Tag: Sharana BasappaTemple

  • ಶರಣಬಸಪ್ಪ ಅಪ್ಪ ಲಿಂಗೈಕ್ಯ – ಶರಣಬಸವೇಶ್ವರ ಸಂಸ್ಥಾನದ ಸಂಪ್ರದಾಯದಂತೆ ನೇರವೇರಿದ ಅಂತ್ಯಸಂಸ್ಕಾರ

    ಶರಣಬಸಪ್ಪ ಅಪ್ಪ ಲಿಂಗೈಕ್ಯ – ಶರಣಬಸವೇಶ್ವರ ಸಂಸ್ಥಾನದ ಸಂಪ್ರದಾಯದಂತೆ ನೇರವೇರಿದ ಅಂತ್ಯಸಂಸ್ಕಾರ

    ಕಲಬುರಗಿ: ಇಲ್ಲಿನ ಮಹಾ ದಾಸೋಹಿ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾಗಿದ್ದ ಡಾ. ಶರಣಬಸಪ್ಪ ಅಪ್ಪ (Sharanabasappa Appa) ಅವರು ನಿನ್ನೆ ರಾತ್ರಿ ಲಿಂಗೈಕ್ಯರಾದರು. ಇಂದು ಶರಣಬಸವೇಶ್ವರ ಸಂಸ್ಥಾನದ ಸಂಪ್ರದಾಯದಂತೆ ದೇವಸ್ಥಾನ ಮುಂಭಾಗದಲ್ಲಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯ್ತು.

    ಅಂತ್ಯಸಂಸ್ಕಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಪಾಲ್ಗೊಂಡಿದ್ರು. ಅಂತ್ಯ ಸಂಸ್ಕಾರಕ್ಕೂ ಮುನ್ನ ಶರಣಬಸವೇಶ್ಚರ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ

    ಸಾಗರೋಪಾದಿಯಲ್ಲಿ ಸಾವಿರಾರು ಭಕ್ತರು ಆಗಮಿಸಿ ಡಾ.ಶರಣಬಸಪ್ಪ ಅಪ್ಪ ಅವರ ಅಂತಿಮ ದರ್ಶನ ಪಡೆದ್ರು. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರ ಸಚಿವರು, ಶಾಸಕರು ಹಾಗೂ ನೂರಾರು ಮಠಾಧೀಶರು, ಗಣ್ಯರು ಅಂತಿಮ ದರ್ಶನ ಪಡೆದ್ರು. ಇದನ್ನೂ ಓದಿ: ಮಹಾದಾಸೋಹಿ ಶರಣಬಸಪ್ಪ ಅಪ್ಪ ಅಂತಿಮ ದರ್ಶನ ಪಡೆದ ಡಿಕೆಶಿ

    ಇನ್ನೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಯಾಗಿ ಡಾ.ಶರಣಬಸಪ್ಪ ಅವರ ಪುತ್ರ ಚಿರಂಜೀವಿ ದೊಡಪ್ಪ ಅಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಾಯ್ತು. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ; ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

    ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ
    ಶರಣಬಸಪ್ಪ ಅಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಕ್ರಾಂತಿಯ ಹರಿಕಾರ. ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಕಲಬುರಗಿ ಜನರ ಆರಾಧ್ಯ ದೈವ ಎಂದೇ ಖ್ಯಾತಿಯಾಗಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯಡಿ ಕಳೆದ 4 ದಶಕಗಳಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ವಿದ್ಯಾಭ್ಯಾಸಕ್ಕೆ ಮಹತ್ವಕೊಟ್ಟಿದ್ದ ಅಪ್ಪ ಖುದ್ದು ಶರಣಬಸವೇಶ್ವರ ವಿಶ್ವವಿದ್ಯಾಲಯ ಆರಂಭಿಸಿ, ಆ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದ್ದರು.

    1935ರ ನವೆಂಬರ್‌ 14ರಂದು ಜನಿಸಿದ ಡಾ.ಶರಣಬಸಪ್ಪ ಅಪ್ಪ, ಸಂಸ್ಥಾನದ 7ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಹಾಗೂ ಗೋದುತಾಯಿ ಅವರ ಪುತ್ರ. 1957ರ ಫೆಬ್ರವರಿ 17ರಂದು ಕೋಮಲಾದೇವಿ ಅವರೊಂದಿಗೆ ವಿವಾಹವಾದರು. 1983ರಲ್ಲಿ ಸಂಸ್ಥಾನದ 8ನೇ ಪೀಠಾಧಿಪತಿಯಾಗಿ ನೇಮಕವಾದರು. 1993ರ ಮಾರ್ಚ್‌ 23ರಂದು ಕೋಮಲಾದೇವಿ ಅನಾರೋಗ್ಯದಿಂದ ನಿಧನ ಹೊಂದಿದರು. ಅದಾದ ಬಳಿಕ ಅಪ್ಪ ಅವರು 1993ರ ನ.30ರಂದು ಡಾ.ದ್ರಾಕ್ಷಯಣಿ ಅವ್ವಾಜಿ ಅವರೊಂದಿಗೆ 2ನೇ ವಿವಾಹವಾದರು.

     

    ಇದರ ಹೊರತಾಗಿ ಧಾರವಾಡ ಕರ್ನಾಟಕ ವಿವಿಯ ಎಮ್.ಎ ತತ್ವಶಾಸ್ತ್ರದಲ್ಲಿ ಪದವಿ ಪಡೆದಿದ್ದ ಅಪ್ಪ ಅವರು ಧಾರವಾಡ ಕರ್ನಾಟಕ ವಿವಿಯ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. 1980ರಲ್ಲಿ ಗುಲಿ ವಿವಿಯ ಮೂಲಸೌಕರ್ಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ವಿವಿಗೆ ಭದ್ರ ಭೂನಾದಿ ಹಾಕಿಕೊಟ್ಟರು. 2003ರ ಏಪ್ರಿಲ್ 28ರಲ್ಲಿ ಸಂಸದ ಭವನದಲ್ಲಿ ಬಸವೇಶ್ವರ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. 2017ರಲ್ಲಿ ಕರ್ನಾಟಕ ಖಾಸಗಿ ವಿಶ್ವವಿದ್ಯಾಲಯ ಕಾಯ್ದೆ ಅಡಿ ಶರಣಬಸವ ವಿಶ್ವವಿದ್ಯಾಲಯ ಆರಂಭಿಸಿದ್ದರು. ಸದ್ಯ ಅಪ್ಪಾಜಿ ನಿರ್ಮಿಸಿದಂತಹ ಶಿಕ್ಷಣ ಸಂಸ್ಥೆಗಳಲ್ಲಿ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ವಿದ್ಯಾಭ್ಯಾಸ ನಡೆಯುತ್ತಿದೆ. 1991ರಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದರು.

    ಪ್ರಶಸ್ತಿ, ಗೌರವಗಳು
    * ಕರ್ನಾಟಕ ಸರ್ಕಾರದಿಂದ 1988ರಲ್ಲಿ ಕರ್ನಾಟಕ ರಾಜ್ಯೋ ಪ್ರಶಸ್ತಿ
    * 1999ರಲ್ಲಿ ಗುಲಬರ್ಗಾ ವಿವಿ ಇಂದ ಗೌರವ ಡಾಕ್ಟರೇಟ್ ಪ್ರಧಾನ
    * ಹಲವಾರು ವರ್ಷಗಳ ಕಾಲ ಧಾರವಾಡ ವಿವಿ ಸಿಂಡಿಕೇಟ್ ಸದಸ್ಯರಾಗಿ ಸೇವೆ
    * ಲಲಿತ ಕಲಾ ಅಕಾಡೆಮಿ ವತಿಯಿಂದ ಕಲಾ ಪೋಷಿತ್ ಪ್ರಶಸ್ತಿ ಪ್ರಧಾನ

  • ಶರಣಬಸಪ್ಪ ಅಪ್ಪ ಲಿಂಗೈಕ್ಯ; ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

    ಶರಣಬಸಪ್ಪ ಅಪ್ಪ ಲಿಂಗೈಕ್ಯ; ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

    ರಾಯಚೂರು: ಮಹಾದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ ಹಿನ್ನೆಲೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ (Sharanprakash Patil) ಸಂತಾಪ ಸೂಚಿಸಿದ್ದಾರೆ.

    ರಾಯಚೂರಿನಲ್ಲಿ (Raichur) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶರಣಬಸವೇಶ್ವರ ದೇವಸ್ಥಾನ ಅಂದ್ರೆ ಪೂಜ್ಯನೀಯ ಭಾವನೆ ಇದೆ. ಪೀಠಾಧಿಪತಿ ಶರಣಬಸಪ್ಪ ಅಪ್ಪ ಅವರು ಲಿಂಗೈಕ್ಯ ಆಗಿದ್ದರಿಂದ ದುಃಖ ತಂದಿದೆ. ಇಂದು ಅಂತಿಮ ವಿಧಿವಿಧಾನ ಜರುಗಲಿದ್ದು, ಸಂತಾಪ ಸೂಚಿಸುತ್ತಿದ್ದೇನೆ. ವಿಶೇಷವಾಗಿ ದೇವಸ್ಥಾನದ ಪ್ರಭಾವ ಈ ಭಾಗದಲ್ಲಿ ಬಹಳಷ್ಟು ಇದೆ ಎಂದಿದ್ದಾರೆ. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ

    ಅನ್ನದಾಸೋಹ, ಶಿಕ್ಷಣ ದಾಸೋಹ ಮುಖಾಂತರ ನಾಡಿನ ಜನರ ಮನಸ್ಸನ್ನ ಶರಣಬಸಪ್ಪ ಅಪ್ಪಾ ಗೆದ್ದಿದ್ದಾರೆ. ಇನ್ನೂ ಆಧ್ಯಾತ್ಮದ ಕಡೆಗೆ ಜನರನ್ನು ಸೆಳೆಯುವಲ್ಲೂ ಅವರ ಅಪಾರ ಕೊಡುಗೆಯಿದೆ ಎಂದು ಹೇಳಿದ್ದಾರೆ.

  • ಮಹಾದಾಸೋಹಿ ಶರಣಬಸಪ್ಪ ಅಪ್ಪ ಅಂತಿಮ ದರ್ಶನ ಪಡೆದ ಡಿಕೆಶಿ

    ಮಹಾದಾಸೋಹಿ ಶರಣಬಸಪ್ಪ ಅಪ್ಪ ಅಂತಿಮ ದರ್ಶನ ಪಡೆದ ಡಿಕೆಶಿ

    ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕಲಬುರಗಿಗೆ ಆಗಮಿಸಿ ಶರಣಬಸಪ್ಪ ಅಪ್ಪ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

    ಸರ್ಕಾರದ ಪ್ರತಿನಿಧಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಲಬುರಗಿ ನಗರದ ಶರಣಬಸವೇಶ್ವರ ಸಂಸ್ಥಾನಕ್ಕೆ ಆಗಮಿಸಿದ್ದಾರೆ. ಶಿವಾನುಭವ ಮಂಟಪದಲ್ಲಿರುವ ಅಪ್ಪ ಅವರ ಪಾರ್ಥೀವ ಶರೀರಕ್ಕೆ ನಮಸ್ಕರಿಸಿ, ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಅಜಯ್ ಸಿಂಗ್ ಅವರು ಡಿಕೆಶಿಗೆ ಸಾಥ್ ನೀಡಿದ್ದಾರೆ.ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ

    ಈ ವೇಳೆ ಮಾತನಾಡಿದ ಅವರು, ಅಪ್ಪ ಅವರ ಶರೀರ ಇದೀಗ ದೇವರ ಪಾದಕ್ಕೆ ಸೇರಿದೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ದೊಡ್ಡ ಸೇವೆ ಮಾಡಿದ್ದಾರೆ. ಆ ಪೈಕಿ ಶಿಕ್ಷಣದಲ್ಲಿ ಅಪ್ಪ ಅವರು ತುಂಬಾ ಪ್ರಸಿದ್ಧರಾಗಿದ್ದರು. ಎಲ್ಲಾ ಧರ್ಮದವರು ಸಹ ಅಪ್ಪ ಅವರಿಗೆ ಗೌರವ ಕೊಡುವುದು ನಾವು ಕಾಣುತ್ತಿದ್ದೇವೆ. ಅವರು ಮಾಡಿದ್ದ ಸಾಧನೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಅಪ್ಪ ಅವರ ಅಗಲಿಕೆಯಿಂದಾಗಿ ಅವರ ಕುಟುಂಬ, ಭಕ್ತರು ಹಾಗೂ ಸರ್ಕಾರ ನೋವಿನಲ್ಲಿದೆ ಎಂದು ಸಂತಾಪ ಸೂಚಿಸಿದ್ದಾರೆ.

    ಇದೇ ವೇಳೆ ಪೊಲೀಸ್ ಇಲಾಖೆಯ ಮೂಲಕ ಮೂರು ಸುತ್ತು ಗುಂಡು ಹಾರಿಸಿ ಮಹಾದಾಸೋಹಿ ಶರಣಬಸಪ್ಪ ಅಪ್ಪ ಅವರಿಗೆ ಗೌರವ ಸಲ್ಲಿಸಿದರು.ಇದನ್ನೂ ಓದಿ: ಲಿಂಗೈಕ್ಯರಾದ ಶರಣಬಸಪ್ಪ ಅಪ್ಪ ಅಂತಿಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ