Tag: Sharanu Hullur

  • Landmarks of Sandalwood: ‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ

    Landmarks of Sandalwood: ‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ

    – ಕನ್ನಡ ಚಿತ್ರರಂಗಕ್ಕೆ 90 ವರ್ಷಗಳ ಸಂಭ್ರಮ

    ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ 90 ವರ್ಷಗಳ ಸಂಭ್ರಮ. ಈ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವುದಕ್ಕಾಗಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯು ಅಪರೂಪದ ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಿದೆ.‌

    ಭಾನುವಾರ ಬೆಂಗಳೂರಿನ ರಾಜಾಜಿನಗದರದಲ್ಲಿ ನಡೆದ ‘Landmarks of Sandalwood- ಚಂದನವನದ ಚಿಲುಮೆಗಳು’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ನಿರ್ದೇಶಕ ಟಿ.ಎಸ್.ನಾಗಭರಣ, ನಾಗತಿಹಳ್ಳಿ ಚಂದ್ರಶೇಖರ್, ನಟ ಶ್ರೀಮುರುಳಿ ಸೇರಿದಂತೆ ಕನ್ನಡ ಸಿನಿರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು.

     

    ಪತ್ರಕರ್ತ ಎಸ್.ಶ್ಯಾಮ್ ಪ್ರಸಾದ್ ಹಾಗೂ ಪಬ್ಲಿಕ್ ಟಿವಿ ಸಿನಿಮಾ ಬ್ಯೂರೋದ ಮುಖ್ಯಸ್ಥ ಡಾ. ಶರಣು ಹುಲ್ಲೂರು ಅವರು ಈ ಚಂದನವನದ ಚಿಲುಮೆಗಳು ಪುಸ್ತಕವನ್ನ ಬೆರೆದಿದ್ದಾರೆ. 90 ವರ್ಷದ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿರೋ 90 ಚಿತ್ರಗಳ ಬಗ್ಗೆ ಈ ಪುಸ್ತಕದಲ್ಲಿ ವಿಸ್ತೃತವಾದ ವಿವರಣೆಗಳನ್ನ ದಾಖಲಿಸಿದ್ದಾರೆ.

  • ಶರಣು ಹುಲ್ಲೂರು, ಬಿ.ಎಸ್.ಲಿಂಗದೇವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ಶರಣು ಹುಲ್ಲೂರು, ಬಿ.ಎಸ್.ಲಿಂಗದೇವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ಬ್ಲಿಕ್ ಟಿವಿ ಡಿಜಿಟಲ್ ಸಿನಿಮಾ ವಿಭಾಗದ ಶರಣು ಹುಲ್ಲೂರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಬಿ.ಎಸ್.ಲಿಂಗದೇವರು ಅವರಿಗೆ ಜಂಟಿಯಾಗಿ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ದೊರೆತಿದೆ. ಶರಣು ಹುಲ್ಲೂರು (Sharanu Hullur) ಮತ್ತು ಬಿ.ಎಸ್.ಲಿಂಗದೇವರು (BS Lingadevaru) ಜೊತೆಯಾಗಿ ‘ವಿರಾಟಪುರ ವಿರಾಗಿ’ (Viratpura Viragi) ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಈ ಚಿತ್ರದ ಸಂಭಾಷಣೆಗಾಗಿ ಖ್ಯಾತ ಚಿತ್ರ ಸಾಹಿತಿ ಶ್ರೀಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಸಂದಿದೆ.

    ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ವಿರಾಟಪುರ ವಿರಾಗಿ. ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿತ್ತು. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿತ್ತು. ಕರ್ನಾಟಕದಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿತ್ತು.

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿತ್ತು. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿತ್ತು.

     

    ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ  ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ 11ಕ್ಕೇರಿದೆ. ಸಂಸ್ಥೆಯ 48ನೇ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ  ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ  27ರ ಶನಿವಾರ ಸಂಜೆ 5.30ಕ್ಕೆ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಲಿದೆ. ಅಂದು ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

  • ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್

    ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್

    ವಾರದ ಹಿಂದೆಯಷ್ಟೇ ಪುನೀತ್ ರಾಜಕುಮಾರ್ (Puneeth Rajkumar) ಬಯೋಗ್ರಫಿ ‘ನೀನೇ ರಾಜಕುಮಾರ’ ನಾಲ್ಕನೇ ಆವೃತ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಅಭಿಮಾನಿಗಳು ಕೂಡ ಸಂಭ್ರಮಿಸಿದ್ದರು. ಈ ಸಂಭ್ರಮದ ಬೆನ್ನಲ್ಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯವ (Bangalore University) ಪುನೀತ್ ಅವರ ಬದುಕನ್ನು ಹಿಡಿದಿಟ್ಟ ಕೃತಿ ‘ನೀನೇ ರಾಜಕುಮಾರ’ ಪುಸ್ತಕದ ಒಂದು ಅಧ್ಯಾಯವನ್ನು ಪಠ್ಯವಾಗಿಸಿದೆ.

    ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ ನಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಪತ್ರಕರ್ತ ಡಾ.ಶರಣು ಹುಲ್ಲೂರು (Sharanu Hullur) ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ್’ (Neene Rajkumar) ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ (Textbook) ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.

    ಮೊನ್ನೆಯಷ್ಟೇ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್ ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಲೇಖಕ, ಪತ್ರಕರ್ತ ಶರಣು ಹುಲ್ಲೂರು ಬರೆದ ಪುನೀತ್ ರಾಜ ಕುಮಾರ ಕುರಿತಾದ ಬಯೋಗ್ರಫಿ ‘ನೀನೇ ರಾಜಕುಮಾರ್’ ಪುಸ್ತಕದ 4ನೇ ಆವೃತ್ತಿ ಬಿಡುಗಡೆ ಇಂದು ಬೆಂಗಳೂರಿನಲ್ಲಿ ನಡೆಯಿತು. ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಈ ಕೃತಿಯನ್ನು ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು, ಪುಸ್ತಕದೊಳಗಿನ ಹಲವಾರು ವಿಷಯಗಳಿಗೆ ಕಿವಿಯಾದರು. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.

    15 ಮಾರ್ಚ್ 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಆನಂತರ ಈ ಪುಸ್ತಕವು ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಅಲ್ಲದೇ, ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.

    ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ‘ನೀನೇ ರಾಜಕುಮಾರ’ ಪುಸ್ತಕದ್ದು. ಪುನೀತ್ ಅವರ ಬಾಲ್ಯದಿಂದ ಅವರ ನಿಧನದವರೆಗೂ ಅವರ ಬದುಕನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪುನೀತ್ ಅವರ ಸಿನಿಮಾ, ಅವರ ಸಮಾಜಸೇವೆ, ಅವರ ಜೀವನದಲ್ಲಿ ನಡೆದ ಘಟನೆಗಳು ಮತ್ತು ಪುನೀತ್ ಅವರ ಜೀವನದ ಜೊತೆಗೆ ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಕೂಡ ಈ ಪುಸ್ತಕದಲ್ಲಿದೆ. ಅಲ್ಲದೇ, ಅಪರೂಪದ ಫೋಟೋಗಳನ್ನು ನೋಡಬಹುದಾಗಿದೆ.

    ಪುನೀತ್ ಅವರ ಸಾಕಷ್ಟು ಸಂದರ್ಶನಗಳನ್ನು ಮಾಡಿದ್ದ ಪತ್ರಕರ್ತ ಶರಣು ಹುಲ್ಲೂರು, ಪುನೀತ್ ಅವರ ಕುರಿತಾಗಿ ಅನೇಕ ಅಪರೂಪದ ಸಂಗತಿಗಳನ್ನು ಈ ಪುಸ್ತಕದಲ್ಲಿ ಬರೆಯುತ್ತಾ ಹೋಗಿದ್ದಾರೆ. ಖ್ಯಾತ ಪತ್ರಕರ್ತರಾದ ಮುರಳಿಧರ ಖಜಾನೆ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರೆ, ಜೋಗಿ ಅವರು ಹಿನ್ನುಡಿ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡಾ.ಶರಣು ಹುಲ್ಲೂರುಗೆ `ಯುವ ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

    ಡಾ.ಶರಣು ಹುಲ್ಲೂರುಗೆ `ಯುವ ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

    ಬೆಂಗಳೂರು: ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘದ ವತಿಯಿಂದ ಇಲ್ಲಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಲೇಖಕ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರಿಗೆ 2021ನೇ ಸಾಲಿನ `ಯುವ ಸಾಹಿತ್ಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂದಿ ಶಾಂತಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ಕುಮಾರಪಾರ್ಕ್ನ ಗಾಂಧಿಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣು ಹುಲ್ಲೂರು ಅವರ `ಅನಂತವಾಗಿರು’ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಜಾನನ ಶರ್ಮಾ ಅವರಿಗೆ `ಸಾಹಿತ್ಯ ರತ್ನ’, ಜಮೀಲ್ ಸಾವಣ್ಣ ಅವರಿಗೆ `ಪುಸ್ತಕ ರತ್ನ’ ಹಾಗೂ ಡಾ.ವಿಜಯಮ್ಮ ಅವರಿಗೆ `ಮುದ್ರಣ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಪ್ರಶಸ್ತಿಗಳು ತಲಾ 10 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದವು. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

    ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಅವರು, ರಾಜ್ಯ ಸರ್ಕಾರ ಲೇಖಕರು, ಪ್ರಕಾಶಕರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದೆ. ನಮ್ಮ ಬೇಡಿಕೆಗಳಿಗೆ ಸ್ಪಂಧಿಸುತ್ತಿಲ್ಲ. ಪ್ರತಿ ವರ್ಷ ನೀಡುವ 15 ಕೋಟಿ ರೂ.ಗಳ ಅನುದಾನದಲ್ಲಿ ಇನ್ನೂ 10 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದರಿಂದ ಪ್ರಕಟಣೆಗೆ ಸಜ್ಜಾಗಿರುವ ಎಷ್ಟೋ ಪುಸ್ತಕಗಳು ಮೂಲೆ ಸೇರುತ್ತಿವೆ. ಪೇಪರ್ ಬೆಲೆ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಪುಸ್ತಕ ಪ್ರಕಟಣೆಗೂ ಕಷ್ಟವಾಗಲಿದೆ ಎಂದು ಆತಂಕಪಟ್ಟರು.

    ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರಬೇಕು. ನಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಬೇಕು. ಪ್ರತಿವರ್ಷ 15 ಕೋಟಿ ರೂ.ಗಳ ಅನುದಾನ ಮೀಸಲಿಡುವ ಜೊತೆಗೆ 500 ಪುಸ್ತಕಗಳನ್ನು ಸರ್ಕಾರದಿಂದಲೇ ಖರೀದಿಸುವಂತೆ ಒತ್ತಾಯಿಸಬೇಕು ಎಂದು ಕರೆ ನೀಡಿದರು.

    ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಮಾತನಾಡಿ, ಮೊದಲೆಲ್ಲಾ ಪ್ರಸಿದ್ಧ ಲೇಖಕರ ಪುಸ್ತಕಗಳು ಮಾತ್ರವೇ ಹೊರಬರುತ್ತಿದ್ದವು. ಕನ್ನಡ ಪುಸ್ತಕ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ನಂತರವೇ ಉದಯೋನ್ಮುಖ ಲೇಖಕರೂ ಬೆಳಕಿಗೆ ಬರುವಂತಾಯಿತು. ಇಂದು ತಂತ್ರಜ್ಞಾನಗಳು ಬೆಳೆದಂತೆ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಯಾವುದೇ ಲೇಖಕರು, ಪ್ರಕಾಶಕರಿಗೆ ತೊಂದರೆ ಆದಾಗ ಮತ್ತೊಬ್ಬರು ಜೊತೆಯಾಗಿ ನಿಲ್ಲಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಅಫೇರ್ ಆರೋಪ ನಂತರ `ಅಣ್ಣ-ತಂಗಿ’ ಆಗಿಬಿಟ್ರಾ ನರೇಶ್-ಪವಿತ್ರಾ!

    ಡಿ.ಕೆ.ಮಂಜುಳಾ ಅವರ `ಮುಕ್ತೆ’, ಕಂವೀ ಅವರ `ರಾಯಲ ಸೀಮಾ ಕಥೆಗಳು’, ಬಿ.ಓಬಯ್ಯ ಅವರ `ಬಯಕೆಯ ಬೆನ್ನೇರಿ’, ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಅವರ `ತೌಲನಿಕ ಸಾಹಿತ್ಯ ಮೀಮಾಂಸೆ’, ಕೇಶವ ರೆಡ್ಡಿ ಹಂದ್ರಾಳರ `ಬೆರಕೆ ಸೊಪ್ಪು’ ಹಾಗೂ ಹೃದಯಶಿವ ಅವರ `ಕ್ಲ್ಯಾಪ್‌ಬೋರ್ಡ್‌’ ಕೃತಿಗಳನ್ನು ಹಿರಿಯ ಪತ್ರಕರ್ತ ರವೀಂದ್ರ ಭಟ್ ಲೋಕಾರ್ಪಣೆಗೊಳಿಸಿದರು. ಇದನ್ನೂ ಓದಿ: ಶಾಸಕರು ತುಲಾಭಾರ ಮಾಡುವಷ್ಟು ಹಣ ಮಾಡ್ಕೊಂಡಿದ್ದಾರೆ, ಆದರೆ ಅವರಿಗೆ ಆಸ್ಪತ್ರೆ ಬೇಡ: ಚಕ್ರವರ್ತಿ ಸೂಲಿಬೆಲೆ

    ವೇದಿಕೆಯಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೊಡೇ ಪಿ.ಕೃಷ್ಣ, ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಕಾರ್ಯದರ್ಶಿ ಆರ್.ದೊಡ್ಡೆಗೌಡ ಮೊದಲಾದವರು ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಯುವ ಸಾಹಿತ್ಯ ರತ್ನ ಪ್ರಶಸ್ತಿಗೆ ಶರಣು ಹುಲ್ಲೂರು ಆಯ್ಕೆ

    ಯುವ ಸಾಹಿತ್ಯ ರತ್ನ ಪ್ರಶಸ್ತಿಗೆ ಶರಣು ಹುಲ್ಲೂರು ಆಯ್ಕೆ

    ಬೆಂಗಳೂರು: ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘ ನೀಡುವ ‘ಯುವ ಸಾಹಿತ್ಯ ರತ್ನ’ ಪ್ರಶಸ್ತಿಗೆ ಡಾ.ಶರಣು ಹುಲ್ಲೂರು ಅವರ ‘ಅನಂತವಾಗಿರು’ ಕೃತಿ ಆಯ್ಕೆಯಾಗಿದೆ.

    ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು 2021ನೇ ಸಾಲಿನ ಪ್ರಶಸ್ತಿಯನ್ನು ಘೋಷಿಸಿದ್ದು, ಡಾ. ಶರಣು ಹುಲ್ಲೂರು ಅವರು ಸೇರಿದಂತೆ ಗಜಾನನ ಶರ್ಮಾ, ಡಾ.ವಿಜಯಮ್ಮ, ಜಮೀಲ್ ಸಾವಣ್ಣ ಅವರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ನಾನು ಚೇತರಿಸಿಕೊಂಡಿದ್ದೇನೆ: ಸರ್ಜರಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ದಿಗಂತ್

    ಸಾಹಿತ್ಯ ರತ್ನ ಪ್ರಶಸ್ತಿಗೆ ಗಜಾನನ ಶರ್ಮಾ ಅವರ ‘ಚನ್ನಭೈರಾದೇವಿ’ ಆಯ್ಕೆಯಾಗಿದೆ. ಪುಸ್ತಕ ರತ್ನ ಪ್ರಶಸ್ತಿಗೆ ಜಮೀಲ್ ಸಾವಣ್ಣ ಅವರ ‘ಸಾವಣ್ಣ ಪ್ರಕಾಶನ’, ಮುದ್ರಣ ರತ್ನ ಪ್ರಶಸ್ತಿಗೆ ಲೇಖಕಿ ವಿಜಯಾ ಅವರ ‘ಇಳಾ ಗ್ರಾಫಿಕ್ಸ್’ ಆಯ್ಕೆಯಾಗಿದೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಬೆತ್ತಲೆ ಚಿತ್ರಕ್ಕೆ ಭಾರತದಾದ್ಯಂತ ತಾಪಮಾನ ಹೆಚ್ಚಿದೆ ಎಂದ ನಟಿ ಅನನ್ಯ ಪಾಂಡೆ

    ಈ ಪ್ರಶಸ್ತಿಗಳು ತಲಾ 10 ಸಾವಿರ ರೂಪಾಯಿ ನಗದು ಒಳಗೊಂಡಿವೆ. ಪುಸ್ತಕ ಸಂಸ್ಕೃತಿಗೆ ಪೂರಕವಾಗಿ ಬರಹಗಾರರು, ಪ್ರಕಾಶಕರು ಹಾಗೂ ಮುದ್ರಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದೇವೆ. 2021ನೇ ಸಾಲಿನ ಪ್ರಶಸ್ತಿಗಳನ್ನು ಜುಲೈ 30ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟ ಸ್ವಾಮಯ್ಯ ತಿಳಿಸಿದ್ದಾರೆ.

    Live Tv

  • ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ

    ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ

    ವರ್ಷದಲ್ಲಿ ಅತೀ ಹೆಚ್ಚು ಸಿನಿಮಾಗಳು ರಿಲೀಸ್ ಆದ ನಟನಾಗಿ ಧನಂಜಯ್ ಹೊರ ಹೊಮ್ಮಿದ್ದಾರೆ. ಈವರೆಗೂ ಸಿಕ್ಕ ಮಾಹಿತಿಯಂತೆ ಧನಂಜಯ್ ಅವರ ಸಿನಿಮಾಗಳು ಅಂದಾಜು ಎರಡು ತಿಂಗಳಿಗೆ ಒಂದರಂತೆ ರಿಲೀಸ್ ಆಗಲಿವೆ. ಈಗಾಗಲೇ ವರ್ಷದ ಫಸ್ಟ್ ಆಫ್ ಮುಗಿದಿದ್ದು, ಸೆಕೆಂಡ್ ಆಫ್ ನಲ್ಲಿ ಧನಂಜಯ್ ನಟನೆಯ ಸಾಲು ಸಾಲು ಚಿತ್ರಗಳು ತೆರೆ ಕಾಣುತ್ತಿವೆ. ಹೀಗಾಗಿ ಈ ವರ್ಷದಲ್ಲಿ ಅತೀ ಹೆಚ್ಚು ಇವರ ನಟನೆಯ ಚಿತ್ರಗಳೇ ಬಿಡುಗಡೆ ಆಗುತ್ತಿರುವುದು ವಿಶೇಷ.

    ನಿನ್ನೆಯಷ್ಟೇ ಧನಂಜಯ್ ನಟನೆಯ ಹೊಸ ಸಿನಿಮಾದ ರಿಲೀಸ್ ದಿನಾಂಕ ಘೋಷಣೆಯಾಗಿದೆ. ಅವರೇ ನಿರ್ಮಾಣ ಮಾಡಿ, ನಟಿಸಿರುವ ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21 ರಂದು ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಧನಂಜಯ್, ಬೆಂಗಳೂರಿನ ಭೂಗತ ದೊರೆ ಜಯರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಮತ್ತೊಂದು ವಿಶೇಷವೆಂದರೆ ರವಿಚಂದ್ರನ್, ವಸಿಷ್ಠ ಸಿಂಹ, ಶ್ರುತಿ ಹರಿಹರನ್ ಸೇರಿದಂತೆ ಹೆಸರಾಂತ ತಾರಾ ಬಳಗವೇ ಈ ಸಿನಿಮಾದಲ್ಲಿದೆ. ಇದನ್ನೂ ಓದಿ: ಹಿಂದಿ ವೆಬ್ ಸಿರೀಸ್‌ನಲ್ಲಿ `ರಂಗಿತರಂಗ’ ನಟಿ ರಾಧಿಕಾ ನಾರಾಯಣ್

    ಮುಂದಿನ ದಿನಗಳಲ್ಲಿ ಡಾಲಿ ಸಿನಿಮಾ ಫೆಸ್ಟಿವೆಲ್ ಶುರುವಾಗಲಿದೆ. ಜುಲೈನಲ್ಲಿ ಶಿವರಾ‍ಜ್ ಕುಮಾರ್ ಜೊತೆಗಿನ ಭೈರಾಗಿ ಚಿತ್ರ ರಿಲೀಸ್ ಆದರೆ, ಆಗಸ್ಟ್ ನಲ್ಲಿ ಮನ್ಸೂನ್ ರಾಗ, ಸೆಪ್ಟಂಬರ್ ನಲ್ಲಿ ಒನ್ಸ್ಪಾನ್ ಟೈಮ್ ಇನ್ ಜಮಾಲಿಗುಡ್ಡ, ಅಕ್ಟೋಬರ್ ನಲ್ಲಿ ಹೆಡ್ ಬುಷ್, ನವೆಂಬರ್ ನಲ್ಲಿ ಹೊಯ್ಸಳ, ಅಲ್ಲದೇ ಈ ನಡುವೆ ಯಾವ ತಿಂಗಳಲ್ಲಾದರೂ, ಜಗ್ಗೇಶ್ ಜೊತೆಗಿನ ತೋತಾಪುರಿ ಸಿನಿಮಾ ಕೂಡ ರಿಲೀಸ್ ಆಗಬಹುದು. ಹಾಗಾಗಿ ತಿಂಗಳಿಗೊಂದು ಡಾಲಿ ಸಿನಿಮಾ ವೀಕ್ಷಿಸಬಹುದಾಗಿದೆ.

    ಇವುಗಳಲ್ಲದೇ ಇನ್ನೂ ಹಲವಾರು ಚಿತ್ರಗಳಲ್ಲಿ ಧನಂಜಯ್ ನಟಿಸುತ್ತಿದ್ದಾರೆ. ತಮಿಳು ಪುಷ್ಪಾ 2 ದಲ್ಲೂ ನಟಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಅಲ್ಲಿಗೆ ಡಾಲಿ ವರ್ಷಪೂರ್ತಿ  ಬ್ಯುಸಿಯಾಗಿದ್ದಾರೆ. ಜೊತೆಗೆ ಡಾ.ರಾಜ್ ಕ್ರಿಕೆಟ್ ಪಂದ್ಯಗಳಲ್ಲೂ ಅವರು ಭಾಗಿಯಾಗಿದ್ದಾರೆ.

  • ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ವಿಮರ್ಶೆ ಮಾಡಿದ ನಟ ರಮೇಶ್ ಅರವಿಂದ್

    ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ವಿಮರ್ಶೆ ಮಾಡಿದ ನಟ ರಮೇಶ್ ಅರವಿಂದ್

    ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಕುರಿತು ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸಿನಿ ಪ್ರಿಯರ ನಿರೀಕ್ಷೆ ಹೆಚ್ಚು ಮಾಡಿದೆ. ಈ ಸಿನಿಮಾ ಹೇಗಿರಬಹುದು? ಸುದೀಪ್ ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಬಹುದು? ಇದು ಯಾವ ರೀತಿಯ ಸಿನಿಮಾ? ಹೀಗೆ ಅಭಿಮಾನಿಗಳಲ್ಲಿ ನೂರಾರು ಪ್ರಶ್ನೆಗಳು ಹುಟ್ಟಿಕೊಂಡಿವೆ. ಅದಕ್ಕೆ ಕೆಲವು ಉತ್ತರಗಳನ್ನು ನೀಡಿದ್ದಾರೆ ನಟ ರಮೇಶ್ ಅರವಿಂದ್.

    ವಾರದ ಹಿಂದೆಯಷ್ಟೇ ವಿಕ್ರಾಂತ್ ರೋಣ ಸಿನಿಮಾವನ್ನು ವೀಕ್ಷಿಸಿರುವ ರಮೇಶ್ ಅರವಿಂದ್, ಆ ಸಿನಿಮಾದ ಬಗೆಗಿನ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾವನ್ನು ನೋಡಿದ ಮೊದಲ ಕನ್ನಡದ ಸೆಲಿಬ್ರಿಟಿ ಕೂಡ ಇವರಾಗಿದ್ದಾರೆ. ಹಾಗಾಗಿ ಸೆಲಿಬ್ರಿಟಿಯೊಬ್ಬರು ಮೊದಲ ಬಾರಿಗೆ ನೀಡಿದ ವಿಮರ್ಶೆ ಕೂಡ ಇದಾಗಿದೆ. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?

    ನಿನ್ನ ಬೆಂಗಳೂರಿನ ವೀರಲೋಕ ಬುಕ್ಸ್ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಿಚ್ಚ ಸುದೀಪ್ ಮತ್ತು ರಮೇಶ್ ಅರವಿಂದ್ ಕೂಡ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಅರವಿಂದ್, ‘ನಟನೊಬ್ಬ ಸಿನಿಮಾ ರಿಲೀಸ್‌ಗೂ ಮುನ್ನ ತಮ್ಮ ಸಿನಿಮಾ ತೋರಿಸುವುದಕ್ಕೆ ಧೈರ್ಯಬೇಕು. ಅಂತಹ ಧೈರ್ಯವಂತ ಸುದೀಪ್, ತಮ್ಮ ಮನೆಗೆ ಕರೆಯಿಸಿಕೊಂಡು ವಿಕ್ರಾಂತ್ ರೋಣ ಸಿನಿಮಾ ತೋರಿಸಿದರು. ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ. ಫ್ಯಾಂಟಸಿ ಜಗತ್ತನ್ನೇ ಅವರು ಕ್ರಿಯೇಟ್ ಮಾಡಿದ್ದಾರೆ. ಅಲ್ಲದೇ, ಇದೊಂದು ಕುತೂಹಲ ಮೂಡಿಸುವಂತಹ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಸಿನಿಮಾ ಎಂದು ಹಾಡಿಹೊಗಳಿದರು.

    ಭಾರತೀಯ ಸಿನಿಮಾ ರಂಗದಲ್ಲಿ ವಿಕ್ರಾಂತ್ ರೋಣ ಸಿನಿಮಾ ಮತ್ತೊಂದು ದಾಖಲೆ ಮಾಡುವಂತಹ ಚಿತ್ರವಾಗಲಿದೆ. ಒಂದೊಳ್ಳೆ ಸಿನಿಮಾವನ್ನು ನೋಡಿದ ಖುಷಿ ನನ್ನಲ್ಲಿ ಉಳಿಸಿದೆ. ಅಂತಹ ಅದ್ಧೂರಿ ಚಿತ್ರ ಮಾಡಿದ್ದಾರೆ ಸುದೀಪ್ ಅಂದರು. ಅಂದಹಾಗೆ ಈ ಸಿನಿಮಾವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದು, ಜಾಕ್ ಮಂಜು ಅವರು ನಿರ್ಮಾಪಕರು.

  • ಬೆಂಗಳೂರು ರಸ್ತೆ ಒಂದೇ ಜಾಗದಲ್ಲಿ 30 ಗುಂಡಿಗಳು : ಸರಕಾರಕ್ಕೆ ಛೀಮಾರಿ ಹಾಕಿದ ಸಿನಿ ಸಿಲೆಬ್ರಿಟಿಗಳು

    ಬೆಂಗಳೂರು ರಸ್ತೆ ಒಂದೇ ಜಾಗದಲ್ಲಿ 30 ಗುಂಡಿಗಳು : ಸರಕಾರಕ್ಕೆ ಛೀಮಾರಿ ಹಾಕಿದ ಸಿನಿ ಸಿಲೆಬ್ರಿಟಿಗಳು

    ಬೆಂಗಳೂರು ರಸ್ತೆಗಳು ಬೆಂಗಳೂರಿನ ಮರ್ಯಾದೆಯನ್ನೇ ರಾಷ್ಟ್ರ ಮಟ್ಟದಲ್ಲಿ ಹರಾಜು ಹಾಕುತ್ತಿವೆ ಎನ್ನುವ ಸುದ್ದಿಯನ್ನು ನಿನ್ನೆಯಿಂದ ಪಬ್ಲಿಕ್ ಟಿವಿ ಬಿತ್ತರಿಸುತ್ತಿದೆ. ಅದರಲ್ಲೂ ಬೆಂಗಳೂರು ಮೈಸೂರು ರಸ್ತೆಯ ಒಂದೇ ಜಾಗದಲ್ಲಿ ಸುಮಾರು 30ಕ್ಕೂ ಅಧಿಕ ಗುಂಡಿಗಳು ಬಿದ್ದಿರುವ ಕುರಿತು ಸತತವಾಗಿ ಪಬ್ಲಿಕ್ ಟಿವಿ ವರದಿ ಮಾಡುತ್ತಿದೆ. ಇದನ್ನೂ ಓದಿ : ನಯನತಾರಾ ಮದುವೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಜರ್?

    ರಸ್ತೆಯ ಗುಂಡಿಗಳನ್ನು ಮುಚ್ಚಿ, ಸುಗಮ ಸಂಚಾರಕ್ಕೆ ದಾರಿ ಮಾಡಿಕೊಡಿ ಎನ್ನುವ ಪಬ್ಲಿಕ್ ಟಿವಿಯ ಕಳಕಳಿಗೆ ಸ್ಯಾಂಡಲ್ ವುಡ್ ನಟರಾದ ಡಾ.ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ, ನಟಿಯರಾದ ಸಂಯುಕ್ತ ಹೊರನಾಡು, ಮಯೂರಿ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಈ ಸರಕಾರ ಕೂಡಲೇ ರಸ್ತೆಗಳನ್ನು ಸರಿ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸನ್ನಿ ಲಿಯೋನ್ ಫುಲ್ ಗರಂ: ಓರ್ವ ವ್ಯಕ್ತಿಗೆ ಸನ್ನಿ ಕೊಟ್ರು ಚಪ್ಪಲಿ ಏಟು

    ಒಂದೇ ಜಾಗದಲ್ಲಿ 30 ಗುಂಡಿಗಳನ್ನು ಕಂಡ ಖ್ಯಾತ ಚಿತ್ರಸಾಹಿತಿ, ನಿರ್ದೇಶಕ ಕವಿರಾಜ್ ಕೂಡ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ತಗೊಳ್ಳೊ ಪ್ರತೀ ವಾಹನದ ಮೇಲೆ ಡಿಸೈನ್ ಡಿಸೈನ್ ಟ್ಯಾಕ್ಸ್ . ಪೆಟ್ರೋಲ್ ಡಿಸೇಲ್ ಮೇಲಂತು ಮೂಲಬೆಲೆಗೂ ಮೂರುಪಟ್ಟು ಟ್ಯಾಕ್ಸ್, ಹೆಲ್ಮೆಟ್ ಹಾಕದಿದ್ರೆ ಇಷ್ಟು , ಇನ್ಶೂರೆನ್ ಇಲ್ಲಾಂದ್ರೆ ಅಷ್ಟು , ಬೆಲ್ಟ್ ಹಾಕದಿದ್ರೆ ಇಷ್ಟು ಇತ್ಯಾದಿ ಇತ್ಯಾದಿ ಫೈನ್ ಗಳನ್ನು ರಸ್ತೇಲಿ ಅಡ್ಡಗಟ್ಟಿ ವಸೂಲಿ ಮಾಡಲಾಗುತ್ತೆ.  ಇಷ್ಟೆಲ್ಲಾ ಕಿತ್ತು ತಿಂದ ಮೇಲೆ ನಮಗೆ ಕನಿಷ್ಠ ಮೂಲಭೂತ ಸೌಲಭ್ಯ ಕೊಡದ ಆಳುವವರ ಮೇಲೆ ನಾವು ಯಾವ ದಂಡ ವಿಧಿಸಬೇಕು ? ಎಷ್ಟು ದಂಡ ವಿಧಿಸಬೇಕು ಹಾಗಾದರೆ ?  ರಸ್ತೆ ಗುಂಡಿಗೆ ಬಿದ್ದು ಮೂಳೆ ಮುರಿದು ಕೊಳ್ಳುವವರೆಷ್ಟೋ? ಪ್ರಾಣ ತೆತ್ತವರೆಷ್ಟೋ? ಅದರ ಹೊಣೆಯೆಲ್ಲಾ ಹೊರುವವರು ಯಾರು?  ಎಂದು ಕೇಳಿದ್ದಾರೆ.

    ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಈಗಾಗಲೇ ವ್ಯಾಪಾಕವಾಗಿ ಟೀಕೆ ವ್ಯಕ್ತವಾಗುತ್ತಿದ್ದು, ಸರಕಾರಕ್ಕೆ ಜನರು ಛೀಮಾರಿ ಹಾಕುತ್ತಿದ್ದಾರೆ. ಈ ಕುರಿತು ಕೂಡಲೇ ಕ್ರಮ ತಗೆದುಕೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಅಲ್ಲದೇ, ಸೋಷಿಯಲ್ ಮೀಡಿಯಾದಲ್ಲಿ ಬೆಂಗಳೂರು ಗುಂಡಿಗೆ ಬಿದ್ದ ರಸ್ತೆಗಳನ್ನು ಟ್ರೋಲ್ ಮಾಡಲಾಗುತ್ತಿದೆ.

  • ಖ್ಯಾತ ಚಿತ್ರಸಾಹಿತಿ, ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ನಿಧನ.

    ಖ್ಯಾತ ಚಿತ್ರಸಾಹಿತಿ, ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ನಿಧನ.

    ನ್ನಡದ ಹೆಸರಾಂತ ನಿರ್ದೇಶಕ ದಿ.ಪುಟ್ಟಣ್ಣ ಕಣಗಾಲ್ ಅವರ ಸಹೋದರನ ಮಗ, ಚಿತ್ರ ಸಾಹಿತಿ ಪುರುಷತ್ತೋಮ್ ಕಣಗಾಲ್ ಅವರು ನಿನ್ನೆ ಅಮೇರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

    ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ.‌ ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತತಚನೆ ಮಾಡಿದ್ದಾರೆ.  ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್ ನ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯ ನಿರ್ವಹಿಸಿದ್ದರು.