Tag: Sharmila Mandre

  • ದರ್ಶನ್‌ ಪ್ರಕರಣದ ಬಗ್ಗೆ ಇತ್ತೀಚೆಗೆ ಗೊತ್ತಾಯ್ತು: ಶರ್ಮಿಳಾ ಮಾಂಡ್ರೆ

    ದರ್ಶನ್‌ ಪ್ರಕರಣದ ಬಗ್ಗೆ ಇತ್ತೀಚೆಗೆ ಗೊತ್ತಾಯ್ತು: ಶರ್ಮಿಳಾ ಮಾಂಡ್ರೆ

    ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ (Darshan) ಬಗ್ಗೆ ಮೊದಲ ಬಾರಿಗೆ ನಟಿ ಶರ್ಮಿಳಾ ಮಾಂಡ್ರೆ ಮಾತನಾಡಿದ್ದಾರೆ. ದರ್ಶನ್ ಪ್ರಕರಣವನ್ನು ಕಾನೂನು ನಿರ್ಧಾರ ಮಾಡುತ್ತದೆ ಎಂದು ನಟಿ ಮಾತನಾಡಿದ್ದಾರೆ.‌ ಇದನ್ನೂ ಓದಿ:ಮಗಧೀರ ವಿಲನ್ ಈಗ ಹೀರೋ- ದೇವ್ ಗಿಲ್ ನಟನೆಯ ‘ಅಹೋ ವಿಕ್ರಮಾರ್ಕ’ ಚಿತ್ರದ ಸಾಂಗ್ ರಿಲೀಸ್

    ‘ನವಗ್ರಹ’ ಟೈಮ್‌ನಲ್ಲಿ ದರ್ಶನ್ ಅವರ ಜೊತೆ ಕೆಲಸ ಮಾಡಿರುವ ಅನುಭವ ಚೆನ್ನಾಗಿತ್ತು. ದರ್ಶನ್ ಅವರ ಫುಲ್ ಫ್ಯಾಮಿಲಿ ನನಗೆ ಚೆನ್ನಾಗಿ ಗೊತ್ತು. ‘ನವಗ್ರಹ’ (Navagraha) ಚಿತ್ರವನ್ನು ದರ್ಶನ್ ತಮ್ಮ ದಿನಕರ್ ಸರ್ ಡೈರೆಕ್ಷನ್ ಮಾಡುತ್ತಿದ್ದರು. ಸೆಟ್‌ನಲ್ಲಿ ದರ್ಶನ್ ಸರ್ ಚೆನ್ನಾಗಿರುತ್ತಿದ್ದರು. 2007ರಲ್ಲಿ ‘ನವಗ್ರಹ’ ಶೂಟಿಂಗ್ ಆಗಿತ್ತು ಎಂದಿದ್ದಾರೆ.

    ಇನ್ನೂ ಈ ಪ್ರಕರಣದ ಬಗ್ಗೆ ನನಗೆ ವಿಷಯ ಗೊತ್ತಿರಲಿಲ್ಲ. ಆದರೆ ಇತ್ತೀಚೆಗೆ ಗೊತ್ತಾಯ್ತು. ಆದರೆ ಇದರ ಬಗ್ಗೆ ಕಾನೂನು ನಿರ್ಧರಿಸಲಿ ಎಂದಷ್ಟೇ ಶರ್ಮಿಳಾ ಮಾಂಡ್ರೆ ಮಾತನಾಡಿದ್ದಾರೆ.

  • ‘ಪೌಡರ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ಕಿಚ್ಚ ಸುದೀಪ್

    ‘ಪೌಡರ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ಕಿಚ್ಚ ಸುದೀಪ್

    ನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಈ ಸಿನಿಮಾಗೆ ‘ಪೌಡರ್’ (Powder) ಎಂದು ಹೆಸರಿಡಲಾಗಿದೆ.

    ಪೌಡರ್ ಚಿತ್ರದ ಮುಹೂರ್ತ (Muhurta) ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ (Sudeep) ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ನಿರ್ಮಾಪಕ ಕಾರ್ತಿಕ್ ಗೌಡ ಅವರ ತಂದೆ ರಾಮಕೃಷ್ಣೇಗೌಡ ಕ್ಯಾಮೆರಾ ಸ್ವಿಚ್ ಆನ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.

    ಪೌಡರ್ ಒಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್ ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂದು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುತ್ತಿದೆ.

    ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಈ ಬಹುತಾರಾಗಣದ ಚಿತ್ರದಲ್ಲಿ ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ-ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.  ನಮ್ಮ ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ಪೌಡರ್. ಬಹು ತಾರಾಗಣವಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. 2024ರ ಏಪ್ರಿಲ್ 5 ಚಿತ್ರ‌ ಬಿಡುಗಡೆಯಾಗಲಿದೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ತಿಳಿಸಿದರು.

    ಕೆ.ಆರ್‌.ಜಿ ಸ್ಟುಡಿಯೋಸ್ ಜೊತೆಗೂಡಿ ಈ ಚಿತ್ರ ನಿರ್ಮಾಣ ಮಾಡುತ್ತಿರುವುದಕ್ಕೆ ಟಿವಿಎಫ್ ಸಂಸ್ಥೆಯ ಅರುಣಭ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಕಾಮಿಡಿ ಜಾನರ್ ನ ಈ ಕಥೆ ಎಲ್ಲರಿಗೂ ಹಿಡಿಸಲಿದೆ ಎಂದರು ನಿರ್ದೇಶಕ ಜನಾರ್ದನ್ ಚಿಕ್ಕಣ್ಣ.  ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಎರಡು ದೊಡ್ಡ ಸಂಸ್ಥೆಗಳು ಸೇರಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟಿಸುತ್ತಿರುವುದು ಖುಷಿಯ ವಿಚಾರ ಎನ್ನುತ್ತಾರೆ ನಾಯಕ ದಿಗಂತ್ (Digant).  ಶರ್ಮಿಳಾ ಮಾಂಡ್ರೆ (Sharmila Mandre), ಧನ್ಯ (Dhanya Ram Kumar), ಅನಿರುದ್ಧ್ ಆಚಾರ್ಯ, ಅಚ್ಯುತ ಕುಮಾರ್, ರವಿಶಂಕರ್ ಗೌಡ ಮುಂತಾದ ಕಲಾವಿದರು “ಪೌಡರ್” ಬಗ್ಗೆ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದಸರಾ’ ನಂತರ ಮತ್ತೆ ಜೊತೆಯಾದ ಸತೀಶ್ ನೀನಾಸಂ ಮತ್ತು ಶರ್ಮಿಳಾ

    ‘ದಸರಾ’ ನಂತರ ಮತ್ತೆ ಜೊತೆಯಾದ ಸತೀಶ್ ನೀನಾಸಂ ಮತ್ತು ಶರ್ಮಿಳಾ

    ಭಿನಯ ಚತುರ ನೀನಾಸಂ ಸತೀಶ್ (Satish Ninasam) ಮತ್ತು ಶರ್ಮಿಳಾ ಮಾಂಡ್ರೆ (Sharmila Mandre) ಈಗಾಗಲೇ ‘ದಸರಾ’ ಸಿನಿಮಾದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಸಿನಿಮಾ ಇನ್ನೂ ರಿಲೀಸ್ ಆಗಿಲ್ಲ. ಈ ನಡುವೆ ಮತ್ತೊಂದು ಹೊಸ ಸುದ್ದಿ ಬಂದಿದ್ದು, ಈ ಜೋಡಿ ಮತ್ತೊಂದು ಸಿನಿಮಾದಲ್ಲಿ (New Movie) ಒಟ್ಟಾಗಿ ಕೆಲಸ ಮಾಡಲಿದೆ. ಈ ಚಿತ್ರಕ್ಕೆ ಪೆಪೆ ಹೆಸರಿನ ಚಿತ್ರ ಮಾಡಿರುವ ಶ್ರೀಲೇಶ್ (Srilesh) ನಿರ್ದೇಶಕ ಎಂದು ಹೇಳಲಾಗುತ್ತಿದೆ.

    ನಿರ್ದೇಶಕರು ಮತ್ತು ಸತೀಶ್ ಈಗಾಗಲೇ ಭೇಟಿಯಾಗಿದ್ದು, ಕಥೆ ಒಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಕಥೆ ತುಂಬಾ ಚೆನ್ನಾಗಿ ಮೂಡಿ ಬಂದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ನೀಡಲಿದೆ. ಸದ್ಯ ನಿರ್ದೇಶಕರು ಪೆಪೆ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡ ನಡೆಯುತ್ತಿದೆ. ಇದನ್ನೂ ಓದಿ:ಪಡ್ಡೆಹುಡುಗರ ನಿದ್ದೆಗೆಡಿಸಿದ ‘ನಾಗಿಣಿ 2’ ಖ್ಯಾತಿಯ ನಮ್ರತಾ

    ದಸರಾ ಸಿನಿಮಾಗೆ ಶರ್ಮಿಳಾ ಮಾಂಡ್ರೆ ಅವರೇ ನಿರ್ಮಾಪಕರು. ಈ ಹೊಸ ಸಿನಿಮಾಗೂ ಅವರೇ ಬಂಡವಾಳ ಹೂಡಲಿದ್ದಾರೆ ಎಂದು ಹೇಳಲಾಗುತ್ತಿದೆ. ದಸರಾ ಸಿನಿಮಾದ ಬಹುತೇಕ ಕೆಲಸ ಮುಗಿದಿದ್ದು, ಮೊದಲ ಬಾರಿಗೆ ಸತೀಶ್ ಮತ್ತು ಶರ್ಮಿಳಾ ಒಟ್ಟಾಗಿ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಮೈಸೂರು ಸೇರಿದಂತೆ ಹಲವು ಭಾಗಗಳಲ್ಲಿ ಸಿನಿಮಾ ಚಿತ್ರೀಕರಣವಾಗಿದೆ.

    ಸತೀಶ್ ಈ ಸಿನಿಮಾದಲ್ಲಿ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ವಿದೇಶದಲ್ಲೂ ಕೆಲ ದೃಶ್ಯಗಳನ್ನು ದಸರಾಗಾಗಿ ಸೆರೆ ಹಿಡಿಯಲಾಗಿದೆ. ಅಲ್ಲದೇ, ಮೈಸೂರು ದಸರಾ ವೇಳೆಯಲ್ಲೂ ಕೆಲವು ಅಂಶಗಳನ್ನು ಸೆರೆ ಹಿಡಿಯಲಾಗಿದೆ. ಇಡೀ ಸಿನಿಮಾ ಕಲರ್ ಫುಲ್ ಆಗಿ ಮೂಡಿ ಬಂದಿದೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ರಮ್ಯಾ ಜೊತೆಯಾಗಿ ಸಿನಿಮಾ ನಿರ್ಮಾಣ ಮಾಡಬೇಕು : ನಟಿ ಶರ್ಮಿಳಾ ಮಾಂಡ್ರೆ

    ನಟಿ ರಮ್ಯಾ ಜೊತೆಯಾಗಿ ಸಿನಿಮಾ ನಿರ್ಮಾಣ ಮಾಡಬೇಕು : ನಟಿ ಶರ್ಮಿಳಾ ಮಾಂಡ್ರೆ

    ಮೋಹಕ ತಾರೆ ರಮ್ಯಾ (Ramya) ಜೊತೆ ಸಿನಿಮಾವೊಂದನ್ನು ನಿರ್ಮಾಣ ಮಾಡುವ ಆಸೆಯನ್ನು ವ್ಯಕ್ತ ಪಡಿಸಿದ್ದಾರೆ ನಟಿ ಶರ್ಮಿಳಾ ಮಾಂಡ್ರೆ (Sharmila Mandre). ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ (Award) ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶರ್ಮಿಳಾ, ‘ರಮ್ಯಾ ಅವರ ಜೊತೆ ನಾನೊಂದು ಸಿನಿಮಾ ನಿರ್ಮಾಣ (Producer) ಮಾಡಬೇಕು. ಇಬ್ಬರೂ ಒಟ್ಟಾಗಿ ವೇದಿಕೆಯ ಮೇಲೆ ಬಂದು ಅತ್ಯುತ್ತಮ ನಿರ್ಮಾಪಕಿ ಪ್ರಶಸ್ತಿಯನ್ನು ತಗೆದುಕೊಳ್ಳಬೇಕು’ ಎಂದರು.

    ನಿರ್ಮಾಪಕಿಯಾಗಿ ಈಗಾಗಲೇ ರಮ್ಯಾ ಸಿನಿಮಾ ರಂಗ ಪ್ರವೇಶ ಮಾಡಿಯಾಗಿದೆ. ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ರಮ್ಯಾ ಅವರೇ ಬಂಡವಾಳ ಹೂಡಿದ್ದಾರೆ. ಶರ್ಮಿಳಾ ಮಾಂಡ್ರೆ ಈಗಾಗಲೇ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ದಸರಾ ಸಿನಿಮಾಗೆ ಇವರೇ ಹಣ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ರಮ್ಯಾ ಮತ್ತು ಶರ್ಮಿಳಾ ಮಾಂಡ್ರೆ ಇಬ್ಬರೂ ಒಟ್ಟಾಗಿ ಸಿನಿಮಾ ಮಾಡಿದರೆ ಅಚ್ಚರಿ ಪಡಬೇಕಿಲ್ಲ. ಇದನ್ನೂ ಓದಿ: ಮುರುಗದಾಸ್ ನಿರ್ದೇಶನದ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ

    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2023ರ ಅತ್ಯುತ್ತಮ  ನಟಿ ಪ್ರಶಸ್ತಿಯನ್ನು ಶರ್ಮಿಳಾ ‘ಗಾಳಿಪಟ 2’ ಚಿತ್ರಕ್ಕಾಗಿ ಪಡೆದಿದ್ದಾರೆ. ಈ ಪ್ರಶಸ್ತಿಯನ್ನು ಸ್ವತಃ ರಮ್ಯಾ ಅವರೇ ಪ್ರದಾನ ಮಾಡಿದ್ದು ವಿಶೇಷವಾಗಿತ್ತು. ಶರ್ಮಿಳಾ ಬಗ್ಗೆ ವೇದಿಕೆಯ ಮೇಲೆಯೇ ರಮ್ಯಾ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ತಮ್ಮ ಸ್ನೇಹಿದ ಬಗ್ಗೆ ನೆನಪಿಸಿಕೊಂಡರು. ಪ್ರಶಸ್ತಿ ಪಡೆದದ್ದಕ್ಕಾಗಿ ಅಭಿನಂದಿಸಿದರು.

  • ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತ್ಯುತ್ತಮ ನಟ ರಿಷಬ್, ನಟಿ ಶರ್ಮಿಳಾ

    ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತ್ಯುತ್ತಮ ನಟ ರಿಷಬ್, ನಟಿ ಶರ್ಮಿಳಾ

    4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆಯಿತು. 2022ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ನೀಡಲಾದ ಪ್ರಶಸ್ತಿಯಲ್ಲಿ ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ (Kantara) ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ (KGF 2) ಚಿತ್ರಗಳು ಅತೀ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.

    ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾಗಿದ್ದರೆ, ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ‘ಕಾಂತರ’ದ ಕೈ ಸೇರಿದೆ. ಅತ್ಯುತ್ತಮ ಸಂಗೀತ ಕಾಂತಾರ ಚಿತ್ರಕ್ಕಾಗಿ ಅಜನೀಶ್ ಲೋಕನಾಥ್ ಪಡೆದುಕೊಂಡರೆ, ಅತ್ಯುತ್ತಮ ಸ್ಟಂಟ್ ಪ್ರಶಸ್ತಿಯು ಕಾಂತಾರ ಸಿನಿಮಾದ ವಿಕ್ರಮ್ ಮೋರ್ ಅವರಿಗೆ ಸಂದಿದೆ. ಇದನ್ನೂ ಓದಿ: ತಮಿಳಿನ ಈ ಹೀರೋಗೆ 100 ಕೋಟಿ ವೆಚ್ಚದಲ್ಲಿ ಚಿತ್ರ ನಿರ್ಮಾಣ ಮಾಡ್ತಾರೆ ಕಮಲ್ ಹಾಸನ್

    ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಚಿತ್ರಕ್ಕೆ ಒಟ್ಟು ಮೂರು ಪ್ರಶಸ್ತಿಗಳು ಸಂದಿದ್ದು, ಸಿನಿಮಾಟೋಗ್ರಫಿಗಾಗಿ ಭುವನ್ ಗೌಡ,  ಅತ್ಯುತ್ತಮ ಸಂಕಲನಕ್ಕಾಗಿ ಪ್ರಜ್ವಲ್ ಕುಲಕರ್ಣಿ ಹಾಗೂ ಅತ್ಯುತ್ತಮ ವಿಎಫ್ ಎಕ್ಸ್ ಹಾಗಿ ಉದಯ ರವಿ ಹೆಗಡೆ ಪಡೆದುಕೊಂಡಿದ್ದಾರೆ.

    ಅತ್ಯುತ್ತಮ ನಟಿ ಪ್ರಶಸ್ತಿಯು ಗಾಳಿಪಟ 2 ಚಿತ್ರಕ್ಕಾಗಿ ಶರ್ಮಿಳಾ ಮಾಂಡ್ರೆಗೆ (Sharmila Mandre)ದೊರೆತರೆ, ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು 777 ಚಾರ್ಲಿ (777 Charlie) ಚಿತ್ರಕ್ಕಾಗಿ ಕಿರಣ್ ರಾಜ್ ಕೆ ಪಡೆದಿದ್ದಾರೆ. ಈ ಬಾರಿ ಐದು ವಿಶೇಷ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಯಿತು. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಅತ್ಯುತ್ತಮ ನಿರ್ಮಾಪಕ (ಡೆಬ್ಯು), ಸಂಚಾರಿ ವಿಜಯ್ ಹೆಸರಿನಲ್ಲಿ ಅತ್ಯುತ್ತಮ ನಟ (ಡೆಬ್ಯು), ತ್ರಿಪುರಾಂಭ ಹೆಸರಿನಲ್ಲಿ ಅತ್ಯುತ್ತಮ ನಟಿ (ಡೆಬ್ಯು), ಶಂಕರನಾಗ್ ಹೆಸರಿನಲ್ಲಿ ಅತ್ಯುತ್ತಮ ನಿರ್ದೇಶಕ (ಡೆಬ್ಯು) ಹಾಗೂ ಚಿ.ಉದಯ ಶಂಕರ್ ಹೆಸರಿನಲ್ಲಿ ಅತ್ಯುತ್ತಮ ಬರಹಗಾರ (ಡೆಬ್ಯು) ಪ್ರಶಸ್ತಿಯನ್ನು ನೀಡಲಾಯಿತು.

    ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಮೋಹಕ ತಾರೆ ರಮ್ಯಾ (Ramya), ನಟಿಯರಾದ ಕಾರುಣ್ಯ ರಾಮ್, ನಿರ್ದೇಶಕರಾದ ಬಿ.ಸುರೇಶ್, ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಹೊಂಬಾಳೆ ಫಿಲಮ್ಸ್‌ ನ ಚಲುವೇಗೌಡ, ಸ್ಮೈಲ್ ಶ್ರೀನು, ಬಿ.ಎಸ್.ಲಿಂಗದೇವರು, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್  ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

    4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ ವಿಜೇತರು

    ಅತ್ಯುತ್ತಮ ಚಿತ್ರ
    ಕಾಂತಾರ

    ಅತ್ಯುತ್ತಮ ನಿರ್ದೇಶಕ
    ಕಿರಣ್ ರಾಜ್ (ಚಾರ್ಲಿ)

    ಅತ್ಯುತ್ತಮ ನಾಯಕ
    ರಿಷಬ್ ಶೆಟ್ಟಿ (ಕಾಂತಾರ)

    ಅತ್ಯುತ್ತಮ ನಾಯಕಿ
    ಶರ್ಮಿಳಾ ಮಾಂಡ್ರೆ (ಗಾಳಿಪಟ 2)

    ಅತ್ಯುತ್ತಮ ಸಂಭಾಷಣೆ
    ಮಾಸ್ತಿ (ಗುರು ಶಿಷ್ಯರು)
    ಅತ್ಯುತ್ತಮ ಪೋಷಕ ನಟ
    ಸುಚೇಂದ್ರ ಪ್ರಸಾದ್ (ವ್ಹೀಲ್ ಚೇರ್ ರೋಮಿಯೋ)

    ಅತ್ಯುತ್ತಮ ಪೋಷಕ ನಟಿ
    ಸುಧಾರಾಣಿ (ತುರ್ತು ನಿರ್ಗಮನ)

    ಅತ್ಯುತ್ತಮ ಚಿತ್ರಕಥೆ
    ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೆಲ್ 2)

    ಅತ್ಯುತ್ತಮ ಬಾಲನಟ/ನಟಿ

    ಶಾರ್ವರಿ (ಚಾರ್ಲಿ)

    ಅತ್ಯುತ್ತಮ ಸಂಗೀತ
    ಕಾಂತಾರ (ಅಜನೀಶ್)

    ಅತ್ಯುತ್ತಮ ಹಿನ್ನೆಲೆ ಸಂಗೀತ
    ಅನೂಪ ಸೀಳೀನ್ (ಮಾನ್ಸೂನ್ ರಾಗ)

    ಅತ್ಯುತ್ತಮ ಚಿತ್ರ ಸಾಹಿತ್ಯ
    ಶಶಾಂಕ (ಲವ್ 350)

    ಅತ್ಯುತ್ತಮ ಗಾಯಕ
    ಮೋಹನ್ (ಜುಂಜಪ್ಪ, ವೇದ)

    ಅತ್ಯುತ್ತಮ ಗಾಯಕಿ
    ಐಶ್ವರ್ಯ ರಂಗರಾಜ್ (ಏಕ್ ಲವ್ ಯಾ)

    ಅತ್ಯುತ್ತಮ ಛಾಯಾಗ್ರಹಣ
    ಭುವನ್ ಗೌಡ (ಕೆಜಿಎಫ್ 2)

    ಅತ್ಯುತ್ತಮ ಸಂಕಲನ
    ಉಜ್ವಲ್ ಕುಲಕರ್ಣಿ (ಕೆಜಿಎಫ್2)

    ಅತ್ಯುತ್ತಮ ಕಲಾ ನಿರ್ದೇಶನ
    ಶಿವಕುಮಾರ (ವಿಕ್ರಾಂತ ರೋಣ)

    ಅತ್ಯುತ್ತಮ ನೃತ್ಯ ನಿರ್ದೇಶನ
    ಮೋಹನ್ (ಏಕ್ ಲವ್ ಯಾ, ಮೀಟ್ ಮಾಡೋಣ)

    ಅತ್ಯುತ್ತಮ ಸಾಹಸ
    ವಿಕ್ರಮ್ ಮೋರ್ (ಕಾಂತಾರ)

    ಅತ್ಯುತ್ತಮ ವಿಎಫ್ ಎಕ್ಸ್
    ಉದಯ ರವಿ ಹೆಗಡೆ ಯೂನಿಫೈ ಮೀಡಿಯಾ (ಕೆಜಿಎಫ್2)

    ಅತ್ಯುತ್ತಮ ನಟ (ಡೆಬ್ಯು)
    ಪೃಥ್ವಿ ಶ್ಯಾಮನೂರು (ಪದವಿ ಪೂರ್ವ)

    ಅತ್ಯುತ್ತಮ ನಟಿ (ಡೆಬ್ಯು)
    ಯಶಾ ಶಿವಕುಮಾರ್ (ಮಾನ್ಸನ್ ರಾಗ)

    ಅತ್ಯುತ್ತಮ ನಿರ್ದೇಶಕ (ಡೆಬ್ಯು)
    ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ)

    ಅತ್ಯುತ್ತಮ ನಿರ್ಮಾಪಕ (ಡೆಬ್ಯು)
    ಪವನ್ ಒಡೆಯರ್ (ಡೊಳ್ಳು)

    ಅತ್ಯುತ್ತಮ ಬರಹಗಾರ (ಡೆಬ್ಯು)
    ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ)

    ಅತ್ಯುತ್ತಮ ಯುಟ್ಯೂಬರ್
    ಕಲಾ ಮಾಧ್ಯಮ (ಪರಮೇಶ್ವರ ಕೆ.ಎಸ್)

    ಅತ್ಯುತ್ತಮ ಮನರಂಜನಾ ಸಾಮಾಜಿಕ ಜಾಲತಾಣ
    ವಿಕ್ಕಿ ಪೀಡಿಯಾ

  • ದುಬಾರಿ ಬಜೆಟ್ ನ  ‘ಮರ್ಡರ್ ಲೈವ್’ಸಿನಿಮಾದಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ

    ದುಬಾರಿ ಬಜೆಟ್ ನ ‘ಮರ್ಡರ್ ಲೈವ್’ಸಿನಿಮಾದಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ

    ನ್ನಡತಿ ಶರ್ಮಿಳಾ ಮಾಂಡ್ರೆ (Sharmila Mandre)  ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ ‘ಮರ್ಡರ್ ಲೈವ್’ (Murder Live) ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ನಿಕೋ ಮಾಸ್ತೋರಾಕಿಸ್ ಅವರ ಕಥೆಯನ್ನು ಆಧರಿಸಿದೆ. ಸೈಕೋ ಕಿಲ್ಲರ್ ಮತ್ತು ನಾಲ್ವರು ಮಹಿಳೆಯರ ಸುತ್ತ ಸುತ್ತುವ ಈ ಚಿತ್ರದಲ್ಲಿ, ಕಷ್ಟದ ಪರಿಸ್ಥಿತಿಯಲ್ಲಿ ಸಾಮಾನ್ಯ ಮನುಷ್ಯರೂ ಹೇಗೆ ಸಿಡಿದೆದ್ದು ಹೀರೋಗಳಾಗುತ್ತಾರೆ ಎಂದು ಹೇಳಲಾಗಿದೆ.

    ಸೈಕೋ ಕಿಲ್ಲರ್ ಒಬ್ಬ ಜಗತ್ತಿನ ಯಾವುದೇ ಕಂಪ್ಯೂಟರ್ ಹ್ಯಾಕ್ ಮಾಡಿ, ಅದರ ಮೂಲಕ ಲೈವ್ ಆಗಿ ಕೊಲೆ ಮಾಡುವ ಕಥೆ ಇರುವ ಈ ಚಿತ್ರವನ್ನು ಸಂಪೂರ್ಣವಾಗಿ ಇಂಗ್ಲೆಂಡ್‌ನಲ್ಲಿ ಚಿತ್ರೀಕರಿಸಲಾಗಿದೆ. ಸೂರ್ಯ ಅಭಿನಯದ ‘ಇಟಿ’ ಮತ್ತು ಶಿವಕಾರ್ತಿಕೇಯನ್ ಅಭಿನಯದ ‘ಡಾಕ್ಟರ್’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿದ್ದ ವಿನಯ್ ರೈ, ಈ ಚಿತ್ರದಲ್ಲಿ ಬಹಳ ಕ್ಲಿಷ್ಟಕರವಾದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ವಿಭಿನ್ನ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಕನ್ನಡತಿ ಶರ್ಮಿಳಾ ಮಾಂಡ್ರೆ, ಈ ದ್ವಿಭಾಷಾ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಇವರಿಬ್ಬರ ಜೊತೆಗೆ ಹಾಲಿವುಡ್ ನಟಿ ನವೋಮಿ ವಿಲ್ಲೋ (Naomi Willow) ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ

    ಡಾಟ್‌ಕಾಮ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಈ ಚಿತ್ರ ನಿರ್ಮಾಣವಾಗಿದ್ದು, ಮುರುಗೇಶ್ (Murugesh) ನಿರ್ದೇಶನ ಮಾಡಿದ್ದಾರೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಅತ್ಯುನ್ನತ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗಿದೆ. ಪ್ರಶಾಂತ್ ಡಿ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಮದನ್ ಅವರ ಸಂಕಲನವಿದೆ. ಈಗಾಗಲೇ ‘ಮರ್ಡರ್ ಲೈವ್’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ್ ನಟನೆಯ ‘ಗಾಳಿಪಟ 2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ಗಣೇಶ್ ನಟನೆಯ ‘ಗಾಳಿಪಟ 2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ಯೋಗರಾಜ್ ಭಟ್  ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ ಹಾಡು” ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ನಿಹಾಲ್ ತಾವ್ರೋ ಹಾಡಿದ್ದಾರೆ.

    ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಕುದುರೆಮುಖದ ಸುಂದರ ಪರಿಸರದಲ್ಲಿ ಈ ಹಾಡಿನ‌ ಚಿತ್ರೀಕರಣ ನಡೆದಿದೆ. ಧನು ನೃತ್ಯ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಟೀಸರ್, ಟ್ರೇಲರ್ ಹಾಗೂ ಇನ್ನೂ ಎರಡು ಹಾಡುಗಳ ಬಿಡುಗಡೆಯಾಗಲಿದೆ. ಆಗಸ್ಟ್ 12 ಕ್ಕೆ ಚಿತ್ರ ತೆರೆಗೆ ಬರಲಿದೆ. ಇದನ್ನೂ ಓದಿ: ಶಿವಣ್ಣನನ್ನೇ ಹಿಂದಿಕ್ಕಿದ ಶಿವಣ್ಣನ ಅಭಿಮಾನಿ ಕಾಫಿನಾಡು ಚಂದು!

    ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಹಕರು.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ‘ಎಣ್ಣೆ ಹಾಡಿನ’ ಹಿಂದೆ ಬಿದ್ದ ಯೋಗರಾಜ್ ಭಟ್: ಜುಲೈ 14ರಂದು ಗಾಳಿಪಟ 2 ಚಿತ್ರದ ಎಣ್ಣೆ ಹಾಡು ರಿಲೀಸ್

    ಮತ್ತೆ ‘ಎಣ್ಣೆ ಹಾಡಿನ’ ಹಿಂದೆ ಬಿದ್ದ ಯೋಗರಾಜ್ ಭಟ್: ಜುಲೈ 14ರಂದು ಗಾಳಿಪಟ 2 ಚಿತ್ರದ ಎಣ್ಣೆ ಹಾಡು ರಿಲೀಸ್

    ಗಾಗಲೇ ಅನೇಕ ಎಣ್ಣೆ ಹಾಡುಗಳು ಮೂಲಕ ಫೇಮಸ್ ಆಗಿರುವ ನಿರ್ದೇಶಕ ಯೋಗರಾಜ್ ಭಟ್ ಗಾಳಿಪಟ 2 ಸಿನಿಮಾಗಾಗಿ ಮತ್ತೊಂದು ಎಣ್ಣೆ ಹಾಡು ರೆಡಿ ಮಾಡಿದ್ದಾರೆ. ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.

    ಈ ಮೂವರ ಕಾಂಬಿನೇಶನ್ ನಲ್ಲಿ “ಗಾಳಿಪಟ 2” ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14 ರಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ಎರಡು ಹಾಡುಗಳು ಈಗಾಗಲೇ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಮುಂದೆ ಬಿಡುಗಡೆಯಾಗಲಿರುವ ಹಾಡಿನ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ:ಶಿವರಾಜ್ ಕುಮಾರ್ ಬರ್ತಡೇ : ಏನೆಲ್ಲ ಸ್ಪೆಷಲ್ ಗೊತ್ತಾ?

    ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು “ಗಾಳಿಪಟ 2” ಚಿತ್ರವನ್ನು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

    Live Tv
    [brid partner=56869869 player=32851 video=960834 autoplay=true]

  • ಶಿರಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶರ್ಮಿಳಾ ಮಾಂಡ್ರೆ

    ಶಿರಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶರ್ಮಿಳಾ ಮಾಂಡ್ರೆ

    `ಸಜನಿ’ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟ ಬೆಡಗಿ ಶರ್ಮಿಳಾ ಮಾಂಡ್ರೆ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಶೂಟಿಂಗ್‌ಗೆ ಬ್ರೇಕ್ ಹಾಕಿ, ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಶರ್ಮಿಳಾ ಮಾಂಡ್ರೆ ತೆರಳಿದ್ದಾರೆ.

    ಧ್ಯಾನ್‌ಗೆ ನಾಯಕಿಯಾಗುವ ಮೂಲಕ ಸ್ಯಾಂಡಲ್‌ವುಡ್‌ಗೆ ಲಗ್ಗೆಯಿಟ್ಟ ಬೆಡಗಿ ಶರ್ಮಿಳಾ ನಂತರ ಕನ್ನಡದ ಸಾಕಷ್ಟು ಚಿತ್ರಗಳ ಸೌತ್ ಸಿನಿಮಾ ಅಂಗಳದಲ್ಲೂ ನಟಿಸಿ ಸೈ ಎನಿಸಿಕೊಂಡರು. ಈಗ ಕೈತುಂಬಾ ಸಿನಿಮಾಗಳ ಮಧ್ಯೆ ಶೂಟಿಂಗ್‌ಗೆ ಬ್ರೇಕ್ ಹಾಕಿ ಶಿರಡಿಯತ್ತ ಶರ್ಮಿಳಾ ಬಂದಿದ್ದಾರೆ. ಸಾಯಿ ಬಾಬಾ ಸನ್ನಿಧಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟಿಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ಜಸ್ವಂತ್ ಗಿಲ್ ಬಯೋಪಿಕ್‌ನಲ್ಲಿ ಅಕ್ಷಯ್ ಕುಮಾರ್

    ನಟಿ ಶರ್ಮಿಳಾ ಸದ್ಯ `ಗಾಳಿಪಟ 2′, `ದಸರಾ’ ಮತ್ತು ಅನಂತ್ ನಾಗ್ ನಟನೆಯ `ಮಂಡಲ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಹೀಗೆ ಪವರ್‌ಫುಲ್ ಪಾತ್ರದ ಮೂಲಕ ಕಮಾಲ್ ಮಾಡಕು ನಟಿ ಶರ್ಮಿಳಾ ಸಜ್ಜಾಗಿದ್ದಾರೆ.

    Live Tv

  • ಮೆಲೋಡಿ ಕ್ವೀನ್‍ನನ್ನು ಭೇಟಿಯಾದ ಶರ್ಮಿಳಾ

    ಮೆಲೋಡಿ ಕ್ವೀನ್‍ನನ್ನು ಭೇಟಿಯಾದ ಶರ್ಮಿಳಾ

    ಚಂದನವನದ ನಟಿ ಶರ್ಮಿಳಾ ಮಾಂಡ್ರೆ ಸಿನಿಮಾದಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿದ್ದು, ತಮ್ಮದೇ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಶರ್ಮಿಳಾ ನಿರ್ಮಾಪಕಿಯಾಗಿದ್ದಾರೆ. ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ಈ ನಟಿ ಮೆಲೋಡಿ ಕ್ವೀನ್ ಶ್ರೇಯಾಘೋಷಲ್ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

    ಶರ್ಮಿಳಾ ಟ್ವಿಟ್ಟರ್‌ನಲ್ಲಿ, ಶ್ರೇಯಾಘೋಷಲ್ ಅವರನ್ನು ಭೇಟಿಯಾಗಿದ್ದು ಸಂತೋಷವಾಗುತ್ತಿದೆ. ಲಂಡನ್‍ನಲ್ಲಿ ಅವರು ಲೈವ್ ಪ್ರದರ್ಶನವಾಗಬೇಕಿತ್ತು. ಇದಕ್ಕೂ ಮುನ್ನ ನಾನು ಅವರನ್ನು ಭೇಟಿ ಮಾಡಿದ್ದೇನೆ. ಅತ್ಯಂತ ಸುಂದರವಾದ ಧ್ವನಿಯ ವಿನಮ್ರ ವ್ಯಕ್ತಿ ಎಂದು ಹೊಗಳಿದ್ದಾರೆ. ಅಲ್ಲದೇ ನನ್ನ ಮೊದಲ ಚಿತ್ರ ‘ಸಜನಿ’ ಸಿನಿಮಾದಲ್ಲಿ ಅವರು ಹಾಡೊಂದನ್ನು ಆಡಿರುವುದು ನನಗೆ ನೆನಪಾಯಿತು ಎಂದು ಬರೆದು ಲಿಂಕ್ ಹಾಕಿದ್ದಾರೆ. ಇದನ್ನೂ ಓದಿ: ಮತ್ಸ್ಯಕನ್ಯೆ ಸ್ಟೈಲ್‍ನಲ್ಲಿ ಸೋನಾಕ್ಷಿ ಫುಲ್ ಮಿಂಚಿಂಗ್

    ಪ್ರಸ್ತುತ ಶರ್ಮಿಳಾ ಮಾಂಡ್ರೆ ಕನ್ನಡದ ‘ದಸರಾ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದೇ ಟೈಟಲ್ ತೆಲುಗು ಸಿನಿಮಾಗೂ ಇಡಲಾಗಿತ್ತು. ಇದರಿಂದ ನಮ್ಮ ಸಿನಿಮಾಗೆ ತೊಂದರೆಯಾಗುವುದೆಂದು ಬೇಸರಗೊಂಡ ಶರ್ಮಿಳಾ ನ್ಯಾಯಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿ ಸುದ್ದಿಯಾಗಿದ್ದರು. ಈಗ ಮೆಲೋಡಿ ಕ್ವೀನ್ ಭೇಟಿಯಾಗುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಶರ್ಮಿಳಾ ಸಿನಿಮಾಗಿಂತ ಹೆಚ್ಚು ಪ್ರೊಡಕ್ಷನ್ ಕಡೆ ಹೆಚ್ಚು ಗಮನಕೊಡುತ್ತಿದ್ದಾರೆ. ಆದರೆ ಇವರ ಮೊದಲ ನಿರ್ಮಾಣದಲ್ಲಿ ಕೆಲವು ಗೊಂದಲಗಳು ನಿರ್ಮಾಣವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿದ್ದಾರೆ.

    ಶ್ರೇಯಾ ಘೋಷಲ್ ಚಂದನವನ ಸೇರಿದಂತೆ ಉತ್ತರ ಮತ್ತು ದಕ್ಷಿಣ ಸಿನಿಮಾಗಳಲ್ಲಿ ನಮ್ಮ ಮಧುರ ಧ್ವನಿಯ ಮೂಲಕ ಎಲ್ಲರನ್ನು ಮೋಡಿ ಮಾಡಿದ್ದಾರೆ. ಶ್ರೇಯಾಘೋಷಲ್ ಧ್ವನಿಗೆ ಲಕ್ಷಾಂತರ ಅಭಿಮಾನಿಗಳು ಫಿದಾ ಆಗಿದ್ದಾರೆ. ಎಲ್ಲ ಸಿನಿರಂಗದಲ್ಲಿಯೂ ಶ್ರೇಯಾಘೋಷಲ್ ಬಹುಬೇಡಿಕೆಯ ಸಿಂಗರ್ ಆಗಿದ್ದಾರೆ. ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ