Tag: Sharavati

  • ಶರಾವತಿ ಹಿನ್ನೀರಿನ ನಡುವೆ ಕೆಟ್ಟು ನಿಂತ ಲಾಂಚ್ – ತಪ್ಪಿದ ಅನಾಹುತ

    ಶರಾವತಿ ಹಿನ್ನೀರಿನ ನಡುವೆ ಕೆಟ್ಟು ನಿಂತ ಲಾಂಚ್ – ತಪ್ಪಿದ ಅನಾಹುತ

    ಶಿವಮೊಗ್ಗ: ಶರಾವತಿ ಹಿನ್ನೀರಿನ (Sharavati Backwater) ಪ್ರದೇಶದ ಹೊಳೆಬಾಗಿಲಿನಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಲಾಂಚ್ ನೀರಿನ ಮಧ್ಯದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನಿಂತಿರುವ ಘಟನೆ ಗುರುವಾರ ಸಂಜೆ ನಡೆದಿದೆ.

    ಲಾಂಚಿನಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ವಾಹನಗಳನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದರಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಬಳಿಕ ಸೇತುವೆ ಕಾಮಗಾರಿಗೆ ಬಂದಿದ್ದ ಲಾಂಚ್ ಮೂಲಕ ಹಗ್ಗ ಕಟ್ಟಿ ಕೆಟ್ಟು ನಿಂತಿದ್ದ ಲಾಂಚ್‍ನ್ನು ದಡಕ್ಕೆ ತರಲಾಯಿತು. ಇದನ್ನೂ ಓದಿ: ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್

    ಮತ್ತೊಂದು ಲಾಂಚ್ ಹೋಗಲು ಸ್ವಲ್ಪ ತಡವಾಗುತ್ತಿದ್ದರು ಸಹ ಕೆಟ್ಟ ನಿಂತಿದ್ದ ಲಾಂಚ್ ಪಕ್ಕದಲ್ಲೇ ನಿರ್ಮಾಣಗೊಳ್ಳುತ್ತಿರುವ ಸಿಗಂದೂರು ಸೇತುವೆಯ (Sigandur Bridge)  ಪಿಲ್ಲರ್‌ಗೆ ಲಾಂಚ್ ಡಿಕ್ಕಿಯಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

  • ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಜಂಟಿ ಸರ್ವೆ: ಸಚಿವ ಕೆ.ಎಸ್.ಈಶ್ವರಪ್ಪ

    ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಜಂಟಿ ಸರ್ವೆ: ಸಚಿವ ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಇಲಾಖೆಯಿಂದ ಡಿನೋಟಿಫೈ ಆದ ಪ್ರದೇಶಗಳ ವಿವರ ಹಾಗೂ ಸಂತ್ರಸ್ತರ ಸಮಗ್ರ ಮಾಹಿತಿ ಸಂಗ್ರಹಣೆಗೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು.

    ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಕಾರ್ಯದಲ್ಲಿ ಪ್ರಗತಿ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಅವರು ಪ್ರಗತಿ ಪರಿಶೀಲನೆ ನಡೆಸಿದರು. ಹಲವು ದಶಕಗಳಿಂದ ಬಾಕಿ ಉಳಿದಿರುವ ಈ ಸಮಸ್ಯೆಯನ್ನು ಬಗೆಹರಿಸಲು ಜಂಟಿ ಸರ್ವೆ ನಡೆಸಿ 20 ದಿನಗಳ ಒಳಗಾಗಿ ಒಂದು ಹಂತಕ್ಕೆ ತರುವಂತೆ ಅವರು ತಿಳಿಸಿದರು.

    ಮುಳುಗಡೆ ಸಂತ್ರಸ್ತರಿಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟಂತೆ ಅರಣ್ಯ ಪ್ರದೇಶದಲ್ಲಿ 8,285 ಎಕರೆ ಕಂದಾಯ ಭೂಮಿಯಲ್ಲಿ 1,100 ಎಕರೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯೇತರ ಜಿಲ್ಲೆಗಳಲ್ಲಿ 387 ಎಕರೆ ಸೇರಿದಂತೆ ಒಟ್ಟು 9,773 ಎಕರೆ ಜಮೀನು ಮೀಸಲಿರಿಸಲಾಗಿದೆ. ಇದರಲ್ಲಿ 6,303 ಎಕರೆ ಡಿನೋಟಿಫೈ ಮಾಡಲಾಗಿದೆ. ಸಂತ್ರಸ್ತರಿಗಾಗಿ ಮೀಸಲಾಗಿರಿಸಿರುವ ಪ್ರದೇಶದಲ್ಲಿ ಇನ್ನೂ 1,982 ಎಕರೆ ಡಿನೋಟಿಫೈಮಾಡಲು ಬಾಕಿ ಇದೆ. ಜಂಟಿ ಸಮೀಕ್ಷೆ ನಂತರ ಫಲಾನುಭವಿವಾರು ಡಿನೋಟಿಫಿಕೇಶನ್ ವಿಸ್ತೀರ್ಣಕ್ಕೆ ಆರ್‍ವಿಸಿಯಲ್ಲಿ 3,565 ಎಕರೆ ತಾಳೆಯಾಗಿದೆ. 2,737 ಎಕರೆ ಇನ್ನೂ ತಾಳೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾಹಿತಿ ನೀಡಿದರು.

    ಇದು ಕ್ಲಿಷ್ಟಕರ ಪ್ರಕ್ರಿಯೆಯಾಗಿದ್ದು, ಜಂಟಿ ಸರ್ವೆ ಮಾಡಿ ಪ್ರಕರಣವಾರು ಸಮಸ್ಯೆ ಬಗೆಹರಿಸಲಾಗುತ್ತಿದೆ. ಈ ಕಾರ್ಯಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಕ ಮಾಡಿದರೆ ಪ್ರಕ್ರಿಯೆ ತ್ವರಿತಗೊಳಿಸಬಹುದಾಗಿದೆ ಎಂದು ಅವರು ಹೇಳಿದರು.

    ಚಕ್ರಾ, ಸಾವೆಹಕ್ಲು ಯೋಜನೆಯಡಿ ಭೂಮಿ ಕಳೆದುಕೊಂಡಿರುವವರಿಗೆ ಸಮಗ್ರ ಪರಿಹಾರ ಒದಗಿಸಲು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ತೀರ್ಥಹಳ್ಳಿ ತಾಲೂಕಿನಲ್ಲಿ ಹಲವು ಕಂದಾಯ ಜಮೀನನ್ನು ಪ್ರಸ್ತಾವಿತ ಅರಣ್ಯ ಎಂದು ಆರ್‍ವಿಸಿಯಲ್ಲಿ ನಮೂದು ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ತಕ್ಷಣ ಅದನ್ನು ಸರಿಪಡಿಸಬೇಕು ಎಂದು ಶಾಸಕ ಅರಗ ಜ್ಞಾನೇಂದ್ರ ಅವರು ಒತ್ತಾಯಿಸಿದರು.

    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಮಹಾನಗರ ಪಾಲಿಕೆ ಉಪ ಮೇಯರ್ ಚನ್ನಬಸಪ್ಪ, ಸಿಸಿಎಫ್ ಶ್ರೀನಿವಾಸುಲು, ಅಪರ ಜಿಲ್ಲಾಧಿಕಾರಿ ಅನುರಾಧ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.