Tag: Shankaranagar

  • ದೇವರ ಭಜನೆಯಲ್ಲಿ ಮಗ್ನರಾಗಿದ್ದಾಗ ಕಿಟಿಕಿಯಿಂದ ಮಹಿಳೆಯ ಸರ ಕದ್ದು ಪರಾರಿ – FIR ದಾಖಲು

    ದೇವರ ಭಜನೆಯಲ್ಲಿ ಮಗ್ನರಾಗಿದ್ದಾಗ ಕಿಟಿಕಿಯಿಂದ ಮಹಿಳೆಯ ಸರ ಕದ್ದು ಪರಾರಿ – FIR ದಾಖಲು

    ಬೆಂಗಳೂರು: ದೇವರ ಭಜನೆಯಲ್ಲಿ ಮಗ್ನರಾಗಿದ್ದ ಸಂದರ್ಭ ಕಿಟಕಿಯಿಂದ ಮಹಿಳೆಯ (Woman) ಸರ ಕದ್ದು (Chain Snatch) ಆರೋಪಿ ಪರಾರಿಯಾಗಿರುವ ಘಟನೆ ನಂದಿನಿ ಲೇಔಟ್‌ನ (Nandini Layout) ಶಂಕರನಗರ (Shankar Nagar) ಗಣೇಶ ದೇಗುಲದಲ್ಲಿ ನಡೆದಿದೆ.

    ಅಕ್ಟೋಬರ್ 11ರಂದು ನಡೆದ ಘಟನೆ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮಂಗಳಾ ಎಂಬ ಮಹಿಳೆ ಅಕ್ಟೋಬರ್ 11ರ ಸಂಜೆ 6:30ರ ಸುಮಾರಿಗೆ ದೇಗುಲಕ್ಕೆ ಬಂದಿದ್ದರು. ಶಂಕರನಗರದ ನಿವಾಸಿಯಾಗಿರುವ ಮಂಗಳಾ ಪತಿ ರೈಲ್ವೆ ಇಲಾಖೆ ನಿವೃತ್ತ ಅಧಿಕಾರಿಯಾಗಿದ್ದರು. ಕಿಟಕಿ ಪಕ್ಕ ಕೂತು ಭಜನೆ ಮಾಡುತ್ತಿದ್ದಾಗ ಸಂಜೆ 7:17ರ ಸುಮಾರಿಗೆ ಕಳ್ಳ ಮಂಗಳಮ್ಮನ ಕುತ್ತಿಗೆಗೆ ಕೈ ಹಾಕಿ ಚಿನ್ನದ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಇದನ್ನೂ ಓದಿ: ದರ್ಶನ್‌, ಪವಿತ್ರಾಗೆ ನೋ ರಿಲೀಫ್‌ – ಕೋರ್ಟ್‌ ಜಾಮೀನು ನೀಡದ್ದು ಯಾಕೆ?

    ಸರ ಕಿತ್ತುಕೊಳ್ಳಲು ಯತ್ನಿಸಿದ ಸಂದರ್ಭ ಮಹಿಳೆ ಬಿಗಿಯಾಗಿ ಮಾಂಗಲ್ಯ ಹಿಡಿದುಕೊಂಡಿದ್ದಾರೆ. ಮಾಂಗಲ್ಯ ಸರವನ್ನು ಬಿಗಿಯಾಗಿ ಹಿಡಿದುಕೊಂಡ ಪರಿಣಾಮ 70 ಗ್ರಾಂ ತೂಕದ ಸರ ತುಂಡಾಗಿ ಮೂವತ್ತು ಗ್ರಾಂ ಕಳ್ಳನ ಕೈಗೆ ಸಿಕ್ಕಿದೆ. ಈ ವೇಳೆ ಮಹಿಳೆ ಜೋರಾಗಿ ಕೂಗಿಕೊಳ್ಳಲು ಪ್ರಾರಂಭಿಸಿದ್ದು, ಕಳ್ಳ ಅಲ್ಲಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಪಿಎಸ್‌ಐ ಫಲಿತಾಂಶ ಪ್ರಕಟಿಸುವಂತೆ ವಿಜಯೇಂದ್ರ ಆಗ್ರಹ

    ಕಳ್ಳನ ಕೈಚಳಕ ಭಜನೆ ವೀಡಿಯೋ ಮಾಡುತ್ತಿದ್ದ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯ ಬಳಿಕ ಅಕ್ಟೋಬರ್ 11ರ ರಾತ್ರಿ 9 ಗಂಟೆಗೆ ಮಂಗಳಮ್ಮ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ| ಅಂಗನವಾಡಿಗಳಿಗೆ ಮೂರು ತಿಂಗಳಿನಿಂದ ಸರಬರಾಜು ಆಗುತ್ತಿಲ್ಲ ಆಹಾರ!