Tag: Sharia Law

  • ಚಂದ್ರು ಕೊಲೆಗಾರರಿಗೆ ಶರಿಯತ್ ಕಾನೂನು ಜಾರಿಯಾಗಬೇಕಾ: ರಘುಪತಿ ಭಟ್ ಪ್ರಶ್ನೆ

    ಚಂದ್ರು ಕೊಲೆಗಾರರಿಗೆ ಶರಿಯತ್ ಕಾನೂನು ಜಾರಿಯಾಗಬೇಕಾ: ರಘುಪತಿ ಭಟ್ ಪ್ರಶ್ನೆ

    ಉಡುಪಿ: ಹಿಜಬ್ ಹೋರಾಟಗಾರರು ಮತ್ತು ಬೆಂಬಲಿಗರು ಕೇಳುವಂತಹ, ಶರಿಯತ್ ಕಾನೂನು ಬೆಂಗಳೂರಿನ ಚಂದ್ರು ಕೊಲೆಗಾರರ ವಿರುದ್ಧ ಕೂಡ ಜಾರಿಯಾಗಬೇಕಾ ಎಂದು ಉಡುಪಿ ಶಾಸಕ ರಘುಪತಿ ಭಟ್ ಪ್ರಶ್ನಿಸಿದ್ದಾರೆ.

    ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಂದ್ರು ಕೊಲೆ ಮಾಡಲಾಯಿತು. ಕೊಲೆಯ ವೀಡಿಯೋ ನಮಗೆ ನೋಡಲು ಸಾಧ್ಯವಿಲ್ಲ. ಇದು ಬಹಳ ದುರದೃಷ್ಟಕರ ಬೆಳವಣಿಗೆ. ಹಿಂದೂ ಮೊಹಲ್ಲಾಗಳಲ್ಲಿ ಇಂತಹ ಕೊಲೆ ಎಂದಿಗೂ ನಡೆಯಲ್ಲ. ಸ್ಥಳೀಯ ನಿವಾಸಿಗಳು ಯಾರೂ ಚಂದ್ರು ರಕ್ಷಣೆಗೆ ಬಂದಿಲ್ಲ. ಸುತ್ತಮುತ್ತ ಇದ್ದವರು ಎಲ್ಲರೂ ಪೈಶಾಚಿಕ ಕೃತ್ಯವನ್ನು ಮೆರೆದಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಪ್ರಗತಿಪರರು ಎಲ್ಲಿ ಹೋಗಿದ್ದಾರೆ? ಹಲಾಲ್ ವಿಚಾರದಲ್ಲಿ ಮಾಂಸ ತಿಂದ ಪ್ರಗತಿಪರರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್‌

    ಮುಸ್ಲಿಮರಿಗೆ ಬೆಂಬಲಿಸುವುದು ಸೌಹಾರ್ದತೆ ಎಂಬ ಫ್ಯಾಶನ್ ಭಾರತದಲ್ಲಿ ನಡೆಯುತ್ತಿದೆ. ಹಿಂದೂಗಳ ಪರವಾಗಿ ಮಾತನಾಡಿದರೆ ಕೋಮುವಾದ ಎಂದು ನಿರ್ಧಾರವಾಗಿದೆ. ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಬೆಂಗಳೂರು ಘಟನೆ ಬಗ್ಗೆ ಏನು ಹೇಳುತ್ತಾರೆ? ಸಣ್ಣ ವಿಚಾರದಲ್ಲಿ ಬೆಂಗಳೂರಿನ ಚಂದ್ರು ಕೊಲೆಯಾಗಿದೆ. ಸಾಮೂಹಿಕವಾಗಿ ಕಟ್ಟಿಹಾಕಿ ಕಲ್ಲೆಸೆದು ಕೊಲ್ಲಬೇಕು. ಶರಿಯತ್ ಕಾನೂನು ಮೂಲಕ ಶಿಕ್ಷೆ ಆಗಬೇಕು. ಹಿಜಬ್ ವಿಚಾರಕ್ಕೆ ಶರಿಯತ್ ಕಾನೂನು ಅಂತೀರಾ, ಚಂದ್ರು ಕೊಲೆಗೆ ಶರಿಯತ್ ಕಾನೂನು ಜಾರಿ ಬೇಡವೇ ಎಂದಿದ್ದಾರೆ.

    ಮುಸಲ್ಮಾನ ಸಮುದಾಯ ಬಹಿಷ್ಕಾರ ಹಾಕಲಿ: ಅಪರಾಧ, ಕೊಲೆಯಾದಾಗ ಸಂವಿಧಾನ, ಕೋರ್ಟ್ ಎಂದು ಹೇಳಲಾಗುತ್ತದೆ. ಹಿಜಬ್ ವಿಚಾರದ ಹೋರಾಟ, ನಿಮಗೆ ಇಷ್ಟ ಬರುವ ವಿಚಾರದಲ್ಲಿ ಶರಿಯತ್ ಕಾನೂನಿಗೆ ಒತ್ತಾಯ ಮಾಡಲಾಗುತ್ತದೆ. ಈ ನಡೆ ಸರಿಯಲ್ಲ. ಪ್ರಜ್ಞಾವಂತ ಮುಸಲ್ಮಾನರು ಜಾಗೃತರಾಗಬೇಕು. ಆರೋಪಿಗಳಿಗೆ ಸಮಾಜದಲ್ಲಿ ಬಹಿಷ್ಕಾರ ಹಾಕಬೇಕು. ಮುಸಲ್ಮಾನ ಸಮುದಾಯದ ಒಳ್ಳೆಯವರು ಕೂಡಲೇ ಜಾಗೃತರಾಗಿ ಕ್ರಮ ಕೈಗೊಳ್ಳದಿದ್ದರೆ ಎಲ್ಲಾ ಮುಸಲ್ಮಾನ ಬಾಂಧವರನ್ನು ಒಂದೇ ದೃಷ್ಟಿಯಲ್ಲಿ ನೋಡುವ ಪರಿಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ:  ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್

  • ಇಂದು ಹಿಜಬ್, ನಾಳೆ ಷರಿಯತ್ ಕಾನೂನು – ಉಡುಪಿ ಹಿಂದೂ ಜಾಗರಣಾ ವೇದಿಕೆ ಗರಂ

    ಇಂದು ಹಿಜಬ್, ನಾಳೆ ಷರಿಯತ್ ಕಾನೂನು – ಉಡುಪಿ ಹಿಂದೂ ಜಾಗರಣಾ ವೇದಿಕೆ ಗರಂ

    ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಬ್ ಹಕ್ಕಿಗಾಗಿ 8 ಮುಸಲ್ಮಾನ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದಾರೆ. ಕಾಲೇಜಿಗೆ ಹಿಂದೂ ಜಾಗರಣಾ ವೇದಿಕೆ ಭೇಟಿ ನೀಡಿದೆ. ಶಾಲೆ ಕಾಲೇಜಿನಲ್ಲಿ ಸಮವಸ್ತ್ರ, ಸಮಾನತೆ ಇರಬೇಕು. ಬುರ್ಖಾ, ಟೋಪಿ ಕೇಳಿ ಮುಂದೆ ಷರಿಯತ್ ಕಾನೂನು ಕೇಳುತ್ತಾರೆ ಕೊಡುತ್ತೀರಾ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದೆ.

    ಮತೀಯ ಸಂಘಟನೆಯೊಂದು ವಿದ್ಯಾರ್ಥಿಗಳಿಗೆ ವಿಷ ಬೀಜ ಬಿತ್ತಿದೆ. ದೇಶದ ಮಾನ ಹರಣಕ್ಕೆ ಅಂತರಾಷ್ಟ್ರೀಯ ಷಡ್ಯಂತ್ರ ನಡೆಯುತ್ತಿದೆ. ಉಡುಪಿಯ ಶೈಕ್ಷಣಿಕ ಖ್ಯಾತಿ ಕುಗ್ಗಿಸಲು ಷಡ್ಯಂತ್ರ ನಡೆಯುತ್ತಿದೆ. ಶೈಕ್ಷಣಿಕ ವಾತಾವರಣ ಕೆಡಿಸಲು ಹಿಂದೂ ಜಾಗರಣಾ ವೇದಿಕೆ ಬಿಡುವುದಿಲ್ಲ. ಕಾಲೇಜಲ್ಲಿ ಇಸ್ಲಾಂ ಕಾನೂನು ಜಾರಿಗೆ ತರುವ ಅವಕಾಶ ಕೊಡಬಾರದು. ಇವರಿಗೆ ಸರ್ಕಾರಿ ಶಿಕ್ಷಣ ಬೇಡದಿದ್ದರೆ ಮದರಾಸ ಶಿಕ್ಷಣ ಪಡೆಯಿರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಿಜಬ್‌ಗಾಗಿ ಮುಂದುವರಿದ ಹೋರಾಟ

    ಹಿರಿಯ ಅಧಿಕಾರಿಗಳು ಪ್ರಾಂಶುಪಾಲರಿಗೆ ಒತ್ತಡ ಹಾಕುತ್ತಿರುವ ಬಗ್ಗೆ ಸಂಘಟನೆ ಗಮನಕ್ಕೆ ಬಂದಿದೆ. ಸರ್ಕಾರ, ಇಲಾಖೆ ಮೂಲಭೂತ ಮತೀಯ ಸಂಘಟನೆಗೆ ಬೆಂಬಲ ನೀಡಿದರೆ ನಾವು ಸಹಿಸಲ್ಲ. ಮುಸಲ್ಮಾನ ವಿದ್ಯಾರ್ಥಿಗಳು ಇಷ್ಟು ವರ್ಷ ಇಲ್ಲದ ವಿವಾದ ಶುರು ಮಾಡಿದ್ದಾರೆ. ನೂರು ಮುಸಲ್ಮಾನ ಹೆಣ್ಮಕ್ಕಳಲ್ಲಿ ಎಂಟು ಮಂದಿಯದ್ದು ಮಾತ್ರವಲ್ಲ ತಕರಾರು, ಶಿಕ್ಷಣಕ್ಕೆ ಧಾರ್ಮಿಕತೆ ಬೆರೆಸಿದರೆ ಇದು ಸರಿಯಲ್ಲ.

    ಸರ್ಕಾರ ಜಾತಿ ಮತ ಧರ್ಮದ ಎಲ್ಲೆ ಮೀರಲು ಸಮವಸ್ತ್ರ ತಂದಿದೆ. ವೈಯಕ್ತಿಕ ಸ್ವಾತಂತ್ರ್ಯ ಹೇಳುತ್ತಾ ಟೋಪಿ ಬುರ್ಖಾ, ಶರಿಯಾ ಕಾನೂನಿಗೆ ಒತ್ತಾಯಿಸುವ ಹುನ್ನಾರ ನಡೆಯುತ್ತಿದೆ. ಹಿಂದು ಜಾಗರಣ ವೇದಿಕೆ ಈವರೆಗೆ ಎಲ್ಲವನ್ನು ಸೂಕ್ಷ್ಮವಾಗಿ ನೋಡಿದೆ ಇನ್ನೂ ಈ ರೀತಿಯ ಬೆಳವಣಿಗೆಗಳಿಗೆ ಅವಕಾಶ ನೀಡುವುದಿಲ್ಲ. ಇದನ್ನೂ ಓದಿ: ಉಡುಪಿ ಹಿಜಬ್ ವಿವಾದ – NSUI ಭೇಟಿ ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿ

    ಈ ನಡುವೆ ಪ್ರಾಂಶುಪಾಲರಿಗೆ ಹಿರಿಯ ಅಧಿಕಾರಿಗಳು ಒತ್ತಡ ಹಾಕುವ ಬಗ್ಗೆ ಮಾಹಿತಿಯಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ಕೇಸರಿ ಶಾಲು ಹಾಕುತ್ತೇವೆ ಎಂದು ಹಿಂದು ಜಾಗರಣ ವೇದಿಕೆ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ ಹೇಳಿದ್ದಾರೆ. ಪುರುಷ ಶಿಕ್ಷಕರು ಪಾಠ ಮಾಡಿದರೆ ಸಮಸ್ಯೆಯಾಗುತ್ತದೆ ಎಂದು ಹೇಳುವ ಸಾಧ್ಯತೆ ಇದೆ. ಸರ್ಕಾರ ಪದವಿಪೂರ್ವ ಶಿಕ್ಷಣ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ.

  • ಆಫ್ಘಾನ್ ಸಂಗೀತಗಾರನ ಮುಂದೆಯೇ ವಾದ್ಯ ಸುಟ್ಟ ತಾಲಿಬಾನಿಗಳು

    ಆಫ್ಘಾನ್ ಸಂಗೀತಗಾರನ ಮುಂದೆಯೇ ವಾದ್ಯ ಸುಟ್ಟ ತಾಲಿಬಾನಿಗಳು

    ಕಾಬೂಲ್: ಆಫ್ಘಾನ್ ಸಂಗೀತಗಾರನ ಮುಂದೆಯೇ ತಾಲಿಬಾನ್ ಸಿಬ್ಬಂದಿ ಆತನ ವಾದ್ಯವನ್ನು ಸುಟ್ಟುಹಾಕಿದ್ದಾನೆ.

    ಅಫ್ಘಾನಿಸ್ತಾನದಲ್ಲಿ ಸಂಗೀತಗಾರನ ಮುಂದೆಯೇ ತಾಲಿಬಾನ್ ಸಂಗೀತ ವಾದ್ಯವನ್ನು ಸುಟ್ಟು ಹಾಕಿರುವುದರ ಕುರಿತ ವೀಡಿಯೋವನ್ನು ಅಲ್ಲಿನ ವರದಿಗಾರ ಟ್ವಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಸಂಗೀತ ವಾದ್ಯ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ. ಇದನ್ನು ನೋಡಿ ಸಂಗೀತಗಾರ ಅಳುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

    ಅಫ್ಘಾನಿಸ್ತಾನದ ಹಿರಿಯ ವರದಿಗಾರ ಅಬ್ದುಲ್ಹಕ್ ಒಮೆರಿ ಟ್ವಿಟ್ಟರ್ ನಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಂದೂಕು ಹಿಡಿದ ಸಿಬ್ಬಂದಿ, ಅಳುತ್ತಿದ್ದ ಸಂಗೀತಗಾರನನ್ನು ನೋಡಿ ನಗುತ್ತಿರುವ ದೃಶ್ಯ ಸಹ ಸೆರೆಯಾಗಿದೆ. ಇದನ್ನು ನೋಡಿದ ನೆಟ್ಟಿಗರು ತಾಲಿಬಾನ್ ಕ್ರೂರತೆ ಎಷ್ಟರ ಮಟ್ಟಿಗೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ವಾರಪೂರ್ತಿ ಜನಜಾತ್ರೆ, ವಾರಾಂತ್ಯದಲ್ಲಿ ಕರ್ಫ್ಯೂ – ಆತಂಕದಲ್ಲಿ ಕಾಫಿನಾಡು ಜನತೆ

    ಸಂಗೀತಗಾರ ಎಷ್ಟೇ ಕೇಳಿಕೊಂಡರೂ, ಅತ್ತರೂ ಆತನ ಕಡೆ ಗಮನಕೊಡದೆ ಸಿಬ್ಬಂದಿ ಸಂಗೀತಗಾರನ ಸಂಗೀತ ವಾದ್ಯವನ್ನು ಸುಟ್ಟುಹಾಕಿದರು. ಇದನ್ನು ನೋಡಿದ ಸಂಗೀತಗಾರನ ಅಳು ಮುಗಿಲು ಮುಟ್ಟಿತ್ತು. ಈ ಘಟನೆಯು ಅಫ್ಘಾನಿಸ್ತಾನದ ಝಜೈಅರುಬ್ ಜಿಲ್ಲೆಯಲ್ಲಿ ನಡೆದಿದೆ ಎಂದು ಒಮೆರಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಈ ಹಿಂದೆ ತಾಲಿಬಾನಿಗಳು ವಾಹನಗಳಲ್ಲಿ ಸಂಗೀತ ಪ್ರದರ್ಶನ ಹಾಗೂ ಮದುವೆಗಳಲ್ಲಿ ಲೈವ್ ಸಂಗೀತವನ್ನು ನಿಷೇಧಿಸಿದೆ.

    ಇದರ ಜೊತೆಗೆ ತಾಲಿಬಾನಿಗಳು ಷರಿಯಾ ಕಾನೂನನ್ನು ಸಹ ಜಾರಿಗೆ ತಂದಿದ್ದು, ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದ ಬಟ್ಟೆ ಅಂಗಡಿಗಳಲ್ಲಿ ಇದ್ದ ಹೆಣ್ಣು ಗೊಂಬೆಗಳ ಶಿರಚ್ಛೇದ ಮಾಡಲಾಗುತ್ತಿದೆ. ಇದನ್ನೂ ಓದಿ: ಗಾಳಿಪಟ ಹಾರಿಸುವಾಗ ಬಿದ್ದು ಒಂದೇ ದಿನ 63ಕ್ಕೂ ಹೆಚ್ಚು ಮಂದಿಗೆ ಗಾಯ

    ಬಟ್ಟೆ ಅಂಗಡಿಯಲ್ಲಿ ಹೆಣ್ಣು ಗೊಂಬೆಗಳನ್ನು ಬಳಸುವುದು ಷರಿಯಾ ಕಾನೂನಿನ ಉಲ್ಲಂಘನೆ ಎಂದು ತಾಲಿಬಾನ್ ತಿಳಿಸಿದೆ. ಈ ಹೊಸ ಮಾರ್ಗಸೂಚಿಗಳನ್ನು ನಾವು ಅನುಸರಿಸುವುದಿಲ್ಲ ಎಂದು ಕೆಲವು ಗುಂಪುಗಳು ವಿರೋಧವನ್ನು ವ್ಯಕ್ತಪಡಿಸಿವೆ.

  • ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

    ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರದ ಕಾನೂನು ಜಾರಿಯಾಗುವುದಿಲ್ಲ. ಷರಿಯಾ ಕಾನೂನುಗಳೇ ಜಾರಿಯಾಗಲಿದೆ ಎಂದು ತಾಲಿಬಾನ್ ಹೇಳಿದೆ.

    ಪ್ರಜಾಪ್ರಭುತ್ವ ಸರ್ಕಾರ ಬೀಳಿಸಿದ ಬಳಿಕ ನಾವು ಬದಲಾಗಿದ್ದೇವೆ ಎಂದು ಹೇಳಿದ್ದ ತಾಲಿಬಾನ್ ಈಗ ನಾವು ಷರಿಯಾ ಕಾನೂನುಗಳನ್ನೇ ಜಾರಿ ಮಾಡುತ್ತೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಉಗ್ರರಿಗೆ ಆಟ, ಮಹಿಳೆಯರಿಗೆ ಪ್ರಾಣ ಸಂಕಟ – ಷರಿಯತ್ ಏನು ಹೇಳುತ್ತದೆ? ತಾಲಿಬಾನ್ ಕಾನೂನು ಏನು? 

    ಮಾಧ್ಯಮಕ್ಕೆ ಸಂದರ್ಶನ ನೀಡಿದ ತಾಲಿಬಾನ್ ಮುಖಂಡ ವಹಿದುಲ್ಲಾ ಹಶೆಮಿ, ಅಫ್ಘಾನಿಸ್ತಾನದಲ್ಲಿ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಿಲ್ಲ. ಯಾಕೆಂದರೆ ನಮ್ಮ ದೇಶದಲ್ಲಿ ಅದಕ್ಕೆ ಯಾವುದೇ ನೆಲೆ ಇಲ್ಲ. ದೇಶದಲ್ಲಿ ಷರಿಯಾ ಕಾನೂನು ಅನ್ವಯವಾಗಲಿದೆ ಎಂದು ಹೇಳಿದ್ದಾನೆ.

    ಅಫ್ಘಾನಿಸ್ತಾನದಲ್ಲಿ ಯಾವ ರೀತಿಯ ರಾಜಕೀಯ ವ್ಯವಸ್ಥೆ ಇರಬೇಕು ಎಂಬುದರ ಬಗ್ಗೆ ನಾವು ಯಾವುದೇ ಚರ್ಚೆ ಮಾಡುವುದಿಲ್ಲ. ಈಗಾಗಲೇ ಷರಿಯಾ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರ ಸ್ಪಷ್ಟವಾಗಿದೆ ಎಂದಿದ್ದಾನೆ. ಇದನ್ನೂ ಓದಿ: 1,250 ಕೋಟಿ ರೂ. ಜೊತೆ ಘನಿ ಪರಾರಿ – ಈಗ ಯುಎಇಯಲ್ಲಿ ಆಶ್ರಯ


    ಈ ವೇಳೆ ತನ್ನದೇ ಆದ ಸೇನೆಯನ್ನು ಸರ್ಕಾರ ಸ್ಥಾಪಿಸಲಿದೆ. ಈಗಾಗಲೇ ಸರ್ಕಾರದಲ್ಲಿದ್ದ ಸೈನಿಕರ ಪೈಕಿ ಹೆಚ್ಚಿನವರು ಟರ್ಕಿ, ಜರ್ಮನಿ ಮತ್ತು ಇಂಗ್ಲೆಂಡ್‍ನಲ್ಲಿ ತರಬೇತಿ ಪಡೆದಿದ್ದಾರೆ. ಅವರು ಮತ್ತೆ ಸೇನೆಗೆ ಸೇರುವಂತಾಗಲು ನಾವು ಮಾತನಾಡಲಿದ್ದೇವೆ. ಹತ್ತಿರದ ರಾಷ್ಟ್ರಗಳಲ್ಲಿ ಲ್ಯಾಂಡ್ ಆಗಿರುವ ನಮ್ಮ ದೇಶದ ವಾಯುಸೇನಾ ವಿಮಾನಗಳನ್ನು ಆ ರಾಷ್ಟ್ರಗಳು ಶೀಘ್ರವೇ ನಮಗೆ ಹಸ್ತಾಂತರ ಮಾಡಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ವಹಿದುಲ್ಲಾ ಹಶೆಮಿ ಹೇಳಿದ್ದಾನೆ. ಇದನ್ನೂ ಓದಿ: ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ: ಅಫ್ಘಾನಿಸ್ತಾನದ ಮಹಿಳಾ ಮೇಯರ್

    ತಾಲಿಬಾನ್ ಆಕ್ರಮಣಕ್ಕೆ ಬೆದರಿ ಕಳೆದ ವಾರ 22 ಮಿಲಿಟರಿ ವಿಮಾನಗಳು, 24 ಹೆಲಿಕಾಪ್ಟರ್ ಗಳ ಮೂಲಕ ನೂರಕ್ಕೂ ಅಧಿಕ ಅಫ್ಘಾನ್ ಸೈನಿಕರು ಉಜ್ಬೇಕಿಸ್ತಾನಕ್ಕೆ ಪಲಾಯನ ಮಾಡಿದ್ದರು.