Tag: service

  • ಪ್ರಧಾನಿ ಮೋದಿ ಹುಟ್ಟುಹಬ್ಬ- ಸೆ.17ರಿಂದ ಅ.7ರವರೆಗೆ ಬಿಜೆಪಿಯಿಂದ ಸೇವೆ, ಸಮರ್ಪಣಾ ಅಭಿಯಾನ

    ಪ್ರಧಾನಿ ಮೋದಿ ಹುಟ್ಟುಹಬ್ಬ- ಸೆ.17ರಿಂದ ಅ.7ರವರೆಗೆ ಬಿಜೆಪಿಯಿಂದ ಸೇವೆ, ಸಮರ್ಪಣಾ ಅಭಿಯಾನ

    ಬೆಳಗಾವಿ: ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವಿದ್ದು, ಅಕ್ಟೋಬರ್ 7ರಂದು ಮೋದಿ ಮೊದಲ ಬಾರಿ ಗುಜರಾತಿನ ಮುಖ್ಯಮಂತಿಯಾಗಿ 20 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದಂತೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ವರೆಗೆ 20 ದಿನಗಳ ಕಾಲ ಸೇವೆ ಹಾಗೂ ಸಮರ್ಪಣಾ ಅಭಿಯಾನವನ್ನು ಆಚರಿಸಲಾಗುವು ಎಂದು ಬಿಜೆಪಿ ರಾಜ್ಯ ವಕ್ತಾರ ಮಾರುತಿ ಝಿರಲಿ ಹೇಳಿದರು.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದಂತೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ವರೆಗೆ 20 ದಿನಗಳ ಕಾಲ ಸೇವೆ ಹಾಗೂ ಸಮರ್ಪಣಾ ಅಭಿಯಾನವನ್ನು ಆಚರಿಸಲಾಗುವು. ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಾಗೂ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರ ಹಿಡಿದು 20 ವರ್ಷಗಳು ಕಳೆದಿವೆ. ಹೀಗಾಗಿ 20 ದಿನಗಳ ಕಾಲ ಈ ಸೇವಾ ಮತ್ತು ಸಮರ್ಪಣಾ ಅಭಿಯಾನವನ್ನು ನಡೆಸಲಾಗುವುದು ಎಂದರು.

    ಬಿಜೆಪಿ ಕಾರ್ಯಕರ್ತರು ಕೇವಲ ಬಾಯಿ ಮಾತಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರೆ ಸಾಲದು. ಜೆ.ಪಿ.ನಡ್ಡಾ ಅವರ ಆದೇಶದಂತೆ ಮೈ ಸೇವಾ ಟ್ರಿಬ್ಯೂಟ್ ಎಂಬ ಆ್ಯಪ್‍ನ್ನು ಬಿಡುಗಡೆ ಮಾಡಲಾಗಿದೆ. ಕಾರ್ಯಕರ್ತರು ಬೂತ್ ಮಟ್ಟಗಳಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಉತ್ತಮ ಕಾರ್ಯಗಳನ್ನು ಈ ಅವಧಿಯಲ್ಲಿ ಮಾಡಿ, ಈ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಬೇಕು. ಈ ಮೂಲಕ ಪ್ರಧಾನಿ ಮೋದಿಯವರಿಗೆ ಶುಭಾಶಯ ಕೋರಬೇಕೆಂದು ಹೇಳಿದರು.

  • ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ 5 ವರ್ಷ ಗ್ರಾಮೀಣ ಸೇವೆ ಕಡ್ಡಾಯ ಮಾಡಿ- ಸಿಎಂಗೆ ಸೋಮಶೇಖರ್ ಪತ್ರ

    ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ 5 ವರ್ಷ ಗ್ರಾಮೀಣ ಸೇವೆ ಕಡ್ಡಾಯ ಮಾಡಿ- ಸಿಎಂಗೆ ಸೋಮಶೇಖರ್ ಪತ್ರ

    ಬೆಂಗಳೂರು: ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಗ್ರಾಮೀಣ ಸೇವೆ ಕಡ್ಡಾಯ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ.

    ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಕನಿಷ್ಟ 5 ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಎಸ್.ಟಿ.ಸೋಮಶೇಖರ್ ಒತ್ತಾಯಿಸಿದ್ದಾರೆ.

    ಈ ಹಿಂದೆ ಸಹ ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಸರ್ಕಾರಿ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಮಾಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಪದವಿ ಪಡೆಯುವವರಿಗೆ ಇಂಟರ್ನ್‍ಶಿಪ್ ಅಥವಾ ಇಂತಿಷ್ಟು ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಹಲವರು ಧ್ವನಿ ಎತ್ತಿದ್ದರು. ಇದಕ್ಕೆ ಕೆಲವರು ವಿರೋಧ ಸಹ ವ್ಯಕ್ತಪಡಿಸಿದ್ದರು. ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಿಎಂಗೆ ಪತ್ರ ಬರೆಯುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.

    ಪತ್ರದಲ್ಲಿ ಏನಿದೆ?
    ನಮ್ಮ ರಾಜ್ಯದಲ್ಲಿ ಪ್ರತಿಭಾವಂತರಿಗೇನೂ ಕೊರತೆ ಇಲ್ಲ. ಹಾಗೇ ರಾಜ್ಯ ಸರ್ಕಾರ ಸಹ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕ ಸಹಕಾರವನ್ನು ನೀಡುತ್ತಾ ಬಂದಿದೆ. ಇದಕ್ಕೆ ವೈದ್ಯಕೀಯ ಶಿಕ್ಷಣ ರಂಗವೂ ಹೊರತಾಗಿಲ್ಲ. ಪ್ರತಿ ವರ್ಷ ವೈದ್ಯಕೀಯ ಶಿಕ್ಷಣಕ್ಕೆ ಸರ್ಕಾರ ಅಗಾಧವಾಗಿ ಖರ್ಚು ಮಾಡುತ್ತಾ ಬಂದಿದೆ. ಸರ್ಕಾರಿ ಕೋಟಾದಲ್ಲಿ ಓದುವ ಒಬ್ಬ ವೈದ್ಯಕೀಯ ವಿದ್ಯಾರ್ಥಿ ವಿದ್ಯಾಭ್ಯಾಸ ಅವಧಿಯನ್ನು ಮುಗಿಸುವ ಹೊತ್ತಿಗೆ ಸರ್ಕಾರದಿಂದ 40 ರಿಂದ 50 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಸರ್ಕಾರ ಇಷ್ಟೆಲ್ಲಾ ವೆಚ್ಚ ಮಾಡಿದರೂ ನಮ್ಮ ಪ್ರತಿಭೆಗಳು ನಮಗೆ ದಕ್ಕುತ್ತಿಲ್ಲ. ಕೆಲವು ವೈದ್ಯರು ನಮ್ಮ ಸೌಲಭ್ಯವನ್ನು ಪಡೆದು, ಕಲಿತು ವಿದೇಶಗಳಿಗೆ ಹೋಗಿ ಅಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ವೈದ್ಯರ ಕೊರತೆ ಹೆಚ್ಚಾಗುತ್ತಿದೆ. ತಮ್ಮ ಕಾಲಾವಧಿಯಲ್ಲಿ ಇಂಥದ್ದೊಂದು ಪ್ರಕ್ರಿಯೆಗೆ ಕಡಿವಾಣ ಬೀಳಬೇಕಿದೆ. ನಮ್ಮ ಪ್ರತಿಭೆಗಳು ನಮ್ಮಲ್ಲಿಯೇ ಸೇವೆ ಸಲ್ಲಿಸುವಂತಾಗಬೇಕು. ಪ್ರತಿಭಾ ಪಲಾಯನ ನಿಲ್ಲುವಂತಾಗಬೇಕು.

    ಸರ್ಕಾರಿ ಕೋಟಾದಲ್ಲಿ ಕಲಿತ ವೈದ್ಯರು ಕನಿಷ್ಠ ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಈ ಮೂಲಕ ನಮ್ಮ ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ಸಹ ನುರಿತ ತಜ್ಞ ವೈದ್ಯರ ಸೇವೆ ಲಭಿಸಬೇಕು. ಇಂದು ಹಳ್ಳಿ ಎಂದರೆ ಮೂಗು ಮುರಿಯುವ ಮನೋಭಾವ ಹೆಚ್ಚಾಗುತ್ತಿದೆ. ಆದರೆ ಹಳ್ಳಿ ಸಶಕ್ತವಾಗಿದ್ದರೆ, ಆರೋಗ್ಯವಾಗಿದ್ದರೆ ದೇಶದ ಅಭಿವೃದ್ಧಿ ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕಿದೆ. ಹಳ್ಳಿಗಳಲ್ಲಿ ಕೆಲಸ ಮಾಡುವ ಮನೋಭಾವಕ್ಕೆ ನಾವು ಪ್ರೋತ್ಸಾಹ ನೀಡಬೇಕಿದ್ದು, ಇದಕ್ಕೊಂದು ಸೂಕ್ತ ಕಾನೂನು ಚೌಕಟ್ಟು ನಿರ್ಮಾಣ ಮಾಡುವುದು ಮುಖ್ಯವಾಗುತ್ತದೆ.

    ಹೀಗಾಗಿ ನಮ್ಮ ರಾಜ್ಯದ ಸಕಲ ಸೌಕರ್ಯವನ್ನು ಪಡೆದು ವೈದ್ಯರಾಗಿ ಹೊರ ಬರುವ ಪ್ರತಿಯೊಬ್ಬರೂ ಸಹ ರಾಜ್ಯದಲ್ಲಿ 5 ವರ್ಷ ಕಡ್ಡಾಯವಾಗಿ ವೃತ್ತಿಯನ್ನು ಸಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಕಾನೂನೊಂದನ್ನು ತಾವು ರೂಪಿಸಬೇಕು. ಈಗಾಗಲೇ ಹೀಗೆ ಸೇವೆ ಮಾಡುವ ವೈದ್ಯರಿಗೆ ಅತಿ ಹೆಚ್ಚಿನ ವೇತನವನ್ನು ನೀಡುತ್ತೇವೆ. ಸೌಲಭ್ಯಗಳನ್ನು ಕೊಡುತ್ತೇವೆಂದರೂ ವೈದ್ಯರು ಮುಂದೆ ಬರುತ್ತಿಲ್ಲ. ಹೀಗಾಗಿ ಈ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನವನ್ನು ಕಲ್ಪಿಸಿಕೊಡುವ ಮೂಲಕ ಹಳ್ಳಿಗಳಿಗೂ ಉತ್ತಮ ವೈದ್ಯಕೀಯ ಸೇವೆ ಲಭಿಸುವಂತೆ ಮಾಡಬೇಕಿದೆ. ಈ ಮೂಲಕ ನಮ್ಮ ರಾಜ್ಯದ ಹಣವನ್ನು ಬಳಸಿ ವೈದ್ಯರಾದವರ ಸೇವೆಯನ್ನು ನಮ್ಮ ರಾಜ್ಯದ ನಾಗರಿಕರಿಗೇ ಲಭಿಸುವಂತಾಗಬೇಕು.

    ಈಗ ಕೊರೊನಾ ಸಂಕಷ್ಟ ಕಾಲವಾಗಿರುವುದರಿಂದ ಇಂಥದ್ದೊಂದು ನಿಲುವಿನ ಅಗತ್ಯವಿದೆ. ಜೊತೆಗೆ ಸರ್ಕಾರಿ ಸೌಲಭ್ಯ ಪಡೆಯುವ ಪ್ರತಿಯೊಬ್ಬರಲ್ಲೂ ಇಂತಹ ಮನೋಭಾವ ಬರಬೇಕಿದೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ವೈದ್ಯಕೀಯ ನೆರವು ಸಿಗಬೇಕೆಂದರೆ ಕಠಿಣವಾದ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸದನದಲ್ಲಿ ಮಂಡಿಸಿ ಜಾರಿಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಈ ಮೂಲಕ ಪ್ರತಿಭಾ ಪಲಾಯನಕ್ಕೆ ತಡೆ ಹಾಕಬೇಕಿದೆ.

    ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಕಟ್ಟುನಿಟ್ಟಿನ ನೀತಿಯನ್ನು ಸರ್ಕಾರದಿಂದ ರಚಿಸಬೇಕಿದ್ದು, ವೈದ್ಯಕೀಯ ಶಿಕ್ಷಣ ಓದಿಗೆ ಅವರು ಮುಂದಾಗುವಾಗಲೇ ಸರ್ಕಾರಿ ಕೋಟಾದ ಲಾಭ ಪಡೆಯಬೇಕೆಂದಿದ್ದರೆ, ಅವರ ಮೆರಿಟ್ ಆಧಾರದ ಜೊತೆಗೆ ರಾಜ್ಯದಲ್ಲಿ 5 ವರ್ಷ ಸೇವೆ ಸಲ್ಲಿಸುತ್ತೇವೆಂಬ ಕರಾರಿಗೆ ಮೊದಲೇ ಸಹಿ ಹಾಕಿಸಿಕೊಳ್ಳುವಂತಹ ನಿಟ್ಟಿನಲ್ಲಿ ಕಾನೂನು ರೂಪಿಸಿದರೆ ಪರಿಹಾರ ದೊರಕಬಹುದು ಎಂಬುದು ನನ್ನ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ತಾವುಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುವಂತೆ ಮತ್ತೊಮ್ಮೆ ತಮ್ಮಲ್ಲಿ ಮನವಿ ಮಾಡುತ್ತೇನೆ.

  • ಕೊರೊನಾ ವಿರುದ್ಧ ಯುದ್ಧ ಮಾಡಲು ವಿಎಚ್‍ಪಿ ಕಾರ್ಯಕರ್ತರು ಪೂರ್ಣವಾಗಿ ಸಜ್ಜಾಗಬೇಕು: ಮಿಲಿಂದ್ ಪರಾಂಡೆ

    ಕೊರೊನಾ ವಿರುದ್ಧ ಯುದ್ಧ ಮಾಡಲು ವಿಎಚ್‍ಪಿ ಕಾರ್ಯಕರ್ತರು ಪೂರ್ಣವಾಗಿ ಸಜ್ಜಾಗಬೇಕು: ಮಿಲಿಂದ್ ಪರಾಂಡೆ

    ನವದೆಹಲಿ: ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ), ಶ್ರೀರಾಮ ದೇವರ ಸೇವೆ ಜೊತೆಯಲ್ಲಿ ರಾಷ್ಟ್ರ ಸೇವೆಯಲ್ಲೂ ತೊಡಗಿದೆ. ಕೋವಿಡ್-19ನ ಜಾಗತಿಕ ಸಾಂಕ್ರಾಮಿಕ ರೋಗದ ದಾಳಿಗೆ ಸಿಕ್ಕಿರುವ ಭಾರತೀಯರಿಗೆ ಸೇವೆ ಸಲ್ಲಿಸಲು ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಹಲವು ಕಾರ್ಯಗಳನ್ನು ಈಗಾಗಲೇ ವಿಎಚ್‍ಪಿ ಕಾರ್ಯಕರ್ತರು ಆಯಾ ರಾಜ್ಯಗಳ ಪ್ರಾದೇಶಿಕ ಮಟ್ಟದಲ್ಲಿ ಪ್ರಾರಂಭಿಸಿದ್ದಾರೆ. ಆದರೆ ಅದನ್ನು ಪೂರ್ಣ ಭಾರತ ಮಟ್ಟದಲ್ಲಿ ವೇಗಗೊಳಿಸಲು, ವಿಎಚ್‍ಪಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಕೊರೊನಾ ವಿರುದ್ಧ ಯುದ್ಧ ಘೋಷಿಸಿ ಕರೆ ನೀಡಿದರು.

    ಈ ಸಾಂಕ್ರಾಮಿಕ ರೋಗದ ವಿರುದ್ಧ ಯುದ್ಧ ಮಾಡಲು ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಸಜ್ಜಾಗಬೇಕು ಮತ್ತು ಎಲ್ಲಾ ಮಠಗಳು ಮತ್ತು ದೇವಾಲಯಗಳು, ಗುರುದ್ವಾರಗಳು, ಸಂತರು, ಧರ್ಮಚಾರ್ಯರು ಮತ್ತು ಸ್ವಯಂಸೇವಾ ಸಂಸ್ಥೆಗಳನ್ನು ಸೇವೆಗೆ ಸಿದ್ಧಪಡಿಸಬೇಕು. ಅದೇನೇ ಇದ್ದರೂ, 2020ರಲ್ಲಿ ಕೊರೊನಾದ ಮೊದಲ ಅಲೆಯ ಸಮಯದಲ್ಲಿ ವಿಎಚ್‍ಪಿ ಕಾರ್ಯಕರ್ತರು ಇಡೀ ದೇಶದಲ್ಲಿ ಕೊರೊನಾ ಪೀಡಿತರಿಗೆ ಸೇವೆಯನ್ನು ಅರ್ಪಿಸಿದರು, ಆದರೆ ಈ ಬಾರಿ ಪರಿಸ್ಥಿತಿಯು ಹೆಚ್ಚು ಅಪಾಯಕಾರಿ ಪ್ರಮಾಣವನ್ನು ತಲುಪಿರುವುದನ್ನು ಗಮನದಲ್ಲಿಟ್ಟುಕೊಂಡು, ಅವರ ಸೇವಾ ಚಟುವಟಿಕೆಗಳನ್ನು ಏರಿಸಿದ್ದಾರೆ.

    ವಿಎಚ್‍ಪಿ ತನ್ನ ಸೇವಾ ತಂತ್ರಗಳನ್ನು ನಾಲ್ಕು ಭಾಗಗಳಾಗಿ ಮಾಡಿದೆ. ಮೊದಲನೆಯದು ಗುಣಪಡಿಸುವುದಕ್ಕಿಂತ ತಡೆಗಟ್ಟುವುದು ಉತ್ತಮ. ಎರಡನೇಯದು ಸೋಂಕಿತರಿಗೆ ಸೇವೆ ನೀಡುವುದು ಮತ್ತು ಅವರ ಜೀವ ಉಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುವುದು. ಮೂರನೇಯದು ಪೀಡಿತ ಕುಟುಂಬಗಳಿಗೆ ಬೆಂಬಲ ಮತ್ತು ನೆರವು ನೀಡುವುದು. ಮತ್ತು ನಾಲ್ಕನೆಯದು ಕೊರೊನಾ ಸಂತ್ರಸ್ತರ ಕೊನೆಯ ಪ್ರಯಾಣ ಮತ್ತು ಅವರ ವಿಮೋಚನೆಗಾಗಿ ಅಗತ್ಯ ಕ್ರಮಗಳನ್ನು ಏರ್ಪಡಿಸುವುದು. ಎಲ್ಲಾ ನಾಲ್ಕು ರಂಗಗಳನ್ನು ನಿಭಾಯಿಸುವ ಸಲುವಾಗಿ, ವಿಎಚ್‍ಪಿ ತನ್ನ ಕಾರ್ಯಕರ್ತರು ಮತ್ತು ಸಾಂಸ್ಥಿಕ ಬಲವನ್ನು ನಿಯೋಜಿಸಲು ಸಿದ್ಧಪಡಿಸಿದೆ.

    ರೋಗ ತಡೆಗಟ್ಟುವ ಕ್ರಮಗಳ ಬ್ಯಾನರ್ ಅಡಿಯಲ್ಲಿ ವಿಎಚ್‍ಪಿ ಕಾರ್ಯಕರ್ತರು, ಎಲ್ಲಾ ಅರ್ಹ ಜನರು, ಸರ್ಕಾರದ ವ್ಯಾಕ್ಸಿನೇಷನ್ ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳುತ್ತಾರೆ. ಕಾರ್ಯಕರ್ತರು, ಸಾಮಾಜಿಕ ಮಾಧ್ಯಮಗಳು, ಫೋನ್ ಕರೆಗಳು ಮತ್ತು ವೈಯಕ್ತಿಕ ಸಂಪರ್ಕಗಳ ಮೂಲಕ, ಲಸಿಕೆ ವಿರೋಧಿ ಪ್ರಚಾರ ಮತ್ತು ಗೊಂದಲಗಳನ್ನು ತೆಗೆದುಹಾಕಿ ಜನರನ್ನು ಪ್ರೇರೇಪಿಸುತ್ತಿದ್ದಾರೆ ಮತ್ತು ಅವರ ವ್ಯಾಕ್ಸಿನೇಷನ್‍ನನ್ನು ಸುಗಮಗೊಳಿಸುತ್ತಿದ್ದಾರೆ. 6 ಅಡಿ ವೈಯಕ್ತಿಕ ದೂರ, ಮುಖಗವಸು ಬಳಕೆ, ಕೈ ಮತ್ತು ಮುಖದ ನೈರ್ಮಲ್ಯೀಕರಣ ಮತ್ತು ನೈರ್ಮಲ್ಯದ ಇತರ ಪ್ರೋಟೋಕಾಲ್‍ಗಳ ಪ್ರಸ್ತುತ ಮಾನದಂಡಗಳ ಅನಿವಾರ್ಯತೆಯ ಬಗ್ಗೆ ಅವರು ಜನರನ್ನು ಸಂವೇದನಾಶೀಲಗೊಳಿಸುತ್ತಿದ್ದಾರೆ. ಅಲ್ಲದೇ ಅವರು ಆಯುರ್ವೇದ, ಹೋಮಿಯೋಪತಿ ಮತ್ತು ಅಗತ್ಯವಿರುವಂತ ಸಿದ್ಧ ಔಷಧಿಗಳನ್ನು ವಿತರಿಸುತ್ತಾ ಇದ್ದಾರೆ. ಸಾಮಾಜಿಕ ಶಿಸ್ತು, ತಾಳ್ಮೆ ಮತ್ತು ಸ್ಥೈರ್ಯವನ್ನು ಹೆಚ್ಚಿಸಲು ಯೋಗ ತರಗತಿಗಳನ್ನು ಆನ್‍ಲೈನ್ ಮೂಲಕ ನಡೆಸುತ್ತಿದ್ದಾರೆ ಮತ್ತು ಸಹಾಯವಾಣಿ ಸಂಖ್ಯೆಗಳ ಮೂಲಕ ಆಯಾ ಕ್ಷೇತ್ರಗಳ ತಜ್ಞರೊಂದಿಗೆ ಸಮಾಲೋಚನೆ ಮತ್ತು ಸಹಾಯವನ್ನು ಮಾಡುತ್ತಿದ್ದಾರೆ.

    ಎರಡನೇ ಭಾಗಕ್ಕೆ ಸಂಬಂಧಿಸಿದ ಸೇವೆಗಳಲ್ಲಿ ವೈದ್ಯಾಧಿಕಾರಿ ಮತ್ತು ವೈದ್ಯರೊಂದಿಗೆ ಸಮಾಲೋಚನೆ, ಆಂಬುಲೆನ್ಸ್‍ಗಳ ವ್ಯವಸ್ಥೆ, ಆಮ್ಲಜನಕ ಸಿಲಿಂಡರ್‍ಗಳು, ಪ್ಲಾಸ್ಮಾ, ರಕ್ತ, ಆಮ್ಲಜನಕ ಸಾಂದ್ರಕ ಘಟಕಗಳು, ಔಷಧಿಗಳು ಮತ್ತು ಆಕ್ಸಿಮೀಟರ್‍ಗಳು ಇತ್ಯಾದಿಗಳ ವ್ಯವಸ್ಥೆ ಸೇರಿವೆ. ಇದರಲ್ಲಿ ಪ್ರತ್ಯೇಕತೆ (ಐಸೋಲೇಷನ್) ಕ್ವಾರಂಟೈನ್ ಕೇಂದ್ರಗಳು, ರೋಗಿಗಳಿಗೆ ಊಟದ ವ್ಯವಸ್ಥೆ ಮತ್ತು ಅವರ ಕುಟುಂಬ ಸದಸ್ಯರಿಗೆ ವ್ಯವಸ್ಥೆ, ಮನೆಗಳು ಮತ್ತು ಆಸ್ಪತ್ರೆಗಳಲ್ಲಿ ಒಂಟಿ ಕುಟುಂಬ ಸದಸ್ಯರಿಗೆ ಸಹಾಯ ಮತ್ತು ವೈದ್ಯಕೀಯ ಸಿಬ್ಬಂದಿಗೆ ಬೆಂಬಲ ಮತ್ತು ಸಹಕಾರ ಇತ್ಯಾದಿ.

    ಮೂರನೇ ಭಾಗಕ್ಕೆ ಸಂಬಂಧಿಸಿದ ಸೇವೆಗಳಲ್ಲಿ ಆಹಾರ ಮತ್ತು ನೀರು, ಔಷಧಿಗಳು ಮತ್ತು ಪಡಿತರವನ್ನು ರೋಗ ಪೀಡಿತ ಕುಟುಂಬಗಳಿಗೆ ಮತ್ತು ಕಾರ್ಮಿಕರಿಗೆ, ಇತರ ಬಡ ಜನರಿಗೆ ವಿತರಿಸುವುದು. ಒಂಟಿ ಮನೆಯ ವೃದ್ಧರು, ವಿದ್ಯಾರ್ಥಿಗಳು ಮತ್ತು ಮಕ್ಕಳ ಆರೈಕೆ. ಹಸುವಿನ ಸಂತತಿ ಮತ್ತು ಇತರ ಪ್ರಾಣಿಗಳಿಗೆ ಮೇವು/ಆಹಾರ ಮತ್ತು ನೀರು, ಪ್ರಯಾಣಿಸುವ ಜನರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ಒದಗಿಸಲಾಗುತ್ತಿದೆ.

    ನಾಲ್ಕನೇ ಭಾಗಕ್ಕೆ ಸಂಬಂಧಿಸಿದ ಸೇವೆ ಅತ್ಯಂತ ಕಷ್ಟಕರ ಮತ್ತು ಸವಾಲಿನದು. ಕೊರೊನಾದಿಂದ ಪ್ರಾಣ ಬಿಟ್ಟವರನ್ನು ಆಸ್ಪತ್ರೆಗಳು/ ಮನೆಗಳಿಂದ ವಿಮೋಚನೆಯ ಬಾಗಿಲುಗಳಿಗೆ ಸಾಗಿಸಲು ಮೋರ್ಚುರಿ ವ್ಯಾನ್‍ಗಳನ್ನು ವ್ಯವಸ್ಥೆ ಮಾಡುವುದು, ಅವರ ಅಂತ್ಯಕ್ರಿಯೆಯ ಸೇವೆಗಳು ಮತ್ತು ಶವಸಂಸ್ಕಾರದ ವ್ಯವಸ್ಥೆ, ಸಂಬಂಧಿತ ಸಾಮಾಗ್ರಿಗಳ ವ್ಯವಸ್ಥೆ ಮುಂತಾದ ಕಾರ್ಯಗಳನ್ನು ಮಾಡುವುದು ಮತ್ತು ಕೊರೊನಾ ಸಂತ್ರಸ್ತರ ಕುಟುಂಬ ಸದಸ್ಯರನ್ನು ಮನವೊಲಿಸುವುದು ಕಷ್ಟಕರವಾದ ಕೆಲಸ. ಯಾವಾಗಲೂ ಕೊರೊನಾ ಪೀಡಿತರ ಸೇವೆಗಳಲ್ಲಿ ತೊಡಗಿರುವ ಕಾರ್ಯಕರ್ತರ ಸ್ವರಕ್ಷಣೆ ಒಂದು ನಿರ್ಣಾಯಕ ಸವಾಲಾಗಿದೆ.

    ವಿಎಚ್‍ಪಿಯ ಯುವ ವಿಭಾಗಗಳಾದ ಭಜರಂಗದಳ ಮತ್ತು ದುರ್ಗಾವಾಹಿನಿ – ಎಲ್ಲಾ ಅಪಾಯಗಳನ್ನು ತೆಗೆದುಕೊಳ್ಳುತ್ತಾ, ಈ ಸೇವಾ ಚಟುವಟಿಕೆಗಳಲ್ಲಿ ದೈಹಿಕವಾಗಿ, ಮಾನಸಿಕವಾಗಿ ಮತ್ತು ಸಂಪನ್ಮೂಲವಾರು ಬುದ್ಧಿವಂತಿಕೆಯಿಂದ ತೊಡಗಿಸಿಕೊಂಡಿದ್ದಾರೆ. ಮಿಲಿಂದ್ ಪರಾಂಡೆ ಅವರು ಸೇವಾಕಾರ್ಯದಲ್ಲಿ ಸಂಪನ್ಮೂಲದೊಂದಿಗೆ ಭಾಗವಹಿಸಲು ಕಾರ್ಪೊರೇಟ್ ಜಗತ್ತಿಗೆ ಕರೆ ನೀಡಿದರು. ಸಮಾಜದ ಸ್ಥೈರ್ಯವನ್ನು ದುರ್ಬಲಗೊಳಿಸುವ ಮೂಲಕ ನಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಮಾಧ್ಯಮಗಳ ಒಂದು ಭಾಗವು ಉದ್ದೇಶಪೂರ್ವಕವಾಗಿ ಅಥವಾ ಅಜಾಗರೂಕತೆಯಿಂದ ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದರು. ವಿಎಚ್‍ಪಿ ಕಾರ್ಯಕರ್ತರು ತಮ್ಮನ್ನು ತಾವು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಸಹಕರಿಸುತ್ತಿದ್ದಾರೆ ಮತ್ತು ಉತ್ತಮ ಕಾರ್ಯಗಳು ಮತ್ತು ಪ್ರಯತ್ನಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ.

  • ಗರ್ಭಿಣಿ, ರಂಜಾನ್ ಉಪವಾಸದಲ್ಲಿದ್ದರೂ ಕೋವಿಡ್ ರೋಗಿಗಳ ಸೇವೆ ನಿಲ್ಲಿಸಿಲ್ಲ

    ಗರ್ಭಿಣಿ, ರಂಜಾನ್ ಉಪವಾಸದಲ್ಲಿದ್ದರೂ ಕೋವಿಡ್ ರೋಗಿಗಳ ಸೇವೆ ನಿಲ್ಲಿಸಿಲ್ಲ

    ಗಾಂಧಿನಗರ: ಗರ್ಭಿಣಿ ನರ್ಸ್ ರಂಜಾನ್ ಉಪವಾಸದಲ್ಲಿದ್ದರು ಕೋವಿಡ್ ರೋಗಿಗಳ ಸೇವೆ ಸಲ್ಲಿಸುತ್ತಿರುವುದರ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ನ್ಯಾನ್ಸಿ ಆಯೆಜಾ ಮಿಸ್ತ್ರಿ ಉಪವಾಸ ಮಾಡುತ್ತಲೇ ಗುಜರಾತ್‍ನ ಸೂರತ್‍ನ ಕೋವಿಡ್ ಆರೈಕೆ ಕೇಂದ್ರವೊಂದರಲ್ಲಿ ದಣಿವೆಯಿಲ್ಲದೆ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರತಿದಿನ ಎಂಟರಿಂದ ಹತ್ತು ಗಂಟೆಗಳ ಕಾಲ, ಮಿಸ್ತ್ರಿ ಆಲ್ಥಾನ್ ಸಮುದಾಯ ಭವನದಲ್ಲಿ ಅಟಲ್ ಕೋವಿಡ್ – 19 ಕೇಂದ್ರದಲ್ಲಿ ರೋಗಿಗಳಿಗೆ ಸಹಾಯ ಮಾಡುತ್ತಿದ್ದಾರೆ.

    ನಾಲ್ಕು ತಿಂಗಳ ಗರ್ಭಿಣಿಯಾಗಿರುವ ನ್ಯಾನ್ಸಿ ಅವರು ಉಪವಾಸವನ್ನು ಮಾಡುತ್ತಾ ಕೊರೊನಾ ರೋಗಿಗಳು ಸೇವೆಯನ್ನು ಮಾಡುತ್ತಿದ್ದಾರೆ. ನರ್ಸ್‍ನ ಈ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಳೆದ ವರ್ಷವೂ ಕೊರೊನಾ ಸಂದರ್ಭದಲ್ಲಿ ಅವರು ಕೆಲಸ ಮಾಡಿದ್ದರು. ಆದರೆ ಈ ವರ್ಷ ಗರ್ಭಿಣಿಯಾಗಿದ್ದರೂ ತಮ್ಮ ಕರ್ತವ್ಯ ಮಾಡುವುದನ್ನು ನಿಲ್ಲಿಸಿಲ್ಲ. ಇದನ್ನು ಓದಿವೀಡಿಯೋ ವೈರಲ್-ಗರ್ಭಿಣಿ ಅಧಿಕಾರಿಯಿಂದ ಜನರಿಗೆ ಕೋವಿಡ್ ಪಾಠ

    ನಾನು ದಾದಿಯಾಗಿ ನನ್ನ ಕರ್ತವ್ಯವನ್ನು ಮಾಡುತ್ತಿದ್ದೇನೆ. ಜನರಿಗೆ ಸೇವೆ ಮಾಡುವುದನ್ನು ನಾನು ಪ್ರಾರ್ಥನೆ ಎಂದು ಪರಿಗಣಿಸುತ್ತೇನೆ ಎಂದು ನ್ಯಾನ್ಸಿ ಆಯೆಜಾ ಮಿಸ್ತ್ರಿ ಹೇಳಿದ್ದಾರೆ.

  • 10 ರೂಪಾಯಿಗೆ ಚಿಕಿತ್ಸೆ ನೀಡುವ ಯುವ ವೈದ್ಯೆ

    10 ರೂಪಾಯಿಗೆ ಚಿಕಿತ್ಸೆ ನೀಡುವ ಯುವ ವೈದ್ಯೆ

    – ಅತೀ ಕಡಿಮೆ ದರದಲ್ಲಿ ಬಡವರ ಸೇವೆ

    ಹೈದರಾಬಾದ್: ಯುವ ಭಾರತೀಯ ವೈದ್ಯೆಯೊಬ್ಬರು ಕೇವಲ 10 ರೂಪಾಯಿಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಇಂದಿನ ದಿನಗಳಲ್ಲಿ ಭಾರತದ ಖಾಸಗಿ ಆಸ್ಪತ್ರೆಗಳಲ್ಲಿ ಬಡವರು ಚಿಕಿತ್ಸೆ ಪಡೆಯುವುದು ಅಸಾಧ್ಯವಾಗಿದೆ. ಆದರೆ ಆಂಧ್ರಪ್ರದೇಶದ ಯುವ ವೈದ್ಯೆ ಡಾ. ನೂರ್ ಪರ್ವೀನಾ ಮಾನವೀಯತೆಯ ದೃಷ್ಟಿಯಿಂದ ಸೇವೆ ಸಲ್ಲಿಸುವ ಒಂದು ಅದ್ಭುತವಾದ ಕೆಲಸವನ್ನು ಮಾಡುತ್ತಿದ್ದಾರೆ.

    ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ (ಎಂಬಿಬಿಎಸ್) ಕೋರ್ಸ್ ಮುಗಿಸಿದ ಡಾ.ನೂರ್ ಪರ್ವೀನಾ, ಆರ್ಥಿಕವಾಗಿ ದುರ್ಬಲಗೊಂಡಿರುವ ಕುಟುಂಬಗಳಿಗೆ ವೈದ್ಯಕೀಯ ಸೇವೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಪ್ರತಿ ರೋಗಿಗೆ ಕೇವಲ 10 ರೂ. ಚಾರ್ಜ್ ಮಾಡುವ ಮೂಲಕವಾಗಿ, ಅತೀ ಕಡಿಮೆ ದುಡ್ಡಿನಲ್ಲಿ ಉತ್ತಮ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.

    ಡಾ. ನೂರ್ ಪರ್ವೀನಾ ಆಂಧ್ರಪ್ರದೇಶದ ವಿಜಯವಾಡದ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ್ದಾರೆ. ಅರ್ಹತೆಯ ಆಧಾರದ ಮೇಲೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಎಂಬಿಬಿಎಸ್ ಕೋರ್ಸ್ ಗೆ ಸೇರಿಕೊಂಡರು. ವೈದ್ಯಕೀಯ ಕೋರ್ಸ್‍ನ್ನು ಮುಗಿಸಿದರು. ಉತ್ತಮವಾದ ಅಂಕಗಳಿಸಿ ಕಾಲೇಜಿನಿಂದ ಹೊರ ಬರುವಾಗ ಪರ್ವೀನಾ ವೈದ್ಯಕೀಯ ಸೇವೆ ಅಗತ್ಯ ಇರುವವರಿಗೆ ನನ್ನಿಂದ ಆದಷ್ಟು ಸಹಾಯ ಮಾಡಬೇಕು ಎಂದು ನಿರ್ಧರಿಸಿ ಬಂದಿದ್ದರು. ಇದೀಗ ಅದರಂತೆ ರೋಗಿಗಳ ಸೇವೆಯನ್ನು ಮಾಡುತ್ತಿದ್ದಾರೆ.

    ನನ್ನ ವಿದ್ಯಾಭ್ಯಾಸ ಮುಗಿಸಿ ವಿಜಯವಾಡದಲ್ಲಿರುವ ಮನೆಗೆ ಹಿಂದಿರುಗಿದಾಗ ನನ್ನ ಪೆÇೀಷಕರಿಗೆ ನನ್ನ ಕ್ಲಿನಿಕ್ ಅನ್ನು ಪ್ರಾರಂಭಿಸುತ್ತೇನೆ ಎಂದು ತಿಳಿಸಿದೆ. ಬಡವರಿಗೆ ಕಡಿಮೆ ದುಡ್ಡಿನಲ್ಲಿ ಸೇವೆಯನ್ನು ನೀಡುತ್ತೇನೆ. ನನ್ನ ಪೋಷಕರು ತುಂಬಾ ಸಂತೋಷಪಟ್ಟರು ಮತ್ತು ನನ್ನನ್ನು ಆಶೀರ್ವದಿಸಿದರು. ದುಬಾರಿ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗದ ಜನರಿಗೆ ಸಹಾಯವಾಗಲು ಕಡಪಾ ಪ್ರದೇಶದಲ್ಲಿ ನನ್ನ ಕ್ಲಿನಿಕ್ ಅನ್ನು ತೆರೆದಿದ್ದೇನೆ ಎಂದು ಡಾ ಪರ್ವೀನಾ ಹೇಳಿದರು.

    ನಾನು ಬಡವರಿಗೆ ಸಹಾಯ ಮಾಡುವ ಸ್ಪೂರ್ತಿ ನನ್ನ ತಂದೆ- ತಾಯಿಯಿಂದ ಬಂದಿದೆ. ನನ್ನ ಪೋಷಕರು ಮೂರು ಮಕ್ಕಳನ್ನು ದತ್ತು ಪಡೆದುಕೊಂಡು ಅವರಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಈ ಮೂಲಕವಾಗಿ ನನಗೆ ಜನರ ಸೇವೆ ಮಾಡುವ ಆಲೋಚನೆ ಬಂದಿದೆ ಎಂದು ಹೇಳುತ್ತಾರೆ.

    ಹೊರರೋಗಿ ಗಳಿಗೆ 10 ರೂ., ಬೆಡ್ ಚಾರ್ಜ್ 50.ರೂ ಮಾತ್ರ ತೆಗೆದುಕೊಳ್ಳುತ್ತೇನೆ. ಪ್ರತಿದಿನ ಸುಮಾರು 40 ರೋಗಿಗಳು ನನ್ನ ಚಿಕಿತ್ಸಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಪರ್ವೀನಾ ಹೇಳುತ್ತಾರೆ.

    ಜಿಲ್ಲಾ ಕೇಂದ್ರ ನಗರದಲ್ಲಿ, ಸಾಮಾನ್ಯವಾಗಿ ಖಾಸಗಿ ವೈದ್ಯರು ಪ್ರತಿ ಭೇಟಿಗೆ 150 ರಿಂದ 200 ರೂ. ವರೆಗೆ ಶುಲ್ಕ ವಿಧಿಸುತ್ತಾರೆ. 10 ರೂ. ಗೆ ಚಿಕಿತ್ಸೆ ನೀಡುವ ಡಾ. ನೂರ್ ಪರ್ವೀನಾ ಬಡವರಿಗೆ ಮತ್ತು ನಿರ್ಗತಿಕರಿಗೆ ಭರವಸೆಯ ಕಿರಣವಾಗಿದ್ದಾರೆ.

     

    ಕ್ಲಿನಿಕ್ ಅನ್ನು ಪ್ರಾರಂಭಿಸುವ ಮೊದಲು ಡಾ. ಪರ್ವೀನಾ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯ ಎರಡು ಸಾಮಾಜಿಕ ಸಂಘಟನೆಯನ್ನು ಪ್ರಾರಂಭಿಸಿದ್ದರು. ಒಂದು ಸಂಸ್ಥೆ, ಸ್ಪೂರ್ತಿದಾಯಕ ಆರೋಗ್ಯಕರ ಯಂಗ್ ಇಂಡಿಯಾ, ಮಕ್ಕಳು ಮತ್ತು ಯುವಜನರಿಗೆ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಸ್ಫೂರ್ತಿ ನೀಡಲು ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದರು. ತನ್ನ ಅಜ್ಜನ ನೆನಪಿಗಾಗಿ ‘ನೂರ್ ಚಾರಿಟೇಬಲ್ ಟ್ರಸ್ಟ್’ ಅನ್ನು ಸಹ ಪ್ರಾರಂಭಿಸಿದ್ದಾರೆ. ಈ ಟ್ರಸ್ಟ್‍ನ ಅಡಿಯಲ್ಲಿಯೇ ಅವರು ಕೊವೀಡ್ 19 ಸಾಂಕ್ರಾಮಿಕ ರೋಗದಿಂದ ಉಂಟಾದ ಲಾಕ್‍ಡೌನ್ ಸಮಯದಲ್ಲಿ ಬಡವರಿಗೆ ಸಹಾಯ ಮಾಡಿದ್ದರು.

    ಡಾ. ಪರ್ವೀನ್ ಅವರ ಮುಂದಿನ ಯೋಜನೆಗಳಲ್ಲಿ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯುವುದು ಮತ್ತು ಹಿಂದುಳಿದ ವಿಭಾಗಗಳ ಮೇಲೆ ವಿಶೇಷ ಗಮನಹರಿಸಿ ಬಹು-ವಿಶೇಷ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿದೆ.

    ಡಾ.ನೂರ್ ಪರ್ವೀನಾ ಅವರ ಸಾಮಾಜಿಕ ಸೇವೆಯಯನ್ನು ಗುರುತಿಸಿ ಪ್ರಶಸ್ತಿಗಳು ದೊರಕಿವೆ. ಅನೇಕ ಸಾಮಾಜಿಕ ಸಂಸ್ಥೆಗಳು ಇವರನ್ನು ಗುರುತಿಸಲು ಪ್ರಾರಂಭಿಸಿವೆ.

  • ಖಾಸಗಿ ವೈದ್ಯನಿಂದ ಜನರ ಬಳಿಗೆ ತೆರಳಿ ಕೋವಿಡ್ ಜಾಗೃತಿ-ಉಚಿತ ಚಿಕಿತ್ಸೆ

    ಖಾಸಗಿ ವೈದ್ಯನಿಂದ ಜನರ ಬಳಿಗೆ ತೆರಳಿ ಕೋವಿಡ್ ಜಾಗೃತಿ-ಉಚಿತ ಚಿಕಿತ್ಸೆ

    -ಆಸ್ಪತ್ರೆ ಬಿಟ್ಟು ಹಳ್ಳಿಗಳಿಗೆ ತೆರಳಿ ಬಡ ಜನರಿಗೆ ಉಚಿತ ವೈದ್ಯಕೀಯ ಸೇವೆ

    ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ನಿಂದ ಇಡೀ ವಿಶ್ವವೇ ತಲ್ಲಣಗೊಂಡಿದೆ. ಈ ಸಂದರ್ಭದಲ್ಲಿ ವೈದ್ಯರ ಸೇವೆ ಮಹತ್ವ ಎಷ್ಟೆಂಬುದು ಎಲ್ಲರಿಗೂ ಅರಿವಾಗಿದೆ. ಆದ್ರೂ ಇಂತಹ ಸಂದರ್ಭದಲ್ಲೂ ಕೆಲ ವೈದ್ಯರು ಕೊರೊನಾಗೆ ಹೆದರಿ ಆಸ್ಪತ್ರೆ ಲಾಕ್ ಮಾಡಿದ್ದು ಉಂಟು. ಆದ್ರೆ ಇಲ್ಲೊಬ್ಬ ಖಾಸಗಿ ಆಸ್ಪತ್ರೆ ವೈದ್ಯರು ಮಾತ್ರ ತಮ್ಮ ಆಸ್ಪತ್ರೆ ಮುಚ್ಚಿ ನೇರವಾಗಿ ಜನರ ಬಳಿಯೇ ಹಳ್ಳಿಗಳಿಗೆ ತೆರಳಿ ಉಚಿತ ವೈದ್ಯಕೀಯ ಸೇವೆ ಕೊಡ್ತಿದ್ದಾರೆ. ರಾಷ್ಟ್ರೀಯ ವೈದ್ಯರ ದಿನದಿಂದ ಸಮಾಜಮುಖಿ ಮಾದರಿ ವೈದ್ಯರ ಕಾರ್ಯ ನೆನೆಯುವ ವರದಿ ಇದಾಗಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದ ಪೀಪಲ್ಸ್ ಖಾಸಗಿ ಆಸ್ಪತ್ರೆಯ ವೈದ್ಯ ಅನಿಲ್ ಕುಮಾರ್ ಕೋವಿಡ್-19 ಸಂಕಷ್ಟದ ಸಮಯದಲ್ಲಿ ತಮ್ಮ ತಾಲೂಕಿನ ಬಡ ಜನರ ಆರೋಗ್ಯ ಕಾಯೋಕೆ ಮುಂದಾಗಿದ್ದಾರೆ. ಕೊರೊನಾ ಆರಂಭದಿಂದ ಹಾಗೂ ಲಾಕ್‍ಡೌನ್ ಆದ ನಂತರ ಖುದ್ದು ತಾವೇ ಪ್ರತಿದಿನ 2-3 ಹಳ್ಳಿಗಳಂತೆ ಹಳ್ಳಿ ಹಳ್ಳಿಗೂ ಹೋಗಿ ಜನರ ಆರೋಗ್ಯ ತಪಾಸಣೆ ಮಾಡುತ್ತಾ ಬರುತ್ತಿದ್ದಾರೆ.

    ಕೇವಲ ಆರೋೀಗ್ಯ ತಪಾಸಣೆ ಅಷ್ಟೇ ಅಲ್ಲದೆ ಆನಾರೋಗ್ಯ ಪೀಡಿತರಿಗೆ ವೈದ್ಯಕೀಯ ಸಲಹೆ ಸೇವೆ ಮಾಡುತ್ತಾ ಉಚಿತವಾಗಿ ಔಷಧಿಗಳನ್ನ ಕೊಡುತ್ತಿದ್ದಾರೆ. ಲಾಕ್‍ಡೌನ್ ಇರುವವರೆಗೂ ಹಳ್ಳಿ ಹಳ್ಳಿಗಳಿಗೂ ತೆರಳಿ ಸೇವೆ ನೀಡಿದ್ದ ವೈದ್ಯ ಅನಿಲ್ ಕುಮಾರ್, ಈಗ ಜನ ನರೇಗಾ ಮೂಲಕ ಕೆಲಸ ಮಾಡುವ ಆಯಕಟ್ಟಿನ ಸ್ಥಳಗಳಿಗೆ ತೆರಳಿ ಆರೋಗ್ಯ ತಪಾಸಣೆಗೆ ಮುಂದಾಗಿದ್ದಾರೆ. ಬಡ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಕೋವಿಡ್ 19 ವಿರುದ್ಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

    ಇಷ್ಟು ದಿನ ಬಾಗೇಪಲ್ಲಿ ತಾಲೂಕಿನಲ್ಲಿ ಮಾಡುತ್ತಿದ್ದ ಸೇವೆಯನ್ನ ಈಗ ಪಕ್ಕದ ಗುಡಿಬಂಡೆ ಗೌರಿಬಿದನೂರು ತಾಲೂಕಿಗೆ ವಿಸ್ತರಿಸುತ್ತಿದ್ದು, ವೈದ್ಯರ ಈ ಸೇವೆಯನ್ನ ಜನ ಕೊಂಡಾಡುತ್ತಿದ್ದಾರೆ. ಒಟ್ಟಿನಲ್ಲಿ ಬಾಗೇಪಲ್ಲಿಯ ಪೀಪಲ್ಸ್ ಆಸ್ಪತ್ರೆ ಅಂದ್ರೆ ಜನಸಾಮಾನ್ಯರ ವೈದ್ಯ ಅಂತಲೇ ಪ್ರಖ್ಯಾತ ಪಡೆದಿರುವ ವೈದ್ಯ ಅನಿಲ್ ಕುಮಾರ್ ಕೋವಿಡ್ ಸಂಕಷ್ಟದ ಸಮಯದಲ್ಲಿ ತಮ್ಮ ಸೇವೆಯನ್ನ ಕರ್ತವ್ಯ ಅಂತ ಭಾವಿಸಿ ಬಡ ಜನರ ಸೇವೆ ಮಾಡುತ್ತಿರೋದು ನಿಜಕ್ಕೂ ಶ್ಲಾಘನೀಯವೇ ಸರಿ. ರಾಷ್ಟ್ರೀಯ ವೈದ್ಯರ ದಿನದಂದು ಈ ವೈದ್ಯರಿಗೆ ನಮ್ಮದೊಂದು ಸಲಾಂ.

  • ಎರಡನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಮುಷ್ಕರ

    ಎರಡನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಮುಷ್ಕರ

    -ಇಂದು ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕಾರ್ಮಿಕರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಂದಿನಂತೆ ಸಾರಿಗೆ ಬಸ್ ಗಳು ರಸ್ತೆಗೆ ಇಳಿದಿವೆ. ಎಂದಿನಂತೆ ಬಸ್ ಗಳ ಸಂಚಾರ ಅರಂಭಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮಂಗಳವಾರ ಬಂದ್ ಹಿನ್ನೆಲೆಯಲ್ಲಿ ಕೆಲ ಬಸ್ ಗಳು ಸಂಚಾರ ಆರಂಭಿಸಿದ್ದರೂ., ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದ್ದವು. ಇಂದು ಬೆಳಗ್ಗೆಯಿಂದಲೇ ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳಿಗಾಗಿ ಹೊರ ಬಂದಿದ್ದಾರೆ.

    ಮಂಗಳವಾರದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬಸ್‍ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ, ಕೆಎಸ್‍ಆರ್‍ಟಿಸಿ ನಿರ್ಧರಿಸಿದೆ. ಮೆಜೆಸ್ಟಿಕ್‍ನಿಂದ ಬಸ್‍ಗಳು ಆಟೋ, ಓಲಾ, ಊಬರ್ ಎಲ್ಲಾ ಸೌಲಭ್ಯಗಳು ಲಭ್ಯವಿದೆ. ರಾಯಚೂರು, ಬಳ್ಳಾರಿ ಹೊರತುಪಡಿಸಿ ಶಾಲಾ-ಕಾಲೇಜುಗಳಿಗಿಲ್ಲ ರಜೆ. ಎಂದಿನಂತೆ ಎಲ್ಲ ಶಾಲಾ-ಕಾಲೇಜುಗಳು ತೆರೆಯಲಿದ್ದು, ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

    ಇಂದು ಏನಿರುತ್ತೆ?
    ಸರ್ಕಾರಿ ಶಾಲೆ ಕಾಲೇಜು, ಸರ್ಕಾರಿ ಕಚೇರಿಗಳು, ಚಿತ್ರಪ್ರದರ್ಶನ, ಶಾಪಿಂಗ್ ಮಾಲ್, ಕ್ಯಾಬ್ ಸೇವೆ, ಮೆಟ್ರೋ ಸೇವೆ, ಹೋಟೆಲ್, ಎಪಿಎಂಸಿ ಮಾರುಕಟ್ಟೆ, ಬೀದಿಬದಿ ವ್ಯಾಪಾರ, ಆಸ್ಪತ್ರೆ, ಮೆಡಿಕಲ್ ಶಾಪ್, ಆ್ಯಂಬುಲೆನ್ಸ್, ಹಾಲು, ತರಕಾರಿ ಸಿಗಲಿದೆ.

    ಇಂದು ಏನಿರಲ್ಲ?
    ಬಿಎಂಟಿಸಿ-ಕೆಎಸ್‍ಆರ್ ಟಿಸಿ ವಿರಳ ಸಂಚಾರ, ಆಟೋ ಸಂಚಾರದಲ್ಲಿ ವ್ಯತ್ಯಯ ಸಾದ್ಯತೆ, ಕೆಲ ಖಾಸಗಿ ಶಾಲಾ ಕಾಲೇಜುಗಳು, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ, ಕೆಲ ಗಾರ್ಮೆಂಟ್ಸ್, ಫ್ಯಾಕ್ಟರಿಗಳು ಕ್ಲೋಸ್.

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎರಡು ದಿನಗಳ ಮುಷ್ಕರ ನಡೆಸುತ್ತಿರುವ ಕಾರ್ಮಿಕರು ಗದಗ, ವಿಜಯಪುರ, ಕಲಬುರಗಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದರು.ಸ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಹೋರಾಟಗಾರರು ಅಡುಗೆ ಮಾಡಿ ಪ್ರತಿಭಟನೆ ನಡೆಸಿದರು. ಇಂದು ಸಹ ಹೋರಾಟ ಮುಂದುವರೆಯಲ್ಲಿದ್ದು, ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ರೈಲು ನಿಲ್ದಾಣದವರಗೆ ಪಾದಯಾತ್ರೆ ನಡೆಯಲಿದೆ. ನಂತರ ರೈಲು ತಡೆದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಬಾಗಲಕೋಟೆಯ ಎಪಿಎಂಸಿ ಬಳಿ ಎರಡು ಬಸ್‍ಗಳಿಗೆ ಕಲ್ಲು ತೂರಿದರು. ಹುಬ್ಬಳ್ಳಿಯಲ್ಲಿ ಇವತ್ತು ಕೂಡ ಸಾರಿಗೆ ಸ್ತಬ್ಧವಾಗಲಿದೆ. ಬ್ಯಾಂಕ್ ಸೇವೆ ಕೂಡ ಸ್ಥಗಿತವಾಗಲಿದೆ. ಬ್ಯಾಂಕ್, ಅಂಚೆ, ವಾಯುವ್ಯ ಸಾರಿಗೆ ಸೇರಿದಂತೆ ಹಲವಾರು ಇಲಾಖೆಯ ಕಾರ್ಮಿಕರು ಇಂದು ಸಾಮೂಹಿಕ ಪ್ರತಿಭಟನೆ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದಿನಿಂದ 23 ವಸ್ತುಗಳ ಬೆಲೆ ಇಳಿಕೆ: ಸಿನಿಮಾ ಟಿಕೆಟ್ ಬೆಲೆ ಎಷ್ಟು ಇಳಿಕೆಯಾಗುತ್ತೆ?

    ಇಂದಿನಿಂದ 23 ವಸ್ತುಗಳ ಬೆಲೆ ಇಳಿಕೆ: ಸಿನಿಮಾ ಟಿಕೆಟ್ ಬೆಲೆ ಎಷ್ಟು ಇಳಿಕೆಯಾಗುತ್ತೆ?

    ನವದೆಹಲಿ: ಹೊಸ ವರ್ಷಕ್ಕೆ ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ದರ ಇಳಿಕೆಯಾಗುವುದರ ಜೊತೆಗೆ ಇಂದಿನಿಂದ 23 ವಸ್ತುಗಳ ಬೆಲೆಯೂ ಕಡಿಮೆಯಾಗಲಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದ ಜಿಎಸ್‍ಟಿ ಮಂಡಳಿ ಶೇ.28 ತೆರಿಗೆ ಶ್ರೇಣಿಯಲ್ಲಿದ್ದ ವಸ್ತುಗಳ ತೆರಿಗೆಯನ್ನು ಕಡಿತಗೊಳಿಸಿತ್ತು. ಜಿಎಸ್‍ಟಿ ಮಂಡಳಿ ಘೋಷಿಸಿದ್ದ ಸೇವೆಗಳ ಮೇಲಿನ ತೆರಿಗೆ ಇಳಿಕೆ ಹೊಸ ವರ್ಷದ ಮೊದಲ ದಿನವಾದ ಇಂದಿನಿಂದ ಜಾರಿಗೆ ಬರಲಿದೆ.

    ಯಾವ ವಸ್ತುಗಳ ತೆರಿಗೆ ಇಳಿಕೆಯಾಗಿದೆ?
    ಮಾನಿಟರ್, 32 ಇಂಚು ಟಿ.ವಿ ಸ್ಕ್ರೀನ್, ಟೈರ್, ಪವರ್ ಬ್ಯಾಂಕ್‍ಗಳ ಲಿಥಿಯಂ ಬ್ಯಾಟರಿ, ಗೇರ್ ಬಾಕ್ಸ್, ವಿಡಿಯೊ ಗೇಮ್, ಡಿಜಿಟಲ್ ಕ್ಯಾಮೆರಾ, ವಿಡಿಯೊ ರೆಕಾರ್ಡರ್ ಮೇಲಿದ್ದ ತೆರಿಗೆ ಶೇ.28 ರಿಂದ ಶೇ.18ಕ್ಕೆ ತಗ್ಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಗುಡ್‍ನ್ಯೂಸ್ – ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ: ಯಾವ ನಗರದಲ್ಲಿ ಎಷ್ಟು?

    ಅಂಗವಿಕಲ ವ್ಯಕ್ತಿಗಳಿಗೆ ಬೇಕಾಗುವ ಸಾಧನಗಳ ಮೇಲಿದ್ದ ತೆರಿಗೆ ಶೇ.28 ರಿಂದ ಶೇ.5ಕ್ಕೆ ಇಳಿಕೆಯಾಗಿದ್ದರೆ, ಶಿಲೆಗಳ ಮೇಲಿದ್ದ ತೆರಿಗೆ ಶೇ.18 ರಿಂದ ಶೇ. 12ಕ್ಕೆ ಇಳಿದಿದೆ. ಶೇ.18 ರಿಂದ ಶೇ.5ಕ್ಕೆ ಮಾರ್ಬಲ್ ಮೇಲಿದ್ದ ತೆರಿಗೆ ತಗ್ಗಿದರೆ, ವಾಕಿಂಗ್ ಸ್ಟಿಕ್, ಹಾರುವ ಬೂದಿಯಿಂದ ತಯಾರಿಸುವ ಇಟ್ಟಿಗೆ ಮೇಲಿದ್ದ ತೆರಿಗೆ ಶೇ.12 ರಿಂದ ಶೇ.5ಕ್ಕೆ ಇಳಿಕೆಯಾಗಿದೆ. ಮ್ಯೂಸಿಕ್ ಪುಸ್ತಕಗಳ ಮೇಲಿದ್ದ ಶೇ.12 ತೆರಿಗೆಯನ್ನು ಸಂಪೂರ್ಣ ತೆಗೆದುಹಾಕಲಾಗಿದೆ.

    ಸಿನಿಮಾ ಟಿಕೆಟ್ ಅಗ್ಗ
    ಸಿನಿ ವೀಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 100 ರೂ. ತನಕದ ಟಿಕೆಟ್ ಮೇಲೆ ಶೇ.18ರಷ್ಟಿದ್ದ ಜಿಎಸ್‍ಟಿಯನ್ನು ಶೇ.12ಕ್ಕೆ ಇಳಿಸಲಾಗಿದೆ. 100 ರೂ.ಗಿಂತ ಹೆಚ್ಚಿನ ದರದ ಟಿಕೆಟ್ ಮೇಲೆ ಶೇ.28ರಷ್ಟಿದ್ದ ಜಿಎಸ್‍ಟಿ ಶೇ.18ಕ್ಕೆ ತಗ್ಗಿದೆ. ಸರಕು ಸಾಗಣೆ ವಾಹನಗಳ ಮೇಲಿನ ಥರ್ಡ್ ಪಾರ್ಟಿ ಇನ್ಶೂರೆನ್ಸ್ ಪ್ರೀಮಿಯಂ ಮೊದಲಾದವುಗಳ ಮೇಲಿದ್ದ ತೆರಿಗೆ ಶೇ.18 ರಿಂದ ಶೇ.12ಕ್ಕೆ ಇಳಿಕೆಯಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಗಿಫ್ಟ್ – ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

    ಕಳೆದ ಡಿ.22ರಂದು ಸಭೆ ಸೇರಿದ್ದ ಜಿಎಸ್‍ಟಿ ಮಂಡಳಿ ದರ ಇಳಿಕೆಗೆ ನಿರ್ಧಾರ ಕೈಗೊಂಡಿತ್ತು. ಈ ನಿರ್ಧಾರದಿಂದಾಗಿ ಶೇ.28 ತೆರಿಗೆ ದರ ಹೊಂದಿರುವ ವಸ್ತುಗಳ ಸಂಖ್ಯೆ ಸದ್ಯ 28ಕ್ಕೆ ಇಳಿಕೆಯಾಗಿದೆ. 2017ರ ಜು.1ರಂದು ಜಿಎಸ್‍ಟಿ ಜಾರಿಯಾದಾಗ ಶೇ.28ರ ತೆರಿಗೆ ವ್ಯಾಪ್ತಿಯಲ್ಲಿ 226 ಸರಕುಗಳು ಇದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುಬೈನಲ್ಲಿ 1 ವಾರ ಗ್ರಾಹಕ ಸೇವಾ ಕಚೇರಿ ಬಂದ್- ಸರ್ಕಾರದ ನಡೆಗೆ ಜನರಿಂದ ಶ್ಲಾಘನೆ

    ದುಬೈನಲ್ಲಿ 1 ವಾರ ಗ್ರಾಹಕ ಸೇವಾ ಕಚೇರಿ ಬಂದ್- ಸರ್ಕಾರದ ನಡೆಗೆ ಜನರಿಂದ ಶ್ಲಾಘನೆ

    ದುಬೈ: ಜನರನ್ನು ಪೂರ್ವಭಾವಿಯಾಗಿ ಆನ್‍ಲೈನ್ ವ್ಯವಸ್ಥೆಗೆ ತೆರೆದುಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದುಬೈನಲ್ಲಿ ಎಲ್ಲಾ ಗ್ರಾಹಕ ಸೇವಾ ಕಚೇರಿಗಳನ್ನು ಒಂದು ವಾರಗಳ ಕಾಲ ಸ್ಥಗಿತಗೊಳಿಸಲು ದುಬೈ ಸರ್ಕಾರ ನಿರ್ಧರಿಸಿದೆ.

    2021ಕ್ಕೆ ದುಬೈಯನ್ನು ಸಂಪೂರ್ಣವಾಗಿ ಸ್ಮಾರ್ಟ್ ಸಿಟಿಯಾಗಿ ಪರಿವರ್ತಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆನ್‍ಲೈನ್ ವ್ಯವಹಾರವನ್ನು ಪ್ರೋತ್ಸಾಹಿಸಲು ಇಂತಹ ನಿರ್ಧಾರಕ್ಕೆ ಬಂದಿದೆ. ಎಲ್ಲಾ ಸೇವೆಗಳು ಅಕ್ಟೋಬರ್ 21 ರಿಂದ ಅಕ್ಟೋಬರ್ 25ರ ವರೆಗೆ ತನ್ನ ಕಾರ್ಯವನ್ನು ಸ್ಥಗಿತಗೊಳಿಸಲಿದೆ.

    ಈ ಹಿಂದೆ “ದ ಡೇ ವಿತೌಟ್ ಸರ್ವಿಸ್ ಸೆಂಟರ್ಸ್” ಹೆಸರಿನಲ್ಲಿ ಅಭಿಯಾನ ಆರಂಭಿಸಿತ್ತು. ಈಗ “ದ ವೀಕ್ ವಿತೌಟ್ ಸರ್ವಿಸ್ ಸೆಂಟರ್ಸ್” ಹೆಸರಿನಲ್ಲಿ ಅಭಿಯಾನ ಆರಂಭವಾಗಿದೆ. ದುಬೈ ದೊರೆ ಮಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಕಳೆದ ವರ್ಷವೇ ಈ ಅಭಿಯಾನಕ್ಕೆ ಒಪ್ಪಿಗೆ ಸೂಚಿಸಿದ್ದರು.

    ಈ ಅಭಿಯಾನಕ್ಕೆ ಮೆಚ್ಚುಗೆ ಸೂಚಿಸಿರುವ ದುಬೈ ನಾಗರಿಕರು, ಸರ್ಕಾರದ ಈ ನಡೆಗೆ ಪ್ರೋತ್ಸಾಹ ನೀಡಿದ್ದಾರೆ. ಇದರಿಂದ ನಗರದ ಟ್ರಾಫಿಕ್ ಸಮಸ್ಯೆ, ಸಮಯದ ಉಳಿತಾಯ, ಹಣ ಮತ್ತು ಶಕ್ತಿಯ ಬಳಕೆಯನ್ನ ಕಡಿಮೆಗೊಳಿಸಲು ಉತ್ತಮ ನಡೆ ಎಂದು ಶ್ಲಾಘಿಸಿದ್ದಾರೆ.

    ಕಳೆದ ವರ್ಷದ ಅಕ್ಟೋಬರ್ 26 ರಿಂದ ಈ ಅಭಿಯಾನ ಆರಂಭಗೊಂಡಿದ್ದು, ಒಂದು ವರ್ಷದಲ್ಲಿ ಇಂಟರ್ ನೆಟ್ ವ್ಯವಹಾರ ಪ್ರಕ್ರಿಯೆಯಿಂದ ಸರ್ಕಾರಕ್ಕೆ ಭಾರೀ ಆದಾಯ ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಸರ್ಕಾರಿ ಗ್ರಾಹಕ ಸೇವಾ ಕಚೇರಿಗಳು ತೆರೆಯದೇ ಇದ್ದರೂ ಜನರು ಮೊಬೈಲ್ ಆ್ಯಪ್ ಅಥವಾ ವೆಬ್ ಸೈಟಿಗೆ ತೆರಳಿ ಈ ಸೇವೆಯನ್ನು ಪಡೆಯಬಹುದು ಎಂದು ದುಬೈ ಸರ್ಕಾರ ಹೇಳಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv