Tag: Shehla Rashid

  • ಮಗಳಿಂದಲೇ ನನಗೆ ಜೀವ ಬೆದರಿಕೆ – ಜೆಎನ್‌ಯು ಮಾಜಿ ನಾಯಕಿಯ ತಂದೆಯಿಂದ ಪತ್ರ

    ಮಗಳಿಂದಲೇ ನನಗೆ ಜೀವ ಬೆದರಿಕೆ – ಜೆಎನ್‌ಯು ಮಾಜಿ ನಾಯಕಿಯ ತಂದೆಯಿಂದ ಪತ್ರ

    ಶ್ರೀನಗರ: ಮಗಳೇ ನನಗೆ ಜೀವ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಿ ಮಾಜಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖಂಡೆ ಶೆಹ್ಲಾ ರಷೀದ್‌ ತಂದೆ ಅಬ್ದುಲ್‌ ರಷೀದ್‌ ಜಮ್ಮು ಕಾಶ್ಮೀರ ಡಿಜಿಪಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ನಮ್ಮ ಮನೆಯಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ. ನಾನು ಈ ಚಟುವಟಿಕೆಯನ್ನು ವಿರೋಧಿಸಿದ್ದಕ್ಕೆ ಮಗಳು ಶೆಹ್ಲಾಳ ಭದ್ರತಾ ಸಿಬ್ಬಂದಿ ಶಕೀಬ್‌ ಪಿಸ್ತೂಲ್‌ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.

    ಜಮ್ಮು ಕಾಶ್ಮೀರ ಪೀಪಲ್ಸ್‌ ಮೂಮೆಂಟ್‌(ಜೆಕೆಪಿಎಂ) ಪರ ಸೇರಲು ಶೈಲಾ 3 ಕೋಟಿ ರೂ. ಹಣವನ್ನು ಪಡೆದಿದ್ದಾಳೆ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಲು ಅಕ್ರಮ ಮಾರ್ಗಗಳಿಂದ ಹಣ ಬಂದಿದೆ ಎಂದು ಉಲ್ಲೇಖಿಸಿದ್ದಾರೆ.

    2 ತಿಂಗಳ ಹಿಂದೆ ಈಗಾಗಲೇ ಯುಎಪಿಎ ಅಡಿ ಬಂಧನವಾಗಿರುವ ಜಹೂರ್‌ ವಟಾಲಿ ನನ್ನ ಜೊತೆ ಮಾತನಾಡಿದ್ದ. ಆತ ಶೈಲಾಗೆ ಮೂರು ಕೋಟಿ ರೂ. ನೀಡುತ್ತೇನೆ. ಆಕೆ ಜಮ್ಮು ಕಾಶ್ಮೀರ ರಾಜಕೀಯಕ್ಕೆ ಬರಬೇಕು ಎಂದು ಬೇಡಿಕೆ ಇಟ್ಟಿದ್ದ. ನಾನು ಈ ಹಣವನ್ನು ಪಡೆದುಕೊಳ್ಳಲಿಲ್ಲ. ಅಷ್ಟೇ ಅಲ್ಲದೇ ಮಗಳಿಗೂ ಈ ರೀತಿಯ ವ್ಯವಹಾರದಲ್ಲಿ ಭಾಗಿಯಾಗಬೇಡ ಎಂದು ತಿಳಿಸಿದ್ದೆ ಎಂದು ಹೇಳಿದ್ದಾರೆ.

    ನನ್ನ ವಿರುದ್ಧ ಪತ್ನಿ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆಯ ಅಡಿ ಕೇಸ್‌ ಹಾಕಿದ್ದಾಳೆ. ಪಿತೂರಿ ನಡೆಸಿ ನನ್ನನ್ನು ಮನೆಯಿಂದ ಹೊರ ಹಾಕಿದ್ದಾಳೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶೆಹ್ಲಾ ರಷೀದ್‌, ತಂದೆ ಸುಳ್ಳು ಹೇಳುತ್ತಿದ್ದಾರೆ. ತಂದೆ ತಾಯಿಗೆ ಹಿಂಸೆ ನೀಡುತ್ತಿದ್ದಾರೆ. ತಾಯಿ ಜೊತೆ ನಾನು, ಸಹೋದರಿ ದೂರು ನೀಡಿದ್ದೇವೆ. ಇದು ಕೌಟುಂಬಿಕ ವಿಚಾರವಾಗಿದ್ದು, ಸುಳ್ಳು ಹೇಳುತ್ತಿರುವ ತಂದೆಯನ್ನು ನಂಬಬೇಡಿ ಎಂದು ಟ್ವೀಟ್‌ ಮಾಡಿದ್ದಾರೆ.

    https://twitter.com/Shehla_Rashid/status/1333422083880062978

  • ಬಂಧನಕ್ಕೂ 10 ದಿನ ಮೊದಲೇ ರಶೀದ್‍ಗೆ ನೋಟಿಸ್ ನೀಡ್ಬೇಕು: ದೆಹಲಿ ಕೋರ್ಟ್

    ಬಂಧನಕ್ಕೂ 10 ದಿನ ಮೊದಲೇ ರಶೀದ್‍ಗೆ ನೋಟಿಸ್ ನೀಡ್ಬೇಕು: ದೆಹಲಿ ಕೋರ್ಟ್

    – ದೇಶದ್ರೋಹ ಪ್ರಕರಣದ ಆರೋಪಿ ಶೆಹ್ಲಾ

    ನವದೆಹಲಿ: ಸಾಮಾಜಿಕ ಹೋರಾಟಗಾರ್ತಿ, ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ವಿದ್ಯಾರ್ಥಿ ಸಂಘಟನೆಯ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ಬಂಧನಕ್ಕೂ 10 ದಿನಗಳ ಮುನ್ನ ನೋಟಿಸ್ ನೀಡಬೇಕು ಎಂದು ದೆಹಲಿ ಕೋರ್ಟ್ ಆದೇಶಿಸಿದೆ.

    ಶೆಹ್ಲಾ ರಶೀದ್ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಸೈನ್ಯವನ್ನು ದೂಷಿಸಿದ್ದರು. ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಶೆಹ್ಲಾ ರಶೀದ್ ಅವರನ್ನು ಬಂಧಿಸುವ ಅಗತ್ಯವಿದ್ದಲ್ಲಿ 10 ದಿನಗಳ ಮೊದಲೇ ಬಂಧನ ನೋಟಿಸ್ ನೀಡಬೇಕು ಎಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: RSS, ನಿತಿನ್ ಗಡ್ಕರಿ ಸೇರಿ ಮೋದಿ ಹತ್ಯೆಗೆ ಪ್ಲಾನ್ – ಜೆಎನ್‍ಯು ವಿದ್ಯಾರ್ಥಿನಿ ಆರೋಪ

    ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಯಾವುದೇ ಅಧಿಕಾರವಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅವರನ್ನು ಶಕ್ತಿ ಹೀನರನ್ನಾಗಿ ಮಾಡಲಾಗಿದೆ. ಎಲ್ಲವೂ ಅರೆ ಸೈನಿಕರ ಕೈಯಲ್ಲಿದೆ. ಸಿಆರ್‍ಪಿಎಫ್ ಸಿಬ್ಬಂದಿ ಸೂಚನೆ ಮೇರೆಗೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಸಶಸ್ತ್ರ ಪಡೆಗಳು ರಾತ್ರಿ ಮನೆಗೆ ನುಗ್ಗಿ ದರೋಡೆ ಮಾಡುತ್ತಿವೆ ಎಂದು ಶೆಹ್ಲಾ ರಶೀದ್ ಟ್ವೀಟ್ ಮೂಲಕ ಆರೋಪ ಮಾಡಿದ್ದರು.

    ಈ ಸಂಬಂಧ ಸುಪ್ರೀಂ ಕೋರ್ಟ್ ವಕೀಲ ಅಲೋಕ್ ಶ್ರೀವಾಸ್ತವ್ ಅವರು ದೂರು ನೀಡಿದ್ದರು. ಈ ದೂರಿನ ಅನ್ವಯ ದೆಹಲಿ ಪೊಲೀಸರು ಶೆಹ್ಲಾ ರಶೀದ್ ವಿರುದ್ಧ ಐಪಿಸಿ ಸೆಕ್ಷನ್ 124-ಎ (ದೇಶದ್ರೋಹ), 153 (ದೊಂಬಿ ಎಬ್ಬಿಸುವ ಸಲುವಾಗಿ ಹೊಣೆಗಾರಿಕೆ ಮರೆತು ಪ್ರಚೋದನೆ ಹೇಳಿಕೆ ನೀಡುವುದು), 153-ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ವೈಷಮ್ಯವನ್ನು ಉತ್ತೇಜಿಸುವುದು) ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಕುರಿತು ಪ್ರತಿಕ್ರಿಯಿಸಿದ್ದ ವಕೀಲ ಅಲೋಕ್ ಶಿವಾಸ್ತವ್, ಭಾರತೀಯ ಸೇನೆಯ ಕುರಿತಾಗಿ ಶೆಹ್ಲಾ ರಶೀದ್ ಮಾಡಿದ ಆರೋಪ ಸಂಪೂರ್ಣ ಸುಳ್ಳು. ಅವರು ತಮ್ಮ ಆರೋಪಕ್ಕೆ ಯಾವುದೇ ಸಾಕ್ಷಿಯನ್ನು ಒದಗಿಸಿಲ್ಲ. ಈ ಮಾಹಿತಿಯನ್ನು ಆಧರಿಸಿ ಅಂತರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ. ಈ ಮೂಲಕ ಭಾರತದ ಹೆಸರಿಗೆ ಕಳಂಕ ತರಲಾಗಿದೆ ಎಂದು ದೂರಿದ್ದರು.