Tag: Shehbaz Sharif

  • ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

    ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

    ಇಸ್ಲಾಮಾಬಾದ್:‌ ಆರ್ಥಿಕ ದುಸ್ಥಿತಿಗೆ ಸಿಲುಕಿರುವ ಪಾಕಿಸ್ತಾನವನ್ನ ಶೆಹಬಾಜ್ ಷರೀಫ್ (Shehbaz Sharif) ಆಡಳಿತ ಇನ್ನಷ್ಟು ಸಾಲದ ಕೂಪಕ್ಕೆ ತಳ್ಳಿದೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ, ಪ್ರಸಕ್ತ ವರ್ಷ ಜೂನ್‌ ವೇಳೆಗೆ ಪಾಕಿಸ್ತಾನದ ಸಾಲದ ಮಿತಿ 2,86,832 ಶತಕೋಟಿ ಡಾಲರ್‌ (USD) ಅಂದ್ರೆ ಸುಮಾರು 80.6 ಲಕ್ಷ ಕೋಟಿ ಪಾಕಿಸ್ತಾನಿ ರೂಪಾಯಿಗೆ ಏರಿಕೆಯಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದ್ರೆ 13 ಪ್ರತಿಶತದಷ್ಟು ಹೆಚ್ಚಾಗಿದೆ.

    ಹೌದು. ಪಾಕಿಸ್ತಾನದ ಹಣಕಾಸು ಸಚಿವಾಲಯ (Pakistan Ministry of Finance) ಬಿಡುಗಡೆ ಮಾಡಿದ 2025ರ ಅಂಕಿ-ಅಂಶದ ಪ್ರಕಾರ, ಜೂನ್ 2025ರ ಅಂತ್ಯದ ವೇಳೆಗೆ ಪಾಕಿಸ್ತಾನದ ಒಟ್ಟು ಸಾಲ 80.6 ಲಕ್ಷ ಕೋಟಿ ಪಾಕಿಸ್ತಾನಿ ರೂಪಾಯಿಗಳಷ್ಟಾಗಿದೆ. ಇದರಲ್ಲಿ 54.5 ಲಕ್ಷ ಕೋಟಿ ದೇಶಿಯ ಸಾಲ, 26 ಲಕ್ಷ ಕೋಟಿ ಬಾಹ್ಯ ಸಾಲ ಇದೆ. ಅಲ್ಲದೇ ದೇಶದ ಸಾಲದ ಪ್ರಮಾಣ ಜಿಡಿಪಿಗಿಂತ 70% ಏರಿಕೆಯಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

    ಸಾಲದ ಹೊರೆ ಹೆಚ್ಚಾಗಿದ್ದೇಕೆ?
    ದೇಶಿಯ ಸಾಲವು ವರ್ಷದಿಂದ ವರ್ಷಕ್ಕೆ ಶೇ.15 ರಷ್ಟು ಏರಿಕೆಯಾಗುತ್ತಿದೆ. ಇದರೊಂದಿಗೆ ಬಾಹ್ಯ ಸಾಲವು ವಾರ್ಷಿಕ ಶೇ.6 ರಷ್ಟು ಹೆಚ್ಚಾಗುತ್ತಾ ಬಂದಿದೆ. ಐಎಂಎಫ್‌, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB), ಇತರ ಬಹುಪಕ್ಷೀಯ ಸಂಸ್ಥೆಗಳಿಂದ ಸಂಸ್ಥೆಗಳಿಂದಲೂ ನಿಧಿಗಳು ಹರಿದುಬಂದಿದ್ದು, ಸಾಲದ ಹೊರೆ ಹೆಚ್ಚಾಗುತ್ತ ಸಾಗಿದೆ. ಇದನ್ನೂ ಓದಿ: Bihar Election 2025 | ಪಂಚಾಯತ್ ಪ್ರತಿನಿಧಿಗಳಿಗೆ ಪಿಂಚಣಿ, 50 ಲಕ್ಷ ವಿಮೆ, 5 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತೇಜಸ್ವಿ ಭರವಸೆ

  • ಪಾಕ್‌ ವಿರುದ್ಧ ಸಿಡಿದೆದ್ದ ಪಿಒಕೆ – ಏನಿದು ವಿವಾದ?

    ಪಾಕ್‌ ವಿರುದ್ಧ ಸಿಡಿದೆದ್ದ ಪಿಒಕೆ – ಏನಿದು ವಿವಾದ?

    ಪಾಕಿಸ್ತಾನ (Pakistan) ಸರ್ಕಾರ ಪಿಒಕೆ (PoK) ಜನರ ವಿರುದ್ಧ ಮಾಡುತ್ತಿರುವ ತಾರತಮ್ಯದ ಬಗ್ಗೆ ಸಿಡಿದೆದ್ದಿದ್ದಾರೆ. ಇದೇ ತಿಂಗಳ ಆರಂಭದಲ್ಲಿ (ಅಕ್ಟೋಬರ್) ಪಿಒಕೆ v/s ಪಾಕ್‌ ನಡುವೆ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿ, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಆದರೆ ಪಾಕ್‌ ಮಾತ್ರ ಇದು ವಿದೇಶದ (ಭಾರತದ) ಕುತಂತ್ರ ಎಂದು ಆರೋಪಿಸಿತ್ತು. ಏನಿದು ಪಾಕ್‌ – ಪಿಒಕೆ ವಿವಾದ? ಭಾರತದ ಕಡೆ ಪಾಕ್‌ ಬೊಟ್ಟು ಮಾಡ್ತಿರೋದು ಯಾಕೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ‌

    ಪಿಒಕೆಯಲ್ಲಿ ಸ್ವಾತಂತ್ರ್ಯದ ಕೂಗು
    ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುತ್ತಿರುವ ಪಾಕ್‌ ಸರ್ಕಾರದ ವಿರುದ್ಧ ಜಂಟಿ ಅವಾಮಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಗಳಿಂದ ಪಿಒಕೆ ನಲುಗಿದೆ. ಪ್ರತಿಭಟನೆಗಳಿಂದಾಗಿ ಮಾರುಕಟ್ಟೆಗಳು, ಅಂಗಡಿಗಳು ಮತ್ತು ಸ್ಥಳೀಯ ವ್ಯವಹಾರಗಳು ಸ್ಥಗಿತಗೊಂಡಿವೆ. ಪಿಒಕೆಯಲ್ಲಿ ಸ್ವಾತಂತ್ರ್ಯದ ಕೂಗು ಹೆಚ್ಚಾಗಿ ಕೇಳಿ ಬರುತ್ತಿದೆ.

    ಪಿಒಕೆ ಪ್ರಧಾನಿ ಪಾಕ್‌ನ ಕೈಗೊಂಬೆ!
    1947-48ರ ಭಾರತ – ಪಾಕ್‌ನಡುವಿನ ಯುದ್ಧ ಮತ್ತು ಕದನ ವಿರಾಮದ ಬಳಿಕ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳು ಪಾಕಿಸ್ತಾನದ ವಶದಲ್ಲಿಯೇ ಉಳಿದವು. ಪಿಒಕೆ 13,300 ಚದರ ಕಿಲೋಮೀಟರ್‌ ಭೂ ಪ್ರದೇಶ ಹೊಂದಿದ್ದು ಸುಮಾರು 52 ಲಕ್ಷ ಜನರು ಇಲ್ಲಿ ನೆಲೆಸಿದ್ದಾರೆ. ಪಿಒಕೆ ನಾಮಮಾತ್ರವಾಗಿ ಸ್ವಾಯತ್ತ ಪ್ರದೇಶವಾಗಿದ್ದರೂ, ಇದನ್ನು ಪಾಕಿಸ್ತಾನ ನಿಯಂತ್ರಿಸುತ್ತಿದೆ.

    ಪಾಕಿಸ್ತಾನದ ವಶದಲ್ಲಿರುವ ಕಾಶ್ಮೀರದ ಜಾಗವನ್ನು ಭಾರತ ಪಾಕ್‌ ಆಕ್ರಮಿತ ಕಾಶ್ಮೀರ ಎಂದು ಕರೆದರೆ ಪಾಕಿಸ್ತಾನ ಅದಕ್ಕೆ ಅಜಾದ್‌ ಕಾಶ್ಮೀರ ಎಂಬ ಹೆಸರನ್ನು ಇಟ್ಟಿದೆ. ಇಲ್ಲಿ ಪ್ರತ್ಯೇಕ ಸರ್ಕಾರವಿದ್ದು ಅಧ್ಯಕ್ಷ, ಪ್ರಧಾನ ಮಂತ್ರಿ ಇದ್ದಾರೆ. ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ಇದೆ. ಅಜಾದ್‌ ಕಾಶ್ಮೀರ ಸ್ವಾಯತ್ತ ಪ್ರದೇಶವಾಗಿರುವ ಕಾರಣ ಪಾಕಿಸ್ತಾನ ಸಂಸತ್ತಿನಲ್ಲಿ ಇದಕ್ಕೆ ಪ್ರತಿನಿಧಿಯಿಲ್ಲ. ಆಜಾದ್ ಕಾಶ್ಮೀರ ಶಾಸಕಾಂಗ ಸಭೆ 53 ಮಂದಿ ಸದಸ್ಯರನ್ನು ಹೊಂದಿದ್ದು, ಪಾಕಿಸ್ತಾನದ ಕಾಶ್ಮೀರ ವ್ಯವಹಾರ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಸಚಿವಾಲಯ ಪಾಕ್‌ ಸರ್ಕಾರ ಮತ್ತು ಪಿಒಕೆ ಜೊತೆ ಕೊಂಡಿಯಾಗಿ ಕೆಲಸ ಮಾಡುತ್ತಿದೆ. ಇಲ್ಲಿನ ಪ್ರಧಾನಿ ಮತ್ತು ಅಧ್ಯಕ್ಷರು ಪಾಕ್‌ ಸರ್ಕಾರದ ಕೈಗೊಂಬೆಗಳಾಗಿದ್ದಾರೆ.

    ಪಿಒಕೆ ಜನರ ಬೇಡಿಕೆ ಏನು?
    ಉಚಿತ ಶಿಕ್ಷಣ, ಆರೋಗ್ಯ , ಅಭಿವೃದ್ಧಿ ಸೇರಿದಂತೆ ಇತರ ಬೇಡಿಕೆಗಗಳನ್ನು ಪಿಒಕೆ ಜನ ಸರ್ಕಾರಕ್ಕೆ ಸತತ ಬೇಡಿಕೆ ಇಡುತ್ತಾ ಬಂದಿದ್ದಾರೆ. ಇದೇ ರೀತಿ ಮೇ 2023 ರಿಂದಲೂ ಸರ್ಕಾರಕ್ಕೆ ಈ ಬಗ್ಗೆ ಗಮನ ಕೊಡುವಂತೆ ಪಿಒಕೆ ಜನ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ಅಲ್ಲಿನ ಸರ್ಕಾರ ನಿರಂತರವಾಗಿ ಜನರ ಮನವಿಯನ್ನು ನಿರ್ಲಕ್ಷಿಸುತ್ತಲೇ ಬಂದಿದೆ. ಇದೇ ಕಾರಣಕ್ಕೆ ಇತ್ತೀಚೆಗೆ ಇದು ಹಿಂಸಾತ್ಮಕ ಪ್ರತಿಭಟನೆಯ ರೂಪ ಪಡೆದುಕೊಂಡಿತು.

    ಬಜೆಟ್‌ನಿಂದ ಪಿಒಕೆ ನಿರ್ಲಕ್ಷಿಸಲ್ಪಟ್ಟಿದೆ – ಇದು ಸಾರ್ವಜನಿಕ ಅಸಮಾಧಾನ ಉಂಟುಮಾಡಿದೆ. ಮೊದಲು ಹೆಚ್ಚುತ್ತಿರುವ ವಿದ್ಯುತ್ ಬಿಲ್‌ ವಿಚಾರವಾಗಿ ಜನ ಬೀದಿಗಿಳಿದಿದ್ದರು. ಇದರ ಜೊತೆಗೆ ಬಡತನ, ಆಹಾರ ಪದಾರ್ಥಗಳ ಕಳ್ಳಸಾಗಣೆ ಮತ್ತು ಸಬ್ಸಿಡಿ ಗೋದಿ ಹಿಟ್ಟಿನ ತೀವ್ರ ಕೊರತೆಯಿಂದ ಈ ಕಿಚ್ಚು ಹೆಚ್ಚಾಗಿತ್ತು.

    ಈ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕ್‌ ತನ್ನ ಸೇನೆಯನ್ನು ಬಳಸಿ ಬಲಪ್ರಯೋಗ ಮಾಡಿತ್ತು. ಇದನ್ನು ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗ ಸಹ ಖಂಡಿಸಿತ್ತು. ಹಲವಾರು ಸುತ್ತಿನ ವಿಫಲ ಮಾತುಕತೆಗಳ ನಂತರ, ಪಾಕ್‌ ಸರ್ಕಾರ ಅಕ್ಟೋಬರ್ 4 ರಂದು ಪ್ರತಿಭಟನಾಕಾರ ಕೆಲವು ಬೇಡಿಕೆ ಇಡೇರಿಕೆಗೆ ಒಪ್ಪಿಕೊಂಡಿತ್ತು.

    ಪಿಒಕೆ ಹೋರಾಟಕ್ಕೆ ಮಣಿದ ಪಾಕ್‌
    ಪಾಕ್‌ ಸರ್ಕಾರ ಪ್ರತಿಭಟನೆಯ ತೀವ್ರತೆಗೆ ಸೋತು ಹೋರಾಟದ ನೇತೃತ್ವ ವಹಿಸಿದ್ದ ಅವಾಮಿ ಕ್ರಿಯಾ ಸಮಿತಿ ಜೊತೆ 25 ಬೇಡಿಕಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದಲ್ಲಿ ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ, ಹೋರಾಟಗಾರ ಮೇಲೆ ದೌರ್ಜನ್ಯ ಎಸಗಿದವರ ಮೇಲೆ ಭಯೋತ್ಪಾದನೆ ಪ್ರಕರಣ ದಾಖಲು ಮಾಡುವುದು, ಪಿಒಕೆಯ ಮೀರಾಪುರದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ ಮೂಲಸೌಕರ್ಯಕ್ಕೆ 3000 ಕೋಟಿ ರೂ. ನೀಡುವಂತಹ ಬೇಡಿಕೆಗಳು ಸೇರಿವೆ. ಇದರ ಜೊತೆ ಪಿಒಕೆಯಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್‌ ಸೇರಿದಂತೆ ಉಚಿತ ಚಿಕಿತ್ಸೆಗಾಗಿ 15 ದಿನಗಳ ಒಳಗಾಗಿ ಆರೋಗ್ಯ ಕಾರ್ಡ್‌ ವಿತರಣೆ, ವಿದ್ಯುತ್‌ ಪೂರೈಕೆ ಉತ್ತಮಪಡಿಸಲು ಅನುದಾನ ನೀಡುವುದಾಗಿ ಪಾಕ್‌ ಸರ್ಕಾರ ಒಪ್ಪಿಕೊಂಡಿದೆ.

    ಭಾರತದ ಮೇಲೆ ಪಾಕ್‌ ಬೊಟ್ಟು ಮಾಡಿದ್ದು ಯಾಕೆ?
    ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಕೆಲವು ಭಾಗಗಳನ್ನು ಪಾಕಿಸ್ತಾನ 1947-48ರ ಅವಧಿಯಲ್ಲಿ ಅಕ್ರಮವಾಗಿ ಆಕ್ರಮಿಸಿಕೊಂಡಿದೆ. ಈ ಪ್ರದೇಶದಿಂದ ತಕ್ಷಣವೇ ಪಾಕ್‌ ಹಿಂದೆ ಸರಿಯ ಬೇಕು ಎಂದು ಭಾರತ ನಿರಂತರ ಒತ್ತಡ ಹೇರುತ್ತಲೇ ಬಂದಿದೆ. ಆದರೆ ಪಾಕಿಸ್ತಾನ ಮಾತ್ರ ಅವೆಲ್ಲ ತನ್ನದೇ ಜಾಗ ಎಂದು ವಾದಿಸುತ್ತಿದೆ. ಇದೇ ಕಾರಣಕ್ಕೆ ಅಲ್ಲಿನ ಸ್ಥಳೀಯರನ್ನು ಭಾರತ ಎತ್ತಿ ಕಟ್ಟಿ ಸರ್ಕಾರದ ವಿರುದ್ಧ ಆಯುಧಗಳನ್ನಾಗಿ ನಿರ್ಮಾಣ ಮಾಡುತ್ತಿದೆ ಎಂಬುದು ಪಾಕ್‌ನ ವಾದ.

    ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದೇನು?
    ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಈ ಪ್ರತಿಭಟನೆಯನ್ನು ವಿದೇಶಿ ಪಿತೂರಿ ಎಂದು ಆರೋಪಿಸಿದ್ದರು. ಅಲ್ಲದೇ ಎಲ್ಲಾ ಪಿತೂರಿಗಳು ಮತ್ತು ವದಂತಿಗಳು ಈಗ ಸಮಾಧಿಯಾಗಿವೆ. ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಹೇಳಿದ್ದರು.

    ಪಾಕ್‌ ಪ್ರಧಾನಿ ಹೇಳಿದಂತೆ ಇದು ವಿದೇಶಿ ಪಿತೂರಿಯೇ ಆಗಿದ್ದರೆ ಪಿಒಕೆ ಜನರ 38 ಬೇಡಿಕೆಗಳಲ್ಲಿ 25ನ್ನು ಪೂರೈಸಲು ಪಾಕ್‌ ಸರ್ಕಾರ ಏಕೆ ಒಪ್ಪಿಕೊಂಡಿತು? ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತು. ಇದು ಜನರ ಪ್ರತಿಭಟನೆಯ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ರವಲ್ಲದೇ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗತ್ತಿಗೆ ಅರಿವಾಗಿತ್ತು.

    ಪಿಒಕೆ ಜನರ ವಿರುದ್ಧ ಪಾಕ್ ದಬ್ಬಾಳಿಕೆ‌ ಖಂಡಿಸಿದ್ದ ಭಾರತ
    ಪಾಕಿಸ್ತಾನವು ಇತ್ತೀಚೆಗೆ ಪಿಒಕೆಯಲ್ಲಿ ನಡೆದ ಪ್ರತಿಭಟನೆಗಳ ವಿಚಾರವಾಗಿ ಪಾಕ್‌ ಸರ್ಕಾರವನ್ನು ತೀವ್ರವಾಗಿ ಟೀಕಿಸಿತ್ತು. ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಕ್‌ ಪಡೆಗಳು ಅಮಾಯಕ ನಾಗರಿಕರ ಮೇಲೆ ದೌರ್ಜನ್ಯ ನಡೆಸಿದೆ. ಈ ಪ್ರದೇಶಗಳಿಂದ ಪಾಕ್‌ ಸರ್ಕಾರ ಸಂಪನ್ಮೂಲಗಳನ್ನು ವ್ಯವಸ್ಥಿತವಾಗಿ ಲೂಟಿ ಮಾಡಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಟೀಕಿಸಿದ್ದರು.

    ಆಪರೇಷನ್‌ ಸಿಂದೂರ
    ಈ ವರ್ಷ ಮೇ 7ರಿಂದ 10ರ ವರೆಗೆ ಪಾಕಿಸ್ತಾನದೊಂದಿಗಿನ ಸಂಘರ್ಷದ ಸಮಯದಲ್ಲಿ ಭಾರತಕ್ಕೆ ಪಿಒಕೆಯನ್ನು ವಶಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಭಾರತ ಹಾಗೆ ಮಾಡಲಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಇನ್ನೂ ಆಪರೇಷನ್ ಸಿಂದೂರ ನಂತರ ಪಾಕಿಸ್ತಾನದೊಂದಿಗಿನ ಮುಂದಿನ ಮಾತುಕತೆ ಭಯೋತ್ಪಾದನೆ ಮತ್ತು ಪಿಒಕೆ ವಿಷಯಗಳಿಗೆ ಸೀಮಿತವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದರು.

  • ಭಾರತ ಅದ್ಭುತ ದೇಶ, ನನ್ನ ಒಳ್ಳೆಯ ಫ್ರೆಂಡ್‌ – ಪಾಕ್‌ ಪ್ರಧಾನಿ ಎದುರೇ ಮೋದಿಯನ್ನ ಹಾಡಿಹೊಗಳಿದ ಟ್ರಂಪ್‌

    ಭಾರತ ಅದ್ಭುತ ದೇಶ, ನನ್ನ ಒಳ್ಳೆಯ ಫ್ರೆಂಡ್‌ – ಪಾಕ್‌ ಪ್ರಧಾನಿ ಎದುರೇ ಮೋದಿಯನ್ನ ಹಾಡಿಹೊಗಳಿದ ಟ್ರಂಪ್‌

    – ಈಗ ಭಾರತ -ಪಾಕ್‌ ಚೆನ್ನಾಗಿ ಹೊಂದಿಕೊಳ್ಳುತ್ತವೆ ಅಲ್ಲವೇ? – ಟ್ರಂಪ್‌ ಪ್ರಶ್ನೆ
    – ಅಧ್ಯಕ್ಷರ ಮಾತಿಗೆ ಹೌದು ಎನ್ನುತ್ತಾ ತಲೆಯಾಡಿಸಿದ ಶೆಹಬಾಜ್ ಷರೀಫ್

    ವಾಷಿಂಗ್ಟನ್‌/ಕೈರೋ: ಭಾರತ ಒಂದು ಅದ್ಭುತ ದೇಶ, ನನ್ನ ಒಳ್ಳೆಯ ಸ್ನೇಹಿತ ಕೂಡ ಹೌದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಎದುರಲ್ಲೇ ಭಾರತ & ಮೋದಿ ಅವರನ್ನ ಹಾಡಿಹೊಗಳಿದ್ದಾರೆ.

    ಈಜಿಪ್ಟ್‌ನಲ್ಲಿ ಸೋಮವಾರ ನಡೆದ ಗಾಜಾ ಶಾಂತಿ ಸಮ್ಮೇಳದಲ್ಲಿ ಮಾತನಾಡಿದ ಟ್ರಂಪ್‌, ಭಾರತ ಹಾಗೂ ಪ್ರಧಾನಿ ಮೋದಿ ಅವರನ್ನ ಹೊಗಳಿದ್ರು. ಈಗ ಭಾರತ ಮತ್ತು ಪಾಕಿಸ್ತಾನ ಚೆನ್ನಾಗಿ ಹೊಂದಿಕೊಳ್ಳುತ್ತವೇ ಅಲ್ಲವೇ ಎಂದೂ ಶೆಹಬಾಜ್ ಷರೀಫ್ (Shehbaz Sharif) ಕಡೆಗೆ ತಿರುಗಿ ಕೇಳಿದರು. ಇದಕ್ಕೆ ಪಾಕ್‌ ಪ್ರಧಾನಿ (Pak PM) ಹೌದು ಎನ್ನುತ್ತಲೇ ಸಕಾರಾತ್ಮಕವಾಗಿ ತಲೆಯಾಡಿಸಿದ್ರು. ಈ ವಿಡಿಯೋ ತುಣುಕುಗಳೀಗ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗ್ತಿವೆ.

    ಭಾಷಣದ ವೇಳೆ ಮುಗುಳುನಗೆ ಬೀರಿ ಮಾತನಾಡಿದ ಟ್ರಂಪ್‌, ಭಾರತವು (India) ಒಂದು ಅದ್ಭುತ ದೇಶ, ನನ್ನ ಇಳ್ಳೆಯ ಸ್ನೇಹಿತನ ನೇತೃತ್ವದಲ್ಲಿ ಅದ್ಭುತ ಕೆಲಸಗಳನ್ನ ಮಾಡುತ್ತಿದೆ. ಭಾರತ ಮತ್ತು ಪಾಕಿಸ್ತಾನ ತುಂಬಾ ಚೆನ್ನಾಗಿ ಹೊಂದಿಕೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ ಎಂದರು.

    ಪಾಕ್‌ ಮಿಲಿಟರಿ ನಾಯಕತ್ವ ಶ್ಲಾಘನೆ
    ಇನ್ನೂ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರೊಂದಿಗೆ ಗಾಜಾ ಶಾಂತಿ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿದ್ದ ಟ್ರಂಪ್, ಪಾಕಿಸ್ತಾನದ ಮಿಲಿಟರಿ ನಾಯಕತ್ವವನ್ನು ಶ್ಲಾಘಿಸಿದರು. ಉತ್ತಮ ಸ್ನೇಹಿತರು ಒಟ್ಟಾಗಿ ಕೆಲಸ ಮಾಡುವುದರಿಂದ ಶಾಂತಿ ನೆಲೆಸುತ್ತದೆ ಎಂದು ಭಾರತ-ಪಾಕ್‌ ಒಂದಾಗುವಂತೆ ಪರೋಕ್ಷವಾಗಿ ಹೇಳಿದರು. ಇದೇ ವೇಳೆ ತಮ್ಮ ಹಿಂದೆ ನಿಂತಿದ್ದ ಶಹಬಾಜ್ ಷರೀಫ್ ಅವರನ್ನ ತೋರಿಸುತ್ತಾ, ಇದನ್ನ ಸಾಧ್ಯವಾಗಿಸಲು ಸಹಕರಿಸುತ್ತಾರೆ… ಹೌದಲ್ಲವೇ ಎಂದು ವ್ಯಂಗ್ಯ ಮಾಡಿದರು.

    ಇಸ್ರೇಲ್‌ ಸಂಸತ್ತಿನಲ್ಲಿ ಟ್ರಂಪ್‌ ಭಾಷಣ
    ಇದಕ್ಕೂ ಮುನ್ನ ಇಸ್ರೇಲ್ (Isreal) ಮತ್ತು ಗಾಜಾದ ಹಮಾಸ್ (Hamas) ಬಂಡುಕೋರರ ನಡುವಿನ ಸುದೀರ್ಘ 2 ವರ್ಷಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಇಸ್ರೇಲ್‌ ಸಂಸತ್ತನ್ನು ಉದ್ದೇಶಿಸಿ ಟ್ರಂಪ್‌ ಮಾತನಾಡಿದ್ದರು. ಹಲವು ವರ್ಷಗಳ ನಿರಂತರ ಯುದ್ಧದ ನಂತರ ಇಂದು ಆಕಾಶವು ಶಾಂತವಾಗಿದೆ. ಬಂದೂಕುಗಳು ಮೌನವಾಗಿವೆ. ಸೈರನ್‌ಗಳು ಶಬ್ಧ ಮಾಡುವುದನ್ನು ನಿಲ್ಲಿಸಿವೆ. ಶಾಂತಿಯಿಂದ ಇರುವ ಪವಿತ್ರ ಭೂಮಿಯ ಮೇಲೆ ಸೂರ್ಯ ಉದಯಿಸುತ್ತಿದ್ದಾನೆ ಎಂದು ಹೇಳಿದರು.

    ಒತ್ತೆಯಾಳುಗಳು ಹಿಂತಿರುಗಿದ್ದಾರೆ, ಅದನ್ನು ಹೇಳಲು ತುಂಬಾ ಸಂತೋಷವಾಗುತ್ತಿದೆ. ನಾನು ಕ್ರೂರಿಯಾಗಿ ವರ್ತಿಸುತ್ತೇನೆ ಎಂದು ಎಲ್ಲರೂ ಭಾವಿಸಿದ್ದರು. ನಾನು ಎಲ್ಲರೊಂದಿಗೆ ಯುದ್ಧಕ್ಕೆ ಹೋಗುತ್ತೇನೆ ಎಂದು ಹಿಲರಿ ಕ್ಲಿಂಟನ್ ಹೇಳಿದ್ದು ನನಗೆ ನೆನಪಿದೆ. ಆದರೆ ನಾನು ಯುದ್ಧ ಬಯಸುವ ವ್ಯಕ್ತಿಯಲ್ಲ. ನನ್ನದು ಯುದ್ಧ ನಿಲ್ಲಿಸುವ ವ್ಯಕ್ತಿತ್ವ ತಾವೇ ಬೆನ್ನುತಟ್ಟಿಕೊಂಡರು.

  • ಪಾಕ್‌ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ – ಷರೀಫ್‌, ಅಸಿಮ್ ಮುನೀರ್‌ಗೆ ಪುಕ ಪುಕ

    ಪಾಕ್‌ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ – ಷರೀಫ್‌, ಅಸಿಮ್ ಮುನೀರ್‌ಗೆ ಪುಕ ಪುಕ

    – ಹಣದುಬ್ಬರ ತಡೆ, ಇಂಧನ ವೆಚ್ಚ ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹ

    ಇಸ್ಲಾಮಾಬಾದ್: ಬಲೂಚಿಸ್ತಾನ ಪ್ರತ್ಯೇಕತೆಗಾಗಿ ನಿರಂತರ ಹೋರಾಟಗಳು ನಡೆಯುತ್ತಿರುವ ಪಾಕಿಸ್ತಾನಕ್ಕೆ ಈಗ ಮತ್ತೊಂದು ತಲೆನೋವು ಎದುರಾಗಿದೆ. ಅವಾಮಿ ಕ್ರಿಯಾ ಸಮಿತಿ (Awami Action Committee) ಸೋಮವಾರ ಪ್ರತಿಭಟನೆಗೆ ಕರೆ ನೀಡಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಇತ್ತೀಚಿನ ಇತಿಹಾಸದಲ್ಲಿಯೇ ಅತಿದೊಡ್ಡ ಪ್ರತಿಭಟನೆಗಳಲ್ಲಿ ಒಂದಕ್ಕೆ ಸಾಕ್ಷಿಯಾಗುತ್ತಿದೆ.

    ʻಶಟ್ಟರ್‌ ಡೌನ್‌ & ವ್ಹೀಲ್‌ ಜಾಮ್‌ʼ (shutter-down and wheel-jam) ಅಂದ್ರೆ ಅಂಗಡಿ ಮುಂಗಟ್ಟು, ವಾಹನ ಸಂಚಾರಗಳನ್ನ ಬಂದ್‌ ಮಾಡುವಂತೆ ಕರೆ ನೀಡಿದ ಬಳಿಕ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆಯ ತೀವ್ರತೆ ಹೆಚ್ಚಾಗ್ತಿದ್ದಂತೆ ಪಾಕ್‌ ಸರ್ಕಾರ ಪ್ರದೇಶದ ಸುತ್ತ ಭದ್ರತಾ ಪಡೆಗಳನ್ನ ನಿಯೋಜಿಸಿದೆ. ಜೊತೆಗೆ ಹೆಚ್ಚುವರಿ 1,000 ಪೊಲೀಸರನ್ನ ನಿಯೋಜನೆ ಮಾಡಿದೆ. ಮಧ್ಯರಾತ್ರಿಯಿಂದಲೇ ಇಂಟರ್‌ನೆಟ್‌ ಸೇವೆಯನ್ನ ಸ್ಥಗಿತಗೊಳಿಸಿದೆ. ಇದನ್ನೂ ಓದಿ: ಅಮೆರಿಕದ ಹೆಚ್‌-1ಬಿ ವೀಸಾಗೆ ಟಕ್ಕರ್‌ ಕೊಡಲು ಬರ್ತಿದೆ ಚೀನಾದ ಕೆ-ವೀಸಾ; ಭಾರತೀಯರಿಗೆ ಲಾಭ?

    ಪಿಓಕೆಯಲ್ಲಿ ಪ್ರತಿಭಟನಾಕಾರರ ಬೇಡಿಕೆಗಳೇನು?
    ಪಾಕಿಸ್ತಾನದಲ್ಲಿ ನೆಲೆಸಿರುವ ಕಾಶ್ಮೀರಿ ನಿರಾಶ್ರಿತರಿಗೆ ಮೀಸಲಾಗಿರುವ 12 ವಿಧಾನಸಭಾ ಸ್ಥಾನಗಳನ್ನ ರದ್ದುಗೊಳಿಸಬೇಕು. ಜಲವಿದ್ಯುತ್ ಒಪ್ಪಂದಗಳ ಮರು ಮಾತುಕತೆ ನಡೆಸಬೇಕು ಜೊತೆಗೆ ಹೆಚ್ಚುತ್ತಿರುವ ಹಣದುಬ್ಬರ ಹೊರೆಯನ್ನ ಕಡಿಮೆ ಮಾಡಲು ತಕ್ಷಣವೇ ಹಿಟ್ಟು (ಗೋದಿ ಹಿಟ್ಟು) ಸಬ್ಸಿಡಿಗಳನ್ನ ಒದಗಿಸಬೇಕು. ಅಲ್ಲದೇ ಇಂಧನ ವೆಚ್ಚ ಕಡಿಮೆ ಮಾಡಲು ಸ್ಥಳೀಯ ಉತ್ಪಾದನಾ ದರಗಳೊಂದಿಗೆ ವಿದ್ಯುತ್‌ ಸುಂಕವನ್ನು ಸಮೀಕರಿಸಬೇಕು. ಜೊತೆಗೆ ಪಾಕ್‌ ಸರ್ಕಾರ ಈ ಹಿಂದೆಯೇ ಭರವಸೆ ನೀಡಿದ್ದ ಹಲವು ಬೇಡಿಕೆಗಳನ್ನ ಈಡೇರಿಸಬೇಕು ಅನ್ನೋದು ಪ್ರತಿಭಟನಾಕಾರರ ಒತ್ತಾಯ.

    ಈ ಕುರಿತು ಮಾತನಾಡಿರುವ ಎಎಸಿಯ ಪ್ರಮುಖ ನಾಯಕ ಶೌಕತ್ ನವಾಜ್ ಮಿರ್, ಯಾವುದೇ ಸಂಸ್ಥೆಯ ವಿರುದ್ಧ ನಮ್ಮ ಪ್ರತಿಭಟನೆ ಇಲ್ಲ. 70 ವರ್ಷಗಳಿಗಿಂತಲೂ ಹೆಚ್ಚು ಕಾಲ ನಿರಾಕರಿಸಲ್ಪಟ್ಟ ಜನ್ನ ಜನಗಳ ಹಕ್ಕುಗಳಿಗಾಗಿ ಈ ಹೋರಾಟ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡ್ರಗ್ಸ್‌ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ

    Shehbaz Sharif

    ಷರೀಫ್‌, ಅಸಿಮ್‌ ಮುನೀರ್‌ಗೆ ಪುಕ ಪುಕ
    ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಈ ಪ್ರತಿಭಟನೆಗೆ ಯುಎಸ್, ಯುಕೆ ಮತ್ತು ಯುರೋಪ್‌ನಾದ್ಯಂತ ಇತರ ದೇಶಗಳಲ್ಲಿ ನೆಲೆಸಿರುವ ಪಿಒಕೆ ವಲಸಿಗರು ಕೈ ಜೋಡಿಸುವ ಸಾಧ್ಯತೆಗಳಿವೆ. ಹೀಗಾಗಿ ಇದು ವ್ಯಾಪಕವಾಗಿ ಬೆಳೆಬಹುದು ಅನ್ನೋ ಕಳವಳ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಪಾಕ್‌ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಇದನ್ನೂ ಓದಿ: ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?

  • ಪಾಕ್‌ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

    ಪಾಕ್‌ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

    – ಪಾಕ್‌ ಪ್ರಧಾನಿಗೆ ಮತ್ತೆ ಮುಖಭಂಗ; ಟ್ರಂಪ್‌ಗೆ ಪರೋಕ್ಷ ತಿರುಗೇಟು

    ಲಂಡನ್‌: ಪಾಕಿಸ್ತಾನ ಭಯೋತ್ಪಾದನೆಯನ್ನು (Terrorism) ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತದ ರಾಜತಾಂತ್ರಿಕ ಪೆಟಲ್ ಗೆಹ್ಲೋಟ್ (Petal Gahlot) ಪಾಕ್‌ ಪ್ರಧಾನಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡರು.

    ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ಗೆ (Shehbaz Sharif) ಭಾಷಣದ ನಂತರ ಪ್ರತ್ಯುತ್ತರ ನೀಡುವ ಹಕ್ಕು ಚಲಾಯಿಸುತ್ತಾ ಅವರು ಮಾತನಾಡಿದರು. ಪಾಕಿಸ್ತಾನ ಭಯೋತ್ಪಾದನೆಯನ್ನ ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

    ಭಯೋತ್ಪಾದನೆ ವೈಭವೀಕರಣ
    ನಾನು ಪ್ರಧಾನಿ ಷರೀಫ್‌ ಅವರ ಭಾಷಣ ಕೇಳಿದೆ. ಅವರು ಮತ್ತೊಮ್ಮೆ ತಮ್ಮ ವಿದೇಶಾಂಗ ನೀತಿಯ ಭಾಗವಾದ ಭಯೋತ್ಪಾದನೆಯನ್ನು ವೈಭವೀಕರಿಸಿದರು. ಆದ್ರೆ ಯಾವುದೇ ಸುಳ್ಳು, ನಾಟಕಗಳು ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಕುಟುಕಿದರು. ಅಲ್ಲದೇ ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಹತ್ಯಾಕಾಂಡಕ್ಕೆ ಕಾರಣವಾದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆ ರೆಸಿಸ್ಟೆನ್ಸ್‌ ಫ್ರಂಟ್‌ (TRF) ಅನ್ನು ಪಾಕಿಸ್ತಾನ ಸಮರ್ಥಿಸಿಕೊಂಡಿದೆ ಎಂಬುದನ್ನು ನೆನಪಿಸಿದ್ರು.

    ಒಸಾಮಾ ಬಿಲ್‌ ಲಾಡೆನ್‌ಗೆ ವರ್ಷಗಳಿಂದ ಆಶ್ರಯ ನೀಡಿದ್ದ ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ನಟಿಸಿದ ಅದೇ ಪಾಕಿಸ್ತಾನ ಇದಾಗಿದೆ. ಏಕೆಂದ್ರೆ ದಶಕಗಳಿಂದ ಭಯೋತ್ಪಾದನಾ ಶಿಬಿರಗಳನ್ನ ನಡೆಸುತ್ತಿದೆ ಎಂಬುದನ್ನು ಖುದ್ದು ಅಲ್ಲಿನ ಸಚಿವರೇ ಒಪ್ಪಿಕೊಂಡಿದ್ದಾರೆ ಎಂದು ಜ್ಞಾಪಿಸುತ್ತಾ ಪಾಕ್‌ ಪ್ರಧಾನಿಗೆ ಮುಖಭಂಗ ಮಾಡಿದರು.

    ಧ್ವಂಸವಾದ ವಾಯುನೆಲೆ ತೋರಿಸಿ ಗೆಲುವು ಅಂದ್ರು
    ಇನ್ನೂ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಪರಾಕ್ರಮ ನೆನಪಿಸಿದ ಪೆಟಲ್‌ ಗೆಹ್ಲೋಟ್‌, ಸಂಘರ್ಷದಲ್ಲಿ ಪಾಕಿಸ್ತಾನ ಗೆಲುವು ಎಂದು ಹೇಳಿಕೊಳ್ಳುತ್ತಿದೆ. ಭಾರತ ನಡೆಸಿದ ದಾಳಿಗೆ ಈಗಲೂ ಕುರುಹುಗಳಿವೆ, ಮೇ 9ರ ವರೆಗೆ ಪಾಕಿಸ್ತಾನವು ಭಾರತದ ಮೇಲೆ ಹೆಚ್ಚಿನ ದಾಳಿಗಳ ಬೆದರಿಕೆ ಹಾಕುತ್ತಿತ್ತು. ಆದರೆ ಮೇ 10 ರಂದು, ಅದರ ಸೇನೆಯು ಹೋರಾಟವನ್ನು ನಿಲ್ಲಿಸುವಂತೆ ನೇರವಾಗಿ ನಮ್ಮೊಂದಿಗೆ ಮನವಿ ಮಾಡಿತು. ಭಯೋತ್ಪಾದನೆಯನ್ನು ಹುಟ್ಟು ಹಾಕುವಲ್ಲಿ ಮತ್ತು ರಪ್ತು ಮಾಡುವಲ್ಲಿ ನಿರತವಾಗಿರುವ ಪಾಕಿಸ್ತಾನ ಅಸಂಬದ್ಧ ಹೇಳಿಕೆಗಳನ್ನ ನೀಡುತ್ತಿದೆ. ವಾಸ್ತವವಾಗಿ ಅದೆಲ್ಲವೂ ಭಾರತದ ದಾಳಿಯಿಂದ ಧ್ವಂಸವಾದ ವಾಯುನೆಲೆಗಳು ಹಾಗೂ ಸುಟ್ಟುಹೋದ ಹ್ಯಾಂಗರ್‌, ಹಾನಿಗೊಳಗಾದ ರನ್‌ವೇಗಳ ಚಿತ್ರಗಳಾಗಿವೆ. ಇದು ಸಾರ್ವಜನಿಕವಾಗಿಯೂ ಲಭ್ಯವಿದೆ. ಇದನ್ನ ಗೆಲುವು ಅಂತ ಹೇಳಿಕೊಳ್ಳೋದಕ್ಕೆ ನಾಚಿಕೆ ಆಗೋದಿಲ್ಲವೇ ಎಂದು ಜಾಡಿಸಿದರು.

    ಟ್ರಂಪ್‌ಗೆ ಪರೋಕ್ಷವಾಗಿ ತಿರುಗೇಟು
    ಭಾರತದಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಗಳಿಗೆ ಪಾಕಿಸ್ತಾನ ಕಾರಣವಾಗಿದೆ. ಜೊತೆಗೆ ಭಾರತ ತನ್ನ ಜನರನ್ನ ರಕ್ಷಿಸಿಕೊಳ್ಳೋದಕ್ಕೆ ಪ್ರತೀಕಾರದ ಕ್ರಮ ತೆಗೆದುಕೊಳ್ಳುತ್ತದೆ ಎಂಬುದೂ ಸತ್ಯ. ಇದರ ಹೊರತಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನ ದ್ವಿಪಕ್ಷೀಯ ಮಟ್ಟದಲ್ಲೇ ಪರಿಹರಿಸಲಾಗುವುದು. ಇದರಲ್ಲಿ 3ನೇ ವ್ಯಕ್ತಿಗೆ ಯಾವುದೇ ಅವಕಾಶವಿರುವುದಿಲ್ಲ ಎಂದು ಟ್ರಂಪ್‌ ಹೆಸರು ಉಲ್ಲೇಖಿಸದೇ ಪರೋಕ್ಷವಾಗಿ ತಿರುಗೇಟು ನೀಡಿದರು.

    ಮೇ ತಿಂಗಳಲ್ಲಿ ಭಾರತದೊಂದಿಗಿನ ಸಂಕ್ಷಿಪ್ತ ಮಿಲಿಟರಿ ಉಲ್ಬಣದಲ್ಲಿ ಪಾಕಿಸ್ತಾನವನ್ನು ವಿಜೇತ ಎಂದು ಬಿಂಬಿಸಲು ಷರೀಫ್ ತಮ್ಮ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಭಾಷಣವನ್ನು ಬಳಸಿಕೊಂಡಿದ್ದರು. ನಾವು ಯುದ್ಧವನ್ನು ಗೆದ್ದಿದ್ದೇವೆ, ಮತ್ತು ಈಗ ನಾವು ನಮ್ಮ ಭಾಗದಲ್ಲಿ ಶಾಂತಿಯನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದೇವೆ. ಪಾಕಿಸ್ತಾನವು ಎಲ್ಲಾ ಬಾಕಿ ಇರುವ ವಿಷಯಗಳ ಕುರಿತು ಭಾರತದೊಂದಿಗೆ ಸಂಯೋಜಿತ, ಸಮಗ್ರ ಮತ್ತು ಫಲಿತಾಂಶ-ಆಧಾರಿತ ಸಂವಾದಕ್ಕೆ ಸಿದ್ಧವಾಗಿದೆ ಎಂದು ಹೇಳಿದ್ದರು.

  • ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    – ಭಯೋತ್ಪಾದನೆ ತಡೆಗೆ ಪಾಕ್‌ನಲ್ಲಿ ಸ್ಥಾಪನೆಯಾಗಲಿದೆಯಂತೆ ಸ್ಪೆಷಲ್‌ ಕಮಾಂಡ್‌
    – ಅಮೆರಿಕ-ಪಾಕ್‌ ನಡುವೆ ದ್ವಿಪಕ್ಷೀಪ ಒಪ್ಪಂದ

    ಇಸ್ಲಾಮಾಬಾದ್‌: ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif), ಫೀಲ್ಡ್‌ ಮಾರ್ಷಲ್‌ ಅಸೀಮ್‌ ಮುನೀರ್‌ ಶ್ವೇತಭವನದ ಓವಲ್‌ ಕಚೇರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಭೇಟಿಯಾಗಿದ್ದು, ಸುಮಾರು 90 ನಿಮಿಷಗಳ ಕಾಲ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

    ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಭಾಗಿಯಾಗಲು ಅಮೆರಿಕ ಪ್ರವಾಸದಲ್ಲಿರುವ ಷರೀಫ್ ಅವರಿಂದು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನವೇ ಸೇನಾ ಮುಖಸ್ಥರೊಟ್ಟಿಗೆ ಟ್ರಂಪ್‌ ಅವರನ್ನ ಭೇಟಿಯಾಗಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಭದ್ರತೆ ಮತ್ತು ಆರ್ಥಿಕತೆಗೆ ಸಂಬಂಧಿಸಿದ ಅನೇಕ ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಭಯೋತ್ಪಾದನೆ ನಿಗ್ರಹ ಒಪ್ಪಂದಕ್ಕೂ ಸಹಿ ಮಾಡಲಾಗಿದ್ದು, ಪರಸ್ಪರ ಸಹಕಾರದೊಂದಿಗೆ ಮುಂದುವರಿಯಲು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಉಪಸ್ಥಿತರಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?

    ಉಭಯ ದೇಶಗಳ ಒಪ್ಪಂದಗಳು ಭದ್ರತೆ, ಆರ್ಥಿಕತೆ, ಕಾರ್ಯತಂತ್ರದ ಪಾಲುದಾರಿಕೆ, ಭಯೋತ್ಪಾದನಾ ನಿಗ್ರಹ ಹಾಗೂ ಪಾಕ್‌ನಲ್ಲಿ (Pakistan) ಖನಿಜ ಸಂಪತ್ತಿನ ಶೋಧನೆ ತೈಲ ಪರಿಶೋಧನೆಯನ್ನು ಕೇಂದ್ರೀಕರಿಸಿತ್ತು. ಜೊತೆಗೆ ಬಾಗ್ರಾಮ್‌ ವಾಯುನೆಲೆ ಹಾಗೂ ಆ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ಪಾಕ್‌ನಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪನೆ
    ಪಹಲ್ಗಾಮ್‌ ಉಗ್ರರಿಗೆ ಕುಮ್ಮಕ್ಕು ನೀಡಿದ್ದ ಪಾಕಿಸ್ತಾನ ಇದೀಗ ಅಮೆರಿಕದೊಟ್ಟಿಗೆ ಭಯೋತ್ಪಾದನೆ ನಿಗ್ರಹ ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಪಾಕಿಸ್ತಾನದಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪಿಸುವ ನಿರ್ಧಾರವನ್ನೂ ಕೈಗೊಂಡಿದೆ. ‌ಇದೇ ವೇಳೆ ಟ್ರಂಪ್‌ ಅಫ್ಘಾನ್‌ನಿಂದ ಬರುತ್ತಿರುವ ಉಗ್ರ ಬೆದರಿಕೆಗಳನ್ನು ಪರಿಹರಿಸುವುದಾಗಿ ಟ್ರಂಪ್‌ ಪಾಕ್‌ ಪ್ರಧಾನಿ, ಅಸಿಮ್‌ ಮುನೀರ್‌ಗೆ ಭರವಸೆ ನೀಡಿದ್ದಾರೆ.

    ಇನ್ನೂ ಸಭೆಯ ಬಳಿಕ ಮಾತನಾಡಿದ ಟ್ರಂಪ್‌, ಭಾರತ ಪಾಕಿಸ್ತಾನ ನಡುವಿನ ಭೀಕರ ಯುದ್ಧ ನಿಲ್ಲಿಸಿದ್ದು ನಾನೇ ಅಂತ ಬಾಯಿ ಬಡಿದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    ಕದನ ವಿರಾಮ ಹೇಳಿಕೆಗೆ ಪಾಕ್ ಪ್ರಧಾನಿ ಪ್ರತಿಧ್ವನಿ
    ಟ್ರಂಪ್‌ ಭೇಟಿ ಬಳಿಕ ಮಾತನಾಡಿದ ಷರೀಫ್‌, ಕದನ ವಿರಾಮ ಉಲ್ಲೇಖಿಸಿ ಟ್ರಂಪ್‌ ಅವರನ್ನ ಶ್ಲಾಘಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಅವರ ದಿಟ್ಟತನ ಮತ್ತು ನಿರ್ಣಾಯಕ ನಾಯಕತ್ವ ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅನುಕೂಲ ಮಾಡಿಕೊಟ್ಟಿತು. ಅಲ್ಲದೇ ಗಾಜಾದಲ್ಲಿನ ಸಂಘರ್ಷ ಕೊನೆಗೊಳಿಸಲು ಹಾಗೂ ಮಧ್ಯಪ್ರಾಚ್ಯದಲ್ಲಿ ಶಾಂತಿ ಪುನಸ್ಥಾಪಿಸುವ ನಿರ್ಧಾರ ಕೈಗೊಂಡಿರುವುದು ಶ್ಲಾಘನೀಯ ಎಂದು ಟ್ರಂಪ್‌ ಪರ ಹಾಡಿಹೊಗಳಿದರು.

  • ರಕ್ಷಣಾ ಒಪ್ಪಂದಕ್ಕೆ ಪಾಕಿಸ್ತಾನ-ಸೌದಿ ಅರೇಬಿಯಾ ಸಹಿ; ಭಾರತ ಹೇಳಿದ್ದೇನು?

    ರಕ್ಷಣಾ ಒಪ್ಪಂದಕ್ಕೆ ಪಾಕಿಸ್ತಾನ-ಸೌದಿ ಅರೇಬಿಯಾ ಸಹಿ; ಭಾರತ ಹೇಳಿದ್ದೇನು?

    – ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆದರೂ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದೇ ಪರಿಗಣನೆ

    ರಿಯಾದ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ (Saudi Arabia – Pakistan) ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ‘ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದು ಪರಿಗಣಿಸುವುದು’ ಒಪ್ಪಂದದ ಪ್ರಮುಖ ಷರತ್ತಾಗಿದೆ.

    ಈ ಕುರಿತು ಭಾರತ ಪ್ರತಿಕ್ರಿಯೆ ನೀಡಿದ್ದು, ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ವರದಿಗಳನ್ನು ನಾವು ನೋಡಿದ್ದೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಭಾರತದ ಸಿಂಧೂರ ದಾಳಿಗೆ ಮಸೂದ್ ಕುಟುಂಬ ಕಳೆದುಕೊಂಡ – ಪಾಕ್ ಉಗ್ರ ಇಲ್ಯಾಸ್ ಸಾಕ್ಷ್ಯ

    ಈ ಬೆಳವಣಿಗೆಯಿಂದ ನಮ್ಮ ರಾಷ್ಟ್ರೀಯ ಭದ್ರತೆಗೆ, ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ನಾವು ಅಧ್ಯಯನ ಮಾಡುತ್ತೇವೆ. ಭಾರತದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮಗ್ರ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

    ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪಾಕಿಸ್ತಾನ ಪ್ರಧಾನಿ ಬುಧವಾರ ರಿಯಾದ್‌ಗೆ ಭೇಟಿ ನೀಡಿದ್ದರು. ಸೌದಿ ಪ್ರಿನ್ಸ್ ರಿಯಾದ್‌ನ ಅಲ್-ಯಮಾಮಾ ಅರಮನೆಯಲ್ಲಿ ಷರೀಫ್ ಅವರನ್ನು ಭೇಟಿಯಾದರು. ಇದನ್ನೂ ಓದಿ: ವೆನೆಜುವೆಲಾದ ಮಾದಕವಸ್ತು ಬೋಟ್‌ ಮೇಲೆ ಅಮೆರಿಕ ದಾಳಿ; ಮೂವರು ಸಾವು

    ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಸುಮಾರು 8 ದಶಕಗಳಿಂದ ಐತಿಹಾಸಿಕ ಪಾಲುದಾರಿಕೆ ಇದೆ. ಹೀಗಾಗಿ, ಪರಸ್ಪರ ರಕ್ಷಣಾ ಒಪ್ಪಂದ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್‌ ರಾಷ್ಟ್ರಗಳ ಒಗ್ಗಟ್ಟಿನ ದೃಷ್ಟಿಯಿಂದ ಒಪ್ಪಂದ ಆಗಿದೆ. ಈ ಒಪ್ಪಂದ ಎರಡೂ ದೇಶಗಳ ನಡುವಿನ ನಿಕಟ ರಕ್ಷಣಾ ಸಹಕಾರವನ್ನು ಆಧರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

  • ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್‌ ಬೇಡಿಕೆ

    ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್‌ ಬೇಡಿಕೆ

    – ಮಿಲಿಟರಿ ಪ್ರಯೋಜನದ ಬಗ್ಗೆ ಶೆಹಬಾಜ್‌ ಸರ್ಕಾರ ಸುಳ್ಳು ಹಬ್ಬಿಸುತ್ತಿದೆ; ತಪ್ಪೊಪ್ಪಿಗೆ
    – ಭಾರತ 80 ಫೈಟರ್‌ ಜೆಟ್‌ಗಳಿಂದ 400 ಕ್ಷಿಪಣಿ ಹಾರಿಸಿತ್ತು
    – ಚೀನಾ ನಂಬಿ ಕೆಟ್ಟು ಈಗ ಅಮೆರಿಕದ ಬಳಿ ಭಿಕ್ಷೆ

    ಇಸ್ಲಾಮಾಬಾದ್‌: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ (India) ಅಸ್ತ್ರಗಳನ್ನು ಭೇದಿಸಲು ವಿಫಲವಾದ ಪಾಕಿಸ್ತಾನ ಇದೀಗ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆಗಾಗಿ (Air Defence System) ಅಮೆರಿಕದ ಬಳಿ ಬೇಡಿಕೊಂಡಿದೆ.

    ಹೌದು. ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತವು ಪಾಕಿಸ್ತಾನದ (Pakistan) ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರರ ಅಡಗು ತಾಣಗಳನ್ನು ಧ್ವಂಸಗೊಳಿಸಿತು. ಅಲ್ಲದೇ ಪಾಕ್‌ ದಾಳಿಗೆ ಪ್ರತೀಕಾರವಾಗಿ 11 ವಾಯುನೆಲೆಗಳನ್ನೂ ಧ್ವಂಸಗೊಳಿಸಿತ್ತು. ಇದಕ್ಕೂ ಮುನ್ನ ಪಾಕ್‌ ಭಾರತದ ಮೇಲೆ ನಡೆಸಿದ ದಾಳಿಗಳನ್ನೆಲ್ಲ ಎಸ್‌-400 ವಾಯುರಕ್ಷಣಾ ವ್ಯವಸ್ಥೆ ವಿಫಲಗೊಳಿಸಿತು. ಒಟ್ಟಿನಲ್ಲಿ ಭಾರತದ ಎದುರು ಮಂಡಿಯೂರಿದ ಪಾಕ್‌ ಕಾಡಿ ಬೇಡಿ ಕದನ ವಿರಾಮ ಮಾಡಿಕೊಂಡಿತು. ಭಾರತದ ಈ ಪರಾಕ್ರಮ ಕಂಡು ದಂಗಾಗಿರುವ ಪಾಕಿಸ್ತಾನ ಈಗ ತನಗೂ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ಮತ್ತು ಫೈಟರ್‌ ಜೆಟ್‌ಗಳನ್ನು ಕಲ್ಪಿಸುವಂತೆ ಅಮೆರಿಕದ (America) ಬಳಿ ಬೇಡಿಕೊಂಡಿದೆ.

    ಶೆಹಬಾಜ್‌ ಸರ್ಕಾರ ಸುಳ್ಳು ಹಬ್ಬಿಸುತ್ತಿದೆ
    ಪಾಕಿಸ್ತಾನದ 13 ಸದಸ್ಯರ ನಿಯೋಗದ ಭಾಗವಾಗಿರುವ ಪಾಕ್‌ ಸಚಿವ ಮುಸಾದಿಕ್ ಮಲಿಕ್ ವಾಷಿಂಗ್ಟನ್‌ನಲ್ಲಿ ಮಾತನಾಡಿದ್ದಾರೆ. ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆ ಮತ್ತು ಯುದ್ಧ ವಿಮಾನಗಳನ್ನು ತನಗೆ ಮಾರಾಟ ಮಾಡುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಶೆಹಬಾಜ್‌ (Shehbaz Sharif) ಸರ್ಕಾರವು ತನ್ನ ಜನತೆಗೆ ಭಾರತಕ್ಕಿಂತ ಹೆಚ್ಚಿನ ಮಿಲಿಟರಿ ಪ್ರಯೋಜನ ಹೊಂದಿರುವುದಾಗಿ ಸುಳ್ಳು ಹಬ್ಬಿಸುತ್ತಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗಿದೆ.

    ನಾವೇ ನಾಶವಾಗಿಬಿಡ್ತಿದ್ವಿ
    ಮುಂದುವರಿದು… ಭಾರತ 80 ವಿಮಾನಗಳೊಂದಿಗೆ 400 ಕ್ಷಿಪಣಿಗಳನ್ನ ಹಾರಿಸಿತ್ತು. ಯುದ್ಧದ ವೇಳೆ ನಮಗೆ ಏನಾಯ್ತು ಅನ್ನೋದನ್ನ ನೀವು ನೋಡಿರಬೇಕು, ನಾವೇ ನಾಶವಾಗಿಬಿಡುತ್ತಿದ್ದೆವು. ನಮ್ಮಲ್ಲಿ ಸೂಕ್ತ ವಾಯು ರಕ್ಷಣಾ ವ್ಯವಸ್ಥೆಗಳಿಲ್ಲದಿರುವುದೇ ಇದಕ್ಕೆ ಕಾರಣ. ಭಾರತ ಬಳಸುತ್ತಿದ್ದ ತಂತ್ರಜ್ಞಾನವು ಅತ್ಯಾಧುನಿಕವಾದುದು, ತುಂಬಾ ಮುಂದುವರಿದಿದೆ. ಆದ್ದರಿಂದ ಆ ರೀತಿಯ ತಂತ್ರಜ್ಞಾನವನ್ನ ನಮಗೆ ಕೊಡಿ. ನಾವು ಖರೀದಿಸಲು ಉತ್ಸುಕವಾಗಿದ್ದೇವೆ ಎಂದು ಸಹ ಪಾಕ್‌ ಸಚಿವ ಹೇಳಿದ್ದಾರೆ.

    ಜೈಶ್‌ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ
    ಓಂದು ದಿನದ ಹಿಂದೆಯಷ್ಟೇ ಅಮೆರಿಕ ಸಂಸದ ಬ್ರಾಡ್‌ ಶೆರ್ಮನ್ (Brad Sherman) ಜೈಶ್‌ ಎ ಮೊಹಮ್ಮದ್‌ (Jaish-e-Mohammed) ಭಯೋತ್ಪಾದಕ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಪಾಕ್‌ಗೆ ಬಲವಾದ ಸಂದೇಶ ನೀಡಿದ್ದರು. 2002 ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್‌ನ ಪತ್ರಕರ್ತ ಡೇನಿಯಲ್ ಪರ್ಲ್ (Daniel Pearl) ಅವರ ಹತ್ಯೆ ಸೇರಿದಂತೆ ಅನೇಕ ಘೋರ ಅಪರಾಧಗಳಿಗೆ ಈ ಗುಂಪು ಕಾರಣವಾಗಿದೆ. ಹಾಗಾಗಿ ಈ ಉಗ್ರ ಸಂಘಟನೆಯನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು. ಭಯೋತ್ಪಾದನೆ ವಿರುದ್ಧ ಬಲವಾದ ಹೋರಾಟ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಪಾಕಿಸ್ತಾನ ತೆಗೆದುಕೊಳ್ಳಬೇಕು ಎಂದು ಎಚ್ಚರಿಸಿದ್ದರು.

    ಭಾರತದ ಐಡಿಯಾ ಕಾಪಿ
    ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಪಾಕ್‌ ಪ್ರಾಯೋಜಿತ ಮುಖವಾಡವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಯಲು ಮಾಡಲು ಭಾರತ 7 ಸರ್ವಪಕ್ಷಗಳ ನಿಯೋಗವನ್ನು ವಿದೇಶಗಳಿಗೆ ಕಳುಹಿಸಿದೆ. ಇದೇ ಐಡಿಯಾ ಕಾಪಿ ಮಾಡಿರುವ ಪಾಕಿಸ್ತಾನ ಸಹ ತನ್ನ ದೇಶದ ನಿಯೋಗವನ್ನ ವಿದೇಶಗಳಿಗೆ ಕಳುಹಿಸಿದೆ. ಆದ್ರೆ ಪಾಕ್‌ ನಿಲುವಿಗೆ ವಿದೇಶಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

  • ನಾವು ಭಿಕ್ಷೆ ಪಾತ್ರೆ ಹಿಡಿದು ಬರುತ್ತೇವೆಂದು ಚೀನಾದಂಥ ಮಿತ್ರರಾಷ್ಟ್ರಗಳು ನಿರೀಕ್ಷಸಲ್ಲ: ಪಾಕ್‌ ಪ್ರಧಾನಿ

    ನಾವು ಭಿಕ್ಷೆ ಪಾತ್ರೆ ಹಿಡಿದು ಬರುತ್ತೇವೆಂದು ಚೀನಾದಂಥ ಮಿತ್ರರಾಷ್ಟ್ರಗಳು ನಿರೀಕ್ಷಸಲ್ಲ: ಪಾಕ್‌ ಪ್ರಧಾನಿ

    ಇಸ್ಲಾಮಾಬಾದ್: ಚೀನಾದಂತಹ ಮಿತ್ರರಾಷ್ಟ್ರಗಳು ನಾವು ಭಿಕ್ಷೆ ಪಾತ್ರೆ ಹಿಡಿದು ಬರುತ್ತೇವೆ ಎಂದು ನಿರೀಕ್ಷಿಸುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ.

    ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಮಿಲಿಟರಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ಮತ್ತು ಅದರ ಮಿತ್ರರಾಷ್ಟ್ರಗಳಾದ ಚೀನಾ, ಅಜೆರ್ಬೈಜಾನ್, ಸೌದಿ ಅರೇಬಿಯಾ, ಯುಎಇ, ಟರ್ಕಿಯ ನಡುವಿನ ಸುಧಾರಿತ ಸಂಬಂಧಗಳನ್ನು ಒತ್ತಿಹೇಳಿದ್ದಾರೆ.

    ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೊಸ 2.3 ಬಿಲಿಯನ್ ಡಾಲರ್‌ ಸಾಲ ಮಂಜೂರು ಮಾಡಿದೆ. ಮಾತುಕತೆಯ ಸಮಯದಲ್ಲಿ ಭಾರತವು ಇದನ್ನು ತೀವ್ರವಾಗಿ ವಿರೋಧಿಸಿತ್ತು. ರಾಜ್ಯ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಹಣಕಾಸು ಒದಗಿಸಲು ಹಣವನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಕಳವಳ ವ್ಯಕ್ತಪಡಿಸಿತು. ಪಾಕಿಸ್ತಾನವು ಅನೇಕ ವರ್ಷಗಳಿಂದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಐಎಂಎಫ್ 1958 ರಿಂದ ಪಾಕಿಸ್ತಾನಕ್ಕೆ 25 ಬೇಲೌಟ್‌ ಪ್ಯಾಕೇಜ್‌ಗಳನ್ನು ನೀಡುತ್ತದೆ.

    ಪಾಕಿಸ್ತಾನದ ಪ್ರಧಾನ ಮಂತ್ರಿ ತನ್ನ ಮಿತ್ರರಾಷ್ಟ್ರಗಳೊಂದಿಗೆ ದೇಶದ ಸಂಬಂಧಗಳ ಬಗ್ಗೆ ಆಶಾವಾದಿಯಾಗಿದ್ದಾರೆ. ಚೀನಾವು ಪಾಕಿಸ್ತಾನದ ಸ್ನೇಹಿತ. ಸೌದಿ ಅರೇಬಿಯಾ, ಪಾಕಿಸ್ತಾನದ ಅತ್ಯಂತ ವಿಶ್ವಾಸಾರ್ಹ ಸ್ನೇಹಿತರಲ್ಲಿ ಒಬ್ಬರು. ಟರ್ಕಿ, ಕತಾರ್ ಮತ್ತು ಯುಎಇ ಕೂಡ ಸ್ನೇಹಿತರು ಎಂದಿದ್ದಾರೆ.

    ವ್ಯಾಪಾರ, ವಾಣಿಜ್ಯ, ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ, ಶಿಕ್ಷಣ ಮತ್ತು ಆರೋಗ್ಯ, ಹೂಡಿಕೆಗಳು ಮತ್ತು ಲಾಭದಾಯಕ ಉದ್ಯಮಗಳಲ್ಲಿ ನಾವು ಅವರೊಂದಿಗೆ ಪರಸ್ಪರ ತೊಡಗಿಸಿಕೊಳ್ಳಬೇಕೆಂದು ಅವರು ನಿರೀಕ್ಷಿಸುತ್ತಾರೆ. ನಾವು ಭಿಕ್ಷಾಟನಾ ಪಾತ್ರೆಯೊಂದಿಗೆ ಅಲ್ಲಿಗೆ ಹೋಗಬೇಕೆಂದು ಅವರು ಇನ್ನು ಮುಂದೆ ನಿರೀಕ್ಷಿಸುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

    ಸರ್ವಶಕ್ತನು ನಮಗೆ ನೈಸರ್ಗಿಕ ಮತ್ತು ಮಾನವ ಸಂಪನ್ಮೂಲಗಳನ್ನು ನೀಡಿದ್ದಾನೆ. ನಾವು ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಈ ಅತ್ಯಂತ ಲಾಭದಾಯಕ ಉದ್ಯಮಗಳಿಗೆ ಅವುಗಳನ್ನು ನಿಯೋಜಿಸಬೇಕು ಎಂದು ತಿಳಿಸಿದ್ದಾರೆ.

  • ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    – ರಾವಲ್ಪಿಂಡಿ ಏರ್‌ಪೋರ್ಟ್ ಧ್ವಂಸ ಆಗಿರೋದು ನಿಜ ಎಂದ ಶೆಹಬಾಜ್‌ ಷರೀಫ್‌

    ಇಸ್ಲಾಮಾಬಾದ್‌: ಆಪರೇಷನ್ ಸಿಂಧೂರದ (Operation Sindoor) ಪರಾಕ್ರಮದ ಬಗ್ಗೆ ಪಾಕ್ ಪ್ರಧಾನಿ ಮತ್ತಷ್ಟು ಸತ್ಯ ಬಾಯಿಬಿಡ್ತಿದ್ದಾರೆ. ರಾವಲ್ಪಿಂಡಿ ಏರ್‌ಪೋರ್ಟ್ ಮೇಲೆ ಬ್ರಹ್ಮೋಸ್ ಕ್ಷಿಪಣಿಯ (BrahMos Missile) ದಾಳಿ ಆಯಿತು. ನಾವು ಪ್ಲ್ಯಾನ್‌ ಮಾಡುವ ಮೊದಲೇ ಅವರು ದಾಳಿ ಮಾಡಿದ್ದರು. ಇದು ನಮ್ಮ ಮಿಲಿಟರಿ ವೈಫಲ್ಯ ಅಂತ ಪಾಕ್ ಪ್ರಧಾನಿ ಶೆಹಬಾಜ್‌ ಷರೀಫ್ ಒಪ್ಪಿಕೊಂಡಿದ್ದಾರೆ.

    ಅಜೆರ್ಬೈಜಾನ್‌ನ ಲಾಚಿನ್‌ನಲ್ಲಿ ನಡೆದ ಪಾಕಿಸ್ತಾನ-ಟರ್ಕಿ-ಅಜೆರ್ಬೈಜಾನ್ ತ್ರಿಪಕ್ಷೀಯ ಶೃಂಗಸಭೆಯಲ್ಲಿ (Pakistan-Turkey-Azerbaijan Trilateral Summit) ಮಾತನಾಡಿದ ಷರೀಫ್, ಮೇ 10ರಂದು ಬೆಳಗ್ಗಿನ ಜಾವ 4:30ಕ್ಕೆ ಪ್ರಾರ್ಥನೆ ಬಳಿಕ ಭಾರತದ ಮೇಲೆ ದಾಳಿ ಮಾಡಲು ಫೀಲ್ಡ್ ಮಾರ್ಷಲ್ ಅಸೀಮ್‌ ಮುನೀರ್ ನೇತೃತ್ವದ ನಮ್ಮ ಸೇನೆಯು ಪ್ಲ್ಯಾನ್‌ ಮಾಡಿತ್ತು. ಆದ್ರೆ ಭಾರತ ನಮ್ಮ ಯೋಜಿತ ದಾಳಿಯನ್ನೆಲ್ಲ ತಲೆಕೆಳಗೆ ಮಾಡಿತು ಅಂತ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

    ನಾವು ದಾಳಿ ಮಾಡುವ ಮೊದಲೇ ಭಾರತ ಬ್ರಹ್ಮೋಸ್‌ನಿಂದ (ಸೂಪರ್‌ ಸಾನಿಕ್‌ ಕ್ರೂಸ್‌ ಕ್ಷಿಪಣಿ) ಪಾಕ್‌ನ ಹಲವು ಮಿಲಿಟರಿ ಕೇಂದ್ರಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ಮಾಡಿತ್ತು. ನಮ್ಮ ಕಾರ್ಯತಂತ್ರದ ನೆಲೆಗಳನ್ನೂ ನಾಶಗೊಳಿಸಿತು. ಪಾಕಿಸ್ತಾನದ ವಿವಿಧ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ಬ್ರಹ್ಮೋಸ್‌ ಕ್ಷಿಪಣಿ ದಾಳಿ ನಡೆಸಿದಾಗ ರಾವಲ್ಪಿಂಡಿಯ ನೂರ್‌ ಖಾನ್‌ ಮತ್ತು ಮುರಿಯ್‌ನ (ಚಕ್ವಾಲ್‌) ವಾಯುನೆಲೆಗಳು ಧ್ವಂಸವಾದವು. ಇದರಿಂದ ನಮ್ಮ ಯೋಜಿತ ದಾಳಿ ತಲೆಕೆಳಗಾಯಿತು. ಇದನ್ನೂ ಓದಿ: ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

    ಆಪರೇಷನ್‌ ಸಿಂಧೂರ ಭಾಗವಾಗಿ ಭಾರತ‌ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್‌ ಅನ್ನು ಪ್ರಯೋಗಿಸಿತ್ತು. ಇದಾದ ಬಳಿಕ ಪಾಕ್‌ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಚೀನಾ ನಿರ್ಮಿತ ಡ್ರೋನ್‌ಗಳನ್ನು ಹಾರಿಸಿತ್ತು. ಇದನ್ನೂ ನಮ್ಮ ವಾಯುರಕ್ಷಣಾ ವ್ಯವಸ್ಥೆ ಎಸ್‌-400 ವಿಫಲಗೊಳಿಸಿತು.  ಇದನ್ನೂ ಓದಿ: ಗೋಲ್ಡನ್‌ ಡೋಮ್;‌ ಕ್ಷಿಪಣಿ ದಾಳಿಯಿಂದ ಅಮೆರಿಕ ರಕ್ಷಣೆಗೆ ಬಾಹ್ಯಾಕಾಶದಲ್ಲಿ ರಕ್ಷಾಕವಚ