್ಟಿ ಸತಾಯಿಸುತ್ತಿದ್ದನು. ಹೀಗಾಗಿ ಈ ಹಣವನ್ನು ಮನೆ ಮಾಲೀಕ ಕೇಳಿದಾಗ ಕಿಟ್ಟಿ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.

    ಈ ಸಂಬಂಧ ಕಿಟ್ಟಿ ವಿರುದ್ಧ ಮಾಲೀಕ ಶಿವಣ್ಣ ಮಹಾಲಕ್ಷಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸದ್ಯ ಪೊಲೀಸರು ಕಿಟ್ಟಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

    ಕಿಟ್ಟಿ ವಿರುದ್ಧ ಮಹಾಲಕ್ಷೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews