Tag: Shama Mohamed

  • ‘ರೋಹಿತ್‌ ಶರ್ಮಾ ದಪ್ಪಗಿದ್ದಾರೆ’ ಅಂತ ಟೀಕಿಸಿದ್ದ ಕಾಂಗ್ರೆಸ್‌ ನಾಯಕಿಯಿಂದಲೇ ಈಗ ಟೀಂ ಇಂಡಿಯಾಗೆ ಅಭಿನಂದನೆ

    ‘ರೋಹಿತ್‌ ಶರ್ಮಾ ದಪ್ಪಗಿದ್ದಾರೆ’ ಅಂತ ಟೀಕಿಸಿದ್ದ ಕಾಂಗ್ರೆಸ್‌ ನಾಯಕಿಯಿಂದಲೇ ಈಗ ಟೀಂ ಇಂಡಿಯಾಗೆ ಅಭಿನಂದನೆ

    – ಕ್ಯಾಪ್ಟನ್‌ ರೋಹಿತ್‌ಗೆ ಹ್ಯಾಟ್ಸ್‌ಆಫ್‌ ಎಂದ ಶಮಾ ಮೊಹಮ್ಮದ್‌

    ಮುಂಬೈ: ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ (Rohit Sharma) ದಪ್ಪಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ ನಾಯಕಿ ಶಮಾ ಮೊಹಮ್ಮದ್‌ (Shama Mohamed) ಟೀಕೆಗೆ ಗುರಿಯಾಗಿದ್ದರು. ಇಂದು ಅದೇ ರೋಹಿತ್‌ ಪಡೆಯನ್ನು ಕಾಂಗ್ರೆಸ್‌ ನಾಯಕಿ ಹಾಡಿಹೊಗಳಿದ್ದಾರೆ.

    ದುಬೈನಲ್ಲಿ 2025 ರ ಚಾಂಪಿಯನ್ಸ್ ಟ್ರೋಫಿ (Champions Trophy 2025) ಗೆದ್ದ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡವನ್ನು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಅಭಿನಂದಿಸಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಗೆದ್ದ ಬಳಿಕ ಮೊಹಮ್ಮದ್‌ ಶಮಿ ತಾಯಿಯ ಕಾಲು ಮುಟ್ಟಿ ಆಶೀರ್ವಾದ ಪಡೆದ ಕೊಹ್ಲಿ

    ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಶಮಾ ಅವರು, ಚಾಂಪಿಯನ್ಸ್‌ ಟ್ರೋಫಿ ಗೆಲ್ಲುವಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡಕ್ಕೆ ಅಭಿನಂದನೆಗಳು. 76 ರನ್‌ ಬಾರಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಅವರಿಗೆ ಹ್ಯಾಟ್ಸಾಫ್‌. ಶ್ರೇಯಸ್‌ ಐಯ್ಯರ್‌, ಕೆಎಲ್‌ ರಾಹುಲ್‌ ಉತ್ತಮ ಪ್ರದರ್ಶನ ನೀಡಿ, ಟೀಂ ಇಂಡಿಯಾವನ್ನು ಜಯದತ್ತ ಕೊಂಡೊಯ್ದರು ಎಂದು ಶ್ಲಾಘಿಸಿದ್ದಾರೆ.

    2025 ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಹಂತದಲ್ಲಿ ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ಶಮಾ ಮೊಹಮ್ಮದ್ ಕಾಮೆಂಟ್ ಮಾಡಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದ್ದರು. ‘ರೋಹಿತ್ ಶರ್ಮಾ ದಪ್ಪಗಿದ್ದಾರೆ. ಅವರು ಪ್ರಭಾವಶಾಲಿ ಕ್ಯಾಪ್ಟನ್‌ ಅಲ್ಲ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

    ಶಮಾ ಅವರ ಹೇಳಿಕೆಗೆ ಕ್ರಿಕೆಟ್‌ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್‌ ನಾಯಕಿಯನ್ನು ತರಾಟೆಗೆ ತೆಗೆದುಕೊಂಡರು. ಸ್ವತಃ ಕಾಂಗ್ರೆಸ್‌ ಪಕ್ಷವೇ ನಾಯಕಿಗೆ ಕಿವಿ ಹಿಂಡುವ ಕೆಲಸ ಮಾಡಿತ್ತು.

    ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು. ಇದನ್ನೂ ಓದಿ: ಟೀಂ ಇಂಡಿಯಾ ಚಾಂಪಿಯನ್‌ – ಭಾರತದ ಪರ ವಿಶಿಷ್ಠ ದಾಖಲೆ ಬರೆದ ಕೊಹ್ಲಿ

    ಕ್ಯಾಪ್ಟನ್‌ ಆಗಿ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್‌ ಶರ್ಮಾ ಜವಾಬ್ದಾರಿಯುತ ಆಟವಾಡಿದರು. 76 ರನ್‌ಗಳನ್ನು ಹೊಡೆದು ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.

  • ಸ್ಲಿಮ್‌ ಆಗಿರೊರೇ ಬೇಕಿದ್ರೆ ಮಾಡೆಲ್‌ ಆಯ್ಕೆ ಮಾಡಿಕೊಳ್ಳಿ – ರೋಹಿತ್‌ ದಪ್ಪ ಎಂಬ ಶಮಾ ಹೇಳಿಕೆಗೆ ಗವಾಸ್ಕರ್‌ ಆಕ್ಷೇಪ

    ಸ್ಲಿಮ್‌ ಆಗಿರೊರೇ ಬೇಕಿದ್ರೆ ಮಾಡೆಲ್‌ ಆಯ್ಕೆ ಮಾಡಿಕೊಳ್ಳಿ – ರೋಹಿತ್‌ ದಪ್ಪ ಎಂಬ ಶಮಾ ಹೇಳಿಕೆಗೆ ಗವಾಸ್ಕರ್‌ ಆಕ್ಷೇಪ

    ನವದೆಹಲಿ: ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್‌ (Shama Mohamed), ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಕುರಿತು ನೀಡಿದ ಹೇಳಿಕೆ ಈಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಕ್ರಿಕೆಟ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ (Sunil Gavaskar) ಸಹ ಪ್ರತಿಕ್ರಿಯೆ ನೀಡಿದ್ದು, ಶಮಾ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಕ್ರಿಕೆಟ್‌ನಲ್ಲಿ ದೈಹಿಕ ಸಾಮರ್ಥ್ಯ ಇರಬೇಕು ನಿಜ. ಆದ್ರೆ ಅದೊಂದೇ ಮುಖ್ಯವಾಗುವುದಿಲ್ಲ. ನಾನು, ಈ ಮೊದಲೂ ಹೇಳಿದ್ದೇನೆ, ನೀವು ಸ್ಲಿಮ್‌ ಆಗಿರುವ ವ್ಯಕ್ತಿಗಳನ್ನ ಬಯಸಿದ್ರೆ ಮಾಡೆಲಿಂಗ್‌ಗೆ ಹೋಗಿ, ಎಲ್ಲಾ ಮಾಡೆಲ್‌ಗಳನ್ನ ಆಯ್ಕೆ ಮಾಡಿ ಅಂತ ಹೇಳಿರುವುದಾಗಿ ತಿಳಿಸಿದ್ದಾರೆ.

    ಕ್ರಿಕೆಟ್‌ನಲ್ಲಿ ಮಾನಸಿಕತೆಯೂ ಹೆಚ್ಚು ಮುಖ್ಯವಾಗುತ್ತದೆ, ಅದಕ್ಕಾಗಿ ಅವರು ಎಷ್ಟು ಚೆನ್ನಾಗಿ ಆಡುತ್ತಾರೆ ಅನ್ನೋದನ್ನು ನೋಡಬೇಕಾಗುತ್ತದೆ. ನಾವು ಸರ್ಫರಾಜ್‌ ಖಾನ್‌ ಬಗ್ಗೆ ಮಾತನಾಡಿದ್ದೇವೆ. ಅವರು ದಪ್ಪ ಇದ್ದಾರೆ ಅನ್ನೋ ಕಾರಣಕ್ಕೆ ಬಹಳ ಸಮಯದವರೆಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ. ಆದ್ರೆ ಭಾರತ ತಂಡಕ್ಕೆ ಸೇರ್ಪಡೆಯಾದ ನಂತರ ಅವರ ಪ್ರದರ್ಶನ ಅಮೋಘವಾಗಿದೆ. ಕೊನೆಯಬಾರಿ ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ಆಡಿದಾಗಲೂ ಒಂದೇ ಇನ್ನಿಂಗ್ಸ್‌ನಲ್ಲಿ 150 ರನ್‌ ಗಳಿಸಿದ್ದರು ಎಂದು ಸ್ಮರಿಸಿದರು.

    ಶಮಾ ಹೇಳಿದ್ದೇನು?
    ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಶಮಾ, ರೋಹಿತ್ ಶರ್ಮಾ (Rohit Sharma) ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ, ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಬರೆದುಕೊಂಡಿದ್ದರು. ಶಮಾ ಹೇಳಿಕೆಗೆ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ವಿವಾದ ಜೋರಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಛೀಮಾರಿ ಹಾಕಿದ್ದು, ಟ್ವೀಟ್ ಡಿಲೀಟ್ ಮಾಡುವಂತೆ ತಾಕೀತು ಮಾಡಿತ್ತು.

    ಶಮಾ ಮೊಹಮ್ಮದ್ ಯಾರು?
    ಶಮಾ ಮೊಹಮ್ಮದ್ 1973ರ ಮೇ 17 ಕೇರಳದ ಕಣ್ಣೂರು ಜಿಲ್ಲೆಯ ಚೆರುಕಲ್ಲೈನಲ್ಲಿ ಜನಿಸಿದರು. ಶಮಾ ಮೊಹಮ್ಮದ್ ಕಾಂಗ್ರೆಸ್ ವಕ್ತಾರರಾಗಿರುವುದರ ಜೊತೆಗೆ ದಂತವೈದ್ಯರೂ ಆಗಿದ್ದಾರೆ. ಕೇರಳ ಮೂಲದ ವೈದ್ಯೆಯಾದ ಶಮಾ 2015 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಮೂಲಗಳ ಪ್ರಕಾರ ಶಮಾ ಕುವೈತ್‌ನ ಇಂಡಿಯನ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣ ಪೂರ್ಣಗೊಳಿಸಿದರು. ನಂತರ ಮಂಗಳೂರಿನ ಯೆನೆಪೊಯ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಡೆಂಟಲ್ ಸೈನ್ಸಸ್‌ನಲ್ಲಿ ಪದವಿ ಪಡೆದರು. 2018 ರಲ್ಲಿ ಕಾಂಗ್ರೆಸ್ ಅವರನ್ನು ಮೊದಲ ಬಾರಿಗೆ ತನ್ನ ರಾಷ್ಟ್ರೀಯ ಮಾಧ್ಯಮ ಪ್ಯಾನಲಿಸ್ಟ್ ಆಗಿ ನೇಮಿಸಿತು. ನಂತರ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ಮಾಡಲಾಯಿತು.

  • ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    – ನಾನು ಬಾಡಿ ಶೇಮಿಂಗ್ ಮಾಡಿಲ್ಲ ಎಂದ ಶಮಾ

    ಮುಂಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma) ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್‌ (Shama Mohamed) ಸದ್ಯ ಸುದ್ದಿಯಲ್ಲಿದ್ದಾರೆ.

    ರೋಹಿತ್‌ ಶರ್ಮಾ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಶಮಾ, ರೋಹಿತ್‌ ಶರ್ಮಾ ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ, ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಬರೆದುಕೊಂಡಿದ್ದರು. ಶಮಾ ಹೇಳಿಕೆಗೆ ಬೆನ್ನಲ್ಲೇ ಬಿಜೆಪಿ (BJP) ನಾಯಕರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

    ಕಾಂಗ್ರೆಸ್‌ ಪಕ್ಷದಿಂದ ಛೀಮಾರಿ
    ಶಮಾ ಎಕ್ಸ್‌ನಲ್ಲಿ ನೀಡಿದ ಹೇಳಿಕೆ ವಿವಾದ ಜೋರಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷ ಛೀಮಾರಿ ಹಾಕಿದ್ದು, ಟ್ವೀಟ್‌ ಡಿಲೀಟ್‌ ಮಾಡುವಂತೆ ತಾಕೀತು ಮಾಡಿದೆ. ಇದನ್ನೂ ಓದಿ: ಮಾ.24 ರಿಂದ 26ವರೆಗೂ ದೆಹಲಿ ಬಜೆಟ್ ಅಧಿವೇಶನ – ಸಾರ್ವಜನಿಕರಿಂದ ಸಲಹೆ ಕೇಳಿದ ಸಿಎಂ

    ಶಮಾ ಅವರ ಈ ಹೇಳಿಕೆ ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಅವರಿಗೆ ಸೂಚಿಸಲಾಗಿದೆ. ಅಲ್ಲದೇ ಭವಿಷ್ಯದಲ್ಲಿ ಎಚ್ಚರಿಕೆ ವಹಿಸುವಂತೆಯೂ ತಿಳಿಸಲಾಗಿದೆ ಎಂದು ಕಾಂಗ್ರೆಸ್‌ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೇರಾ ತಿಳಿಸಿದ್ದಾರೆ. ಇದನ್ನೂ ಓದಿ: World Wildlife Day – ಗಿರ್ ಅಭಯಾರಣ್ಯದಲ್ಲಿ ಮೋದಿ ಸಫಾರಿ

    ಶಮಾ ಮೊಹಮ್ಮದ್ ಯಾರು?
    ಶಮಾ ಮೊಹಮ್ಮದ್ 1973ರ ಮೇ 17 ಕೇರಳದ ಕಣ್ಣೂರು ಜಿಲ್ಲೆಯ ಚೆರುಕಲ್ಲೈನಲ್ಲಿ ಜನಿಸಿದರು. ಶಮಾ ಮೊಹಮ್ಮದ್ ಕಾಂಗ್ರೆಸ್ ವಕ್ತಾರರಾಗಿರುವುದರ ಜೊತೆಗೆ ದಂತವೈದ್ಯರೂ ಆಗಿದ್ದಾರೆ. ಕೇರಳ ಮೂಲದ ವೈದ್ಯೆಯಾದ ಶಮಾ 2015 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಮೂಲಗಳ ಪ್ರಕಾರ ಶಮಾ ಕುವೈತ್‌ನ ಇಂಡಿಯನ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣ ಪೂರ್ಣಗೊಳಿಸಿದರು. ನಂತರ ಮಂಗಳೂರಿನ ಯೆನೆಪೊಯ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಡೆಂಟಲ್ ಸೈನ್ಸಸ್‌ನಲ್ಲಿ ಪದವಿ ಪಡೆದರು.

    2018 ರಲ್ಲಿ ಕಾಂಗ್ರೆಸ್ ಅವರನ್ನು ಮೊದಲ ಬಾರಿಗೆ ತನ್ನ ರಾಷ್ಟ್ರೀಯ ಮಾಧ್ಯಮ ಪ್ಯಾನಲಿಸ್ಟ್‌ ಆಗಿ ನೇಮಿಸಿತು. ನಂತರ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ಮಾಡಲಾಯಿತು. ಇದನ್ನೂ ಓದಿ: ಅಕ್ರಮವಾಗಿ ಇಸ್ರೇಲ್‌ ಪ್ರವೇಶಿಸಲು ಯತ್ನಿಸಿದ್ದ ಕೇರಳದ ವ್ಯಕ್ತಿ ಗುಂಡಿಗೆ ಬಲಿ