ಮೈಸೂರು: ಸಿಎಂ ಇಬ್ರಾಹಿಂ ಸ್ವಾಗತಿಸಿದ್ದ ತನ್ವೀರ್ ಆಪ್ತನಿಗೆ ಕಾಂಗ್ರೆಸ್ ಗೇಟ್ಪಾಸ್ ನೀಡಿದೆ.
ಶಾಸಕ ತನ್ವೀರ್ ಆಪ್ತ ಅಬ್ದುಲ್ ಖಾದರ್ ಶಾಹೀದ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಶಾಹಿದ್ ಅವರು ಈ ಹಿಂದೆ ಮೈಸೂರು ಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.
ಈಗ ಸಿಎಂ ಇಬ್ರಾಹಿಂ ಸ್ವಾಗತಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆಗೊಂಡರು. ಸಿಎಂ ಇಬ್ರಾಹಿಂರನ್ನ ಸ್ವಾಗತಿಸಿ ಎನ್.ಆರ್ ಕ್ಷೇತ್ರದಲ್ಲಿ ಸಭೆ ನಡೆಸಿದ್ದರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಪಕ್ಷದಿಂದ ಉಚ್ಛಾಟಿಸಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಆದೇಶ ಹೊರಡಿಸಿದರು.
ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮತ್ತು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಕ್ರಮ ಕೂಗೊಳ್ಳಲಾಗುತ್ತಿದೆ. ಸದ್ಯ ಶಾಹಿದ್ ಉಚ್ಛಾಟನೆ ತನ್ವೀರ್ ಗೆ ತೀವ್ರ ಮುಜುಗರ ತಂದೊಡ್ಡಿದೆ. ಇದನ್ನೂ ಓದಿ: ಹಿಜಾಬ್ ವಿವಾದವು ಕಾಂಗ್ರೆಸ್ನ ಗಿಮಿಕ್: ದುರ್ಯೋಧನ ಐಹೊಳೆ
ಲಂಡನ್: ಹೆಮ್ಮಾರಿ ಕೊರೊನಾ ವೈರಸ್ನಿಂದಾಗಿ ಅನೇಕ ಕ್ರೀಡಾಕೂಟ, ಟೂರ್ನಿಗಳು ರದ್ದುಗೊಂಡಿವೆ ಅಥವಾ ಮುಂದೂಡಲ್ಪಟ್ಟಿವೆ. ಹೀಗಾಗಿ ಆಟಗಾರರು, ಕ್ರೀಡಾಪಟುಗಳು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಇಂತಹ ಸಮಯದಲ್ಲಿ ಕೆಲವರು ಯುವ ಪ್ರತಿಭೆಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಆಟದ ತಂತ್ರ, ನಿಯಮಗಳನ್ನು ಹೇಳಿಕೊಡುತ್ತಿದ್ದಾರೆ.
ಅಂಥೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಆಕ್ರಮನಕಾರಿ ಬ್ಯಾಟ್ಸ್ಮನ್ ಕೂಡ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಯುವ ಕ್ರಿಕೆಟರ್ ಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಜೊತೆಗೆ ಒಂದಿಷ್ಟು ಬ್ಯಾಟಿಂಗ್ ತಂತ್ರಗಳನ್ನು ತಿಳಿಸಿಕೊಡುತ್ತಿದ್ದಾರೆ. ಆದರೆ ಪೀಟರ್ಸನ್ ”ಈ ಮಗುವಿಗೆ ಯಾವುದೇ ಸಲಹೆಗಳೇ ಬೇಡ” ಎಂದು ಟ್ವಿಟ್ಟರ್ನಲ್ಲಿ ಒಂದು ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದಾರೆ.
ಶಾಹಿದ್ ಎಂಬ ಪುಟ್ಟ ಪೋರ, ತಾನು ಬ್ಯಾಟಿಂಗ್ ಮಾಡುತ್ತಿರುವ 1 ನಿಮಿಷ 17 ಸೆಂಕೆಡ್ ಇರುವ ವಿಡಿಯೋವನ್ನು ಟ್ವಿಟ್ ಮಾಡಿದ್ದಾನೆ. ಇದನ್ನು ನೋಡಿದ ಕೇವಿನ್ ಪೀಟರ್ಸನ್ ಫುಲ್ ಫಿದಾ ಆಗಿದ್ದಾರೆ. ”ನನ್ನ ಯೂಟ್ಯೂಬ್ ಚಾನೆಲ್ನಲ್ಲಿ ಈ ಹುಡುಗನ ಜೊತೆಗೆ 45 ನಿಮಿಷ ಲೈವ್ನಲ್ಲಿದ್ದೆ. ಈ ಮಗುವಿಗೆ ಯಾವುದೇ ರೀತಿಯ ಸಲಹೆಗಳ ಅಗತ್ಯವೇ ಇಲ್ಲ ಎನ್ನುವುದು ನನ್ನ ಅಭಿಪ್ರಾಯ. ಅವನು ಎಲ್ಲ ಕೌಶಲ್ಯಗಳನ್ನು ಹೊಂದಿದ್ದಾನೆ” ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಳಾದ ಈ ಪುಟ್ಟ ಪೋರ ಮೂರು ವರ್ಷದವನಾಗಿದ್ದು, ಭಾರತ ಸೇರಿದಂತೆ ವಿದೇಶಿ ಕ್ರಿಕೆಟರ್ಗಳ ಮನ ಗೆದ್ದಿದ್ದಾನೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಾಲಕ ಶಾಹಿದ್ಗೆ ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಬೌಲಿಂಗ್ ಮಾಡಿದ್ದರು. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಾಲಕನ ಬ್ಯಾಟಿಂಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ವಾ ಅವರು ಬಾಲಕ ಶಾಹಿದ್ನನ್ನು ಕೋಲ್ಕತ್ತಾದಲ್ಲಿ ಭೇಟಿಯಾಗಿ, ಆತನನ್ನು ಎತ್ತಿ ಮುದ್ದಾಡಿದ್ದರು.
ಶಾಹಿದ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾಡಬೇಕು. ಆ ದಿನಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ಬಾಲಕನ ತಂದೆ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಶಾಹಿದ್ ಕೂಡ ಅಷ್ಟೇ ಶ್ರದ್ಧೆಯಿಂದ ಅಭ್ಯಾಸದಲ್ಲಿ ತೊಡಗಿದ್ದಾನೆ.
ಇಸ್ಲಾಮಾಬಾದ್: ಕ್ರಿಕೆಟ್ ವೃತ್ತಿ ಜೀವನದಲ್ಲಿ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದ ಪಾಕ್ ಮಾಜಿ ಆಟಗಾರ ಶಾಹಿದ್ ಅಫ್ರಿದಿ ನಿವೃತ್ತಿಯ ಬಳಿಕವೂ ತಮ್ಮ ಚಾಳಿಯನ್ನು ಮುಂದುವರೆಸಿದ್ದಾರೆ.
ಪಾಕಿಸ್ತಾನದ ರಕ್ಷಣಾ ದಿವಸ್ ಕಾರ್ಯಕ್ರಮ ಸೆ.6 ರ ಗುರುವಾರದಂದು ರಾವಲ್ಪಿಂಡಿಯಲ್ಲಿ ಏರ್ಪಡಿಸಲಾಗಿತ್ತು. ಈ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ಅಫ್ರಿದಿ ಯಾರಿಗೂ ತಿಳಿದಂತೆ ತಂಬಾಕು ಸೇವನೆ ಮಾಡಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ. ಕಾರ್ಯಕ್ರಮದಲ್ಲಿ ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಅಫ್ರಿದಿ ತಂಬಾಕು ಸೇವಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿ ಗಣ್ಯರೊಂದಿಗೆ ಕುಳಿತಿದ್ದ ಅಫ್ರಿದಿ ತಮ್ಮ ಜೇಬಿನಿಂದ ತಂಬಾಕು ತಗೆದು ಯಾರಿಗೂ ತಿಳಿಯದಂತೆ ಸೇವಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದಂತೆ ಟ್ವೀಟಿಗರು ಅಫ್ರಿದಿಯನ್ನು ಟ್ರೋಲ್ ಮಾಡಿದ್ದಾರೆ.
ಪಾಕಿಸ್ತಾನದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಅಫ್ರಿದಿಯ ವಿಡಿಯೋ ನೋಡಿದವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಕ್ಷಣಾ ಕಾರ್ಯಕ್ರಮದಲ್ಲಿ ಉನ್ನತ ರಕ್ಷಣಾ ಅಧಿಕಾರಿಗಳು ಹಾಗೂ ಪೊಲೀಸರ ಪಕ್ಕದಲ್ಲೇ ಕುಳಿತು ಅಫ್ರಿದಿ ಈ ರೀತಿ ವರ್ತಿಸಿದ್ದ ವಿರುದ್ಧ ಬೇಸರ ವ್ಯಕ್ತಪಡಿಸಿ ಕಿಡಿಕಾರಿದ್ದಾರೆ. ಕೆಲವರು ಅಫ್ರಿದಿ ಕಾಲೆಳೆದು ರೀ ಟ್ವೀಟ್ ಮಾಡಿದ್ದಾರೆ.
What is Shahid Afridi sniffing? Were guests given something 'extra' at the Defence Day ceremony? 😏 pic.twitter.com/moGNYcokhB