Tag: Shariq

  • ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ  ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ(Mangaluru Blast Case) ಮುನ್ನ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ (Satellite Phone) ರಿಂಗಣಿಸಿದ ವಿಚಾರ ಈಗ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

    ಹೌದು. ನವೆಂಬರ್‌ 19 ಶನಿವಾರ ಸಂಜೆ  ಸ್ಫೋಟ ನಡೆದಿದ್ದರೆ ನ.18ರಂದು ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ(Kakkinje) ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ.

    ಅರಣ್ಯ ಪ್ರದೇಶದಲ್ಲಿ ನಿಷೇಧಿತ ತುರಾಯ (Thuraya) ಕಂಪನಿಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಈಗ ಸಿಕ್ಕಿದೆ. ಸ್ಯಾಟಲೈಟ್ ಫೋನ್ ಜಾಗವನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿದ್ದು ಪೊಲೀಸರು ಈಗ ಈ ಕೋನದಲ್ಲೂ ತನಿಖೆ ಆರಂಭಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಎರಡು, ಉಡುಪಿ ಒಂದು ಕಡೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ. ಸುಮಾರು 5 ವರ್ಷಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಸ್ಯಾಟಲೈಟ್ ಫೋನ್ ಸದ್ದು ಮಾಡುತ್ತಿವೆ.

    ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಮೂಲದ ತುರಾಯ ಕಂಪನಿ ಯುರೋಪ್, ಮಧ್ಯಪ್ರಾಚ್ಯ, ಉತ್ತರ, ಮಧ್ಯ ಮತ್ತು ಪೂರ್ವ ಆಫ್ರಿಕಾ, ಏಷ್ಯಾ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 161 ದೇಶಗಳಿಗೆ ಧ್ವನಿ ಸೇವೆಗಳನ್ನು ನೀಡುತ್ತಿದೆ. ಇದನ್ನೂ ಓದಿ: ರೂಮಿನ ಹತ್ರ ಬಂದಾಗ ಸಡನ್ ಲಾಕ್ – ಕನ್ನಡಕ ಧರಿಸಿ ಓಡಾಟ

    ಸ್ಯಾಟಲೈಟ್‌ ಫೋನ್‌ ಬಳಕೆಗೆ ನಿಷೇಧ:
    ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತದೆ ಎಂಬ ಕಾರಣಕ್ಕೆ ಭಾರತದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

    ವೈರ್‌ಲೆಸ್ ಕಾಯ್ದೆಯ ಸೆಕ್ಷನ್ 6 ಮತ್ತು ಇಂಡಿಯನ್ ಟೆಲಿಗ್ರಾಫ್ ಆಕ್ಟ್‌ನ ಸೆಕ್ಷನ್ 20ರ ಅಡಿಯಲ್ಲಿ ಭಾರತದಲ್ಲಿ ತುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆಯನ್ನು ಕಾನೂನುಬಾಹಿರ ಎಂದು ಘೋಷಿಸಿದೆ

    ಭಾರತಕ್ಕೆ ಪ್ರಯಾಣಿಸುವ ಎಲ್ಲಾ ವ್ಯಕ್ತಿಗಳಿಗೆ ತುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆಯನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸಲಹೆ ನೀಡಲಾಗುತ್ತದೆ. ವಿದೇಶಿಯರು ಭಾರತಕ್ಕೆ ಉಪಗ್ರಹ ಫೋನ್‌ಗಳನ್ನು ತರುವುದಕ್ಕೂ ನಿಷೇಧ ಹೇರಲಾಗಿದೆ. ಭಾರತಕ್ಕೆ ಬರುವಾಗ ಉಪಗ್ರಹ ಫೋನ್‌ಗಳಿದ್ದರೆ ಪ್ರಯಾಣಿಕರನ್ನು ಬಂಧಿಸಲಾಗುತ್ತದೆ. ಅಷ್ಟೇ ಅಲ್ಲದೇ ಟೆಲಿಗ್ರಾಫ್ ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಂಡ ವಿಧಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ರೂಮಿನ ಹತ್ರ ಬಂದಾಗ ಸಡನ್ ಲಾಕ್ – ಕನ್ನಡಕ ಧರಿಸಿ ಓಡಾಟ

    ರೂಮಿನ ಹತ್ರ ಬಂದಾಗ ಸಡನ್ ಲಾಕ್ – ಕನ್ನಡಕ ಧರಿಸಿ ಓಡಾಟ

    ಮೈಸೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಮಂಗಳೂರಿನಲ್ಲಿ ಬಾಂಬ್ ಸ್ಫೋಟಕ್ಕೂ ಮೊದಲು ಉಗ್ರ ಶಾರಿಕ್ ತಂಗಿದ್ದ ಬಾಡಿಗೆ ಮನೆಯಲ್ಲಿ ಪ್ರತಿನಿತ್ಯ ರಾತ್ರಿ ಕೊಯ್ಯುವ, ಚುಚ್ಚುವ ಶಬ್ದಗಳು ಕೇಳಿ ಬರುತ್ತಿತ್ತು ಎಂದು ಸ್ಥಳೀಯ ನಿವಾಸಿ ತಿಳಿಸಿದ್ದಾರೆ.

    ಶಾರೀಕ್ ಬಗ್ಗೆ ಮಾತನಾಡಿ, ಮೈಸೂರಿನ ಲೋಕನಾಯಕ ನಗರ, ಮೇಟಗಳ್ಳಿಯಲ್ಲಿರುವ ಸಿಂಗಲ್ ರೂಮ್‌ನಲ್ಲಿ ಉಗ್ರ ಶಾರೀಕ್ ವಾಸವಿದ್ದ. ಆ ಮನೆಗೆ ಶಾರೀಕ್ ಮನೆಯ ಮಾಲೀಕನನ್ನು ಒಳಗೆ ಸೇರಿಸುತ್ತಿರಲಿಲ್ಲ. ರೂಂ ಬಳಿ ಯಾರದರೂ ಬರುತ್ತಿದ್ದಂತೆ ತಕ್ಷಣವೇ ಆತನೇ ಹೊರಬರುತ್ತಿದ್ದ. ಅಷ್ಟೇ ಅಲ್ಲದೇ ಕನ್ನಡಕ ಧರಿಸಿ ಮುಖ ಮುಚ್ಚಿಕೊಂಡು ಓಡಾಡುತ್ತಿದ್ದ ಎಂದು ಹೇಳಿದರು.

    ಶಾರೀಕ್‌ನನ್ನು ಯಾರಾದರೂ ಏನಾದ್ರು ಪ್ರಶ್ನೆ ಮಾಡಿದರೆ ಸಡನ್ನಾಗಿ ಡೋರ್ ಲಾಕ್ ಮಾಡಿಕೊಳ್ಳುತ್ತಿದ್ದ ಎಂದು ಹೇಳಿದರು. ಈ ರೀತಿ ನೆರೆ ಹೊರೆಯವರ ಉದಾಸೀನದಿಂದ ಉಗ್ರ ಶಾರೀಕ್ ಚಿಗುರಿಕೊಂಡಿದ್ದು, ದೇಶದ್ರೋಹಿ ಕೃತ್ಯವನ್ನು ಮುಂದುವರಿಸಿದ್ದ ಎಂಬ ಮಾಹಿತಿ ಈಗ ಲಭ್ಯವಾಗಿದೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್‌ – ಮೊಬೈಲ್‌ನಲ್ಲಿ 6 ಜಾಗ ಸರ್ಚ್‌ ಮಾಡಿದ್ದ ಬಾಂಬರ್‌

    ಉಗ್ರ ವಾಸವಿದ್ದ ಮನೆಯ ಪಕ್ಕದ ಮನೆಯಲ್ಲಿ ಮನೆ ಖಾಲಿ ಇದೆ ಎಂದು ಬೋರ್ಡ್‌ಗಳನ್ನು ನೇತು ಹಾಕಿಕೊಳ್ಳಲಾಗಿದೆ. ಇಂತಹ ಮನೆಗಳನ್ನೇ ಉಗ್ರರು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    Live Tv
    [brid partner=56869869 player=32851 video=960834 autoplay=true]

  • ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್‌ – ಮೊಬೈಲ್‌ನಲ್ಲಿ 6 ಜಾಗ ಸರ್ಚ್‌ ಮಾಡಿದ್ದ ಬಾಂಬರ್‌

    ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್‌ – ಮೊಬೈಲ್‌ನಲ್ಲಿ 6 ಜಾಗ ಸರ್ಚ್‌ ಮಾಡಿದ್ದ ಬಾಂಬರ್‌

    ಮಂಗಳೂರು: ಕುಕ್ಕರ್‌ ಬಾಂಬರ್‌ ಶಾರೀಕ್‌ನ(Shariq) ಗುರಿ ಕದ್ರಿ ದೇವಸ್ಥಾನ(Kadri Temple) ಆಗಿತ್ತು ಎಂದು ಉಗ್ರ ಸಂಘಟನೆ ಹೇಳಿದ್ದರೂ ಆತ ಮೊಬೈಲ್‌ನಲ್ಲಿ ಮಂಗಳೂರಿನ(Mangaluru) ಹಲವು ಪ್ರದೇಶಗಳನ್ನು ಸರ್ಚ್‌ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಶಾರೀಕ್‌ ಮೊಬೈಲ್‌ನಲ್ಲಿ ಯಾವ ಸ್ಥಳಗಳನ್ನು ಸರ್ಚ್‌ ಮಾಡಿದ್ದ ಎನ್ನುವುದು ಗೊತ್ತಾಗಿದೆ. ಸರ್ಕಾರಕ್ಕೆ ನೀಡಿದ ಪ್ರಾಥಮಿಕ ವರದಿಯಲ್ಲಿ ತನಿಖಾ ತಂಡ ಮೂರು ದೇವಸ್ಥಾನ ಮತ್ತು ಎರಡು ಸಾರ್ವಜನಿಕ ಸ್ಥಳದಲ್ಲಿ ಬಾಂಬ್ ಇಡಲು ಪ್ಲಾನ್‌ ಮಾಡಿದ್ದ ಎಂಬುದನ್ನು ಉಲ್ಲೇಖಿಸಿದೆ.

    ಎರಡು ಶಿವ ದೇವಸ್ಥಾನ, ಒಂದು ದೇವಿ ದೇವಸ್ಥಾನ, ಎರಡು ಸಾರ್ವಜನಿಕ ಸ್ಥಳ, ಒಂದು ಕಾರ್ಯಕ್ರಮ ಆತನ ಟಾರ್ಗೆಟ್‌ ಆಗಿತ್ತು ಎಂದು ಪೊಲೀಸ್ ಉನ್ನತ ಮೂಲಗಳು ಪಬ್ಲಿಕ್‌ ಟಿವಿಗೆ ಮಾಹಿತಿ ನೀಡಿವೆ.

    ಟಾರ್ಗೆಟ್‌ ಆಗಿದ್ದ ಸ್ಥಳಗಳು ಯಾವುದು?
    ಕದ್ರಿ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ(Kudroli Gokarnanatheshwara Temple) ಲಕ್ಷದೀಪೋತ್ಸವ ನಡೆಯಿತ್ತಿದೆ. ಕಾರ್ತಿಕ ಮಾಸದಲ್ಲಿ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಈ ಸಂದರ್ಭದಲ್ಲೇ ಸ್ಪೋಟ ಮಾಡುವ ಬಗ್ಗೆ ಸಂಚು ರೂಪಿಸಿದ್ದನೇ ಎಂಬ ಪ್ರಶ್ನೆ ಎದ್ದಿದೆ.

    ತನ್ನ ವಾಟ್ಸಪ್‌ ಡಿಪಿಯಲ್ಲಿ ಕೊಯಮತ್ತೂರಿನ ಆದಿಯೋಗಿ ಶಿವನ ಪ್ರತಿಮೆಯ(Adiyogi Shiva Statue) ಫೋಟೋವನ್ನು ಹಾಕಿದ್ದ. ಶಿವನ ಡಿಪಿಯ ಅಸಲಿಯತ್ತನ್ನು ಡೀಕೋಡ್ ಮಾಡುವಾಗಿ ಪೊಲೀಸರಿಗೆ ಅನುಮಾನ  ಬಂದಿದ್ದು ಶಿವ ದೇವಾಲಯಲ್ಲಿ ಕೃತ್ಯ ನಡೆಸಲು ಪ್ಲಾನ್‌ ಮಾಡಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ.

    ಮಂಗಳದೇವಿ ದೇವಸ್ಥಾನಕ್ಕೂ(Mangaladevi Temple) ಸ್ಕೆಚ್ ಹಾಕಿರೋ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಮಂಗಳೂರಿನ ಪಡೀಲು ಬಳಿ ಇರುವ ರೈಲ್ವೇ ನಿಲ್ದಾಣ(Railway Station) ಮತ್ತು ಬಿಜೈನಲ್ಲಿರುವ ಕೆಎಸ್‌ಆರ್‌ಟಿಸಿ(KSRTC) ಬಸ್‌ ನಿಲ್ದಾಣವನ್ನು ಆತ ಸರ್ಚ್‌ ಮಾಡಿದ್ದಾನೆ. ಸಾಕಷ್ಟು ಜನರು ಇಲ್ಲಿದ ಪ್ರಯಾಣ ನಡೆಸುವ ಹಿನ್ನೆಲೆಯಲ್ಲಿ ಇಲ್ಲೂ ಕೃತ್ಯ ನಡೆಸಲು ಪ್ರಯತ್ನಿಸಿದ್ದನೇ ಎಂಬ ಅನುಮಾನ ಎದ್ದಿದೆ.

    ಆರ್‌ಎಸ್ಎಸ್(RSS) ಪ್ರಮುಖ ಕಚೇರಿ ʼಸಂಘನಿಕೇತನʼ ಇರುವ ಮಣ್ಣಗುಡ್ಡವನ್ನು ಶಾರೀಕ್‌ ಸರ್ಚ್‌ ಮಾಡಿದ್ದಾನೆ. ಸ್ಫೋಟಗೊಂಡ ದಿನವಾದ ನ.19 ರಂದು ಸಂಘನಿಕೇತನದಲ್ಲಿ(Sanghaniketan) ಬೃಹತ್ ವಿದ್ಯಾರ್ಥಿ ಸಮಾವೇಶ ನಡೆಯುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

     

    ಕೇಶವ ಸ್ಮೃತಿ ಸಂವರ್ಧನ ಸಮಿತಿಯು ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ನ.19 ಮತ್ತು 20ರಂದು ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶ ಆಯೋಜಿಸಿತ್ತು. ಶಾರೀಕ್‌ ಮೊಬೈಲ್‌ನಲ್ಲಿ ಮಣ್ಣಗುಡ್ಡವನ್ನು ಸರ್ಚ್‌ ಮಾಡಿದ ಹಿನ್ನೆಲೆಯಲ್ಲಿ ಇಲ್ಲೂ ಕೃತ್ಯ ನಡೆಸಲು ಮುಂದಾಗಿದ್ನಾ ಎಂಬ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ಶಿವ ದೇವಸ್ಥಾನದಲ್ಲಿ ದೀಪೋತ್ಸವ:
    ಹಿಂದೂ ಪಂಚಾಂಗದಲ್ಲಿ ಚಳಿಗಾಲದಲ್ಲಿ ಆರಂಭವಾಗುವ ಕಾರ್ತಿಕ ಮಾಸ ಅತ್ಯಂತ ಪವಿತ್ರ ಮತ್ತು ಶ್ರೇಷ್ಠ ಮಾಸ ಎಂದು ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ದೀಪಾರಾಧನೆ ಮಾಡಿದರೆ ಐಶ್ವರ್ಯ, ಸಂಪತ್ತು, ಆರೋಗ್ಯ ಭಾಗ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಕಾರ್ತಿಕ ನಕ್ಷತ್ರ ನವೆಂಬರ್‌/ಡಿಸೆಂಬರ್‌ ತಿಂಗಳಿನಲ್ಲಿ ಚಂದ್ರನಿಗೆ ಅತ್ಯಂತ ಹತ್ತಿರದಲ್ಲಿ ಇರುತ್ತದೆ. ಈ ಕಾರಣಕ್ಕೆ ಹಿಂದೂ ಪಂಚಾಂಗದ ಎಂಟನೇ ತಿಂಗಳಿಗೆ ಕಾರ್ತಿಕ ಮಾಸ ಎಂದು ಕರೆಯಲಾಗುತ್ತದೆ. ಪ್ರತಿ ಮಾಸಕ್ಕೆ ಒಬೊಬ್ಬ ದೇವರು ಇರುವಂತೆ ಕಾರ್ತಿಕ ಮಾಸದ ಅಧಿಪತಿ ಶಿವ. ಪರಿಣಾಮವಾಗಿ ಹುಣ್ಣಿಮೆಯ ಚಂದ್ರನು ಪ್ರಕಾಶಮಾನವಾಗಿ ಕಾಣುತ್ತಾನೆ. ಈ ಕಾರಣಕ್ಕೆ ಶಿವ ದೇವಾಲಯಗಳಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಹೆಚ್ಚಿನ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ಬೆಂಗಳೂರು:  ಮಂಗಳೂರು ಬಾಂಬ್‌ ಸ್ಫೋಟ(Mangaluru Blast Case) ಉಗ್ರ ಕೃತ್ಯ ಎಂದು ದೃಢಪಟ್ಟರೂ ಶಾರೀಕ್‌(Shariq) ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದು ಬಂದಿರಲಿಲ್ಲ. ಆದರೆ ಈಗ ʼಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ʼ ಹೆಸರಿನ ಸಂಘಟನೆಯೊಂದು ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.

    ಸಾಮಾಜಿಕ ಜಾಲತಾಣದಲ್ಲಿ Islamic Resistance Council ಸಂಘಟನೆ ಅರೆಬಿಕ್‌ ಭಾಷೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ನಮ್ಮ ದಾಳಿ ಕದ್ರಿ ದೇವಸ್ಥಾನ(Kadri Temple) ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್‌ ಸ್ಫೋಟಗೊಂಡಿದೆ ಸಂಘಟನೆ ಹೇಳಿಕೊಂಡಿದೆ.

    ಶಾರೀಕ್‌ ಪಂಪ್‌ವೆಲ್‌ ಬಳಿ ಬಾಂಬ್‌ ಸ್ಫೋಟ ನಡೆಸಲು ಪ್ಲ್ಯಾನ್‌ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ ಈಗ ಕದ್ರಿ ದೇವಸ್ಥಾನ ಉಗ್ರರ ಟಾರ್ಗೆಟ್‌ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ಬುದ್ಧಿವಾದ ಹೇಳಿದ್ದಕ್ಕೆ ಶಾಲೆ ಬಿಟ್ಟ ಶಾರೀಕ್- ಕುಕ್ಕರ್ ಬಾಂಬರ್ ಹಿನ್ನೆಲೆಯೇ ರೋಚಕ

    ನ.23ರಂದು ಪ್ರಕಟಿಸಲಾದ ಅರೆಬಿಕ್‌ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್‌ ಜೊತೆ ಬಾಂಬ್‌ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್‌ ಮಾಡಲಾಗಿದೆ.

    ಅಷ್ಟೇ ಅಲ್ಲದೇ ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ಬೆದರಿಕೆ ಹಾಕಲಾಗಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.

    ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.

    ಈ ಸಂಘಟನೆ ಇದೆಯೋ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ. ಕರ್ನಾಟಕ ಪೊಲೀಸ್‌ ಈ ಸಂಘಟನೆ ಅಸ್ತಿತ್ವದಲ್ಲಿದೆಯೇ ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಕೇಂದ್ರ ಗೃಹ ಇಲಾಖೆಯ ಸಹಾಯವನ್ನು ಕೇಳಿದೆ.

    ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ 10ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ. ಮಂಗಳೂರು ಪಂಪ್‌ವೆಲ್‌ನಿಂದ 5 ಕಿ.ಮೀ ದೂರದಲ್ಲಿದ್ದರೆ ಸ್ಫೋಟ ನಡೆದ ಸ್ಥಳದಿಂದ 4.5 ಕಿ.ಮೀ ದೂರದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ಬುದ್ಧಿವಾದ ಹೇಳಿದ್ದಕ್ಕೆ ಶಾಲೆ ಬಿಟ್ಟ ಶಾರೀಕ್- ಕುಕ್ಕರ್ ಬಾಂಬರ್ ಹಿನ್ನೆಲೆಯೇ ರೋಚಕ

    ಬುದ್ಧಿವಾದ ಹೇಳಿದ್ದಕ್ಕೆ ಶಾಲೆ ಬಿಟ್ಟ ಶಾರೀಕ್- ಕುಕ್ಕರ್ ಬಾಂಬರ್ ಹಿನ್ನೆಲೆಯೇ ರೋಚಕ

    ಮಂಗಳೂರು: ಬಾಂಬ್ ಸ್ಫೋಟ ಮಾಡಿದ ಉಗ್ರ ಶಾರೀಕ್ (Shariq) ದಾರಿ ತಪ್ಪಿದ್ದು ಹೇಗೆ, ಶಿಕ್ಷಣ ಕಲಿತು ಸಮಾಜಕ್ಕೆ ಒಳ್ಳೆಯ ವ್ಯಕ್ತಿಯಾಗಬೇಕಿದ್ದ ಶಾರೀಕ್ ಶಿಕ್ಷಣ ಕಲಿತ ಊರನ್ನೇ ಸ್ಫೋಟಿಸಲು ಸಂಚು ರೂಪಿಸಿದ್ಯಾಕೆ. ತಂದೆ-ತಾಯಿ ಇಲ್ಲದ ಅನಾಥ ಹುಡುಗ ಕುಟುಂಬದ ಮಾತು ಕೇಳಿದ್ರೆ ಇಂದು ಉಗ್ರನಾಗುತ್ತಿರಲಿಲ್ಲ.

    ಹೌದು. ಮಂಗಳೂರಿನ ಕುಕ್ಕರ್ ಬಾಂಬರ್ ಶಾರೀಕ್ ಇದೀಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾನೆ. ಮೊದಲ ಬಾರಿಗೆ ಮಂಗಳೂರಿನಲ್ಲಿ ಬಾಂಬ್ ಸ್ಫೋಟಕ್ಕೆ ರೂಪಿಸಿದ್ದ ಸಂಚು ಸಹ ವಿಫಲವಾಗಿದೆ. ಅಷ್ಟಕ್ಕೂ ಈತ ಈ ಮಟ್ಟಿಗೆ ಉಗ್ರತ್ವವನ್ನು ಮೈಗೂಡಿಸಿಕೊಳ್ಳಲು ಕಾರಣ ಏನು ಅಂತ ನೋಡಿದ್ರೆ. ಈತ ಸಣ್ಣ ವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಬಳಿಕ ಮಲತಾಯಿಯ ಆಶ್ರಯದಲ್ಲಿ ಬೆಳೆದಿದ್ದ. ಇದನ್ನೂ ಓದಿ: ರಾಷ್ಟ್ರಧ್ವಜ ಕಂಡರೆ ಬೆಂಕಿ ಹಚ್ಚುತ್ತಿದ್ದ ಶಾರೀಕ್ ಗ್ಯಾಂಗ್

    ಕಳೆದ ಕೆಲ ವರ್ಷದ ಹಿಂದೆ ಆತನ ತಂದೆ ಅಬ್ದುಲ್ ಮಜೀದ್ ಕೂಡಾ ಸಾವನ್ನಪ್ಪಿದ್ದು ಬಳಿಕ ಮನೆಯಿಂದಲೂ ದೂರವಾಗಿದ್ದ. ಮಂಗಳೂರಿನ ದೇರಳಕಟ್ಟೆಯಲ್ಲಿ ಶಿಕ್ಷಣ ಪಡೆಯಲು ಬಂದಿದ್ದ ಶಾರೀಕ್ ನಗರದ ಬಲ್ಮಠದಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ. ಈ ನಡುವೆ ಶಿಕ್ಷಣ ಕಲಿಯುವುದಕ್ಕಿಂತಲೂ ಹೆಚ್ಚಾಗಿ ಉಗ್ರ ಸಂಪರ್ಕಕ್ಕೆ ಹಾತೊರೆಯುತ್ತಿದ್ದ. ಇದೇ ಸಂದರ್ಭದಲ್ಲಿ ಉಗ್ರರ ಪರ ಗೋಡೆ ಬರಹ ಬರೆದು ಉಗ್ರರಿಂದ ಆಕರ್ಷಿತನಾಗಿದ್ದ. ಇದನ್ನೂ ಓದಿ: ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಕಳೆದ 2020ರ ಡಿಸೆಂಬರ್ 5 ರಂದು ಮಂಗಳೂರಿನ ಎರಡು ಕಡೆ ಗೋಡೆ ಬರಹ ಬರೆದಿದ್ದು ಅದರಲ್ಲಿ ತಾಲಿಬಾನ್ (Taliban), ಲಷ್ಕರ್ ತೊಯ್ಬಾ ಜಿಂದಾಬಾದ್, ಸಂಘಿಗಳ ಅಟ್ಟಹಾಸವನ್ನು ಮಟ್ಟಹಾಕಲು ಲಷ್ಕರ್ ತೋಯ್ಬಾವನ್ನು ಮಂಗಳೂರಿಗೆ ಕರೆಸಬೇಕಾಗುತ್ತದೆ ಎಂದು ಬರೆದಿದ್ದ. ಈ ವೇಳೆ ಬಂಧನಕ್ಕೊಳಗಾಗಿ ಜಾಮೀನು ಪಡೆದು ಹೊರ ಬಂದಿದ್ದ. ಬಳಿಕ ಮನೆಯವರೂ ಈತನಿಗೆ ಬುದ್ಧಿಮಾತು ಹೇಳಿದ್ದು ಇಂತಹ ಕೆಲಸ ಮಾಡಬೇಡ ಎಂದು ಎಚ್ಚರಿಕೆ ನಿಡಿದ್ರು.

    ಇದರಿಂದ ರೊಚ್ಚಿಗೆದ್ದು ಮನೆ ಬಿಟ್ಟು ಬಂದಿದ್ದ ಶಾರೀಕ್, ಬಳಿಕ ಭೂಗತನಾಗಿದ್ದ. ಉಗ್ರರ ನಶೆಯಲ್ಲೇ ಇದ್ದ ಶಾರೀಕ್ ಹೇಗಾದ್ರೂ ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ಮಾಡಬೇಕೆಂದು ನಿರ್ಧರಿಸಿದ್ದ. ಅದಕ್ಕಾಗಿ ತಾನು ಶಿಕ್ಷಣ (Education) ಕಲಿತ ಮಂಗಳೂರನ್ನೇ ಆಯ್ಕೆ ಮಾಡಿಕೊಂಡಿದ್ದ. ಈ ಮೂಲಕ ಉಗ್ರರನ್ನು ಮಂಗಳೂರಿಗೆ ಕರೆಸುತ್ತೇವೆ ಎಂದು ಗೋಡೆ ಬರಹದಲ್ಲಿ ಬರೆದಂತೆ ತಾನೇ ಉಗ್ರನಾಗಿ ಬಂದು ವಿಧ್ವಂಸಕ ಕೃತ್ಯ ನಡೆಸಲು ಯತ್ನಿಸಿದ್ದ. ಆದರೆ ಆತ ಅಂದುಕೊಂಡಂತೆ ಯಾವುದೂ ನಡೆಯದೆ ಸಣ್ಣ ಪ್ರಮಾಣದಲ್ಲಿ ಸ್ಫೋಟ ನಡೆದು ಹೋಯ್ತು.

    ಒಟ್ಟಿನಲ್ಲಿ ಶಿಕ್ಷಣ ಕಲಿತು ಮನೆಗೆ ಆಧಾರ ಸ್ತಂಭವಾಗಬೇಕಿದ್ದ ಶಾರೀಕ್ ಇದೀಗ ಉಗ್ರನಾಗಿ ಬಾಂಬ್ ಸ್ಫೋಟಿಸಿಕೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ತಾನು ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಧ್ವಜ ಕಂಡರೆ ಬೆಂಕಿ ಹಚ್ಚುತ್ತಿದ್ದ ಶಾರೀಕ್ ಗ್ಯಾಂಗ್

    ರಾಷ್ಟ್ರಧ್ವಜ ಕಂಡರೆ ಬೆಂಕಿ ಹಚ್ಚುತ್ತಿದ್ದ ಶಾರೀಕ್ ಗ್ಯಾಂಗ್

    ಬೆಂಗಳೂರು: ಮಂಗಳೂರು (Mangaluru) ಕುಕ್ಕರ್ ಬಾಂಬರ್ ಶಾರೀಕ್‍ನ (Shariq) ಮುಖವಾಡ ಇನ್ನಷ್ಟು ಬಯಲಾಗಿದೆ. ಪಕ್ಕಾ ಮತೀಯವಾದಿ ಆಗಿದ್ದ ಶಾರೀಕ್, ತುಂಗಾನದಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಬಳಿಕ ತಲೆಮರೆಸಿಕೊಂಡಿದ್ದ. ಈತ ಹಾಗೂ ಈತನ ಗ್ಯಾಂಗ್ ಕೇವಲ ಸಾರ್ವಜನಿಕರ ಜೀವ ತೆಗೆಯೋದು ಮಾತ್ರವಲ್ಲದೇ, ರಾಷ್ಟ್ರಧ್ವಜವನ್ನು ಸುಡುವುದು ಇವರ ಖಯಾಲಿ ಆಗಿತ್ತು. ಈಗಾಗಲೇ ರಾಷ್ಟ್ರಧ್ವಜ ಸುಟ್ಟಿರುವ ಬಗ್ಗೆ ಎನ್‍ಐಎ (NIA) ಎಫ್‍ಐಆರ್‌ನಲ್ಲಿ (FIR) ಉಲ್ಲೇಖಿಸಿದೆ.

    ನವೆಂಬರ್ 15ರಂದು ಎನ್‍ಐಎ ಎಫ್‍ಐಆರ್ ದಾಖಲಿಸಿದೆ. ಮಂಗಳೂರು ಆಟೋ ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಎರಡು ದಿನದಲ್ಲಿ ಎನ್‍ಐಎ ತನಿಖೆಗೆ ವಹಿಸೋ ಸಾಧ್ಯತೆ ಇದೆ. ತನಿಖೆ ಬಳಿಕ ಶಾರೀಕ್ ಪಾತ್ರದ ಇನ್ನಷ್ಟು ಸ್ಫೋಟಕ ಸತ್ಯಗಳು ಹೊರಬರಬೇಕಿದೆ. ಇದೀಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿರುವ ಎಫ್‍ಐಆರ್‌ನಲ್ಲಿ ಶಿವಮೊಗ್ಗದ ಮಾಝ್, ಯಾಸಿನ್ ಜೊತೆಯಲ್ಲಿ ಶಾರೀಕ್ ಕೂಡ ಭಾಗಿಯಾಗಿದ್ದ. ಆದರೆ ಆ ಸಂದರ್ಭದಲ್ಲಿ ಶಾರೀಕ್‌ ತಪ್ಪಿಸಿಕೊಂಡಿದ್ದ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಈತ ಸುಟ್ಟು ಹಾಕಿರುವ ಭಾರತದ ಧ್ವಜದ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಅಷ್ಟೇ ಅಲ್ಲದೇ ಮಾಝ್ ಮನೆಯಲ್ಲಿ ಸ್ಫೋಟಕ ವಸ್ತುಗಳ ವಶಕ್ಕೆ ಪಡೆದಿದ್ದ ಪೊಲೀಸರಿಗೆ ಸುಟ್ಟಿರುವ ರಾಷ್ಟ್ರಧ್ವಜವು ಸಿಕ್ಕಿದ್ದು, ಅದನ್ನು ವಶಕ್ಕೆ ಪಡೆದಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಇನ್ನೂ ಭಾರತದ ಬಾವುಟ ಕಂಡರೆ ಶಾರೀಕ್‍ಗೆ ಆಗುತ್ತಿರಲಿಲ್ಲ. ಭಾರತದ ಬಾವುಟ ಸುಡಬೇಕು. ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡಬೇಕು ಎಂಬ ಉದ್ದೇಶವನ್ನು ಈತ ಇಟ್ಟುಕೊಂಡಿದ್ದ. ಈ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜದಲ್ಲಿರುವ ಕೇಸರಿ, ಬಿಳಿ, ಹಸಿರು ಈತನಿಗೆ ಕಣ್ಣು ಕುಕ್ಕುತ್ತಾ ಇತ್ತಂತೆ. ಅದಕ್ಕೆ ಗ್ರಾಹಕನ ಸೋಗಿನಲ್ಲಿ ಭಾರತದ ಬಾವುಟ ತರೋದು, ಅದಕ್ಕೆ ಬೆಂಕಿ ಹಚ್ಚಿ ವಿಕೃತ ಸಂತೋಷ ಪಡುತ್ತಾ ಇದ್ದ ಎಂಬ ಸ್ಫೋಟಕ ವಿಷಯ ಬಯಲಾಗಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಮಂಗಳೂರು: ಕುಕ್ಕರ್‌ ಸ್ಫೋಟದ(Mangaluru Blast Case) ರೂವಾರಿ, ಬಾಂಬರ್‌ ಶಾರೀಕ್(Shariq) ಗುಣಮುಖನಾಗಲು 25 ದಿನ ಬೇಕು ಎಂಬ ವಿಚಾರ ಸಿಕ್ಕಿದೆ.

    ಕಂಕನಾಡಿಯಲ್ಲಿರುವ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ Father Muller Hospital) ಶಾರೀಕ್ ದಾಖಲಾಗಿದ್ದು, 8 ಮಂದಿ ತಜ್ಞ ವೈದ್ಯರು ಆರೋಗ್ಯವನ್ನು ಗಮನಿಸುತ್ತಿದ್ದಾರೆ. ಶೇ.45 ರಷ್ಟು ದೇಹದ ಭಾಗ ಸುಟ್ಟು ಹೋಗಿರುವುದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿವೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

     

    ರಿಕ್ಷಾದಲ್ಲಿ ಸ್ಫೋಟಗೊಂಡು ಸಿಡಿದ ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿದೆ. ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿದೆ.

    ಶಿವಮೊಗ್ಗದಲ್ಲಿ ಬಾಂಬ್‌ ಸ್ಫೋಟದ ಪರೀಕ್ಷೆ ನಡೆಸಿದ್ದ ಪ್ರಕರಣದಲ್ಲಿ ಶಾರೀಕ್‌ ಎ1 ಆರೋಪಿಯಾಗಿದ್ದಾನೆ. ಮಂಗಳೂರು ಸ್ಫೋಟಕ್ಕೂ ಮುನ್ನ ಆತ ತಮಿಳುನಾಡಿನ ಕೊಯಮತ್ತೂರಿಗೆ ಹೋಗಿದ್ದ. ಅಷ್ಟೇ ಅಲ್ಲದೇ ಕೇರಳಕ್ಕೂ ತೆರಳಿದ್ದ.

    ಮೈಸೂರಿನ ಕೊಠಡಿಯಲ್ಲಿ ಸ್ಫೋಟಕ ಸಾಮಾಗ್ರಿಗಳು ಸಿಕ್ಕಿರುವುದರಿಂದ ಉಗ್ರರ ಗ್ಯಾಂಗ್‌ ಬಗ್ಗೆ ಮಾಹಿತಿ ಪಡೆಯಲು ಆತನ ವಿಚಾರಣೆ ಅಗತ್ಯವಾಗಿದೆ. ಈ ಕಾರಣಕ್ಕೆ ಆತನ ಆರೋಗ್ಯದ ಮೇಲೆ ಪೊಲೀಸರು ಸಂಪೂರ್ಣ ನಿಗಾ ಇರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ಗೆ (Mangaluru Bomb Blast Case) ಸಂಬಂಧಿಸಿದಂತೆ ತಮಿಳುನಾಡು (Tamil Nadu), ಕೇರಳ ಎಲ್ಲಾ ಕಡೆಗಳಲ್ಲೂ ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಜಿಪಿ ಪ್ರವೀಣ್ ಸೂದ್ (Praveen Sood) ಹೇಳಿದ್ದಾರೆ.

    ಮಂಗಳೂರು ಪೊಲೀಸ್ ಆಯುಕ್ತರ (Mangaluru Police Commissioner) ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾರೀಕ್ (Shariq) ಕೃತ್ಯಕ್ಕೆ ಹಣದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಈಗಲೇ ಎಲ್ಲ ಮಾಹಿತಿಗಳನ್ನು ಬಹಿರಂಗಗೊಳಿಲು ಸಾಧ್ಯವಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತೆ. ಈಗಲೇ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿದ್ರೆ ಮುಂದಿನ ವಿಚಾರಣೆಗೆ ತೊಂದರೆಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

    ಎನ್‌ಐಎ (NIA) ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ಇದೆ. ಸದ್ಯದಲ್ಲೇ ಸದ್ಯದಲ್ಲೇ ಅಧಿಕೃತವಾಗಿ ಈ ಪ್ರಕರಣ ಎನ್‌ಐಎಗೆ ಹಸ್ತಾಂತರ ಆಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ನಮ್ಮ ತನಿಖೆ ಆಗ್ತಿದೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ವಿಚಾರಣೆ ಮುಂದುವರಿಸುತ್ತಾರೆ. ಪ್ರತಿಯೊಬ್ಬರ ಸಹಕಾರಕ್ಕಾಗಿ ನಾವು ಹಲವು ಜನರನ್ನ ವಿಚಾರಣೆ ಮಾಡುತ್ತೇವೆ. ಅವರನ್ನು ನಾವು ಅರೆಸ್ಟ್ ಮಾಡ್ತಿಲ್ಲ. ವಿಚಾರಣೆಗೆ ಮಾತ್ರ ಕರೆದು ತರ್ತೀವಿ ಅಷ್ಟೇ ಹೊರತು ಅವರು ಅಪರಾಧಿಗಳಾಗಿರುವುದಿಲ್ಲ. ಅವರನ್ನು ಅಪರಾಧಿಗಳಂತೆ ಬಿಂಬಿಸುವುದನ್ನು ಬಿಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

    ಈಗಾಗಲೇ ಬೆಂಗಳೂರು ಸೇರಿ 8 ಕಡೆ ದಾಳಿ ನಡೆಸಿ, 4 ಜನರನ್ನ ವಶಕ್ಕೆ ಪಡೆದು ವಿಚಾರಣೆ ಮಾಡ್ತಿದ್ದೇವೆ. ಆದರೆ ಆರೋಪಿಗಳು ಅಂತ ಯಾರನ್ನೂ ಕರೆತಂದಿಲ್ಲ. ಒಬ್ಬರನ್ನು ಹಿಡಿಯುವ ಪ್ರಶ್ನೆಯಲ್ಲ, ಕೃತ್ಯದ ಹಿಂದಿರುವವರೂ ನಮಗೆ ಬೇಕು. ಅದಕ್ಕಾಗಿ ನಾವು ಎಲ್ಲಾ ರೀತಿಯಿಂದಲೂ ತನಿಖೆ ಮಾಡ್ತಾ ಇದೀವಿ ಎಂದು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಯಮತ್ತೂರು ಬಾಂಬ್‌ ಸ್ಫೋಟ, ಪಿಎಫ್‌ಐ ನಾಯಕರ ಜೊತೆ ಬಾಂಬರ್‌ ಶಾರೀಕ್‌ಗೆ ನಂಟು

    ಕೊಯಮತ್ತೂರು ಬಾಂಬ್‌ ಸ್ಫೋಟ, ಪಿಎಫ್‌ಐ ನಾಯಕರ ಜೊತೆ ಬಾಂಬರ್‌ ಶಾರೀಕ್‌ಗೆ ನಂಟು

    ಮಂಗಳೂರು: ಉಗ್ರರ ಕೃತ್ಯಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಭಾಗಿಯಾಗಿ ನಿಷೇಧಕ್ಕೆ ಒಳಗಾಗಿರುವ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆಯ ನಾಯಕರ ಜೊತೆ ಶಾರೀಕ್(Shariq) ನಂಟು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

    ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌(Mangaluru Blast Case) ಸ್ಫೋಟಿಸಿದ ಪ್ರಕರಣದ ಆರೋಪಿ ಮೊಹಮ್ಮದ್‌ ಶಾರೀಕ್‌ಗೂ ತಮಿಳುನಾಡಿನ ಕೊಯಮತ್ತೂರಿನಲ್ಲಿ(Coimbatore) ದೀಪಾವಳಿ ಸಮಯದಲ್ಲಿ ಅ.23 ರಂದು ಸಂಗಮೇಶ್ವರ ದೇವಸ್ಥಾನ ಬಳಿಯ ನಡೆದಿದ್ದ ಕಾರು ಬಾಂಬ್‌ ಸ್ಫೋಟ ಪ್ರಕರಣಕ್ಕೂ(Car Bomb Blast)ನಂಟು ಇರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಅನುಮಾನ ಯಾಕೆ?
    ಸಂಗಮೇಶ್ವರ ದೇವಸ್ಥಾನ ಬಳಿ ಸ್ಫೋಟ ಸಂಭವಿಸುವುದಕ್ಕೆ ಒಂದೂವರೆ ತಿಂಗಳ ಮೊದಲು ಶಾರೀಕ್‌ ಕೊಯಮತ್ತೂರಿಗೆ ಹೋಗಿದ್ದ ವಿಚಾರ ಬೆಳಕಿಗೆ ಬಂದಿದೆ. ಅಲ್ಲೂ ಸುಳ್ಳು ಮಾಹಿತಿ ನೀಡಿ ಹಿಂದೂ ಎಂದು ಪರಿಚಯಿಸಿಕೊಂಡು ಮೂರು ನಾಲ್ಕು ದಿನ ಅಲ್ಲಿಯೇ ಬಾಡಿಗೆ ಕೊಠಡಿಯಲ್ಲಿ ನೆಲೆಸಿದ್ದ. ಇಲ್ಲಿ ಬಳ್ಳಾರಿಯ ಸಂಡೂರಿನ ಅರುಣ್‌ ಕುಮಾರ್‌ ಗಾವಳಿ ಅವರ ಆಧಾರ್‌ ಕಾರ್ಡ್‌ ನೀಡಿದ್ದ. ಅರುಣ್‌ ಕುಮಾರ್‌ ಗಾವಳಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಅವರ ಆಧಾರ್‌ ಕಾರ್ಡ್ 6 ತಿಂಗಳ ಹಿಂದೆ ಕಳವಾಗಿದ್ದು ಗೊತ್ತಾಗಿತ್ತು. ಅವರು ಕೊಯಮತ್ತೂರಿಗೆ ಹೋಗಿಯೇ ಇರಲಿಲ್ಲ ವಿಚಾರ ದೃಢಪಟ್ಟಿತ್ತು.

    ಕೊಯಮತ್ತೂರು ಬಾಂಬ್‌ ಸ್ಫೋಟದ ಆರೋಪಿಗಳಿಗೂ ಶಾರಿಕ್‌ಗೂ ನಂಟು ಇರುವ ಬಗ್ಗೆ ಪೊಲೀಸರಿಗೆ ಈಗ ಬಲವಾದ ಸಂಶಯ ಇದೆ. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ಶಾರೀಕ್‌ ಗಾಯಗೊಂಡ ಮಾಹಿತಿ ಸಿಗುತ್ತಿದ್ದಂತೆಯೇ ಕೊಯಮತ್ತೂರು ಪೊಲೀಸರ ತಂಡವೂ ಮಂಗಳೂರಿಗೆ ಆಗಮಿಸಿದೆ.

    ಕೊಯಮತ್ತೂರು ನಂಟು ಏನು?
    ಕೊಯಮತ್ತೂರಿನಲ್ಲಿ ಪಿಎಫ್‌ಐ ನಾಯಕರನ್ನು ಶಾರೀಕ್ ಭೇಟಿಯಾಗಿದ್ದ ಶಂಕೆ ವ್ಯಕ್ತವಾಗಿದೆ. ಜೊತೆಗೆ 1998ರ ಕೊಯಮತ್ತೂರು ಬಾಂಬ್ ಬ್ಲಾಸ್ಟ್ ರೂವಾರಿ ಎಸ್‌‌.ಎ.ಬಾಷಾ ಸಂಬಂಧಿ ಮುಹಮ್ಮದ್ ತಲ್ಕನನ್ನು ಭೇಟಿಯಾದ ಅನುಮಾನ ಬಂದಿದೆ. ಮೋಸ್ಟ್ ವಾಂಟೆಡ್‌ ಅಬ್ದುಲ್ ಮತೀನ್‌ನಿಂದ ಮುಹಮ್ಮದ್ ತಲ್ಕ ಪರಿಚಯವಾಗಿರಬಹುದು ಎನ್ನಲಾಗುತ್ತಿದೆ. ತಮಿಳುನಾಡು ಹಿಂದೂ ಮುಖಂಡನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ತಮಿಳುನಾಡಿನ ಹಲವು ಉಗ್ರ ಜಾಲ ಹೊಂದಿದ್ದವರ ಜೊತೆ ಮತೀನ್‌ಗೆ ಸಂಪರ್ಕ ಇದ್ದು ಆತನೇ ಶಾರೀಕ್‌ಗೆ ಪರಿಚಯ ಮಾಡಿದ್ದಾನೆ ಎಂಬ ಅನುಮಾನ ಬಂದಿದೆ. ಈ ಅನುಮಾನ ಬಂದ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲದೇ ಶಾರೀಕ್‌ ತಮಿಳುನಾಡಿಗೆ ಹೋಗಿದ್ದಾಗ ಅಲ್ಲಿ ತಂಗಲು ಪಿಎಫ್‌ಐ ನಾಯಕರು ಶಾರೀಕ್‌ಗೆ ಸಹಾಯ ಮಾಡಿರಬಹುದು ಎಂಬ ಶಂಕೆ ಬಂದಿದೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

    ಮಾಧ್ಯಮಗಳ ಜೊತೆ ಮಾತನಾಡಿದ್ದ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ಕೊಯಮತ್ತೂರಿನ ಸ್ಫೋಟ ಪ್ರಕರಣದ ಆಯಾಮದಲ್ಲೂ ತನಿಖೆ ನಡೆಯಲಿದೆ. ಮಂಗಳೂರಿನ ಘಟನೆ ನಡೆಯುವುದಕ್ಕೆ ಮುನ್ನ ಆರೋಪಿ ಯಾವೆಲ್ಲ ಪ್ರದೇಶಗಳಿಗೆ ಭೇಟಿ ನೀಡಿದ್ದ, ಯಾರನ್ನೆಲ್ಲ ಭೇಟಿ ಮಾಡಿದ್ದ ಎಂಬ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದಿದ್ದರು.

    ತಮಿಳಿನಲ್ಲಿ ಮಾತನಾಡುತ್ತಿದ್ದ:
    ಮೈಸೂರಿನಲ್ಲಿ ಮೊಬೈಲ್‌ ತರಬೇತಿ ಕೇಂದ್ರದಲ್ಲಿದ್ದಾಗ ಶಾರೀಕ್‌ ಮೊಬೈಲ್‌ನಲ್ಲಿ ತಮಿಳು ಭಾಷೆಯಲ್ಲಿ ಮಾತನಾಡುತ್ತಿದ್ದ. ಧಾರವಾಡ ಮೂಲದ ನಿನಗೆ ತಮಿಳು ಹೇಗೆ ಬರುತ್ತದೆ ಎಂದು ಪ್ರಶ್ನಿಸಿದ್ದಕ್ಕೆ ಆತ ನಾನು ಕೆಲ ಸಮಯ ತಮಿಳುನಾಡಿನಲ್ಲಿ ನೆಲೆಸಿದ್ದೆ. ಅಲ್ಲೂ ನನಗೆ ಸ್ನೇಹಿತರಿದ್ದಾರೆ. ಅವರ ಜೊತೆ ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದ್ದ.

    1998ರಲ್ಲಿ ಏನಾಗಿತ್ತು?
    ಫೆ.14 ಶನಿವಾರ ಕೊಯಮತ್ತೂರಿನ 11 ಜಾಗದಲ್ಲಿ 12 ಬಾಂಬ್‌ ಸ್ಫೋಟಗೊಂಡಿತ್ತು. ಈ ದಾಳಿಯಲ್ಲಿ 58 ಮಂದಿ ಮೃತಪಟ್ಟಿದ್ದರೆ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 12 ಕಿ.ಮೀ ಅಂತರದಲ್ಲಿ ಸ್ಫೋಟ ಸಂಭವಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

    ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

    ಬೆಂಗಳೂರು/ಮಂಗಳೂರು: ಉಗ್ರ ಕೃತ್ಯಕ್ಕೆ ಹಿಂದೂ ಮುಖವಾಡ ಅಂಟಿಸಿ ʼಹಿಂದೂ ಟೆರರಿಸಂʼ ಮಾಡಲು ಉಗ್ರರು ಸ್ಕೆಚ್‌ ಹಾಕಿರುವ ಸ್ಫೋಟಕ ವಿಚಾರ ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ(Mangaluru Blast Case) ಪ್ರಕರಣದಿಂದ ಬೆಳಕಿಗೆ ಬಂದಿದೆ.

    ಹೌದು. ಈ ಹಿಂದೆ ಮುಂಬೈ ದಾಳಿ(Mumbai Attack) ಪ್ರಕರಣದ ನಡೆದಾಗಲೂ ಕಸಬ್‌(Kasab) ಹಿಂದೂ ವ್ಯಕ್ತಿಯಂತೆ ಪೋಸ್‌ ನೀಡಿದ್ದ. ಈಗ ಮಂಗಳೂರು ಸ್ಫೋಟ ಪ್ರಕರಣದಲ್ಲೂ ಶಾರೀಕ್‌ ಹಿಂದೂ ವ್ಯಕ್ತಿ ವೇಷ ಧರಿಸಿ ಕೃತ್ಯ ನಡೆಸಲು ಸಂಚು ರೂಪಿಸಿರುವುದು ಗೊತ್ತಾಗಿದೆ.

    ಕುಕ್ಕರ್ ಬಾಂಬ್ ಸ್ಫೋಟಿಸಿ ಹಿಂದೂ ಭಯೋತ್ಪಾದನೆ(Hindu Terrorism) ಅಂತಾ ಸುಳ್ಳು ಸುದ್ದಿ ಹಬ್ಬಿಸುವಂತೆ ಮಾಡಲು ಶಾರೀಕ್‌(Shariq) ಸ್ಕೆಚ್‌ ಹಾಕಿದ್ದ. ಈ ಮೂಲಕ ಕರಾವಳಿಯಲ್ಲಿ ರಕ್ತದೋಕುಳಿ ನಡೆಸಿ “ಕೇಸರಿ ಭಯೋತ್ಪಾದನೆ” ಅಂತಾ ಸುಳ್ಳು ಸುದ್ದಿ ಹಬ್ಬಿಸುವಂತೆ ಮಾಡಲು ಶಾರೀಕ್‌ ಪ್ಲ್ಯಾನ್‌ ಮಾಡಿದ್ದ. ಆದರೆ ಕುಕ್ಕರ್‌ ಬಾಂಬ್‌ ರಿಕ್ಷಾದಲ್ಲೇ ಸ್ಫೋಟಗೊಳ್ಳುವ ಮೂಲಕ ಉಗ್ರನ ಈ ಮಾಸ್ಟರ್‌ ಪ್ಲ್ಯಾನ್‌ ವಿಫಲವಾಗಿದೆ.

    ಪ್ಲ್ಯಾನ್‌ ಏನು?
    ಕುಕ್ಕರ್ ಬಾಂಬ್ ಸ್ಫೋಟಿಸುವ ಮುನ್ನ ಶಾರೀಕ್‌ ತನ್ನ ಐಡೆಂಟಿಟಿಯನ್ನು ಸಂಪೂರ್ಣ ಹಿಂದೂವಾಗಿ ಬದಲಾಯಿಸಿದ್ದ. ಹುಬ್ಬಳ್ಳಿ ಮೂಲದ ಪ್ರೇಮರಾಜ್ ಅವರ ಆಧಾರ್ ಕಾರ್ಡ್ ಬಳಕೆ ಮಾಡಿ ಪ್ರೇಮರಾಜ್ ಆಗಿ ಸಂಪೂರ್ಣವಾಗಿ ಬದಲಾಗಿದ್ದ.

    ಹೆಸರು ಬದಲಾವಣೆ ಮಾಡಿದ್ದು ಮಾತ್ರವಲ್ಲದೇ ತಾನೊಬ್ಬ ಪರಮ ದೈವಭಕ್ತ ಎಂದು ಬಿಂಬಿಸಲು ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್‌ ಸ್ಥಾಪನೆ ಮಾಡಿದ್ದ ಆದಿಯೋಗಿ ಶಿವನ ಪ್ರತಿಮೆಯನ್ನು ವಾಟ್ಸಪ್‌ ಡಿಪಿಯಲ್ಲಿ ಹಾಕಿದ್ದ. ಅಷ್ಟೇ ಅಲ್ಲದೇ ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಹೆಸರಿನಲ್ಲಿ ಸಿಮ್ ಕಾರ್ಡ್‌ ಖರೀದಿ ಮಾಡಿದ್ದ. ಜೊತೆಗೆ ಹಿಂದೂ ಹೆಸರಿನ ಆಧಾರ್ ಕಾರ್ಡ್‌ ಅನ್ನು ಜೊತೆಯಲ್ಲೇ ಇಟ್ಟುಕೊಳ್ಳುತ್ತಿದ್ದ. ಇದನ್ನೂ ಓದಿ: ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

     

    ಮಂಗಳೂರಿನಲ್ಲಿ ಕೃತ್ಯ ನಡೆಯುವ ಮೊದಲು ಶಾರೀಕ್‌ ಕೇಸರಿ ಬಣ್ಣದ ಶರ್ಟ್‌/ ಶಾಲು ಧರಿಸಿದ್ದ. ಬಾಂಬ್‌ ಸ್ಫೋಟ ನಡೆದ ಬಳಿಕ ರಸ್ತೆಯಲ್ಲಿದ್ದಾಗ ಶಾರೀಕ್‌ ಸೊಂಟದಲ್ಲಿ ಕೇಸರಿ ಬಣ್ಣದ ಧಿರಿಸು ಇತ್ತು.

    ಕೆ.ಆರ್.‌‌ ಮೊಹಲ್ಲಾದಲ್ಲಿರುವ ಎಸ್‌ಎಂಎಂ ಮೊಬೈಲ್ ರಿಪೇರಿ ತರಬೇತಿ ಕೇಂದ್ರದಲ್ಲಿ ಶಾರೀಕ್‌ ಮೊಬೈಲ್ ರಿಪೇರಿ ತರಬೇತಿ ಪಡೆಯುತ್ತಿದ್ದ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಸಂಸ್ಥೆಯ ಮುಖ್ಯಸ್ಥ ಪ್ರಸಾದ್, ಶಾರೀಕ್‌ ತನ್ನ ವಾಟ್ಸಪ್‌ ಡಿಪಿಯಲ್ಲಿ ಈಶ್ವರನ ಫೋಟೋ ಹಾಕಿದ್ದ. ಧಾರವಾಡ ಶೈಲಿಯ ಕನ್ನಡವನ್ನೇ ಮಾತಾಡುತ್ತಿದ್ದ. ವೇಷ ಭೂಷಣವಾಗಲಿ, ಬಟ್ಟೆಯಾಗಲಿ ಯಾವುದರಲ್ಲೂ ಅವನು ಮುಸ್ಲಿಂ ವ್ಯಕ್ತಿ ಎಂಬ ಅನುಮಾನವೇ ಬಂದಿರಲಿಲ್ಲ. ಶುಕ್ರವಾರ ನಮಾಜ್‌ ಮಾಡಲು ಸಹ ತೆರಳುತ್ತಿರಲಿಲ್ಲ ಎಂದು ಹೇಳಿದ್ದರು. ಈ ಮೂಲಕ ತಾನು ಹಿಂದೂ ವ್ಯಕ್ತಿ ಎಂದು ಬಿಂಬಿಸುವಲ್ಲಿ ಯಶಸ್ವಿಯಾಗಿದ್ದ.

    ಅಜೆಂಡಾ ಏನು?
    ಒಟ್ಟಿನಲ್ಲಿ ರಕ್ತಪಾತದ ನೆತ್ತರ ಹನಿಯನ್ನು ಹಿಂದೂತ್ವಕ್ಕೆ ಅಂಟಿಸಲು ಕಸಬ್ ಮಾದರಿಯಲ್ಲಿ ಶಾರೀಕ್‌ ಸಂಚು ರೂಪಿಸಿದ್ದ ಎನ್ನುವುದು ಮೇಲ್ನೋಟಕ್ಕೆ ದೃಢಪಡುತ್ತದೆ. ಹಿಂದೂಗಳಿಂದ ಕೃತ್ಯ ಎಸಗಲಾಗಿದೆ ಎಂದು ಬಿಂಬಿಸಿ ಸಮಾಜಕ್ಕೆ ʼಹಿಂದೂ ಭಯೋತ್ಪಾದನೆʼ ಎಂಬ ಸಂದೇಶ ರವಾನೆ ಮಾಡಲು ಉಗ್ರರು ಮುಂದಾಗಿದ್ದಾರೆ ಎನ್ನುವುದು ಮುಂಬೈ ದಾಳಿ ನಡೆದ ಬಳಿಕ ದೃಢಪಟ್ಟಿತ್ತು. ಈಗ ಈ ಪ್ರಕರಣದ ಬಳಿಕ ಮತ್ತೊಮ್ಮೆ ಉಗ್ರರ ಅಜೆಂಡಾ ದೃಢಪಟ್ಟಿದೆ.

    ಕಸಬ್‌ ಏನು ಮಾಡಿದ್ದ?
    ಮುಂಬೈ ಮೇಲೆ 2008ರ ನವೆಂಬರ್‌ 26 ರಂದು ದಾಳಿ ನಡೆಸಿ ಸೆರೆ ಸಿಕ್ಕ ಉಗ್ರ ಕಸಬ್‌ ಸಹ ಹಿಂದುತ್ವದ ಮುಖವಾಡ ಹಾಕಿದ್ದ. ತನ್ನ ಕೈಗೆ ಮುಂಬೈ ಸಿದ್ಧಿವಿನಾಯಕನ ಕೇಸರಿ ದಾರವನ್ನು ಕಟ್ಟಿಕೊಂಡಿದ್ದ. ದಾಳಿಗೂ ಮುನ್ನ ಗಡ್ಡ-ಮೀಸೆ ತೆಗೆದು ಹಿಂದೂಗಳ ಸ್ಟೈಲ್‍ನಂತೆ ಹೇರ್ ಕಟ್ ಮಾಡಿದ್ದ.

    ಕಸಬ್‍ ಬೆಂಗಳೂರಿನ ನಿವಾಸಿ ಸಮೀರ್ ದಿನೇಶ್ ಚೌಧರಿ ಎಂದು ಬಿಂಬಿಸುವುದು ಲಷ್ಕರ್ ಎ ತೊಯ್ಬಾ ಸಂಘಟನೆಯ ಸಂಚಾಗಿತ್ತು. ಇದಕ್ಕೆ ತಕ್ಕನಾಗಿ ಫೇಕ್ ಐಡಿ ಕಾರ್ಡ್ ಗಳು ಸಜ್ಜಾಗಿತ್ತು. ತಪ್ಪೊಪ್ಪಿಗೆ ವೇಳೆಯೂ ಕಸಬ್ ಹಿಂದೂ ಎಂದೇ ಗುರುತಿಸಿಕೊಂಡಿದ್ದ. ಆದರೆ ಪೊಲೀಸರ ತನಿಖೆಯಿಂದ ಇದು ಬಯಲಾಗಿತ್ತು. ಮುಂಬೈಯ ನಿವೃತ್ತ ಪೊಲೀಸ್ ಕಮೀಷನರ್ ರಾಕೇಶ್ ಮರಿಯಾ ತಮ್ಮ ‘Let Me Say It Now’ ಎಂಬ ಪುಸ್ತಕದಲ್ಲಿ ಹಿಂದೂ ಟೆರರಿಸಂ ಆಗಿ ಬಿಂಬಿಸುವ ಈ ಪ್ಲ್ಯಾನ್ ಬಗ್ಗೆ ವಿವರವಾದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]