Tag: Series

  • ಒಟಿಟಿಯಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್ ಸಿರೀಸ್

    ಒಟಿಟಿಯಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್ ಸಿರೀಸ್

    2024 ರ ಭಾರತೀಯ ಮಹಾಕಾವ್ಯ ವೈಜ್ಞಾನಿಕ ಕಾಲ್ಪನಿಕ ಸಾಹಸ ಚಲನಚಿತ್ರ ಹಾಗೂ ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್‍ ಅಭಿನಯದ ‘ಕಲ್ಕಿ 2898 AD’ (Kalki) ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಈವರೆಗೂ ಯಾರು ಮಾಡಿರದ ವಿನೂತನ ಪ್ರಯೋಗಕ್ಕೆ ಈ ಚಿತ್ರತಂಡ ಮುಂದಾಗಿದೆ‌.  ಪ್ರಭಾಸ್ (Prabhas) ಈ ಚಿತ್ರದಲ್ಲಿ ಭೈರವನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭೈರವನ ನಂಬಿಕಸ್ಥ ಗೆಳೆಯನಾಗಿ ಬುಜ್ಜಿ(ವಿಶೇಷ ಕಾರ್)ಪಾತ್ರವಿದೆ‌. ಈ ಎರಡು ಪಾತ್ರಗಳನಿಟ್ಟುಕೊಂಡು ಚಿತ್ರತಂಡ “B&B” ಎಂಬ ಹದಿನೈದು ಹದಿನೈದು ನಿಮಿಷಗಳ ಎರಡು ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಿದೆ.

    ದೇಶದ ಪ್ರಮುಖ ನಗರಗಳ ಚಿತ್ರಮಂದಿರಗಳಲ್ಲಿ ಈ ಅನಿಮೇಷನ್‌ ಸಿರೀಸ್ ಏಕಕಾಲಕ್ಕೆ ಬಿಡುಗಡೆಯಾಗಿದೆ‌. ಈ ಎರಡು ಭಾಗಗಳು ಮೇ 31 ರಿಂದ ಅಮೇಜಾನ್ ಪ್ರೈಮ್ ನಲ್ಲಿ ನೋಡಲು ಲಭ್ಯವಿದೆ. ಈ ಅನಿಮೇಷನ್‌ ಸೀರಿಸ್ ನಲ್ಲಿರುವ ಭೈರವ ಹಾಗೂ ಬುಜ್ಜಿಯ ಜುಗಲ್ ಬಂದಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇದು ಚಿತ್ರದ ಪ್ರಚಾರಕಷ್ಟೇ ಮಾಡಿರುವ ಅನಿಮೇಷನ್‌ ಸಿರೀಸ್. ಚಿತ್ರದ ಕಥೆಯೆ ಬೇರೆ. ಇದೇ ಬೇರೆ  ಎಂದು ನಿರ್ದೇಶಕ ನಾಗ್ ಅಶ್ವಿನ್ ತಿಳಿಸಿದ್ದಾರೆ.

    ಕಳೆದ ಅರ್ಧ ಶತಕದಿಂದ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ವೈಜಯಂತಿ ಮೂವೀಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದ್ದು, ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಮಾಡುತ್ತಿದೆ. ಬೆಂಗಳೂರಿನಲ್ಲೂ “ಕಲ್ಕಿ 2898 AD” ಚಿತ್ರದ ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆ.ವಿ.ಎನ್ ಪ್ರೊಡಕ್ಷನ್ ನ ಸುಪ್ರೀತ್ ಅವರು ಈ ಅನಿಮೇಷನ್‌ ಸಿರೀಸ್ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ‌‌. ಎರಡು ಭಾಗಗಳಲ್ಲಿ ಇಂಗ್ಲೀಷ್ ಹಾಗೂ ತೆಲುಗು ಭಾಷೆಗಳಲ್ಲಿ ಮೂಡಿಬಂದಿರುವ ಈ ಅನಿಮೇಷನ್‌ ಸಿರೀಸ್ ಅನ್ನು ಅಮೇಜಾನ್ ಪ್ರೈಮ್ ನಲ್ಲಿ ವೀಕ್ಷಿಸಬಹುದು ಎಂದರು.

    ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ.  ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

  • ‘ಸಿಟಾಡೆಲ್’ ಕುರಿತು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಸಮಂತಾ

    ‘ಸಿಟಾಡೆಲ್’ ಕುರಿತು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಸಮಂತಾ

    ಮಂತಾ (Samantha) ಮತ್ತೆ ಮೈ ಕೊಡವಿ ಎದ್ದು ನಿಂತಿದ್ದಾರೆ. ಮೈಯೋಸಿಟಿಸ್ ಖಾಯಿಲೆಯನ್ನು ಪಕ್ಕಕ್ಕೆ ಇಟ್ಟು ಹೊಸ ಸಾಹಸದ ಮೊದಲ ಝಲಕ್ ತೋರಿಸಿದ್ದಾರೆ. ಇನ್ನೇನು ಸ್ಯಾಮ್ ಬಣ್ಣದ ಲೋಕದ ಬದುಕು ಮುಗಿಯಿತು. ಹೀಗಂತ ಅಂದುಕೊಂಡವರಿಗೆ ಭರ್ಜರಿ ಕಾಣಿಕೆ ಕೊಡಲು ಸಜ್ಜಾಗಿದ್ದಾರೆ. ಹಾಗಿದ್ದರೆ ಸಮಂತಾ ಇನ್ಯಾವ ರೀತಿ ನಮ್ಮ ಮನೆ ಮನಕ್ಕೆ ಲಗ್ಗೆ ಹಾಕಲಿದ್ದಾರೆ ? ಅವರು ಹಂಚಿಕೊಂಡ ದಿವ್ಯ ಕನಸಾದರೂ ಏನು? ಅದರ ಮಾಹಿತಿ ಇಲ್ಲಿದೆ.

    ಸಮಂತಾಗೆ ಎರಡು ವರ್ಷ ಅಷ್ಟೇನೂ ಸುಖದಾಯಕವಾಗಿರಲಿಲ್ಲ. ಮೊದಲ ಕಾರಣ ಎಲ್ಲರಿಗೂ ಗೊತ್ತು. ಅದು ವರ್ಷದಿಂದ ಕಾಡುತ್ತಿರುವ ಮೈಯೋಸೀಟಿಸ್. ಅದರಿಂದ ಹೊರ ಬರಲು ಎಲ್ಲೆಲ್ಲಿಗೋ ಹೋಗಿ ಚಿಕಿತ್ಸೆ ಪಡೆದು ಬಂದರು. ಅದಕ್ಕಾಗಿ ಸಿನಿಮಾ ರಂಗದಿಂದ ತಾತ್ಕಾಲಿಕವಾಗಿ ದೂರವಾದರು. ಆದರೆ ಭಕ್ತಗಣದ ಜೊತೆ ಸಂಪರ್ಕದಲ್ಲಿದ್ದರು.

    ಈಗ ಹೊಸದೊಂದು ಯುದ್ಧ ಮುಗಿಸಿ ಬಂದಿದ್ದಾರೆ. ಸದ್ಯದಲ್ಲೇ ಇವರ ವೆಬ್‌ಸೀರೀಸ್ ಸಿಟಾಡೆಲ್ ಓಟಿಟಿಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಒಂದು ಗೆಲುವಿಗೆ ಸ್ಯಾಮ್ ಕಾದಿದ್ದಾರೆ. ಕಾರಣ ಈ ಹಿಂದಿನ ಎರಡು ಮೂರು ಸಿನಿಮಾ ಕೈ ಹಿಡಿಯಲಿಲ್ಲ. ಇದಾದಾದರೂ ಗೆದ್ದು ಬೀಗುತ್ತದಾ? ಎಂದು ಕಾತುರದಿಂದ ಕಾಯುತ್ತಿದ್ದಾರೆ.

    ಈಗಾಗಲೇ ಸಿಟಾಡೆಲ್ (Citadel) ಸೀರೀಸ್ ಮುಗಿದಿದೆ. ಡಬ್ಬಿಂಗ್ ನಡೆಯುತ್ತಿದೆ. ಬಾಲಿವುಡ್ ಹೀರೋ ವರುಣ್ ಧವನ್ (Varun Dhawan) ಜೊತೆ ಕೈ ಜೋಡಿಸಿದ್ದಾರೆ. ಫ್ಯಾಮಿಲಿಮ್ಯಾನ್ ಸರಣಿ ನಿರ್ದೇಶಿಸಿದ್ದ ಡಿಕೆ ಇದರ ಸಾರಥಿ. ಹಾಲಿವುಡ್ ಸರಣಿಯ ಹಿಂದಿ ರಿಮೇಕ್ ಇದು. `ಈಗಾಗಲೇ ಸರಣಿಯ ಕೆಲವು ದೃಶ್ಯ ನೋಡಿದ್ದೇನೆ. ಅದ್ಭುತವಾಗಿದೆ. 22 ತಿಂಗಳ ಕಷ್ಟ ಕಾಣುತ್ತಿದೆ. ಜನರು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸವೂ ಇದೆ…’ ಹೀಗಂತ ಬರೆದುಕೊಂಡಿದ್ದಾರೆ ಸಮಂತಾ.

    ಇನ್ನೇನು ಓಟಿಟಿಯನ್ನು ಇದು ಮೆರವಣಿಗೆ ಹೊರಡಲಿದೆ. ಇದಾದರೂ ಸ್ಯಾಮ್‌ಗೆ ಗೆಲುವಿನ ರುಚಿ ತೋರಿಸುತ್ತದಾ ಅಥವಾ ಆಕಾಶಕ್ಕೆ ಮುಖ ಮಾಡಿಸುತ್ತದಾ ? ಕಾದು ನೋಡಬೇಕಷ್ಟೇ.

  • ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

    ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

    ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಸಮಯದಲ್ಲಿ ವಾತಾವರಣದಲ್ಲಿನ ದಟ್ಟ ಮಂಜು, ಹೊಗೆ ಹಾಗೂ ಅಪಾಯಕಾರಿ ದೂಳಿನ ಕಣಗಳಿಂದ ಲಂಕಾದ ಆಟಗಾರರು ಹೈರಾಣಗಿದ್ದಾರೆ.

    ಭಾನುವಾರ ಪಂದ್ಯದ ವೇಳೆ ಕೆಲ ಆಟಗಾರರು ಮುಖಕ್ಕೆ ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದಿದ್ದರು. ಈ ವೇಳೆ ಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಅಂಪೈರ್ ಗಳಿಗೆ ವಾತಾವರಣ ಕುರಿತು ದೂರು ನೀಡಿದರು. ಇದರಿಂದ 17 ನಿಮಿಷಗಳ ಕಾಲ ಆಟ ನಿಲ್ಲಿಸಲಾಗಿತ್ತು. ಆದರೆ ಅಂಪೈರ್ ಹಾಗೂ ಮ್ಯಾಚ್ ರೆಫ್ರಿ ಡೇವಿಡ್ ಬೂನ್ ಲಂಕಾ ಆಟಗಾರರ ಮನವೊಲಿಸಿ ಆಟ ಮುಂದುವರೆಸಲು ಯಶಸ್ವಿಯಾದರು.

    ಮತ್ತೆ ಬೌಲಿಂಗ್ ಆರಂಭಿಸಿದ ಶ್ರೀಲಂಕಾದ ಬೌಲರ್ ಲಕ್ಮಲ್ ಪಂದ್ಯದ 123 ನೇ ಓವರ್ ನಲ್ಲಿ ಉಸಿರಾಟ ಸಮಸ್ಯೆ ಎದುರಿಸಿ ಮೈದಾನದಿಂದ ಹೊರ ನಡೆದರು. ಈ ವೇಳೆ ಎರಡನೇ ಬಾರಿ ಆಟ ಸ್ಥಗಿತಗೊಂಡಿತು. (ಇದನ್ನೂ ಓದಿ: ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ! )

    ಈ ಪಂದ್ಯದಲ್ಲಿ 243 ರನ್ ಗಳಿಸಿ ಪೆವಿಲಿಯನ್ ಸೇರಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 7 ವಿಕೆಟ್ ನಷ್ಟಕ್ಕೆ 536 ರನ್ ಗಳಿಸಿದ್ದಾಗ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡುವ ನಿರ್ಧಾರ ಪ್ರಕಟಿಸಿದರು. ದಿನದ ಆಟದ ಅಂತ್ಯಕ್ಕೆ ಲಂಕಾ 3 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿದೆ. ಫೀಲ್ಡಿಂಗ್ ವೇಳೆ ಟೀಂ ಇಂಡಿಯಾದ ಎಲ್ಲ ಆಟಗಾರು ಮಾಸ್ಕ್ ಧರಿಸದೇ ಎಂದಿನಂತೆ ಅಂಗಳಕ್ಕೆ ಇಳಿದಿದ್ದರು.

  • ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

    ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

    ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ ಯುವ ಆಟಗಾರ ಹಾರ್ದಿಕ್ ಪಾಂಡ್ಯ (24) ಸಂದರ್ಶನವೊಂದರಲ್ಲಿ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ್ದಾರೆ.

    ವಿಶ್ರಾಂತಿ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವತಃ ನಾನೇ ಬಿಸಿಸಿಐಗೆ ಶ್ರೀಲಂಕಾ ವಿರುದ್ಧ ಸರಣಿಯಿಂದ ವಿಶ್ರಾಂತಿಯನ್ನು ನೀಡುವಂತೆ ಮನವಿ ಮಾಡಿದ್ದೆ. ಕಳೆದ ಒಂದು ವರ್ಷದಿಂದ ನಿರಂತರ ಕ್ರಿಕೆಟ್ ಪಂದ್ಯಗಳಲ್ಲಿ ಭಾಗವಹಿಸಿರುವುದರಿಂದ ಈ ವಿರಾಮವನ್ನು ಬಯಸಿದ್ದೇನೆ. ನಾನು ಸಂಪೂರ್ಣವಾಗಿ ಫಿಟ್ ಆಗಿರುವಾಗ ಮಾತ್ರ ಆಡಲು ಬಯಸುತ್ತೇನೆ. ವಿರಾಮದ ಅವಧಿಯಲ್ಲಿ ಜಿಮ್ ನಲ್ಲಿ ಮತ್ತಷ್ಟು ಬೆವರಿಳಿಸಿ ಫಿಟ್‍ನೆಸ್ ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದರು.

    ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯು ನನಗೆ ಅತ್ಯಂತ ಮಹತ್ವದಾಗಿದ್ದು, ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿರಾಮ ಸಮಯವನ್ನು ಉಪಯೋಗಿಸಿಕೊಳ್ಳುತ್ತೇನೆ. ಕಳೆದ ಒಂದು ವರ್ಷದ ಅವಧಿಯಲ್ಲಿ 30 ಏಕದಿನ ಪಂದ್ಯಗಳು, 25 ಟಿ-20 ಹಾಗೂ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದೇನೆ. ಈ ಅವಧಿಯಲ್ಲಿ ನಾನು ಕಡಿಮೆ ಪಂದ್ಯವನ್ನು ಆಡಿದ್ದೇನೆ ಎಂದು ಹೇಳಿದ್ದರೆ ಅವರಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂಬುದಾಗಿ ಹೇಳುತ್ತೇನೆ. ಆಲ್ ರೌಂಡರ್ ಆಟಗಾರನಾಗಿ ಇದು ಅತ್ಯಂತ ಕಠಿಣ ಎಂದು ತಿಳಿಸಿದರು.

    ಇದನ್ನೂ ಓದಿ: 76 ರನ್‍ಗಳಿಸಿ ರನೌಟ್ ಆದ್ರೂ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!

    ಜೂನ್ ತಿಂಗಳಿನಿಂದ ನಡೆದ ಚಾಪಿಂಯನ್ಸ್ ಟ್ರೋಫಿ ಸರಣಿಯಿಂದಲೂ ಪಾಂಡ್ಯ ನಿರಂತರವಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಆಲ್ ರೌಂಡರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ 6 ವಿಕೆಟ್ ಮತ್ತು 222 ರನ್ ಸಿಡಿಸುವ ಮೂಲಕ `ಮ್ಯಾನ್ ಆಫ್ ದಿ ಸೀರೀಸ್’ ಪ್ರಶಸ್ತಿಯನ್ನು ಪಡೆದಿದ್ದರು.

  • ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 19 ಪಂದ್ಯಗಳಲ್ಲಿ ಗೆಲುವು ಪಡೆದು ಟೀಂ ಇಂಡಿಯಾದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

    ಭಾರತದ ಪರ ಟೆಸ್ಟ್ ನಲ್ಲಿ ಯಶಸ್ವಿ ನಾಯಕನೆಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಧೋನಿ ನೇತೃತ್ವದಲ್ಲಿ 60 ಪಂದ್ಯಗಳನ್ನು ಟೀಂ ಇಂಡಿಯಾ ಆಡಿದ್ದು 27 ರಲ್ಲಿ ಜಯಿಸಿದೆ. ನಂತರ ಸ್ಥಾನದಲ್ಲಿ ಗಂಗೂಲಿ ಇದ್ದು 49 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿ 21 ರಲ್ಲಿ ಗೆಲುವು ಪಡೆದಿದ್ದಾರೆ.

    ಅಂತರಾಷ್ಟ್ರೀಯ ಮಟ್ಟದಲ್ಲಿ ಗರಿಷ್ಠ ಟೆಸ್ಟ್ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ದಕ್ಷಿಣ ಆಫ್ರಿಕಾದ ನಾಯಕ ಗ್ರೇಮ್ ಸ್ಮಿತ್ ಹೆಸರಿನಲ್ಲಿದೆ. 104 ಪಂದ್ಯಗಳನ್ನು ಮುನ್ನಡೆಸಿದ ಸ್ಮಿತ್ 53ರಲ್ಲಿ ಗೆಲುವು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಟಿಂಗ್ ಇದ್ದು, 77 ಪಂದ್ಯಗಳಲ್ಲಿ 48ರಲ್ಲಿ ಗೆಲುವು ಪಡೆದಿದ್ದಾರೆ.

    ತಿಂಗಳ ಹಿಂದೆಯಷ್ಟೇ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯನ್ನು ಭಾರತ 9-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.

     

  • ಹೊಸ ಕ್ಯಾಪ್ಟನ್ ಗಾಗಿ ಟೀಂ ಇಂಡಿಯಾ ಹುಡುಕಾಟ!

    ಹೊಸ ಕ್ಯಾಪ್ಟನ್ ಗಾಗಿ ಟೀಂ ಇಂಡಿಯಾ ಹುಡುಕಾಟ!

    ನವದೆಹಲಿ: ಟೀಮ್ ಇಂಡಿಯಾಕ್ಕೆ ಹೊಸ ನಾಯಕನನ್ನು ಹುಡುಕಬೇಕಿದೆ. ಹೌದು. ವಿರಾಟ್ ಕೊಹ್ಲಿ ತಾತ್ಕಾಲಿಕವಾಗಿ ಕ್ರಿಕೆಟ್‍ನಿಂದ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ.

    ಹಾಗಂತ ಗಾಬರಿ ಆಗಬೇಡಿ. ಅವರೇನು ಕ್ರಿಕೆಟ್‍ಗೆ ನಿವೃತ್ತಿ ಘೋಷಿಸುತ್ತಿಲ್ಲ. ಬದಲಿಗೆ ಇನ್ನೊಂದು ತಿಂಗಳು ಆಟದಿಂದ ಫ್ರೀ ಬಿಡಿ ಎಂದು ಮನವಿ ಮಾಡಿದ್ದಾರೆ. ನವೆಂಬರ್ 16ರಿಂದ ಡಿಸೆಂಬರ್ ವರೆಗೆ ಶ್ರೀಲಂಕಾ ವಿರುದ್ಧ ಕ್ರಿಕೆಟ್ ಸರಣಿ ನಡೆಯಲಿದೆ. ಈ ವೇಳೆ ಮೂರು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಾಗುತ್ತೆ.

    ವೈಯಕ್ತಿಕ ಕಾರಣಗಳಿಂದಾಗಿ ಈ ಸರಣಿಯಲ್ಲಿ ತಮಗೆ ಆಡಲು ಸಾಧ್ಯವಾಗುತ್ತಿಲ್ಲ ಎಂದು ಬಿಸಿಸಿಐಗೆ ಮನವಿ ಮಾಡಿದ್ದಾರೆ. ಜನವರಿಯಿಂದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ಪ್ರವಾಸ ಕೈಗೊಳ್ಳಲಿದ್ದು, ನಿರಂತರ ಕ್ರಿಕೆಟ್ ಆಡುತ್ತಿರೋ ಕೊಹ್ಲಿ ಅದಕ್ಕೂ ಮೊದಲು ಕೊಂಚ ವಿರಾಮ ಬಯಸಿದ್ದಾರೆ.

    ಇಂದು ಬಿಸಿಸಿಐ ಆಯ್ಕೆ ಸಮಿತಿ ಸಭೆ ನಡೆಯಲಿದ್ದು, ನ್ಯೂಜಿಲೆಂಡ್ ವಿರುದ್ಧದ ಮೂರು ಟಿ-ಟ್ವೆಂಟಿ ಪಂದ್ಯಗಳಿಗೆ ಮತ್ತು ಶ್ರೀಲಂಕಾ ವಿರುದ್ಧದ ಮೂರು ಟೆಸ್ಟ್ ಗಳಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಿದೆ.