ದಕ್ಷಿಣಭಾರತದಹೆಸರಾಂತನಟಿ, ನಿರ್ಮಾಪಕಿಜ್ಯೋತಿಕಾ (Jyothika) ನಟನೆಯ ಶೈತಾನ್ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಇದೀಗ ನಾಳೆಯಿಂದ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿರಲಿದೆ. ಬರೋಬ್ಬರಿ 25 ವರ್ಷಗಳಬಳಿಕಬಾಲಿವುಡ್ಗೆಜ್ಯೋತಿಕಾ ಈ ಸಿನಿಮಾದ ಮೂಲಕ ಮರಳಿದ್ದಾರೆ. ಶೈತಾನ್ (Shaitan) ಸಿನಿಮಾದಲ್ಲಿಅವರುಹೊಸಬಗೆಯಪಾತ್ರಮಾಡಿದ್ದಾರೆ.
ಹಾರರ್ಕಥಾನಕಹೊಂದಿರುವಈಸಿನಿಮಾದದೃಶ್ಯಗಳುಬೆಚ್ಚಿಬೀಳಿಸುತ್ತಿವೆ. ವಶೀಕರಣದವಿಷಯವನ್ನೂಈಸಿನಿಮಾಒಳಗೊಂಡಿದೆ. ಜ್ಯೋತಿಕಾಈಹಿಂದೆಹಿಂದಿ, ಕನ್ನಡ, ತಮಿಳು, ತೆಲುಗುಸಿನಿಮಾಗಳಲ್ಲಿನಟಿಸಿ, ಆನಂತರಚಿತ್ರೋದ್ಯಮದಿಂದಲೇದೂರವಾಗಿದ್ದರು. ಇದೀಗಬಾಲಿವುಡ್ (Bollywood) ಶೈತಾನ್ಸಿನಿಮಾವನ್ನುಒಪ್ಪಿಕೊಳ್ಳುವಮೂಲಕಮತ್ತೆಚಿತ್ರರಂಗದಲ್ಲಿಸಕ್ರೀಯರಾಗಿದ್ದಾರೆ.
ಅಜಯ್ದೇವಗನ್ (Ajay Devgn) ಕೂಡಈಸಿನಿಮಾದಲ್ಲಿನಟಿಸಿದ್ದು, ಜ್ಯೋತಿಕಾಇವರಪತ್ನಿಯಾಗಿಕಾಣಿಸಿಕೊಂಡಿದ್ದಾರೆ. ಇದೊಂದುಹಾರರ್ಚಿತ್ರವಾಗಿದ್ದು, ಆರ್. ಮಧುವನ್ಕೂಡಪ್ರಮುಖಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಟಿ, ನಿರ್ಮಾಪಕಿ ಜ್ಯೋತಿಕಾ (Jyothika) ಬರೋಬ್ಬರಿ 25 ವರ್ಷಗಳ ಬಳಿಕ ಬಾಲಿವುಡ್ ಗೆ ಮರಳಿದ್ದಾರೆ. ಶೈತಾನ್ (Shaitan) ಸಿನಿಮಾದಲ್ಲಿ ಅವರು ಹೊಸ ಬಗೆಯ ಪಾತ್ರ ಮಾಡಿದ್ದು, ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಹಾರರ್ ಕಥಾನಕ ಹೊಂದಿರುವ ಈ ಸಿನಿಮಾದ ದೃಶ್ಯಗಳು ಬೆಚ್ಚಿ ಬೀಳಿಸುತ್ತಿವೆ. ವಶೀಕರಣದ ವಿಷಯವನ್ನೂ ಈ ಸಿನಿಮಾ ಒಳಗೊಂಡಿದೆ.
ಜ್ಯೋತಿಕಾ ಈ ಹಿಂದೆ ಹಿಂದಿ, ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿ, ಆನಂತರ ಚಿತ್ರೋದ್ಯಮದಿಂದಲೇ ದೂರವಾಗಿದ್ದರು. ಇದೀಗ ಬಾಲಿವುಡ್ (Bollywood) ಶೈತಾನ್ ಸಿನಿಮಾವನ್ನು ಒಪ್ಪಿಕೊಳ್ಳುವ ಮೂಲಕ ಮತ್ತೆ ಚಿತ್ರರಂಗದಲ್ಲಿ ಸಕ್ರೀಯರಾಗುತ್ತಿದ್ದಾರೆ.
ಅಜಯ್ ದೇವಗನ್ (Ajay Devgn) ಕೂಡ ಈ ಸಿನಿಮಾದಲ್ಲಿ ನಟಿಸಿದ್ದು, ಜ್ಯೋತಿಕಾ ಇವರ ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಹಾರರ್ ಚಿತ್ರವಾಗಿದ್ದು, ಆರ್. ಮಧುವನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಜ್ಯೋತಿಕಾ ಮತ್ತು ಪತಿ ಕಂ ನಟ ಸೂರ್ಯ ತಮಿಳಿನಲ್ಲಿ ಅತ್ಯುತ್ತಮ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಜ್ಯೋತಿಕಾ ಬಹುತೇಕ ನಿರ್ಮಾಣದಲ್ಲೇ ಬ್ಯುಸಿಯಾಗಿದ್ದರು. ಅಭಿಮಾನಿಗಳ ಒತ್ತಾಸೆಯಂತೆ ಬಾಲಿವುಡ್ ಚಿತ್ರವನ್ನು ಒಪ್ಪಿಕೊಂಡಿದ್ದು, ಈ ಸಿನಿಮಾ ಸಾಕಷ್ಟು ಕುತೂಹಲವನ್ನಂತೂ ಮೂಡಿಸಿದೆ.
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ತಾರೆ ರಿಷಿ (Rishi). ಅಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ನಾವು ಇರೋದು ಹೀಗೆ ಪ್ರತಿ ಸಿನಿಮಾದಲ್ಲೊಂದು ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಶೈತನ್ ವೆಬ್ ಸೀರೀಸ್ ಮೂಲಕ ಒಟಿಟಿ ಪ್ರಪಂಚಕ್ಕೂ ಪರಿಚಿತರಾಗಿದ್ದ ರಿಷಿ ಇದೇ ಸೀರಿಸ್ ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿರುತೆರೆ ಹಾಗೂ ಸಿನಿಮಾ ರಂಗಕ್ಕೆ ಪ್ರಶಸ್ತಿಗಳಿರುವಂತೆ ಒಟಿಟಿ ವೇದಿಕೆಗೂ ಪ್ರಶಸ್ತಿ ಇದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ನಡೆಯುವ ಈ ಅವಾರ್ಡ್ ಕಾರ್ಯಕ್ರಮ ಮೊನ್ನೆ ಮುಂಬೈನಲ್ಲಿ ನೆರವೇರಿದೆ. ಇದೇ ವೇದಿಕೆಯಲ್ಲಿ ಬಾಲಿವುಡ್, ಕಾಲಿವುಡ್, ಮಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಕಲಾವಿದರ ಸಮ್ಮುಖದಲ್ಲಿ ರಿಷಿ ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.
ಹಾಗ್ ನೋಡಿದ್ರೆ ಈ ವರ್ಷ ಬಹಳಷ್ಟು ವೆಬ್ ಸೀರಿಸ್ ಗಳು ಬಿಡುಗಡೆಯಾಗಿವೆ. ಆ ಎಲ್ಲಾ ವೆಬ್ ಸೀರಿಸ್ ಹಿಂದಿಕ್ಕಿ ಸೈತನ್ ಜೂರಿಗಳ ಮನಗೆದ್ದಿದೆ. ರಿಷಿ ಅಭಿನಯವೂ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ನೆಗೆಟಿವ್ ರೋಲ್ ನಲ್ಲಿ ಅಬ್ಬರಿಸಿ ಬೊಬ್ಬಿರಿಸಿದ್ದ ಕನ್ನಡದ ತಾರೆ ರಿಷಿ ಅವರಿಗೆ 2023 ಒಟಿಟಿ ಅತ್ಯುತ್ತಮ ಖಳನಾಯಕ ಪ್ರಶಸ್ತಿ (Award) ಸಂದಿದೆ.
ಶೈತನ್ (Shaitan) ವೆಬ್ ಸೀರಿಸ್ ಮೂಲಕ ತೆಲುಗು ಪ್ರೇಕ್ಷಕರಿಗೆ ರಿಷಿ ಹತ್ತಿರವಾಗಿದ್ದಾರೆ. ಅವರ ಸಹಜ ನಟನೆ ಗಮನಸೆಳೆದಿದ್ದು, ಹೊಸ ಹೊಸ ಅವಕಾಶಗಳು ಅವರನ್ನು ಅರಸಿ ಬರ್ತಿವೆ. ಅದರ ಮುಂದುವರೆದ ಭಾಗ ಎನ್ನುವಂತೆ ತೆಲುಗಿನಲ್ಲಿ ಹೊಸ ಚಿತ್ರವೊಂದರಲ್ಲಿ ರಿಷಿ ನಟಿಸುತ್ತಿದ್ದಾರೆ. ಹೈದ್ರಾಬಾದ್ ನಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ನೈಜ ಘಟನೆಯ ಪ್ರೇರೆಪಿತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಿಷಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಒಂದೊಳ್ಳೆ ಬಜೆಟ್ ನಲ್ಲಿ ತಯಾರಾಗ್ತಿರುವ ಈ ಸಿನಿಮಾ ಗೋಪಿ ವಿಹಾನಿ ಎಂಬುವವರು ಆಕ್ಷನ್ ಕಟ್ ಹೇಳ್ತಿದ್ದು, ಇದು ಇವರ ಚೊಚ್ಚಲ ಹೆಜ್ಜೆ.. ಬಯೋಪಾಟಿ ಸಿನಿಮಾಗಳಿಗೆ ಬರಹಗಾರರಾಗಿ ದುಡಿದಿರುವ ಗೋಪಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಇಳಿದಿದ್ದಾರೆ.
ತೆಲುಗಿನಲ್ಲಿ (Telugu) ಒಂದಿಷ್ಟು ವರ್ಷಗಳ ಕಾಲ ಮಾರ್ಕೆಟಿಂಗ್ ಹಾಗೂ ಪಿಆರ್ ಆಗಿ ಕೆಲಸ ಮಾಡಿರುವ ಅನುಭವಿರುವ ರವಿ ಪನಸ ತಮ್ಮದೇ ರವಿ ಪಸನ ಫಿಲ್ಮಂ ಕಾರ್ಪೊರೇಷನ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ತಿರುವೀರ್, ಫರಿಯಾ ಅಬ್ದುಲ್ಲಾ, ರವೀಂದರ್ ವಿಜಯ್, ಶೆಲ್ಲಿ ಕಿಶೋರ್, ಕಾಲಕೇಯ ಪ್ರಭಾಕರ್, ಚಿರಾಗ್ ಜಾನಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಿಷಿ ರಾಮನ ಅವತಾರ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.
ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.
ಈಗೇನಿದ್ದರೂ ಡಿಜಿಟಲ್ ಜಮಾನ. ಒಟಿಟಿ ಮೂಲಕ ಸಿನಿಮಾಗಳು ಹಾಗೂ ವೆಬ್ ಸರಣಿಗಳು (Web Series) ಪ್ರೇಕ್ಷಕರ ಎದುರು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ದೊಡ್ಡ ದೊಡ್ಡ ತಾರೆಯರು ಹಾಗೂ ಫಿಲ್ಮಂ ಮೇಕರ್ಸ್ ಸಹ ವೆಬ್ ಸಿರೀಸ್ ಗಳತ್ತ ಚಿತ್ತ ಹರಿಸಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿಯೂ ವೆಬ್ ಸಿರೀಸ್ ಗಳ ನಿರ್ಮಾಣ ಜೋರಾಗಿ ನಡೆಯುತ್ತಿದೆ. ಕನ್ನಡ ತಾರೆಯರು ಕೂಡ ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪ್ರತಿಭಾನ್ವಿತ ನಟ ರಿಷಿ.
ಸಿನಿಮಾಗಳು ಹಾಗೂ ಪಾತ್ರಗಳ ಆಯ್ಕೆಯಲ್ಲಿ ಇವರು ಬಹಳ ವಿಭಿನ್ನ. ಸಸ್ಪೆನ್ಸ್, ಕಾಮಿಡಿ, ಲವ್ ಸ್ಟೋರಿ ಯಾವುದೇ ಇರಲಿ ಎಲ್ಲದಕ್ಕೂ ಸರಿಹೊಂದುವ ನಟ ರಿಷಿ ((Rishi)). ಅದಕ್ಕೆ ಉದಾರಹಣೆ ಅಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ಇವನು ಇರೋದೆ ಹೀಗೆ ಸಿನಿಮಾಗಳು. ಪ್ರತಿ ಸಿನಿಮಾದಲ್ಲಿಯೂ ಹೊಸ ಬಗೆಯ ಕಂಟೆಂಟ್, ಕ್ಯಾರೆಕ್ಟರ್ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ತಾವೊಬ್ಬ ಪ್ರತಿಭಾನ್ವಿತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ. ಇದನ್ನೂ ಓದಿ:ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್
ಸದ್ಯ ರಾಮನ ಅವತಾರ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ರಿಷಿ ಒಂದಷ್ಟು ಹೊಸ ಪ್ರಾಜೆಕ್ಟ್ ಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ಬರೀ ಸಿನಿಮಾಗಳಲ್ಲಿ ಮಾತ್ರವಲ್ಲ ಈಗ ವೆಬ್ ಸಿರೀಸ್ ಜಗತ್ತಿನಲ್ಲಿಯೂ ತಮ್ಮ ನಟನ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ತೆಲುಗಿನ ಹೆಸರಾಂತ ನಿರ್ದೇಶಕರಾದ ಮಹಿ ರಾಘವ್ ನಿರ್ದೇಶನದ ಕ್ರೈಮ್ ಡ್ರಾಮಾ ಶೈತಾನ್ ಮೂಲಕ ರಿಷಿ ತೆಲುಗು ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ವೆಬ್ ಸರಣಿಯಲ್ಲಿ ರಿಷಿ ಬಾಲಿ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕ ಹಾಗೂ ಖಳನಾಯಕ ಎರಡು ಶೇಡ್ ನಲ್ಲಿರುವ ಬಾಲಿ ಪಾತ್ರದ ಸಣ್ಣ ಝಲಕ್ ರಿಲೀಸ್ ಆಗಿದ್ದು, ಕಂಪ್ಲೀಟ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಜೂನ್ 15ರಂದು ಡಿಸ್ನಿ ಹಾಟ್ ಸ್ಟಾರ್ನಲ್ಲಿ ಶೈತಾನ್ (Shaitan) ಸ್ಟ್ರೀಮಿಂಗ್ ಆಗಲಿದೆ. ತೆಲುಗು ಭಾಷೆ ಜೊತೆಗೆ ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂನಲ್ಲಿಯೂ ವೆಬ್ ಸರಣಿ ಮೂಡಿಬರಲಿದೆ. ರವಿಕಾಳೆ, ಜಾಫರ್ ಸಾದಿಕ್, ಲೀನಾ, ಮಣಿಕಂದನ್ ಮುಂತಾದವರು ಶೈತಾನ್ ಸಿರೀಸ್ ಭಾಗವಾಗಿದ್ದಾರೆ. ಹಾಗ್ ನೋಡಿದರೆ ತೆಲುಗು ಚಿತ್ರರಂಗದಲ್ಲಿಯೂ ಪ್ರತಿಭಾನ್ವಿತ ಕಲಾವಿದರ ದಂಡೇ ಇದೆ. ಹಾಗಿದ್ದರೂ ರಿಷಿ ಅವರಿಗೆ ಶೈತಾನ್ ವೆಬ್ ಸಿರೀಸ್ ಸಿಗೋದಿಕ್ಕೆ ಅವರ ಅಭಿನಯವೇ ಕಾರಣ. ರಿಷಿ ಸಿನಿಮಾಗಳನ್ನು ನೋಡಿ ಥ್ರಿಲ್ ಆಗಿದ್ದ ನಿರ್ದೇಶಕ ಮಹಿ ರಾಘವ್ ತಮ್ಮ ವೆಬ್ ಸಿರೀಸ್ ತಾವೇ ನಟಿಸುವ ಆಫರ್ ಇಟ್ಟಿದ್ದರು. ಅದಕ್ಕೆ ನೋ ಎನ್ನದ ರಿಷಿ, ಬಾಲಿಯಾಗಿ ಅಬ್ಬರಿಸಿದ್ದಾರೆ.
ಇತ್ತೀಚೆಗೆ ಕನ್ನಡ ಸಿನಿಮಾಗಳು ಹಾಗೂ ಕನ್ನಡ ಕಲಾವಿದರ ನಟನೆಗೆ ಒಂದೊಳ್ಳೆ ಬೆಲೆ ಸಿಗುತ್ತಿದೆ. ನಮ್ಮ ಇಂಡಸ್ಟ್ರೀಯ ಸ್ಟಾರ್ಸ್ ಅಕ್ಕಪಕ್ಕದ ಸಿನಿ ಲೋಕದಲ್ಲಿ ಮಿಂಚು ಹರಿಸುತ್ತಿದ್ದಾರೆ. ಈಗ ಅದಕ್ಕೆ ಹೊಸ ಸೇರ್ಪಡೆ ರಿಷಿ. ಕಾಮಿಡಿ, ಸಸ್ಪೆನ್ಸ್ ಪಾತ್ರದ ಮೂಲಕ ಗಮನಸೆಳೆದಿದ್ದ ಅವರೀಗ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ದರ್ಶನ ಕೊಡಲು ಸಜ್ಜಾಗಿದ್ದಾರೆ. ಬಹುಕೋಟಿ ಬಜೆಟ್ ನಲ್ಲಿ ತಯಾಗಿರುವ ಶೈತಾನ್ ಮೂಲಕ ಇಡೀ ಇಂಡಿಯನ್ ಸಿನಿಲೋಕಕ್ಕೆ ಪರಿಚಯವಾಗಲಿದ್ದಾರೆ. ಕನ್ನಡದ ಹುಡ್ಗನ ಪ್ರತಿಭೆ ಗಮನಿಸಿ, ಅವರಿಂದ ಮಾತ್ರ ಈ ಪಾತ್ರ ಮಾಡಲು ಸಾಧ್ಯ ಅಂತಾ ಅವಕಾಶ ನೀಡಿರುವ ನಿರ್ದೇಶಕ ಮಹಿ ರಾಘವ್ ಹಾಗೂ ಇಡೀ ಚಿತ್ರತಂಡಕ್ಕೆ ರಿಷಿ ಧನ್ಯವಾದ ಅರ್ಪಿಸಿದ್ದಾರೆ.