Tag: shakuntalam film

  • ‘ಶಾಕುಂತಲಂ’ ಸಿನಿಮಾ ಸೋಲೊಪ್ಪಿಕೊಂಡ ನಿರ್ಮಾಪಕ ದಿಲ್ ರಾಜು

    ‘ಶಾಕುಂತಲಂ’ ಸಿನಿಮಾ ಸೋಲೊಪ್ಪಿಕೊಂಡ ನಿರ್ಮಾಪಕ ದಿಲ್ ರಾಜು

    ಸೌತ್ ಬ್ಯೂಟಿ ಸಮಂತಾ (Samantha) ನಟನೆಯ ‘ಶಾಕುಂತಲ’ (Shakuntalam) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ಮಾಡೋದ್ರಲ್ಲಿ ಸೋತಿತ್ತು. ಮೊದಲ ವಾರವೇ ಚಿತ್ರಮಂದಿರಲ್ಲಿ ಸಮಂತಾ ಸಿನಿಮಾ ಮಕಾಡೆ ಮಲಗಿತ್ತು. ಇದೀಗ ‘ಶಾಕುಂತಲಂ’ ಸಿನಿಮಾ ಮಾಡಿ ದೊಡ್ಡ ಹೊಡೆತ ತಿಂದೆ ಎಂದು ನಿರ್ಮಾಪಕ ದಿಲ್ ರಾಜು (Producer Dil Raju) ಪ್ರತಿಕ್ರಿಯೆ ನೀಡಿದ್ದಾರೆ.

    ‘ಪುಷ್ಪ’ (Pushpa)  ಚಿತ್ರದ ಸಾಂಗ್ ಸಮಂತಾ ಸೊಂಟ ಬಳುಕಿಸಿ ಗೆದ್ದು ಬೀಗಿದ್ದರು. ಬಳಿಕ ಯಶೋದ (Yashoda) ಚಿತ್ರದಲ್ಲಿ ಸ್ಯಾಮ್ ನಟನೆಯಿಂದ ಸಕ್ಸಸ್ ಕಂಡಿತ್ತು. ಸಹಜವಾಗಿ ‘ಶಾಕುಂತಲಂ’ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿತ್ತು. ಆದರೆ ಈ ಸಿನಿಮಾ ಎಲ್ಲಾ ಲೆಕ್ಕಾಚಾರ ತಲೆ ಕೆಳಗಾಗುವಂತೆ ಮಾಡಿತ್ತು. ಚಿತ್ರಮಂದಿರಲ್ಲಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ವಿಫಲವಾಗಿತ್ತು.‌ ಇದನ್ನೂ ಓದಿ:ಮೊದಲ ಬಾರಿಗೆ ಬೇಬಿ ಬಂಪ್ ಫೋಟೋ ರಿವೀಲ್ ಮಾಡಿದ ನಟಿ ಇಲಿಯಾನಾ

    ಇದೀಗ ಸಂದರ್ಶನವೊಂದರಲ್ಲಿ ನಿರ್ಮಾಪಕ ದಿಲ್ ರಾಜು ‘ಶಾಕುಂತಲಂ’ ಸಿನಿಮಾ ಸೋಲಿನ ಬಗ್ಗೆ ಮೌನ ಮುರಿದಿದ್ದಾರೆ. ನಾನು 50ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. ನಾಲ್ಕರಿಂದ ಐದು ಸಿನಿಮಾಗಳು ಮಾತ್ರ ನನಗೆ ಆರ್ಥಿಕವಾಗಿ ಹೊರೆಯಾಗಿವೆ. ನನ್ನ 25 ವರ್ಷಗಳ ಕೆರಿಯರ್‌ನಲ್ಲಿ ‘ಶಾಕುಂತಲಂ’ ಸಿನಿಮಾ ದೊಡ್ಡ ಹೊಡೆತ ನೀಡಿತು ಎಂದಿದ್ದಾರೆ. ಯಶಸ್ಸು ಸಿಕ್ಕಿಲ್ಲ ಅಂದರೆ ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ಜನರಿಗೆ ಸಿನಿಮಾ ಇಷ್ಟ ಆದರೆ ಅದನ್ನು ಸೆಲೆಬ್ರೇಟ್ ಮಾಡುತ್ತಾರೆ. ಒಂದೊಮ್ಮೆ ಅವರು ಸೆಲಬ್ರೆಟ್ ಮಾಡಿಲ್ಲ ಎಂದರೆ ನನ್ನ ಜಡ್ಜ್‌ಮೆಂಟ್ ತಪ್ಪಾಗಿದೆ ಎಂದರ್ಥ ಎಂದು ದಿಲ್ ರಾಜು ಹೇಳಿದ್ದಾರೆ.

    ಇನ್ನೂ ‘ಶಾಕುಂತಲಂ’ ಸಿನಿಮಾದ ಸೋಲಿನ ನಂತರ ನಟಿ ಸಮಂತಾ ಬಾಲಿವುಡ್ ‘ಸಿಟಾಡೆಲ್ʼ ವೆಬ್ ಸೀರಿಸ್‌ನತ್ತ ಮುಖ ಮಾಡಿದ್ದಾರೆ. ವರುಣ್ ಧವನ್‌ಗೆ ನಾಯಕಿಯಾಗಿ ಸ್ಯಾಮ್ ನಟಿಸುತ್ತಿದ್ದಾರೆ.

  • ಸಮಂತಾ ಫ್ಲಾಪ್‌ ಕ್ವೀನ್‌, ಆಕೆಗೆ ಮಾರ್ಕೆಟ್‌ ಇಲ್ಲ- ವಿಮರ್ಶಕನ ವಿವಾದಾತ್ಮಕ ಟ್ವೀಟ್‌

    ಸಮಂತಾ ಫ್ಲಾಪ್‌ ಕ್ವೀನ್‌, ಆಕೆಗೆ ಮಾರ್ಕೆಟ್‌ ಇಲ್ಲ- ವಿಮರ್ಶಕನ ವಿವಾದಾತ್ಮಕ ಟ್ವೀಟ್‌

    ಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ‘ಶಾಕುಂತಲಂ’ (Shakuntalam) ಸಿನಿಮಾ ಏ.14ರಂದು ರಿಲೀಸ್ ಆಗಿದೆ. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಮಂತಾ (Samantha) ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಕಲೆಕ್ಷನ್ ಏನು ಮಾಡಿಲ್ಲ. ಸದಾ ಒಂದಲ್ಲಾ ಒಂದು ವಿವಾದದ ಮೂಲಕ ಸದ್ದು ಮಾಡುವ ವಿಮರ್ಶಕ ಉಮೈರ್ ಸಂಧು ಇದೀಗ ಸಮಂತಾ ಸಿನಿಮಾ ಬಗ್ಗೆ ಕಿಡಿಕಾರಿದ್ದಾರೆ. ಸಮಂತಾ ‘ಫ್ಲಾಪ್ ಕ್ವೀನ್’ ಎಂದು ಟ್ವೀಟ್ ಮಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ. ಇದನ್ನೂ ಓದಿ:ಸೂರ್ಯನಿಗೆ ನಾಯಕಿಯಾದ ಬಾಲಿವುಡ್ ನಟಿ ದಿಶಾ ಪಟಾನಿ

    ‘ಪುಷ್ಪ’ (Pushpa) ಬ್ಯೂಟಿ ಸಮಂತಾ, ‘ಯಶೋದ’ (Yashoda) ಸೂಪರ್ ಸಕ್ಸಸ್ ನಂತರ ‘ಶಾಕುಂತಲಂ’ (Shakuntalam) ಚಿತ್ರದ ಮೂಲಕ ಶಾಕುಂತಲೆಯಾಗಿ ಬಂದರು. ಆದರೆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ವಿಷ್ಯದಲ್ಲಿ ಸೋತಿದೆ. ಸೆಲೆಬ್ರಿಟಿಗಳ ಪರ್ಸನಲ್ ಲೈಫ್ ಬಗ್ಗೆ ಕಾಮೆಂಟ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಈಗ ಸಮಂತಾ ವಿರುದ್ಧವು ಟ್ವೀಟ್ ಮಾಡಿದ್ದು, ಫ್ಲಾಪ್ ಕ್ವೀನ್ ಎಂದು ಬರೆದುಕೊಂಡಿದ್ದಾರೆ.

    ಸಮಂತಾ, ಕೆರಿಯರ್- ಕ್ರೇಜ್ ಮುಗಿದ ಅಧ್ಯಾಯ. ಇವರ ಸೋಲೋ ಹಾಗೂ ಅತೀ ದೊಡ್ಡ ರಿಲೀಸ್ ‘ಶಾಕುಂತಲ’ ಮೊದಲ ದಿನ ವಿಶ್ವದಾದ್ಯಂತ ದುರಂತ ಕಂಡಿದೆ. ಸಮಂತಾ ಒಬ್ಬರು ಫ್ಲಾಪ್ ಕ್ವೀನ್. ನಿರ್ಮಾಪಕರಿಗೆ ಸಿಕ್ಕಾಪಟ್ಟೆ ಹಣ ನಷ್ಟ ಆಗಿದೆ. ಮೊದಲ ದಿನದ ಕಲೆಕ್ಷನ್ ನಾಚಿಕೆಗೇಡು ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ಈಗ ವೈರಲ್ ಆಗಿದೆ. ಇದರ ಹಿಂದೇನೆ ಇನ್ನೊಂದು ಟ್ವೀಟ್ ಮಾಡಿದ್ದಾರೆ.

    ಮೊದಲ ಟ್ವೀಟ್ ಸಿನಿಮಾ ರಿಲೀಸ್ ಆದ ದಿನ ಮಾಡಿದ್ದರು. ಏಪ್ರಿಲ್ 16ರಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ‘ಶಾಕುಂತಲಂʼ ಸಿನಿಮಾದ ಸೋಲಿನ ಬಳಿಕ ಸಮಂತಾ ಖಿನ್ನತೆಗೆ ಜಾರಿದ್ದಾರೆ. ನಿನ್ನೆಯಿಂದ ಸಮಂತಾ ತನ್ನ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ಬ್ರ‍್ಯಾಂಡ್ ಹಾಗೂ ಮಾರ್ಕೆಟ್ ಬೆಲೆ ಒಂದು ದಿನದಲ್ಲೇ ಕಡಿಮೆಯಾಗಿದೆ ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಉಮೈರ್ ಸಂಧು ಟ್ವೀಟ್‌ಗೆ ಸಮಂತಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ನೆಚ್ಚಿನ ನಟಿ ಸಮಂತಾ ಬಗ್ಗೆ ಉಮೈರ್‌ ಸಂಧು (Umair Sandhu) ಟ್ವೀಟ್‌ ಮಾಡಿದ ರೀತಿಗೆ ಅಭಿಮಾನಿಗಳು ಕಿಡಿಕಾರಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಮರ್ಶಕನಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

  • ಸಮಂತಾ ಮುಖ ಕಿತ್ತು ಹೋಗಿದೆ, ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕ

    ಸಮಂತಾ ಮುಖ ಕಿತ್ತು ಹೋಗಿದೆ, ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕ

    ಸ್ಟಾರ್ ನಟಿ ಸಮಂತಾ ಅವರು ಚಿತ್ರರಂಗದಲ್ಲಿ ಯಾರ ಸಹಾಯವಿಲ್ಲದೇ ತನ್ನ ಶ್ರಮದಿಂದ ನೆಲೆಗಿಟ್ಟಿಸಿಕೊಂಡ ಪ್ರತಿಭಾನ್ವಿತ ನಟಿ. ಸದ್ಯ ‘ಶಾಕುಂತಲಂ’ ಚಿತ್ರದ ನಟನೆಗಾಗಿ ಸ್ಯಾಮ್ ಗಮನ ಸೆಳೆಯುತ್ತಿದ್ದಾರೆ. ಚಿತ್ರಕ್ಕೆ ಬರುತ್ತಿರುವ ಕಾಮೆಂಟ್ಸ್‌ನಿಂದಾಗಿ ಖುಷಿಯಲ್ಲಿರುವ ಸಮಂತಾ ಬಗ್ಗೆ ನಿರ್ಮಾಪಕನೊಬ್ಬ ಕಟುವಾಗಿ ಮಾತನಾಡಿದ್ದಾರೆ. ಸಮಂತಾಳದ್ದು ಅಜ್ಜಿ ಮುಖ, ಅವಳ ವೃತ್ತಿ ಜೀವನ ಮುಗಿದಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

    ಅನಾರೋಗ್ಯದ ವಿರುದ್ಧ ನಟಿ ಹೋರಾಡುತ್ತಿದ್ದಾರೆ. ಸಿನಿಮಾಗಳಿಗೆ ಪ್ರಾಮುಖ್ಯತೆ ನೀಡ್ತಿದ್ದಾರೆ. ಈ ನಡುವೆ ತೆಲುಗಿನ ನಿರ್ಮಾಪಕ ಚಿಟ್ಟಿಬಾಬು ಸಮಂತಾ ವಿರುದ್ಧ ಮಾತನಾಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಬಗ್ಗೆ ನಿರ್ಮಾಪಕ ಪ್ರತಿಕ್ರಿಯೆ ನೀಡಿದ್ದಾರೆ. ಶಾಕುಂತಲೆ ಅಪ್ರತಿಮ ಸೌಂದರ್ಯವತಿ, ಆದರೆ ಸಮಂತಾಗೆ ಆ ಪಾತ್ರ ಸೂಟ್‌ ಆಗಲ್ಲ. ಸಮಂತಾ ಮುಖ ಕಿತ್ತುಹೋಗಿದೆ. ಅದಕ್ಕಾಗಿ ಜನರನ್ನು ಸೆಳೆಯಲು ನಾನು ಸತ್ತುಹೋಗುತ್ತೇನೆ ಅದೂ ಇದು ಎಂದು ಹೈ ಡ್ರಾಮಾ ಮಾಡ್ತಿದ್ದಾರೆ. ಈ ಹಿಂದೆ ಯಾವುದೋ ಸಿನಿಮಾಕ್ಕೆ ಬೆಡ್ ಮೇಲೆ ಮಲಗಿ ಡಬ್ಬಿಂಗ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಳು. ಇದೆಲ್ಲಾ ಅವರ ಪ್ರಚಾರ ಗಿಮಿಕ್. ಹಿಂದೆ ಹಲವು ಕಲಾವಿದರು ತೀವ್ರ ಜ್ವರದ ನಡುವೆಯೂ ಸಿನಿಮಾಗಳಲ್ಲಿ ನಟಿಸಿದ್ದಾರೆ ಎಂದು ಚಿಟ್ಟಿಬಾಬು ಕಿಡಿಕಾರಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!

    ಸಮಂತಾಗೆ ನಾಯಕಿಯಾಗಿ ನಟಿಸಲು ಆಫರ್ ಬರುತ್ತಿಲ್ಲ. ಅದಕ್ಕೆ ಅವರು ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆಕೆಯ ಮುಖ ಅಜ್ಜಿ ಮುಖದಂತೆ ಆಗಿದೆ. ಟಾಪ್ ಹೀರೋಯಿನ್ ಪಟ್ಟದಿಂದ ಸಮಂತಾ ಕೆಳಗೆ ಬಿದ್ದು ಬಹಳ ಸಮಯವಾಗಿದೆ. ಅದಕ್ಕೆ ‘ಪುಷ್ಪ’ ಸಿನಿಮಾದಲ್ಲಿ ಊ ಅಂಟಾವ ಹಾಡಿನಲ್ಲಿ ಅರೆಬೆತ್ತಲೆಯಾಗಿ ಕುಣಿದಿದ್ದಾಳೆ. ಹಣ ಮಾಡಲು, ಚಿತ್ರರಂಗದಲ್ಲಿ ನಿಲ್ಲಲು ಹೀಗೆ ಮಾಡ್ತಿದ್ದಾಳೆ ಎಂದಿದ್ದಾರೆ ಚಿಟ್ಟಿಬಾಬು. ಆಕೆಯ ವೃತ್ತಿ ಬದುಕು ಮುಗಿದಿದೆ. ಒಂದು ಸಮಯದಲ್ಲಿ ಒಳ್ಳೆಯ ಸ್ಟಾರ್ ಪಟ್ಟ ಅನುಭವಿಸಿದ್ದಾಳೆ. ಈಗ ಪ್ರತಿ ಸಿನಿಮಾಕ್ಕೂ ಏನೋ ಒಂದು ಡ್ರಾಮಾ ಮಾಡಿಕೊಂಡು, ನಾನು ಸತ್ತುಹೋಗುತ್ತೇನೆ ಎಂದು ಅದು ಇದು ಹೇಳಿ ಡ್ರಾಮಾ ಮಾಡಿಕೊಂಡು ಸಿನಿಮಾ ಗೆಲ್ಲಿಸಿಕೊಳ್ಳಲು ನೋಡುತ್ತಿದ್ದಾಳೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ನೋಡುತ್ತಾರೆ ಇಲ್ಲವಾದರೆ ಇಲ್ಲ. ‘ಶಾಕುಂತಲಂ’ ಸಿನಿಮಾದ ಕತೆಯೂ ಅಷ್ಟೆ. ಆದರೆ ನನಗಿರುವ ಪ್ರಶ್ನೆ ಎಂದರೆ, ಎಲ್ಲಾ ಚಾರ್ಮ್ ಕಳೆದುಕೊಂಡಿರುವ ನಟಿ ಶಾಕುಂತಲಂ ಅಂತಹ ಅಂದಗಾತಿಯ ಪಾತ್ರಕ್ಕೆ ಹೇಗೆ ಸೂಟ್ ಆಗುತ್ತಾಳೆ ಎಂಬುದಷ್ಟೆ ಎಂದಿದ್ದಾರೆ ಚಿಟ್ಟಿಬಾಬು.

    ನಿರ್ಮಾಪಕ ಚಿಟ್ಟಿಬಾಬು ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವಿರೋಧ ವ್ಯಕ್ತವಾಗಿದೆ. ಹಿರಿಯ ನಿರ್ಮಾಪಕನಾಗಿ ನಟಿಯ ಬಗ್ಗೆ ಇಷ್ಟು ಕೀಳಾಗಿ ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ. ಚಿಟ್ಟಿಬಾಬು ಇಷ್ಟೆಲ್ಲಾ ಮಾತನಾಡಿದ್ರು ಕೂಡ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಮಾಜಿ ಪತಿ ನಾಗಚೈತನ್ಯ- ಶೋಭಿತಾ ಡೇಟಿಂಗ್ ಬಗ್ಗೆ ಮೌನ ಮುರಿದ ಸಮಂತಾ

    ಮಾಜಿ ಪತಿ ನಾಗಚೈತನ್ಯ- ಶೋಭಿತಾ ಡೇಟಿಂಗ್ ಬಗ್ಗೆ ಮೌನ ಮುರಿದ ಸಮಂತಾ

    ಸೌತ್ ಚಿತ್ರ ಜಗತ್ತಿನ ಪ್ರತಿಭಾನ್ವಿತ ನಟಿ ಸಮಂತಾ (Samantha), ಸದ್ಯ ಶಾಕುಂತಲೆಯಾಗಿ ಬರಲು ರೆಡಿಯಾಗಿದ್ದಾರೆ. `ಶಾಕುಂತಲಂ’ ಚಿತ್ರ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಮಾಜಿ ಪತಿ ನಾಗ ಚೈತನ್ಯ- ಶೋಭಿತಾ (Shobitha) ಅವರ ಡೇಟಿಂಗ್ ಬಗ್ಗೆ ಸ್ಯಾಮ್ ಮಾತನಾಡಿದ್ದಾರೆ.

    `ಯಶೋದ’ (Yashoda) ಸೂಪರ್ ಸಕ್ಸಸ್ ನಂತರ Shakuntalam ಚಿತ್ರ ರಿಲೀಸ್‌ಗೆ ರೆಡಿಯಿದೆ. ಏ.14ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ದೇವ್ ಮೋಹನ್ ಜೊತೆ ಸಮಂತಾ ಶಾಕುಂತಲೆಯಾಗಿ ಮಿಂಚಿದ್ದಾರೆ. ಅಲ್ಲು ಅರ್ಜುನ್ ಪುತ್ರಿ ಅರ್ಹಾ ಕೂಡ ಚಿತ್ರದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಇತ್ತೀಚಿನ ಸಂದರ್ಶನದಲ್ಲಿ ಮಾತನಾಡಿರುವ ಸಮಂತಾ, ಯಾರು ಯಾರ ಜೊತೆ ರಿಲೇಶನ್‌ಶಿಪ್ ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಪ್ರೀತಿಯ ಮೌಲ್ಯವನ್ನು ತಿಳಿಯದವರು ಎಷ್ಟು ಜನರ ಜೊತೆ ಡೇಟ್ ಮಾಡಿದರೂ ಕಣ್ಣೀರು ಹಾಕುತ್ತಾರೆ. ಕನಿಷ್ಠ ಆ ಹುಡುಗಿಯಾದರೂ ಸಂತೋಷವಾಗಿರಬೇಕು. ಅವರು ತಮ್ಮ ನಡವಳಿಕೆಯನ್ನು ಬದಲಾಯಿಸಿಕೊಂಡು ಹುಡುಗಿಯನ್ನು ನೋಯಿಸದಂತೆ ನೋಡಿಕೊಂಡರೆ ಎಲ್ಲರಿಗೂ ಒಳ್ಳೆಯದು ಎಂದು ಸಮಂತಾ ಹೇಳಿದ್ದಾರೆ.

    ಯಾರ್ ಜೊತೆಯಾದ್ರು ಸಂಬಂಧ ಇಟ್ಕೊಳ್ಳಿ ನನಗೆ ಬೇಕಿಲ್ಲ. ಆ ಹುಡುಗಿಯಾದ್ರು ಖುಷಿಯಾಗಿರಬೇಕು ಎಂದು ಸಮಂತಾ ನೀಡಿರುವ ಹೇಳಿಕೆ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

  • ಪೆದ್ದಮ್ಮ ತಲ್ಲಿ ದೇವಿಗೆ ಸೀರೆ, ಗಾಜಿನ ಬಳೆ ಅರ್ಪಣೆ ಮಾಡಿದ ಸಮಂತಾ

    ಪೆದ್ದಮ್ಮ ತಲ್ಲಿ ದೇವಿಗೆ ಸೀರೆ, ಗಾಜಿನ ಬಳೆ ಅರ್ಪಣೆ ಮಾಡಿದ ಸಮಂತಾ

    ಮಂತಾ (Samantha) ನಟನೆಯ `ಶಾಕುಂತಲಂ’ (Shakuntalam) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಚಿತ್ರದ ಪ್ರಚಾರ ಕಾರ್ಯ ಶುರುವಾಗುವ ಮುನ್ನವ ಸ್ಯಾಮ್ ದೇವಿ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ವೀಡಿಯೋವೊಂದನ್ನ  ಸಾಮಾಜಿಕ ಜಾಲತಾಣದಲ್ಲಿ ನಟಿ ಶೇರ್‌ ಮಾಡಿದ್ದಾರೆ.

    ಸಮಂತಾ ಮೈಯೋಸಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಳ್ತಿದ್ದಾರೆ. ಅನಾರೋಗ್ಯದ ಸಮಸ್ಯೆ ಮತ್ತು ವೈಯಕ್ತಿಕ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸದಾ ಪೂಜೆ, ಧ್ಯಾನ, ದೇವರ ಸನ್ನಿಧಿ ಎಂದು ದೇವರ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ಹೊಸ ಫೋಟೋಶೂಟ್‌ ಹಂಚಿಕೊಂಡ ದೀಪಿಕಾ ದಾಸ್‌

    `ಯಶೋದ’ (Yashoda) ಚಿತ್ರದ ಸೂಪರ್ ಸಕ್ಸಸ್ ನಂತರ ನಟಿ ಸಮಂತಾ `ಶಾಕುಂತಲಂ’ ಚಿತ್ರದ ಮೂಲಕ ಬರುತ್ತಿದ್ದಾರೆ. ಈ ಸಿನಿಮಾ ಏಪ್ರಿಲ್ 14ಕ್ಕೆ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಈ ಬೆನ್ನಲ್ಲೇ ಚಿತ್ರತಂಡದ ಜೊತೆ ಹೈದರಾಬಾದ್‌ನ ಪ್ರಸಿದ್ಧ ದೇವಸ್ಥಾನ ಪೆದ್ದಮ್ಮ ತಲ್ಲಿ ದೇವಿಗೆ ಸೀರೆ ಜೊತೆ ಗಾಜಿನ ಬಳೆಯನ್ನ ಅರ್ಪಣೆ ಮಾಡಿ ಆಶೀರ್ವಾದ ಪಡೆದು ಬಂದಿದ್ದಾರೆ.

     

    View this post on Instagram

     

    A post shared by Samantha (@samantharuthprabhuoffl)

    ನಟಿ ಸಮಂತಾ ಬಿಳಿ ಬಣ್ಣದ ಚೂಡಿದಾರ್ ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಹ ನಟ ದೇವ್ ಮೋಹನ್ ಕೂಡ ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ.