Tag: Sewage Water

  • ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವು

    ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವು

    ಬಳ್ಳಾರಿ: ಮನೆ ಹತ್ತಿರ ನಿಂತಿದ್ದ ಚರಂಡಿ ನೀರಿಗೆ (Sewage Water) ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹೊಸಪೇಟೆ (Hospet) ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ.

    ವಿರಾಟ್.ಜೆ (4) ಮೃತ ಬಾಲಕ. ಬಾಲಕನ ಮನೆ ಹತ್ತಿರದ ಖಾಲಿ ಜಾಗದಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲು ಹೋದ ಸಂದರ್ಭ ನೀರು ನಿಂತಿರುವುದನ್ನು ಗಮನಿಸದೇ ಬಾಲಕ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಭಾರತದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ ಯಶಸ್ವಿ ಉಡಾವಣೆ

    ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸುದ್ದಿ ತಿಳಿದು ಹೊಸಪೇಟೆ ಶಾಸಕ ಹೆಚ್‌ಆರ್ ಗವಿಯಪ್ಪ ಆಸ್ಪತ್ರೆಗೆ ದೌಡಾಯಿಸಿ ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪಟ್ಟಣದಲ್ಲಿ ಚರಂಡಿ ನೀರು ನಿಂತಿರೋ ಪ್ರದೇಶಗಳನ್ನು ಕೂಡಲೇ ಸ್ವಚ್ಛಗೊಳಿಸುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ – ಅಸ್ಸಾಂ ಹತ್ಯಾಚಾರ ಆರೋಪಿ ಕೊಳಕ್ಕೆ ಬಿದ್ದು ಸಾವು

  • ಕುಡಿಯುವ ನೀರಿನ ಪೈಪ್‌ಗೆ ಸೇರಿದ ಚರಂಡಿ ನೀರು – ಒಂದು ವಾರದಲ್ಲಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

    ಕುಡಿಯುವ ನೀರಿನ ಪೈಪ್‌ಗೆ ಸೇರಿದ ಚರಂಡಿ ನೀರು – ಒಂದು ವಾರದಲ್ಲಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

    ರಾಯಚೂರು: ಕಲುಷಿತ ನೀರು (Contaminated Water) ಕುಡಿದು ಕಳೆದ ಒಂದು ವಾರದಿಂದ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasugur) ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ನಡೆದಿದೆ.

    ಆಗಸ್ಟ್ 5ರಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಕುಡಿಯುವ ನೀರಿನ ಪೈಪ್‌ಗೆ ಚರಂಡಿ ನೀರು (Sewage Water) ಸೇರಿದ ಪರಿಣಾಮ ಘಟನೆ ನಡೆದಿದೆ. ಫುಡ್ ಪಾಯಿಸನ್ (Food Poison) ಎಂದುಕೊಂಡು ಗ್ರಾಮದಲ್ಲೇ ಚಿಕಿತ್ಸೆ ಪಡೆದಿದ್ದ ಜನ ವಾಂತಿ, ಭೇದಿ, ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಲಿಂಗಸುಗೂರು ತಾಲೂಕಿನ ವಿವಿಧ ಆಸ್ಪತ್ರೆಗಳಿಗೆ 20 ಜನ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ತಾನು ಸಾಕಿದ ಗುಂಡಾಗಳಿಂದ ನನ್ನ ಹತ್ಯೆಗೆ ಸಂಚು: ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ

    ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಅಸ್ವಸ್ಥಗೊಂಡ ಗ್ರಾಮಸ್ಥರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಪತ್ತೆಯಾಗಿದ್ದು ಚಿರತೆಯಲ್ಲ, ಅದು ಕಿರುಬ ಬೆಕ್ಕು!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

    ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

    ಚಿಕ್ಕೋಡಿ (ಬೆಳಗಾವಿ): ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮಾರ್ಚ್ 28ರಂದು ಎಸಗಿದ್ದು, ವಿಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಈ ಸಂಬಂಧ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನ ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.

  • ಸೆಕ್ಸ್ ಮಾಡಿದ್ದಾರೆಂದು ರೂಮಿನಿಂದ ಹೊರಗೆಳೆದು ಜೋಡಿಯ ಮೇಲೆ ಚರಂಡಿ ನೀರು ಹಾಕಿದ್ರು- ವಿಡಿಯೋ ವೈರಲ್

    ಸೆಕ್ಸ್ ಮಾಡಿದ್ದಾರೆಂದು ರೂಮಿನಿಂದ ಹೊರಗೆಳೆದು ಜೋಡಿಯ ಮೇಲೆ ಚರಂಡಿ ನೀರು ಹಾಕಿದ್ರು- ವಿಡಿಯೋ ವೈರಲ್

    ಜಕಾರ್ತಾ: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಭೇಟಿಯಾಗಲು ಆತನ ರೂಮಿಗೆ ಹೋಗಿದಾಗ ಅಲ್ಲಿದ್ದ ಸಾರ್ವಜನಿಕರು ಅವರಿಬ್ಬರು ದೈಹಿಕ ಸಂಬಂಧ ಬೆಳೆಸಿದ್ದಾರೆಂದು ಅನುಮಾನಗೊಂಡು ಅವರನ್ನು ರೂಮಿನಿಂದ ಎಳೆದು ತಂದು ಚರಂಡಿ ನೀರನ್ನು ಹಾಕಿದ ಘಟನೆ ಸುಮಾತ್ರಾ ದ್ವೀಪದ ಕೇಯಿ ಲೀ ಗ್ರಾಮದಲ್ಲಿ ನಡೆದಿದೆ.

    ಈ ಘಟನೆ ಮಾರ್ಚ್ 7ರಂದು ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಯುವಕ ಕಂದು ಬಣ್ಣದ ಶರ್ಟ್, ಜಿನ್ಸ್ ಧರಿಸಿ ಚರಂಡಿ ಮುಂದೆ ತಲೆ ತಗ್ಗಿಸಿ ನಿಂತಿದ್ದು, ಯುವತಿ ಆತನ ಪಕ್ಕದಲ್ಲೇ ಕುಳಿತಿದ್ದಾಳೆ.

    ನಂತರ ವ್ಯಕ್ತಿಯೊಬ್ಬ ಇವರ ಮೇಲೆ ಚರಂಡಿ ನೀರನ್ನು ಹಾಕಿ ನೀನು ಮಾಡಿದ್ದು ಇಸ್ಲಾಂ ಧರ್ಮಕ್ಕೆ ವಿರುದ್ಧ. ಇದು ನಿನಗೆ ತಕ್ಕ ಪಾಠ ಎಂದು ಗುಂಪಿನಲ್ಲಿ ಸಾರ್ವಜನಿಕರು ಹೇಳಿದ್ದಾರೆ. ಸ್ವಲ್ಪ ಸಮಯದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆ ಜೋಡಿಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು ಎಂದು ಪ್ರತಿಕೆಯೊಂದರಲ್ಲಿ ವರದಿಯಾಗಿದೆ.

    18 ವರ್ಷದ ಯುವತಿ ತನ್ನ ಪ್ರಿಯಕರನನ್ನು ಭೇಟಿ ಮಾಡಲು ಯಾರೂ ಇಲ್ಲದ ವೇಳೆ ಆತನ ರೂಮಿಗೆ ಹೋಗಿದ್ದಳು. ಅಕ್ಕಪಕ್ಕದ ಮನೆಯವರ ಪ್ರಕಾರ ಅವರಿಬ್ಬರು ಅಲ್ಲಿ ಸೆಕ್ಸ್ ಮಾಡಲು ಯೋಚಿಸುತ್ತಿದ್ದರು. ನಂತರ ಸಾರ್ವಜನಿಕರು ಅವರನ್ನು ಎಳೆದು ತಂದು ಶಿಕ್ಷೆ ನೀಡಿದ್ದಾರೆ ಎಂದು ಇಂಗಿನ್ ಜಯಾ ಪೊಲೀಸ್ ಅಧಿಕಾರಿಯಾದ ನಜರುಲ್ ಪಿತ್ರಾ ತಿಳಿಸಿದ್ದಾರೆ.

    ಸದ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಈ ಜೋಡಿಯ ಮೇಲಿರುವ ಆರೋಪ ನಿಜವಾದರೆ 100 ಹೊಡೆತ ಹಾಗೂ 15 ತಿಂಗಳ ಬಂಧನ ಅಥವಾ 150 ಗ್ರಾಂ ಚಿನ್ನಕ್ಕೆ ಸಮನಾದ ಹಣವನ್ನು ನೀಡಬೇಕೆಂದು ಪಿತ್ರಾ ಹೇಳಿದ್ದಾರೆ.

    https://www.youtube.com/watch?v=LBtKc85tZBE