Tag: Shariq

  • ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    ಮಂಗಳೂರು: ಮಂಗಳೂರು (Mangaluru) ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ (Shariq) ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ.

    ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ದ ರೂವಾರಿ ಉಗ್ರ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ನಡೆಯುವ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‍ಐಎ (NIA) ಅಧಿಕಾರಿಗಳು ಇಂದು ವೈದ್ಯರ ಸಮ್ಮತಿಯ ಮೇರೆಗೆ ಶಾರೀಕ್‍ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

    ಘಟನೆಯೇನು?: ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರೀಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ RBI ಮಾಜಿ ಗವರ್ನರ್‌ ಭಾಗಿ

    ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೇಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    – 10ಕ್ಕೂ ಹೆಚ್ಚು ಫೋನ್‌ ಬಳಸಿ, ಮಾರಾಟ
    – ಮೊಬೈಲ್‌ನಲ್ಲಿ 500ಕ್ಕೂ ಹೆಚ್ಚು ಸೆಕ್ಸ್‌ ವೀಡಿಯೋ

    ಮಂಗಳೂರು: ಉಗ್ರ ಶಾರೀಕ್‌ನ(Shariq) ಮುಖವಾಡಗಳು ಪೊಲೀಸ್ ತನಿಖೆಯಿಂದ ಕಳಚಿ ಬೀಳುತ್ತಿದೆ. ಇದೀಗ ಆತನ ಟೆರರ್ ಚಟುವಟಿಕೆಗಳಿಗೆ(Terror Activity) ಮುಸ್ಲಿಂ ಯುವಕರನ್ನು ಸೆಳೆಯಲು ಸೆಕ್ಸ್ ವೀಡಿಯೋವನ್ನು ಕಳುಹಿಸುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

    ಸೆಕ್ಸ್ ವಿಡಿಯೋಗಳಿಂದಲೇ ಕರಾವಳಿಯ 40 ಕ್ಕೂ ಹೆಚ್ಚು ಮುಸ್ಲಿಂ(Muslim) ಯುವಕರನ್ನು ಉಗ್ರ ಚಟುವಟಿಕೆಗೆ ಸೇರಿಸಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪೊಲೀಸ್ ತನಿಖೆಯಿಂದ ಹೊರ ಬಿದ್ದಿದೆ. ಈತನ ಮೊಬೈಲ್ ನಲ್ಲಿ ಬರೋಬ್ಬರಿ 500 ಕ್ಕೂ ಹೆಚ್ಚು ಸೆಕ್ಸ್ ವೀಡಿಯೋಗಳು ಪತ್ತೆಯಾಗಿದ್ದು ಇದನ್ನೇ ಅಸ್ತ್ರವನ್ನಾಗಿಸಿ ನೂರಾರು ಮುಸ್ಲಿಂ ಯುವಕರ ತಲೆ ಕೆಡಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಂಗ್ಳೂರಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ – ಪ್ರಸಿದ್ಧ ವೈದ್ಯೆ, ಯುವಕನ ವಿರುದ್ಧ ದೂರು ದಾಖಲು

    ಶಾರೀಕ್ ಹತ್ತಕ್ಕೂ ಹೆಚ್ಚು ಪೋನ್‌ಗಳನ್ನು ಹೊಂದಿದ್ದು, ಅದನ್ನು ಬಳಕೆ ಮಾಡಿದ ನಂತರ ಮೊಬೈಲನ್ನು ಮಾರಾಟ ಮಾಡುತ್ತಿದ್ದ. ಹೀಗಾಗಿ ಯಾವುದೂ ಬೆಳಕಿಗೆ ಬರುತ್ತಿರಲಿಲ್ಲ. ಜೊತೆಗೆ ಮೊಬೈಲ್ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಾಗ ಸಾಕಷ್ಟು ಮೊಬೈಲ್ ಸಂಖ್ಯೆಗಳು ಆತನಿಗೆ ಸಿಗುತ್ತಿತ್ತು. ಹೀಗೆ ಬೇರೆ ಬೇರೆ ಕಡೆಗಳಲ್ಲಿ ಸಿಕ್ಕ ನಂಬರ್ ನಲ್ಲಿ ಮುಸ್ಲಿಂ ಯುವಕರ ನಂಬರ್‌ಗಳನ್ನು ಖಚಿತಪಡಿಸಿ ಬಳಿಕ ಹಾಯ್ ಬಾಯ್ ಸಂದೇಶ ಕಳಿಸುತ್ತಿದ್ದ ಎಂದು ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿವೆ.  ಇದನ್ನೂ ಓದಿ: ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ಉತ್ತಮ ಪ್ರತಿಕ್ರಿಯೆ ಬಂದ ಯುವಕರಿಗೆ ಸೆಕ್ಸ್ ವೀಡಿಯೋಗಳನ್ನೂ ಕಳುಹಿಸುತ್ತಿದ್ದ. ಈ ರೀತಿ ಸಲುಗೆ ಬೆಳೆದ ನಂತರ ಅವರನ್ನು ತನ್ನ ಉಗ್ರ ಚಟುವಟಿಕೆಗಳಿಗೆ ತಲೆ ಕೆಡಿಸಿ ಭಯೋತ್ಪಾದನೆಯ ವೀಡಿಯೋಗಳನ್ನು ಕಳುಹಿಸುತ್ತಿದ್ದ. ಈತನ ಮಾತಿಗೆ ಮರುಳಾದ ಯುವಕರನ್ನು ಖುದ್ದು ಭೇಟಿಯಾಗಿ ಬಳಿಕ ಅವರಿಗೆ ತರಬೇತಿಯನ್ನು ನೀಡಿರುವುದು ಬೆಳಕಿಗೆ ಬಂದಿದೆ. ಕರಾವಳಿಯಲ್ಲೇ ಈತನಿಂದ 40 ಕ್ಕೂ ಹೆಚ್ಚು ಮುಸ್ಲಿಂ ಯುವಕರು ಐಸಿಸ್ ಮಾದರಿಯ ತರಬೇತಿ ಪಡೆದಿದ್ದಾರೆ ಅನ್ನೋದು ತನಿಖೆ ವೇಳೆ ಬಹಿರಂಗಗೊಂಡಿದೆ.

    ಉಗ್ರ ಚಟುವಟಿಕೆಗಳಿಗೆ ಮರುಳಾದ ಯುವಕರಿಗೆ ಅರಣ್ಯ ಪ್ರದೇಶ, ನದಿ ತೀರದ ನಿರ್ಜನ ಪ್ರದೇಶಗಳಲ್ಲಿ ಟ್ರಯಲ್ ಬ್ಲಾಸ್ಟ್, ಬಾಂಬ್ ತಯಾರಿಕೆ, ಬಾಂಬ್ ಇಡುವ ಸ್ಥಳದ ಆಯ್ಕೆ, ಕೃತ್ಯ ನಡೆಸಿ ಪರಾರಿಯಾಗುವ ಪ್ಲಾನ್ ಸೇರಿದಂತೆ ಎಲ್ಲವನ್ನೂ ಐಸಿಸ್ ಉಗ್ರರಂತೆಯೇ ತರಬೇತಿ ನೀಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

    ಐಆರ್‌ಸಿ ಮೂಲ ಪತ್ತೆ: ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಮೂಲವನ್ನು ಎನ್‍ಐಎ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸೌದಿ ಅರೇಬಿಯಾದಿಂದಲೇ ಡಾರ್ಕ್ ವೆಬ್ ಬಳಸಿ ಐಆರ್‌ಸಿ ಪತ್ರ ಅಪ್‍ಲೋಡ್ ಆಗಿದ್ದು, ಎಲ್ಲದಕ್ಕೂ ಅರಾಫತ್ ಆಲಿಯೇ ಮೂಲ ಕಾರಣ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ- ಆಸ್ಪತ್ರೆ ಸುತ್ತ ಹೆಚ್ಚಿದ ಭದ್ರತೆ

    ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ- ಆಸ್ಪತ್ರೆ ಸುತ್ತ ಹೆಚ್ಚಿದ ಭದ್ರತೆ

    ಮಂಗಳೂರು: ಸೂಸೈಡ್ ಬಾಂಬರ್ ಶಾರೀಕ್ (Cooker Bomb Blast) ಹತ್ಯೆಗೆ ಸಂಚು ನಡೆಯುತ್ತಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಐಸಿಆರ್ ಮಾಡಿದ ಪೋಸ್ಟ್ ನಲ್ಲೇ ಉಗ್ರರು ಈ ಹತ್ಯೆಯ ಸುಳಿವು ನೀಡಿದ್ದಾರೆ. ಇದೇ ಕಾರಣಕ್ಕೆ ಶಾರೀಕ್ ಚಿಕಿತ್ಸೆ ಪಡೆಯಿತ್ತಿರೋ ಆಸ್ಪತ್ರೆಗೆ ಪೊಲೀಸರು ಭಾರೀ ಬಂದೋಬಸ್ತ್ ನೀಡಿದ್ದಾರೆ.

    ಕರಾವಳಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆತ್ಮಾಹುತಿ ದಾಳಿಕೋರ ಶಾರೀಕ್‍ನ ಒಂದೊಂದೇ ಉಗ್ರ ಸತ್ಯಗಳು ಬಯಲಾಗ್ತಿದೆ. ಇದರ ಮಧ್ಯೆ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿರುವ ಉಗ್ರ ಶಾರೀಕ್‍ನನ್ನೂ ಹತ್ಯೆಗೆ ಸಂಚಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ತುಂಗಾತೀರದಲ್ಲಿ ಮಾತ್ರವಲ್ಲ, ಚಾರ್ಮಾಡಿ ತಪ್ಪಲಿನಲ್ಲೂ ನಡೀತಾ ಟ್ರಯಲ್ ಬ್ಲಾಸ್ಟ್?

    ಹ್ಯಾಂಡ್ಲರ್ ಗಳು ಸ್ಲೀಪರ್ ಸೆಲ್‍ಗಳನ್ನು ಆಕ್ಟೀವ್ ಮಾಡಿಸಿ ದಾಳಿ ನಡೆಸೋ ಸಾಧ್ಯತೆ ಇದೆ. ಶಾರೀಕ್‍ನೊಂದಿಗೆ ಬ್ಯಾಗ್ ಹಾಕಿಕೊಂಡು ಬಂದವನೂ ನಾಪತ್ತೆ ಆಗಿರೋದ್ರಿಂದ ಆತಂಕ ಹೆಚ್ಚಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೀತಿರೋ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಶಾರೀಕ್ ಕೊಠಡಿ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಸಿದ್ದು, ಉಗ್ರ ಶಾರೀಕ್ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಇವಿಷ್ಟೇ ಅಲ್ಲದೇ ಶಾರಿಕ್ ಮೊಬೈಲ್‍ (Shariq Mobile) ನಲ್ಲಿ ಪತ್ತೆಯಾದ 1,200 ವೀಡಿಯೋಗಳು, ಬಾಂಬ್ ತಯಾರಿಕೆ, ಪ್ರಚೋದನೆ, ಐಸಿಸ್, ಅಲ್‍ಖೈದಾ ವಿಡಿಯೋ ಬಗ್ಗೆ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಬಹುತೇಕ ಕ್ಯಾಶ್ ವ್ಯವಹಾರವೇ ಮಾಡುತ್ತಿದ್ದ ಶಾರೀಕ್ ದಿನವಿಡೀ ಮೊಬೈಲ್‍ನಲ್ಲೇ ವೀಡಿಯೋಗಳನ್ನು ನೋಡ್ತಿದ್ದ. ಮನೆಯವ್ರಿಗೆ ಟಿವಿ ನೋಡಲೂ ಬಿಡುತ್ತಿರಲಿಲ್ವಂತೆ. 4 ವರ್ಷಗಳಿಂದ ಈ ರೀತಿ ವಿಚಿತ್ರವಾಗಿ ವರ್ತಿಸುತ್ತಿದ್ದ ಅಂತ ಶಾರೀಕ್ ಕುಟುಂಬಸ್ಥರು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ಬಾಂಬ್ ತಂದಿದ್ದು ಒಬ್ಬನ್ನಲ್ಲ, ಇಬ್ಬರು- ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    ಒಟ್ಟಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಅತೀ ಮುಖ್ಯ ಸಾಕ್ಷಿ ಶಾರೀಕ್‍ನನ್ನು ಜೀವಂತವಾಗಿ ಉಳಿಸಲು ಪೊಲೀಸರು ಮತ್ತು ವೈದ್ಯರು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರು, ಮಂಗಳೂರಷ್ಟೇ ಅಲ್ಲ ಉಡುಪಿ ಕೃಷ್ಣಮಠದ ಬಳಿಯೂ ಶಾರೀಕ್ ಓಡಾಟ!

    ಮೈಸೂರು, ಮಂಗಳೂರಷ್ಟೇ ಅಲ್ಲ ಉಡುಪಿ ಕೃಷ್ಣಮಠದ ಬಳಿಯೂ ಶಾರೀಕ್ ಓಡಾಟ!

    ಉಡುಪಿ: ಮಂಗಳೂರಿನ ಕುಕ್ಕರ್ (Mangaluru Cooker Bomb Blast) ಬಾಂಬರ್ ಶಾರೀಕ್‍ನ ಹೆಜ್ಜೆ ಗುರುತು ಕೃಷ್ಣ ನಗರಿಯಲ್ಲೂ ಕಂಡುಬಂದಿದೆ. ಉಡುಪಿಯ ಶ್ರೀಕೃಷ್ಣ ಮಠ (Udupi Sri Krishna Matha) ದ ಆಸು-ಪಾಸು ಓಡಾಡಿದ್ದ ಶಾರೀಕ್, ರಥಬೀದಿಯಲ್ಲಿ, ನಗರದ ಬಸ್ ನಿಲ್ದಾಣದಲ್ಲೆಲ್ಲಾ ಅಡ್ಡಾಡಿದ್ದ. ಅಷ್ಟಕ್ಕೂ ದುಷ್ಕರ್ಮಿ ಶಾರೀಕ್ ಉಡುಪಿಗೆ ಬಂದಿದ್ಯಾಕೆ..? ಕೃಷ್ಣನಗರಿಯಲ್ಲೂ ಶಾರೀಕ್ ಬಾಂಬ್ ಸ್ಕೆಚ್ ಹಾಕಿದ್ನಾ.. ಅನ್ನೋ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ.

    ಹೌದು. ಶಂಕಿತ ಉಗ್ರ ಶಾರೀಕ್‍ (Shariq) ನ ಬಂಡವಾಳ ಬಗೆದಷ್ಟು ಬಯಲಾಗ್ತಿದೆ. ಸದ್ಯ ಆಸ್ಪತ್ರೆ ಬೆಡ್ ಮೇಲೆ ಬಿದ್ದಿರೋ ಪಾಪಿ ವಿಚಾರಣೆಗೆ ಸಹಕರಿಸೋ ಸ್ಥಿತಿಯಲ್ಲಂತೂ ಇಲ್ಲ. ಹೀಗಾಗಿ ಖಾಕಿ ಪಡೆ ಸಿಕ್ಕ ಸಾಕ್ಷ್ಯಗಳ ಭೇದಿಸಿ ಕುಕ್ಕರ್ ಬಾಂಬರ್ ನ ಹಿಸ್ಟರಿ ಹೊರತೆಗೆಯುತ್ತಿದೆ. ಅದರಂತೆ ಶಾರೀಕ್‍ನ ಮೊಬೈಲ್ ಹಿಡಿದು ಹೊರಟ ಪೊಲೀಸರಿಗೆ ಕೃಷ್ಣ ನಗರಿಯ ಅಡ್ರೆಸ್ ಸಿಕ್ಕಿದೆ. ಇದನ್ನೂ ಓದಿ: ಬಾಂಬ್ ತಂದಿದ್ದು ಒಬ್ಬನ್ನಲ್ಲ, ಇಬ್ಬರು- ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    ಮಂಗಳೂರು ಸ್ಪೋಟದ ರೂವಾರಿ ಶಾರೀಕ್, 2022ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮಠ ಹಾಗೂ ಉಡುಪಿಯ ರಥಬೀದಿಯಲ್ಲಿ ಸುತ್ತಾಡಿರೋ ಬಗ್ಗೆ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಆಧಾರದಲ್ಲಿ ಮಂಗಳೂರು ಪೋಲಿಸರ ತಂಡ ಉಡುಪಿ ಶ್ರೀ ಕೃಷ್ಣ ಮಠ, ರಥಬೀದಿ ಪರಿಸರದಲ್ಲಿ ತಪಾಸಣೆ ನಡೆಸಿದ್ದಾರೆ. ಉಡುಪಿ ರಥಬೀದಿಯಲ್ಲಿ ಶಾರೀಕ್ ಸುತ್ತಾಡುತ್ತಿದ್ದ ವೇಳೆ ಇಲ್ಲಿಂದಲೇ ಕೆಲವರಿಗೆ ಫೋನ್ ಮಾಡಿದ್ದಾನೆ ಅನ್ನೋದು ಗೊತ್ತಾಗಿದೆ.

    ಅದ್ಯಾವಾಗ ಶ್ರೀಕೃಷ್ಣ ಮಠಕ್ಕೂ ಉಗ್ರ ಶಾರೀಕ್ ಭೇಟಿ ನೀಡಿದ್ದ ಎಂಬ ವಿಚಾರ ತಿಳಿಯಿತೋ ಉಡುಪಿಯ ರಥಬೀದಿ ಹಾಗೂ ಉಡುಪಿ ನಾಗರಿಕರಲ್ಲಿ ಆತಂಕ ಮೂಡಿದೆ. ಹಾಗೆ ಶ್ರೀಕೃಷ್ಣ ಮಠಕ್ಕೆ ಭದ್ರತೆಯನ್ನು ಹೆಚ್ಚಿಸಬೇಕು, ಸರ್ಕಾರವೂ ಉನ್ನತ ತಂಡದಿಂದ ಭದ್ರತಾ ಸರ್ವೆ ನಡೆಸಿ ಸೂಕ್ತ ಭದ್ರತೆ ಒದಗಿಸಬೇಕೆಂದು ಉಡುಪಿ ಮಂದಿ ಆಗ್ರಹಿಸಿದ್ದಾರೆ.

    ಶಾರೀಕ್ ಉಡುಪಿಗೆ ಬಂದಿದ್ದರ ಜಾಡು ಹಿಡಿದು ಹೊರಟಿರೋ ಪೊಲೀಸರಿಗೆ ಶ್ರೀಕೃಷ್ಣ ಮಠದಲ್ಲಿ ತಿಂಗಳ ಹಿಂದಿನ ಸಿಸಿಟಿವಿ ದೃಶ್ಯಗಳು ಲಭಿಸಿಲ್ಲ. ಹೀಗಾಗಿ ರಥಬೀದಿ ಸುತ್ತಲಿನ, ಅಂಗಡಿ, ಹೊಟೇಲ್ ಲಾಡ್ಜ್ ಗಳ ಸಿಸಿಟಿವಿ ದೃಶ್ಯವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು, ಶಾರೀಕ್‍ಗೂ ಉಡುಪಿಗೂ ಲಿಂಕ್ ಏನು ಅನ್ನೋದರ ಬಗ್ಗೆ ವಿಚಾರಣೆ ಮಾಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಂಬ್ ತಂದಿದ್ದು ಒಬ್ಬನ್ನಲ್ಲ, ಇಬ್ಬರು- ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    ಬಾಂಬ್ ತಂದಿದ್ದು ಒಬ್ಬನ್ನಲ್ಲ, ಇಬ್ಬರು- ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    – ಪೊಲೀಸರ ನಿದ್ದೆಗೆಡಿಸಿದ ತನಿಖೆಯ ಆಳ

    ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ದ ರೂವಾರಿ ಮಹಮ್ಮದ್ ಶಾರೀಕ್ (Mohammad Shariq) ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ. ಇದೀಗ ಪೊಲೀಸರ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ವಿಷಯ ಬಯಲಾಗ್ತಿದೆ. ಮಂಗಳೂರಿಗೆ ಬಾಂಬ್ ಜೊತೆಗೆ ಬಂದಿದ್ದು ಕೇವಲ ಶಾರೀಕ್ ಮಾತ್ರ ಅಲ್ಲ. ಮತ್ತೊಬ್ಬ ವ್ಯಕ್ತಿ ಇದ್ದ ಅನ್ನುವ ಆತಂಕಕಾರಿ ಮಾಹಿತಿಯೂ ಬಯಲಾಗಿದೆ.

    ಹೌದು.. ನವೆಂಬರ್ 19ರಂದು ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಗೂ ಮುನ್ನ ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರೀಕ್ ಜೊತೆಗೆ ಇನ್ನಿಬ್ಬರು ಇದ್ದರು ಎನ್ನುವ ವಿಚಾರ ಬಯಲಾಗಿದೆ. ಪಡೀಲ್‍ನಲ್ಲಿ ಬಸ್‍ನಿಂದ ಇಳಿದ ಶಾರೀಕ್ ನಾಗುರಿ ಬಳಿಯ ವೈನ್ ಶಾಪ್‍ (Wine Shop) ಗೆ ತೆರಳಿದ್ದು, ಅಲ್ಲಿ ಮದ್ಯ ಖರೀದಿಸಿದ್ದಾನೆ. ಈ ವೇಳೆ ಶಾರೀಕ್ ಜೊತೆ ಮತ್ತೊಬ್ಬ ಇದ್ನಂತೆ. ಈ ವಿಚಾರವಾಗಿ ವೈನ್ ಶಾಪ್‍ನ ಸಿಸಿಟಿವಿಯನ್ನು ಪೊಲೀಸರು ಪರಿಶೀಲಿಸಿದಾಗ ಇಬ್ಬರು ಬ್ಯಾಗ್ ಧರಿಸಿ ವೈನ್ ಶಾಪ್‍ನಿಂದ ಹೊರ ಬರುವ ದೃಶ್ಯ ಸಿಕ್ಕಿದೆ. ಇದನ್ನೂ ಓದಿ: ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಇನ್ನೊಂದೆಡೆ, ಮಂಗಳೂರು ಬಾಂಬ್ ಸ್ಪೋಟದ ಹೊಣೆ ಹೊತ್ತ ಐಆರ್‍ಸಿ ಉಗ್ರ ಸಂಘಟನೆ ಬಿಡುಗಡೆ ಮಾಡಿದ ಪೋಸ್ಟರ್ ಕೂಡಾ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಪೋಸ್ಟರ್ ನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಜೊತೆಗೆ ನಿಮ್ಮ ಖುಷಿ ಬಹಳ ದಿನಗಳ ಕಾಲ ಉಳಿಯೋದಿಲ್ಲ ಅಂತಾ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್, ಈ ಬಗ್ಗೆ ಕದ್ರಿ ಠಾಣೆ (Kadri Police Station) ಯಲ್ಲಿ ದೂರು ದಾಖಲಾಗಿದೆ. ಎಲ್ಲಾ ಊಹಾಪೋಹಗಳು ಸುಳ್ಳು ಅಂತಾ ಹೇಳಿದ್ದಾರೆ.

    ಒಟ್ಟಿನಲ್ಲಿ ಶಾರೀಕ್ ಪೊಲೀಸರ ಸರ್ಪಗಾವಲಿನಲ್ಲಿದ್ದರೂ ಯಾವಾಗ ಏನು ಆಗುತ್ತೆ ಅನ್ನೋ ಆತಂಕ ಎದುರಾಗಿದೆ. ಹಾಗೆ ಉಗ್ರರ ಬೆದರಿಕೆಯನ್ನೂ ಗಂಭೀರವಾಗಿ ಪರಿಗಣಿಸಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರಿನಲ್ಲಿ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ – ಪೊಲೀಸ್ ಕ್ಲಿಯರೆನ್ಸ್ ಕಡ್ಡಾಯ

    ಮೈಸೂರಿನಲ್ಲಿ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ – ಪೊಲೀಸ್ ಕ್ಲಿಯರೆನ್ಸ್ ಕಡ್ಡಾಯ

    ಮೈಸೂರು: ನಗರದಲ್ಲಿ ಇನ್ಮುಂದೆ ಬೇಕಾಬಿಟ್ಟಿಯಾಗಿ ಮನೆ, ರೂಂ ಗಳನ್ನು ಬಾಡಿಗೆ (House For Rent) ನೀಡುವಂತಿಲ್ಲ. ರೂಂ, ಮನೆ ಬಾಡಿಗೆ ಕೊಡುವ ಮುನ್ನಾ ಸ್ಥಳೀಯ ಪೊಲೀಸರಿಂದ ಕ್ಲಿಯರೆನ್ಸ್ (Police Clearance) ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ.

    ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ (Mangaluru Bomb Blast) ಮಾಡಿದ ಶಾರೀಕ್ (Shariq) ಮೈಸೂರಿನಲ್ಲಿ (Mysuru) ಮನೆ ಬಾಡಿಗೆ ಪಡೆದು ವಾಸವಿದ್ದ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಪೊಲೀಸರು ಮನೆ ಬಾಡಿಗೆ ಪಡೆಯಲು ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಮನೆ ಮಾಲೀಕರಿಗೂ ಅರಿವು ಮೂಡಿಸುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ. ಇದನ್ನೂ ಓದಿ: ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ – ಇಬ್ಬರು ವೈದ್ಯ ಸಿಬ್ಬಂದಿ ಅಮಾನತು

    ಶಾರೀಕ್ ಆರೋಗ್ಯದಲ್ಲಿ ಚೇತರಿಕೆ:
    ಶಂಕಿತ ಉಗ್ರ ಶಾರೀಕ್ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ. ಈ ನಡುವೆ ಉಗ್ರನ ಲಿಂಕ್ ರಹಸ್ಯ ಮತ್ತಷ್ಟು ಭೇದಿಸಿರುವ ಪೊಲೀಸರಿಗೆ ಆತಂಕಕಾರಿ ಮಾಹಿತಿಗಳು ಲಭ್ಯವಾಗಿವೆ. 26/11 ಮುಂಬೈನ ದಾಳಿಯಂತೆಯೇ ಅದೇ ದಿನವಾದ ಇಂದು ಕೂಡಾ ಮಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಅನ್ನೋ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಇದನ್ನೂ ಓದಿ: ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – ನಾಲ್ವರು ಮಾವೋವಾದಿಗಳ ಹತ್ಯೆ

    ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ:
    ವೆಂಟಿಲೇಟರ್‌ನಲ್ಲಿದ್ದ ಶಾರೀಕ್ ಇಂದು ಸ್ವಲ್ಪಮಟ್ಟಿಗೆ ಚೇತರಿಕೆ ಕಂಡಿದ್ದಾನೆ. ಈ ನಡುವೆ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ಆತ ಇರುವ 5ನೇ ಮಹಡಿ ಹಾಗೂ ಐಸಿಯುನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದು, ಮೂರು ಪಾಳಿಯಲ್ಲಿ ಪೊಲೀಸರು ಆತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಸ್ಫೋಟಕ ಹ್ಯಾಂಡ್ಲರ್‌ಗಳು, ಸ್ಲೀಪರ್ ಸೆಲ್‌ಗಳನ್ನು ಆಕ್ವೀವ್ ಮಾಡಿ ಆತನನ್ನು ಮುಗಿಸುವ ಯತ್ನ ನಡೆಸಿರುವ ಶಂಕೆ ಇದ್ದು ಈ ಹಿನ್ನಲೆಯಲ್ಲೂ ಪೊಲೀಸರು ಆಕ್ಟೀವ್ ಆಗಿದ್ದಾರೆ. ಸ್ವತಃ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಿದ್ದು, ಹಿರಿಯ ಅಧಿಕಾರಿಗಳು ಆಸ್ಪತ್ತೆಯಲ್ಲೇ ಬೀಡು ಬಿಟ್ಟಿದ್ದಾರೆ.

    ಮುಂಬೈ ಸ್ಫೋಟದಂತೆ ಪ್ಲ್ಯಾನ್‌
    ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿದ್ದು, ಉಗ್ರ ಶಾರೀಕ್ ತನಿಖಾಧಿಕಾರಿಗಳ ಜೊತೆ ಮಾತನಾಡದೇ ಇದ್ರೂ ಸಾಕಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿದೆ. ಶಾರೀಕ್ 26/11ರ ಮುಂಬೈ ಸ್ಫೋಟದಂತೆಯೇ (Mumbai BombBlast) ಮಂಗಳೂರಿನಲ್ಲೂ ಅದೇ ದಿನ ಅಂದರೆ ಇಂದು ನವೆಂಬರ್ 26 ಆಗಿರೋದ್ರಿಂದ ಇಂದೇ ಮತ್ತೊಮ್ಮೆ ಸರಣಿ ಸ್ಫೋಟ ನಡೆಸಲು ತಯಾರಿ ನಡೆಸಿದ್ದನಂತೆ. ಮುಂಬೈ ಸ್ಫೋಟದ ಉಗ್ರ ಕಸಬ್‌ನಂತೆಯೇ ಹಿಂದೂ ಸೋಗಿನಲ್ಲೇ ಮಂಗಳೂರಿಗೆ ಬಂದಿದ್ದ ಶಾರೀಕ್ ಕಳೆದ ನ.19ರ ಶನಿವಾರ ಕುಕ್ಕರ್ ಬಾಂಬ್ ಸ್ಫೋಟ ಮಾಡಲು ಬಂದು ವಿಫಲನಾಗಿ ಸಿಕ್ಕಿಬಿದ್ದಿದ್ದಾನೆ. ಒಂದು ವೇಳೆ ಆತನ ಪ್ಲ್ಯಾನ್‌ ನಂತೆಯೇ ಸ್ಫೋಟಗೊಂಡಿದ್ದರೆ ಮತ್ತೆ ಮೈಸೂರಿಗೆ ತೆರಳಿ ಬಾಂಬ್ ತಯಾರಿಸಿ ಶನಿವಾರ (ನವೆಂಬರ್ 26) ಮಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಎಂದು ಹೇಳಿದ್ದಾರೆ.

    ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಮಾತನಾಡಿ, ಉಗ್ರ ಶಾರೀಕ್‌ಗೆ ಐಸಿಸ್ ಸೇರಿ ಹಲವು ಉಗ್ರರ ಸಂಪರ್ಕವಿತ್ತು ಅನ್ನೋದು ಬೆಳಕಿಗೆ ಬಂದಿದೆ. ಈತ ಮುಸ್ಲಿಂ ಭಾಷಣಕಾರ ಝಾಕೀರ್ ನಾಯ್ಕ್ನಿಂದ ಪ್ರೇರೇಪಿತನಾಗಿದ್ದ ಅನ್ನೋದು ಮತ್ತೆ ಸಾಬೀತಾಗಿದೆ. ಸ್ಫೋಟಗೊಂಡ ಒಂದೂವರೆ ಗಂಟೆಯಲ್ಲೇ ಮಲೇಶಿಯಾದಲ್ಲಿರೋ ಝಾಕೀರ್ ನಾಯ್ಕ್ ಆತನ ಟ್ವೀಟರ್‌ನಲ್ಲಿ ಇಸ್ಲಾಂನಲ್ಲಿ ಆತ್ಮಾಹುತಿ ಬಾಂಬ್‌ಗೆ ಅವಕಾಶ ಇದ್ಯಾ ಎಂದು ಟ್ವೀಟ್ ಮಾಡಿದ್ದ. ಆತ್ಮಾಹುತಿ ಬಾಂಬ್‌ನ ಬಗೆಗಿನ ತನ್ನ ವಿಡಿಯೋವನ್ನೂ ಪೋಸ್ಟ್ ಮಾಡಿದ್ದ. ಇದೆಲ್ಲವನ್ನೂ ನೋಡುವಾಗ ಉಗ್ರ ಶಾರೀಕ್‌ನ ಲಿಂಕ್ ದೊಡ್ಡ ಮಟ್ಟದಲ್ಲೇ ಇತ್ತು ಅನ್ನೋದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಮಂಗಳೂರು: ಬಾಂಬರ್‌ ಶಾರೀಕ್‌(Shariq) ಐಸಿಸ್ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ.

    ಮಂಗಳೂರು ಸ್ಫೋಟದ(Mangaluru Blast) ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಾರೀಕ್‌ ಮೊಬೈಲ್‌ ನೋಡಿ ದಂಗಾಗಿದ್ದಾರೆ. ಐಸಿಸ್‌ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿದ್ದ ಶಾರೀಕ್ ಮೊಬೈಲ್‌ನಲ್ಲಿ ಬಾಂಬ್ ತಯಾರಿಯ ವಿಡಿಯೋ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

    ಮೂಲಭೂತವಾದಿ ಭಾಷಣಕಾರ ಝಾಕೀರ್ ನಾಯ್ಕ್‌(Zakir Naik) ಭಾಷಣದಿಂದ ಪ್ರಭಾವಿತನಾಗಿದ್ದ ಈತ ಝಾಕೀರ್‌ ನಾಯ್ಕ್‌ನನ್ನು ʼದಿ ರಿಯಲ್ ಇನ್ಸ್ಪಿರೇಶನ್ʼ ಎಂದು ಸಂಬೋಧಿಸಿದ್ದ. ಇದನ್ನೂ ಓದಿ: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರು

    ಯೂಟ್ಯೂಬ್‌ನಿಂದ ಝಾಕೀರ್ ನಾಯ್ಕ್ ವೀಡಿಯೋ ಡೌನ್‌ಲೋಡ್‌ ಮಾಡಿದ್ದು ಶಾರೀಕ್ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಭಾಷಣಗಳು ಸಿಕ್ಕಿವೆ. ಟೋರ್ ಬ್ರೌಸರ್ ಮೂಲಕ ಡಾರ್ಕ್ ವೆಬ್ ಬಳಸುತಿದ್ದ ವಿಚಾರವೂ ಲಭ್ಯವಾಗಿದೆ.

    ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್‌ ಪೀಸ್‌ ಟಿವಿಗೆ ಭಾರತ ನಿರ್ಬಂಧ ಹೇರಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದನು. ಈ ಘಟನೆಯಿಂದಾಗಿ ತಕ್ಷಣವೇ ಬಳಿಕ ಝಾಕೀರ್ ಭಾರತ ಬಿಟ್ಟು ಮಲೇಷ್ಯಾಕ್ಕೆ ಹೋಗಿದ್ದ.

    ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರೋತ್ಸಾಹ, ಭಯೋತ್ಪಾದಕರನ್ನು ಹೊಗಳುವುದು, ಆತ್ಮಹತ್ಯಾ ಬಾಂಬ್ ದಾಳಿ ಸಮರ್ಥನೆ, ಹಿಂದೂಗಳು, ಹಿಂದೂ ದೇವರುಗಳು ಮತ್ತು ಇತರ ಧರ್ಮಗಳ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌, ಇತರ ಧರ್ಮಗಳಿಗೆ ಅವಮಾನ ಈ ಎಲ್ಲಾ ಆರೋಪಗಳು ಝಾಕೀರ್‌ ನಾಯ್ಕ್‌ ಮೇಲಿದೆ.

    Live Tv
    [brid partner=56869869 player=32851 video=960834 autoplay=true]

  • ಶಾರೀಕ್‍ಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ- 8 ಮಂದಿ ವೈದ್ಯರಿಂದ ನಿಗಾ

    ಶಾರೀಕ್‍ಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ- 8 ಮಂದಿ ವೈದ್ಯರಿಂದ ನಿಗಾ

    ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಶಾರೀಕ್ (Shariq) ಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಎಂಟು ಮಂದಿ ವೈದ್ಯರು ದಿನದ 24 ತಾಸು ನಿಗಾ ವಹಿಸುತ್ತಿದ್ದಾರೆ.

    ದಿನದಿಂದ ದಿನಕ್ಕೆ ಶಾರೀಕ್ ಆರೋಗ್ಯ (Shariq Health) ಸ್ಥಿತಿ ಬಿಗಡಾಯಿಸುತ್ತಿದೆ. ಕುಕ್ಕರ್ ಬಾಂಬು ಸ್ಫೋಟದ ವೇಳೆ ಭಾರೀ ಪ್ರಮಾಣದ ಹೊಗೆ ಕಂಡುಬಂದಿತ್ತು. ಸ್ಪೋಟದ ಹೊಗೆ ಶಾರೀಕ್ ಶ್ವಾಸಕೋಶದಲ್ಲಿ ತುಂಬಿಕೊಂಡ ಕಾರಣ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪೋಟದ ವೇಳೆ ಕುಕ್ಕರ್ ನ ಮುಚ್ಚಳ ಕುತ್ತಿಗೆಗೆ ಬಡಿದು ಗಂಭೀರ ಗಾಯಗಳಾಗಿವೆ. ಹೀಗಾಗಿ ಕುತ್ತಿಗೆಯ ಗಾಯಗಳಿಗೆ ವೈದ್ಯರ ತಂಡ ವಿಶೇಷ ಚಿಕಿತ್ಸೆ ನೀಡುತ್ತಿದೆ.

    ಇನ್ನು ಮೂರು ವಾರಗಳ ಕಾಲ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ. 8 ಮಂದಿ ವೈದ್ಯರಿಂದ ದಿನದ 24 ತಾಸು ನಿಗಾ ವಹಿಸಲಾಗುತ್ತಿದೆ. ಶಾರೀಕ್ ಎಳೆಯ ಪ್ರಾಯವಾಗಿರುವುದರಿಂದ ಚಿಕಿತ್ಸೆಗೆ ಅನುಕೂಲವಾಗುತ್ತಿದೆ ಎಂದು ಪಬ್ಲಿಕ್ ಟಿವಿಗೆ ಆಸ್ಪತ್ರೆಯ ವೈದ್ಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರು

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ತನಿಖೆಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

    ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್‌ಐಎ ತನಿಖೆಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

    ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಳೆದ ವಾರ ನಡೆದ ಘಟನೆಯ ಹಿಂದೆ ಉಗ್ರರ ದೊಡ್ಡ ಸಂಚೇ ಇತ್ತು ಎಂಬುದು ಬೆಳಕಿಗೆ ಬರುತ್ತಲೇ ಇದರ ತನಿಖೆಯನ್ನು ಎನ್‌ಐಎಗೆ (NIA) ವಹಿಸಬೇಕೆಂಬ ಒತ್ತಾಯ ಕೇಳಿಬರುತ್ತಿತ್ತು. ಇದೀಗ ಮಂಗಳೂರು ಸ್ಫೋಟ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತಿಳಿಸಿದ್ದಾರೆ.

    ಮಂಗಳೂರಿನ ಕಂಕನಾಡಿ ಸಮೀಪ ಕುಕ್ಕರ್ ಬಾಂಬ್ ಸ್ಫೋಟ ಘಟನೆಯ ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲಾ ದೇವಾಲಯಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು – ಪ್ರಮೋದ್ ಮುತಾಲಿಕ್

    ನವೆಂಬರ್ 19ರಂದು ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢವಾಗಿ ಸ್ಫೋಟವೊಂದು ಸಂಭವಿಸಿತ್ತು. ಘಟನೆಯಲ್ಲಿ ಆಟೋ ಡ್ರೈವರ್ ಹಾಗೂ ಹಿಂಬದಿ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿತ್ತು. ತನಿಖೆಯ ವೇಳೆ ಪ್ರಯಾಣಿಕನ ಸೋಗಿನಲ್ಲಿ ಬಂದು ಬಾಂಬ್ ಬ್ಲಾಸ್ಟ್ ಮಾಡಿದ್ದ ವ್ಯಕ್ತಿ ಮೋಸ್ಟ್ ವಾಂಟೆಡ್ ಶಾರೀಕ್ (Shariq) ಎಂಬುದು ತಿಳಿದುಬಂದಿದೆ. ಈತ ಮಂಗಳೂರಿನ ದೇವಾಲಯಗಳು ಸೇರಿದಂತೆ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲು ಯೋಜಿಸಿದ್ದ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಶಾರೀಕ್ ಅಲ್ಲ ಘಜನಿಯಿಂದ ಟಿಪ್ಪುವರೆಗಿನ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡ್ಕೊಂಡೇ ಬಂದಿದ್ದಾರೆ: ಮುತಾಲಿಕ್

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗ್ತಿದ್ದು, ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ: ಸಿಟಿ ರವಿ

    ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗ್ತಿದ್ದು, ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ: ಸಿಟಿ ರವಿ

    ನವದೆಹಲಿ: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ಇದನ್ನೇ ಆಧರಿಸಿ ಕೆಲವು ರಾಜಕಾರಣಿಗಳು ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನ ನಡೆದು ಬಿಟ್ಟಿತ್ತು. ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದರು.

    ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ವಿಚಾರಕ್ಕೆ ಪ್ರತಿಕ್ರಿಯಿಸಿ, ದೇವರು ನಮ್ಮ ಕಡೆಗೆ ಇದ್ದಾನೆ. ಹಿಂದೆಯೂ ಹಿಂದೂಗಳ ವಿರುದ್ಧ ಕ್ರಿಶ್ಚಿಯನ್‍ರನ್ನ ಎತ್ತಿಕಟ್ಟುವ ಪ್ರಯತ್ನ ನಡೆದಿತ್ತು. ಈಗ ಕೊಯಮತ್ತೂರು ಬಳಿಕ ಕರ್ನಾಟಕದಲ್ಲಿ ಸ್ಫೋಟ ವಿಫಲವಾಗಿದೆ ಎಂದರು.

    ಹಿಂದುಗಳು ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲಾನ್ ಮಾಡಿದ್ದಾರೆ. ಇದನ್ನೇ ಆಧರಿಸಿ ಕೆಲವು ರಾಜಕಾರಣಿಗಳು ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನ ನಡೆದು ಬಿಟ್ಟಿತ್ತು. ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

    ನಾನು ಸಿಎಂ ಜೊತೆಗೆ ವೈಯಕ್ತಿಕವಾಗಿ ಮಾತನಾಡಿ ಎನ್‍ಐಎಗೆ ನೀಡಲು ಆಗ್ರಹಿಸಿದ್ದೇನೆ. ಇದನ್ನು ಲಘುವಾಗಿ ಪರಿಗಣಿಸಬಾರದು. ಇದರ ಹಿಂದೆ ಜಿಹಾದಿ ಮಾನಸಿಕತೆ ಇದೆ. ದೊಡ್ಡ ಷಡ್ಯಂತ್ರ ನಡೆದಿರುವ ಸಾಧ್ಯತೆ ಇದೆ. ಸ್ಫೋಟಕ್ಕೆ ಖಚ್ಚಾ ವಸ್ತುಗಳನ್ನು ಯಾರು ನೀಡುತ್ತಿದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ ಎಂದರು. ಇದನ್ನೂ ಓದಿ: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಚುನಾವಣೆಯ ಬಗ್ಗೆ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ಗುಜರಾತ್‌ (Gujrat) ನಲ್ಲಿ ಓಡಾಡುತ್ತಿದ್ದೇನೆ. ಗುಜರಾತ್ ನಲ್ಲಿ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ಮೋದಿ ನಾಯಕತ್ವ ಗುಜರಾತ್ ಮೇಲೆ ಅಗಾಧ ಪ್ರಭಾವ ಬೀರಿದೆ. ಈ ಬಾರಿ ಹೊಸ ದಾಖಲೆ ಸೃಷ್ಟಿಯಾಗಲಿದೆ. ನರೇಂದ್ರ ದಾಖಲೆಯನ್ನು ಭೂಪೇಂದ್ರ ಮುರಿಯಲಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಆಪ್ ಸೌಂಡ್ ಜಾಸ್ತಿ ಗ್ರೌಂಡ್ ನಲ್ಲಿ ಬಿಗ್ ಜಿರೋ. ಗಂಟು ಮೂಟೆ ಕಟ್ಟು ಕೊಂಡು ಹೋಗಲಿದೆ. ಅದರ ಮುಖವಾಡ ಕಳಚಿ ಬಿದ್ದಿದೆ. ಕಾಂಗ್ರೆಸ್ (Congress) ಯಾರ ನಾಯಕತ್ವದಲ್ಲಿ ಚುನಾವಣೆ ನಡೆಸುತ್ತಿದೆ ಗೊತ್ತಿಲ್ಲ. ಅದೊಂದು ಅಳಿದುಳಿದ ಪಳಿಯುಳಿಕೆಯಾಗಿದೆ ಎಂದು ಹೇಳಿದರು.

    ಇದೇ ವೇಳೆ ಮತದಾರರ ಮಾಹಿತಿಗೆ ಕನ್ನ ವಿಚಾರದ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಆರೋಪ ಮಾಡಲು ಇದೆ. ಕಾಂಗ್ರೆಸ್‍ಗಿಂತ ಮುಂಚೆ ಬಿಜೆಪಿ ದೂರು ನೀಡಿದೆ. ಚಿಲುಮೆಗೆ ಅವಕಾಶ ನೀಡಿದ್ದೆ ಸಿದ್ದರಾಮಯ್ಯ ಸರ್ಕಾರ ಎನ್ನುವ ಆರೋಪ ಇದೆ. ಈ ಬಗ್ಗೆ ತನಿಖೆಯಾಗಲಿ ಬಿಡಿ. ಆಯೋಗ ಜನರಿಗೂ ಮತದಾರರ ಪಟ್ಟಿ ಅಪ್ಡೇಟ್ ಮಾಡಲು ಅನುಮತಿ ನೀಡಿದೆ. ಸಂಘ ಸಂಸ್ಥೆಗಳಿಗೂ ಈ ಅನುಮತಿ ನೀಡಿದೆ. ಕರಡು ಪಟ್ಟಿಯಲ್ಲಿ ನಿರ್ದಿಷ್ಟವಾಗಿ ಹೆಸರು ತಪ್ಪಿದ್ರೆ ದೂರು ನೀಡಬಹುದು. ಬಿಎಲ್‍ಓ ಇದಕ್ಕೆ ಉತ್ತರದಾಯಿ. ಬಿಎಲ್‍ಓಗೆ ಅಂತಿಮ ಪಟ್ಟಿ ಪರಿಷ್ಕರಣೆ ಮಾಡುವ ಅಧಿಕಾರ ಇದೆ ಎಂದರು.

    ಮೂಡಿಗೇರೆ ಶಾಸಕ ಕುಮಾರಸ್ವಾಮಿ (MP Kumaraswamy) ಮೇಲೆ ಹಲ್ಲೆ ನಡೆದಿರುವುದು ದುರದೃಷ್ಟಕರ. ನಾನು ಅವರ ಜೊತೆಗೆ ಮಾತುಕತೆ ಮಾತನಾಡಿದ್ದೇನೆ. ಕಾರಣ ಏನು ಎನ್ನುವುದು ತನಿಖೆ ಬಳಿಕ ಗೊತ್ತಾಗಬೇಕು. ನನ್ನ ಹಾಗೇ ಅವರು ಜನ ಪ್ರತಿನಿಧಿ, ನಾನು ಹಲ್ಲೆಯನ್ನು ಸಮರ್ಥಿಸುವುದಿಲ್ಲ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]