Tag: Shankar

  • ರಾಮ್ ಚರಣ್ ನಟನೆಯ ಹೊಸ ಚಿತ್ರದ ಟೈಟಲ್ ಅನೌನ್ಸ್‌

    ರಾಮ್ ಚರಣ್ ನಟನೆಯ ಹೊಸ ಚಿತ್ರದ ಟೈಟಲ್ ಅನೌನ್ಸ್‌

    `ಆರ್‌ಆರ್‌ಆರ್’ (RRR) ಚಿತ್ರದ ಸೂಪರ್ ಡೂಪರ್ ಸಕ್ಸಸ್ ನಂತರ ರಾಮ್ ಚರಣ್ (Ram Charan) ನಿರ್ದೇಶಕ ಶಂಕರ್ (Shankar) ಜೊತೆ ಕೈಜೋಡಿಸಿದ್ದಾರೆ. ರಾಮ್ ಚರಣ್ ಅವರ ಹುಟ್ಟುಹಬ್ಬದ (ಮಾ.27) ಸಂದರ್ಭದಲ್ಲಿ ತಮ್ಮ ಹೊಸ ಚಿತ್ರದ ಟೈಟಲ್ ಅನೌನ್ಸ್ ಮಾಡಿದ್ದಾರೆ.

    ರಾಮ್ ಚರಣ್ ಕುಟುಂಬದಲ್ಲಿ ಇದೀಗ ಡಬಲ್ ಸಂಭ್ರಮ. ಒಂದ್‌ಕಡೆ `ನಾಟು ನಾಟು’ (Naatu Naatu) ಹಾಡಿಗೆ ಆಸ್ಕರ್ (Oscar)  ಸಿಕ್ಕಿರೋದು. ಮತ್ತೊಂದು ಕಡೆ ತಮ್ಮ ಹುಟ್ಟುಹಬ್ಬದ ದಿನ ಹೊಸ ಚಿತ್ರದ ಟೈಟಲ್ ಘೋಷಣೆ ಮಾಡಿರೋದು. ರಾಮ್ ಚರಣ್-ನಿರ್ದೇಶಕ ಶಂಕರ್ ಕಾಂಬಿನೇಷನ್ ಹೊಸ ಸಿನಿಮಾದ ಟೈಟಲ್ ಯಾವುದು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ.

     

    View this post on Instagram

     

    A post shared by Ram Charan (@alwaysramcharan)

    `ಗೇಮ್ ಚೇಂಜರ್’ ಎಂಬ ಪವರ್‌ಫುಲ್ ಟೈಟಲ್ ಅನ್ನ ರಾಮ್ ಚರಣ್ ನಟನೆಯ ಚಿತ್ರಕ್ಕೆ ಇಡಲಾಗಿದೆ. ಚರಣ್‌ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ದಿಲ್ ರಾಜು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಹೊಸ ಬಗೆಯ ಕಥೆಯಲ್ಲಿ ಚರಣ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ತೆಲಂಗಾಣಕ್ಕೆ ತೆರಳಿ ಪತ್ನಿಗೆ ವಸಿಷ್ಠ ಸಿಂಹ ಸರ್ಪ್ರೈಸ್

    ಇನ್ನೂ ಸೋಮವಾರ (ಮಾ.27) ರಾಮ್ ಚರಣ್ ಹುಟ್ಟುಹಬ್ಬವಿರುವ ಕಾರಣ ಒಂದು ದಿನ ಮುಂಚಿತವಾಗಿಯೇ `ಗೇಮ್ ಚೇಂಜರ್’ ಸಿನಿಮಾ ತಂಡ ಚರಣ್ ಬರ್ತ್ಡೇ ಮಾಡಿ ಸಂಭ್ರಮಿಸಿದ್ದಾರೆ.

  • ನಿರ್ದೇಶಕ ಶಂಕರ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಣ್‌ವೀರ್ ಸಿಂಗ್

    ನಿರ್ದೇಶಕ ಶಂಕರ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಣ್‌ವೀರ್ ಸಿಂಗ್

    ಕೆಲ ವರ್ಷಗಳಿಂದ ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಚಿತ್ರರಂಗವನ್ನ ಶೇಕ್ ಮಾಡಿದೆ. ಇದೀಗ ಖ್ಯಾತ ನಿರ್ದೇಶಕ ಶಂಕರ್(Director Shankar) ಕೂಡ ಇಂತಹದ್ದೇ ಪ್ರಯಕ್ಕೆ ಕೈ ಹಾಕಿದ್ದಾರೆ. ಸ್ಟಾರ್ ನಟ ರಣ್‌ವೀರ್‌‌ ಸಿಂಗ್‌ಗೆ (Ranveer Singh) ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ.

    ಶಂಕರ್ ಮತ್ತು ರಣ್‌ವೀರ್ ಸಿಂಗ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಮೂಡಿ ಬರುತ್ತಿದೆ. ತಮಿಳು ಸಾಹಿತ್ಯದಲ್ಲಿ ದೊಡ್ಡ ಹೆಸರು ಮಾಡಿರುವ `ವೆಲ್‌ಪರಿ'(Velpari) ಎಂಬ ಐತಿಹಾಸಿಕ ಕಾದಂಬರಿಯನ್ನ ಈ ಚಿತ್ರ ಆಧರಿಸಿದೆ. ವೆಂಕಟೇಶನ್ ಬರೆದಿರುವ ವೆಲ್‌ಪರಿ ಕಾದಂಬರಿಯನ್ನ ತೆರೆಯ ಮೇಲೆ ಅದ್ದೂರಿ ತೋರಿಸಲು ಶಂಕರ್ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ:ಬಹಿರಂಗವಾಗಿ ನೋವು ಹಂಚಿಕೊಂಡ ರಶ್ಮಿಕಾ: ನೋವು ಕೊಟ್ಟೋರು ಉದ್ದಾರಾಗ್ತಾರಾ ಎಂದ ಫ್ಯಾನ್ಸ್

    ಈ ಸಿನಿಮಾದಲ್ಲಿ ಎಲ್ಲವೂ ಇದೆ. ಒಂದು ಅದ್ಭುತವಾದ ಪ್ರೇಮಕಥೆಯ ಜೊತೆಗೆ ಆಕ್ಷನ್, ಸೆಂಟಿಮೆಂಟ್ ಎಲ್ಲವನ್ನೂ ಒಳಗೊಂಡಿದೆ. ಗ್ರಾಫಿಕ್ಸ್ ಈ ಚಿತ್ರದಲ್ಲಿ ಪಾತ್ರ ವಹಿಸಲಿದೆ. ಇನ್ನೂ ಮಾಡಿರದ ವಿಭಿನ್ನ ಪಾತ್ರದಲ್ಲಿ ರಣ್‌ವೀರ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ.

    ಶಂಕರ್ ಮತ್ತು ರಣ್‌ವೀರ್ ಈ ಕಾಂಬಿನೇಷನ್ನ ‌ʻಅನ್ನಿಯನ್ʼ ಚಿತ್ರ ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ. ರಾಮ್‌ಚರಣ್ ಸಿನಿಮಾ ಮತ್ತು ಕಮಲ್ ಹಾಸನ್ ನಟನೆಯ `ಇಂಡಿಯನ್‌ 2′ ನಂತರ ರಣ್‌ವೀರ್ ಚಿತ್ರಕ್ಕೆ ಶಂಕರ್ ನಿರ್ದೇಶನ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 1000 ಕೋಟಿ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್

    1000 ಕೋಟಿ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್

    `ಕೆಜಿಎಫ್ 2′( KGF 2) ಆದ್ಮೇಲೆ ಯಶ್ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. `ಕೆಜಿಎಫ್ 2′ ಸೂಪರ್ ಸಕ್ಸಸ್ ನಂತರ ಯಶ್(Yash) ಮುಂದಿನ ನಡೆಯೇನು ಎಂಬುದರ ಬಗ್ಗೆ ಚಿತ್ರರಸಿಕರು ಕ್ಯೂರಿಯಸ್ ಆಗಿದ್ದಾರೆ. ಇನ್ನೂ ಯಶ್ ಇದೇ ದಸರಾಗೆ ಅಧಿಕೃತ ಅಪ್‌ಡೇಟ್ ಕೊಡಲು ರೆಡಿಯಾಗಿದ್ದಾರೆ.

    ರಾಕಿಂಗ್ ಸ್ಟಾರ್ ಯಶ್ ಈಗಾಗಲೇ ವಿಭಿನ್ನ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ಕೆಜಿಎಫ್ ಪಾರ್ಟ್ 1 ಮತ್ತು ಪಾರ್ಟ್ 2 ಬಂದ ಮೇಲೆ ಯಶ್ ಮಾರುಕಟ್ಟೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹೀಗಿರುವಾಗ ಯಶ್ ಮುಂದಿನ ಸಿನಿಮಾ ಬಗ್ಗೆ ಚಿತ್ರರಂಗ ಮತ್ತು ಅಭಿಮಾನಿಗಳ ವಲಯದಲ್ಲಿ ರಾಕಿಭಾಯ್‌ ಮುಂದಿನ ಚಿತ್ರದ ಸಖತ್‌ ನಿರೀಕ್ಷೆಯಿದೆ. ಸದ್ಯ ಯಶ್, ಕಾಲಿವುಡ್ ನಿರ್ದೇಶಕ ಶಂಕರ್ (Director Shankar) ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ.

    `ಮಫ್ತಿ’ ನಿರ್ದೇಶಕ ನರ್ತನ್ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಈಗ ತಮಿಳಿನ ನಿರ್ದೇಶಕ ಶಂಕರ್ ಅವರ ಐತಿಹಾಸಿಕ ಸಿನಿಮಾಗೆ ಯಶ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 1000 ಕೋಟಿ ಬಜೆಟ್‌ನಲ್ಲಿ ಮೂಡಿಬರಲಿರುವ ಈ ಚಿತ್ರಕ್ಕೆ ಯಶ್ ಡಿಫರೆಂಟ್ ರೋಲ್‌ನಲ್ಲಿ ಮಿಂಚಲಿದ್ದಾರೆ. ಇದನ್ನೂ ಓದಿ:ಜೈಲಿನಿಂದ ಬಿಡುಗಡೆಯಾಗಿ ಒಂದು ವರ್ಷ: ಕೊನೆಗೂ ಮೌನ ಮುರಿದ ಶಿಲ್ಪಾ ಶೆಟ್ಟಿ ಪತಿ

    ಎಸ್. ವೆಂಕಟೇಶನ್ ಬರೆದಿರೋ `ವೇಲ್‌ಪರಿ’ ಹಿಸ್ಟಾರಿಕಲ್ ಕಾದಂಬರಿಯಲ್ಲಿ ಯಶ್ ನಟಿಸೋದು ಪಕ್ಕಾ ಎನ್ನಲಾಗುತ್ತಿದೆ. ಯಶ್ ಮತ್ತು ಶಂಕರ್ ಕಾಂಬಿನೇಷನ್ ಸಿನಿಮಾಗೆ ಕರಣ್ ಜೋಹರ್(Karan Johar)  ಬಂಡವಾಳ ಹೂಡಲಿದ್ದಾರೆ. 1000 ಕೋಟಿ ವೆಚ್ಚದಲ್ಲಿ ಬಹುಭಾಷೆಗಳಲ್ಲಿ ಈ ಚಿತ್ರ ಮೂಡಿ ಬರಲಿದೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಶುರುವಾದ ‘ಇಂಡಿಯನ್ 2’ ಸಿನಿಮಾ: ಕಮಲ್ ಹಾಸನ್ ಫ್ಯಾನ್ಸ್ ಗೆ ಹಬ್ಬವೋ ಹಬ್ಬ

    ಮತ್ತೆ ಶುರುವಾದ ‘ಇಂಡಿಯನ್ 2’ ಸಿನಿಮಾ: ಕಮಲ್ ಹಾಸನ್ ಫ್ಯಾನ್ಸ್ ಗೆ ಹಬ್ಬವೋ ಹಬ್ಬ

    ವಿಕ್ರಮ್ ಸಿನಿಮಾದ ಗೆಲುವಿನ ಅಲೆಯಲ್ಲಿ ತೇಲುಗುತ್ತಿರುವ ಕಮಲ್ ಹಾಸನ್ ಅಭಿಮಾನಿಗಳಿಗೆ ಇವತ್ತು ಮತ್ತೊಂದು ಖುಷಿ ಸುದ್ದಿ ಸಿಕ್ಕಿದೆ. ಎರಡು ವರ್ಷಗಳ ಹಿಂದೆ ನಿಂತಿದ್ದ ಇಂಡಿಯನ್ 2 ಸಿನಿಮಾ ಮತ್ತೆ ಚಾಲನೆ ಸಿಕ್ಕಿದ್ದು, ಈ ಕುರಿತು ಚಿತ್ರತಂಡವು ಹೊಸ ಲುಕ್ ರಿಲೀಸ್ ಮಾಡುವ ಮೂಲಕ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ. ರಿಲೀಸ್ ಆಗಿರುವ ನಯಾ ಲುಕ್ ನೋಡಿ ಕಮಲ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ಇಂಡಿಯನ್ 2 ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಯಬೇಕಿತ್ತು. 2020ರಲ್ಲಿ ನಿರ್ದೇಶಕ ಶಂಕರ್ ಈ ಸಿನಿಮಾದ ಚಿತ್ರೀಕರಣ  ಶುರು ಮಾಡಿದ್ದರು. ಆದರೆ, ಕ್ರೇನ್ ದುರಂತಕ್ಕೆ ಕಾರ್ಮಿಕರು ಬಲಿಯಾಗಿ, ಅಲ್ಲಿಗೆ ಶೂಟಿಂಗ್ ನಿಲ್ಲಿಸಿದ್ದರು. ನಂತರದ ದಿನಗಳಲ್ಲಿ ಕೋವಿಡ್ ಎಂಬ ಮಹಾಮಾರಿ ಕಾಲಿಟ್ಟಿತ್ತು. ಹಾಗಾಗಿ ಎರಡು ವರ್ಷಗಳ ಕಾಲ ಅವರು ಈ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡಿರಲಿಲ್ಲ. ಇದನ್ನೂ ಓದಿ: ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?

    ಇಂದು ಇಂಡಿಯನ್ 2 ಸಿನಿಮಾದ ಅಪ್ ಡೇಟ್ ವಿವರನ್ನು ನಿರ್ದೇಶಕ ಶಂಕರ್ ನೀಡಿದ್ದು, ಅತೀ ಶೀಘ್ರದಲ್ಲೇ ಶೂಟಿಂಗ್ ಶುರು ಮಾಡುವುದಾಗಿಯೂ ಹೇಳಿಕೊಂಡಿದ್ದಾರೆ. 1996ರಲ್ಲಿ ಇಂಡಿಯನ್ ಸಿನಿಮಾ ರಿಲೀಸ್ ಆಗಿತ್ತು. ಬಾಕ್ಸ್ ಆಫೀಸನಲ್ಲಿ ಭಾರೀ ಗಳಿಕೆ ಮಾಡಿತ್ತು. ಆನಂತರ ಇಂಡಿಯನ್ 2 ಸಿನಿಮಾ ಮಾಡುವ ವಿಚಾರ ಬಂತು. 24 ವರ್ಷಗಳ ಬಳಿಕೆ ಇಂಡಿಯನ್ ಸಿಕ್ವೆಲ್ ಸಿನಿಮಾ ಬರುತ್ತಿದ್ದು, ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಚಿತ್ರದಿಂದ ಕಾಜಲ್ ಅಗರ್ವಾಲ್ ಔಟ್

    ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಚಿತ್ರದಿಂದ ಕಾಜಲ್ ಅಗರ್ವಾಲ್ ಔಟ್

    `ವಿಕ್ರಮ್’ ಚಿತ್ರದ ಸಕ್ಸಸ್ ನಂತರ ಕಮಲ್ ಹಾಸನ್ `ಇಂಡಿಯನ್ 2′ ಚಿತ್ರಕ್ಕೆ ರೆಡಿಯಾಗಿದ್ದಾರೆ. ಈ ಚಿತ್ರದ ನಾಯಕಿಯಾಗಿದ್ದ ಕಾಜಲ್ ಔಟ್ ಆಗಿದ್ದಾರೆ. ಅವರ ಜಾಗಕ್ಕೆ ಬೇರೆ ನಾಯಕಿಯ ಎಂಟ್ರಿಯಾಗುತ್ತಿದೆ.

    ಕಮಲ್ ಮತ್ತು ಶಂಕರ್ ಕಾಂಬಿನೇಷನ್‌ನ `ಇಂಡಿಯನ್’ ಚಿತ್ರ 1996ರಲ್ಲಿ ಸೂಪರ್ ಡೂಪರ್ ಹಿಟ್ ಆಗಿತ್ತು. ಬಳಿಕ ಇದರ ಸೀಕ್ವೇಲ್ 2019ರಿಂದ ಚಿತ್ರೀಕರಣ ಶುರುವಾಯಿತು. 2020ರಲ್ಲಿ ನಡೆದ ಅವಘಡದಲ್ಲಿ ಮೂರು ಕಾರ್ಮಿಕರು ಜೀವ ಕಳೆದುಕಂಡಿದ್ದರು. ಬಳಿಕ ಕೊರೊನಾ ಕಾಟದಿಂದ ಚಿತ್ರೀಕರಣ ಸ್ಥಗಿತಗೊಂಡಿತ್ತು. ಈಗ 60% ಶೂಟಿಂಗ್ ಆಗಿದ್ದ ಈ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ: ಬೇರೆಯವರ ಸೆಕ್ಸ್ ಲೈಫ್ ಬಗ್ಗೆ ನಿಮಗೇಕೆ ಅಷ್ಟೊಂದು ಆಸಕ್ತಿ?: ಕರಣ್ ಗೆ ಕಾಲೆಳೆದ ಆಮೀರ್

    `ವಿಕ್ರಮ್’ ಚಿತ್ರದ ಸಕ್ಸಸ್ ನಂತರ ಸ್ಥಗಿತಗೊಂಡಿದ್ದ `ಇಂಡಿಯನ್ 2′ ಚಿತ್ರವನ್ನ ಕಮಲ್ ಹಾಸನ್ ಮತ್ತೆ ಕೈಗೆತ್ತಿಕೊಂಡಿದ್ದಾರೆ. ಕಮಲ್‌ಗೆ ನಿರ್ದೇಶಕ ಶಂಕರ್ ಸಾಥ್ ನೀಡಿದ್ದಾರೆ. ಆದರೆ ಈಗ ಪ್ಯಾನ್ ಇಂಡಿಯಾ ಚಿತ್ರವಾಗಿ ಬರುತ್ತಿದೆ. ಈ ಚಿತ್ರದ ನಾಯಕಿಯಾಗಿದ್ದ ಕಾಜಲ್ ಮದುವೆಯಾಗಿ, ಮಗನ ಆರೈಕೆಯಲ್ಲಿರುವುದರಿಂದ ಮತ್ತೆ ಚಿತ್ರೀಕರಣದಿಂದ ಮುಂದುವರೆಯುವುದು ಕಷ್ಟವಾಗುತ್ತಿದೆ. ಹಾಗಾಗಿ ಚಿತ್ರತಂಡ ಕಾಜಲ್‌ನ್ನ ಚಿತ್ರದಿಂದ ಕೈ ಬಿಡಲಾಗಿದೆ.

    ಇನ್ನು ಕಮಲ್ ಹಾಸನ್‌ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಮತ್ತು ಕತ್ರಿನಾ ಕೈಫ್‌ನ `ಇಂಡಿಯನ್ 2’ಗೆ ಫೈನಲ್ ಮಾಡಲು ಯೋಚಿಸಿದೆಯಂತೆ. ಸದ್ಯದಲ್ಲೇ ಚಿತ್ರದ ಕುರಿತು ಅಧಿಕೃತ ಮಾಹಿತಿ ಹೊರಬರಲಿದೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡದಿಂದ ಕೈತಪ್ಪಿ ಹೋಗ್ತಾರಾ ನ್ಯಾಷನಲ್ ಸ್ಟಾರ್ ಯಶ್?

    ಕನ್ನಡದಿಂದ ಕೈತಪ್ಪಿ ಹೋಗ್ತಾರಾ ನ್ಯಾಷನಲ್ ಸ್ಟಾರ್ ಯಶ್?

    ಕೆಜಿಎಫ್ 2 ಸಿನಿಮಾದ ಯಶಸ್ಸಿನ ನಂತರ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ರಾಶಿ ರಾಶಿ ಗಾಸಿಪ್ ಗಳು ಗಾಂಧಿನಗರದಲ್ಲಿ ಹರಿದಾಡುತ್ತಿವೆ. ಅವರ ಮುಂದಿನ ಸಿನಿಮಾ ನರ್ತನ್ ಮಾಡಲಿದ್ದಾರೆ ಎನ್ನುವುದರಿಂದ ಹಿಡಿದು, ಅವರು ತಮಿಳು ನಿರ್ದೇಶಕ ಶಂಕರ್ ಅವರ ಚಿತ್ರಕ್ಕೂ ಸಹಿ ಮಾಡಿದ್ದಾರೆ ಎನ್ನುವತನಕ ಸುದ್ದಿಗಳಿವೆ. ಆದರೆ, ಯಶ್ ಈವರೆಗೂ ಹೊಸ ಸಿನಿಮಾದ ಬಗ್ಗೆ ತುಟಿ ಬಿಚ್ಚಿಲ್ಲ.

    ಈಗ ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಹೊಸ ಸುದ್ದಿ ಹರಡಿದೆ. ಸದ್ಯಕ್ಕೆ ನರ್ತನ್ ಅವರ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲವಾದ್ದರಿಂದ ಅವರು ತಮಿಳು ನಿರ್ದೇಶಕರಿಗೆ ಮಣೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಅದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ, ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ ಎಂದು ಹೇಳಲಾಗುತ್ತಿದೆ. ಬರೋಬ್ಬರಿ ಈ ಚಿತ್ರಕ್ಕಾಗಿ 250 ಕೋಟಿ ರೂಪಾಯಿ ಬಂಡವಾಳ ಹೂಡಲು ನಿರ್ಮಾಪಕರು ಮುಂದೆ ಬಂದಿದ್ದಾರೆ ಎನ್ನುವ ಸುದ್ದಿಯೂ ಜೊತೆಗಿದೆ. ಇದನ್ನೂ ಓದಿ:ಅಫೇರ್ ಆರೋಪ ನಂತರ `ಅಣ್ಣ-ತಂಗಿ’ ಆಗಿಬಿಟ್ರಾ ನರೇಶ್-ಪವಿತ್ರಾ!

    ನರ್ತನ್ ಜೊತೆ ಮಾಡಬೇಕಿದ್ದ ಸಿನಿಮಾವನ್ನು ಈ ತಮಿಳು ನಿರ್ದೇಶಕರ ಸಿನಿಮಾ ನಂತರ ಮಾಡಲಿದ್ದಾರಂತೆ ಯಶ್. ಅಲ್ಲಿವರೆಗೂ ನರ್ತನ್ ಬೇರೆ ನಟರಿಗೆ ಸಿನಿಮಾ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆ ತಮಿಳು ನಿರ್ದೇಶಕ ಕಂಡಿತಾ ಶಂಕರ್ ಅಲ್ಲವಂತೆ. ಆದರೆ, ಶಂಕರ್ ಅವರಷ್ಟೇ ಖ್ಯಾತಿ ಪಡೆದ ನಿರ್ದೇಶಕರು ಯಶ್ ಗಾಗಿ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಯಶ್ ಏನು ಸ್ಪಷ್ಟನೆ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು ಸಿನಿಮಾ ಮಾಡ್ತಾರಾ ಅಥವಾ ಕನ್ನಡದ ನಿರ್ದೇಶಕನಿಗೆ ಮಣೆ ಹಾಕ್ತಾರಾ ಯಶ್?

    ತಮಿಳು ಸಿನಿಮಾ ಮಾಡ್ತಾರಾ ಅಥವಾ ಕನ್ನಡದ ನಿರ್ದೇಶಕನಿಗೆ ಮಣೆ ಹಾಕ್ತಾರಾ ಯಶ್?

    ಶ್ ಸಿನಿಮಾ ವಿಚಾರದಲ್ಲಿ ದಿನಕ್ಕೊಂದು ಸುದ್ದಿ ಹರಿದಾಡುತ್ತಿವೆ. ಮೊನ್ನೆಯಷ್ಟೇ ಯಶ್ ಗಾಗಿ ಖ್ಯಾತ ನಿರ್ಮಾಪಕ ದಿಲ್ ರಾಜು ಸಿನಿಮಾವೊಂದನ್ನು ನಿರ್ಮಾಣ ಮಾಡಲು ಮುಂದೆ ಬಂದಿದ್ದು, 100 ಕೋಟಿ ರೂಪಾಯಿ ಆಫರ್ ಮಾಡಿದ್ದಾರೆ ಎಂದು ಸುದ್ದಿ ಆಯಿತು.  ಅದಕ್ಕೂ ಮುನ್ನ ಕೆವಿಎನ್ ಪ್ರೊಡಕ್ಷನ್ ಹೌಸ್ ಕಡೆಯಿಂದ  ಯಶ್ ಮುಂದಿನ ಸಿನಿಮಾ ನಿರ್ಮಾಣ ಅಂತಾಯಿತು. ತೆಲುಗು ಸಿನಿಮಾ ನಿರ್ದೇಶಕರಿಗೂ ಯಶ್ ಕಾಲ್ ಶೀಟ್ ಕೊಟ್ಟಿದ್ದಾರೆ  ಅನ್ನುವ ಸುದ್ದಿಯೂ ಹರಡಿತ್ತು. ಸದ್ಯ ನರ್ತನ್ ಜೊತೆ ಸಿನಿಮಾ ಮಾಡುವ ವಿಚಾರವೂ ಚಾಲ್ತಿಯಲ್ಲಿದೆ. ಇದೀಗ ಮತ್ತೊಂದು ಹೊಸ ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ.

    ರಜನಿಕಾಂತ್ ಸೇರಿದಂತೆ ಹಲವು ಖ್ಯಾತ ನಟರಿಗೆ ಅದ್ಭುತವಾದ ಸಿನಿಮಾಗಳನ್ನು ಕಟ್ಟಿಕೊಟ್ಟಿರುವ ಖ್ಯಾತ ನಿರ್ದೇಶಕ ಶಂಕರ್ ಜೊತೆ ಯಶ್ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಶಂಕರ್ ಕೂಡ ತಮ್ಮ ಸಿನಿಮಾದ ಮೂಲಕ ಸಾವಿರಾರು ಕೋಟಿ ಬಾಚಿದವರು. ಯಶ್ ನಟನೆಯ ಕೆಜಿಎಫ್ 2 ಚಿತ್ರ ಕೂಡ ಸಾವಿರ ಕೋಟಿ ಹಣ ಗಳಿಸಿದೆ. ಹಾಗಾಗಿ ಸಾವಿರದ ಸರದಾರರು ಒಟ್ಟಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವುದು ಲೆಟೆಸ್ಟ್ ನ್ಯೂಸ್. ಇದನ್ನೂ ಓದಿ:ಶಾರುಖ್ ಖಾನ್ ನಟನೆಯ `ಜವಾನ್’ ಚಿತ್ರೀಕರಣದಲ್ಲಿ ನಯನತಾರಾ

    ಹಾಗಂತ ಯಾವುದೇ ತಂಡದಿಂದ ಬಂದಿರುವ ಹೇಳಿಕೆ ಇವಲ್ಲ. ಗಾಸಿಪ್ ರೀತಿಯಲ್ಲೂ ಹರಡಿರಬಹುದು. ಅಥವಾ ದಿಲ್ ರಾಜು ನಿರ್ಮಾಣದಲ್ಲಿ ಮೂಡಿ ಬರಲಿರುವ ಚಿತ್ರಕ್ಕೆ ಶಂಕರ್ ನಿರ್ದೇಶನ ಮತ್ತು ಯಶ್ ನಟ ಅಂತಾನೂ ಆಗಬಹುದು. ಒಟ್ಟಿನಲ್ಲಿ ಯಶ್ ಅವರ ಸಿನಿಮಾ ವಿಚಾರದಲ್ಲಿ ದಿನಕ್ಕೊಂದು ಸುದ್ದಿಗಳು ಹರಡುತ್ತಿವೆ. ಅಭಿಮಾನಿಗಳಿಗಂತೂ ಆ ಸುದ್ದಿಗಳು ಥ್ರಿಲ್ ನೀಡುತ್ತಿವೆ.

    Live Tv

  • ವಾಮನ ಸಿನಿಮಾಗೆ ಎಂಟ್ರಿ ಕೊಟ್ಟ ಸಂಪತ್: ಮೂರು ಶೇಡ್ ಪಾತ್ರದಲ್ಲಿ ಖಳನಟ

    ವಾಮನ ಸಿನಿಮಾಗೆ ಎಂಟ್ರಿ ಕೊಟ್ಟ ಸಂಪತ್: ಮೂರು ಶೇಡ್ ಪಾತ್ರದಲ್ಲಿ ಖಳನಟ

    ನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗ್ಲೇ ಎರಡು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ಮೂರನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಇದೀಗ ವಾಮನ ಬಳಗಕ್ಕೆ ಮತ್ತೊಬ್ಬ ಸದಸ್ಯ ಎಂಟ್ರಿ ಕೊಟ್ಟಿದ್ದಾರೆ. ಬಹುಭಾಷಾ ನಟ, ಖಳನಾಯಕನ ಪಾತ್ರಧಾರಿ ಸಂಪತ್ ವಾಮನ ತಂಡ ಸೇರಿಕೊಂಡಿದ್ದಾರೆ.

    ವಾಮನ ಪಾತ್ರದಲ್ಲಿ ಸಂಪತ್ ಖಳನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಇಡೀ ಮಾಫಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಅತ್ಯಂತ ಕ್ರೂರಿಯಾಗಿ ಬದುಕುವ ವಿಲನ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂರು ಶೇಡ್ ನಲ್ಲಿ ಸಂಪತ್ ಅಬ್ಬರಿ ಬೊಬ್ಬಿರಿಯಲಿದ್ದು, ಅವರ ಪಾತ್ರಕ್ಕಾಗಿಯೇ ಪ್ರತ್ತೇಕ್ಷವಾಗಿ ಕಾಸ್ಟ್ಯೂಮ್ ಡಿಸೈನ್ ಎನ್ನುತ್ತಾರೆ ನಿರ್ದೇಶಕ ಶಂಕರ್. ಇದನ್ನೂ ಓದಿ: ಬಿಗ್‌ಬಿ ಮೊಮ್ಮಗಳ ಜೊತೆ `ಗಲ್ಲಿಬಾಯ್’ ನಟನ ಡೇಟಿಂಗ್ ಸ್ಟೋರಿ

    ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ಬರಹಗಾರನಾಗಿ, ಸಂಭಾಷಣೆಗಾರನಾಗಿ ಗುರುತಿಸಿಕೊಂಡಿರುವ ಶಂಕರ್ ರಾಮನ್ ಎಸ್ ವಾಮನ ಸಿನಿಮಾ ಮೂಲಕ ನಿರ್ದೇಶನದ ಮೊದಲ ಹೆಜ್ಜೆ ಇಟ್ಟಿದ್ದು, ಶಂಕರ್ ಕನಸಿಗೆ ಫ್ಯಾಷನೇಟೇಡ್ ಪ್ರೊಡ್ಯೂಸರ್ ಚೇತನ್ ಗೌಡ ಸಾಥ್ ಕೊಟ್ಟಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ಮೂಡಿ ಬರ್ತಿರುವ ಮಾಸ್ ಆಕ್ಷನ್ ಎಂಟರ್ಟೇನರ್ ವಾಮನ ಸಿನಿಮಾದಲ್ಲಿ ಧನ್ವೀರ್ ಗೆ ಜೋಡಿಯಾಗಿ ರಚನಾ ರೈ ನಟಿಸ್ತಿದ್ದು, ಮಹೇನ್ ಸಿಂಹ ಛಾಯಾಗ್ರಾಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಃ ಸಂಕಲನ, ಅರ್ಜುನ್ ರಾಜ್, ಜಾಲಿ ಬಾಸ್ಟಿನ್ ಸಾಹಸಸಿನಿಮಾಕ್ಕಿದೆ.

    ಲೈವ್ ಲೋಕೇಷನ್ ನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ಸ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ವಾಮನ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ಚೇತನ್ ಗೌಡ, ದೊಡ್ಡ ಮಟ್ಟದ ಸಿನಿಮಾ ಮಾಡುವ ಆಸಕ್ತಿ-ಶಕ್ತಿ ಎರಡು ಅವರಲಿದೆ ಎನ್ನುತ್ತಾರೆ ನಿರ್ದೇಶಕ ಶಂಕರ್.

  • ಶೂಟಿಂಗ್‍ಗಾಗಿ ರಾಜಮಂಡ್ರಿಗೆ ಬಂದಿಳಿದ ರಾಮ್ ಚರಣ್ – ಅಭಿಮಾನಿಗಳಿಂದ ನೂಕು ನುಗ್ಗಲು

    ಶೂಟಿಂಗ್‍ಗಾಗಿ ರಾಜಮಂಡ್ರಿಗೆ ಬಂದಿಳಿದ ರಾಮ್ ಚರಣ್ – ಅಭಿಮಾನಿಗಳಿಂದ ನೂಕು ನುಗ್ಗಲು

    ಹೈದರಾಬಾದ್: ಆರ್‌ಸಿ 15 ಚಿತ್ರೀಕರಣಕ್ಕಾಗಿ ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರು ಆಂಧ್ರಪ್ರದೇಶದ ರಾಜಮಂಡ್ರಿಯ ರಾಜಾಜಿನಗರಕ್ಕೆ ಬಂದಿಳಿದ ತಕ್ಷಣ ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿ ಚರಣ್ ಅವರನ್ನು ಕಾಣಲು ಮುಗಿಬಿದ್ದಿದ್ದಾರೆ.

    ರಾಮ್ ಚರಣ್ ತಮ್ಮ ಮುಂಬರುವ ಚಿತ್ರ ಆರ್‍ಆರ್‍ಆರ್ ಬಿಡುಗಡೆಗಾಗಿ ಈಗಾಗಲೇ ಕಾತುರದಿಂದ ಕಾಯುತ್ತಿದ್ದಾರೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರವು ಮಾರ್ಚ್ 25 ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ತೆಲುಗು ಅಲ್ಲದೆ, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಸಹ ಚಿತ್ರವು ಬಿಡುಗಡೆಯಾಗಲಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಗುಡ್‍ಬೈ ಹೇಳಿದ ಬಾಲಿವುಡ್ ನಟಿ ರಾಖಿ ಸಾವಂತ್

     

    View this post on Instagram

     

    A post shared by Kamlesh Nand (work) (@artistrybuzz_)

    ಫೆಬ್ರವರಿ 13 ರಂದು, ರಾಮ್ ಚರಣ್ ಮತ್ತು ಅವರ ತಂಡವು ಆರ್‌ಸಿ 15 ರ ಶೂಟಿಂಗ್‍ಗಾಗಿ ರಾಜಮಂಡ್ರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದನ್ನೂ ಗಮನಿಸಿದ ಅಭಿಮಾನಿಗಳು ಚರಣ್ ಅವರ ದರ್ಶನ ಪಡೆಯಲು ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದರು.

    ವಿಮಾನ ನಿಲ್ದಾಣದಿಂದ ಅವರು ರಾಜಮಂಡ್ರಿಯ ಪ್ರತಿಷ್ಠಿತ ಹೋಟೆಲ್‍ವೊಂದಕ್ಕೆ ತೆರಳುತ್ತಿದ್ದಾಗ ಅಭಿಮಾನಿಗಳು ರಸ್ತೆಯ ಎರಡೂ ಬದಿಯಲ್ಲಿ ಸಾಲುಗಟ್ಟಿ ನಿಂತು ಚರಣ್‍ಗೆ ಆತ್ಮೀಯ ಸ್ವಾಗತ ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಮ್ ಚರಣ್ ಬೌನ್ಸರ್‌ಗಳು ಅಭಿಮಾನಿಗಳನ್ನು ಚದುರಿಸಲು ಹರ ಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ

    ಆರ್‌ಸಿ 15 ರಾಜಕೀಯಕ್ಕೆ ಸಂಬಂಧಪಟ್ಟ ಚಿತ್ರವಾಗಿದೆ. ಈ ಚಿತ್ರವನ್ನು ಶಂಕರ್ ಅವರು ನಿರ್ದೇಶಿಸಿದ್ದು, ಚಿತ್ರಕ್ಕೆ ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದಾರೆ.

    ಇತ್ತೀಚಿನ ಸಂದರ್ಶನವೊಂದರಲ್ಲಿ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಚಿತ್ರವನ್ನು ಉದ್ದೇಶಿಸಿ ಮಾತನಾಡಿದ್ದು, ನಾನು ಈ ರಾಜಕೀಯ ಕಥೆಯನ್ನು ಹಲವು ವರ್ಷಗಳ ಹಿಂದೆ ಬರೆದಿದ್ದೇನೆ. ನನಗೆ ಬಹಳ ಹಿಂದೆಯೇ ಶಂಕರ್ ಸರ್ ಈ ಚಿತ್ರವನ್ನು ನಿರ್ದೇಶಿಸಿದರೆ ಉತ್ತಮವಾಗಿರುತ್ತದೆ ಅಂತ ಅನಿಸಿತ್ತು. ಹೀಗಾಗಿ ನಾನು ಈ ಕಥೆಯನ್ನು ಅವರಿಗೆ ನೀಡಿದಾಗ ಅವರು ಅದನ್ನು ಇಷ್ಟಪಟ್ಟರು. ಅವರು ಈಗಾಗಲೇ ಈ ಕಥೆಯನ್ನು ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ. ನಾನು ಅವರೊಂದಿಗೆ ಈ ಚಿತ್ರದಲ್ಲಿ ಕೆಲಸ ಮಾಡಲು ಅತ್ಯಂತ ಸಂತೋಷ ಮತ್ತು ಹೆಮ್ಮೆಯೆನಿಸುತ್ತದೆ.

    ರಾಮ್ ಚರಣ್ ಹೊರತಾಗಿ, ಆರ್‌ಸಿ 15 ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ಅಂಜಲಿ, ಜಯರಾಮ್, ಸುನಿಲ್, ಶ್ರೀಕಾಂತ್ ಮತ್ತು ನವೀನ್ ಚಂದ್ರ ನಟಿಸಿದ್ದಾರೆ. ಛಾಯಾಗ್ರಾಹಕ ತಿರುರು, ಸಂಕಲನಕಾರ ಶಮೀರ್ ಮುಹಮ್ಮದ್ ಮತ್ತು ಸಂಗೀತ ಸಂಯೋಜಕ ಎಸ್ ಥಮನ್ ತಾಂತ್ರಿಕ ತಂಡದ ಭಾಗವಾಗಿದ್ದಾರೆ.

  • ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮಗನಿಂದಲೇ ಅಪ್ಪನ ಕೊಲೆಗೆ ನಡೆದಿತ್ತಂತೆ ಸ್ಕೇಚ್!

    ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮಗನಿಂದಲೇ ಅಪ್ಪನ ಕೊಲೆಗೆ ನಡೆದಿತ್ತಂತೆ ಸ್ಕೇಚ್!

    ಬೆಂಗಳೂರು: ತಿಗಳರಪಾಳ್ಯದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಮಗ ಮಧುಸಾಗರ್ ನಿಂದಲೇ ತಂದೆ ಶಂಕರ್ ಕೊಲೆಗೆ ಸ್ಕೆಚ್ ನಡೆದಿತ್ತು ಎಂಬ ಮಾಹಿತಿಯೊಂದು ಹೊರಬಿದ್ದಿದೆ.

    ಹೌದು. ಮಧುಸಾಗರ್ ಹಾಗೂ ಶಂಕರ್ ಫೈಟ್‍ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ಆತ್ಮಹತ್ಯೆಗೂ ಮುಂಚೆ ನಾಲ್ವರು ಡೆತ್ ನೋಟ್ ಬರೆದಿದ್ದರು. ಸದ್ಯ ಡೆತ್ ನೋಟ್ ನಲ್ಲಿರುವ ವಿಚಾರಗಳು ಒಂದೊಂದಾಗಿಯೇ ಹೊರಬರುತ್ತಿವೆ. ಇದನ್ನೂ ಓದಿ: ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- 9 ತಿಂಗಳ ಕಂದಮ್ಮನನ್ನು ಕತ್ತು ಹಿಸುಕಿ ಕೊಂದಿದ್ದ ತಾಯಿ

    ಇತ್ತ ತಂದೆ ಶಂಕರ್ ಕೊಲೆಗೆ ಮಗ ಮಧುಸಾಗರ್ ಸ್ಕೆಚ್ ಹಾಕಿದ್ದ ಎಂಬುದು ಸದ್ಯದ ಮಾಹಿತಿ. ತನ್ನನ್ನು ಕೊಲೆ ಮಾಡಲು ಮಗ ಸ್ಕೆಚ್ ಹಾಕಿರುವ ವಿಚಾರವನ್ನು ಸ್ವತಃ ಶಂಕರ್ ಅವರು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಸದ್ಯ ಶಂಕರ್ ಕೊಟ್ಟ ಈ ಮಾಹಿತಿಗೂ, ಸಿಕ್ಕ ಟೆಕ್ನಿಕಲ್ ಸಾಕ್ಷಿಗೂ ತಾಳೆಯಾಗುತ್ತಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್

    ಸೆಪ್ಟೆಂಬರ್ 12 ರಂದು 10 ಲಕ್ಷ ಕೊಡ್ತೇನೆ ಬಾ ಅಂತ ಮಗ ಶಂಕರ್ ಗೆ ಮೆಸೇಜ್ ಹಾಕಿದ್ದ. ಮೆಸೇಜ್‍ಗೆ ರಿಪ್ಲೈ ಮಾಡದಿದ್ದಾಗ ಮಧುಸಾಗರ್ ತನ್ನ ತಂದೆಗೆ 3 ಬಾರಿ ಕಾಲ್ ಮಾಡಿದ್ದ. ಕೊನೆ ಕರೆ ವೇಳೆ ಕೊಲೆ ಮಾಡುವುದಾಗಿ ಬೆದರಿಸಿದ್ದ. ಅಮ್ಮ-ಅಕ್ಕಂದಿರು ಹೋದ್ಮೇಲೆ ಅಪ್ಪನನ್ನು ಬಿಡೋದ್ ಬೇಡ ಅಂತ ತೀರ್ಮಾನಿಸಿದ್ದ. ಮಗನ ಮಾತು ನಂಬಿ ನಾನು ಮನೆಗೆ ಹೋಗಿದ್ರೆ ಅಂದೇ ಕೊಲೆ ಆಗುತ್ತಿದ್ದೆ ಎಂದು ಹಲ್ಲೇಗೆರೆ ಶಂಕರ್ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಐವರು ಆತ್ಮಹತ್ಯೆ ಪ್ರಕರಣ- ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಎರಡು ಕೆಜಿಯಷ್ಟು ಚಿನ್ನಾಭರಣ ಪತ್ತೆ