Tag: Shanvi Srivastava

  • ತಡ ಮಾಡುತ್ತಲೇ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಶ್ರೀಮನ್ನಾರಾಯಣ!

    ತಡ ಮಾಡುತ್ತಲೇ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಶ್ರೀಮನ್ನಾರಾಯಣ!

    ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಟೀಸರ್ ಮೂಲಕ ಇದರ ಕಥೆಯ ಮಜಾ ಏನೆಂಬುದು ಎಲ್ಲರಿಗೂ ತಿಳಿದು ಹೋಗಿದೆ. ಆದರೆ ಈ ಚಿತ್ರ ಸುದೀರ್ಘ ಕಾಲವನ್ನು ತೆಗೆದುಕೊಂಡು ಚಿತ್ರೀಕರಣಗೊಂಡಿದೆ, ತಡವಾಗಿದೆ ಎಂಬೆಲ್ಲ ಕೊರಗು ಅಭಿಮಾನಿಗಳಲ್ಲಿ ಇದ್ದೇ ಇದೆ. ಆದರೆ ಹೀಗೆ ತಡ ಮಾಡಿಯೇ ಶ್ರೀಮನ್ನಾರಾಯಣ ಸಾರ್ವಕಾಲಿಕ ದಾಖಲೆಯೊಂದರ ರೂವಾರಿಯಾಗಿದ್ದಾನೆ!

    ಅಷ್ಟಕ್ಕೂ ಅವನೇ ಶ್ರೀಮನ್ನಾರಾಯಣ ಚಿತ್ರ ಇಷ್ಟೊಂದು ತಡವಾಗಿ ರೂಪುಗೊಳ್ಳಲು ಕಾರಣವೇನು ಅಂತೊಂದು ಪ್ರಶ್ನೆ ಹಾಗೇ ಉಳಿದು ಹೋಗಿತ್ತು. ಇದಕ್ಕೆ ಉತ್ತರ ಹುಡುಕುತ್ತಾ ಹೋದರೆ ಮಜವಾದ ಉತ್ತರಗಳೇ ಎದುರುಗೊಳ್ಳುತ್ತವೆ!

    ಅಂದಹಾಗೆ ಅವನೇ ಶ್ರೀಮನ್ನಾರಾಯಣ ಚಿತ್ರದ ಕಥೆ ಎಂಬತ್ತರ ದಶಕದಲ್ಲಿ ನಡೆಯುವಂಥಾದ್ದೆಂಬ ಸುಳಿವು ಈಗಾಗಲೇ ಸಿಕ್ಕಿದೆ. ಈ ಕಾಲ ಘಟ್ಟವನ್ನು ಮರು ಸೃಷ್ಟಿಸೋದೇನು ಸಲೀಸಿನ ಕೆಲಸವಲ್ಲ. ಅದನ್ನು ಮತ್ತೆ ಸೃಷ್ಟಿಸೋದಕ್ಕಾಗಿ ಚಿತ್ರತಂಡ ಭಾರೀ ರಿಸ್ಕು ತೆಗೆದುಕೊಂಡಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಎರಡ್ಮೂರು ಸೆಟ್ ಹಾಕಿದರೆ ಅದೇ ಹೆಚ್ಚು. ಆದರೆ ಅವನೇ ಶ್ರೀಮನ್ನಾರಾಯಣ ಚಿತ್ರದ ಬಹುಪಾಲು ಚಿತ್ರೀಕರಣ ಸೆಟ್‍ನಲ್ಲಿಯೇ ನಡೆದಿದೆ. ಇದಕ್ಕೆಂದೇ ಬರೋಬ್ಬರಿ ಇಪ್ಪತ್ತು ಸೆಟ್‍ಗಳನ್ನು ಹಾಕಲಾಗಿತ್ತಂತೆ!

    ಹೀಗೆ ಸೆಟ್ ಹಾಕಿ ಚಿತ್ರೀಕರಿಸಿರೋದರಿಂದಲೇ ಇಡೀ ಚಿತ್ರ ರಿಚ್ ಆಗಿ ಮೂಡಿ ಬಂದಿದೆಯಂತೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ತೆಲುಗು, ಮಲೆಯಾಳಂನಲ್ಲಿಯೂ ಬಿಡುಗಡೆಯಾಗಲಿದೆ. ಇನ್ನುಳಿದಂತೆ ಈ ಚಿತ್ರಕ್ಕೆ ಅತೀ ಹೆಚ್ಚು ದಿನ ಚಿತ್ರೀಕರಣಗೊಂಡ ಚಿತ್ರವೆಂಬ ಗರಿಯೂ ಮೂಡಿಕೊಂಡಿದೆ. ಅವನೇ ಶ್ರೀಮನ್ನಾರಾಯಣಕ್ಕಾಗಿ ಇನ್ನೂರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಎಂಭತ್ತರ ದಶಕವನ್ನು ಮತ್ತೆ ಸೃಷ್ಟಿಸೋ ಕಾಯಕ ಈ ಇನ್ನೂರು ದಿನವೂ ನೆರವೇರಿದೆ. ಹೀಗೆ ತಡ ಮಾಡಿಕೊಂಡೇ ಈ ಚಿತ್ರ ದಾಖಲೆಯ ರೂವಾರಿಯಾಗಿ ಬಿಟ್ಟಿದೆ.

  • ‘ರಣಾಂಗಣ’ದಲ್ಲಿ ಸರ್ಜಿಕಲ್ ಸ್ಟ್ರೈಕ್!

    ‘ರಣಾಂಗಣ’ದಲ್ಲಿ ಸರ್ಜಿಕಲ್ ಸ್ಟ್ರೈಕ್!

    ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಹಿಂದಿಯಲ್ಲಿ ಉರಿ ಅನ್ನೋ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಭಾರತೀಯ ಯೋಧರು ಉಗ್ರರ ವಿರುದ್ದ ಹೇಗೆಲ್ಲಾ ಸೆಣಸಾಡಿ ಜಯಿಸಿದರು ಎಂಬುದನ್ನು ಅದ್ಭುತವಾಗಿ ಕಟ್ಟಿಕೊಡಲಾಗಿತ್ತು. ಈ ಕಾರಣಕ್ಕೆ ಈ ಸಿನಿಮಾ ಜಗತ್ತಿನಾದ್ಯಂತ ಸದ್ದು ಮಾಡಿತ್ತು. ಈಗ ಅಂಥದ್ದೇ ಸಿನಿಮಾವೊಂದು ಸ್ಯಾಂಡಲ್‍ವುಡ್ಡಿನಲ್ಲಿ ನಿರ್ಮಾಣವಾಗುತ್ತಿದೆ.

    ಮೊನ್ನೆ ಮೊನ್ನೆ ಪುಲ್ವಾಮದಲ್ಲಿ ನಡೆದ ಹತ್ಯೆಗೆ ಪ್ರತೀಕಾರವಾಗಿ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳನ್ನು ನಮ್ಮ ಸೈನಿಕರು ಧ್ವಂಸಗೊಳಿಸಿದ್ದು ಸೇರಿದಂತೆ ಹಲವಾರು ಪ್ರಮುಖ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾಗೆ ಕಥೆ ಹೆಣೆಯಲಾಗಿದೆ. ಅಂದಹಾಗೆ ಈ ಸಿನಿಮಾದ ಹೆಸರು `ರಣಾಂಗಣ’.

    ಈಗಾಗಲೇ ಮುಹೂರ್ತ ಆಚರಿಸಿಕೊಂಡಿರುವ ಈ ಚಿತ್ರದಲ್ಲಿ ನಮ್ಮ ಭಾರತೀಯ ಯೋಧರ ಹೋರಾಟದ ನೈಜ ಘಟನೆಗಳ ಕುರಿತಾದ ಕಥೆಯನ್ನು ಹೇಳಲಾಗುತ್ತಿದೆ. ಹೊಸ ಬಗೆಯು ಕಥಾನಕ ಹೊಂದಿರುವ ಈ ಚಿತ್ರ ಎರಡು ಛಾಪ್ಟರ್‍ಗಳಲ್ಲಿ ಮೂಡಿ ಬರಲಿದ್ದು, ಮೊದಲನೆಯ ಭಾಗದಲ್ಲಿ ನಿಜ ಜೀವನದ ಹಲವಾರು ಅಂಶಗಳನ್ನು ತೆಗೆದುಕೊಳ್ಳಲಾಗಿದೆ. ಭಾರತೀಯ ಚಿತ್ರರಂಗದಲ್ಲಿ ಸಂಪೂರ್ಣವಾಗಿ ಸೈನಿಕರ ಕುರಿತಂತೆ ನಿರ್ಮಾಣ ಮಾಡುತ್ತಿರುವ ವಿಶೇಷ ಚಲನಚಿತ್ರ ಇದಾಗಿದೆ.

    ಮಂಗಳೂರು ಬಂದರು, ರಾಮೇಶ್ವರ, ಹಿಮಾಚಲ ಪ್ರದೇಶ ಹಾಗೂ ಯುರೋಪ್ ನಲ್ಲಿರುವ ಸರ್ಬಿಯಾ ಸೇರಿದಂತೆ ಹಲವಾರು ವಿಭಿನ್ನ ಲೊಕೇಶನ್ ಗಳಲ್ಲಿ ರಣಾಂಗಣ ಚಿತ್ರದ ಚಿತ್ರೀಕರಣವನ್ನು ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಇದರ ಜೊತೆಗೆ ಚಿತ್ರದ ಕಥೆಯಲ್ಲಿ ಬರುವ ಯುದ್ಧದ ಸನ್ನಿವೇಶಗಳಿಗೆ ತಕ್ಕಂತೆ ಸೆಟ್ ಹಾಕಲು ಕಲಾ ನಿರ್ದೇಶಕ ಮನು ಜಗದ್ ಅವರು ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪ್ರಮುಖವಾಗಿ ಭಾರತದ ಗಡಿ ಭಾಗದಲ್ಲಿ ನಡೆದ ಮೂರು ಪ್ರಮುಖ ಘಟನೆಗಳನ್ನು ತೆಗೆದುಕೊಂಡು ಕಥೆ ಹೆಣೆಯಲಾಗಿದೆ. ಆದರೆ ಆ ಬಗ್ಗೆ ಯಾವುದೇ ವಿವರವನ್ನು ಚಿತ್ರತಂಡ ಬಿಟ್ಟುಕೊಡಲಿಲ್ಲ. ಟಿ.ಎಸ್. ನಾಗಾಭರಣ, ವಾಸು ಅವರಂಥ ಹಿರಿಯ ನಿರ್ದೇಶಕರ ಜೊತೆ ಕೆಲಸ ಮಾಡಿ ಅನುಭವ ಪಡೆದಿರುವ ರೋಹಿತ್ ರಾವ್ ಇದೇ ಮೊದಲ ಬಾರಿಗೆ ಈ ಚಿತ್ರದ ಕತೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇವರು ಕನ್ನಡದಲ್ಲಿ ಈಗಾಗಲೇ ಹೆಸರು ಮಾಡಿರುವ ನಿರ್ದೇಶಕ ಮಹೇಶ್ ರಾವ್ ಅವರ ಸಹೋದರನಂತೆ.

    ಈ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ರೋಹಿತ್ ರಾವ್, ಗಡಿಯಲ್ಲಿ ನಮ್ಮ ದೇಶವನ್ನು ಕಾಯುತ್ತಿರುವ ಯೋಧ, ನಮಗೆ ಅನ್ನ ನೀಡಲು ಹೊಲದಲ್ಲಿ ಸದಾ ದುಡಿಯುವ ರೈತ, ಈ ಇಬ್ಬರೂ ಕಷ್ಟಪಡುತ್ತಿರುವುದರಿಂದಲೇ ನಾವುಗಳೆಲ್ಲಾ ನೆಮ್ಮದಿಯಿಂದ ಜೀವನ ನಡೆಸುತ್ತಿರುವುದು. ಇದನ್ನೇ ನಮ್ಮ ಚಿತ್ರದಲ್ಲಿ ಹೇಳಿದ್ದೇವೆ. ಈ ಚಿತ್ರವನ್ನು ನೋಡಿದ ಯಾರಿಗೇ ಆಗಲಿ ತಾನು ಕೂಡ ಸೈನ್ಯಕ್ಕೆ ಸೇರಬೇಕೆಂಬ ಉತ್ಸಾಹ ಖಂಡಿತ ಅವರಲ್ಲಿ ಮೂಡುತ್ತದೆ. ಜನವರಿ 15ರಂದು ಬರುವ ಸೈನಿಕರ ದಿನಾಚರಣೆಯಂದೇ ನಮ್ಮ ಚಿತ್ರವನ್ನು ಬಿಡುಗಡೆ ಮಾಡಲು ಯೋಚಿಸಿದ್ದು, ಆ ವೇಳೆಗೆ ಚಿತ್ರವನ್ನು ಕಂಪ್ಲೀಟ್ ಮಾಡಲು ಪ್ರಯತ್ನ ಮಾಡುತ್ತೇವೆ. ಇದು ದೇಶಭಕ್ತಿಯನ್ನು ಸಾರುವ ಕಥೆ ಹೊಂದಿರುವ ಚಿತ್ರವಾಗಿರುವ ಕಾರಣ ಕನ್ನಡ ಸೇರಿದಂತೆ ಹಿಂದಿ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಕೂಡ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ನಮ್ಮ ಭಾರತದಲ್ಲಿ ಒಟ್ಟು ಏಳು ಗಡಿಭಾಗಗಳಿವೆ, ಅದೇ ರೀತಿ ಈ ಚಿತ್ರದಲ್ಲಿ ಏಳು ಜನ ಖಳ ನಾಯಕರುಗಳು ನಟಿಸಲಿದ್ದಾರೆ. ಈ ಪೈಕಿ ಮೊದಲ ಹಂತದಲ್ಲಿ ರಘು, ಯೋಗೀಶ್ ಆಯ್ಕೆಯಾಗಿದ್ದಾರೆ, ಉಳಿದವರ ಹೆಸರನ್ನು ಸದ್ಯದಲ್ಲೇ ಅನೌನ್ಸ್ ಮಾಡುತ್ತೇವೆ ಎಂದರು.

    ಕಿರುತೆರೆಯ ಫೇಮಸ್ ಧಾರಾವಾಹಿ ರಾಧಾ ರಮಣ ಖ್ಯಾತಿಯ ನಟ ಸ್ಕಂದ ಅಶೋಕ್ ಈ ಚಿತ್ರದಲ್ಲಿ ನಾಯಕನಾಗಿ ಹಾಗೂ ದೇಶ ಕಾಯುವ ಸೈನಿಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ನಾಯಕಿ ಶಾನ್ವಿ ಶ್ರೀವಾತ್ಸವ್ ಆರಂಭದಲ್ಲಿ ಒಬ್ಬ ಪತ್ರಕರ್ತೆಯಾಗಿದ್ದು, ನಂತರ ಸೇನೆಗೆ ಸೇರುವ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೀವನದಲ್ಲಿ ಒಮ್ಮೆಯಾದರೂ ಸೈನ್ಯಕ್ಕೆ ಸಂಬಂಧಿಸಿದ ಕಥೆ ಇರುವ ಸಿನಿಮಾದಲ್ಲಿ ನಟಿಸಬೇಕು ಎನ್ನುವುದು ಇವರ ಆಸೆಯಾಗಿತ್ತಂತೆ. ಅದು ಈ ಮೂಲಕ ಸಾಕಾರಗೊಂಡಿದೆ.

  • ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

    ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

    ಗೋಲ್ಡನ್ ಸ್ಟಾರ್ ಗಣೇಶ್ ಗೀತಾ ಎಂಬ ಚಿತ್ರದಲ್ಲಿ ನಟಿಸುತ್ತಿರೋ ವಿಚಾರ ಗೊತ್ತೇ ಇದೆ. ಈ ಚಿತ್ರಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ. ಇದೇ ಸಮಯದಲ್ಲಿ ಬಾಕಿ ಉಳಿದಿದ್ದ ಮೂರನೇ ನಾಯಕಿಯ ಆಯ್ಕೆಯೂ ನಡೆದಿದೆ. ಶಾನ್ವಿ ಶ್ರೀವಾಸ್ತವ ಈ ಚಿತ್ರಕ್ಕೆ ಹೊಸತಾಗಿ ಎಂಟ್ರಿ ಕೊಟ್ಟಿದ್ದಾರೆ.

    ಗೀತಾ ಚಿತ್ರದಲ್ಲಿ ಮೂವರು ನಾಯಕಿಯರು ನಟಿಸಲಿದ್ದಾರೆ. ಈಗಾಗಲೇ ಮಲೆಯಾಳಿ ಚೆಲುವೆಯರಾದ ಪ್ರಯಾಗಾ ಮಾರ್ಟಿನ್ ಮತ್ತು ಪಾರ್ವತಿ ಅರುಣ್ ನಾಯಕಿಯರಾಗಿ ನಿಕ್ಕಿಯಾಗಿದ್ದರು. ಮೂರನೇ ನಾಯಕಿಗಾಗಿ ವ್ಯಾಪಕವಾಗಿ ಹುಡುಕಾಟ ಆರಂಭವಾಗಿತ್ತು. ಇದೀಗ ಆ ಪಾತ್ರಕ್ಕೆ ಶಾನ್ವಿ ಆಗಮನವಾಗಿದೆ.

    ಈ ಚಿತ್ರಕ್ಕೆ ಈ ಹಿಂದೆ ಮುಗುಳು ನಗೆ ಚಿತ್ರ ನಿರ್ಮಾಣ ಮಾಡಿದ್ದ ಸೈಯದ್ ಸಲಾಮ್ ಅವರೇ ಹಣ ಹೂಡಿದ್ದಾರೆ. ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಶಾನ್ವಿ ಶ್ರೀವಾಸ್ತವ ಮುಂದಿನ ಶೆಡ್ಯೂಲ್ ಹೊತ್ತಿಗೆಲ್ಲ ಚಿತ್ರತಂಡ ಸೇರಿಕೊಳ್ಳಲಿದ್ದಾರಂತೆ. ಮುಂದಿನ ಹಂತದ ಚಿತ್ರೀಕರಣ ಕೋಲ್ಕತ್ತಾದಲ್ಲಿ ನಡೆಯಲಿದೆ. ಅಲ್ಲಿಂದ ಕಾಶ್ಮೀರದಲ್ಲಿಯೂ ಚಿತ್ರೀಕರಣ ನಡೆಸಲು ಚಿತ್ರತಂಡ ತೀರ್ಮಾನಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಖಿಲ್‍ಗೆ ಜೊತೆಯಾದಳು ಅಂದಗಾತಿ ಶಾನ್ವಿ!

    ಅಖಿಲ್‍ಗೆ ಜೊತೆಯಾದಳು ಅಂದಗಾತಿ ಶಾನ್ವಿ!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಸ್ಟಾರ್ ನಟರಿಗೆಲ್ಲ ಸಾಥಿಯಾಗಿ ನಟಿಸುತ್ತಲೇ ಕನ್ನಡದಲ್ಲಿ ಚಾಲ್ತಿಯಲ್ಲಿರುವಾಕೆ ಶಾನ್ವಿ ಶ್ರೀವಾಸ್ತವ. ಇತ್ತೀಚೆಗಷ್ಟೇ ಉಪೇಂದ್ರ ಮತ್ತು ರವಿಚಂದ್ರನ್ ಒಟ್ಟಾಗಿ ನಟಿಸುತ್ತಿರೋ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದ ಶಾನ್ವಿ ಇದೀಗ ಮತ್ತೊಂದು ಚಿತ್ರವನ್ನೂ ಒಪ್ಪಿಕೊಂಡಿದ್ದಾಳೆ!

    ಪಾರ್ವತಮ್ಮ ರಾಜ್ ಕುಮಾರ್ ಅವರ ಸೋದರಳಿಯ ಸೂರಜ್ ಚೊಚ್ಚಲ ಚಿತ್ರ ಅಖಿಲ್‍ಗೆ ಶಾನ್ವಿ ಶ್ರೀವಾಸ್ತವ ನಾಯಕಿಯಾಗಿದ್ದಾಳೆ. ಸೂರಜ್ ಮೊದಲ ಸಲ ನಾಯಕನಾಗಿ ಎಂಟ್ರಿ ಕೊಡುತ್ತಿರೋ ಈ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆಂಬ ಕುತೂಹಲ ಇದ್ದೇ ಇತ್ತು. ಈ ರೇಸಿನಲ್ಲಿ ಹಲವು ನಾಯಕಿಯರ ಹೆಸರುಗಳೂ ತೇಲಿ ಹೋಗಿದ್ದವು. ಆದರೀಗ ಶಾನ್ವಿ ಶ್ರೀವಾಸ್ತವ ಅದಕ್ಕೆ ನಿಕ್ಕಿಯಾಗಿದ್ದಾಳೆ.

    ಕನ್ನಡ ಚಿತ್ರರಂಗಕ್ಕೆ ಬಂದು ಕೆಲವೇ ವರ್ಷಗಳಲ್ಲಿ ಶಾನ್ವಿ ವೆರೈಟಿ ವೆರೈಟಿ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರಾಗಿದ್ದಾಳೆ. ಎಂಥಾದ್ದೇ ಪಾತ್ರವನ್ನಾದರೂ ಲೀಲಾಜಾಲವಾಗಿ ನಿರ್ವಹಿಸುವ ಕಲೆಗಾರಿಕೆ ಇರುವ ಈಕೆ ಅಖಿಲ್ ಚಿತ್ರದಲ್ಲಿಯೂ ಡಿಫರೆಂಟಾದೊಂದು ಪಾತ್ರದಲ್ಲಿ ನಟಿಸಲಿದ್ದಾಳಂತೆ. ಶಾನ್ವಿಯನ್ನು ಈವರೆಗೂ ಕೂಡಾ ಇಂಥಾ ಪಾತ್ರದಲ್ಲಿ ನೋಡಿರಲು ಸಾಧ್ಯವೇ ಇಲ್ಲ ಅಂತ ಚಿತ್ರ ತಂಡವೇ ಭರವಸೆ ಹೊಂದಿದೆ.

    ಹೀರೋ ಆಗಿ ಎಂಟ್ರಿ ಕೊಡಲು ವರ್ಷಾಂತರಗಳಿಂದ ತಯಾರಿ ನಡೆಸಿಕೊಂಡೇ ಸೂರಜ್ ಅಖಿಲ್ ಮೂಲಕ ಅದನ್ನು ಸಾಕಾರಗೊಳಿಸಿಕೊಂಡಿದ್ದಾರೆ. ನಟನೆ, ಡ್ಯಾನ್ಸ್, ಫೈಟಿಂಗ್ ಸೇರಿದಂತೆ ಎಲ್ಲವನ್ನೂ ಶಾಸ್ತ್ರೋಕ್ತವಾಗಿ ಮುಗಿಸಿಕೊಂಡಿರುವ ಸೂರಜ್ ಮಾಸ್ ಪಾತ್ರದ ಮೂಲಕ ಪ್ರೇಕ್ಷಕರನ್ನು ತಲುಪಲು ತಯಾರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಹೊಯ್ಸಳರಿಗೆ ಜೊತೆಯಾದ ಶಾನ್ವಿ ಶ್ರೀವಾಸ್ತವ!

    ಹೊಯ್ಸಳರಿಗೆ ಜೊತೆಯಾದ ಶಾನ್ವಿ ಶ್ರೀವಾಸ್ತವ!

    ಬೆಂಗಳೂರು: ಕನ್ನಡದಲ್ಲಿ ಮತ್ತೊಮ್ಮೆ ಮಲ್ಟಿ ಸ್ಟಾರ್ ಚಿತ್ರಗಳ ಜಮಾನ ಮರುಕಳಿಸಿದೆ. ಈ ಹಿಂದೆ ಉಪೇಂದ್ರ ಮುಕುಂದ ಮುರಾರಿ ಚಿತ್ರದ ಮೂಲಕ ಕಿಚ್ಚ ಸುದೀಪ್ ಅವರಿಗೆ ಜೊತೆಯಾಗಿ ನಟಿಸಿದ್ದರು. ಇದೀಗ ಅದೇ ಉಪೇಂದ್ರ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಜೊತೆ ನಟಿಸುತ್ತಿದ್ದಾರೆ. ಓಂಪ್ರಕಾಶ್ ರಾವ್ ನಿರ್ದೇಶನ ಮಾಡಲಿರೋ ಈ ಚಿತ್ರಕ್ಕೆ ‘ಹೊಯ್ಸಳ’ ಎಂಬ ಹೆಸರಿಡಲಾಗಿದೆ.

    ಹೊಸಾ ವಿಚಾರವೆಂದರೆ, ಇದೀಗ ಈ ಹೊಯ್ಸಳರಿಗೆ ನಾಯಕಿಯರು ಸಿಕ್ಕಿದ್ದಾರೆ. ಮಾಸ್ಟರ್ ಪೀಸ್ ಖ್ಯಾತಿಯ ನಟಿ ಶಾನ್ವಿ ಶ್ರೀವಾಸ್ತವ ಮತ್ತು ಮಂಗಳೂರು ಮೂಲದ ಮಾಡೆಲಿಂಗ್ ಬೆಡಗಿ ನಮಿತಾ ರತ್ನಾಕರ್ ಈ ಚಿತ್ರಕ್ಕೆ ನಾಯಕಿಯರಾಗಿ ಸೆಲೆಕ್ಟಾಗಿದ್ದಾರೆ.

    ರವಿಚಂದ್ರನ್ ಮತ್ತು ಉಪ್ಪಿ ಕಾಂಬಿನೇಷನ್ನಿನ ಮೂಲಕ ಒಂದು ಗ್ಯಾಪಿನ ನಂತರ ಓಂಪ್ರಕಾಶ್ ರಾವ್ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಒಂದಷ್ಟು ಕಾಲದಿಂದ ಈ ಚಿತ್ರಕ್ಕೆ ನಾಯಕಿಯರ ಹುಡುಕಾಟದಲ್ಲಿದ್ದ ಓಂಪ್ರಕಾಶ್ ರಾವ್ ಕಡೆಗೂ ಆ ಆಯ್ಕೆ ನಡೆಸಿ ಈ ವಿಚಾರವನ್ನು ಬಿಟ್ಟುಕೊಟ್ಟಿದ್ದಾರೆ. ಆದರೆ ಶಾನ್ವಿ ಮತ್ತು ನಮಿತಾ ಯಾರಿಗೆ ಜೋಡಿಯಾಗಿ ನಟಿಸಲಿದ್ದಾರೆಂಬುದನ್ನು ಮಾತ್ರ ಸಸ್ಪೆನ್ಸ್ ಆಗಿಡಲಾಗಿದೆ!

    ಹೊಯ್ಸಳ ಚಿತ್ರಕ್ಕೆ ನಾಯಕಿಯರ ಆಯ್ಕೆಯ ಮೂಲಕ ತಾರಾಗಣದ ಆಯ್ಕೆ ಕಾರ್ಯವೆಲ್ಲವೂ ಸಮಾಪ್ತಿಗೊಂಡಿದೆ. ಇನ್ನೊಂದಷ್ಟು ದಿನಗಳಲ್ಲಿ ಈ ಬಗೆಗಿನ ಮಾಹಿತಿಯನ್ನು ಓಂಪ್ರಕಾಶ್ ಕೊಡಲಿದ್ದಾರಂತೆ. ಇದೇ ಆಗಸ್ಟ್ ತಿಂಗಳಲ್ಲಿ ಫೋಟೋ ಶೂಟ್ ಮುಗಿಸಿಕೊಂಡು, 20ನೇ ತಾರೀಕಿನಿಂದ ಚಿತ್ರೀಕರಣಕ್ಕೆ ಚಾಲನೆ ನೀಡಲು ಓಂಪ್ರಕಾಶ್ ರಾವ್ ನಿರ್ಧರಿಸಿದ್ದಾರಂತೆ.