Tag: shakthi yojane

  • ಇಂದಿನಿಂದ ಮಹಿಳೆಯರಿಗೆ ಬಸ್ ಫ್ರೀ- ನಗರದಾದ್ಯಂತ 2,000 ಹೋಮ್‍ಗಾರ್ಡ್ಸ್ ನಿಯೋಜನೆ

    ಇಂದಿನಿಂದ ಮಹಿಳೆಯರಿಗೆ ಬಸ್ ಫ್ರೀ- ನಗರದಾದ್ಯಂತ 2,000 ಹೋಮ್‍ಗಾರ್ಡ್ಸ್ ನಿಯೋಜನೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇವತ್ತು ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಲಿದ್ದಾರೆ. ಮೊದಲ ಬಾರಿಗೆ ಮಹಿಳೆಯರಿಗೆ ರಾಜ್ಯಾದ್ಯಂತ ಬಸ್ ಫ್ರೀ ಜೊತೆಗೆ ಒಂದಷ್ಟು ಕಿರಿಕ್ ಗಳು ನಡೆಯೋ ಸಾಧ್ಯತೆ ಕೂಡ ಇದೆ. ಇದಕ್ಕೆ ಪೊಲೀಸ್ ಇಲಾಖೆ (Police Department) ಕೂಡ ಮುಂಜಾಗ್ರತೆ ಕ್ರಮ ಕೈಗೊಂಡಿದೆ.

    ಹೌದು. ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರು ಫ್ರೀ ಆಗಿ ಓಡಾಡೋಕೆ ಖುಷಿಯಿಂದ ಕಾತರರಾಗಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಆದರೆ ಮಹಿಳೆಯರ ಫ್ರೀ ಬಸ್ ಪ್ರಯಾಣಕ್ಕೆ ವೋಟರ್ ಐಡಿ, ರೇಷನ್ ಕಾರ್ಡ್ ಹಾಗೂ ಅಧಾರ್ ಕಾರ್ಡ್ (Adhar card) ಸೇರಿದಂತೆ ಯಾವುದಾರು ಒಂದು ದಾಖಲೆ ಇಟ್ಟುಕೊಳ್ಳಬೇಕಿದೆ. ಹಾಗಾಗಿ ಈ ವಿಚಾರದಲ್ಲಿ ಪ್ರಯಾಣಿಕರು ಮತ್ತು ಬಸ್ ಸಿಬ್ಬಂದಿ ನಡುವೆ ಕಿರಿಕ್ ಆಗೋ ಸಾಧ್ಯತೆಗಳಿವೆ. ಈ ಹಿನ್ನೆಲೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.

    ಬೆಂಗಳೂರಿನದ್ಯಂತ ಸುಮಾರು ಎರಡು ಸಾವಿರ ಹೋಮ್ ಗಾರ್ಡ್‍ಗಳನ್ನು ನಿಯೋಜನೆ ಮಾಡಿದ್ದು, ಪ್ರತಿ ಬಸ್‍ನಲ್ಲಿ ಇಬ್ಬರು ಹೋಮ್ ಗಾಡ್ರ್ಸ್, ಬಸ್ ನಿಲ್ದಾಣಗಳಲ್ಲಿ ಹೆಚ್ಚುವರಿ ಹೋಮ್ ಗಾರ್ಡ್‍ಗಳ ನಿಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: 100 ಯೂನಿಟ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡ್ಬೇಕು – ಸಿಎಂ ಪ್ರಶ್ನೆ

    ಪ್ರಯಾಣಿಕರು ಹಾಗೂ ಸಿಬ್ಬಂದಿ ನಡುವೆ ಯಾವುದೇ ಗಲಾಟೆಗಳು, ಗೊಂದಲಗಳು ನಡೆಯದಂತೆ ಎಚ್ಚರಿಕೆ ವಹಿಸಲು ಬೆಂಗಳೂರು ಪೊಲೀಸ್ ಕಮಿಷನರ್ ಸಂಬಂಧಪಟ್ಟ ಡಿವಿಜನ್‍ಗಳ ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್ ಗಳಿಗೆ ಸೂಚನೆ ನೀಡಿದ್ದಾರೆ. ಹಾಗಾಗಿ ಪ್ರತಿ ಡಿವಿಜನ್‍ಗೆ 350 ಹೋಮ್ ಗಾರ್ಡ್‍ಗಳಂತೆ 8 ಡಿವಿಷನ್‍ಗಳಲ್ಲಿ 2 ಸಾವಿರ ಹೋಮ್‍ಗಳನ್ನು ಭದ್ರೆತೆ ನಿಯೋಜನೆ ಮಾಡಲಾಗಿದೆ. ಪೊಲೀಸರು ಕೂಡ ಸಾಥ್ ನೀಡಲಿದ್ದು, ಬಸ್ ನಿಲ್ದಾಣಗಳು, ಮತ್ತು ರಸ್ತೆಗಳಲ್ಲಿ ಹೆಚ್ಚಿನ ಗಸ್ತು ತಿರುಗಲಿದ್ದಾರೆ.

    ಒಟ್ಟಿನಲ್ಲಿ ಇಂದು 1 ಗಂಟೆ ನಂತರ ಮಹಿಳೆಯರು ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಓಡಾಡಬಹುದಾಗಿದೆ. ಯಾವುದೇ ಗೊಂದಲ, ಗಲಾಟೆಗಳು ಆಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

  • ಸುವರ್ಣಾವಕಾಶ ಕಳೆದುಕೊಳ್ಳಲು ಬಯಸದ ಡಿಕೆಶಿ!

    ಸುವರ್ಣಾವಕಾಶ ಕಳೆದುಕೊಳ್ಳಲು ಬಯಸದ ಡಿಕೆಶಿ!

    ಬೆಂಗಳೂರು: ಮುಂದೊಂದು ದಿನ ಈ ರಾಜ್ಯದ ಸಿಎಂ ಆಗಲೇ ಬೇಕು ಎಂಬ ಆಕಾಂಕ್ಷೆ ಹೊಂದಿರುವ ಈಗಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ತಮಗೆ ಬಂದೊದಗುವ ಯಾವುದೇ ಅವಕಾಶವನ್ನು ಕೈಚೆಲ್ಲಲು ಸಿದ್ಧರಿಲ್ಲ.

    ಹೌದು, ಸಂಕಷ್ಟ ಕಾಲದಲ್ಲಿ ಪಕ್ಷದ ಚುಕ್ಕಾಣಿ ಹಿಡಿಯುವ ಸಂದರ್ಭ ಬಂದಾಗ, ಅದು ಸೂಕ್ತ ಕಾಲವಲ್ಲ ಎಂಬ ಹಿತೈಷಿಗಳ ಕಿವಿಮಾತನ್ನು ಲೆಕ್ಕಿಸದೇ ಕೆಪಿಸಿಸಿ ಅಧ್ಯಕ್ಷ ಗಾದಿಯನ್ನು ಡಿಕೆಶಿ ಒಪ್ಪಿಕೊಂಡಿದ್ದರು. ಇದೀಗ ಮುಂದಿನ ಸರದಿಯಲ್ಲಿ ಸಿಎಂ ಗಾದಿ ಖಚಿತ ಎಂಬ ಹೈಕಮಾಂಡ್ (Congress HighCommand) ಭರವಸೆಯಲ್ಲಿ ಡಿಸಿಎಂ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಮುಂದೊಂದು ದಿನ ಗುರಿ ತಲುಪುತ್ತೇನೆ ಎನ್ನುವ ಭರವಸೆಯಲ್ಲಿ ಇದ್ದಾರೆ.

    ಈಗ ವಿಷಯ ಏನಪ್ಪಾ ಅಂದ್ರೆ, ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಪೈಕಿ ಮೊದಲನೆಯದ್ದಕ್ಕೆ ನಾಳೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಕಾರ್ಯಕ್ರಮ ನಾಳೆ ನಡೆಯಲಿದೆ. ನಾಳಿನ ಮುಹೂರ್ತ ನಿಗದಿ ಮಾಡಿದ್ದೇ ಡಿ.ಕೆ ಶಿವಕುಮಾರ್ ಅಂತೆ. ಹೇಳಿ ಕೇಳಿ ಪರಮ ದೈವಭಕ್ತರಾದ ಅವರು, ಶುಭಮುಹೂರ್ತವನ್ನೇ ಆಯ್ಕೆ ಮಾಡಿಕೊಂಡಿದ್ದಾರಂತೆ. ಈ ನಡುವೆ ಅವರು ಚುನಾವಣೆಗೂ ಮುನ್ನ ಹರಕೆ ಹೊತ್ತುಕೊಂಡಂತೆ ಉಜ್ಜೈನಿ (Ujjaini) ಸೇರಿದಂತೆ ಉತ್ತರಭಾರತದ ಕೆಲವು ದೇವಾಲಯ ದರ್ಶನಕ್ಕೆ ಶನಿವಾರ ಹೊರಟು ನಿಂತಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆಗೆ ಭಾನುವಾರ ಚಾಲನೆ- ಬಸ್ ಕಂಡಕ್ಟರ್ ಆಗಲಿದ್ದಾರೆ ಸಿದ್ದರಾಮಯ್ಯ

     ಶುಕ್ರವಾರ ನಿಗದಿಯಾದ ಕಾರ್ಯಕ್ರಮದಂತೆ ಅವರು ಭಾನುವಾರ ಸಂಜೆಯ ಹೊತ್ತಿಗೆ ವಾಪಸ್ಸಾಗಬೇಕಿತ್ತು. ಆದರೆ ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ನೂತನ ಸರ್ಕಾರದ ಮಹತ್ವದ ಮೊದಲ ಗ್ಯಾರಂಟಿ ಕಾರ್ಯಕ್ರಮಕ್ಕೆ ಡಿಕೆಶಿ ಗೈರಾಗುತ್ತಿದ್ದಾರಲ್ಲ. ಪಕ್ಷ ಹಾಗೂ ಸರ್ಕಾರದ ಕಾರ್ಯಕ್ಕಿಂತ ದೇವಾಲಯ ದರ್ಶನವೇ ಮುಖ್ಯವಾಯಿತೇ ಎಂದು. ಆದರೆ ಸಿಎಂ ಸಿದ್ದರಾಮಯ್ಯ (Siddaramaiah) ಬಿಡಬೇಕಲ್ಲ. ಏನಪ್ಪಾ ಮುಹೂರ್ತ ನಿಗದಿಪಡಿಸಿ ನೀವೇ ಇಲ್ಲಾಂದ್ರೆ ಹೇಗೇ ಅಂತ ಕೇಳಿದ್ರಂತೆ. ತಕ್ಷಣ ಡಿ.ಕೆ ಶಿವಕುಮಾರ್ ತಮ್ಮ ಮುಂದಿರುವ ಸುವರ್ಣಾವಕಾಶವನ್ನು ತಪ್ಪಿಸಿಕೊಳ್ಳಲು ಬಯಸಲಿಲ್ಲ.

    ದೇವಾಲಯ ದರ್ಶನ ಕಾರ್ಯಕ್ರಮದಲ್ಲೇ ಸ್ವಲ್ಪ ಬದಲಾವಣೆ ಮಾಡಿ, ನಾಳೆ (ಭಾನುವಾರ) 11 ಗಂಟೆಗೆ ಬೆಂಗಳೂರಿಗೆ ಬರುವಂತೆ ಪ್ಲಾನ್ ಮಾಡಿದ್ದಾರೆ. ಸರ್ಕಾರ ಮೊದಲ ಗ್ಯಾರಂಟಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೀರ್ಮಾನಿಸಿದ್ದಾರೆ. ಅಂದರೆ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಡಿಕೆಶಿ, ತಮ್ಮ ಮುಂದೆ ಬರುವ ಯಾವುದೇ ಅವಕಾಶವನ್ನು ಕೈಚೆಲ್ಲುವ ತಪ್ಪನ್ನು ಮಾಡದಿರಲು ನಿರ್ಧರಿಸಿದಂತೆ ಕಾಣುತ್ತೆ. ಸದ್ಯ ಸಂಪುಟದಲ್ಲಿ ಎಲ್ಲರಿಗಿಂತ ಸ್ವಲ್ಪ ಹೆಚ್ಚಾಗಿಯೇ ನುಗ್ಗುತ್ತಿರುವ ಡಿಕೆಶಿವಕುಮಾರ್, ಕೆಲವೊಮ್ಮೆ ಸಿಎಂ ಸಿದ್ದರಾಮಯ್ಯ ಅವರನ್ನೂ ಓವರ್ ಟೇಕ್ ಮಾಡುವುದನನ್ನು ಗಮನಿಸಬಹುದು.