Tag: shakthi yojana

  • ‘ಶಕ್ತಿ’ ಯೋಜನೆ ಹೆಸರಿನ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಸಿಎಂ!

    ‘ಶಕ್ತಿ’ ಯೋಜನೆ ಹೆಸರಿನ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಸಿಎಂ!

    ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ (Shakti Scheme) ಗೆ ಈಗಾಗಲೇ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇದೀಗ ಈ ಹೆಸರಿನ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

    ಉದ್ಘಾಟನೆ ಮಾಡಿದ ಬಳಿಕ ತಮ್ಮ ಭಾಷಣದ ವೇಳೆ ‘ಶಕ್ತಿ’ ಎಂದು ಹೆಸರು ಇಟ್ಟಿದ್ದು ಯಾಕೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಹೆಣ್ಣುಮಕ್ಕಳಿಗೆ ಶಕ್ತಿ ತುಂಬೋಕೆ ಅಂತ ಈ ಹೆಸರು ಇಟ್ಟೆವು. ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮತೋಲನ ಕಡಿಮೆ ಮಾಡಬಹುದು. 5 ಗ್ಯಾರಂಟಿ ಪೈಕಿ 4 ಗ್ಯಾರಂಟಿ ಮಹಿಳೆಯರಿಗೆ ಸೀಮಿತ, ಅವರಿಗೆ ಸಂಬಂಧಿಸಿದೆ. ಕೆಲವರು ಇದಕ್ಕೆ ಗೇಲಿ ಮಾಡಿ, ಕುಹಕ ಮಾತು ಆಡ್ತಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ. ಗೇಲಿ ಮಾಡೋರಿಗೆ, ಕುಹಕ ಮಾಡೋರಿಗೆ ಸೊಪ್ಪು ಹಾಕಲ್ಲ ಎಂದು ಹೇಳಿದರು.

    ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದ್ರೆ ಪುರುಷರಷ್ಟೆ ಮಹಿಳೆಯರಿಗೆ ಅವಕಾಶ ಸಿಗಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಇಲ್ಲದೆ ಹೋದ್ರೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಯಾವುದೇ ಅಭಿವೃದ್ಧಿ ಹೊಂದಿದ ದೇಶದಲ್ಲಿ ಮಹಿಳೆಯರೇ ಹೆಚ್ಚು ಅವಕಾಶ ಪಡೆಯುತ್ತಿದ್ದಾರೆ. ಅಮೆರಿಕಾ, ಚೀನ, ಆಸ್ಟ್ರೇಲಿಯ, ಇಂಡೋನೇಷ್ಯಾ, ಬಾಂಗ್ಲಾದೇಶದಲ್ಲಿ ಹೆಚ್ಚು ಮಹಿಳೆಯರು ಪಾಲ್ಗೊಳ್ಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಕಪ್ಪು ಹಣ ತಂದು ನಮ್ಮ ಅಕೌಂಟ್‌ಗೆ ಹಾಕ್ಲಿಲ್ಲ; ಬಿಜೆಪಿ ವಿರುದ್ಧ ನಾವು ಅಭಿಯಾನ ಮಾಡ್ಬೇಕಾಗುತ್ತೆ – ಡಿಕೆಶಿ

    ಭಾರತದಲ್ಲಿ 24% ಮಾತ್ರ ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದಾರೆ. 2014 ರಲ್ಲಿ 30% ರಿಂದ 24% ಗೆ ಇಳಿದಿದೆ. ಇದನ್ನ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಮಹಿಳೆಯ ಬಗ್ಗೆ ಮೊಸಳೆ ಕಣ್ಣೀರು ಹಾಕೋರ ಕಾಲದಲ್ಲಿ 30% ನಿಂದ 24% ಮಹಿಳೆ ಪಾಲ್ಗೊಳ್ಳುವಿಕೆ ಆಗಿದೆ. ಮನುವಾದಿಗಳು ಬಯಸೋದೆ ಅದು. ಹೆಣ್ಣು ಮಕ್ಕಳು ಹೊರಗೆ ಬರಬಾರದು ಅನ್ನೋದು ಮನುವಾದಿಗಳ ಆಸೆ. ಯಾವ ದೇಶದಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದರೆ ದೇಶ ಅಭಿವೃದ್ಧಿ ಆಗುತ್ತೆ ಎಂದರು.

  • ‘ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    ‘ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಉದ್ಘಾಟಿಸಿದ್ದಾರೆ.

    ವಿಧಾನಸೌಧ (Vidhanasoudha) ದಲ್ಲಿ ನಾಡಗೀತೆಯೊಂದಿಗೆ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಿಎಸ್ ವಂದಿತಾ ಶರ್ಮಾ ಅವರಿಗೆ ಮೊದಲ ಶೂನ್ಯ ಟಿಕೆಟ್ ನೀಡಿ ಉಚಿತ ಪ್ರಯಾಣ (Free Bus Ticket For Women) ಕ್ಕೆ ಚಾಲನೆಯನ್ನು ಸಿಎಂ ನೀಡಿದರು. ಇದನ್ನೂ ಓದಿ: ನಮ್ಗೆ ಫ್ರೀ ಟಿಕೆಟ್ ಬೇಡ್ವೇಬೇಡ, ದಯವಿಟ್ಟು ಎಣ್ಣೆ ರೇಟು ಇಳಿಸಿ: ಯುವಕ ಮನವಿ

    ಡಿಸಿಎಂ ಡಿಕೆಶಿವಕುಮಾರ್ (DK Shivakumar), ಸಚಿವ ಮಧು ಬಂಗಾರಪ್ಪ, ಸಚಿವ ಕೆಜೆ ಜಾರ್ಜ್, ಎಂಎಲ್‍ಸಿ ಹರಿಪ್ರಸಾದ್, ನಾಗರಾಜ್ ಯಾದವ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದ್ ರಾಜು, ಅಧಿಕಾರಿಗಳಾದ ರಾಖೇಶ್ ಸಿಂಗ್, ರಜನೀಶ್ ಗೊಯಲ್, ಬಿಎಂಟಿಸಿ ಎಂಡಿ ಸತ್ಯವತಿ, ಅನ್ಬು ಕುಮಾರ್ ಮೊದಲಾದ ಗಣ್ಯರು ವೇದಿಕೆ ಮೇಲೆ ಉಪಸ್ಥಿತರಿದ್ದರು.

    ಇಂದು (ಭಾನುವಾರ) ಮಧ್ಯಾಹ್ನ 1 ಗಂಟೆಯ ನಂತರ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ. 18,609 ಬಸ್‍ಗಳು ಉಚಿತ ಪ್ರಯಾಣಕ್ಕೆ ಲಭ್ಯ ಇವೆ. 41.80 ಲಕ್ಷ ಮಹಿಳೆಯರು ಈ ಸೌಲಭ್ಯದ ಫಲಾನುಭವಿಗಳು ಎಂದು ಅಂದಾಜಿಸಲಾಗಿದೆ.