Tag: sharukh khan

  • `ಜವಾನ್’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ

    `ಜವಾನ್’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ

    `ಪಠಾಣ್’ (Pathaan) ಸಿನಿಮಾ ಮೂಲಕ ಸೂಪರ್ ಸಕ್ಸಸ್ ಕಂಡಿರುವ ಶಾರುಖ್‌ಗೆ(Sharukh Khan) ಇದೀಗ ಗೆಲುವಿನ ಸರದಾರ ಶಿವರಾಜ್‌ಕುಮಾರ್ (Shivarajkumar) ಸಾಥ್ ನೀಡುತ್ತಿದ್ದಾರೆ. ಬಾಲಿವುಡ್ (Bollywood) ಎಸ್‌ಆರ್‌ಕೆ ಜೊತೆ ಸ್ಯಾಂಡಲ್‌ವುಡ್ ಎಸ್‌ಆರ್‌ಕೆ ಜೊತೆಯಾಗುತ್ತಿದ್ದಾರೆ. ಇಂತಹದೊಂದು ಸುದ್ದಿ ಸಿನಿನಗರಿಯಲ್ಲಿ ಹರಿದಾಡುತ್ತಿದೆ.

    ಶಾರುಖ್ ಖಾನ್ ಸದ್ಯ `ಜವಾನ್’ (Jawan) ಪ್ರಾಜೆಕ್ಟ್ ಕಡೆ ಗಮನ ಕೊಡುತ್ತಿದ್ದಾರೆ. `ಪಠಾಣ್’ ಚಿತ್ರದ ಸಕ್ಸಸ್ ನಂತರ ಜವಾನ್ ಆಗಿ ಮಿಂಚಲು ಸಜ್ಜಾಗಿದ್ದಾರೆ. ಜವಾನ್ ಚಿತ್ರದ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಗೆಲ್ಲಲೇಬೇಕು ಅಂತಾ ಪಣ ತೊಟ್ಟಿದ್ದಾರೆ. `ಜವಾನ್’ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಎಂಟ್ರಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಸಿಹಿಸುದ್ದಿ ಹಂಚಿಕೊಂಡ ಜಾನ್ವಿ ಕಪೂರ್

    ಗೌರಿ ಖಾನ್ (Gowri Khan Productions) ನಿರ್ಮಾಣದ ಈ ಚಿತ್ರದಲ್ಲಿ ದಕ್ಷಿಣದ ಸ್ಟಾರ್ ಕಲಾವಿದರನ್ನ ಈ ಚಿತ್ರದಲ್ಲಿ ಸೇರಿಸುವ ಪ್ರಯತ್ನ ನಡೆಯುತ್ತಿದೆಯಂತೆ. ಸ್ಟಾರ್ ಕಲಾವಿದರ ದಂಡೇ ಈ ಚಿತ್ರದಲ್ಲಿ ಇರಲಿದೆ. ಜವಾನ್‌ಗೆ ನಾಯಕಿಯಾಗಿ ನಯನತಾರಾ (Nayanatara) ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಕನ್ನಡದಿಂದ ಸೆಂಚುರಿ ಸ್ಟಾರ್ ಶಿವಣ್ಣಗೆ (Shivanna) ಚಿತ್ರದಲ್ಲಿ ನಟಿಸಲು ಶಾರುಖ್ ಟೀಂ ಅಪ್ರೋಚ್ ಮಾಡಿದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ ಶಿವಣ್ಣ ರಜನೀಕಾಂತ್ (Rajanikanth) ಜೊತೆ `ಜೈಲರ್’ನಲ್ಲಿ ನಟಿಸಿ ಬಂದಿದ್ದಾರೆ. ಈಗಾಗಲೇ ಪರಭಾಷಾ ಸಿನಿಮಾಗಳಲ್ಲಿ ನಟಿಸಲು ಶಿವಣ್ಣ ಪ್ರಾರಂಭ ಮಾಡಿದ್ದಾರೆ. ಹಾಗಾಗಿ ಶಾರುಖ್ ಖಾನ್ ಚಿತ್ರದಲ್ಲಿ ಶಿವಣ್ಣ ನಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ? ಅಧಿಕೃತ ಅಪ್‌ಡೇಟ್‌ಗಾಗಿ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

  • ನಟ ಶಾರುಖ್ ಮನೆಗೆ ನುಗ್ಗಿದ ಫ್ಯಾನ್ಸ್ ವಿರುದ್ಧ ದಾಖಾಲಾಯ್ತು ಕೇಸ್

    ನಟ ಶಾರುಖ್ ಮನೆಗೆ ನುಗ್ಗಿದ ಫ್ಯಾನ್ಸ್ ವಿರುದ್ಧ ದಾಖಾಲಾಯ್ತು ಕೇಸ್

    `ಠಾಣ್’ ಸೂಪರ್ ಸ್ಟಾರ್ ಶಾರುಖ್ ಖಾನ್‌ಗೆ (Sharukh Khan) ಅಪಾರ ಅಭಿಮಾನಿಗಳಿದ್ದಾರೆ. ಅವರ ಮನ್ನತ್ ನಿವಾಸದ ಮುಂದೆ ಸದಾ ಜಾತ್ರೆಯಂತೆ ಅಭಿಮಾನಿಗಳು ಒಟ್ಟಾಗಿರುತ್ತಾರೆ. ಶಾರುಖ್‌ನ ಮೀಟ್ ಮಾಡಲೆಂದೇ ಮನೆಯ ಬಳಿ ಫ್ಯಾನ್ಸ್ ಕಾಯುತ್ತಿರುತ್ತಾರೆ. ಇದೀಗ ನೆಚ್ಚಿನ ನಟ ಶಾರುಖ್‌ನ ನೋಡಲು ಮನೆಗೆ ನುಗ್ಗಿದ ಅಭಿಮಾನಿ ವಿರುದ್ಧ ಪ್ರಕರಣ ದಾಖಲಾಗಿದೆ.

    ನಟ-ನಟಿಯರನ್ನ ಮೀಟ್ ಮಾಡೋಕೆ ಫ್ಯಾನ್ಸ್ (Fans)ನಾನಾ ತರಹದ ಕಸರತ್ತು ನಡೆಸುತ್ತಾರೆ. ಇದಕ್ಕಾಗಿ ಅವರು ಯಾವ ಹಂತಕ್ಕೆ ಹೋಗೋಕೂ ರೆಡಿ ಇರುತ್ತಾರೆ. ಈಗಲೂ ಹಾಗೆಯೇ ಆಗಿದೆ. ಶಾರುಖ್ ಖಾನ್ ಅವರನ್ನು ಭೇಟಿ ಮಾಡೋಕೆ ಗುಜರಾತ್‌ನಿಂದ (Gujrat) ಇಬ್ಬರು ಬಂದಿದ್ದಾರೆ. ಮನ್ನತ್ ನಿವಾಸದ ಹೊರಗೆ ಅವರು ಪಠಾಣ್ ಹೋರೋಗಾಗಿ ಕಾದು ನಿಂತಿದ್ದರು. ಆದರೆ, ಶಾರುಖ್ ಬರುವ ಸೂಚನೆ ಸಿಕ್ಕಿಲ್ಲ. ಹೀಗಾಗಿ, ಅವರು ಮನೆಯ ಗೋಡೆ ಏರಿ ನಿವಾಸದ ಆವರಣಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೇ ʻಟೋಬಿʼ ಚಿತ್ರದ ಶೂಟಿಂಗ್‌ ಮುಗಿಸಿದ ರಾಜ್‌ ಬಿ ಶೆಟ್ಟಿ

    ಇದನ್ನು ನೋಡಿದ ಭದ್ರತಾ ಸಿಬ್ಬಂದಿ, ಅವರನ್ನು ಹಿಡಿದು ಪೊಲೀಸರಿಗೆ ನೀಡಿದ್ದಾರೆ. ಇಬ್ಬರ ವಿರುದ್ಧ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಓರ್ವ 20 ವರ್ಷದವನು, ಮತ್ತೋರ್ವ 22 ವರ್ಷದವನು. `ನಾವು ಶಾರುಖ್ ಖಾನ್ ಅಭಿಮಾನಿಗಳು. ಅವರನ್ನು ಭೇಟಿ ಆಗೋಕೆ ಈ ರೀತಿ ಮಾಡಿದೆವು’ ಎಂದು ಅವರು ಹೇಳಿಕೊಂಡಿದ್ದಾರೆ. ಇದರ ಹಿಂದೆ ಬೇರೆ ಯಾವುದಾದರೂ ಉದ್ದೇಶ ಇದೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

    ಶಾರುಖ್ ಖಾನ್ ಹಲವು ವರ್ಷಗಳ ಬಳಿಕ ಪಠಾಣ್ ಚಿತ್ರದ ಮೂಲಕ ಸೂಪರ್ ಸಕ್ಸಸ್ ಸಿಕ್ಕಿದೆ. ವಿಶ್ವದೆಲ್ಲೆಡೆ 1000 ಕೋಟಿ ರೂ. ಬಾಚಿದ್ರೆ ಹಿಂದಿ ಬಾಕ್ಸಾಫೀಸ್‌ನಲ್ಲಿ ಪಠಾಣ್ 509 ಕೋಟಿ ರೂ. ಕಲೆಕ್ಷನ್ ಮಾಡಿ ಗೆದ್ದು ಬೀಗಿದೆ.

  • ನಿವೃತ್ತಿ ಪಡೆಯುವ ಮಾತೇ ಇಲ್ಲ ಎಂದ ʻಪಠಾಣ್‌ʼ ನಟ ಶಾರುಖ್‌ ಖಾನ್‌

    ನಿವೃತ್ತಿ ಪಡೆಯುವ ಮಾತೇ ಇಲ್ಲ ಎಂದ ʻಪಠಾಣ್‌ʼ ನಟ ಶಾರುಖ್‌ ಖಾನ್‌

    `ಪಠಾಣ್’ (Pathaan) ಸಕ್ಸಸ್ ಅಲೆಯಲ್ಲಿ ಬಾದಷಾ ಶಾರುಖ್ ಖಾನ್ (Sharukh Khan) ತೇಲುತ್ತಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಏಳುಬೀಳು ಕಂಡಿರುವ ಶಾರುಖ್ ಖಾನ್ `ಪಠಾಣ್’ ಸಿನಿಮಾ ಅವರ ಕೆರಿಯರ್‌ಗೆ ಟರ್ನಿಂಗ್ ಪಾಯಿಂಟ್ ಕೊಟ್ಟಿದೆ. ಇದೀಗ ಶಾರುಖ್ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.

    ಶಾರುಖ್ ಖಾನ್- ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಪಠಾಣ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶಾರುಖ್ ಕಮ್‌ಬ್ಯಾಕ್ ಮಾಡಿದ್ದಾರೆ. ಈ ಸಿನಿಮಾದ ಒಟ್ಟು ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ಸಮೀಪಿಸುವುದರಲ್ಲಿದೆ. ಪಠಾಣ್ ಹೀರೋ ಅವರು ಅಭಿಮಾನಿಗಳ ಮಧ್ಯೆ ತೆರಳಿ ಪ್ರಚಾರ ಮಾಡಿದ್ದು ಕಡಿಮೆ. ಬದಲಿಗೆ ಸೋಶಿಯಲ್ ಮೀಡಿಯಾ ಮೂಲಕ ಪ್ರಮೋಷನ್ ಮಾಡುತ್ತಿದ್ದಾರೆ. ಟ್ವಿಟರ್‌ನಲ್ಲಿ ಅವರು ಪ್ರಶ್ನೋತ್ತರ ನಡೆಸುತ್ತಾರೆ. ಈ ವೇಳೆ ನಿವೃತ್ತಿ ಬಗ್ಗೆ ಕೇಳಲಾಗಿದೆ.

    `ನೀವು ನಿವೃತ್ತಿ ಪಡೆದ ನಂತರ ಬಾಲಿವುಡ್‌ನಲ್ಲಿ ದೊಡ್ಡ ವ್ಯಕ್ತಿ ಯಾರು’ ಎಂದು ಶಾರುಖ್‌ಗೆ (Sharukh Khan) ಕೇಳಲಾಗಿದೆ. ನಾನು ನಟನೆಯಿಂದ ನಿವೃತ್ತಿ ಪಡೆಯುವ ಮಾತೇ ಇಲ್ಲ. ನನ್ನನ್ನು ಹೊರದಬ್ಬಬೇಕು. ಬಹುಶಃ ಆಗಲೂ ನಾನು ಮತ್ತಷ್ಟು ಹಾಟ್ ಆಗಿ ಕಮ್‌ಬ್ಯಾಕ್ ಮಾಡುತ್ತೇನೆ ಎಂದಿದ್ದಾರೆ.

    ಇನ್ನೂ ʻಪಠಾಣ್‌ʼ ಸಕ್ಸಸ್‌ ನಂತರ `ಜವಾನ್‌’ ಸಿನಿಮಾ ಕೆಲಸದತ್ತ ಶಾರುಖ್‌ ಮುಖ ಮಾಡಿದ್ದಾರೆ. ಹೊಸ ಬಗೆಯ ಕಥೆಗಳನ್ನ ಬಾದಷಾ ಕೇಳುತ್ತಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ʻಪಠಾಣ್‌ʼ ಬಳಿಕ ಮತ್ತೆ ಒಂದೇ ಸಿನಿಮಾದಲ್ಲಿ ಸಲ್ಮಾನ್- ಶಾರುಖ್ ಖಾನ್

    ʻಪಠಾಣ್‌ʼ ಬಳಿಕ ಮತ್ತೆ ಒಂದೇ ಸಿನಿಮಾದಲ್ಲಿ ಸಲ್ಮಾನ್- ಶಾರುಖ್ ಖಾನ್

    ಬಾಲಿವುಡ್‌ನಲ್ಲಿ (Bollywood) ಖಾನ್‌ಗಳದ್ದೇ ದರ್ಬಾರ್ ನಡೆಯುತ್ತಿದೆ. ಶಾರುಖ್ (Sharukh Khan) ಮತ್ತು ಸಲ್ಮಾನ್ ಖಾನ್ (Salman Khan) ಸಿನಿಮಾಗಳಿಗೆ ಬಿಟೌನ್‌ನಲ್ಲಿ ಭರ್ಜರಿ ಡಿಮ್ಯಾಂಡ್‌ ಇದೆ. ಇತ್ತೀಚಿನ `ಪಠಾಣ್’ (Pathan)  ಚಿತ್ರದಲ್ಲಿ ಶಾರುಖ್‌ಗೆ ಬ್ಯಾಡ್ ಬಾಯ್ ಸಲ್ಮಾನ್  ಸಾಥ್ ನೀಡಿದ್ದರು. ಈಗ ಮತ್ತೆ ಹೊಸ ಚಿತ್ರಕ್ಕಾಗಿ ಬಾದಷಾ ಮತ್ತು ಸಲ್ಲು ಬಾಯ್ ಒಂದಾಗುತ್ತಿದ್ದಾರೆ.

    `ಪಠಾಣ್’ (Pathan) ಸಿನಿಮಾದ ಗೆಲುವಿನಿಂದ ಬಾಲಿವುಡ್‌ಗೆ ಹೊಸ ಶಕ್ತಿ ನೀಡಿತ್ತು. ಪಠಾಣ್‌ಗೆ ಸಲ್ಮಾನ್ ಎಂಟ್ರಿಯಿಂದ ಚಿತ್ರಕ್ಕೆ ತೂಕ ಹೆಚ್ಚಿಸಿತ್ತು. ಇವರಿಬ್ಬರ ಕಾಂಬಿನೇಷನ್ ಸಿನಿಮಾದಲ್ಲಿ ಕಮಾಲ್ ಮಾಡಿತ್ತು. ಇದೀಗ ಮತ್ತೆ ಈ ಖಿಲಾಡಿ ಜೋಡಿ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ `ಜೋಶ್’ ನಟಿ ಪೂರ್ಣ

    ಸಲ್ಮಾನ್ ಖಾನ್-ಕತ್ರಿನಾ ಕೈಫ್ (Katrina Kaif) ನಟನೆಯ ಬಹುನಿರೀಕ್ಷಿತ ಸಿನಿಮಾ `ಟೈಗರ್ 3′ ಸಿನಿಮಾದಲ್ಲಿ `ಪಠಾಣ್’ ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೇಜರ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. `ಟೈಗರ್ 3′ (Tiger-3)ಅಡ್ಡಾಗೆ ಶಾರುಖ್‌ ಎಂಟ್ರಿಯಾಗುತ್ತಿದೆ. ಸಿನಿಮಾದಲ್ಲಿ ಶಾರುಖ್ ಎಂಟ್ರಿಯಿಂದ ಬಿಗ್ ಟ್ವಿಸ್ಟ್ ಸಿಗಲಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.

    `ಟೈಗರ್ 3′ ಸಿನಿಮಾದಲ್ಲಿ ವಿಭಿನ್ನ ಕಥೆಯಾಗಿದ್ದು, ಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್‌ಗೆ ಕತ್ರಿನಾ ನಾಯಕಿಯಾಗಿ ನಟಿಸಿದ್ದಾರೆ. ಯಶ್ ರಾಜ್ ಫಿಲ್ಮ್ಸ್‌ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿ ಬಾಚಿದ `ಪಠಾಣ್’ ಸಿನಿಮಾ

    ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿ ಬಾಚಿದ `ಪಠಾಣ್’ ಸಿನಿಮಾ

    ಬಾಲಿವುಡ್ (Bollywood) ಅಂಗಳದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡ್ತಿರುವ `ಪಠಾಣ್’ (Pathaan) ಸಿನಿಮಾ. ಚಿತ್ರ ರಿಲೀಸ್ ಆಗಿ 9 ದಿನಕ್ಕೆ ವಿಶ್ವಾದ್ಯಂತ 700 ಕೋಟಿ ರೂಪಾಯಿಗೂ ಕಲೆಕ್ಷನ್ ಅಧಿಕ ಕಲೆಕ್ಷನ್ ಮಾಡಿದೆ.

    ಸಾಕಷ್ಟು ವಿವಾದ ಮತ್ತು ಬಾಯ್ಕಾಟ್ ನಡುವೆಯೂ ಪಠಾಣ್ ಸಿನಿಮಾ ರಿಲೀಸ್ ಆಗಿ ಗೆದ್ದು ಬೀಗಿದೆ. ದೀಪಿಕಾ ಪಡುಕೋಣೆ (Deepika Padukone) ಧರಿಸಿದ್ದ ಬಿಕಿನಿ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸಿನಿಮಾ ಬಿಡುಗಡೆಗೂ ತೆಡೆ ನೀಡಲಾಗಿತ್ತು. ಈ ಎಲ್ಲಾ ಸಮಸ್ಯೆಗಳ ನಡುವೆ ಪಠಾಣ್ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

    ಶಾರುಖ್ (Sharukh Khan) ನಟನೆಯ ಪಠಾಣ್ (Pathaan) ಜ.25ಕ್ಕೆ ರಿಲೀಸ್ ಆಗಿದ್ದು, ಈ 9 ದಿನಗಳಲ್ಲಿ ವಿಶ್ವಾದ್ಯಂತ ಶಾರುಖ್ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಿಂದಿ ಬಾಕ್ಸಾಫೀಸ್‌ನಲ್ಲಿ ಪಠಾಣ್‌ ಚಿತ್ರ 350 ಕೋಟಿ ರೂ. ಗಳಿಕೆ ಮಾಡಿದೆ. ಇದನ್ನೂ ಓದಿ: ವಿಜಯ್ ಪ್ರಕಾಶ್ ಧ್ವನಿಯಲ್ಲಿ ‘ಕಡಲತೀರದ ಭಾರ್ಗವ’ ಸಿನಿಮಾ ಸಾಂಗ್

    ಹಲವು ಸಿನಿಮಾಗಳ ಸೋಲಿನಿಂದ ನರಳುತ್ತಿದ್ದ ಬಾಲಿವುಡ್‌ಗೆ ʻಪಠಾಣ್ʼ ಚಿತ್ರ ಈಗ ಮತ್ತಷ್ಟು ಶಕ್ತಿ ನೀಡಿದೆ. ಪಠಾಣ್ ಸಿನಿಮಾದಿಂದ ಮತ್ತಷ್ಟು ಬಲ ಬಂದಂತೆ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಕ್ಸಾಫೀಸ್‌ನಲ್ಲಿ 160 ಕೋಟಿ ಬಾಚಿದ ಶಾರುಖ್ ನಟನೆಯ `Pathaan’ ಸಿನಿಮಾ

    ಬಾಕ್ಸಾಫೀಸ್‌ನಲ್ಲಿ 160 ಕೋಟಿ ಬಾಚಿದ ಶಾರುಖ್ ನಟನೆಯ `Pathaan’ ಸಿನಿಮಾ

    ಬಾಲಿವುಡ್‌ಗೆ (Bollywood) ಇದೀಗ ಶುಕ್ರದೆಸೆ ಶುರುವಾಗಿದೆ. ಸಾಲು ಸಾಲು ಸಿನಿಮಾಗಳ ಸೋಲು ಕಂಡಿದ್ದ ಬಾಲಿವುಡ್‌ಗೆ `ಪಠಾಣ್’ (Pathaan) ಚಿತ್ರದ ಮೂಲಕ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಸಿನಿಮಾ ರಿಲೀಸ್ ಆಗಿ ಮೂರೇ ದಿನಕ್ಕೆ ಶಾರುಖ್ (Sharukh Khan) ಚಿತ್ರ ಈಗ 160 ಕೋಟಿ ರೂ. ಕಲೆಕ್ಷನ್ ಮಾಡಿದೆ.

    `ಜೀರೋ’ (Zero) ಚಿತ್ರದ ಹೀನಾಯ ಸೋಲಿನ ನಂತರ ಶಾರುಖ್ ಸಿನಿಮಾದಿಂದ ದೂರ ಉಳಿದಿದ್ದರು. ಈಗ ಪಠಾಣ್ ಚಿತ್ರದ ಮೂಲಕ ಶಾರುಖ್ ವೃತ್ತಿ ಜೀವನಕ್ಕೆ ಅಷ್ಟೇ ಅಲ್ಲ, ಬಾಲಿವುಡ್‌ಗೂ ಶಕ್ತಿ ಬಂದಂತಾಗಿದೆ. `ಪಠಾಣ್’ (Pathaan) ಬಾಕ್ಸಾಫೀಸ್‌ನಲ್ಲಿ 160 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೇಟ್ ಮಾಡಿದೆ. ಇದನ್ನೂ ಓದಿ: ಪೇಪರ್ ಡ್ರೆಸ್ ಧರಿಸಿ ಮಿಂಚಿದ ʻಬಿಗ್‌ ಬಾಸ್‌ʼ ಖ್ಯಾತಿಯ ನಿವೇದಿತಾ ಗೌಡ

    ಹಿಂದಿ ಬಾಕ್ಸಾಫೀಸ್‌ನಲ್ಲಿ ಶಾರುಖ್ ಮತ್ತು ದೀಪಿಕಾ ಪಡುಕೋಣೆ (Deepika Padukone) ನಟನೆಯ ಪಠಾಣ್ ಸಿನಿಮಾ 161 ಕೋಟಿ ರೂ. ಗಳಿಕೆ ಮಾಡಿದೆ. ಈ ಸಿನಿಮಾ ಮೂರು ದಿನಗಳಲ್ಲಿ ಒಟ್ಟು ವಿಶ್ವಾದ್ಯಂತ 313 ಕೋಟಿ ರೂ. ಗಳಿಕೆ ಮಾಡಿದೆ.

    ಇನ್ನೂ `ಪಠಾಣ್’ ಸಿನಿಮಾ ಶಾರುಖ್ ಖಾನ್‌ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಮಿಂಚಿದ್ದಾರೆ. ಜಾನ್ ಅಬ್ರಾಹಂ ಕೂಡ ಪ್ರಮುಖ ಪಾತ್ರಕ್ಕೆ ಜೀವತುಂಬಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೊದಲ ದಿನದ ʻಕೆಜಿಎಫ್‌ 2ʼ ದಾಖಲೆ ಬ್ರೇಕ್- ಬಾಲಿವುಡ್‌ನಲ್ಲಿ ಪಠಾಣ್‌ ಭರ್ಜರಿ ಕಲೆಕ್ಷನ್‌

    ಮೊದಲ ದಿನದ ʻಕೆಜಿಎಫ್‌ 2ʼ ದಾಖಲೆ ಬ್ರೇಕ್- ಬಾಲಿವುಡ್‌ನಲ್ಲಿ ಪಠಾಣ್‌ ಭರ್ಜರಿ ಕಲೆಕ್ಷನ್‌

    ಬಾಲಿವುಡ್‌ನಲ್ಲಿ (Bollywood) ಈಗ ಶಾರುಖ್ ಖಾನ್ (Sharukh Khan) ಮೇನಿಯಾ ಜೋರಾಗಿದೆ. ಸಾಕಷ್ಟು ವಿವಾದಗಳ ಮಧ್ಯೆ ರಿಲೀಸ್ ಆಗಿದ್ದ ಶಾರುಖ್ ನಟನೆಯ ಪಠಾಣ್ ಸಿನಿಮಾ ಈಗ ಬಾಕ್ಸಾಫೀಸ್‌ನಲ್ಲಿ (Boxoffice) ದಾಖಲೆ ಬರೆದಿದೆ.

    ಹಲವು ವರ್ಷಗಳಿಂದ ಸತತ ಸೋಲು ಕಂಡಿದ್ದ ಶಾರುಖ್ ಖಾನ್ (Sharukh Khan) ಅವರು ಈಗ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ತಾವು ಬಾಕ್ಸಾಫೀಸ್ ಸುಲ್ತಾನ ಎಂಬುದನ್ನು ಮತ್ತೆ ಪ್ರೂವ್ ಮಾಡಿದ್ದಾರೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾಗೆ ಮೊದಲ ದಿನ ನಿರೀಕ್ಷೆಗೂ ಮೀರಿ ಕಲೆಕ್ಷನ್ ಆಗಿದೆ. ಮೊದಲ ದಿನ ಯಶ್ ನಟನೆಯ `ಕೆಜಿಎಫ್ 2′ (Kgf 2) ಚಿತ್ರದ ಹಿಂದಿ ವರ್ಷನ್ ಮೊದಲ ದಿನ ಮಾಡಿದ್ದ ದಾಖಲೆಯನ್ನು ಈಗ `ಪಠಾಣ್’ ಸಿನಿಮಾ ಮುರಿದಿದೆ. `ಪಠಾಣ್’ ಚಿತ್ರದ ಫಸ್ಟ್ ಡೇ ಮತ್ತು ಎರಡನೇ ದಿನ ಕಲೆಕ್ಷನ್ ಸೇರಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.

    ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ `ಕೆಜಿಎಫ್ 2′ ಸಿನಿಮಾದ ಹಿಂದಿ ವರ್ಷನ್‌ಗೆ ಉತ್ತರ ಭಾರತದಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಆ ಸಿನಿಮಾ ಮೊದಲ ದಿನ 53.95 ಕೋಟಿ ರೂಪಾಯಿ ಗಳಿಸಿ ಬೀಗಿತ್ತು. ಈಗ `ಪಠಾಣ್’ (Pathaan) ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಗಮನ ಸೆಳೆದಿದೆ. ದೇಶಾದ್ಯಂತ ಈ ಚಿತ್ರದ ಸದ್ದು ಜೋರಾಗಿದೆ. ಶಾರುಖ್ ಖಾನ್ ಕೆರಿಯರ್‌ನಲ್ಲಿ ಮತ್ತೆ ದೊಡ್ಡ ಗೆಲುವು ಪಡೆದಿದ್ದಾರೆ.  ಅವರ ಗೆಲುವು ಅಭಿಮಾನಿಗಳಿಗೆ ಖುಷಿ ನೀಡಿದೆ. ಶಾರುಖ್‌ ಪಠಾಣ್‌ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

    ಗಣರಾಜ್ಯೋತ್ಸವ ದಿನ (ಜ.26) ರಜೆ ದಿನ ಕಾರಣ ಸಿನಿಮಾಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗಿದೆ. ಸಿನಿಮಾ ನೋಡಲು ಫ್ಯಾನ್ಸ್ ಚಿತ್ರಮಂದಿರದತ್ತ ಮುಗಿಬಿದ್ದಿದ್ದಾರೆ. ಹಾಗಾಗಿ ಸಿನಿಮಾ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಶಾರುಖ್ ನಟನೆಯ ಪಠಾಣ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಂಗಾರದ ಬೆಳೆ ತೆಗೆದ `ಪಠಾಣ್’ ಚಿತ್ರಕ್ಕೆ ಕಂಗನಾ ರಣಾವತ್ ಮೆಚ್ಚುಗೆ

    ಬಂಗಾರದ ಬೆಳೆ ತೆಗೆದ `ಪಠಾಣ್’ ಚಿತ್ರಕ್ಕೆ ಕಂಗನಾ ರಣಾವತ್ ಮೆಚ್ಚುಗೆ

    ಬಾದಷಾ ಶಾರುಖ್ ಖಾನ್ (Sharukh Khan) ನಟನೆಯ `ಪಠಾಣ್’ (Pathaan Film) ಚಿತ್ರ ಬಾಕ್ಸಾಫೀಸ್‌ನಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ. ಶಾರುಖ್ ಚಿತ್ರದಿಂದ ಬಾಲಿವುಡ್‌ಗೆ ಮರುಜೀವ ಬಂದಂತೆ ಆಗಿದೆ. ಇದೀಗ ʻಪಠಾಣ್ʼ ಚಿತ್ರದ ನೋಡಿ ಕಂಗನಾ ರಣಾವತ್ ಹಾಡಿ ಹೊಗಳಿದ್ದಾರೆ.

    ನಿರೀಕ್ಷೆಗೂ ಮೀರಿ ಪಠಾಣ್ ಸಿನಿಮಾ ಬಾಲಿವುಡ್‌ನಲ್ಲಿ ಸದ್ದು ಮಾಡ್ತಿದೆ. ಹಿಂದಿ ಸಿನಿಮಾಗಳಿಂದ ಗೆಲುವು ಸಿಗದೇ ಸೋತಿದ್ದ ಬಾಲಿವುಡ್‌ಗೆ ಇದೀಗ ಹೊಸ ಕಳೆ ಬಂದಿದೆ. ಜ.25ರಂದು ತೆರೆಗೆ ಅಬ್ಬರಿಸಿದ್ದ `ಪಠಾಣ್’ ಚಿತ್ರಕ್ಕೆ ವ್ಯಾಪಕ್ತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮೂಲಗಳ ಪ್ರಕಾರ ಮೊದಲ ದಿನವೇ ಶಾರುಖ್ ಚಿತ್ರ 50ರಿಂದ 51.5 ಕೋಟಿ ರೂ. ಕಲೆಕ್ಷನ್ ಮಾಡಿದೆ. 2ನೇ ದಿನವೂ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.

    `ಜೀರೋ’ (Zero) ಚಿತ್ರದಿಂದ ಸೋತು ಸುಣ್ಣಗಾಗಿದ್ದ ಶಾರುಖ್‌ಗೆ `ಪಠಾಣ್’ ಚಿತ್ರದಿಂದ ಬೂಸ್ಟ್ ಸಿಕ್ಕಂತೆ ಆಗಿದೆ. ಇನ್ನೂ ಈ ಸಿನಿಮಾ ನೋಡಿ ಕಂಗನಾ ಕೂಡ ರಿಯಾಕ್ಟ್ ಮಾಡಿದ್ದಾರೆ. ಪಠಾಣ್ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಈ ರೀತಿಯ ಸಿನಿಮಾಗಳು ಖಂಡಿತಾ ವರ್ಕ್ ಆಗಬೇಕು. ಹಿಂದಿ ಚಿತ್ರರಂಗವು ಇತರೆ ಚಿತ್ರರಂಗಕ್ಕಿಂತ ಹಿಂದೆ ಬಿದ್ದಿದೆ. ಕೊನೆಗೂ ನಮ್ಮ ಸಿನಿಮಾಗಳ ಮೂಲಕ ಕಮ್‌ಬ್ಯಾಕ್ ಆಗಿದ್ದೇವೆ ಎಂದು ನಟಿ ಹೊಗಳಿದ್ದಾರೆ. ಸಿನಿಮಾ ಮತ್ತು ಶಾರುಖ್ ನಟನೆಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ಪುತ್ರಿ ಅಥಿಯಾ- ರಾಹುಲ್‌ ಮದುವೆಗೆ ದುಬಾರಿ ಉಡುಗೊರೆ ನೀಡಿದ ಸುನೀಲ್ ಶೆಟ್ಟಿ

    ಶೀಘ್ರದಲ್ಲಿಯೇ 100 ಕೋಟಿ ರೂಪಾಯಿ ಕ್ಲಬ್‌ಗೆ ಪಠಾಣ್ ಸಿನಿಮಾ ಸೇರಲಿದೆ. ಗಲ್ಲಾಪೆಟ್ಟಿಗೆಯಲ್ಲಿ ಚಿತ್ರ ಒಳ್ಳೆಯ ಕಮಾಯಿ ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾತ್ರಿ 2 ಗಂಟೆಗೆ ಅಸ್ಸಾಂ ಸಿಎಂಗೆ ಶಾರುಖ್‌ ಖಾನ್‌ ಫೋನ್‌ ಕಾಲ್‌

    ರಾತ್ರಿ 2 ಗಂಟೆಗೆ ಅಸ್ಸಾಂ ಸಿಎಂಗೆ ಶಾರುಖ್‌ ಖಾನ್‌ ಫೋನ್‌ ಕಾಲ್‌

    ಸ್ಸಾಂ ಗುವಾಹಟಿಯಲ್ಲಿ `ಪಠಾಣ್’ (Pathaan) ಸಿನಿಮಾ ವಿರುದ್ಧ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. `ಪಠಾಣ್’ ಚಿತ್ರಕ್ಕೆ ತೊಂದರೆಯಾಗುತ್ತಿರುವ ಬೆನ್ನಲ್ಲೇ ಅಸ್ಸಾಂ ಸಿಎಂಗೆ (Assam Cm) ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ಫೋನ್ ಕಾಲ್ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಹಿಂದಿ ಸಿನಿಮಾಗಳ ಬಗ್ಗೆ ಟೀಕೆ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ (Naredra Modi) ಅವರು ತಿಳಿಸಿದ್ದರು. ಈ ಬಗ್ಗೆ ಬಿಜೆಪಿ ಕಾರ್ಯಕರ್ತರಿಗೆ ಆದೇಶ ನೀಡಿದ್ದರು. ಈ ಬೆನ್ನಲ್ಲೇ ಗುವಾಹಟಿಯಲ್ಲಿ `ಪಠಾಣ್’ ಸಿನಿಮಾಗೆ ತೊಂದರೆಯಾಗಿದೆ. ಶಾರುಖ್‌ ಚಿತ್ರದ ವಿರುದ್ಧ ಹಿಂದೂ ಪರ ಸಂಘಟನೆಗಳು ನಿಂತಿದ್ದಾರೆ. ಚಿತ್ರದ ಪೋಸ್ಟರ್‌ಗಳನ್ನ ಹರಿದು ಹಾಕಿದ್ದಾರೆ. ಗುವಾಹಟಿಯಲ್ಲಿ ನಡೆಯುತ್ತಿರುವ ಬೆಳವಣಿಗೆ ನೋಡಿ ಅಸ್ಸಾಂ ಸಿಎಂ ಬಳಿ ಶಾರುಖ್ ಫೋನ್‌ ಕಾಲ್‌ ಮೂಲಕ ಮಾತನಾಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಸಿಎಂ ಹಿಮಂತ್ ಬಿಸ್ವ (Himanta Biswa) ಖಚಿತಪಡಿಸಿದ್ದಾರೆ. ಇದನ್ನೂ ಓದಿ: `ಕೆಜಿಎಫ್ 2′ ನಟಿ ರವೀನಾ ಟಂಡನ್ ಪುತ್ರಿ ರಾಶಾ ಬಾಲಿವುಡ್‌ಗೆ ಎಂಟ್ರಿ

    ಬಾಲಿವುಡ್ ನಟ ಶಾರುಖ್ ಖಾನ್ ಬೆಳಿಗ್ಗೆ 2 ಗಂಟೆಗೆ ಕರೆ ಮಾಡಿದ್ದರು. ಪಠಾಣ್ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಗುವಾಹಟಿಯಲ್ಲಿ ಘಟನೆ ಬಗ್ಗೆ ನಟ ಆತಂಕ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಹೊಣೆಯಾಗಿದೆ. ಇಂಥ ಅಹಿತಕರ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಸ್ಸಾಮ್ ಸಿಎಂ ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಇತ್ತೀಚೆಗೆ ಶಾರುಖ್ ಖಾನ್ ಕರೆ ಮಾಡುವ ಮೊದಲೇ, ಶಾರುಖ್ ಖಾನ್ ಎಂದರೆ ಯಾರು ಎಂದು ಅಸ್ಸಾಂ ಸಿಎಂ ಪ್ರಶ್ನೆ ಮಾಡಿದ್ದರು. ʻಪಠಾಣ್ʼ ಸಿನಿಮಾ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ಕುರಿತು ಸುದ್ದಿಗಾರರ ಪ್ರಶ್ನೆ ಅಚ್ಚರಿಯ ಉತ್ತರ ನೀಡಿದ್ದರು. ಶಾರುಖ್ ಆಗಲಿ, ಅವರ ಸಿನಿಮಾಗಳ ಬಗ್ಗೆಯಾಗಲಿ ನನಗೇನು ಗೊತ್ತಿಲ್ಲ ಎಂದು ಸಿಎಂ ಉತ್ತರಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಮ್ಮ ಆಸ್ಕರ್ ಅವಾರ್ಡ್ ಮುಟ್ಟಲು ಅವಕಾಶ ಕೊಡ್ತೀರಾ: ರಾಮ್ ಚರಣ್‌ಗೆ ಕಿಂಗ್ ಖಾನ್ ಮನವಿ

    ನಿಮ್ಮ ಆಸ್ಕರ್ ಅವಾರ್ಡ್ ಮುಟ್ಟಲು ಅವಕಾಶ ಕೊಡ್ತೀರಾ: ರಾಮ್ ಚರಣ್‌ಗೆ ಕಿಂಗ್ ಖಾನ್ ಮನವಿ

    ಸ್ಕರ್ 2023 ಭಾರತೀಯರಿಗೆ ಬಾರಿ ನಿರೀಕ್ಷೆ ಮೂಡಿಸಿದೆ. ಈ ಬಾರಿ ಆಸ್ಕರ್ ಅಂಗಳದಲ್ಲಿ ಭಾರತದ ಅನೇಕ ಸಿನಿಮಾಗಳಿವೆ. ಇದರ ಮಧ್ಯೆ ಶಾರುಖ್ ಟ್ವೀಟ್ ನೆಟ್ಟಿಗರಿಗೆ ಅಚ್ಚರಿ ಮೂಡಿಸಿದೆ. `ಆರ್‌ಆರ್‌ಆರ್’ (RRR Film) ಸ್ಟಾರ್ ರಾಮ್ ಚರಣ್‌ಗೆ ಬಾಲಿವುಡ್ ಬಾದಷಾ ಶಾರುಖ್ ಖಾನ್ (Sharukh Khan) ವಿಶೇಷ ಮನವಿವೊಂದು ಮಾಡಿದ್ದಾರೆ.

    `ಆರ್‌ಆರ್‌ಆರ್’ ಸಿನಿಮಾ ಇದೀಗ ಆಸ್ಕರ್ ರೇಸ್‌ನಲ್ಲಿದೆ. 10ಕ್ಕೂ ಹೆಚ್ಚು ಚಿತ್ರಗಳು ಪ್ರತಿಷ್ಠಿತ ಅಕಾಡೆಮಿ ಅವಾರ್ಡ್ ರೇಸ್‌ನಲ್ಲಿ ಇರುವುದು ಭಾರತೀಯರಿಗೆ ಹೆಮ್ಮೆಯ ವಿಚಾರವಾಗಿದೆ. ಯಾವ ಸಿನಿಮಾ ಆಸ್ಕರ್ (Oscar Award) ಗೆದ್ದು ಭಾರತಕ್ಕೆ ತರುತ್ತಾರೆ ಎನ್ನುವ ಕುತೂಹಲ ಮೂಡಿಸಿದೆ. ಈ ನಡುವೆ ಶಾರುಖ್ ಖಾನ್ ಟ್ವೀಟ್ ಅಚ್ಚರಿ ಮೂಡಿಸಿದೆ. ಆಸ್ಕರ್ ತಂದಾಗ ದಯವಿಟ್ಟು ಮುಟ್ಟಲು ಕೊಡಿ ಎಂದು ಕೇಳಿಕೊಂಡಿದ್ದಾರೆ. ಹೌದು, ಈ ಬಾರಿಯ ಆಸ್ಕರ್ ರೇಸ್‌ನಲ್ಲಿ ರಾಜಮೌಳಿ (Rajamouli) ನಿರ್ದೇಶನದ `ಆರ್‌ಆರ್‌ಆರ್’ ಸಿನಿಮಾ ಕೂಡ ಇದೆ. `ಆರ್‌ಆರ್‌ಆರ್’ ತಂಡಕ್ಕೆ ಬಾಲಿವುಡ್ ಕಿಂಗ್ ಖಾನ್ ವಿಶೇಷ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹಿಂದಿ ಸೇರಿ ಏಳು ಸಿನಿಮಾಗಳಲ್ಲಿ ರಾಗಿಣಿ ದ್ವಿವೇದಿ ಬ್ಯುಸಿ

    ಸೌತ್ ಸಿನಿಮಾಗಳ (South Film Industry)  ಸಕ್ಸಸ್ ನಂತರ ಇದೀಗ ಹಿಂದಿ ಚಿತ್ರರಂಗದ ಸ್ಟಾರ್ ನಟರು ದಕ್ಷಿಣದ ಸ್ಟಾರ್‌ಗಳ ಜೊತೆ ಉತ್ತಮ ಬಾಂಧವ್ಯಹೊAದಿದ್ದಾರೆ. ಆಗಾಗ ದಕ್ಷಿಣ ಹೀರೋಗಳ ಜೊತೆ ಕಾಣಿಸಿಕೊಳ್ಳುತ್ತಿರುತ್ತಾರೆ. ಶಾರುಖ್ ಮತ್ತು ರಾಮ್ ಚರಣ್ ಇಬ್ಬರೂ ಉತ್ತಮ ಸ್ನೇಹಿತರು. ರಾಮ್ ಚರಣ್ ಸೋಷಿಯಲ್ ಮೀಡಿಯಾದಲ್ಲಿ `ಪಠಾಣ್’ (Pathan) ಟ್ರೈಲರ್ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ಆಸ್ಕರ್ ಪ್ರಶಸ್ತಿಯನ್ನು `ಆರ್‌ಆರ್‌ಆರ್’ (RRR) ಚಿತ್ರತಂಡ ಭಾರತಕ್ಕೆ (India) ತಂದಾಗ ನನಗೆ ಅದನ್ನು ಮುಟ್ಟಲು ಕೊಡಿ ಪ್ಲೀಸ್ ಎಂದು ಶಾರುಖ್ ಮನವಿ ಮಾಡಿದ್ದಾರೆ. ನಟನ ಮಾತಿಗೆ ರಾಮ್ ಚರಣ್ ಕೂಡ ಪ್ರತಿಕ್ರಿಯಿಸಿದ್ದಾರೆ. ಖಂಡಿತವಾಗಿಯೂ ಶಾರುಖ್ ಸರ್. ಆ ಪ್ರಶಸ್ತಿ ಭಾರತೀಯ ಚಿತ್ರರಂಗಕ್ಕೆ ಸೇರಿದ್ದು ಎಂದು ಟ್ವೀಟ್ ಮಾಡಿದ್ದಾರೆ. ಈ ನಟರಿಬ್ಬರ ಟ್ವಿಟರ್ ಮಾತುಕತೆ ವೈರಲ್ ಆಗಿದೆ. ಇಬ್ಬರ ನಡುವಿನ ಸ್ನೇಹವನ್ನು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k