Tag: sharwanand

  • ಹೆಣ್ಣು ಮಗುವಿಗೆ ತಂದೆಯಾದ ಸಂಭ್ರಮದಲ್ಲಿ ಶರ್ವಾನಂದ್

    ಹೆಣ್ಣು ಮಗುವಿಗೆ ತಂದೆಯಾದ ಸಂಭ್ರಮದಲ್ಲಿ ಶರ್ವಾನಂದ್

    ಟಾಲಿವುಡ್ ನಟ ಶರ್ವಾನಂದ್ (Sharwanand) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಶರ್ವಾನಂದ್ ಪತ್ನಿ ರಕ್ಷಿತಾ ರೆಡ್ಡಿ (Rakshitha Reddy) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಮುದ್ದು ಮಗಳ ಆಗಮನದ ಬಗ್ಗೆ ನಟ ಸಿಹಿಸುದ್ದಿ ಹಂಚಿಕೊಂಡಿದ್ದಾರೆ.

    ಮಾರ್ಚ್ 6 ಶರ್ವಾನಂದ್ ಹುಟ್ಟುಹಬ್ಬವಾಗಿದ್ದು, ಮಗಳ ಆಗಮನದ ಬಗ್ಗೆ ಸ್ಪೆಷಲ್ ಫೋಟೋ ಹಂಚಿಕೊಂಡಿದ್ದಾರೆ. ಹುಟ್ಟುಹಬ್ಬಕ್ಕೆ ವಿಶ್ ಮಾಡಿದಕ್ಕೆ ನಟ ಧನ್ಯವಾದಗಳನ್ನು ತಿಳಿಸಿದ್ದು, ಮಗಳು (Baby Girl) ಹುಟ್ಟಿರುವ ಸುದ್ದಿ ತಿಳಿಸಿ, ಈ ವರ್ಷ ಆಶೀರ್ವಾದದೊಂದಿಗೆ ಹೊಸ ವರ್ಷವನ್ನು ಪ್ರವೇಶಿಸುತ್ತಿದ್ದೇನೆ ಎಂದಿದ್ದಾರೆ.

     

    View this post on Instagram

     

    A post shared by Sharwanand (@imsharwanand)

    ‘ಲೀಲಾ ದೇವಿ ಮೈನೇನಿ’ ಎಂದು ಮಗಳಿಗೆ ಹೆಸರಿಟ್ಟಿರೋದಾಗಿ ನಟ ರಿವೀಲ್ ಮಾಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ ಪತ್ನಿ ರಕ್ಷಿಕಾ ಮಗಳ ಕಾಲು ಹಿಡಿದುಕೊಂಡಿರುವ ಮುದ್ದಾದ ಫೋಟೋ ಶೇರ್ ಮಾಡಿದ್ದಾರೆ. ಆದರೆ ಎಲ್ಲೂ ಕೂಡ ಮಗಳ ಮುಖ ರಿವೀಲ್ ಮಾಡಿಲ್ಲ.

     

    View this post on Instagram

     

    A post shared by Sharwanand (@imsharwanand)

    ರನ್ ರಾಜಾ ರನ್, ಎಕ್ಸ್‌ಪ್ರೆಸ್‌ ರಾಜಾ, ಜಾನು, ಮಹಾಸಮುದ್ರಂ, ಸೇರಿದಂತೆ ಹಲವು ಸಿನಿಮಾಗಳಲ್ಲಿ ಶರ್ವಾನಂದ್ ನಟಿಸಿದ್ದಾರೆ. ಇದನ್ನೂ ಓದಿ:ಕಿಚ್ಚ ಸುದೀಪ್ ಮೆಚ್ಚಿದ ‘ಕೆರೆಬೇಟೆ’ ಟ್ರೈಲರ್

    ಕಳೆದ ವರ್ಷ ಜೂನ್‌ನಲ್ಲಿ ರಕ್ಷಿತಾ ರೆಡ್ಡಿ ಜೊತೆ ಶರ್ವಾನಂದ್ ಜೈಪುರನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಶರ್ವಾನಂದ್ ಮದುವೆ ಸಂಭ್ರಮದಲ್ಲಿ ಅದಿತಿ ರಾವ್ ಹೈದರಿ, ಸಿದ್ಧಾರ್ಥ್, ಮೆಗಾ ಸ್ಟಾರ್ ಚಿರಂಜೀವಿ- ರಾಮ್ ಚರಣ್ ಕುಟುಂಬ ಭಾಗಿಯಾಗಿತ್ತು.

  • ತೆಲುಗಿನ ಈ ನಟನಿಗೆ ತಾಯಿಯಾಗಿ ನಟಿಸುತ್ತಾರಾ ‘ಪವರ್‌’ ಚಿತ್ರದ ನಟಿ ತ್ರಿಷಾ?

    ತೆಲುಗಿನ ಈ ನಟನಿಗೆ ತಾಯಿಯಾಗಿ ನಟಿಸುತ್ತಾರಾ ‘ಪವರ್‌’ ಚಿತ್ರದ ನಟಿ ತ್ರಿಷಾ?

    ‘ಪೊನ್ನಿಯನ್ ಸೆಲ್ವನ್ 2′ (Ponniyin Selvan 2) ಸಕ್ಸಸ್ ನಂತರ ಸಾಲು ಸಾಲು ಸಿನಿಮಾಗಳು ತ್ರಿಷಾ ಕೃಷ್ಣನ್‌ಗೆ (Trisha Krishnan) ಅರಸಿ ಬರುತ್ತಿದೆ. ನವನಟಿಯರನ್ನು ನಾಚಿಸೋ ಹಾಗೆಯೇ ಇರುವ ತ್ರಿಷಾಗೆ ಸ್ಟಾರ್ ನಟನಿಗೆ ತಾಯಿಯಾಗುವ ಆಫರ್ ಸಿಕ್ಕಿದೆಯಂತೆ. ತೆಲುಗಿನ ಹೀರೋಗೆ ತ್ರಿಷಾ ತಾಯಿಯಾಗಿ ನಟಿಸುತ್ತಾರಾ? ಇಲ್ಲಿದೆ ಮಾಹಿತಿ.

    ಮಲಯಾಳಂ ‘ಬ್ರೋ ಡ್ಯಾಡಿ’ (Bro Daddy) ಸಿನಿಮಾ ತೆಲುಗಿಗೆ ರಿಮೇಕ್ ಮಾಡಲು ಪ್ಲ್ಯಾನ್ ಮಾಡಲಾಗಿದೆ. ಶ್ರೀಲೀಲಾ (Sreeleela) ಹೊಸ ಚಿತ್ರಕ್ಕೆ ಹೀರೋ ಆಗಿ ಶರ್ವಾನಂದ್ ಕಾಣಿಸಿಕೊಳ್ತಿದ್ದಾರೆ. ಶರ್ವಾನಂದ್ ತಾಯಿಯ ಪಾತ್ರಕ್ಕೆ ತ್ರಿಷಾ ಅವರನ್ನ ಕೇಳಲಾಗಿದೆ. ಮೆಗಾಸ್ಟಾರ್ ಚಿರಂಜೀವಿಗೆ (Megastar Chiranjeevi)  ನಾಯಕಿಯಾಗಿ ತ್ರಿಷಾಗೆ ನಟಿಸಲು ಬುಲಾವ್ ಬಂದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ವಿಜಯ ರಾಘವೇಂದ್ರಗೆ ಧೈರ್ಯ ತುಂಬಿದ ಯಶ್

    40ನೇ ವರ್ಷದ ವಯಸ್ಸಿನಲ್ಲೂ 20ರ ಯುವತಿಯಂತೆ ಕಾಣೋ ತ್ರಿಷಾ, 39ನೇ ವಯಸ್ಸಿನ ನಟ ಶರ್ವಾನಂದ್‌ಗೆ ತಾಯಿಯಾಗಿ ನಟಿಸುತ್ತಾರಾ ಎಂಬ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಮೆಗಾಸ್ಟಾರ್ ಚಿರಂಜೀವಿ, ಶ್ರೀಲೀಲಾ(Sreeleela), ಶರ್ವಾನಂದ್ (Sharwanand) ಹೊಸ ಚಿತ್ರಕ್ಕೆ ತ್ರಿಷಾ ಕೈಜೋಡಿಸ್ತಾರಾ ಎಂಬುದನ್ನ ಕಾದುನೋಡಬೇಕಿದೆ. ಹೀರೋಯಿನ್‌ ಆಗಿಯೇ ಕನ್ನಡದ ಪವರ್‌ ಚಿತ್ರದ ನಾಯಕಿ ತ್ರಿಷಾಗೆ ಬಂಪರ್‌ ಆಫರ್ಸ್‌ಗಳಿದ್ದು, ಶರ್ವಾನಂದ್‌ಗೆ ತಾಯಿಯಾಗಿ ನಟಿಸಲು ಓಕೆ ಅಂದ್ರಾ? ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.

    ‘ಪೊನ್ನಿಯನ್ ಸೆಲ್ವನ್ 2’ ನಂತರ ವಿಜಯ್ ದಳಪತಿ ನಟನೆಯ ‘ಲಿಯೋ’ ಸಿನಿಮಾಗೆ ತ್ರಿಷಾ ನಾಯಕಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶ್ರೀಲೀಲಾಗೆ ಒಲಿದು ಬಂದ ಅದೃಷ್ಟ- ಮೆಗಾಸ್ಟಾರ್ ಸಿನಿಮಾದಲ್ಲಿ ಕನ್ನಡತಿ

    ಶ್ರೀಲೀಲಾಗೆ ಒಲಿದು ಬಂದ ಅದೃಷ್ಟ- ಮೆಗಾಸ್ಟಾರ್ ಸಿನಿಮಾದಲ್ಲಿ ಕನ್ನಡತಿ

    ನ್ನಡದ ಬ್ಯೂಟಿ ಶ್ರೀಲೀಲಾ (Sreeleela) ತೆಲುಗಿನಲ್ಲಿ ಆಫರ್ ಮೇಲೆ ಆಫರ್. ರಶ್ಮಿಕಾ ಮಂದಣ್ಣ(Rashmika Mandanna)- ಪೂಜಾ ಹೆಗ್ಡೆಗೆ ಸೆಡ್ಡು ಹೊಡೆದು ಶ್ರೀಲೀಲಾ ಈಗ ಟಾಲಿವುಡ್‌ನಲ್ಲಿ ಮಿರ ಮಿರ ಅಂತಾ ಮಿಂಚ್ತಿದ್ದಾರೆ. ತೆಲುಗು ಅಡ್ಡಾದಿಂದ ನಯಾ ಖಬರ್ ಗಿರಕಿ ಹೊಡೆಯುತ್ತಿದೆ. ಮೆಗಾಸ್ಟಾರ್ ಚಿರಂಜೀವಿ- ತ್ರಿಷಾ ನಟನೆಯ ಸಿನಿಮಾದಲ್ಲಿ ಭರಾಟೆ ನಟಿ ನಟಿಸುವ ಬಂಪರ್ ಆಫರ್ ಬಾಚಿಕೊಂಡಿದ್ದಾರೆ.

    ಡೇಂಜರ್ ಪಿಲ್ಲಾ ಶ್ರೀಲೀಲಾ ನಸೀಬು ಚೆನ್ನಾಗಿದೆ. ಕನ್ನಡದ 3 ಸಿನಿಮಾ, ತೆಲುಗಿನಲ್ಲಿ ಎರಡೇ ಚಿತ್ರಕ್ಕೆ ಬ್ಯಾಕ್ ಟು ಬ್ಯಾಕ್ 8ಕ್ಕೂ ಹೆಚ್ಚು ಚಿತ್ರಗಳಿಗೆ ಲೀಲಾ ನಾಯಕಿಯಾಗಿದ್ದಾರೆ. ತೆಲುಗಿನಲ್ಲಿ ಬಿಗ್ ಬ್ಯಾನರ್ ಚಿತ್ರಗಳಿಗೆ ರಶ್ಮಿಕಾ, ಪೂಜಾ, ಕೃತಿ ಶೆಟ್ಟಿ (Krithi Shetty) ಅವರೇ ಬೇಕು ಎಂದು ಭಜನೆ ಮಾಡುತ್ತಿದ್ದ ನಿರ್ಮಾಪಕರ ಪಾಲಿಗೆ ಇಷ್ಟದೇವತೆಯಾಗಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ.

    ತೆಲುಗಿನ ಬಿಗ್ ಬಜೆಟ್ ಸಿನಿಮಾವೊಂದಕ್ಕೆ ಮೆಗಾಸ್ಟಾರ್ ಚಿರಂಜೀವಿ- ನಟಿ ತ್ರಿಷಾ ಕೃಷನ್ ಜೋಡಿಯಾಗಿ ಬರುತ್ತಿದ್ದಾರೆ. ಮಲಯಾಳಂ ಬ್ರೋ ಡ್ಯಾಡಿ ಸಿನಿಮಾವನ್ನ ತೆಲುಗಿಗೆ ರಿಮೇಕ್ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ಮೆಗಾಸ್ಟಾರ್, ತ್ರಿಷಾ ಇರಲಿದ್ದಾರೆ. ಇವರ ಜೊತೆ ತೆಲುಗಿನ ಹೀರೋ ಶರ್ವಾನಂದ್ ಕೂಡ ಆಕ್ಟ್ ಮಾಡ್ತಿದ್ದಾರೆ.

    ಬ್ರೋ ಡ್ಯಾಡಿ (Bro Daddy)  ತಂದೆ-ಮಗನ ಕುರಿತ ಸಿನಿಮಾವಾಗಿದ್ದು ಚಿರಂಜೀವಿ- ತ್ರಿಷಾ(Trisha), ಪತಿ ಮತ್ತು ಪತ್ನಿ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿರಂಜೀವಿ ಮಗನ ಪಾತ್ರಕ್ಕೆ ಶರ್ವಾನಂದ್ ಫೈನಲ್ ಆಗಿದ್ದಾರೆ. ಶರ್ವಾನಂದ್‌ಗೆ (Sharwanand) ನಾಯಕಿಯಾಗಿ ಶ್ರೀಲೀಲಾ (Sreeleela) ಫಿಕ್ಸ್ ಆಗಿದ್ದಾರೆ. ಈ ಚಿತ್ರಕ್ಕೆ ಮೆಗಾಸ್ಟಾರ್ ಪುತ್ರಿ ಸುಶ್ಮಿತಾ ಕೊನಿಡೆಲಾ ಅವರು ನಿರ್ಮಾಣ ಮಾಡ್ತಿದ್ದಾರೆ. ಇದನ್ನೂ ಓದಿ:ಕೇವಲ ಒಂದು ಹಾಡಿಗೆ 90 ಕೋಟಿ ಖರ್ಚು ಮಾಡ್ತಾರಂತೆ ‘ಗೇಮ್‌ಚೇಂಜರ್’ ಚಿತ್ರತಂಡ

    ಮಲಯಾಳಂನಲ್ಲಿ 2022ರಲ್ಲಿ ಬ್ರೋ ಡ್ಯಾಡಿ ಸಿನಿಮಾ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೂಡಿ ಬಂದಿತ್ತು. ಮೋಹನ್ ಲಾಲ್(Mohanlal), ಪೃಥ್ವಿರಾಜ್ ಸುಕುಮಾರನ್, ಮೀನಾ, ಕಲ್ಯಾಣಿ ಪ್ರಿಯಾದರ್ಶನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರ ಮಾಲಿವುಡ್‌ನಲ್ಲಿ ಹಿಟ್ ಆಗಿತ್ತು.ಈಗ ಇದೇ ಚಿತ್ರವನ್ನು ತೆಲುಗಿನಲ್ಲಿ ತರಲು ಪ್ಲ್ಯಾನ್ ಮಾಡಿದ್ದಾರೆ. ಇದು ಸದ್ಯ ಟಾಲಿವುಡ್‌ನ ಹಾಟ್ ಟಾಪಿಕ್ ಆಗಿದ್ದು, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ತೆಲುಗು ಆಕ್ಟರ್ ಶರ್ವಾನಂದ್ (Sharwanand) ಅವರು ಜೂನ್ 3ರಂದು ರಕ್ಷಿತಾ ರೆಡ್ಡಿ (Rakshitha Reddy) ಜೊತೆ ಹೊಸ ಬಾಳಿಗೆ ಕಾಲಿಟ್ಟರು. ಜೈಪುರದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ಶರ್ವಾನಂದ್ ಮದುವೆಯಾದರು. ಇದೀಗ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ನಟನ ಆರತಕ್ಷತೆ ಜರುಗಿದೆ. ಈ ಸಂಭ್ರಮದಲ್ಲಿ ಸಿನಿ ತಾರೆಯರು ಭಾಗಿಯಾಗಿದ್ದಾರೆ.

    ಟಾಲಿವುಡ್ (Tollywood) ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ನಟ ಶರ್ವಾನಂದ್ ಸಂಚಲನ ಮೂಡಿಸಿದ್ದಾರೆ. ಜಾನೂ, ಮಹಾಸಮುದ್ರಂ, ಓಕೆ ಓಕಾ ಜೀವಿತಂ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಭಿನ್ನ ಕಥೆ, ವಿಭಿನ್ನ ಪಾತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ.

    ಜನವರಿ 26ರಂದು ಶರ್ವಾನಂದ್- ರಕ್ಷಿತಾ ರೆಡ್ಡಿ (Rakshitha Reddy) ಜೋಡಿ ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೊಂದು ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದ್ದು, ಇಂಜಿನಿಯರ್ ರಕ್ಷಿತಾ ಜೊತೆ ನಟ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಜೂನ್ 3ರ ರಾತ್ರಿ 11ಕ್ಕೆ ಸಂಪ್ರದಾಯ ಬದ್ಧವಾಗಿ ಶರ್ವಾನಂದ್ ಜೋಡಿ ಮದುವೆಯಾದರು. ನಟ ಶರ್ವಾನಂದ್ ಲೈಟ್ ಬಣ್ಣದ ಶೆರ್ವಾನಿಯಲ್ಲಿ ಮಿಂಚಿದ್ರೆ, ಪತ್ನಿ ರಕ್ಷಿತಾ ಲೈಟ್ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದರು. ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ಜೈಪುರ ಲೀಲಾ ಪ್ಯಾಲೇಸ್‌ನಲ್ಲಿ ಮದುವೆಯಾಗಿದ್ದ ಶರ್ವಾನಂದ್ ಇದೀಗ ಹೈದರಾಬಾದ್‌ನಲ್ಲಿ ಚಿತ್ರರಂಗದ ಸ್ನೇಹಿತರಿಗೆ ಆಪ್ತರಿಗೆ ರಿಸೆಪ್ಷನ್‌ಗೆ ಆಹ್ವಾನ ನೀಡಿದ್ದರು. ಸೆಲೆಬ್ರಿಟಿಗಳ ದಂಡೇ ನಟನ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಬಿಳಿ ಬಣ್ಣದ ಸೂಟ್‌ನಲ್ಲಿ ಶರ್ವಾನಂದ್ ಕಾಣಿಸಿಕೊಂಡಿದ್ದರೆ, ಪತ್ನಿ ರಕ್ಷಿತಾ ಲೈಟ್ ಬಣ್ಣದ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಶರ್ವಾನಂದ್ ರೆಸೆಪ್ಷನ್ ಸಂಭ್ರಮದಲ್ಲಿ ರಾಮ್ ಚರಣ್ (Ram Charan) ದಂಪತಿ, ಬಾಲಯ್ಯ, ನಟ ವೆಂಕಟೇಶ್, ರಾಣಾ ದಗ್ಗುಭಾಟಿ, ಲಕ್ಷ್ಮಿ ಮಂಚು, ನಿಖಿಲ್ ಸಿದ್ಧಾರ್ಥ್, ನಟಿ ರೀತು ವರ್ಮಾ ಸೇರಿದಂತೆ ಹಲವು ಭಾಗಿಯಾಗಿ, ಶುಭಕೋರಿದರು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್

    ತೆಲುಗು ನಟ ಶರ್ವಾನಂದ್- ರಕ್ಷಿತಾ ರೆಡ್ಡಿ (Rakshitha Reddy) ಅವರು ಜೂನ್ 3ರಂದು ರಾತ್ರಿ 11 ಗಂಟೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕುಟುಂಬದಸ್ಥರ ಸಮ್ಮುಖದಲ್ಲಿ ಶರ್ವಾನಂದ್ (Actor sharwanand) ಅವರು ರಕ್ಷಿತಾ ಜೊತೆ ಸಪ್ತಪದಿ ತುಳಿದರು. ನಟನ ಮದುವೆ ಸಂಭ್ರಮದಲ್ಲಿ ನಟ ರಾಮ್‌ಚರಣ್ (Ramcharan), ಸಿದ್ಧಾರ್ಥ್, ನಿರ್ಮಾಪಕ ವಂಶಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

    ಜನವರಿ 26ರಂದು ಶರ್ವಾನಂದ್- ರಕ್ಷಿತಾ ರೆಡ್ಡಿ ಜೋಡಿ ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೊಂದು ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದ್ದು, ಇಂಜಿನಿಯರ್ ರಕ್ಷಿತಾ ಜೊತೆ ನಟ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಜೂನ್ 3ರ ರಾತ್ರಿ 11ಕ್ಕೆ ಸಂಪ್ರದಾಯ ಬದ್ಧವಾಗಿ ಶರ್ವಾನಂದ್ ಜೋಡಿ ಮದುವೆಯಾಗಿದ್ದಾರೆ. ಜೈಪುರದ (Jaipur) ಲೀಲಾ ಪ್ಯಾಲೇಸ್‌ನಲ್ಲಿ ಈ ಅದ್ದೂರಿ ಮದುವೆ ನಡೆದಿದೆ.

    ನಟ ಶರ್ವಾನಂದ್ ಲೈಟ್ ಬಣ್ಣದ ಶೆರ್ವಾನಿಯಲ್ಲಿ ಮಿಂಚಿದ್ರೆ, ಪತ್ನಿ ರಕ್ಷಿತಾ ಲೈಟ್ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಸದ್ಯ ಮದುವೆಯ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಅಭಿಷೇಕ್ ಮದುವೆಗೆ ಬಂದು ಶುಭ ಹಾರೈಸಿದ ರಜನಿಕಾಂತ್

    ನಟ ಶರ್ವಾನಂದ್ ಮದುವೆಗೆ ರಾಮ್‌ಚರಣ್, ಸಿದ್ಧಾರ್ಥ್ ಸೇರಿದಂತೆ ಸಿನಿಮಾ ತಾರೆಯರು ಮತ್ತು ರಾಜಕೀಯ ರಂಗದ ಗಣ್ಯರು ಭಾಗವಹಿಸಿ, ಹಾರೈಸಿದ್ದಾರೆ. ನವಜೋಡಿಗೆ ಅಭಿಮಾನಿಗಳು ಕೂಡ ಶುಭಕೋರಿದ್ದಾರೆ.

  • ಕಾರು ಅಪಘಾತ: ಆರೋಗ್ಯವಾಗಿದ್ದೇನೆ ಭಯ ಬೇಡ ಎಂದ ನಟ ಶರ್ವಾನಂದ್

    ಕಾರು ಅಪಘಾತ: ಆರೋಗ್ಯವಾಗಿದ್ದೇನೆ ಭಯ ಬೇಡ ಎಂದ ನಟ ಶರ್ವಾನಂದ್

    ತೆಲುಗಿನ ಖ್ಯಾತ ನಟ ಶರ್ವಾನಂದ್ ಅವರ ಕಾರು ಅಪಘಾತವಾಗಿ ಅಭಿಮಾನಿಗಳಿಗೆ ಸಾಕಷ್ಟು ಆತಂಕ ಮೂಡಿಸಿತ್ತು. ಶರ್ವಾನಂದ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು.  ಅಪಘಾತಕ್ಕೆ ಸಂಬಂಧಿಸಿದಂತೆ ನಾನಾ ರೀತಿಯ ಗೊಂದಲಗಳು ಕೂಡ ಮೂಡಿದ್ದವು. ಈ ಕುರಿತು ಸ್ವತಃ ಶರ್ವಾನಂದ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ‘ರವಿವಾರ ಆಗಿದ್ದು ಸಣ್ಣ ಅಪಘಾತ. ಅದರಿಂದ ನನಗೆ ಸಣ್ಣ ಪುಟ್ಟ ಗಾಯಗಳಾಗಿವೆ ಅಷ್ಟೆ. ಆತಂಕ ಪಡುವಂಥದ್ದು ಏನೂ ಆಗಿಲ್ಲ. ನಾನು ಆರೋಗ್ಯವಾಗಿದ್ದೇನೆ. ತಾವೆಲ್ಲ ನನ್ನ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಧನ್ಯವಾದಗಳು’ ಎಂದು ಶರ್ವಾನಂದ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ

    ಜೂನ್ 2 ರಂದು ಶರ್ವಾನಂದ್ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಹೈದರಾಬಾದ್ ನ ಜೂಬ್ಲಿ ಹಿಲ್ಸ್ ಬಳಿ ಅಪಘಾತಕ್ಕೀಡಾಗಿತ್ತು (Accident). ಶರ್ವಾನಂದ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಶರ್ವಾನಂದ್ ಅವರ ಡ್ರೈವರ್ ಆ ಕಾರು ಓಡಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಕಾರು ಪಲ್ಟಿಯಾಗಿದೆ. ಅದು ಐಷಾರಾಮಿ ಕಾರು ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದರು.

    ಶರ್ವಾನಂದ್ (Sharwanand) ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಕೆಲ ತಿಂಗಳ ಹಿಂದೆಯಷ್ಟೇ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದರು. ಇದೀಗ ಜೂನ್ 2 ಮತ್ತು 3 ರಂದು ರಾಜಸ್ಥಾನದ ಜೈಪುರದಲ್ಲಿರುವ ಲೀಲಾ ಪ್ಯಾಲೇಸ್ ನಲ್ಲಿ ಮದುವೆ ಆಗುತ್ತಿದ್ದಾರೆ. ಈಗವರು ಮದುವೆ ಸಿದ್ಧತೆಯಲ್ಲಿದ್ದರು.

    ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್ಟ್ ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಇವರ ಮದುವೆಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಕಾರು ಅಪಘಾತದಲ್ಲಿ ಗಾಯಗೊಂಡ ನಟ ಶರ್ವಾನಂದ್: ನಟನ ಮದುವೆಗೆ 3 ದಿನವಷ್ಟೇ ಬಾಕಿ

    ಕಾರು ಅಪಘಾತದಲ್ಲಿ ಗಾಯಗೊಂಡ ನಟ ಶರ್ವಾನಂದ್: ನಟನ ಮದುವೆಗೆ 3 ದಿನವಷ್ಟೇ ಬಾಕಿ

    ದೇ ಜೂನ್ 2 ರಂದು ತೆಲುಗಿನ ಖ್ಯಾತ ನಟ ಶರ್ವಾನಂದ್ ಮದುವೆ. ಅವರ ಇಡೀ ಕುಟುಂಬ ಸಡಗರ ಸಂಭ್ರಮದಲ್ಲಿದ್ದರೆ ಅತ್ತ ಶರ್ವಾನಂದ್ ಕಾರು (Car) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಹೈದರಾಬಾದ್ ನ ಜೂಬ್ಲಿ ಹಿಲ್ಸ್ ಬಳಿ ಅಪಘಾತಕ್ಕೀಡಾಗಿದೆ (Accident). ಶರ್ವಾನಂದ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

    ಶರ್ವಾನಂದ್ ಅವರ ಡ್ರೈವರ್ ಆ ಕಾರು ಓಡಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿದೆ. ಅದು ಐಷಾರಾಮಿ ಕಾರು ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕೂಡಲೇ ಶರ್ವಾನಂದ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲವೆಂದು ತಿಳಿಸಿದ್ದಾರೆ.

    ಶರ್ವಾನಂದ್ (Sharwanand) ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಕೆಲ ತಿಂಗಳ ಹಿಂದೆಯಷ್ಟೇ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದರು. ಇದೀಗ ಜೂನ್ 2 ಮತ್ತು 3 ರಂದು ರಾಜಸ್ಥಾನದ ಜೈಪುರದಲ್ಲಿರುವ ಲೀಲಾ ಪ್ಯಾಲೇಸ್ ನಲ್ಲಿ ಮದುವೆ ಆಗುತ್ತಿದ್ದಾರೆ. ಈಗವರು ಮದುವೆ ಸಿದ್ಧತೆಯಲ್ಲಿದ್ದರು. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್ಟ್ ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಇವರ ಮದುವೆಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಟೆಕ್ಕಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿತ್ತಾ? : ನಟ ಶರ್ವಾನಂದ್ ಆಪ್ತರ ಪ್ರತಿಕ್ರಿಯೆ

    ಟೆಕ್ಕಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿತ್ತಾ? : ನಟ ಶರ್ವಾನಂದ್ ಆಪ್ತರ ಪ್ರತಿಕ್ರಿಯೆ

    ತ್ತೀಚೆಗಷ್ಟೇ ಟೆಕ್ಕಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಟಾಲಿವುಡ್ (Tollywood) ನಟ ಶರ್ವಾನಂದ್ (Sharwanand), ಕೆಲವೇ ದಿನಗಳಲ್ಲಿ ಎಂಗೇಜ್ ಮೆಂಟ್ ಮುರಿದುಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಟಾಲಿವುಡ್ ಅಂಗಳದಲ್ಲಿ ಈ ಸುದ್ದಿ ಭಾರೀ ಸದ್ದು ಮಾಡುತ್ತಿದ್ದರೂ, ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಶರ್ವಾನಂದ್. ಇದೇ ಮೊದಲ ಬಾರಿಗೆ ಅವರ ಆತ್ಮೀಯರು ಈ ಕುರಿತು ಮಾತನಾಡಿದ್ದಾರೆ. ಅವರು ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರಿಂದ ಮದುವೆಯನ್ನು ಮುಂದೂಡಲಾಗಿದೆ. ಅದರ ಹೊರತು ನಿಶ್ಚಿತಾರ್ಥ ಮುರಿದು ಬಿದ್ದಿಲ್ಲ ಎಂದಿದ್ದಾರೆ.

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟ ಶರ್ವಾನಂದ್, ಭಿನ್ನ ಪಾತ್ರಗಳ ಮೂಲಕ  ಪ್ರೇಕ್ಷಕರ ಮನಗೆದ್ದಿದ್ದರು. ಇತ್ತೀಚಿಗಷ್ಟೇ ರಕ್ಷಿತಾ (Rakshitha Reddy) ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಸಿಹಿಸುದ್ದಿ ನೀಡಿದ್ದರು. ಇದನ್ನೂ ಓದಿ:ಹಣಕ್ಕಾಗಿ ನಾನು ಯಾರ ಹಿಂದೆಯೂ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

    ಈ ವರ್ಷದ ಆರಂಭ ಜನವರಿಯಲ್ಲಿ ಗುರುಹಿರಿಯರು ಸಮ್ಮತಿಸಿದ ಹುಡುಗಿ ರಕ್ಷಿತಾ ಶರ್ವಾನಂದ್ ಎಂಗೇಜ್ ಆಗಿದ್ದರು. ಆದರೆ ಈಗ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಈ ನಿಶ್ಚಿತಾರ್ಥ ಮುರಿದು ಬಿದ್ದಿದೆ (Break Up) ಎಂದು ಹೇಳಲಾಗಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು.

    ಈ ಸುದ್ದಿಯನ್ನ ಶರ್ವಾನಂದ್ ಟೀಂ ನಿರಾಕರಿಸಿದೆ. ಶರ್ವಾನಂದ್- ರಕ್ಷಿತಾ ನಡುವೆ ಸಂಬಂಧ ಚೆನ್ನಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಷ್ಟೇ, ಲಂಡನ್‌ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳನ್ನ ಮುಗಿಸಿ, ಮದುವೆ ಆಗ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ನಿಶ್ಚಿತಾರ್ಥ ಮುರಿದಿರುವ ಸುದ್ದಿ ಬಗ್ಗೆ ನೇರವಾಗಿ ಶರ್ವಾನಂದ್- ರಕ್ಷಿತಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಮುರಿದು ಬಿತ್ತಾ ತೆಲುಗು ನಟ ಶರ್ವಾನಂದ್ ನಿಶ್ಚಿತಾರ್ಥ?

    ಮುರಿದು ಬಿತ್ತಾ ತೆಲುಗು ನಟ ಶರ್ವಾನಂದ್ ನಿಶ್ಚಿತಾರ್ಥ?

    ಟಾಲಿವುಡ್ (Tollywood) ಅಂಗಳದಲ್ಲಿ ಬಿಸಿ ಬಿಸಿ ಸಮಾಚಾರವೊಂದು ಸದ್ದು ಮಾಡ್ತಿದೆ. ಸ್ಟಾರ್ ನಟ ಶರ್ವಾನಂದ್(Sharwanand), ಖಾಸಗಿ ಸಮಾಚಾರವೊಂದು ಭಾರಿ ಸೌಂಡ್ ಮಾಡ್ತಿದೆ. ಇತ್ತೀಚಿಗಷ್ಟೇ ಅದ್ದೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ ಶರ್ವಾನಂದ್ ನಿಶ್ಚಿತಾರ್ಥ (Engagement) ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟ ಶರ್ವಾನಂದ್, ಭಿನ್ನ ಪಾತ್ರಗಳ ಮೂಲಕ ರೆಲುಗು ಪ್ರೇಕ್ಷಕರ ಮನಗೆದ್ದಿದ್ದರು. ಇತ್ತೀಚಿಗಷ್ಟೇ ರಕ್ಷಿತಾ (Rakshitha Reddy) ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಸಿಹಿಸುದ್ದಿ ನೀಡಿದ್ದರು.

    ಈ ವರ್ಷದ ಆರಂಭ ಜನವರಿಯಲ್ಲಿ ಗುರುಹಿರಿಯರು ಸಮ್ಮತಿಸಿದ ಹುಡುಗಿ ರಕ್ಷಿತಾ ಶರ್ವಾನಂದ್ ಎಂಗೇಜ್ ಆಗಿದ್ದರು. ಆದರೆ ಈಗ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಈ ನಿಶ್ಚಿತಾರ್ಥ ಮುರಿದು ಬಿದ್ದಿದೆ (Break Up) ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

    ಈ ಸುದ್ದಿಯನ್ನ ಶರ್ವಾನಂದ್ ಟೀಂ ನಿರಾಕರಿಸಿದೆ. ಶರ್ವಾನಂದ್- ರಕ್ಷಿತಾ ನಡುವೆ ಸಂಬಂಧ ಚೆನ್ನಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಷ್ಟೇ, ಲಂಡನ್‌ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳನ್ನ ಮುಗಿಸಿ, ಮದುವೆ ಆಗ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ನಿಶ್ಚಿತಾರ್ಥ ಮುರಿದಿರುವ ಸುದ್ದಿ ಬಗ್ಗೆ ನೇರವಾಗಿ ಶರ್ವಾನಂದ್- ರಕ್ಷಿತಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ಟಾಲಿವುಡ್ ನಟ ಶರ್ವಾನಂದ್ (Sharwanand) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಶರ್ವಾನಂದ್ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದಾರೆ. ನಟ ಶರ್ವಾನಂದ್‌ಗೆ  ಶುಭಹಾರೈಸಲು ಟಾಲಿವುಡ್‌ನ ನಟ-ನಟಿಯರು ಕೂಡ ಭಾಗಿಯಾಗಿದ್ದಾರೆ.

    ಗೆಳತಿ ರಕ್ಷಿತಾ ರೆಡ್ಡಿ ಜೊತೆ ಗುರುವಾರ (ಜ.26)ರಂದು ಶರ್ವಾನಂದ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಉಂಗುರ ತೊಡಿಸಿದ್ದಾರೆ. ಸಾಕಷ್ಟು ವರ್ಷಗಳಿಂದ ಶರ್ವಾನಂದ್ ಮತ್ತು ರಕ್ಷಿತಾ ಪ್ರೀತಿಸುತ್ತಿದ್ದರು. ಈಗ ಹಿರಿಯರ ಒಪ್ಪಿಗೆಯ ಮೇರೆಗೆ ಎಂಗೇಜ್ ಆಗಿದ್ದಾರೆ.

     

    View this post on Instagram

     

    A post shared by Sharwanand (@imsharwanand)

    ನಟ ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್‌ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಶರ್ವಾನಂದ್ ಹಾಗೂ ರಕ್ಷಿತಾ ರೆಡ್ಡಿ ಎಂಗೇಜ್‌ಮೆಂಟ್ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಇನ್ನೂ ನಟ ಶರ್ವಾನಂದ್ ಎಂಗೇಜ್‌ಮೆಂಟ್‌ಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಭಾಗಿಯಾಗಿ ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k