Tag: sharath murder

  • ಚಾರ್ಮಾಡಿಯಲ್ಲಿ ಎಷ್ಟು ಹುಡುಕಾಡಿದರೂ ಸಿಗದ ಶರತ್ ಮೃತದೇಹ – ಬರಿಗೈಯಲ್ಲಿ ಬೆಂಗಳೂರು ಪೊಲೀಸರು ವಾಪಸ್

    ಚಾರ್ಮಾಡಿಯಲ್ಲಿ ಎಷ್ಟು ಹುಡುಕಾಡಿದರೂ ಸಿಗದ ಶರತ್ ಮೃತದೇಹ – ಬರಿಗೈಯಲ್ಲಿ ಬೆಂಗಳೂರು ಪೊಲೀಸರು ವಾಪಸ್

    ಚಿಕ್ಕಮಗಳೂರು: ಕಳೆದ 3 ದಿನಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಬೆಂಗಳೂರಿನ (Bengaluru) ಯುವಕ ಶರತ್ (Sharath) ಮೃತದೇಹ ಹುಡುಕುತ್ತಿದ್ದ ಪೊಲೀಸರು (Bengaluru Police) ಶುಕ್ರವಾರ ಬರಿಗೈಯಲ್ಲಿ ವಾಪಾಸಾಗಿದ್ದಾರೆ. 10ಕ್ಕೂ ಹೆಚ್ಚು ಪೊಲೀಸರ ಜೊತೆ 20ಕ್ಕೂ ಹೆಚ್ಚು ಸ್ಥಳೀಯ ಯುವಕರು 3 ದಿನಗಳಿಂದ ನಿರಂತರವಾಗಿ ಹುಡುಕಿದರೂ ಶವ ಸಿಗದ ಹಿನ್ನೆಲೆ ಪೊಲೀಸರು ಮತ್ತೆ ಬರುವುದಾಗಿ ಹೇಳಿ ವಾಪಾಸಾಗಿದ್ದಾರೆ.

    ಬೆಂಗಳೂರಿನ ಕೋಣನಕುಂಟೆ ಮೂಲದ ಶರತ್ ಸಬ್ಸಿಡಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಕೆಲವರಿಂದ ಹಣ ಪಡೆದಿದ್ದ. ಆದರೆ ಕಾರು ಕೊಡಿಸದ ಹಿನ್ನೆಲೆ ಹಣ ಕೊಟ್ಟವರು ಶರತ್‌ನನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆಗೈದಿದ್ದರು. ಕೊಲೆಯ ಬಳಿಕ ಮೃತ ದೇಹವನ್ನು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದರು. 9 ತಿಂಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಇದೀಗ ಬೆಳಕಿಗೆ ಬಂದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶರತ್ ಮೃತ ದೇಹಕ್ಕಾಗಿ 3 ದಿನಗಳಿಂದ ಶೋಧ ನಡೆಸಿದ್ದಾರೆ.

    ಶರತ್ ಮೃತ ದೇಹವನ್ನು ಎಲ್ಲಿ ಎಸೆದಿದ್ದರು ಎಂದು ತಿಳಿದುಕೊಳ್ಳಲು ಆರೋಪಿಗಳನ್ನು ಸ್ಥಳಕ್ಕೆ ಕರೆದುಕೊಂಡು ಬಂದಿದ್ದರು. ಆರೋಪಿಗಳು ಒಂದು ಬಾರಿ ರಸ್ತೆಯ ಎಡ ಭಾಗ ಎಂದರೆ, ಮತ್ತೊಂದು ಬಾರಿ ರಸ್ತೆಯ ಬಲಭಾಗ ಎನ್ನುತ್ತಿದ್ದರು. ಆರೋಪಿಗಳ ದ್ವಂದ್ವ ಹೇಳಿಕೆಯ ಮಧ್ಯೆಯೂ ಪೊಲೀಸರು ಅವರು ಹೇಳಿದ ಜಾಗದಲ್ಲೆಲ್ಲಾ ಹುಡುಕಾಡಿದ್ದಾರೆ. ಆದರೆ ಮೃತದೇಹ ಪತ್ತೆಯಾಗಿಲ್ಲ. 9 ತಿಂಗಳು ಕಳೆದಿರುವುದರಿಂದ ಪೊಲೀಸರಿಗೆ ಮೃತದೇಹದ ಯಾವುದೇ ಕುರುಹು ಪತ್ತೆಯಾಗಿಲ್ಲ. ಅಲ್ಲದೆ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಬೇಕಾದ ಹಿನ್ನೆಲೆ ಮೃತ ದೇಹವನ್ನು ಶೋಧಿಸುವ ಕಾರ್ಯಾಚರಣೆಗೆ ಬ್ರೇಕ್ ಹಾಕಿ ಬೆಂಗಳೂರಿಗೆ ಬರಿಗೈಲಿ ಹಿಂದಿರುಗಿದ್ದಾರೆ.

    ಸಾವಿರಾರು ಅಡಿ ಪ್ರಪಾತದ ಲಕ್ಷಾಂತರ ಹೆಕ್ಟರ್ ಅರಣ್ಯ ಪ್ರದೇಶದಲ್ಲಿ 9 ತಿಂಗಳ ಹಿಂದಿನ ಮೃತದೇಹ ಹುಡುಕುವುದು ಕಲ್ಲನ್ನು ಗುದ್ದಿ ನೀರು ತೆಗೆದಂತೆ. ಅಲ್ಲಿ ಮೃತದೇಹ ಹುಡುಕುವುದು ಅಸಾಧ್ಯವೇ ಸರಿ. ಆದರೂ ಪೊಲೀಸರು 3 ದಿನಗಳ ಕಾಲ ನಿರಂತರವಾಗಿ ಹುಡುಕಿ ಶುಕ್ರವಾರ ಬೆಂಗಳೂರಿಗೆ ಬರಿಗೈಲಿ ವಾಪಾಸಾಗಿದ್ದಾರೆ. ಕೊಲೆ ನಡೆದು 9 ತಿಂಗಳು ಕಳೆದಿರುವುದರಿಂದ ಮೃತದೇಹ ಮಣ್ಣಲ್ಲಿ ಕರಗಿರುವ ಸಾಧ್ಯತೆಯೇ ಹೆಚ್ಚಿದೆ. ಅಲ್ಲದೇ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ ಹಾಗೂ ಸೀಳು ನಾಯಿಗಳು ಯಥೇಚ್ಛವಾಗಿವೆ. ಪ್ರಾಣಿಗಳು ತಿಂದಿರಬಹುದು. ಇದನ್ನೂ ಓದಿ: ಬೆಂಗಳೂರಿನ ನಾಗರಬಾವಿ ಬಳಿ ಚಿರತೆ ಹೆಜ್ಜೆ

    ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತದೆ. ಇಲ್ಲಿ ಬಿದ್ದ ಮಳೆ ಚಾರ್ಮಾಡಿ ಘಾಟಿಯ ಕಣಿವೆಯಲ್ಲಿ ಹರಿದು ನೇತ್ರಾವತಿ ಸೇರುತ್ತದೆ. 2022ರಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಮಳೆ ಸುರಿದಿದೆ. ಮೃತದೇಹದ ಅವಶೇಷಗಳಿದ್ದರೂ ಕೂಡ ಮಳೆ ನೀರಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ. ಇದನ್ನೂ ಓದಿ: ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

    ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

    ಬೆಂಗಳೂರು: ಕೋಣನ ಕುಂಟೆ ನಿವಾಸಿ ಶರತ್ (Sharat Murder Case) ಕೊಲೆ ಪ್ರಕರಣವು ಕಬ್ಬನ್ ಪಾರ್ಕ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟ್‍ (Charmadi Ghat) ನಲ್ಲಿ ಶರತ್ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಮುಖ ಆರೋಪಿಗಳಾದ ಛಲಪತಿ, ಶರತ್, ಜೊತೆಗೆ ಕರೆದುಕೊಂಡು ಸ್ಥಳಕ್ಕೆ ಹೋಗಿದ್ದಾರೆ.

    ಕೊಲೆ ಆರೋಪಿಗಳು ದಿನಕ್ಕೊಂದು ಜಾಗ ತೋರಿಸುತ್ತಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ಆಳವಾದ ಕಂದಕಗಳು, ದಟ್ಟವಾದ ಪೂದೆಗಳ ಜಾಗಗಳನ್ನು ತೋರಿಸಿದ್ದಾರೆ. ಹೀಗಾಗಿ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಶರತ್ ಮೃತದೇಹ ಮಾತ್ರ ಸಿಗುತ್ತಿಲ್ಲ. ತಾವು ತೋರಿಸಿದ ಕಡೆ ಶವ ಸಿಗದೇ ಇದ್ದಾಗ, ಮತ್ತೊಂದು ಜಾಗ ಇರಬಹುದು ಎನ್ನುತ್ತಿದ್ದಾರೆ. ಹೀಗಾಗಿ ಆರೋಪಿಗಳು ಹೇಳಿದ ಜಾಗಗಳಲ್ಲಿ ಪೊಲೀಸರ ತಂಡಗಳು ತೀವ್ರ ಹುಡುಕಾಟ ನಡೆಸುತ್ತಿವೆ. ಎಷ್ಟೇ ಹುಡುಕಾಟ ನಡೆಸಿದರೂ ಮೃತದೇಹದ ಸಣ್ಣ ಕುರುಹು ಸಹ ಸಿಗದಿರುವುದರಿಂದ ಪೊಲೀಸರು ಕಂಗಾಲಾಗಿದ್ದಾರೆ.

    ಏನಿದು ಘಟನೆ..?: ಹಣದ ವಿಚಾರಕ್ಕೆ ಕಳೆದ ಒಂಬತ್ತು ತಿಂಗಳ ಹಿಂದೆ ಆರೋಪಿಗಳು ಶರತ್ ನನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದರು. ನಂತರ ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ ಎಸೆದಿದ್ದರು. ಇದೀಗ ಕೊಲೆ ನಡೆದು 6 ತಿಂಗಳ ನಂತ್ರ ಪ್ರಕರಣ ಬೆಳಕಿಗೆ ಬಂದಿದೆ. ಸಾಲ ಪಡೆದು ಹಿಂದಿರುಗಿಸದೆ ಶರತ್ ಓಡಾಡುತ್ತಿದ್ದರು. ಸಾಲ ಕೊಟ್ಟಿಲ್ಲ ಅನ್ನೋ ಕಾರಣಕ್ಕೆ ಶರತ್ ನನ್ನ 6 ತಿಂಗಳ ಹಿಂದೆಯೇ ಕಿಡ್ನಾಪ್ ಮಾಡಿದ್ದರು. ಬಳಿಕ ಚಿಕ್ಕಬಳ್ಳಾಪುರಕ್ಕೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ಕೊಟ್ಟು ಕೊಂದಿರುವುದು ಬೆಳಕಿಗೆ ಬಂದಿದೆ. ಶರತ್‍ನನ್ನ ಅರೆ ನಗ್ನಗೊಳಿಸಿ ಕಟ್ಟಿಹಾಕಿ ಮನಸ್ಸೋ ಇಚ್ಛೆ ಥಳಿಸಿರೋ ವೀಡಿಯೋಗಳು ಕೂಡ ಲಭ್ಯವಾಗಿದೆ.

    ಕೊಲೆಯಾಗಿ ತಿಂಗಳು ಕಳೆದ್ರೂ ಯಾರಿಗೂ ಗೊತ್ತಿರಲಿಲ್ಲ. ಅಲ್ಲದೆ ಕೊಲೆಯಾದವನ ಮೊಬೈಲ್‍ (Mobile) ನಿಂದಲೇ ಪೋಷಕರಿಗೆ ಸಂದೇಶ ರವಾನಿಸಲಾಗಿದೆ. ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಆರೋಪಿಗಳೇ ಶರತ್ ಪೋಷಕರಿಗೆ ಮೆಸೇಜ್ ಮಾಡಿದ್ದರು. ಬಳಿಕ ಮೊಬೈಲ್ ಅನ್ನು ಲಾರಿ (Lorry) ಮೇಲೆ ಎಸೆದಿದ್ದರು. ಈ ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರರಾಜ್ಯಕ್ಕೆ ಪ್ರಯಾಣ ಬೆಳೆಸಿದೆ.

    ಇತ್ತ ಮೊಬೈಲ್ ಸ್ವಿಚ್ ಆಫ್ ಆದ ನಂತರ ಪೋಷಕರಿಗೆ ಶರತ್ ಸಂಪರ್ಕವೇ ಇಲ್ಲ. ತನ್ನ ಮಗ ದುಡಿಮೆಗಾಗಿ ಹೊರರಾಜ್ಯದಲ್ಲಿದ್ದಾನೆಂಬ ನಂಬಿಕೆಯಲ್ಲಿದ್ದ ಪೋಷಕರಿಗೆ ವೀಡಿಯೋಗಳು ದೊರೆತಾಗ ಆಕಾಶವೇ ಕಳಚಿ ಬಿದ್ದಂತಾಗಿದೆ. ಕೂಡಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ (Cubbon Park Police Station) ಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಿದಾಗ ಕೊಲೆ ಆಗಿರೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: 88,920 ರೂ. ಮೌಲ್ಯದ ಬಿಸ್ಕೆಟ್ ಕದ್ದ ಖದೀಮರಿಬ್ಬರ ಬಂಧನ

    ಚಿಕ್ಕಬಳ್ಳಾಪುರ (Chikkaballapur) ಮೂಲದ ಶ್ರವಣ್ ಈ ಕೊಲೆ ಮಾಡಿದ ಆರೋಪಿಯಾಗಿದ್ದು, ಈತ ಕನ್ನಡಪರ ಸಂಘಟನೆಯೊಂದರ ಮುಖಂಡನ ಮಗ. ಆನಂತರ ಕೊಲೆ ತನಿಖೆಯ ಆಳಕ್ಕಿಳಿದ ಪೊಲೀಸರಿಗೆ ಶಾಕ್ ಆಗಿದೆ. ಈ ಕೊಲೆ ರಹಸ್ಯ ದೃಶ್ಯ ಸಿನಿಮಾವನ್ನೂ ಮೀರಿಸುವಂತಿದೆ. ತನಿಖೆಗೆ ಮುಂದಾದ ಪೊಲೀಸರಿಗೆ ಸಿಕ್ಕ ವಿವರಗಳೇ ರೋಚಕವಾಗಿದೆ. ಕೊಲೆಯಾದ ವಿಷಯ ತಿಳಿಯುತ್ತಿದಂತೆ 5 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.

    ಕಬ್ಬನ್ ಪಾರ್ಕ್ ಪೊಲೀಸರು ವಿಚಾರಣೆ ನಡೆಸಿದಾಗ ಸರ್ಕಾರಿ ಯೋಜನೆಗಳಲ್ಲಿ ಕಾರು ಕೊಡಿಸೋದಾಗಿ ವಂಚನೆ ಮಾಡಿದ್ದ ಆರೋಪ ಕೊಲೆಯಾದ ಶರತ್ ಮೇಲಿದೆ. ಹಲವು ಮಂದಿಯಿಂದ ಹಣ ಪಡೆದು ವಂಚಿಸಿದ್ದ ಆರೋಪವೂ ಕೇಳಿ ಬಂದಿದೆ. ಆರೋಪದ ಮೇಲೆ ಕಿಡ್ನಾಪ್ ಮಾಡಿ ಆರೋಪಿಗಳು ಹತ್ಯೆ ಮಾಡಿರುವುದಾಗಿ ಬಯಲಾಗಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಇದುವರೆಗೆ ಒಟ್ಟು 8 ಮಂದಿಯನ್ನು ಬಂಧಿಸಿದ್ದಾರೆ. ಇಂದು ಒಬಳೇಶ್, ನವೀನ್ ಸಂಕೇತ್ , ಗೋವಿಂದ್ ಮತ್ತು ಉದಯ್ ರಾಜ್ ಎಂಬ ಐವರನ್ನು ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]