Tag: Sharath Bachchegowda

  • ಕಿಯೋನಿಕ್ಸ್ ವೆಂಡರ್ಸ್‌ಗಳ ಬಾಕಿ ಮೊತ್ತ ಬಿಡುಗಡೆಯಾಗುತ್ತಿದೆ – ಶರತ್ ಬಚ್ಚೇಗೌಡ

    ಕಿಯೋನಿಕ್ಸ್ ವೆಂಡರ್ಸ್‌ಗಳ ಬಾಕಿ ಮೊತ್ತ ಬಿಡುಗಡೆಯಾಗುತ್ತಿದೆ – ಶರತ್ ಬಚ್ಚೇಗೌಡ

    ಬೆಂಗಳೂರು: ಕಿಯೋನಿಕ್ಸ್ (KEONICS) ವೆಂಡರ್ಸ್‌ಗಳಿಗೆ ಈಗಾಗಲೇ ಬಾಕಿ ಹಣ ಪಾವತಿ ಮಾಡ್ತಿದ್ದೇವೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ (Sharath Bachegowda)ಹೇಳಿದರು.

    ಕಿಯೋನಿಕ್ಸ್ ವೆಂಡರ್ಸ್ಗಳಿಗೆ ಬಾಕಿ ಪಾವತಿ ವಿಚಾರ ಮತ್ತು ಕಿಯೋನಿಕ್ಸ್ ವೆಂಡರ್ಸ್‌ನಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿಯೋನಿಕ್ಸ್ ವೆಂಡರ್ಸ್ ಜೊತೆ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ನಾನು ಇಬ್ಬರು ಚರ್ಚೆ ಮಾಡಿದ್ದೇವೆ. ಎಲ್ಲರಿಗೂ ಪರಿಹಾರ ಕೊಡುವ ಕುರಿತು ಚರ್ಚೆಗಳನ್ನ ನಡೆಸಿದ್ದೇವೆ. ಕಳೆದ ಸರ್ಕಾರದಲ್ಲಿ ನಡೆದ ಹಗರಣಗಳನ್ನ ನಾವು ಹಗುರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ವೆಂಡರ್ಸ್‌ಗಳಿಗೆ ಮತ್ತು ಸಣ್ಣ ಗುತ್ತಿಗೆದಾರಿಗೆ ತೊಂದರೆ ಕೊಡುವ ಉದ್ದೇಶ ನಮಗೆ ಇಲ್ಲ. ಆದರೆ ಸರ್ಕಾರದ ಖಜಾನೆಗೆ ಆಗಿರುವ ಖೋತಾ ಬಗ್ಗೆ ಸಮಗ್ರ ತನಿಖೆ ಆಗಬೇಕು. ಈ ತನಿಖೆಯನ್ನ ಗಂಭೀರವಾಗಿ ಮಾಡ್ತಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ವಿದೇಶಿಯರನ್ನು ಗಡಿಪಾರು ಮಾಡದ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತರಾಟೆ

    ಮಹೇಶ್ವರ್ ರಾವ್ ಅವರ ಸಮಿತಿ ತನಿಖೆ ಮಾಡ್ತಿದೆ. 2018 ರಿಂದ 2023ರವರೆಗೆ ನಡೆದ ಎಲ್ಲಾ ವ್ಯವಹಾರದ ಬಗ್ಗೆ ತನಿಖೆ ಮಾಡ್ತಿದೆ. ಪ್ರತಿ ಫೈಲ್ ಪರಿಶೀಲನೆ ಆಗ್ತಿದೆ. ಈಗಾಗಲೇ 1 ಸಾವಿರ ಫೈಲ್ ಪರಿಶೀಲನೆ ಆಗಿದೆ. 2-3 ಸಾವಿರ ಫೈಲ್ ಪರಿಶೀಲನೆ ಆಗಬೇಕಿದೆ. ಈ ವರದಿಯಲ್ಲಿ ಯಾರು ತಪ್ಪು ಮಾಡಿರುತ್ತಾರೋ ಎಲ್ಲರಿಗೂ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು.

    ಈಗ ಮಾಡಿರುವ ತನಿಖೆಯಲ್ಲಿ ಅಕ್ರಮ ಆಗಿರುವ ಅಂಶ ಬೆಳಕಿಗೆ ಬಂದಿದೆ. 30% ನಿಂದ 300% ವರೆಗೂ ವ್ಯತ್ಯಾಸ ಆಗಿವೆ. 30%-40% ರಷ್ಟು ಹೆಚ್ಚಿನ ಹಣದಲ್ಲಿ ಖರೀದಿ ಆಗಿದೆ. ಇದೆಲ್ಲವನ್ನೂ ನೋಡಿದರೆ ಯಾವ ಅಧಾರದಲ್ಲಿ ಅವರಿಗೆ ಹಣ ಬಿಡುಗಡೆ ಮಾಡೋಣ? ಸಮಿತಿ ವರದಿ ಕೊಡುವವರೆಗೂ ನಾವು ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಹಣ ನಮ್ಮ ಬಳಿ ಇದೆ. ಬೇಕಿದ್ದರೆ ಆರ್‌ಟಿಐನಲ್ಲಿ ಅರ್ಜಿ ಹಾಕಿ ನೋಡಿ ಎಂದರು.

    ವೆಂಡರ್ಸ್ಗೆ ಬಾಕಿ ಹಣ ಕೊಡೋಕೆ ನಮಗೆ ಸಮಸ್ಯೆ ಇಲ್ಲ. ಎಷ್ಟು ಕೊಡಬೇಕು ಅಂತ ಸಮಿತಿ ಹೇಳಲಿ. ಸಮಿತಿ ಹೇಳಿದ ಕೂಡಲೇ ಹಣ ಬಿಡುಗಡೆ ಮಾಡ್ತೀವಿ. ಅವರ ಹಣ ಇಟ್ಟುಕೊಂಡು ನಮಗೇನು ಆಗಬೇಕಿಲ್ಲ. ಶೀಘ್ರವೇ ಅವರಿಗೆ ಪರಿಹಾರ ಕೊಡೋ ಕೆಲಸ ಮಾಡ್ತೀವಿ. 5 ಪ್ರಕರಣದಲ್ಲಿ ಸಮಿತಿ ಶಿಫಾರಸ್ಸಿನ ಮೇಲೆ ಹಣ ಬಿಡುಗಡೆ ಆಗಿದೆ. ನಿನ್ನೆ ಮತ್ತೆ 6 ಗುತ್ತಿಗೆದಾರಿಗೆ ಹಣ ಕೊಟ್ಡಿದ್ದೇವೆ. ಆರೋಪ ಇಲ್ಲದೇ ಇರುವ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡ್ತೀವಿ. ನಿಯಮ ಮೀರಿರುವ ಕಡೆ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡ್ತೀವಿ. ಪ್ರಾಮಾಣಿಕರಿಗೆ ಹಣ ಕೊಡುವ ಕೆಲಸ ಮಾಡ್ತೀವಿ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪಗೆ ಪಕ್ಷದ ಸಿದ್ದಾಂತ ಗೊತ್ತಿಲ್ಲ – ವೆಂಕಟೇಶ್ ಮೌರ್ಯ

     

  • ಶರತ್ ಬಚ್ಚೇಗೌಡ ಮುಳುಗುತ್ತಿರೋ ಹಡಗು ಏರ್ತಿದ್ದಾರೆ: ವಿ.ಸೋಮಣ್ಣ

    ಶರತ್ ಬಚ್ಚೇಗೌಡ ಮುಳುಗುತ್ತಿರೋ ಹಡಗು ಏರ್ತಿದ್ದಾರೆ: ವಿ.ಸೋಮಣ್ಣ

    – ಪರಿಷತ್ ಗಲಾಟೆಗೆ ಕಾಂಗ್ರೆಸ್ ಕಾರಣ

    ಮಡಿಕೇರಿ: ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ, ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಮುಳುಗುತ್ತಿರುವ ಹಡಗನ್ನ ಏರುತ್ತೇನೆ ಎಂದು ಏನು ಮಾಡಲು ಸಾಧ್ಯ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಸಂಪಾಜೆಯಲ್ಲಿ ನಡೆದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿದ್ದ ಸಂದರ್ಭ ಮಾತನಾಡಿದರು.

    ಕಾಂಗ್ರೆಸ್ ಸೇರುತ್ತಿರೋದು ಶರತ್ ಅವರ ವೈಯಕ್ತಿಕ ವಿಚಾರ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಈಗಾಗಲೇ ಮಾತುಕತೆ ನಡೆಸಿದ್ದರೆ ಅವರಿಗೆ ಒಳ್ಳೆಯದಾಗಲಿ. ಆದರೆ ಮುಳುಗುತ್ತಿರುವ ಹಡಗನ್ನು ಏರುತ್ತೇನೆ ಎಂದರೆ ಏನು ಮಾಡೋದಕ್ಕೆ ಆಗುತ್ತದೆ. ಅವರ ತಂದೆ ನಮ್ಮ ಪಕ್ಷದಿಂದ ಸಂಸದರಾಗಿದ್ದವರು. ಮಗ ಕಾಂಗ್ರೆಸ್ ಗೆ ಹೋಗುತ್ತೇನೆ ಅಂದರೆ ಏನು ಮಾಡೋದಕ್ಕೆ ಆಗುತ್ತದೆ ಅವರೇ ಈ ಬಗ್ಗೆ ಯೋಚಿಸಲಿ ಎಂದರು.

    ಕಾಂಗ್ರೆಸ್ ನೇರ ಕಾರಣ: ವಿಧಾನ ಪರಿಷತ್ ಸಭಾಧ್ಯಕ್ಷರ ರಾಜೀನಾಮೇಗೆ ಸಂಬಂಧಿಸಿದಂತೆ ನಡೆದ ಗಲಾಟೆಗೆ ಕಾಂಗ್ರೆಸ್ ನೇರ ಕಾರಣ. ನಾನು ಸಹ ಎರಡು ಬಾರಿ ಪರಿಷತ್ ಸದಸ್ಯನಾಗಿದ್ದೆ. ಆ ಪರಿಷತ್ತಿನ ಸದಸ್ಯರು ಒಂದು ಘನತೆಯಿಂದ ನಡೆದುಕೊಳ್ಳುತ್ತಿದ್ದರು. ಸ್ಪೀಕರ್ ಅವರೇ ರಾಜೀನಾಮೆ ಕೊಡಗು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ನವರು ಹತಾಶರಾಗಿ ಅದನ್ನು ತಡೆದರು. ಇದರ ಪರಿಣಾಮವಾಗಿ ಗಲಾಟೆಯಾಗಿದೆ. ಹೀಗಾಗಿ ಆ ಗಲಾಟೆಗೆ ಕಾಂಗ್ರೆಸ್ ನೇರ ಕಾರಣ ಎಂದು ಟೀಕಿಸಿದರು. ಪರಿಷತ್ ಅನ್ನೋದು ಚಿಂತಕರ ಛಾವಡಿ. ಆದರೆ ಅದರ ಮೇಲೆ ಗದಾಪ್ರಹಾರ ಮಾಡಿದ್ದು ಸರಿಯಲ್ಲ ಎಂದು ಅಭಿಪ್ರಾಯಿಸಿದರು.

    ವಿಧಾನ ಪರಿಷತ್ ಗಲಾಟೆಗೆ ಸಂಬಂಧಿಸಿ ಮಾತನಾಡಿದ ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಘನ ಉದ್ದೇಶಗಳಿಂದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಗಳು ರಚನೆಯಾಗಿವೆ. ಅವುಗಳಿಗೆ ಬರುವವರ ಜ್ಞಾನ ದೇಶಕ್ಕೆ ಉಪಯೋಗವಾಗಬೇಕು ಎನ್ನೋ ಉದ್ದೇಶವಿದೆ. ಪರಿಷತ್ ಸದಸ್ಯರು ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

  • ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಎಂಪಿ ಪುತ್ರ ಶಾಸಕ ಶರತ್ ಬಚ್ಚೇಗೌಡ

    ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಎಂಪಿ ಪುತ್ರ ಶಾಸಕ ಶರತ್ ಬಚ್ಚೇಗೌಡ

    ಬೆಂಗಳೂರು: ಕಾಂಗ್ರೆಸ್ ಗ್ರಾಮ ಪಂಚಾಯ್ತಿ ಚುನಾವಣೆ ಸಿದ್ಧತೆ ಸಭೆಯಲ್ಲಿ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಬೆಳವಣಿಗೆಗೆ ಕಾರಣರಾಗಿದ್ದಾರೆ.

    ಕಾಂಗ್ರೆಸ್ ನ ಚುನಾವಣಾ ಸಿದ್ಧತಾ ಸಭೆಯಲ್ಲಿ ಭಾಗವಹಿಸಿದ ಶರತ್ ಬಚ್ಚೇಗೌಡ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗದಿದ್ದರೂ, ಕಾಂಗ್ರೆಸ್ ನಾಯಕರ ಜೊತೆ ಶರತ್ ಬಚ್ಚೇಗೌಡ ಸಭೆ ನಡೆಸಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆಗೆ ಶರತ್ ಸಿದ್ಧವಾಗಿದ್ದಾರೆ ಎನ್ನಲಾಗಿದೆ. ಪಕ್ಷ ಸೇರ್ಪಡೆಗೂ ಮುನ್ನವೇ ಕಾಂಗ್ರೆಸ್ ನಾಯಕರ ಜೊತೆ ವೇದಿಕೆ ಹಂಚಿಕೊಂಡು ತಮ್ಮ ಮುಂದಿನ ಹಾದಿ ಕಾಂಗ್ರೆಸ್ ಎಂಬುದನ್ನ ಸ್ಪಷ್ಟ ಪಡಿಸಿದ್ದಾರೆ ಎಂಬುವುದು ಶಾಸಕರ ಆಪ್ತರ ಮಾತು.

    ಹೊಸಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಶರತ್ ಬಚ್ಚೇಗೌಡ ಪಕ್ಷೇತರರರಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಶರತ್ ಸ್ಪರ್ಧೆ ಹಿನ್ನೆಲೆ ಎಂಟಿಬಿ ನಾಗರಾಜ್ ಸೋಲು ಕಂಡಿದ್ದರು. ತಮ್ಮ ಸೋಲಿಗೆ ಸಂಸದ ಬಚ್ಚೇಗೌಡರು ಮಗನ ಪರವಾಗಿ ಕೆಲಸ ಮಾಡಿದ್ದೇ ಕಾರಣ ಎಂದು ಎಂಟಿಬಿ ಆರೋಪಿಸಿದ್ದರು.

  • ಶರತ್ ಬಚ್ಚೇಗೌಡರನ್ನ ಪಕ್ಷಕ್ಕೆ ಸೇರಿಸಲ್ಲ: ಬಿಜೆಪಿ ಮುಖಂಡ

    ಶರತ್ ಬಚ್ಚೇಗೌಡರನ್ನ ಪಕ್ಷಕ್ಕೆ ಸೇರಿಸಲ್ಲ: ಬಿಜೆಪಿ ಮುಖಂಡ

    ಬೆಂಗಳೂರು/ಹೊಸಕೋಟೆ: ಉಪಚುನಾವಣೆಯಲ್ಲಿ ಗೆದ್ದಿರುವ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನ ಪಕ್ಷಕ್ಕೆ ಸೇರಿಸಲ್ಲ ಎಂದು ಬಿಜೆಪಿ ಮುಖಂಡ ಜಯರಾಜ್ ಹೇಳಿದ್ದಾರೆ.

    ಹೊಸಕೋಟೆಯಲ್ಲಿರುವ ಎಂಟಿಬಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯರಾಜ್, ಮಂತ್ರಿ ಸ್ಥಾನ ತ್ಯಾಗ ಮಾಡಿ ಬಿಜೆಪಿ ಸರ್ಕಾರ ರಚಿಸಲು ಪ್ರಮುಖ ಕಾರಣವಾಗಿರುವ ಎಂಟಿಬಿ ನಾಗರಾಜ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು. ಬಿಜೆಪಿ ಸರ್ಕಾರಕ್ಕೆ ಎಂಟಿಬಿ ಮಂತ್ರಿ ಸ್ಥಾನ ತ್ಯಾಗ ಮಾಡಿದವರು. ಅವರ ತ್ಯಾಗಕ್ಕೆ ಸಿಎಂ ಕೈ ಹಿಡಿಯಬೇಕು. ಎಂಟಿಬಿ ಅವರ ಅಭಿವೃದ್ಧಿ ಯೋಜನೆಗೆ ಕುತ್ತು ಬಾರದಂತೆ ಸಿಎಂ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

    ಸೋತವರಿಗೆ ಮಂತ್ರಿ ಸ್ಥಾನ ಕೊಡಬಾರದು ಅಂತ ಈಶ್ವರಪ್ಪರ ಹೇಳಿಕೆಗೆ ಪ್ರತಿಕ್ರಿಯಿಸಿದ ಜಯರಾಜ್, ಎಂಟಿಬಿ ಶಾಸಕ ಸ್ಥಾನದ ಜೊತೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದವರು. ಸಿಎಂ ಇದನ್ನ ಗಂಭೀರವಾಗಿ ಪರಿಗಣಿಸಿ ಮತ್ತು ಕಾನೂನು ತೊಡಕು ಸರಿಪಡಿಸಿ ಎಂಟಿಬಿ ಅವರನ್ನ ಮಂತ್ರಿ ಮಾಡಬೇಕು. ಈ ಬಗ್ಗೆ ಕ್ಷೇತ್ರದ ಐದು ಸಾವಿರ ಜನ ಸಿಎಂ ಭೇಟಿ ಮಾಡಿ ಮನವಿ ಮಾಡುತ್ತೇವೆ. ಕಾಂಗ್ರೆಸ್ ನಲ್ಲಿ ಎಂಟಿಬಿ ಅಭಿಮಾನಿಗಳಿದ್ದಾರೆ ಪಕ್ಷ ಬಿಡೋಕೆ ಸಿದ್ಧರಿರಲಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಕಾರ್ಯಕರ್ತರಿಗೆ ಸಂದೇಶ ರವಾನಿಸಿದರು.

  • ಹೊಸಕೋಟೆಯಲ್ಲಿ ಎಂಟಿಬಿ, ಬಚ್ಚೇಗೌಡ ಕಾಳಗ

    ಹೊಸಕೋಟೆಯಲ್ಲಿ ಎಂಟಿಬಿ, ಬಚ್ಚೇಗೌಡ ಕಾಳಗ

    ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾಳಗ ದಿನೇ ದಿನೇ ರಂಗೇರುತ್ತಿದೆ. ಸಂಸದ ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡರಿಗೆ ಬಿಜೆಪಿ ಟಿಕೆಟ್ ಸಿಗಲ್ಲ ಅನ್ನೋದು ಬಹುತೇಕ ಖಚಿತ ಆಗಿದೆ. ಯಾಕಂದ್ರೆ ಬಿಜೆಪಿ ಟಿಕೆಟ್ ಅನರ್ಹರಿಗೆ ಎಂದು ಖುದ್ದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ರೆಬಲ್ ಆಗುವ ಮುನ್ಸೂಚನೆ ನೀಡಿದ್ದಾರೆ.

    ಹೊಸಕೋಟೆಯ ಗಾಂಧಿ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಬಚ್ಚೇಗೌಡ, ಉಪಚುನಾವಣೆ ವಿಚಾರವಾಗಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದರು. ಅನರ್ಹತೆ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದ್ರು ಚುನಾವಣೆ ಘೋಷಣೆ ಮಾಡಿದ್ದು ಯಾಕೆ? ಮತ್ತೆ ಅನರ್ಹತೆ ಪ್ರಕರಣ ಕೋರ್ಟ್ ಮುಂದೆ ಹೋಗ್ತಿದ್ದಂತೆ ಚುನಾವಣೆ ಮುಂದೂಡಿದ್ದು ಯಾಕೆ? ಎಂದು ಚುನಾವಣಾ ಆಯೋಗಕ್ಕೆ ಬಚ್ಚೇಗೌಡರು ಪ್ರಶ್ನೆ ಮಾಡಿದರು.

    ಇದೇ ವೇಳೆ ತಮ್ಮ ಬಹುಕಾಲದ ವೈರಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಆಕ್ರೋಶ ವ್ಯಕಪಡಿಸೋದನ್ನು ಬಚ್ಚೇಗೌಡರು ಮರೆಯಲಿಲ್ಲ. ಮುಂದಿನ ಮೂರೂವರೆ ವರ್ಷ ನಾನೇ ಮಂತ್ರಿ, ಕ್ಷೇತ್ರಕ್ಕೆ ಕೋಟಿ ಕೋಟಿ ಅನುದಾನ ತರ್ತೀನಿ ಅನ್ನೋ ಎಂಟಿಬಿ ಮಾತಿಗೆ, ಎನ್ ಅವರಪ್ಪನ ಮನೆಯಿಂದ ತಂದು ಕೊಡ್ತಾನ ದುಡ್ಡು ಅಂತ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ನಾವು ಕಟ್ಟೋ ತೆರಿಗೆ ಹಣ ನಮಗೆ ವಾಪಸ್ ಕೊಡ್ತಾರೆ. ಏನು ಅವನ ಮನೆ ಹಣಾನಾ ಕೇಳೋವಷ್ಟು ಕೊಡೋಕೆ ಎಂದು ತಿರುಗೇಟು ಕೊಟ್ಟರು.

    ನನ್ನ ಪುತ್ರ ಶರತ್ ಬಚ್ಚೇಗೌಡ ಹೊಸಕೋಟೆ ತಾಲೂಕಿನ ಜನತೆಯ ಮತದಾರರ ತೀರ್ಮಾನದಂತೆ ನಡೆದುಕೊಳ್ಳುತ್ತಾನೆ. ಚುನಾವಣೆ ದೂರವಿದ್ದು, ಮುಂದೆ ಏನಾಗುತ್ತೋ ನೋಡೋಣ ಎಂದು ಮಗನ ಸ್ಪರ್ಧೆಯನ್ನು ಬಚ್ಚೇಗೌಡ್ರು ಪರೋಕ್ಷವಾಗಿ ಖಚಿತ ಪಡಿಸಿದರು.