Tag: Shashikumar

  • ಮಾಜಿ ಸಂಸದರಾದ ಮುದ್ದಹನುಮೇಗೌಡ, ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ

    ಮಾಜಿ ಸಂಸದರಾದ ಮುದ್ದಹನುಮೇಗೌಡ, ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ

    ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ (SP Muddahanume Gowda) ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್ (Shashi Kumar) ಅವರು ಇಂದು ಬೆಂಗಳೂರಿನ (Bengaluru) ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿ (BJP) ಸೇರ್ಪಡೆಯಾದರು.

    ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ (Basavaraj Bommai) ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಇಬ್ಬರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕಟೀಲ್ ಮತ್ತು ಸಿಎಂ ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ ಸದಸ್ಯರಾಗಿದ್ದ ವೆಂಕಟಾಚಲ, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ ಬಿಜೆಪಿ ಸೇರ್ಪಡೆ ಆದರು. ರಮೇಶ್‌ ಮುನಿಯಪ್ಪ ಮಾಜಿ ಸಿಎಂ ಶೀಲಾ ದಿಕ್ಷೀತ್‌ರಿಗೆ ವಿಶೇಷ ಕರ್ತವ್ಯಾಧಿಕಾರಿ ಆಗಿದ್ದರು.

    ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದ ರಾಜಕಾರಣ‌ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ. ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡು ಅಧಿಕಾರ ಕಳೆದುಕೊಳ್ಳುತ್ತಿದೆ. ಈಗ ಕಾಂಗ್ರೆಸ್‌ಗೆ ಜನಮತ ಇಲ್ಲ. ಬಹುತೇಕ ಸಚಿವರು ಸೋತಿದ್ದರು. ಆದರೂ ಕಾಂಗ್ರೆಸ್ ಹಿಂಬಾಗಿಲಿಂದ ಅಧಿಕಾರ ಪಡೆದಿತ್ತು. ಆದರೆ ಜೆಡಿಎಸ್ ಜತೆಗಿನ ಸಮ್ಮಿಶ್ರ ಸರ್ಕಾರದ ಪ್ರಯೋಗ ವಿಫಲವಾಯಿತು. ನಂತರ ಬಿಜೆಪಿ ಅಧಿಕಾರಕ್ಕೇರಿ ಜನಮನ್ನಣೆ ಪಡೆದಿದೆ. ಬಿಜೆಪಿ ಪರ ಸಂಪೂರ್ಣ ದಿಕ್ಸೂಚಿ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಉತ್ತರ ಕರ್ನಾಟಕದಲ್ಲಿ ಜನಸಂಕಲ್ಪ ಯಾತ್ರೆಗಳಿಗೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ. ಕಾಂಗ್ರೆಸ್‌ನ ಹಲವು ನಾಯಕರಿಗೆ ಅಲ್ಲಿ ಸೇವೆ ಮಾಡಿದ್ರೂ ಬೆಲೆ ಸಿಗುತ್ತಿದೆ. ಹಲವರಿಗೆ ಕಾಂಗ್ರೆಸ್‌ನಲ್ಲಿ ಬೆಲೆ ಸಿಕ್ತಿಲ್ಲ ಅಂಥ ನಾಯಕರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಿಜೆಪಿಗೆ ಸೇರುತ್ತಿದ್ದಾರೆ. ಹಲವರು ಭ್ರಮನಿರಸನಗೊಂಡು ನಮ್ಮ ಪಕ್ಷ ಸೇರಿದ್ದಾರೆ ಎಂದರು.

    ಮುದ್ದ ಹನುಮೇಗೌಡ ಸಜ್ಜನ ರಾಜಕಾರಣಿ. ಮುದ್ದಹನುಮೇಗೌಡರ ಸೇರ್ಪಡೆ ನಮಗೆ ದೊಡ್ಡ ಬಲ ನೀಡಿದೆ. ಚಿತ್ರನಟ ಶಶಿಕುಮಾರ್ ನಮ್ಮಲ್ಲೇ ಇದ್ದವರು. ಈಗ ಅವರು ಮರಳಿ ನಮ್ಮಲ್ಲಿಗೆ ಬಂದಿದ್ದಾರೆ. ನಮ್ಮ ಮನೆಯೇ ಸುರಕ್ಷಿತ ಅಂತ ಶಶಿಕುಮಾರ್ ಮರಳಿದ್ದಾರೆ. ಶಶಿಕುಮಾರ್ ಸೇರ್ಪಡೆ ನಮ್ಮ ಪಕ್ಷದ ಬಲ ಹೆಚ್ಚಿಸಿದೆ. ಅನಿಲ್ ಕುಮಾರ್ ಜನಪರ ಐಎಎಸ್ ಅಧಿಕಾರಿ ಆಗಿದ್ದವರು. ಹಲವು ಸಲ ನಾವು ತಾತ್ವಿಕವಾಗಿ ಚರ್ಚೆ ಮಾಡಿದ್ದೇವೆ. ಅನಿಲ್ ಕುಮಾರ್ ಪಕ್ಷ ಸೇರ್ಪಡೆಯಿಂದ ಎಸ್ಸಿ ಸಮುದಾಯದಲ್ಲಿ ಮತ್ತು ಮೌಲಿಕ ರಾಜಕಾರಣಕ್ಕೆ ಬೆಲೆ ಬಂದಿದೆ ಎಂದು ಅಭಿಪ್ರಾಯ ಪಟ್ಟರು.

    ಈ ವೇಳೆ ಸಚಿವ ಎಸ್ ಟಿ ಸೋಮಶೇಖರ್, ಸಚಿವ ಅಶ್ವತ್ಥ ನಾರಾಯಣ, ಎಮ್‌ಎಲ್‌ಸಿಗಳಾದ ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ದೇವೇಗೌಡ, ಶಾಸಕ ಮಸಾಲೆ ಜಯರಾಮ್, ಸಚಿವ ಗೋವಿಂದ್ ಕಾರಜೋಳ, ರಾಜ್ಯಸಭೆ ಸದಸ್ಯ ಜಗ್ಗೇಶ್ ಭಾಗಿ‌ ಆಗಿದ್ದರು.

    Live Tv
    [brid partner=56869869 player=32851 video=960834 autoplay=true]

  • 1 ಕಿ.ಮೀ ಓಡಿ ಕಳ್ಳನನ್ನು ಹಿಡಿದ ಮಂಗಳೂರು ಪೊಲೀಸ್ ವೀಡಿಯೋ ವೈರಲ್

    1 ಕಿ.ಮೀ ಓಡಿ ಕಳ್ಳನನ್ನು ಹಿಡಿದ ಮಂಗಳೂರು ಪೊಲೀಸ್ ವೀಡಿಯೋ ವೈರಲ್

    ಮಂಗಳೂರು: ಒಂದು ಕಿಲೋಮೀಟರ್ ಓಡಿ ಹೋಗಿ ಸಿನಿಮೀಯ ರೀತಿಯಲ್ಲಿ ಪೊಲೀಸೊಬ್ಬರು ಕಳ್ಳನನ್ನು ಹಿಡಿದ ಘಟನೆ ಮಂಗಳೂರಲ್ಲಿ ನಡೆದಿದೆ. ಸದ್ಯ ಕಳ್ಳನನ್ನು ಹಿಡಿದ ಪೊಲೀಸ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಹೌದು. ಪೊಲೀಸ್ ವರುಣ್ ಕಾರ್ಯಕ್ಕೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಕ್ಷನ್ ಮೂಲಕ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದವನನ್ನು ವರುಣ್ ಸಿನಿಮೀಯ ರೀತಿಯಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಸಂಜೆ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗ ಕಳ್ಳತನ ನಡೆದಿತ್ತು. ಇದನ್ನೂ ಓದಿ: ಸರ್ಕಾರಕ್ಕೆ ನಮ್ಮನ್ನು ಬಂಧಿಸುವ ಶಕ್ತಿ ಇಲ್ಲ: ಡಿ.ಕೆ. ಸುರೇಶ್

    ಮಂಗಳೂರಿನ ನೆಹರು ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯ ಮೊಬೈಲ್ ಹಣ ಕದಿಯಲಾಗಿತ್ತು. ಬಳಿಕ ತಕ್ಷಣವೇ ಇಬ್ಬರು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಇತ್ತ ಮೊಬೈಲ್ ಕಳೆದುಕೊಂಡ ವ್ಯಕ್ತಿ ಓರ್ವ ಆರೋಪಿಯನ್ನು ಹಿಂಬಾಲಿಸಿದ್ದಾರೆ. ಇದನ್ನು ನೋಡಿದ ಪೊಲೀಸ್ ಕಮಿಷನರ್, ಆರೋಪಿ ಹಿಡಿಯಲು ಸೂಚನೆ ನೀಡಿದ್ದಾರೆ. ಬಳಿಕ ಓರ್ವ ಆರೋಪಿಯನ್ನು ಪೊಲೀಸರು ಹಿಡಿದಿದ್ದಾರೆ. ಆತನಿಂದ ಪ್ಲಾನ್ ಮಾಡಿಸಿ ಇನ್ನಿಬ್ಬರನ್ನು ಬಲೆಗೆ ಕೆಡವಲು ಖಾಕಿ ಮುಂದಾಗಿತ್ತು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ

    ಖಾಕಿ ಪ್ಲಾನ್ ಗೊತ್ತಾಗಿ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದರು. ಈ ವೇಳೆ ಒಂದು ಕಿಲೋಮೀಟರ್ ಓಡಿ ಕಳ್ಳರನ್ನು ಹಿಡಿಯಲು ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯ ಸಂಪೂರ್ಣ ದೃಶ್ಯ ಸೆರೆಯಾಗಿದ್ದು, ಈ ವೀಡಿಯೋವನ್ನು ಕಮಿಷನರ್ ಶಶಿಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿಕೊಂಡು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಸದ್ಯ ಈಗ ವೀಡಿಯೋ ಸಖತ್ ವೈರಲ್ ಆಗುತ್ತಿದೆ

  • ಕೋಟೆನಾಡಿನ ರಾಜಕೀಯಕ್ಕೆ ಚಿತ್ರನಟ ಶಶಿಕುಮಾರ್ ರೀ-ಎಂಟ್ರಿ!

    ಕೋಟೆನಾಡಿನ ರಾಜಕೀಯಕ್ಕೆ ಚಿತ್ರನಟ ಶಶಿಕುಮಾರ್ ರೀ-ಎಂಟ್ರಿ!

    ಚಿತ್ರದುರ್ಗ: ಕೋಟೆನಾಡಿನ ರಾಜಕೀಯಕ್ಕೆ ಚಿತ್ರನಟ ಹಾಗೂ ಮಾಜಿ ಸಂಸದ ಶಶಿಕುಮಾರ್ ರೀ-ಎಂಟ್ರಿಯಾಗಿದ್ದಾರೆ.

    ವಿಧಾನಸಭಾ ಚುನಾವಣೆ ಬಳಿಕ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ರಾಜಕೀಯದಿಂದ ದೂರ ಉಳಿದಿದ್ದ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್‍ಟಿ ಮೀಸಲಾತಿ ಕ್ಷೇತ್ರಗಳಾಗಿರೋ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಕ್ಷೇತ್ರಗಳತ್ತ ಚಿತ್ತ ವಹಿಸಿದ್ದಾರೆ.

    ನಿನ್ನೆ ಅವರ ಅಭಿಮಾನಿಗಳೊಂದಿಗೆ ಎರಡು ಕ್ಷೇತ್ರಗಳಲ್ಲಿ ಪ್ರವಾಸ ಮಾಡಿರೋ ಶಶಿಕುಮಾರ್, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮೊಳಕಾಲ್ಮೂರು ತಾಲೂಕಿನ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಶುಭವಾಗುವಂತೆ ಪ್ರಾರ್ಥಿಸಿದರು. ಇದನ್ನೂ ಓದಿ: ಭಾರತವನ್ನು ಪಾಕಿಸ್ತಾನ ಸೋಲಿಸಿದೆ: ಇಮ್ರಾನ್ ಖಾನ್

    ಈ ವೇಳೆ ನೆರೆದಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸದ್ಯದಲ್ಲೇ ಕ್ಷೇತ್ರ ಮತ್ತು ಪಕ್ಷದ ಬಗ್ಗೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದರು. ಅಲ್ಲದೆ ಕಳೆದ ಬಾರಿ ಕೊನೆ ಗಳಿಗೆಯಲ್ಲಿ ಎರಡು ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದರು.

    ಚುನಾವಣೆಗೂ ಮುನ್ನವೇ ಕ್ಷೇತ್ರ ಖಾಲಿ ಮಾಡಿದ ಆರೋಪ ಕೇಳಿಬಂದಿತ್ತು. ಅಂದಿನಿಂದ ಈವರೆಗೆ ಎಲ್ಲಾ ಪಕ್ಷಗಳಿಂದ ದೂರ ಉಳಿದಿದ್ದ ಶಶಿಕುಮಾರ್, ಮುಂಬರುವ ಚುನಾವಣೆಗೆ ಸ್ಪರ್ಧೆಯನ್ನು ಖಚಿತಪಡಿಸಿದ್ದಾರೆ. ನಟ ಶಶಿಕುಮಾರ್ ಎಂಟ್ರಿಯಿಂದ ಮೊಳಕಾಲ್ಮೂರು, ಚಳ್ಳಕೆರೆ ಕ್ಷೇತ್ರಗಳಲ್ಲಿ ರಾಜಕೀಯ ಗರಿಗೆದರಿದೆ. ಇದನ್ನೂ ಓದಿ: ನಾಯಿ ಜೊತೆ ಕೈಲಾಶ್ ವಿಜಯವರ್ಗಿಯಾ ಫೋಟೋ ಕೊಲಾಜ್ – ವಿವಾದ ಸೃಷ್ಟಿಸಿದ ತಥಾಗತ ರಾಯ್

    ನಟ ಶಶಿಕುಮಾರ್ ಅವರು 1999 ರಲ್ಲಿ ಚಿತ್ರದುರ್ಗ ಸಂಸದರಾಗಿದ್ದರು. ಆ ವೇಳೆ ಚಿತ್ರದುರ್ಗದಲ್ಲಿ ನಿರ್ಮಾಣ ಮಾಡಿದ ಬಸ್‍ನಿಲ್ದಾಣ ಹಾಗೂ ನಿರೀನ ಅಭಾವ ನೀಗಿಸಲು ಆರಂಭಿಸಿದ ನೀರಿನ ಟ್ಯಾಂಕರ್ ಗಳು ಇಂದಿಗೂ ಜನರ ಮುಂದೆ ಕೈಗನ್ನಡಿಯಂತಿವೆ. ಹಾಗೆಯೇ 2008 ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ, ಮಾಜಿ ಸಚಿವ ತಿಪ್ಪೇಸ್ವಾಮಿಯವರ ವಿರುದ್ಧ ಅಲ್ಪಮತಗಳಿಂದ ಸೋತಿದ್ದರು.

    ಅಂದಿನಿಂದಲೂ ಚಿತ್ರದುರ್ಗ ಜಿಲ್ಲೆಯ ರಾಜಕೀಯದತ್ತ ಬಾರಿ ಆಸಕ್ತಿ ಹೊಂದಿದ್ದ ಶಶಿಕುಮಾರ್ ಇದೀಗ ಮತ್ತೆ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಕ್ಷೇತ್ರಗಳಲ್ಲಿ ಪ್ರವಾಸ ಆರಂಭಿಸಿರೋದು ಸ್ಪರ್ಧಾಕಾಕ್ಷಿಗಳ ನಿದ್ರೆ ಕೆಡಿಸಿದೆ. ಶಶಿಕುಮಾರ್ ಅವರೊಂದಿಗೆ ವಲ್ಲಿ ಪ್ರಕಾಶ್, ಜಾಕೀರ್ ಹುಸೇನ್ ಇದ್ದರು.

  • ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಯ ಕೊಲೆ ಯತ್ನ ಪ್ರಕರಣ – ಪ್ರಮುಖ ಆರೋಪಿಯ ಬಂಧನ

    ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಯ ಕೊಲೆ ಯತ್ನ ಪ್ರಕರಣ – ಪ್ರಮುಖ ಆರೋಪಿಯ ಬಂಧನ

    ಬೆಂಗಳೂರು: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಕೊಲೆ ಯತ್ನ ನಡೆದಿದ್ದು, ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಶಶಿಕುಮಾರ್ ಅವರ ಮೇಲೆ ಜುಲೈ 29 ರಂದು ಕೊಲೆಗೆ ಪ್ರಯತ್ನ ನಡೆದಿತ್ತು. ಈ ಹಿನ್ನೆಲೆ ಶಶಿಕುಮಾರ್ ಕೊಲೆಗೆ ಸುಪಾರಿ ನೀಡಿದ್ದ ಪ್ರಮುಖ ಆರೋಪಿ ರವಿಯನ್ನು ಇಂದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರವಿ ಖಾಸಗಿ ಶಾಲೆಗಳ ಪೋಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಆರ್ ಟಿಐ ಕಾರ್ಯಕರ್ತನಾಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಬ್ರಾಹ್ಮಣ ವಿರೋಧಿ ಅಂತ ಛತ್ತಿಸ್‍ಗಢದ ಸಿಎಂ ತಂದೆ ಅರೆಸ್ಟ್

    ಕೊಲೆಯ ಉದ್ದೇಶವೇನು?
    ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಸ್ಥಾನದ ಆಸೆಗೆ ಬಿದ್ದ ಆರೋಪಿ ರವಿ, ಶಶಿಕುಮಾರ್ ಕೊಲೆಗೈದ್ರೆ ಮುಂದಿನ ಕಾರ್ಯದರ್ಶಿ ನಾನೇ ಆಗಬಹುದು ಎನ್ನುವ ಕಾರಣಕ್ಕೆ ಹತ್ಯೆಯ ಸ್ಕೆಚ್ ಹಾಕಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಸಂಪರ್ಕಿಸಿ ಶಶಿಕುಮಾರ್ ಅವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋಳಿ ಪಂದ್ಯ ಪ್ರಕರಣ – ಜೂಜಾಟಕ್ಕೆ ಬ್ರೇಕ್ ಹಾಕಲು ಪೊಲೀಸರ ಹಿಂದೇಟು

    ಶಶಿಕುಮಾರ್ ಅವರು ಜಾಲಹಳ್ಳಿಯ ಮುತ್ಯಾಲ ನಗರದಲ್ಲಿ ವಾಸವಾಗಿದ್ದು, ಅವರ ಕೊಲೆಗೆ ಐವರು ಆರೋಪಿಗಳು ಪ್ಲಾನ್ ಮಾಡಿಕೊಂಡಿದ್ದರು. ಈ ಹಿನ್ನೆಲೆ ಆರೋಪಿಗಳು ಆ ಏರಿಯಾದಲ್ಲಿ ಆರು ತಿಂಗಳಿನಿಂದ ಬಾಡಿಗೆ ಮನೆ ಮಾಡ್ಕೊಂಡು ಅವರ ಚಲನವಲನಗಳನ್ನು ಗಮನಿಸುತ್ತಿದ್ದರು. ಕಳೆದ ಜುಲೈ 29 ರ ರಾತ್ರಿ ಮುತ್ಯಾಲನಗರದ ಮನೆ ಬಳಿ ಯಾರು ಇಲ್ಲದಿರುವುದನ್ನು ಗಮನಿಸಿ ಶಶಿಕುಮಾರ್ ಕೊಲೆಗೆ ಯತ್ನಿಸಲಾಗಿತ್ತು.

    ಈ ವೇಳೆ ತಕ್ಷಣ ಎಚ್ಚೆದ್ದ ಶಶಿಕುಮಾರ್, ತಮ್ಮ ಬಳಿಯಿದ್ದ ಗನ್ ನಿಂದ ಬೆದರಿಸಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಸಂಬಂಧ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದಿಲೀಪ್, ಅಭಿಷೇಕ್, ಕಾರ್ತಿಕ್, ಪವನ್, ಭರತ್ ಎಂಬ ಅರೋಪಿಗಳನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರು

    ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುವ ವೇಳೆ ಶಶಿಕುಮಾರ್ ಕೊಲೆಗೆ ಸುಪಾರಿ ನೀಡಿದ್ದು, ಪೋಷಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಎನ್ನುವುದು ಗೊತ್ತಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ರವಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

  • ಸ್ಯಾಂಡಲ್‍ವುಡ್ ನಟನನ್ನು ಭೇಟಿ ಮಾಡಿದ ಬಿಗ್‍ಬಾಸ್ ಶಶಿ

    ಸ್ಯಾಂಡಲ್‍ವುಡ್ ನಟನನ್ನು ಭೇಟಿ ಮಾಡಿದ ಬಿಗ್‍ಬಾಸ್ ಶಶಿ

    ಬೆಂಗಳೂರು: ಬಿಗ್‍ಬಾಸ್ ಸೀಸನ್ -6ರ ವಿನ್ನರ್, ಆಧುನಿಕ ರೈತ ಶಶಿಕುಮಾರ್ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರನ್ನು ಭೇಟಿ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಶಶಿ ರೋರಿಂಗ್ ಸ್ಟಾರ್ ಮುರಳಿ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶಶಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಫೋಟೋ ಹಾಕಿ, “ಶ್ರೀಮುರಳಿ ಅವರನ್ನು ಭೇಟಿ ಮಾಡಿ ಖುಷಿಯಾಯಿತು. ನಾವಿಬ್ಬರು ಕೃಷಿ, ಬಿಗ್ ಬಾಸ್ ದಿನಗಳು ಹಾಗೂ ಚಿತ್ರರಂಗದ ಬಗ್ಗೆ ಮಾತನಾಡಿದ್ದೇವೆ” ಎಂದರು.

    ಶಶಿ, ನಟ ಶ್ರೀಮುರಳಿ ಅವರನ್ನು ಭೇಟಿ ಮಾಡಿರುವುದು ಅವರ ಅಭಿಮಾನಿಗಳಿಗೆ ಕುತೂಹಲ ಮೂಡಿದೆ. ಅಲ್ಲದೆ ಶಶಿ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಎಂಬ ಪ್ರಶ್ನೆ ಅವರ ಅಭಿಮಾನಿಗಳಿಗೆ ಕಾಡುತ್ತಿದೆ. ಆದರೆ ಸ್ವತಃ ಶಶಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಸಿನಿಮಾದ ಬಗ್ಗೆ ಏನೂ ಮಾತನಾಡಿಲ್ಲ. ನಾನು ಕೃಷಿ ಬಗ್ಗೆ ಕೆಲವು ವಿಚಾರಗಳನ್ನು ಅವರ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

    ಶ್ರೀ ಮುರಳಿ ಈಗ ‘ಭರಾಟೆ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಬಳಿಕ ಅವರು ‘ಮದಗಜ’ ಚಿತ್ರದಲ್ಲಿ ನಟಿಸಲಿದ್ದಾರೆ. ಇನ್ನೂ ಶಶಿ ಕುಮಾರ್ ಟಿವಿ ಕಾರ್ಯಕ್ರಮದಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೆ ಸಿನಿಮಾದಲ್ಲಿ ಅವಕಾಶ ಸಿಕ್ಕರೆ ನಟಿಸುವುದಾಗಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕುಟುಂಬದ ಜೊತೆ ರಕ್ತದಾನ ಮಾಡಿ ನುಡಿದಂತೆ ನಡೆದ ಶಶಿಕುಮಾರ್!

    ಕುಟುಂಬದ ಜೊತೆ ರಕ್ತದಾನ ಮಾಡಿ ನುಡಿದಂತೆ ನಡೆದ ಶಶಿಕುಮಾರ್!

    ಬೆಂಗಳೂರು: ಬಿಗ್ ಬಾಸ್ ಸೀಸನ್ – 6ರ ವಿನ್ನರ್, ಆಧುನಿಕ ರೈತ ಶಶಿಕುಮಾರ್ ಅವರು ಇಂದು ತಮ್ಮ ಕುಟುಂಬ ಸಮೇತ ರಕ್ತದಾನ ಮಾಡಿ ತಾವು ಈ ಹಿಂದೆ ನೀಡಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ.

    ಶಶಿ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಹೊಸ ವರ್ಷದಂದು ಕುಟುಂಬ ಸಮೇತ ರಕ್ತದಾನ ಮಾಡುತ್ತೇವೆ. ಅಷ್ಟೇ ಅಲ್ಲದೇ ಅಂಗಾಂಗ ದಾನಕ್ಕೆ ಅನುಮತಿ ನೀಡುತ್ತೇವೆ ಎಂದು ಸಂಕಲ್ಪ ಮಾಡಿದ್ದರು. ಈ ಸಂಕಲ್ಪವನ್ನು ಪೂರ್ಣಗೊಳಿಸಲು ಶಶಿ ಹಾಗೂ ಅವರ ಕುಟುಂಬದ 15 ಜನ ರಕ್ತದಾನ ಮಾಡಿದ್ದಾರೆ.

    ಶಶಿ ಕುಟುಂಬ ಸಮೇತ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಬಂದು ರಕ್ತದಾನ ಮಾಡಿದ್ದಾರೆ. ಶಶಿಕುಮಾರ್ ಅವರು ಮೊದಲಿನಿಂದಲೂ ರಕ್ತದಾನ ಮಾಡುತ್ತಿದ್ದು, ಇದುವರೆಗೂ ಅವರು 50ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ.

    ಬಿಗ್ ಬಾಸ್ ಪಟ್ಟ ಪಡೆದ ಬಳಿಕ ಮಾತನಾಡಿದ ಶಶಿ, ಇದು ನನ್ನೊಬ್ಬನ ಗೆಲುವಲ್ಲ, ಇದು ಎಲ್ಲರ ಗೆಲುವು ಎಂದು ಹೇಳಿದ್ದರು. ನನಗೆ ಬಂದ ಬಹುಮಾನದ ಹಣವನ್ನು ರೈತಾಪಿ ವರ್ಗದ ಕಲ್ಯಾಣಕ್ಕೆ, ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಮತ್ತು ಬೇಸಾಯದತ್ತ ಯುವಕರನ್ನು ಸೆಳೆಯುವುದಕ್ಕೆ ಬಳಸುವುದಾಗಿ ಹೇಳಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಬ್ಬ ರೈತನ ಮಗನಾಗಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದು ಸಂತಸ ನೀಡಿದೆ: ಶಶಿಕುಮಾರ್ ತಾಯಿ

    ಒಬ್ಬ ರೈತನ ಮಗನಾಗಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದು ಸಂತಸ ನೀಡಿದೆ: ಶಶಿಕುಮಾರ್ ತಾಯಿ

    ಬೆಂಗಳೂರು: ಒಬ್ಬ ರೈತನ ಮಗನಾಗಿ ಬಿಗ್ ಬಾಸ್‍ನಲ್ಲಿ ಭಾಗವಹಿಸಿದ್ದು, ನನಗೆ ಹೆಚ್ಚು ಸಂತಸ ತಂದಿದೆ. ಸ್ಪರ್ಧೆಯಲ್ಲಿ ಫೈನಲ್ ಪ್ರವೇಶ ಮಾಡಿದ್ದು ಮತ್ತಷ್ಟು ಖುಷಿ ನೀಡಿದ್ದು, ಒಬ್ಬ ಆಧುನಿಕ ರೈತನಾಗಿ ನಾಡಿನ ಜನರ ಪ್ರೀತಿ ಪಡೆದಿದ್ದಾರೆ ಎಂದು ಬಿಗ್‍ಬಾಸ್ ಸ್ಪರ್ಧಿ ಶಶಿಕುಮಾರ್ ಅವರ ತಾಯಿ ಪದ್ಮ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಸ್ಪರ್ಧೆಯಲ್ಲಿ ಫೈನಲ್ ವರೆಗೂ ಬರಲು ಆತನ ಸ್ಟ್ರೈಟ್ ಫಾವರ್ಡ್ ನಡೆಯೇ ಕಾರಣ. ಬಿಗ್‍ಬಾಸ್ ಹೋಗುವ ಮುನ್ನ ಹೇಗಿದ್ದನೋ ಕಾರ್ಯಕ್ರಮದಲ್ಲೂ ತನ್ನ ತನವನ್ನು ಉಳಿಸಿಕೊಂಡು ಬಂದಿದ್ದಾನೆ. ಅವನಿಗೆ ಅವನ ಮೇಲೆ ಇರುವ ನಂಬಿಕೆಯೇ ಶಕ್ತಿ ಎಂದರು.

    ಪ್ರತಿದಿನ ಕಾರ್ಯಕ್ರಮವನ್ನು ನೋಡುತ್ತಿದ್ದು, ವಿಷ ಸರ್ಪ ಹಾಗೂ ಸಿನಿಮಾ ನಿರ್ದೇಶನ ಮಾಡಿದ ಆಟಗಳು ನನಗೆ ತುಂಬಾ ಇಷ್ಟ ಆಯ್ತು. ಆತನನ್ನು ಭೇಟಿ ಆಗಿ 3 ತಿಂಗಳು ಆಗಿದೆ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದು, ಆತನ ಸಹಾಯ ಮಾಡುವ ಗುಣವೇ ಆತನನ್ನು ಇಲ್ಲಿಯವರೆಗೂ ಕರೆದುಕೊಂಡು ಹೋಗಿದೆ. ನಾಡಿನ ಅಷ್ಟು ಮಂದಿ ತನ್ನ ಮಗನಿಗೆ ಬೆಂಬಲ ನೀಡಿದ್ದು, ಅದು ಹಾಗೆಯೇ ಮುಂದುವರಿಯಲಿ ಎಂದು ಮನವಿ ಮಾಡಿದರು.

    ಮಗ ಬಿಗ್‍ಬಾಸ್ ಆಯ್ಕೆ ಆಗಿದ್ದು ಮೊದಲಿಗೆ ನನಗೆ ಖುಷಿ ತಂದಿದ್ದು, ಆತ ಶಿಕ್ಷಣ ಪಡೆಯುತ್ತಿರುವ ವೇಳೆಯೇ ರೈತನಾಗಿ ಮಾಡಿದ ಕಾರ್ಯಗಳು ನನಗೆ ಮೆಚ್ಚುಗೆ ಇತ್ತು. ಯಾರೇ ಕೃಷಿ ಬಗ್ಗೆ ಮಾಹಿತಿ ಕೇಳಿದ್ರು ತಪ್ಪದೇ ಕೊಡುತ್ತಿದ್ದ. ಬಿಗ್‍ಬಾಸ್ ಶೋ ಸ್ಪರ್ಧೆಯಲ್ಲಿ ಒಬ್ಬ ರೈತ ಯುವಕನಿಗೆ ಅವಕಾಶ ನೀಡುತ್ತಾರೆ ಎಂಬ ಊಹೆಯೂ ನನಗೆ ಇರಲಿಲ್ಲ. ರಾಮನಗರದಲ್ಲಿ ಫಾರ್ಮಿಂಗ್ ಮಾಡುತ್ತಿದ್ದ ಮಗ 3 ತಿಂಗಳಿನಿಂದ ನಮ್ಮೊಂದಿಗೆ ಇಲ್ಲದಿರುವುದು ಮತ್ತೊಂದೆಡೆ ತುಂಬಾ ಬೇಸರ ತಂದಿದೆ. ಆದ್ರೆ ಆತನ ಪ್ರಯತ್ನಗಳು ಈ ನಾಡಿಗೆ ಈ ಮೂಲಕ ತಿಳಿಯಿತು. ಇಷ್ಟು ದಿನ ಶಶಿಕುಮಾರ್ ಗೆ ಬೆಂಬಲ ನಿಂತ ಕನ್ನಡಿಗರಿಗೆ ವಂದನೆ ಎಂದು ಶಶಿಕುಮಾರ್ ತಂದೆ ಶ್ರೀರಾಮ್ ರೆಡ್ಡಿ ಅವರು ತಿಳಿಸಿದರು.

    ಶಶಿಕುಮಾರ್ ಭಾವ ಹರೀಶ್ ಹಾಗೂ ಸತೀಶ್ ಗೌಡ ಮಾತನಾಡಿ, 6 ಆವೃತ್ತಿಗಳಿಂದ ಬಿಗ್‍ಬಾಸ್ ನೀಡುತ್ತಿದ್ದ ಮನರಂಜನೆ ಈ ಬಾರಿ ಡಬಲ್ ಆಗಿದ್ದು, ಒಬ್ಬ ರೈತ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಬಲ್ಲ ಎಂಬುದು ಶಶಿ ಅವರಿಂದ ನಿಜವಾಗಿದೆ. ವಿವಿಧ ಕ್ಷೇತ್ರದಲ್ಲಿ ಶಶಿ ಅವರು ಗಳಿಸಿರುವ ಜ್ಞಾನವೇ ಅವರನ್ನು ಪ್ರಬಲ ಸ್ಪರ್ಧಿಯಾಗಿ ನಿಲ್ಲಿಸಿದೆ. ಬೇರೆ ಸ್ಪರ್ಧಿಗಳ ಬಗ್ಗೆ ಹಿಂದೆ, ಮುಂದೆ ಒಂದು ರೀತಿ ಮಾತನಾಡದೇ ಇರುವುದು ಆತನ ಪ್ಲಸ್ ಪಾಯಿಂಟ್. ಇದುವರೆಗೂ ಸ್ಪರ್ಧೆಯಲ್ಲಿ ಆತ ಜೈಲಿಗೆ ಹೋಗದಿರುವುದು ಅವರ ಸಾಮರ್ಥ್ಯಕ್ಕೆ ಸಾಕ್ಷಿ ಎಂದು ಸಂತಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಿನ್ನು ಮದ್ವೆಗೆ ಅಮ್ಮ ಒಪ್ಪಿಗೆ

    ಚಿನ್ನು ಮದ್ವೆಗೆ ಅಮ್ಮ ಒಪ್ಪಿಗೆ

    ಬೆಂಗಳೂರು: ಕನ್ನಡ ಬಿಗ್‍ಬಾಸ್ 6ನೇ ಆವೃತ್ತಿ ಕೊನೆಯ ಹಂತ ತಲುಪಿದ್ದು, ಈ ಮಧ್ಯೆ ಬಿಗ್ ಮನೆಯಲ್ಲಿ ಕವಿತಾ ಮತ್ತು ರೈತ ಶಶಿಕುಮಾರ್ ನಡುವೆ ಪ್ರೀತಿ, ಪ್ರೇಮ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೆ ಕವಿತಾ ತಾಯಿ ಕೂಡ ಮಗಳಿಗೆ ಮದುವೆ ಮಾಡುವುದರ ಬಗ್ಗೆ ಹೇಳಿದ್ದಾರೆ.

    ಹೌದು..ಇತ್ತೀಚೆಗಷ್ಟೆ ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಟ್ಟ ಪ್ರಥಮ್ ಅಂಡ್ ಗ್ಯಾಂಗ್ ರೊಮ್ಯಾಂಟಿಕ್ ಡಿನ್ನರ್ ಡೇಟ್ ಟಾಸ್ಕ್ ನಲ್ಲಿ ಕವಿತಾ ಮತ್ತು ಶಶಿ ಇಬ್ಬರನ್ನ ಚೆನ್ನಾಗಿ ಆಟ ಆಡಿಸಿದ್ದಾರೆ. ಕವಿತಾಗೆ ಇಯರ್ ಫೋನ್ ಕೊಟ್ಟು ತಮಗೆ ಬೇಕಾದ ಡೈಲಾಗ್‍ ಗಳನ್ನ ಕವಿತಾ ಬಾಯಿಯಲ್ಲಿ ಹೇಳಿಸಿದ್ದರು. ಕೊನೆಯಲ್ಲಿ ಇಯರ್ ಫೋನ್ ಶಶಿ ಕೈಗಿಟ್ಟ ಕವಿತಾ ಇದೆಲ್ಲಾ ಟಾಸ್ಕ್ ಅಂತ ಶಾಕ್ ಕೊಟ್ಟಿದ್ದರು.

    ಇತ್ತ ಬಿಗ್‍ಬಾಸ್ ಮನೆಯಾಚೆ ಕವಿತಾ ತಾಯಿ ಕೂಡ ಮಗಳು ಒಪ್ಪಿದರೆ ನನಗೇನೂ ಸಮಸ್ಯೆ ಇಲ್ಲ ಅಂತ ಮಗಳ ಮದುವೆ ಕುರಿತು ಗ್ರೀನ್‍ ಸಿಗ್ನಲ್ ಕೊಟ್ಟಿದ್ದಾರೆ. “ನನ್ನ ಮಗಳು ಬಿಗ್‍ಬಾಸ್ ಕೊಟ್ಟ ಟಾಸ್ಕ್ ನ ಚೆನ್ನಾಗಿ ನಿಭಾಯಿಸಿದ್ದಾಳೆ. ನಮ್ಮನ್ನ ಇಷ್ಟು ಜನ ನೋಡುತ್ತಿದ್ದಾರೆ. ಹಾಗಾಗಿ ಅವರಿಗೆ ಮನರಂಜನೆ ಕೊಡುವುದು ಕವಿತಾ ಕರ್ತವ್ಯ ಅಂತ ಮಗಳ ಆಟವನ್ನ ಒಪ್ಪಿಕೊಂಡಿದ್ದಾರೆ.

    ಅಷ್ಟೇ ಅಲ್ಲದೇ ನನ್ನ ಮಗಳಿಗೆ ಇಪ್ಪತೈದು ವರ್ಷ ವಯಸ್ಸಾಗಿದೆ, ಮದುವೆ ಆಗುವುದು ಆಕೆಯ ಇಷ್ಟ. ಆದರೆ ಹುಡುಗನಿಗೆ ಯಾವುದೇ ಸಮಸ್ಯೆ ಇರಬಾದರು. ಅದು ಬಿಟ್ಟು ನನಗೇನು ತೊಂದರೆ ಇಲ್ಲ. ಕವಿತಾ ಯಾರನ್ನು ಇಷ್ಟಪಟ್ಟು ಕರೆದುಕೊಂಡು ನಮ್ಮ ಮುಂದೆ ನಿಲ್ಲಿಸಿದರೆ, ಅವರನ್ನು ಒಪ್ಪಿ ನಾವು ಮದುವೆ ಮಾಡಿಸುತ್ತೇವೆ” ಎಂದು ಕವಿತಾ ತಾಯಿ ಹೇಳಿದ್ದಾರೆ.

    ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಮತ್ತು ಅಕ್ಷತಾ ನಡುವೆ ಪ್ರೀತಿ ಇತ್ತು ಎಂದು ಹೇಳಲಾಗುತ್ತಿತ್ತು. ಈಗ ಕವಿತಾ ಮತ್ತು ಶಶಿ ಮಧ್ಯೆ ಪ್ರೀತಿ ಎಂಬ ಸುದ್ದಿ ಹರಿದಾಡುತ್ತಿದೆ. ಸದ್ಯಕ್ಕೆ ಈ ವಾರ ಅಂದರೆ ಶನಿವಾರದ ಸಂಚಿಕೆಯಲ್ಲಿ ರಾಕೇಶ್ ಎಲಿಮಿನೆಟ್ ಆಗಿ ಮನೆಯಿಂದ ಹೊರ ಬಂದಿದ್ದಾರೆ. ಇನ್ನೂ ಧನ್‍ರಾಜ್, ಕವಿತಾ, ರಶ್ಮಿ, ಆ್ಯಂಡಿ, ಶಶಿ ಫಿನಾಲೆ ವಾರಕ್ಕೆ ಕಾಲಿಟ್ಟಿದ್ದಾರೆ. ಆದರೆ ಸ್ಪರ್ಧಿ ನವೀನ್ ಈ ಮೊದಲೆ ಫಿನಾಲೆಗೆ ಆಯ್ಕೆಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಶಿಕುಮಾರ್ ಪುತ್ರನ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್!

    ಶಶಿಕುಮಾರ್ ಪುತ್ರನ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್!

    ಬೆಂಗಳೂರು: ಹೊಸಾ ಪ್ರತಿಭೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಲೇ ಬಂದಿರುವವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಡುವಿಲ್ಲದಿದ್ದರೂ ಅತಿಥಿ ಪಾತ್ರಗಳಲ್ಲಿ ನಟಿಸುತ್ತಾ, ಒತ್ತಡಗಳಿದ್ದರೂ ಕಾರ್ಯಕ್ರಮಗಳಿಗೆ ಹೋಗಿ ಬೆನ್ನು ತಟ್ಟುವ ಮನಸ್ಥಿತಿ ಹೊಂದಿರೋ ದರ್ಶನ್ ಇದೀಗ ಶಶಿಕುಮಾರ್ ಪುತ್ರನ ಚಿತ್ರದ ಮುಹೂರ್ತದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

    ಶಶಿಕುಮಾರ್ ಪುತ್ರ ಆದಿತ್ಯ ನಾಯಕನಾಗಿ ಎಂಟ್ರಿ ಕೊಡುತ್ತಿರುವ ವಿಚಾರ ಗೊತ್ತೇ ಇದೆ. ಈ ಚಿತ್ರದ ಮುಹೂರ್ತ ಸಮಾರಂಭ ಸೆಪ್ಟೆಂಬರ್ 2ರ ಭಾನುವಾರ ಅದ್ಧೂರಿಯಾಗಿ ನೆರವೇರಲಿದೆ. ಈ ಸಮಾರಂಭದಲ್ಲಿ ಹಾಜರಿರಲಿರುವ ದರ್ಶನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

    ಒಂದು ಅವಘಡದ ನಂತರ ಚಿತ್ರರಂಗದಿಂದ ದೂರವೇ ಉಳಿದಿರುವ ಶಶಿಕುಮಾರ್ ಇದೀಗ ತಮ್ಮ ಪುತ್ರನನ್ನು ಹೀರೋ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ನಾಯಕನಟನಾಗಿ ಉತ್ತುಂಗದಲ್ಲಿರುವಾಗಲೇ ಅಪಘಾತವೊಂದಕ್ಕೀಡಾಗಿ ನೇಪಥ್ಯಕ್ಕೆ ಸರಿದಿದ್ದವರು ಶಶಿಕುಮಾರ್. ಆ ನಂತರ ಸಾಕಷ್ಟು ನೋವುಂಡ ಅವರು ಚಿತ್ರರಂಗದಿಂದ ದೂರ ಸರಿದಿದ್ದರು. ಇದೀಗ ಅವರಲ್ಲಿ ಉಳಿದು ಹೋದಂತಿರೋ ಬಾಕಿ ಕನಸುಗಳನ್ನು ಮಗನ ಮೂಲಕ ನನಸಾಗಿಸಿಕೊಳ್ಳುವ ಹುರುಪಿನಿಂದಲೇ ಈ ಚಿತ್ರವನ್ನವರು ಆರಂಭಿಸಿದ್ದಾರೆ.

    ಹಿರಿಯ ನಟ ಶಶಿಕುಮಾರ್ ಮಗನ ಚಿತ್ರದ ಮುಹೂರ್ತಕ್ಕೆ ದರ್ಶನ್ ಖುಷಿಯಿಂದಲೇ ಬರಲೊಪ್ಪಿಕೊಂಡಿದ್ದಾರೆ. ಕ್ಲ್ಯಾಪ್ ಮಾಡುವ ಮೂಲಕ ಈ ಚಿತ್ರಕ್ಕೆ ಚಾಲನೆಯನ್ನೂ ಕೊಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

    ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

    – ಮುದ್ದಾದ ಲವ್ ಸ್ಟೋರಿಯಲ್ಲೀಕೆ ಹಳ್ಳಿ ಹುಡುಗಿಯಂತೆ!

    ಬೆಂಗಳೂರು: 90ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಮಿಂಚಿದ್ದವರು ಶಶಿ ಕುಮಾರ್. ಆ ನಂತರದಲ್ಲಿ ಅಪಘಾತದ ಆಘಾತದಿಂದ ಚಿತ್ರರಂಗದಿಂದ ದೂರಾಗಿದ್ದ ಶಶಿಕುಮಾರ್ ಅವರನ್ನು ಪ್ರೇಕ್ಷಕರೆಲ್ಲರೂ ಮಿಸ್ ಮಾಡಿಕೊಳ್ಳುತ್ತಲೇ ಇದ್ದಾರೆ. ಹೀಗಿರುವಾಗಲೇ ಅವರ ಪುತ್ರ ಆದಿತ್ಯ ಇದೀಗ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೊಸವಿಚಾರವೆಂದರೆ, ಆದಿತ್ಯನಿಗೆ ನಾಯಕಿಯೂ ಫಿಕ್ಸಾಗಿದ್ದಾಳೆ!

    ಶಶಿಕುಮಾರ್ ಅವರ ಪುತ್ರ ಆದಿತ್ಯ ನಾಯಕನಾಗಿ ಎಂಟ್ರಿ ಕೊಡೋದರ ಬಗ್ಗೆ ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ನಾಯಕಿಗಾಗಿ ವ್ಯಾಪಕವಾಗಿಯೇ ಶೋಧ ಕಾರ್ಯ ಚಾಲ್ತಿಯಲ್ಲಿತ್ತು. ಕಡೆಗೂ ಅಪೂರ್ವ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ವರ್ಷಾಂತರಗಳ ಹಿಂದೆ ತರೆ ಕಂಡಿದ್ದ ರವಿಚಂದ್ರನ್ ಅಭಿನಯ ಮತ್ತು ನಿರ್ದೇಶಕನದ ಅಪೂರ್ವ ಚಿತ್ರದ ಮೂಲಕವೇ ಸ್ಯಾಂಡಲ್ ವುಡ್‍ಗೆ ಎಂಟ್ರಿ ಕೊಟ್ಟಿದ್ದ ಅಪೂರ್ವ ಇದೀಗ ವಿಕ್ಟರಿ 2 ಚಿತ್ರದಲ್ಲಿಯೂ ನಾಯಕಿಯಾಗಿ ನಟಿಸಿದ್ದಾಳೆ. ಅದೇ ಹೊತ್ತಿನಲ್ಲಿ ಆದಿತ್ಯನಿಗೆ ಜೋಡಿಯಾಗಿರೋ ಸುದ್ದಿಯನ್ನೂ ಜಾಹೀರು ಮಾಡಿದ್ದಾಳೆ.

    ಶಶಿಕುಮಾರ್ ಪುತ್ರನ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರೋದರ ಬಗ್ಗೆ ಖುಷಿಗೊಂಡಿರೋ ಅಪೂರ್ವ, ಶಶಿಕುಮಾರ್ ಚಿತ್ರಗಳನ್ನು ನೋಡುತ್ತಾ ಬೆಳೆದ ತಾನು ಇದೀಗ ಅವರ ಪುತ್ರನಿಗೆ ನಾಯಕಿಯಾಗಿ ಆಯ್ಕೆಯಾದದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾಳೆ. ಈಗೊಂದೆರಡು ದಿನಗಳ ಹಿಂದಷ್ಟೇ ಅಪೂರ್ವ ಮತ್ತು ಆದಿತ್ಯಾ ಫೋಟೋ ಶೂಟ್ ಕೂಡಾ ನಡೆದಿದೆಯಂತೆ. ಅಪೂರ್ವ ಚಿತ್ರದಲ್ಲಿ ಮಾಡರ್ನ್ ಹುಡುಗಿಯಾಗಿ ಕಾಣಿಸಿಕೊಂಡಿದ್ದ ಅಪೂರ್ವ ಈ ಚಿತ್ರದಲ್ಲಿ ಅದಕ್ಕೆ ತದ್ವಿರುದ್ಧವಾದ ಹಳ್ಳಿ ಹುಡುಗಿಯಾಗಿ ನಟಿಸಲಿದ್ದಾಳಂತೆ.

    ಇದೇ ಹೊತ್ತಿನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿ ನಿರ್ದೇಶನ ಮಾಡುತ್ತಿರುವ ರಾಜೇಂದ್ರ ಪೊನ್ನಪ್ಪ ಚಿತ್ರದಲ್ಲಿಯೂ ಅಪೂರ್ವಳೇ ನಾಯಕಿ. ವರ್ಷಗಳ ಹಿಂದೆ ತೆರೆ ಕಂಡಿದ್ದ ಅಪೂರ್ವ ಚಿತ್ರದ ನಂತರ ಸದ್ದಿಲ್ಲದಂತಿದ್ದ ಅಪೂರ್ವ ಈಗ ಒಂದರ ಹಿಂದೊಂದರಂತೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾಳೆ.