Tag: Shailaputri

  • Navratri 2025 Day 1: ಶೈಲಪುತ್ರಿಯ ಮಹತ್ವವೇನು?

    Navratri 2025 Day 1: ಶೈಲಪುತ್ರಿಯ ಮಹತ್ವವೇನು?

    ಬಾರಿಯ ನವರಾತ್ರಿ ಹಬ್ಬವು ಸೆ.22ರಿಂದ ಪ್ರಾರಂಭವಾಗಿ ಅ.3ಕ್ಕೆ ಕೊನೆಗೊಳ್ಳುತ್ತದೆ. ನವರಾತ್ರಿಯು ದೇವಿ ದುರ್ಗೆಯ ಮತ್ತು ಅವಳ 9 ರೂಪಗಳ ಆಚರಣೆಯಾಗಿದ್ದು, ಹಿಂದೂಗಳು ಈ ಹಬ್ಬವನ್ನು ಅತ್ಯಂತ ವೈಭವದಿಂದ ಆಚರಿಸುತ್ತಾರೆ. ದೇವಿ ದುರ್ಗೆಯ ಒಂಬತ್ತು ರೂಪಗಳನ್ನು ನೋಡುವುದಾದರೆ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿ ಮತ್ತು ಸಿದ್ಧಿದಾತ್ರಿ. ಆದಿ ಶಕ್ತಿಯ ಈ 9 ರೂಪಗಳನ್ನು ನವದುರ್ಗೆ ಎಂದು ಕರೆಯಲಾಗುತ್ತದೆ. ಈ ಹಬ್ಬವು ವಿಜಯದಶಮಿ ಆಚರಣೆಗಳೊಂದಿಗೆ ಕೊನೆಗೊಳ್ಳುತ್ತದೆ. ಮೊದಲನೇ ದಿನ ಪೂಜಿಸಲ್ಪಡುವ ಶೈಲಪುತ್ರಿಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ.

    ಶೈಲ ಪುತ್ರಿಯ ಮಹತ್ವ:
    ಪರ್ವತರಾಜ ಹಿಮವಂತನ ಪುತ್ರಿಯೇ ಶೈಲ ಪುತ್ರಿ. ಈ ದೇವಿಯ ಅವತಾರದ ಹಿಂದೆ ಒಂದು ಕಥೆ ಇದೆ. ಪ್ರಜಾಪತಿ ಬ್ರಹ್ಮನ ಮಗನಾದ ದಕ್ಷ ತನ್ನ 27 ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ. ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದಳು. ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ. ಸ್ಮಶಾನದಲ್ಲಿ ವಾಸ ಮಾಡುವ, ಕುತ್ತಿಗೆಯಲ್ಲಿ ನಾಗರ ಹಾವನ್ನು ಸುತ್ತಿಕೊಂಡಿರುವ ಶಿವನಿಗಿಂತ, ಚೆಲುವೆಯಾಗಿರುವ ತನ್ನ ಮಗಳಿಗೆ ಉತ್ತಮ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ.

    ಶಿವನ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ದಕ್ಷ ಒಮ್ಮೆ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ. ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲಾ ಮಕ್ಕಳಿಗೆ, ಬಂಧುಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈಗ ದಕ್ಷ, ಶಿವ ದೇವರು ಆಗಿರಬಹುದು. ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ ಎಂದು ಮನಸ್ಸಿನಲ್ಲೇ ಉರಿದು ಬಿದ್ದ. ಇದಕ್ಕೆ ಪ್ರತೀಕಾರವೆಂಬಂತೆ ದಕ್ಷ ಶಿವನಿಗೆ ಅವಮಾನ ಮಾಡಬೇಕೆಂದು ಇನ್ನೊಂದು ಯಜ್ಞವನ್ನು ಆಯೋಜಿಸಿದ. ಆದರೆ ಮಗಳು ದಾಕ್ಷಾಯಿಣಿ ಹಾಗೂ ಅಳಿಯ ಶಿವನಿಗೆ ಆಹ್ವಾನ ನೀಡದೇ ಉಳಿದ ಎಲ್ಲಾ ಮಕ್ಕಳಿಗೂ ಆಹ್ವಾನ ನೀಡಿದ್ದ.

    ತಂದೆಯು ಯಾಗವನ್ನು ಆಯೋಜಿಸಿರುವುದನ್ನು ತಿಳಿದ ದಾಕ್ಷಾಯಿಣಿ ಶಿವನೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ ಎಂದು ಕೇಳುತ್ತಾಳೆ. ಅದಕ್ಕೆ ಶಿವ ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು. ತವರು ಮನೆಯಾದರೂ ಹೋಗಬಾರದು ಎಂದು ಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿ ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತು ಹೋಗಿರಬಹುದು. ತವರು ಮನೆಗೆ ಹೋಗಲು ಮಗಳಿಗೆ ಏಕೆ ಆಹ್ವಾನ ಬೇಕು ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿ ದಾಕ್ಷಾಯಿಣಿಯ ಹಠಕ್ಕೆ ಕರಗಿ ಶಿವ ಅನುಮತಿ ನೀಡುತ್ತಾನೆ.

    ಶಿವನಿಂದ ಅನುಮತಿಯನ್ನು ಪಡೆದು ದಾಕ್ಷಾಯಿಣಿ ತಂದೆಯ ಯಾಗಕ್ಕೆ ಹೋಗುತ್ತಾಳೆ. ಆದರೆ ದಕ್ಷನು ಯಾಗಕ್ಕೆ ಬಂದ ಮಗಳನ್ನು ನೋಡಿ ನಾನು ಆಹ್ವಾನ ನೀಡದಿದ್ದರೂ ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ನೋವನ್ನು ತಡೆದುಕೊಳ್ಳುತ್ತಾಳೆ. ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನನ್ನು ಅವಮಾನಿಸುತ್ತಾನೆ. ಎಲ್ಲರ ಮುಂದೆ ಪತಿಗೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿ ತನ್ನ ಮುಂದಿದ್ದ ಯಜ್ಞಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ. ಹೀಗೆ ತನ್ನ ಶರೀರವನ್ನು ಭಸ್ಮವಾಗಿಸಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿ ಶೈಲ ಪುತ್ರಿ ಎಂಬ ಹೆಸರಿನಿಂದ ಗುರುತಿಸಿಕೊಳ್ಳುತ್ತಾಳೆ. ಮತ್ತೆ ಶಿವನ ಮಡದಿ ಸತಿಯಾಗಿ ಹೆಸರು ಪಡೆಯುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯವಿದೆ.

    ಶೈಲಪುತ್ರಿಯ ಸ್ವರೂಪ ಹೇಗೆ?
    ಶೈಲ ಪುತ್ರಿಯನ್ನು ಆದಿಶಕ್ತಿಯೆಂದು ಗುರುತಿಸಲಾಗುತ್ತದೆ. ಆಕೆಯು ಗೂಳಿಯ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ವೃಷರುಧ ಎಂದೂ ಕರೆಯಲಾಗುತ್ತದೆ. ಶೈಲಪುತ್ರಿಯು ಮನೋಕಾರಕನಾದ ಚಂದ್ರನನ್ನು ತನ್ನ ಮಸ್ತಿಷ್ಕದ ಮೇಲೆ ಧರಿಸಿದ್ದಾಳೆ. ತಮೋಗುಣದ ಸಂಕೇತವಾದ ತ್ರಿಶೂಲವನ್ನು ತನ್ನ ಬಲಗೈಯಲ್ಲಿ ಧಾರಣೆ ಮಾಡಿದ್ದಾಳೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿ ಮಲ್ಲಿಗೆ ಪ್ರಿಯಳು.

    ಶೈಲಪುತ್ರಿಯ ರೂಪವೂ ನಾವು ಪಾಲಿಸಬೇಕಾದ ಬದುಕಿನ ತತ್ವವನ್ನು ಸೂಚಿಸುತ್ತದೆ. ಶ್ವೇತ ವಸ್ತ್ರದಲ್ಲಿರುವ ಆಕೆ ಶಾಂತಿಯುತವಾದ ನಡವಳಿಕೆಯನ್ನು ಬೆಳೆಸಿಕೊಳ್ಳಲು ಪ್ರೇರಣೆಯಾಗಿದ್ದಾಳೆ. ಪರ್ವತರಾಜನ ಮಗಳಾಗಿ ಪರ್ವತ ಎಂದರೆ ಪ್ರಕೃತಿಯನ್ನು ಪ್ರೀತಿಸಿ, ಶುದ್ಧವಾಗಿರಿಸಿಕೊಳ್ಳಿರೆಂದು ಸೂಚಿಸುವಳು. ಗೂಳಿಯ ಮೇಲೆ ಕುಳಿತಿರುವ ಮೂಲಕ ಮೂಕಪ್ರಾಣಿಗಳು ದೇವ- ದೇವತೆಯರ ವಾಹನವಾಗಿದ್ದು ಅವುಗಳನ್ನು ಹಿಂಸಿಸಬಾರದೆಂಬುದರ ಸಂಕೇತ ನೀಡುತ್ತಾಳೆ. ಒಂದು ಕೈಯಲ್ಲಿರುವ ತ್ರಿಶೂಲ ತಾಪತ್ರಯಗಳ ನಿವಾರಣೆಯ ಸೂಚಕ ಮತ್ತು ನಮ್ಮ ಮನಸ್ಸು ದುಷ್ಟತನದತ್ತ ದೃಷ್ಟಿ ಹಾಯಿಸಬಾರದು, ಅದರಿಂದ ಶೂಲದಂತಹ ಅಸ್ತ್ರದಿಂದ ನಮ್ಮನ್ನು ನಾವೇ ಇರಿದುಕೊಂಡಂತೆ ಎಂಬುದನ್ನು ಸಾರುತ್ತದೆ. ಇನ್ನೊಂದು ಕೈಯಲ್ಲಿರುವ ಕಮಲವು ಕೋಮಲವಾದ ಎಸಳುಗಳುಳ್ಳ, ನೀರಿನಲ್ಲಿ ಅರಳುವ ಸುಂದರ ಹೂವು ವಿನಯ ಮತ್ತು ತಾಳ್ಮೆಯ ಸಂಕೇತ. ಇದು ತಿಳಿಯಾದ ಮನಸ್ಸಿನಲ್ಲಿ ತಳಮಳವಿರುವುದಿಲ್ಲ ಎಂಬುದನ್ನು ಸೂಚಿಸುತ್ತದೆ.

  • ನವರಾತ್ರಿಯ ಮೊದಲದಿನ ಶೈಲಪುತ್ರಿಯ ಆರಾಧನೆ

    ನವರಾತ್ರಿಯ ಮೊದಲದಿನ ಶೈಲಪುತ್ರಿಯ ಆರಾಧನೆ

    – ಇವತ್ತಿನ ಬಣ್ಣ ಹಳದಿ

    ಇವತ್ತಿನಿಂದ ನವರಾತ್ರಿ ಪ್ರಾರಂಭವಾಗುತ್ತಿದೆ. ಈ 9 ದಿನಗಳಲ್ಲಿ ದುರ್ಗಾದೇವಿಯ ವಿವಿಧ ಅವತಾರಗಳನ್ನು ಆಚರಿಸಲಾಗುತ್ತದೆ. ಮೊದಲ ದಿನ ಅಕ್ಟೋಬರ್ 7, ಇಂದು ದುರ್ಗಿಯ ಶೈಲಪುತ್ರಿ ಅವತಾರದ ಪೂಜೆಯಿಂದ ಆರಂಭವಾಗುತ್ತೆ.

    ಶೈಲಪುತ್ರಿ ಅವತಾರ ಏಕೆ ಆಯಿತು?
    ಹಿಂದೂ ಪುರಾಣದ ಪ್ರಕಾರ, ಸತಿ ದೇವಿಯು ಸ್ವಯಂ-ಅಗ್ನಿಕುಂಡಕ್ಕೆ ಅಹುತಿಯಾದ ನಂತರ ಶೈಲಪುತ್ರಿಯಾಗಿ ಜನಿಸಿದಳು. ಶೈಲಪುತ್ರಿಯನ್ನು ಪಾರ್ವತಿ ಎಂದೂ ಕರೆಯುತ್ತಾರೆ. ಹಿಮಾಲಯದ ಮಗಳು. ಶೈಲಪುತ್ರಿ ಎಂದರೆ ಪರ್ವತನ ಮಗಳು. ಶೈಲ್ ಎಂದರೆ ಪರ್ವತ ಮತ್ತು ಪುತ್ರಿ ಎಂದರೆ ಮಗಳು. ಶೈಲಪುತ್ರಿ ದೇವಿಯನ್ನು ಮೊದಲ ದಿನ ಪೂಜಿಸಲಾಗುತ್ತದೆ. ಡ್ರಿಕ್ ಪಂಚಾಂಗದ ಪ್ರಕಾರ, ಶೈಲಪುತ್ರಿ ದೇವಿಯು ಚಂದ್ರನನ್ನು ನಿಯಂತ್ರಿಸುತ್ತಾಳೆ. ಅವಳು ಎಲ್ಲಾ ಅದೃಷ್ಟಗಳನ್ನು ಒದಗಿಸುತ್ತಾಳೆ ಎಂದು ಹೇಳಲಾಗುತ್ತೆ. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

    ಶೈಲಪುತ್ರಿಯು ಒಂದು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಕಮಲದ ಹೂವನ್ನು ಹಿಡಿದಿರುತ್ತಾಳೆ. ಅವಳನ್ನು ಹೇಮಾವತಿ ಎಂದೂ ಕರೆಯುತ್ತಾರೆ. ಶೈಲಪುತ್ರಿ ದುರ್ಗಾದೇವಿಯ ಪ್ರಮುಖ ಅವತಾರವಾದ್ದರಿಂದ ಮೊದಲ ದಿನದಂದು ಪೂಜಿಸಲಾಗುತ್ತದೆ. ಶೈಲಪುತ್ರಿ ದೇವಿಯು ಸತಿ ದೇವಿಯಂತೆ ಶಿವನನ್ನು ಮದುವೆಯಾಗಿದ್ದಾಳೆ.

    ಇಂದು ಪೂಜೆ ಮಾಡಬೇಕಾದರೆ ಹಳದಿ ಬಣ್ಣವನ್ನು ತೊಟ್ಟರೆ ಶ್ರೇಷ್ಠ.

  • ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    ಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳ ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.

    ನವರಾತ್ರಿ ಹಬ್ಬದ ಒಂಭತ್ತು ದಿನವೂ ಶಕ್ತಿ ದೇವಿ ಜಗನ್ಮಾತೆಯನ್ನು ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ಮೂರು ದಿನ ಮಹಾಕಾಳಿ ಅಥವಾ ದುರ್ಗೆಯನ್ನೂ, ನಂತರ ಮೂರು ದಿನ ಮಹಾಲಕ್ಷ್ಮಿಯನ್ನೂ, ಕೊನೆಯ ಮೂರು ದಿನ ಮಹಾ ಸರಸ್ವತಿಯನ್ನು ಪೂಜಿಸಲಾಗುತ್ತಿದೆ. ಮಹಾಕಾಳಿ ತಾಮಸ ಗುಣಕ್ಕೂ, ಮಹಾಲಕ್ಷ್ಮಿ ರಾಜಸಗುಣಕ್ಕೂ, ಮಹಾಸರಸ್ವತಿ ಸಾತ್ವಿಕ ಗುಣದ ಸಂಕೇತ. ನವರಾತ್ರಿ ಆಚರಿಸುವ ಭಕ್ತರು ತಾಮಸದಿದ ರಾಜಸದೆಡೆಗೆ, ರಾಜಸದಿಂದ ಸಾತ್ವಿಕದೆಡೆಗೆ ಬಂದಾಗ ಹಬ್ಬ ಹೆಚ್ಚು ಅರ್ಥಪೂರ್ಣವಾಗುತ್ತದೆ.

    ನವರಾತ್ರಿ ವೇಳೆ ದೇವಿಯ ಪೂಜೆ, ದೇವಿ ಭಾಗವತ, ದುರ್ಗ ಸಪ್ತಶತೀ, ಲಲಿತಾ ಸಹಸ್ರನಾಮ ಪವಿತ್ರ ಸ್ತೋತ್ರಗಳ ಮತ್ತು ಮಂತ್ರಗಳ ಪಠಣ ಹಾಗೂ ಪಾರಾಯಣ ನಡೆಯುತ್ತದೆ. ನವದುರ್ಗೆಯರ ಆರಾಧನೆಯ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿದಿನ ದೇವಿಯ ಒಂದೊಂದು ಅವತಾರದ ವಿವರಣೆಯನ್ನು ಪಬ್ಲಿಕ್ ಟಿವಿ ಪ್ರಕಟಿಸಲಿದೆ.

    ಒಂಬತ್ತು ದುರ್ಗೆಯರು:
    1. ಶೈಲಪುತ್ರಿ
    2. ಬ್ರಹ್ಮಚಾರಿಣಿ
    3. ಚಂದ್ರಘಂಟಾ
    4. ಕೂಷ್ಮಾಂಡಾ
    5. ಸ್ಕಂದ ಮಾತೆ
    6. ಕಾತ್ಯಾಯನಿ
    7. ಕಾಳರಾತ್ರಿ
    8. ಮಹಾಗೌರಿ
    9. ಸಿದ್ಧಿದಾತ್ರಿ


    ಪರ್ವತ ರಾಜ ಹಿಮವಂತನ ಪುತ್ರಿಯೇ ಶೈಲಪುತ್ರಿ. ದಸರಾ ದಿನ ಈ ದೇವಿಯನ್ನು ಮೊದಲಿಗೆ ಆರಾಧಿಸುತ್ತಾರೆ. ಈ ದೇವಿಯನ್ನು ಆರಾಧಿಸಲು ಒಂದು ಕಥೆಯಿದೆ. ಪ್ರಜಾಪತಿ ಬಹ್ಮನ ಮಗನಾದ ದಕ್ಷ ತನ್ನ 27 ಮಂದಿ ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ. ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದ್ದಳು.

    ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ. ಹಿಮಾವೃತವಾಗಿರುವ ಕೈಲಾಸ ಅಥವಾ ಸ್ಮಶಾನದಲ್ಲಿ ವಾಸ, ಕುತ್ತಿಗೆಗೆ ನಾಗರಹಾವು ಇರುವ ಶಿವನಿಗಿಂತ ನನ್ನ ಚೆಲುವೆಯಾಗಿರುವ ಮಗಳಿಗೆ ಉತ್ತಮನಾಗಿರುವ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ.

    ಶಿವನ ವಿಚಾರದಲ್ಲಿ ಅಸಮಾಧಾನವನ್ನು ಹೊರಹಾಕುತ್ತಿದ್ದ ದಕ್ಷ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ. ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲ ಮಕ್ಕಳಿಗೆ, ಬಂಧು ಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈ ವೇಳೆ ದಕ್ಷ, “ಶಿವ ದೇವರು ಆಗಿರಬಹುದು. ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ” ಎಂದು ಮನಸ್ಸಿನಲ್ಲೇ ಕಹಿಯನ್ನು ಅನುಭವಿಸಿದ.

    ಕೆಲ ಸಮಯದ ಬಳಿಕ ದಕ್ಷ ಮತ್ತೊಂದು ಯಜ್ಞವನ್ನು ಆಯೋಜಿಸಿದ. ಈ ಬಾರಿ ಮಗಳು ದಾಕ್ಷಾಯಿಣಿ ಮತ್ತು ಶಿವನಿಗೆ ಆಹ್ವಾನ ನೀಡದೇ ಎಲ್ಲ ಮಕ್ಕಳಿಗೆ ಆಹ್ವಾನ ನೀಡಿದ್ದ. ತಂದೆ ಯಾಗವನ್ನು ಆಯೋಜಿಸಿದ ವಿಚಾರ ತಿಳಿದು ಮಗಳು ಶಿವನ ಜೊತೆ,”ನಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ” ಎಂದು ಕೇಳುತ್ತಾಳೆ. ಇದಕ್ಕೆ ಶಿವ,”ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು. ತವರು ಮನೆ ಸೇರಿದಂತೆ ಎಲ್ಲಿಗೂ ಹೋಗಬಾರದು” ಎಂದು ತಿಳಿಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿ,”ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತುಹೋಗಿರಬಹುದು. ತಂದೆ ಮನೆಗೆ ಹೋಗಲು ಮಗಳಿಗೆ ಆಹ್ವಾನ ಯಾಕೆ ಬೇಕು”ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿಯ ಹಠಕ್ಕೆ ಕರಗಿ ಶಿವ ತಂದೆಯ ಮನೆಗೆ ಹೋಗಲು ಅನುಮತಿ ನೀಡುತ್ತಾನೆ.

    ಪತಿಯಿಂದ ಅನುಮತಿ ಸಿಕ್ಕಿದ್ದೆ ತಡ ದಾಕ್ಷಾಯಿಣಿ ಶಿವನ ವಾಹನ ನಂದಿಯನ್ನೇರಿ, ಕೈಗೆ ಸಿಕ್ಕ ಉಡುಗೊರೆಯನ್ನು ಹಿಡಿದುಕೊಂಡು ತಂದೆಯ ಯಜ್ಞ ಸಮಾರಂಭಕ್ಕೆ ತೆರಳುತ್ತಾಳೆ. ಮಗಳನ್ನು ನೋಡಿದ ಕೂಡಲೇ ದಕ್ಷ,”ನಾನು ನಿನಗೆ ಆಹ್ವಾನ ನೀಡಿಲ್ಲ. ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ” ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ಆ ನೋವನ್ನು ತಡೆದುಕೊಳ್ಳುತ್ತಾಳೆ. ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನ ವಿರುದ್ಧ ಕಿಡಿಕಾರುತ್ತಾನೆ.”ನೀನು ಪತಿಯನ್ನು ಸೇರು. ಇಲ್ಲಿಂದ ಹೊರಟು ಹೋಗು” ಎಂದು ಅವಮಾನಿಸುತ್ತಾನೆ. ಈ ಎಲ್ಲರ ಮುಂದೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿ ಶಿವನನ್ನು ಧ್ಯಾನಿಸುತ್ತಾ,”ಪತಿಯೇ ನಾನು ನಿಮ್ಮ ಮಾತನ್ನು ಕೇಳಿ ಇಲ್ಲಿಗೆ ಬಾರಬಾರದಿತ್ತು. ತಂದೆ ನಿಮಗೆ ಮಾಡಿದ ಈ ಅವಮಾನವನ್ನು ನಾನು ಸಹಿಸಲಾರೆ” ಎಂದು ಪ್ರಾರ್ಥಿಸಿ ಮುಂದಿದ್ದ ಯಜ್ಞ ಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ.

    ಪತಿಯನ್ನು ಅವಮಾನಿಸಿದ್ದನ್ನು ಸಹಿಸದೆ ಯಜ್ಞ ಕುಂಡಕ್ಕೆ ಹಾರಿಕೊಂಡಿದ್ದ ದಾಕ್ಷಾಯಿಣಿಗೆ ಅಂದಿನಿಂದ `ಸತಿ’ ಎಂಬ ಹೆಸರು ಬಂತು. ಸತಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿ ‘ಶೈಲಪುತ್ರಿ’ ಎಂದು ಹೆಸರುವಾಸಿಯಾಗುತ್ತಾಳೆ. ಮತ್ತೆ ಶಿವನ ಮಡದಿಯಾಗುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರ ಸೂಚನೆ ಏನೋ ಎಂಬಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣುಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯ ನಡೆಯುತ್ತದೆ. ಶೈಲಪುತ್ರಿ ವೃಷಭ ವಾಹನದ ಮೇಲೆ ಕುಳಿತು, ಬಲಗೈಯಲ್ಲಿ ತ್ರಿಶೂಲ ಮತ್ತು ಎಡಗೈಯಲ್ಲಿ ಕಮಲಪುಷ್ಪ ಹಿಡಿದುಕೊಂಡಿರುತ್ತಾಳೆ.

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv