Tag: Shatrughan Sinha

  • ಬಾಲಿವುಡ್‌ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

    ಬಾಲಿವುಡ್‌ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

    ಮುಂಬೈ: ಬಾಲಿವುಡ್‌ನ ಹಿರಿಯ ನಟ ಮತ್ತು ಅಸನ್ಸೋಲ್ ಕ್ಷೇತ್ರದ ಲೋಕಸಭಾ ಸದಸ್ಯ ಶತ್ರುಘ್ನ ಸಿನ್ಹಾ (Shatrughan Sinha) ಅವರು ಮುಂಬೈನ ಕೋಕಿಲಾಬೆನ್‌ (Kokilaben) ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಳೆದ ಎರಡು ದಿನಗಳಿಂದ ವೈರಲ್ ಜ್ವರ ಮತ್ತು ಆಯಾಸದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಪುತ್ರ ಲವ್ ಸಿನ್ಹಾ ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

    ಶತ್ರುಘ್ನ ಸಿನ್ಹಾ ಆಸ್ಪತ್ರೆಯಿಂದ ಯಾವಾಗ ಬಿಡುಗಡೆಯಾಗುತ್ತಾರೆ ಎಂಬುದರ ಕುರಿತು ಯಾವುದೇ ಮಾಹಿತಿಯಿಲ್ಲ. ಪ್ರಸ್ತುತ ನಟನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ನಿಗಾದಲ್ಲಿ ಇರಿಸಲಾಗಿದೆ ಎಂದು ಹೇಳಲಾಗಿದೆ.

    ಕೆಲ ತಿಂಗಳುಗಳಿಂದ ನಟ, ಚುನಾವಣಾ ಪ್ರಚಾರ ಮತ್ತು ಅವರ ಪುತ್ರಿಯ ಮದುವೆಯಿಂದಾಗಿ ಬ್ಯುಸಿಯಾಗಿದ್ದರು. ಜೂನ್‌ 23 ರಂದು ತಮ್ಮ ಮಗಳು ಮತ್ತು ನಟಿ ಸೋನಾಕ್ಷಿ ಸಿನ್ಹಾ ಹಾಗೂ ದೀರ್ಘಕಾಲದ ಗೆಳೆಯ ಜಹೀರ್ ಇಕ್ಬಾಲ್ ಮದುವೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶತ್ರುಘ್ನ ಸಿನ್ಹಾ ಭಾಗಿಯಾಗಿದ್ದರು.

  • ಶತ್ರುಘ್ನ ಸಿನ್ಹಾ ಮಗಳು ಇಸ್ಲಾಂಗೆ ಮತಾಂತರ ಆಗ್ತಾರಾ?- ಕೊನೆಗೂ ಸಿಕ್ತು ಉತ್ತರ

    ಶತ್ರುಘ್ನ ಸಿನ್ಹಾ ಮಗಳು ಇಸ್ಲಾಂಗೆ ಮತಾಂತರ ಆಗ್ತಾರಾ?- ಕೊನೆಗೂ ಸಿಕ್ತು ಉತ್ತರ

    ಬಾಲಿವುಡ್ ಹಿರಿಯ ನಟ ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ (Sonakshi Sinha) ಇಂದು (ಜೂನ್ 23) ಝಹೀರ್ ಇಕ್ಬಾಲ್ (Zaheer Iqbal) ಜೊತೆ ಮದುವೆಗೆ ರೆಡಿಯಾಗಿದ್ದಾರೆ. ಮಗಳ ಮದುವೆಗೆ (Wedding) ಶತ್ರುಘ್ನ ಸಿನ್ಹಾ (Shatrughan Sinha) ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬೆನ್ನಲ್ಲೇ ನಟಿ ಇಸ್ಲಾಂಗೆ ಮತಾಂತರ ಆಗ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಸೋನಾಕ್ಷಿ ಮದುವೆಯಾಗಲಿರುವ ವರ ಝಹೀರ್ ತಂದೆ ಇಕ್ಬಾಲ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಮತ್ತೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ‘ಸೀತಾರಾಮಂ’ ಜೋಡಿ

    ಇಕ್ಬಾಲ್ ರತಾನ್ಸಿ ಮಾತನಾಡಿ, ಸೋನಾಕ್ಷಿ ಸಿನ್ಹಾ ಮತಾಂತರಗೊಳ್ಳುತ್ತಿಲ್ಲ. ನಾನು ಮಾನವೀಯತೆಯನ್ನು ನಂಬುತ್ತೇನೆ. ಹಿಂದೂಗಳು ದೇವರನ್ನು ಭಗವಾನ್ ಮತ್ತು ಮುಸ್ಲಿಮರು ಅಲ್ಲಾಹ್ ಎಂದು ಕರೆಯುತ್ತಾರೆ. ಆದರೆ ಕೊನೆಯಲ್ಲಿ ನಾವೆಲ್ಲರೂ ಮನುಷ್ಯರು. ನನ್ನ ಹಾರೈಕೆ ಝಹೀರ್ ಮತ್ತು ಸೋನಾಕ್ಷಿ ಅವರ ಮೇಲಿದೆ ಎಂದಿದ್ದಾರೆ.

    ಸೋನಾಕ್ಷಿ ಸಿನ್ಹಾ ಅವರು ಝಹೀರ್ ಇಕ್ಬಾಲ್ ಹಲವು ವರ್ಷಗಳ ಡೇಟಿಂಗ್ ನಂತರ ಮದುವೆಯಾಗುತ್ತಿದ್ದಾರೆ. ಮುಂಬೈನಲ್ಲಿ ಸೋನಾಕ್ಷಿ ಸಿನ್ಹಾ ಅವರು ಜೂನ್ 23ರಂದು ಮದುವೆಯಾಗಲಿದ್ದು, ಶುಕ್ರವಾರ (ಜೂನ್ 21) ಮೆಹಂದಿ ಶಾಸ್ತ್ರವು ಅದ್ಧೂರಿಯಾಗಿ ಜರುಗಿದೆ.

  • ಶಾರುಖ್ ಖಾನ್ ಮಗ ಎಂಬ ಕಾರಣಕ್ಕೆ ಬಲಿಪಶು ಮಾಡಿದ್ದಾರೆಂದ ಶತ್ರುಘ್ನ ಸಿನ್ಹಾ.!

    ಶಾರುಖ್ ಖಾನ್ ಮಗ ಎಂಬ ಕಾರಣಕ್ಕೆ ಬಲಿಪಶು ಮಾಡಿದ್ದಾರೆಂದ ಶತ್ರುಘ್ನ ಸಿನ್ಹಾ.!

    ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಕ್ಲೀನ್ ಚೀಟ್ ನೀಡಿದೆ. ಈ ಬೆನ್ನಲ್ಲೆ ನಟ ಶತ್ರುಘ್ನ ಸಿನ್ಹಾ, ಶಾರುಖ್ ಖಾನ್ ಪುತ್ರ ಎಂಬ ಕಾರಣಕ್ಕಾಗಿ ಆರ್ಯನ್ ಖಾನ್ ಅನ್ನು ಬಲಿಪಶು ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಎನ್‌ಸಿಬಿ ಕ್ಲೀನ್ ಚೀಟ್ ನೀಡಿದ ಬೆನ್ನಲ್ಲೆ ಸಾಕಷ್ಟು ಸ್ಟಾರ್ ನಟ ಮತ್ತು ನಟಿಯರು ಈ ಕುರಿತು ಮಾಡಿದ್ದಾರೆ. ಶಾರುಖ್ ಖಾನ್ ಪುತ್ರನ ಬಂಧನವಾದ ದಿನದಿಂದಲೂ ಈವರೆಗೂ ಸ್ಟಾರ್ಸ್, ಶಾರುಖ್ ಬೆನ್ನಿಗೆ ನಿಂತಿದ್ದಾರೆ. ಇದೀಗ ಶಾರುಖ್ ಖಾನ್ ಪುತ್ರನ ಪರ ಬ್ಯಾಟಿಂಗ್ ಶತ್ರುಘ್ನ ಸಿನ್ಹಾ ಮಾಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಫೈನಲ್ ಮ್ಯಾಚ್: `ಕೆಜಿಎಫ್’ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ರಣ್‌ವೀರ್ ಸಿಂಗ್

    ARYAN

    ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಎನ್‌ಸಿಬಿ ಕ್ಲೀನ್ ಚೀಟ್ ನೀಡಿ, ಚಾರ್ಜ್ ಶೀಟ್‌ನಿಂದ ಆರ್ಯನ್ ಖಾನ್ ಹೆಸರನ್ನ ತೆಗೆದುಹಾಕಲಾಗಿದೆ. ಈ ಕುರಿತು ಸಂದರ್ಶನವೊಂದರಲ್ಲಿ ಶತ್ರುಘ್ನ ಸಿನ್ಹಾ, ಮುಗ್ಧ ಹುಡುಗ ಆರ್ಯನ್ ಯಾವುದೇ ಸಾಕ್ಷಿ ಮತ್ತು ಪುರಾವೆಯಿಲ್ಲದೇ ಬಂಧಿಸಿದ್ದರು. ಸೂಕ್ತ ತನಿಖೆ ಕೈಗೊಳ್ಳಬೇಕಿತ್ತು. ಸ್ಟಾರ್ ನಟ ಶಾರುಖ್ ಖಾನ್ ಪುತ್ರ ಎಂಬ ಕಾರಣಕ್ಕೆ ಆರ್ಯನ್ ಅನ್ನು ಬಲಿಪಶು ಮಾಡಿದ್ದಾರೆ. ಇಂತಹ ಕಾರ್ಯಕ್ಕೆ ಹೆಜ್ಜೆ ಇಡುವ ಮುನ್ನ ಸಾವಿರ ಬಾರಿ ಯೋಚಿಸಬೇಕು ಎಂದಿದ್ದಾರೆ. ಒಟ್ನಲ್ಲಿ ಶಾರುಖ್ ಖಾನ್ ಕುಟುಂಬದ ಪರ ನಿಂತ ಶತ್ರುಘ್ನ ಸಿನ್ಹಾಗೆ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

  • ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

    ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

    ಬಾಲಿವುಡ್ ನಲ್ಲಿ ಶತ್ರುಘ್ನಾ ಸಿನ್ಹಾ ಮೇಲಿನ ಲೈಂಗಿಕ ಹಗರಣ ದಂಧೆ ಆರೋಪ  ಕೋಲಾಹಲ ಸೃಷ್ಟಿ ಮಾಡಿದೆ. ನಟಿ, ಬಿಗ್ ಬಾಸ್ ಸ್ಪರ್ಧಿ ಪೂಜಾ ಮಿಶ್ರಾ ಮಾಡಿರುವ ಗಂಭೀರ ಆರೋಪವು ಸಿನ್ಹಾ ಕುಟುಂಬವನ್ನು ಕೆರಳಿಸಿದೆ. ಈ ಹಿಂದೆ ಸಲ್ಮಾನ್ ಖಾನ್ ಮೇಲೂ ಇಂಥದ್ದೊಂದು ಆರೋಪ ಮಾಡಿದ್ದ ಪೂಜಾ ಮೇಲೆ ಸಿನ್ಹಾ ಕುಟುಂಬ ಕಿಡಿಕಾರಿದೆ. ಇದನ್ನೂ ಓದಿ : ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ವೀರಪ್ಪನ್ : ಆರ್.ಜಿ.ವಿ

    ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿರುವ ಪೂಜಾ ಮಿಶ್ರ, ‘ಸಿನ್ಹಾ ಕುಟುಂಬವು ನನ್ನ ಕನ್ಯತ್ವವನ್ನೇ ಮಾರಾಟ ಮಾಡಿತು. ನನ್ನನ್ನು ಲೈಂಗಿಕ ಹಗರಣ ದಂಧೆಗೆ ನೂಕಿತು. ಇದರಿಂದಾಗಿ ನನ್ನ ವೈಯಕ್ತಿಕ ಬದುಕು ಮತ್ತು ವೃತ್ತಿ ಬದುಕು ಎರಡೂ ಹಾಳಾಯಿತು’ ಎಂದು ಸಿನ್ಹಾ ಮೇಲೆ ಆರೋಪ ಮಾಡಿದ್ದಾರೆ. ಇದರಲ್ಲಿ ಅವರ ಇಡೀ ಕುಟುಂಬವೇ ತೊಡಗಿಕೊಂಡಿತ್ತು ಎಂದು ಹೇಳಿದ್ದಾರೆ ಪೂಜಾ ಮಿಶ್ರಾ.

     

    ಮುಂದುವರೆದು ಮಾತನಾಡಿರುವ ಪೂಜಾ, ‘ಶತ್ರುಘ್ನಾ ಸಿನ್ಹಾ ಮತ್ತು ನನ್ನ ತಂದೆ ಇಬ್ಬರೂ ಸ್ನೇಹಿತರು. ಸಿನಿಮಾ ರಂಗದಲ್ಲಿ ಮುಂದುವರೆಯಲು ಪರಸ್ಪರ ಒಪ್ಪಂದಗಳು ನಡೆಯುತ್ತವೆ. ಅದಕ್ಕೆ ನಿಮ್ಮ ಮಗಳು ಸಿದ್ಧಳಾಗಬೇಕು ಎಂದು ಹೇಳಿದ್ದರು. ತಮ್ಮ ಮಗಳಿಗೆ ಅವಕಾಶ ಕೊಡಿಸುವುದಕ್ಕಾಗಿ ನನ್ನನ್ನು ಬಳಸಿಕೊಂಡರು’ ಎಂದು ಪೂಜಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ, ತಮ್ಮ ತಂದೆಯಿಂದ ಸಿನ್ಹಾ ಕುಟುಂಬ 100 ಕೋಟಿ ರೂಪಾಯಿ ಸಾಲವನ್ನೂ ಪಡೆದಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಪೂಜಾ ಮಿಶ್ರಾ ಮಾತಿಗೆ ಸಿನ್ಹಾ ಕುಟುಂಬದ ಲವ್ ಸಿನ್ಹಾ ಪ್ರತಿಕ್ರಿಯೆ ನೀಡಿದ್ದು, ‘ಪೂಜಾ ಮಿಶ್ರಾ ಮಾನಸಿಕ ಅಸ್ವಸ್ಥೆ. ಅವರಿಗೆ ಚಿಕಿತ್ಸೆ ಅವಶ್ಯಕತೆ ಇದೆ. ವೃತ್ತಿಪರ ವೈದ್ಯರೇ ಅವರಿಗೆ ಸಹಾಯ ಮಾಡಬೇಕು. ಕುಟುಂಬದ ಪರವಾಗಿ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ’ ಎಂದು ಅವರು ಟ್ವಿಟ್ ಮಾಡಿದ್ದಾರೆ.

  • ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಿಜವಾದ ಗೇಮ್ ಚೇಂಜರ್ ಆಗಲಿದ್ದಾರೆ ಎಂದು ಸಂಸದ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ತಿಂಗಳ ಆರಂಭದಲ್ಲಿ ನಡೆದ ಉಪಚುನಾವಣೆಯಲ್ಲಿ ಅಸನ್ಸೋಲ್ ಲೋಕಸಭಾ ಕ್ಷೇತ್ರವನ್ನು ಗೆದ್ದ ಶತ್ರುಘ್ನ ಸಿನ್ಹಾ ಮಾಧ್ಯಮದ ಜೊತೆ ಮಾತನಾಡಿ, ನಾನು ಹೃದಯಗಳ ರಾಣಿ ಮಮತಾ ಬ್ಯಾನರ್ಜಿ ಅವರಿಂದ ಪ್ರಭಾವಿತನಾಗಿದ್ದೇನೆ. ಅವರು ಎಲ್ಲರೂ ಗೌರವಿಸಲ್ಪಡುವ ನಾಯಕಿಯಾಗಿದ್ದಾರೆ. 2024ರ ಚುನಾವಣೆಯಲ್ಲಿ ಅವರು ನಿಜವಾದ ಆಟ ಬದಲಾಯಿಸುವವರು ಎಂಬುದನ್ನು ನೋಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಹನುಮಾನ್ ಚಾಲೀಸಾ ವಿಚಾರದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್ ರಾವತ್

    ರಾಜಕೀಯದಲ್ಲಿ ತಮ್ಮ ಪ್ರಯಾಣದ ಕುರಿತು ಮಾತನಾಡಿದ ಅವರು, ನನ್ನ ಸಾಮಾಜಿಕ ಜವಾಬ್ದಾರಿಯನ್ನು ಪೂರೈಸಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನಾನು ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣರಿಂದ ಪ್ರಭಾವಿತನಾಗಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ನಿರ್ಗತಿಕನಿಗೆ ಸ್ನಾನ ಮಾಡಿಸಿದ ಪೊಲೀಸ್ ಆಫೀಸರ್ – ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

    ಇದಲ್ಲದೆ ಬಿಜೆಪಿಯು ಪ್ರಜಾಪ್ರಭುತ್ವದಿಂದ ನಿರಂಕುಶ ಪ್ರಭುತ್ವವಾಗಿ ಮಾರ್ಪಟ್ಟಿರುವುದರಿಂದ ಬಿಜೆಪಿಯನ್ನು ತೊರೆದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್‍ಗೆ ಸೇರಿದ್ದೇನೆ ಎಂದು ಹೇಳಿದರು.

    ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅವರು, ವಾಜಪೇಯಿ ಮತ್ತು ಎಲ್ ಕೆ ಅಡ್ವಾಣಿಯವರಿದ್ದಾಗ ಬಿಜೆಪಿ ಪ್ರಜಾಸತ್ತಾತ್ಮಕ ಪಕ್ಷವಾಗಿತ್ತು. ಆದರೆ ಪ್ರಧಾನಿ ಮೋದಿ ನಡೆಸುತ್ತಿರುವ ಇಂದಿನ ಬಿಜೆಪಿ ನಿರಂಕುಶ ಪ್ರಭುತ್ವವಾಗಿದೆ ಎಂದು ದೂರಿದರು.

    ಉಪಚುನಾವಣೆಯಲ್ಲಿ ಬಿಜೆಪಿಯ ಅಗ್ನಿಮಿತ್ರ ಪಾಲ್ ಅವರನ್ನು 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಶತ್ರುಘ್ನ ಸಿನ್ಹಾ ಸೋಲಿಸಿದ್ದರು. ಈ ಹಿಂದೆ ಪಶ್ಚಿಮ ಬಂಗಾಳದ ಅಸನ್ಸೋಲ್‍ನಲ್ಲಿ ಟಿಎಂಸಿ ಹಿಂದೆಂದೂ ಗೆದ್ದಿರಲಿಲ್ಲ.

  • ಮೋದಿ ವಾರಣಾಸಿಯಿಂದ ಸ್ಪರ್ಧಿಸಬಹುದಾದರೆ, ನಾನು ಅಸನ್ಸೋಲ್‍ನಿಂದ ಸ್ಪರ್ಧಿಸಬಹುದು: ಶತ್ರುಘ್ನ ಸಿನ್ಹಾ

    ಮೋದಿ ವಾರಣಾಸಿಯಿಂದ ಸ್ಪರ್ಧಿಸಬಹುದಾದರೆ, ನಾನು ಅಸನ್ಸೋಲ್‍ನಿಂದ ಸ್ಪರ್ಧಿಸಬಹುದು: ಶತ್ರುಘ್ನ ಸಿನ್ಹಾ

    ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಬಹುದಾದರೆ, ನಾನು ಬಂಗಾಳದ ಅಸನ್ಸೋಲ್‍ನಿಂದ ಸ್ಪರ್ಧಿಸಬಹುದು ಎಂದು ಬಿಜೆಪಿಗೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಬೇಕಾದರೆ ಬಿಜೆಪಿ ಏನು ಮಾಡುತ್ತಿತ್ತು ಎಂದು ವಾಗ್ದಾಳಿ ನಡೆಸಿದರು.

    ಪ್ರಧಾನಿ ಅವರಂತಹ ರಾಷ್ಟ್ರ ನಾಯಕರೇ, ಲೋಕಸಭೆ ಚುನಾವಣೆಯಲ್ಲಿ ಎಲ್ಲಿಂದಲಾದರೂ ಸ್ಪರ್ಧಿಸುವುದನ್ನು ಒಪ್ಪಿಕೊಂಡರೆ, ನನಗೂ ಅದೇ ಅನ್ವಯಿಸುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: 2.8 ಕೋಟಿ ಸಾಗಾಟ -ಸಿಕ್ಕಿ ಬಿದ್ದ ಮಾಜಿ ಸಂಸದನ ಪತ್ನಿ

    ಯಾವಾಗಲೂ ಬಂಗಾಳದ ಅಭಿವೃದ್ಧಿಗೆ ನಿಂತಿರುವ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಅಸನ್ಸೋಲ್ ಮತದಾರರು ಬೆಂಬಲ ನೀಡುತ್ತಾರೆ ಎನ್ನುವುದು ನನಗೆ ಖಚಿತವಾಗಿದೆ. ನ್ಯಾಯಕ್ಕಾಗಿ ಮತ ನೀಡಿ ಬಿಜೆಪಿಯನ್ನು ಸೋಲಿಸುತ್ತಾರೆ ಎಂದರು. ಇದನ್ನೂ ಓದಿ: ‘ಶಾಸಕನ ಮೊಮ್ಮಗ’ ಎನ್ನುವುದೇ ಬೈಕ್ ನಂಬರ್ ಪ್ಲೇಟ್!

    ಇತ್ತೀಚೆಗೆ ಶತ್ರುಘ್ನ ಸಿನ್ಹಾ ಅವರು ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವುದರ ಕುರಿತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕರಾದ ಸುಕಾಂತ ಮಜುಂದಾರ್ ಮತ್ತು ಅಗ್ನಿಮಿತ್ರ ಪಾಲ್ ಮಾತನಾಡಿ ರಾಜ್ಯಕ್ಕೆ ಶತ್ರುಘ್ನ ಸಿನ್ಹಾ ಅವರು ಹೊರಗಿನವರು ಎಂದು ಲೇವಡಿ ಮಾಡಿದ್ದರು.

    ಇಂದು ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಶತ್ರುಘ್ನ ಸಿನ್ಹಾ ಅವರು ಬಿಜೆಪಿಯ ಅಗ್ನಿಮಿತ್ರ ಪಾಲ್ ವಿರುದ್ಧ ಕಣಕ್ಕಿಳಿದಿದ್ದಾರೆ. ಅಸನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬಳ್ಳಿಗುಂಜೆ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 12 ರಂದು ಉಪಚುನಾವಣೆ ನಡೆಯಲಿದ್ದು, ಏಪ್ರಿಲ್ 16 ರಂದು ಮತ ಎಣಿಕೆ ನಡೆಯಲಿದೆ.

  • ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಕಾಂಗ್ರೆಸ್‍ನ ಶತ್ರುಘ್ನ ಸಿನ್ಹಾ

    ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಕಾಂಗ್ರೆಸ್‍ನ ಶತ್ರುಘ್ನ ಸಿನ್ಹಾ

    ನವದೆಹಲಿ: ಬಿಜೆಪಿಯಲ್ಲಿದ್ದಾಗ ಹಾಗೂ ಕಾಂಗ್ರೆಸ್ ಸೇರಿದ ನಂತರವೂ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಲೇ ಕಾಲ ಕಳೆಯುತ್ತಿದ್ದ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ಮೋದಿ ಅವರ ಮಾತು ಅತ್ಯಂತ ಧೈರ್ಯಶಾಲಿ, ಉತ್ತಮ ಸಂಶೋಧನೆ ಹೊಂದಿದ ಹಾಗೂ ಚಿಂತನೆಗೆ ಉತ್ತೇಜಿಸುವಂತಹ ಭಾಷಣವಾಗಿದೆ ಎಂದು ಹಾಡಿ ಹೊಗಳಿದ್ದಾರೆ. ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು. ಬಿಜೆಪಿಯನ್ನು ‘ಟು ಮ್ಯಾನ್ ಆರ್ಮಿ, ಒನ್ ಮ್ಯಾನ್ ಶೋ’ ಎಂದು ಸಿನ್ಹಾ ಟೀಕಿಸಿದ್ದರು. ಇದನ್ನು ಓದಿ: ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

    ಇಂದು ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಾನು ಟೀಕಿಸಲು ಕುಖ್ಯಾತಿ ಪಡೆದವನು. ಪ್ರಧಾನಿಗಳೇ ಆಗಸ್ಟ್ 15ರಂದು ನೀವು ಮಾಡಿದ ಭಾಷಣ ಅತ್ಯಂತ ಧೈರ್ಯಶಾಲಿ, ಉತ್ತಮ ಸಂಶೋಧನೆ ಮತ್ತು ಚಿಂತನೆಯನ್ನು ಪ್ರಚೋದಿಸುವುದಾಗಿದೆ ಎಂದು ಒಪ್ಪಿಕೊಳ್ಳುತ್ತೇನೆ. ದೇಶ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಅದ್ಭುತವಾಗಿ ವಿವರಿಸಿದ್ದೀರಿ ಎಂದು ತಿಳಿಸಿದ್ದಾರೆ.

    ಪ್ರಧಾನಿ ಮೋದಿಯವರ ಭಾಷಣವನ್ನು ಹೊಗಳಿದ ಕಾಂಗ್ರೆಸ್ ನಾಯಕರ ಪೈಕಿ ಶತ್ರುಘ್ನ ಸಿನ್ಹಾ ಎರಡನೇಯವರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿ ದೇಶದ ವಿವಿಧ ಸಮಸ್ಯೆ ಹಾಗೂ ಅವುಗಳಿಗೆ ಪರಿಹಾರಗಳ ಕುರಿತು ವಿವರಿಸಿದ್ದರು.

    ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಮೂರು ಅಂಶಗಳನ್ನು ಕಡ್ಡಾಯವಾಗಿ ಸ್ವಾಗತಿಸಲೇಬೇಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಟ್ವೀಟ್ ಮಾಡಿದ್ದರು.

    https://www.youtube.com/watch?v=3Dkd9kUA4z4

  • ರಾಹುಲ್ ಗಾಂಧಿಗೆ ಒಂದು ಚಾನ್ಸ್ ಕೊಡಿ: ಶತ್ರುಘ್ನ ಸಿನ್ಹಾ

    ರಾಹುಲ್ ಗಾಂಧಿಗೆ ಒಂದು ಚಾನ್ಸ್ ಕೊಡಿ: ಶತ್ರುಘ್ನ ಸಿನ್ಹಾ

    ಪಾಟ್ನಾ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಒಂದು ಅವಕಾಶ ಕೊಡಿ ಎಂದು ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ರೈತರ ಸಾಲಮನ್ನಾ ಮಾಡುತ್ತಾರೆ. ನ್ಯಾಯ ಯೋಜನೆಯು 25 ಕೋಟಿ ಜನರಿಗೆ ಅನುಕೂಲವಾಗಲಿದೆ. ಅವರು ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ತಿಳಿಸಿದರು.

    ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ನಯಕರು ತಮ್ಮ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದರು. ಇತ್ತ ಕಾಂಗ್ರೆಸ್‍ನಿಂದಲೂ ವಿಶೇಷ ಆಹ್ವಾನ ಬಂದಿತ್ತು. ಅಂತಿಮವಾಗಿ ನಾನು ಕಾಂಗ್ರೆಸ್ ಸೇರಿಕೊಂಡೆ ಎಂದು ಶತ್ರುಘ್ನ ಸಿನ್ಹಾ ಹೇಳಿದರು.

    ಶತ್ರುಘ್ನ ಸಿನ್ಹಾ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿದ್ದರು. ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಹಿಂದೇಟು ಹಾಕಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದರು. ಯಾವಾಗ ತಮಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂದು ಖಚಿತವಾಯಿತೋ ಆಗ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾದರು.

    ಪಾಟ್ನಾ ಸಾಹೀಬ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶತ್ರುಘ್ನ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರು ಆಸ್ತಿಯ ವಿವರವನ್ನು ಘೋಷಣೆ ಮಾಡಿದ್ದಾರೆ. ತಮ್ಮ ಬಳಿ 112.22 ಕೋಟಿ ರೂ. ಮೌಲ್ಯದ ಚರ-ಸ್ಥಿರಾಸ್ತಿ ಇರುವುದಾಗಿ ಪ್ರಕಟಿಸಿದ್ದಾರೆ.

  • ಜಿನ್ನಾ ದೇಶದ ಸ್ವಾತಂತ್ರ್ಯ, ಅಭಿವೃದ್ಧಿಯಲ್ಲಿ ಪಾತ್ರ ವಹಿಸಿದ್ದರು : ಶತ್ರುಘ್ನ ಸಿನ್ಹಾ

    ಜಿನ್ನಾ ದೇಶದ ಸ್ವಾತಂತ್ರ್ಯ, ಅಭಿವೃದ್ಧಿಯಲ್ಲಿ ಪಾತ್ರ ವಹಿಸಿದ್ದರು : ಶತ್ರುಘ್ನ ಸಿನ್ಹಾ

    ಭೋಪಾಲ್: ಮೊಹಮ್ಮದ್ ಅಲಿ ಜಿನ್ನಾ ಅವರು ದೇಶದ ಸ್ವಾತಂತ್ರ್ಯ ಹಾಗೂ ಅಭಿವೃದ್ಧಿಯಲ್ಲಿ ಪಾತ್ರ ವಹಿಸಿದ್ದರು ಎಂದು ನಟ, ಕಾಂಗ್ರೆಸ್ ಮುಖಂಡ ಶತ್ರಘ್ನ ಸಿನ್ಹಾ ಹೇಳಿದ್ದಾರೆ.

    ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಸೌಸರ್ ನಲ್ಲಿ ನಡೆದ ಪ್ರಚಾರ ವೇಳೆ ಮಾತನಾಡಿ ಅವರು, ಕಾಂಗ್ರೆಸ್ ಪರಿವಾರವನ್ನು ಮಹಾತ್ಮ ಗಾಂಧಿ ನಡೆಸಿದರು. ಅವರ ಬಳಿಕ ಸರ್ದಾರ್ ವಲ್ಲಭಭಾಯಿ ಪಟೇಲ್, ಮೊಹಮ್ಮದ್ ಅಲಿ ಜಿನ್ನಾ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಈಗ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಸ್ವಾತಂತ್ರ್ಯ ಹಾಗೂ ಅಭಿವೃದ್ಧಿ ಶ್ರಮಿಸಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ ಎಂದರು.

    ಮೊಹಮ್ಮದ್ ಅಲಿ ಜಿನ್ನಾ ಫೋಟೋ ವಿಚಾರವಾಗಿ ಉತ್ತರ ಪ್ರದೇಶದ ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಗಲಾಟೆ ನಡೆದಿತ್ತು.

    ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಜಿನ್ನಾ ಫೋಟೋವನ್ನು 2018ರ ಮೇನಲ್ಲಿ ಪ್ರದರ್ಶಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದನ್ನು ಸಮರ್ಥಿಸಿಕೊಂಡಿದ್ದ ವಿವಿ ವಕ್ತಾರ ಶಫಿ ಕಿದ್ವಾಯಿ, ಜಿನ್ನಾ ಫೋಟೋ ದಶಕಗಳಿಂದಲೂ ವಿಶ್ವವಿದ್ಯಾಲಯಲ್ಲಿದೆ. ಜಿನ್ನಾ ಈ ವಿಶ್ವವಿದ್ಯಾಲಯದ ಸಂಸ್ಥಾಪಕರು ಮತ್ತು ವಿದ್ಯಾರ್ಥಿ ಸಂಘಟನೆಯ ಖಾಯಂ ಸದಸ್ಯರು. ಹೀಗಾಗಿ ಖಾಯಂ ಸದಸ್ಯತ್ವ ಹೊಂದಿದ ಮಹಾತ್ಮ ಗಾಂಧಿ, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಜಿನ್ನಾ ಸೇರಿದಂತೆ ಅನೇಕ ಫೋಟೋ ಪ್ರದರ್ಶನ ಮಾಡಲಾಗಿದೆ ಎಂದು ತಿಳಿಸಿದ್ದರು.

  • ಬಿಜೆಪಿ ಸಂಸ್ಥಾಪನಾ ದಿನದಂದು ಬಿಜೆಪಿಗೆ ಗುಡ್ ಬೈ ಹೇಳಿದ ಶತ್ರುಘ್ನ ಸಿನ್ಹಾ

    ಬಿಜೆಪಿ ಸಂಸ್ಥಾಪನಾ ದಿನದಂದು ಬಿಜೆಪಿಗೆ ಗುಡ್ ಬೈ ಹೇಳಿದ ಶತ್ರುಘ್ನ ಸಿನ್ಹಾ

    – ಬಿಜೆಪಿ ಒನ್ ಮ್ಯಾನ್ ಶೋ, 2 ಮ್ಯಾನ್ ಆರ್ಮಿ: ಸಿನ್ಹಾ

    ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವಾದ ಇಂದು ಬಾಲಿವುಟ್ ನಟ ಶತ್ರುಘ್ನಾ ಸಿನ್ಹಾ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

    ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೆವಾಲ ಅವರ ಸಮ್ಮುಖದಲ್ಲಿ ಸೇರ್ಪಡೆಯಾದರು. ಇದರೊಂದಿಗೆ ಬಿಹಾರದ ಪಾಟ್ನಾ ಸಾಹೇಬ್ ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ಇಳಿದಿದ್ದು, ಬಿಜೆಪಿ ಪಕ್ಷದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಶತ್ರುಘ್ನಾ ಸಿನ್ಹಾ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಿ ಕ್ಷೇತ್ರದಲ್ಲಿ ಸಚಿವ ರವಿ ಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿತ್ತು.

    ಪಕ್ಷಕ್ಕೆ ಆಹ್ವಾನ ನೀಡಿ ಮಾತನಾಡಿದ ಕೆ.ಸಿ ವೇಣುಗೋಪಾಲ್, ಅತ್ಯುತ್ತಮ ಸಂಸದೀಯ ಪಟು ಶತ್ರುಘ್ನಾ ಸಿನ್ಹಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಷ್ಟು ದಿನ ಒಳ್ಳೆಯ ವ್ಯಕ್ತಿ ಕೆಟ್ಟ ಪಕ್ಷದಲ್ಲಿದ್ದರು. ಈ ಚುನಾವಣಾ ಪ್ರಜಾಪ್ರಭುತ್ವ ವಿರೋಧಿ ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ಪಕ್ಷಕ್ಕೆ ಸಿನ್ಹಾ ಸೇರ್ಪಡೆ ಮತ್ತಷ್ಟು ಶಕ್ತಿ ತುಂಬಿದೆ.

    ಆ ಬಳಿಕ ಮಾತನಾಡಿದ ಸಿನ್ಹಾ, ಜಯಪ್ರಕಾಶ್ ರಿಂದ ಪ್ರಭಾವಿತರಾಗಿ ರಾಜಕೀಯ ಪ್ರವೇಶ ಮಾಡಿ, ವಾಜಪೇಯಿ ಸಮಯದಲ್ಲಿ ಬಿಜೆಪಿ ಸೇರ್ಪಡೆಯಾದೆ. ನನ್ನ ಚಿಂತನೆ ಸದಾ ಪ್ರಶ್ನೆ ಮಾಡುವ ರೀತಿಯಾಗಿತ್ತು. ಆದರೆ ಬಿಜೆಪಿಯಲ್ಲಿ ನನಗೆ ಪ್ರಶ್ನಿಸಲು ಅವಕಾಶವಿರಲಿಲ್ಲ. ನನ್ನನ್ನು ಬಿಜೆಪಿ ಮಾರ್ಗದರ್ಶನ ಮಂಡಳಿ ಸದಸ್ಯರನ್ನಾಗಿ ಮಾಡಿದ್ದರು. ಪಕ್ಷದಲ್ಲಿ ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಅರುಣ್ ಶೌ ಅವರಿಗೂ ಗೌರವ ಇಲ್ಲದಂತಾಗಿದೆ. ಈಗ ನನ್ನ ಕನಸು ಸಾಕಾರಗೊಳ್ಳುತ್ತಿದೆ. ಕಾಂಗ್ರೆಸ್ ನಿಜವಾಗಿ ನನ್ನ ಮನೆಯಂತಾಗಿದೆ ಎಂದರು.

    ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿನ್ಹಾ, ಕೇಂದ್ರ ಸರ್ಕಾರದ ಮಂತ್ರಿಗಳಿಗೆ ಸ್ವಾತಂತ್ರ್ಯವಿಲ್ಲವಾಗಿದ್ದು, ಸಂಪೂರ್ಣ ನಿರ್ಧಾರಗಳನ್ನು ಮೋದಿ ತೆಗೆದುಕೊಳ್ಳುತ್ತಾರೆ. ಒನ್ ಮ್ಯಾನ್ ಶೋ, ಟು ಮ್ಯಾನ್ ಆರ್ಮಿ ರೀತಿ ಬಿಜೆಪಿ ಪಕ್ಷ ಆಗಿದೆ. ನಾನು ಯಾವಾಗಲೂ ನಿರುದ್ಯೋಗ, ರೈತರು, ಪೌರ ಕಾರ್ಮಿಕರು, ಯುವಕರು, ಸ್ಮಾರ್ಟ್ ಸಿಟಿಗಳ ಪರ ಧ್ವನಿ ಎತ್ತುತ್ತಿದೆ. ಆದರೆ ರಾತ್ರೋ ರಾತ್ರಿ ನೋಟು ರದ್ದು ಮಾಡಿ ಜನ ಪರದಾಡುವಂತೆ ಮಾಡಿದರು. ಎಲ್ಲಾ ವರ್ಗದ ಜನರಿಗೆ ಕಷ್ಟವಾಗಿದೆ ಅಂತಾ ಮೋದಿಗೆ ಅರ್ಥವಾಗಿಲ್ಲ. ಸ್ವತಃ ಮೋದಿ ತಾಯಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದರು. ಇದರಿಂದ ಮೋದಿ ನೀಡಿದ ಸಂದೇಶವಾದರೂ ಏನು ಎಂದು ಪ್ರಶ್ನಿಸಿದರು.

    ಇಂದು ಬಿಜೆಪಿ ಸಂಸ್ಥಾಪನಾ ದಿನವಾಗಿದ್ದು, ಇಷ್ಟೆಲ್ಲಾ ಮಾತನಾಡಲೂ ಬೇಸರವಾಗುತ್ತಿದೆ. ಆದರೆ ಸತ್ಯವನ್ನು ಹೇಳುವ ಸ್ಥಿತಿ ಉದ್ಭವಿಸಿದೆ. ನನಗೆ ಬಿಜೆಪಿ ಪಕ್ಷ ಬಿಡುವ ಮನಸ್ಸಿರಲಿಲ್ಲ, ಬದಲಿಗೆ ಪಕ್ಷವೇ ನನ್ನನ್ನು ಬಿಟ್ಟಿದೆ. ನದಿ ಇಲ್ಲದಿರುವ ಕಡೆ ಸೇತುವೆ ಕಟ್ಟುವ ಸುಳ್ಳು ಭರವಸೆ ಬಿಜೆಪಿ ನೀಡುತ್ತದೆ ಎಂದು ಹೇಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ‘ಮೋಟಾ ಸೇಠು’ ಎಂದು ವ್ಯಂಗ್ಯವಾಗಿ ಮಾತನಾಡಿದರು.