Tag: Sexual Harassement

  • ಮಸೀದಿಯಲ್ಲಿ ಮೌಲ್ವಿಯಿಂದ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಬಂಧನ

    ಮಸೀದಿಯಲ್ಲಿ ಮೌಲ್ವಿಯಿಂದ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಬಂಧನ

    ಕಾರವಾರ: ಕುರಾನ್ ಓದಲು ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ (Mawlawi) ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ.

    ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನ ಮಾಡಲಾಗಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಪಶ್ಚಿಮ ಬಂಗಾಳ ಮೂಲದ ಅಬ್ಬುಸ್ ಸಮದ್ ಜಿಯಾಯಿ (25) ಬಂಧಿತ ಮೌಲ್ವಿಯಾಗಿದ್ದಾನೆ. ನಿನ್ನೆ ರಾತ್ರಿ ಬಾಲಕನಿಗೆ ಮಸೀದಿಯಲ್ಲಿ ವಸ್ತ್ರ ಬಿಚ್ಚಿಸಿ ಲೈಂಗಿಕ ದೌರ್ಜನ್ಯವೆಸಗಿದ್ದನು.

    ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಭಗವಾಧ್ವಜ ಹಾರಿಸಿ ಪರಾರಿಯಾದ ಕಿಡಿಗೇಡಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ವಾಮೀಜಿಗಳ ಲೈಂಗಿಕ ದೌರ್ಜನ್ಯ ಆರೋಪದ ಕೇಸನ್ನು ಸಿಬಿಐಗೆ ಒಪ್ಪಿಸಿ: ಹಿಂದೂಸ್ತಾನ್ ಜನತಾ ಪಕ್ಷ ಒತ್ತಾಯ

    ಸ್ವಾಮೀಜಿಗಳ ಲೈಂಗಿಕ ದೌರ್ಜನ್ಯ ಆರೋಪದ ಕೇಸನ್ನು ಸಿಬಿಐಗೆ ಒಪ್ಪಿಸಿ: ಹಿಂದೂಸ್ತಾನ್ ಜನತಾ ಪಕ್ಷ ಒತ್ತಾಯ

    ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾಗಿರುವ ಮುರುಘಾ ಶ್ರೀ ಮಠದ ಸ್ವಾಮೀಜಿಗಳ ಮೇಲೆ ಬಂದಿರುವಂತಹ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆ ಸೂಕ್ತ ಮಟ್ಟದಲ್ಲಿ ನಡೆಯುತ್ತಿಲ್ಲ ಎನ್ನುವುದು ಸಾರ್ವಜನಿಕರಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಆದ್ದರಿಂದ ಈ ಕೇಸನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಹಿಂದುಸ್ತಾನ್ ಜನತಾ ಪಕ್ಷದಿಂದ ಒತ್ತಾಯಿಸಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಹರೀಶ್, ನನಗೆ ತಿಳಿದಿರುವ ಹಾಗೆ ಯಾವುದೇ ಕೇಸ್‌ನಲ್ಲಿ ಆಪಾದನೆ ಬಂದ ಕೂಡಲೇ ಆಪಾದಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆಮೇಲೆ ವಿಚಾರಣೆಗೆ ಒಳಪಡಿಸುತ್ತಾರೆ. ಆದರೆ ಇಂದಿಗೆ 7 ದಿನ ಆದರೂ ಇನ್ನೂ ಕೂಡ ಸ್ವಾಮೀಜಿಯ ಬಂಧನವಾಗಿಲ್ಲ, ವಿಚಾರಣೆಯೂ ನಡೆದಿಲ್ಲ. ಪ್ರತಿಷ್ಠಿತ ದೊಡ್ಡ ಸಮಾಜದ ಮಠದ ಸ್ವಾಮೀಜಿ ಎಂದು ಅಂಜಿಕೆಯೇ? ಅಥವಾ ಆ ಸಮಾಜದ ವೋಟ್ ಬ್ಯಾಂಕನ್ನು ಕಳೆದುಕೊಳ್ಳುತ್ತೇವೆ ಎನ್ನುವ ಭಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಇಂದು ತನಿಖಾಧಿಕಾರಿ ಕೈಗೆ ವಿದ್ಯಾರ್ಥಿನಿಯರ ಹೇಳಿಕೆ – ಮುರುಘಾ ಶ್ರೀಗೆ ಸಿಗುತ್ತಾ ಜಾಮೀನು..?

    ದೌರ್ಜನ್ಯಕ್ಕೆ ಒಳಗಾದ ಹೆಣ್ಣುಮಕ್ಕಳನ್ನು ಆಸ್ಪತ್ರೆ, ಕೋರ್ಟ್‌ ಕಚೇರಿ, ಹಲವಾರು ವಿಚಾರಣೆಗಳಿಗೆ ಅಲೆದಾಡಿಸುತ್ತಿದ್ದಾರೆ. ಆದರೆ ಸ್ವಾಮೀಜಿಗಳು ಮಾತ್ರ ದೊಡ್ಡ ಬಂಗಲೆಯ ಮಠದಲ್ಲಿ ಐಷಾರಾಮಿ ಕಾರ್‌ನಲ್ಲಿ ಓಡಾಡುತ್ತಾ ಸುತ್ತಲೂ ಪ್ರತಿಷ್ಠಿತ ವ್ಯಕ್ತಿಗಳು, ರಾಜಕಾರಣಿಗಳು, ಉದ್ಯಮಿಗಳು, ಕೆಲವು ಸ್ವಾಮೀಜಿಗಳನ್ನು ಜೊತೆಗೆ ಹಾಕಿಕೊಂಡು ಆರಾಮವಾಗಿ ಸುತ್ತುತ್ತಿದ್ದಾರೆ. ಇದು ಎಂಥ ನ್ಯಾಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಸ್ವಾಮೀಜಿಯ ವಿರುದ್ಧ ಹೋರಾಟ ಮಾಡಲು ಬಂದಂತಹ ಸಾರ್ವಜನಿಕರನ್ನು ಮಠದ ಒಳಗಡೆ ಬಿಡದೆ ಲಾಟಿ ಚಾರ್ಜ್ ಮಾಡಿ ಓಡಿಸಿರುವುದು ಎಷ್ಟರಮಟ್ಟಿಗೆ ಸರಿ? ವಿರೋಧ ಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಮತ್ತು ಆಡಳಿತ ಪಕ್ಷದ ಸಚಿವರಾಗಲಿ, ಯಾವ ಶಾಸಕರಾಗಲಿ ಇಲ್ಲಿಯವರೆಗೂ ದೌರ್ಜನ್ಯಕ್ಕೆ ಒಳಗಾದ ಹೆಣ್ಣುಮಕ್ಕಳು ಅನಾಥರು ಹಾಗೂ ದಲಿತರಿದ್ದಾರೆ ಅಂತ ಅವರನ್ನು ಬೆಂಬಲಿಸಿ ಒಂದು ಚಕಾರವನ್ನು ಎತ್ತದಿರುವುದು ವೋಟ್ ಬ್ಯಾಂಕ್‌ನ ರಾಜಕಾರಣ ಎಂದು ಜಗತ್ತಿಗೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಇಂದು ಯೋಗಿ ಆದಿತ್ಯನಾಥ್, ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

    ಕನ್ನಡಪರ ಸಂಘಟನೆಗಳು ಮತ್ತು ದಲಿತ ಸಂಘಟನೆಗಳು ಸಣ್ಣ ಪುಟ್ಟ ವಿಚಾರಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡುತ್ತವೆ. ರಾಜ್ಯದಲ್ಲಿ ನಡೆದಿರುವಂತಹ ಇಂತಹ ದೊಡ್ಡ ದೌರ್ಜನ್ಯದ ಹಗರಣದ ವಿರುದ್ಧ ಯಾಕೆ ಗಟ್ಟಿ ಹೋರಾಟ ಮಾಡುತ್ತಿಲ್ಲ ಎನ್ನುವುದು ನಮ್ಮ ಪ್ರಶ್ನೆ. ಆದ್ದರಿಂದ ಪ್ರತಿಷ್ಠಿತ ರಾಜಕಾರಣಿಗಳು, ವಿರೋಧ ಪಕ್ಷಗಳು ಸ್ವಾಮೀಜಿಗೆ ಬೆಂಬಲ ನೀಡುತ್ತಿವೆ. ಇಂತಹ ಸಂದರ್ಭದಲ್ಲಿ ನಾವು ಅನಾಥ, ದಲಿತ ಹೆಣ್ಣು ಮಕ್ಕಳ ಪರವಾಗಿ ಧ್ವನಿ ಎತ್ತಬೇಕು ಎಂಬುದು ನಮ್ಮ ಪಕ್ಷದ ಉದ್ದೇಶ. ಈ ಕೂಡಲೇ ಸರ್ಕಾರ ಬಿಗಿಯಾದ ನಿಲುವು ತೆಗೆದುಕೊಂಡು ಸ್ವಾಮೀಜಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ನಿಮ್ಮ ಕೈಯಲ್ಲಿ ಅದು ಆಗದಿದ್ದರೆ ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಾಯಿ ಗರ್ಭ, ಸ್ಮಶಾನ ಇವೆರಡೇ ಸುರಕ್ಷಿತ ಸ್ಥಳ- ಪತ್ರ ಬರೆದು ಅಪ್ರಾಪ್ತೆ ಆತ್ಮಹತ್ಯೆ

    ತಾಯಿ ಗರ್ಭ, ಸ್ಮಶಾನ ಇವೆರಡೇ ಸುರಕ್ಷಿತ ಸ್ಥಳ- ಪತ್ರ ಬರೆದು ಅಪ್ರಾಪ್ತೆ ಆತ್ಮಹತ್ಯೆ

    ಚೆನ್ನೈ: ತಾಯಿಯ ಗರ್ಭ ಮತ್ತು ಸ್ಮಶಾನ ಇದು ಎರಡೇ ಸುರಕ್ಷಿತ ಸ್ಥಳಗಳು ಎಂದು ಪತ್ರ ಬರೆದಿಟ್ಟು ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಚೆನ್ನೈನ ಪೂನಂ ಪ್ರದೇಶದಲ್ಲಿರುವ ಮನೆಯಲ್ಲಿ ಲೈಂಗಿಕ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿ ಕೆಲಸಕ್ಕಾಗಿ ಮನೆಯಿಂದ ಹೊರಹೋದಾಗ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

    ಡೆತ್‌ನೋಟ್‌ನಲ್ಲಿ ಭಾವುಕ ಸಾಲುಗಳನ್ನು ವಿದ್ಯಾರ್ಥಿನಿ ಬರೆದಿದ್ದಾಳೆ. ಜಗತ್ತಿನಲ್ಲಿ ತಾಯಿ ಗರ್ಭ ಹಾಗೂ ಸ್ಮಶಾನವನ್ನು ಬಿಟ್ಟರೆ ಬೇರೆ ಯಾವ ಸ್ಥಳವೂ ಸುರಕ್ಷಿತವಲ್ಲ ಎಂದು ಬರೆದಿದ್ದಾಳೆ. ಇದನ್ನೂ ಓದಿ: ಗ್ಯಾಂಗ್‌ರೇಪ್ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು!

    ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕಿಯ ಮಗ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಇದರಿಂದಾಗಿ ೯ನೇ ತರಗತಿ ಓದುತ್ತಿದ್ದಾಗ ವಿದ್ಯಾರ್ಥಿನಿಯನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ವರ್ಗಾಯಿಸಲಾಗಿತ್ತು ಎಂದು ಪೋಷಕರು ತಿಳಿಸಿದ್ದಾರೆ.

    POLICE JEEP

    ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿನಿಗೆ ಸಂಬಂಧಿಕರಾಗಲಿ, ತರಗತಿಯವರಾಗಲಿ ನೆರವಿಗೆ ಬಂದಿರಲಿಲ್ಲ. ಇದರಿಂದಾಗಿ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲೆ ಆತ್ಮಹತ್ಯೆಯ ಪತ್ರಗಳು ಪೊಲೀಸರಿಗೆ ದೊರೆತಿದೆ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:  ಹಿಂದುತ್ವದಲ್ಲಿ ನಂಬಿಕೆ ಇದ್ದವರು ಭಾರತೀಯರ DNA ಒಂದೇ ಎಂದು ಭಾವಿಸುತ್ತಾರೆ: ರಾಹುಲ್

  • ಸ್ಯಾಂಡಲ್‍ವುಡ್, ರಾಜಕೀಯ ಆಯ್ತು-ಈಗ ಸ್ವಾಮೀಜಿಯ ಮೇಲೆ ಕೇಳಿ ಬಂತು ಮೀಟೂ..?

    ಸ್ಯಾಂಡಲ್‍ವುಡ್, ರಾಜಕೀಯ ಆಯ್ತು-ಈಗ ಸ್ವಾಮೀಜಿಯ ಮೇಲೆ ಕೇಳಿ ಬಂತು ಮೀಟೂ..?

    ಬೆಂಗಳೂರು: ಚಿತ್ರರಂಗದ ಹಲವು ತಾರೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಕಹಿ ನೆನಪುಗಳನ್ನು ಮೀಟೂ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಕೆಲ ಮೀಟೂ ಆರೋಪಗಳು ನ್ಯಾಯಾಲಯದವರೆಗೂ ತಲುಪಿವೆ. ಮತ್ತೆ ಕೆಲ ಆರೋಪಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ವನಕಲ್ಲು ಮಠದ ಶ್ರೀ ಬಸವ ರಮಾನಂದ ಸ್ವಾಮೀಜಿ ಅವರ ಮೇಲೆ ಮೀಟೂ ಆರೋಪ ಕೇಳಿ ಬಂದಿದೆ.

    ಮಠಕ್ಕೆ ಆಸರೆ ಕೇಳಿಕೊಂಡ ಬಂದ ಮಹಿಳೆ ಜೊತೆ ಸ್ವಾಮೀಜಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬವುದು ಸಂತ್ರಸ್ತೆಯ ಆರೋಪ. ಈ ವಿಷಯವನ್ನು ಯಾರಿಗಾದ್ರೂ ಹೇಳಿದ್ರೆ ನಿನ್ನ ವಿರುದ್ಧ ಅಪಪ್ರಚಾರ ಹಾಗೂ ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ರಂತೆ ಸ್ವಾಮೀಜಿ. ಈ ಸಂಬಂಧ ಸಂತ್ರಸ್ತೆ 7 ತಿಂಗಳ ಹಿಂದೆ ಸ್ವಾಮೀಜಿ ವಿರುದ್ಧ ಡಾಬಸ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿದ್ರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳದೇ ಬಿ ರಿಪೋರ್ಟ್ ಹಾಕಲು ಮುಂದಾಗಿದ್ದಾರೆ. ಪೊಲೀಸರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಹಿಳೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ವನಕಲ್ಲು ಮಠ ನಮ್ಮ ಮನೆಯ ದೇವರು. ಹಾಗಾಗಿ ನಾನು ಹಲವು ನನ್ನ ಕುಟುಂಬಸ್ಥರೊಂದಿಗೆ ಮಠಕ್ಕೆ ಭೇಟಿ ನೀಡಿದ್ದೇನೆ. ಫೆಬ್ರವರಿ 24ರಂದು ಜಾತ್ರೆಗೆ ಹೋದಾಗ ಸ್ವಾಮೀಜಿ ಭೇಟಿ ಮತ್ತು ಪರಿಚಯ ಆಯ್ತು. ಈ ವೇಳೆ ಕೆಲಸ ಕೊಡಿಸುತ್ತೇನೆ ಅಂತಾ ಹೇಳಿ ನನ್ನ ಮೊಬೈಲ್ ನಂಬರ್ ಪಡೆದರು. ಒಂದು ದಿನ ಕೆಲಸದ ನಿಮಿತ್ತ ಅಂತಾ ಹೇಳಿ ನನ್ನ ಫೋಟೊ ಕಳುಹಿಸಿದೆ. ಅವರು ತಮ್ಮ ಫೋಟೋ ಕಳುಹಿಸಿದರು. ಸತತವಾಗಿ ಒಂದೂವರೆ ತಿಂಗಳು ನನ್ನ ಜೊತೆ ಸ್ವಾಮೀಜಿಗಳು ಮಾತನಾಡಿದ್ದಾರೆ.

    ಕೆಲಸ ಕೊಡಿಸುತ್ತೇನೆ ಎಂಬ ಭರವಸೆ ನೀಡಿದ ಸ್ವಾಮೀಜಿ ಒಮ್ಮೆ ನಾನು ನಿನ್ನನ್ನು ಭೇಟಿ ಮಾಡಬೇಕೆಂದು ಹೇಳಿದರು. ನಿಮ್ಮನ್ನ ನೋಡದೆ ಕೆಲಸ ಕೊಡಿಸಲು ಸಾಧ್ಯವಿಲ್ಲ. ಹಾಗಾಗಿ ಒಂದು ಸಾರಿ ಬಂದು ಭೇಟಿ ಆಗಬೇಕು ಅಂತಾ ಫೋನ್ ನಲ್ಲಿ ತಿಳಿಸಿದರು. ಸ್ವಾಮೀಜಿಯನ್ನು ಭೇಟಿ ಮಾಡಲು ಮಠಕ್ಕೆ ತೆರಳಿದರೆ ಆರಂಭದಲ್ಲಿ ಒಂದು ವಾರ ನನಗೆ ಸಿಗಲಿಲ್ಲ. ಈ ವೇಳೆ ವಾಟ್ಸಪ್ ನಲ್ಲಿ ಮೆಸೇಜ್ ಮಾಡುತ್ತಿದ್ದರು. ಒಂದು ದಿನ ಸಂಜೆ 4 ಗಂಟೆಗೆ ಭೇಟಿ ಅಗ್ತೀನಿ ಅಂದರು. ಸಂಜೆ ಮಠಕ್ಕೆ ಹೋದಾಗ ಅರ್ಧ ಗಂಟೆಯಲ್ಲಿ ಸಿಗುತ್ತೇನೆ. ಸ್ವಲ್ಪ ತಡವಾದರೂ ಪರವಾಗಿಲ್ಲ, ಬೇರೆ ರೂಮ್ ಮಾಡಿಸಿಕೊಡುತ್ತೇನೆ ಅಲ್ಲೇ ಇರು ಅಂತಾ ಹೇಳಿದರು. ಅಂದು ಭೇಟಿಯಾದ ಸ್ವಾಮೀಜಿ ನನ್ನ ಬಗ್ಗೆ ಎಲ್ಲ ಮಾಹಿತಿಯನ್ನು ಕೇಳಿದರು. ಮುಂದೆ ನನಗೆ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿರು ಅಂತಾ ಹೇಳಿದರು.

    ಕೆಲಸಕ್ಕೆ ಸಂಬಂಧಿಸಿದ ಮಾತು ಮುಗಿಯುತ್ತಿದ್ದಂತೆ ಅವರ ಬೆಡ್ ರೂಮ್ ನಲ್ಲಿ ಚಾರ್ಜ್ ಹಾಕಿರುವ ಮೊಬೈಲ್ ತೆಗೆದುಕೊಂಡು ಬಾ ಅಂತಾ ಅಲ್ಲಿ ಕಳುಹಿಸಿದರು. ನಾನು ಕೋಣೆ ಪ್ರವೇಶಿಸುತ್ತಿದ್ದಂತೆ ಹಿಂದಿನಿಂದ ಬಂದು ಬಾಗಿಲು ಹಾಕಿಕೊಂಡರು. ಅಲ್ಲದೇ ನನ್ನ ಸೀರೆ ಎಳೆದು ಅತ್ಯಾಚಾರಕ್ಕೆ ಯತ್ನಿಸಿದರು. ಈ ವೇಳೆ ನನಗೆ ಏನು ಮಾತಾಡೋದಕ್ಕೆ ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆ ವಿಡಿಯೋದಲ್ಲಿ ಹೇಳಿದ್ದಾರೆ.

    ಸದ್ಯ ಈ ಪ್ರಕರಣವನ್ನು ಪಿಎಸ್‍ಐ ಶಂಕರ್ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸಂತ್ರಸ್ತೆ, ಈ ಹಿನ್ನೆಲೆಯಲ್ಲಿ ವಿಡಿಯೋ ಮಾಡಿದ್ದೇನೆ ಎಂದು ಸಂತ್ರೆಸ್ತೆ ಹೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews