Tag: shakthinagar

  • ತಾಯಿ, ಮಗನಿಗೆ ಕೊರೊನಾ – ಮಂಗ್ಳೂರು ನಗರ ಸೀಲ್ ಡೌನ್

    ತಾಯಿ, ಮಗನಿಗೆ ಕೊರೊನಾ – ಮಂಗ್ಳೂರು ನಗರ ಸೀಲ್ ಡೌನ್

    ಮಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು ತಾಯಿ ಹಾಗೂ ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕೆಲವೆಡೆ ಸೀಲ್ ಡೌನ್ ಮಾಡಲಾಗಿದೆ.

    ಮಂಗಳೂರಿನ ಶಕ್ತಿನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರು ವಾಸ ಮಾಡುತ್ತಿದ್ದ ಮನೆಯಿಂದ 200 ಮೀಟರ್ ಸುತ್ತ ಸೀಲ್ ಡೌನ್ ಮಾಡಲಾಗಿದ್ದು, ಅಲ್ಲಿಂದ 5 ಕಿಲೋಮೀಟರ್ ಅಂದರೆ ಪೂರ್ವಕ್ಕೆ ವಾಮಂಜೂರು ಜಂಕ್ಷನ್, ಪಶ್ಚಿಮಕ್ಕೆ ಉರ್ವ ಮಾರ್ಕೆಟ್, ಉತ್ತರಕ್ಕೆ ಪದವಿನಂಗಡಿ ಹಾಗೂ ದಕ್ಷಿಣಕ್ಕೆ ಬಂಟ್ಸ್ ಹಾಸ್ಟಲ್ ಜಂಕ್ಷನ್ ಬಫರ್ ಝೋನ್ ಮಾಡಲಾಗಿದೆ. ಬಫರ್ ಝೋನ್ ನ ಅಡಿ 4,800 ಮನೆಗಳು, 1,300 ಕಚೇರಿ ಮತ್ತು ಅಂಗಡಿಗಳು, 73 ಸಾವಿರ ಜನ ವಾಸವಾಗಿದ್ದಾರೆ.

    ರಾಜ್ಯದಲ್ಲಿ ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ಬುಲೆಟಿನ್ ಪ್ರಕಾರ 8 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಬೆಂಗಳೂರಿನಲ್ಲಿ 1, ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ವಿಜಯಪುರದಲ್ಲಿ 2 ಕೊರೊನಾ ಸೋಂಕಿತ ಪ್ರಕರಣ ಕಂಡು ಬಂದಿತ್ತು. ಇದರಲ್ಲಿ ದಕ್ಷಿಣ ಕನ್ನಡದಲ್ಲಿ ರೋಗಿ-506 45 ವರ್ಷದ ಪುರುಷ ರೋಗಿ-432 ಜೊತೆ ಸಂಪರ್ಕ ಹಾಗೂ ರೋಗಿ-507 80 ವರ್ಷದ ವೃದ್ಧೆ ರೋಗಿ-432 ಜೊತೆ ಸಂಪರ್ಕ ಹೊಂದಿದ್ದರಿಂದ ಕೊರೊನಾ ಬಂದಿದೆ ಎಂದು ವರದಿಯಾಗಿತ್ತು.

  • ಬಲಪಂಥೀಯರು, ಪಿಎಫ್‍ಐನವರ ಓವರ್ ಆ್ಯಕ್ಟಿಂಗೇ ಕೋಮು ವೈಷಮ್ಯಕ್ಕೆ ಕಾರಣ : ರಾಮಲಿಂಗಾರೆಡ್ಡಿ

    ಬಲಪಂಥೀಯರು, ಪಿಎಫ್‍ಐನವರ ಓವರ್ ಆ್ಯಕ್ಟಿಂಗೇ ಕೋಮು ವೈಷಮ್ಯಕ್ಕೆ ಕಾರಣ : ರಾಮಲಿಂಗಾರೆಡ್ಡಿ

    ಮಂಗಳೂರು: ಸಂಘಟನೆಗಳ, ರಾಜಕೀಯ ನಾಯಕರ ಕುಮ್ಮಕ್ಕಿನಿಂದ ಕರಾವಳಿಯಲ್ಲಿ ಕೋಮು ವೈಷಮ್ಯದ ಗಲಾಟೆ ಆಗುತ್ತಿದೆ. ಇದಕ್ಕೆಲ್ಲ ಬಲಪಂಥೀಯರು, ಪಿಎಫ್‍ಐನವರ ಓವರ್ ಆ್ಯಕ್ಟಿಂಗ್ ಕಾರಣ ಅಂತ ಗೃಹ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

    ಮಂಗಳೂರಿನ ಶಕ್ತಿನಗರದಲ್ಲಿ ಪೊಲೀಸ್ ವಸತಿಗೃಹಕ್ಕೆ ಶಿಲಾನ್ಯಾಸಗೈದು ಮಾತನಾಡಿದ ಅವರು, ಇವರೆಲ್ಲ ಸ್ವಲ್ವ ಸುಮ್ಮನಿದ್ದರೆ ಎಲ್ಲವೂ ಸರಿಯಾಗುತ್ತೆ. ಜನರಿಗೆ ಈ ಗಲಾಟೆ ಯಾವುದೂ ಬೇಕಾಗಿಲ್ಲ ಅಂತ ಅವರು ಹೆಳಿದ್ರು.

    ಇನ್ನು ಸಂಘಟನೆಗಳ ನಿಷೇಧ ತಕ್ಷಣಕ್ಕೆ ಯಾವುದೇ ಪ್ರಸ್ತಾಪ ಇಲ್ಲ. ನಿಷೇಧ ಮಾಡಿದ್ರೆ ಎರಡೂ ಕಡೆಯ ಸಂಘಟನೆಗಳನ್ನು ನಿಷೇಧ ಮಾಡಬೇಕು. ಮುಖ್ಯಮಂತ್ರಿ ಪ್ರವಾಸದಲ್ಲಿದ್ದಾರೆ, ಆ ನಂತ್ರ ಈ ಬಗ್ಗೆ ನೋಡ್ತೀವಿ ಅಂದ್ರು.

    ಮೂಡಿಗೆರೆಯಲ್ಲಿ ಧನ್ಯಶ್ರೀ ಪ್ರಾಣ ಹೋಗಿದ್ದಕ್ಕೆ ಬೆಲೆ ಇಲ್ಲವೇ? ಇವರು ಯಾಕೆ ಅಲ್ಲಿ ಹೋಗಿ ಖಂಡಿಸುತ್ತಿಲ್ಲ? ದ್ವಂದ್ವ ನೀತಿ ಯಾಕೆ? ಆ ಗಲಾಟೆಯಲ್ಲಿರೋದು ಎಲ್ಲರು ಯುವಮೋರ್ಚಾದವರು. ಪೊಲೀಸರು ಎಲ್ಲ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಥರದ ಸಂಘಟನೆಗಳಿಗೆ ಜನವೇ ಉತ್ತರ ನೀಡಲಿದ್ದಾರೆ ಅಂತ ಅವರು ತಿಳಿಸಿದ್ರು.