Tag: Shimogga

  • ನಾವು ಮೋದಿಗೆ ಹೇಳಿದ್ವಿ ಇಂದು ಉತ್ತರ ಸಿಕ್ತು, ಅವ್ರು ಯಾರಿಗೆ ಹೇಳ್ತಾರೆ: ಮಂಜುನಾಥ್ ಸಂಬಂಧಿ

    ನಾವು ಮೋದಿಗೆ ಹೇಳಿದ್ವಿ ಇಂದು ಉತ್ತರ ಸಿಕ್ತು, ಅವ್ರು ಯಾರಿಗೆ ಹೇಳ್ತಾರೆ: ಮಂಜುನಾಥ್ ಸಂಬಂಧಿ

    – ಆಪರೇಷನ್ ಸಿಂಧೂರ ಪಹಲ್ಗಾಮ್ ದಾಳಿಯ ಮೃತರಾದವರಿಗೆ ಅರ್ಪಣೆ

    ಶಿವಮೊಗ್ಗ: ಪಹಲ್ಗಾಮ್‌ನಲ್ಲಿ ಉಗ್ರರರು ಪ್ರವಾಸಿಗರ ಮೇಲೆ ದಾಳಿ ಮಾಡಿ, ಮೋದಿಗೆ ಹೇಳಿ ಅಂದಿದ್ದರು. ನಾವು ಮೋದಿಗೆ ಹೇಳಿದ್ದೆವು. ಇಂದು ಉತ್ತರ ಸಿಕ್ಕಿದೆ. ಈಗ ಅವರು ಯಾರಿಗೆ ಹೇಳ್ತಾರೆ ಎಂದು ಪ್ರಶ್ನಿಸುವ ಮೂಲಕ ಪಹಲ್ಗಾಮ್ ಉಗ್ರರ ದಾಳಿಯಲ್ಲಿ(Pahalgam Terror Attack) ಮೃತಪಟ್ಟ ಮಂಜುನಾಥ್ ರಾವ್ ಅವರ ಸಂಬಂಧಿ ಡಾ.ರವಿಕಿರಣ್ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತವು ಪಾಕಿಸ್ತಾನದ ಉಗ್ರರ ಅಡಗುತಾಣಗಳಿಗೆ ದಾಳಿ ನಡೆಸಿದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದರು. ಬೆಳಗ್ಗೆ ಏಳುವಾಗಲೇ ಒಳ್ಳೆಯ ಸುದ್ದಿ ಸಿಕ್ಕಿದೆ. `ಆಪರೇಷನ್ ಸಿಂಧೂರ'(Operation Sindoor) ಹೆಸರು ಕೇಳಿಯೇ ರೋಮಾಂಚನ ಆಯ್ತು. ನಾವು ಚಿಕ್ಕವರಿಂದಲೂ ಕಾಶ್ಮೀರ(Kashmir) ಭಾರತದ ಸಿಂಧೂರ ಎಂದು ಹೇಳುತ್ತಲೇ ಬಂದಿದ್ದೇವೆ. ಪಹಲ್ಗಾಮ್ ದಾಳಿಯಲ್ಲಿ ಉಗ್ರರು ಭಾರತೀಯ ಮಹಿಳೆಯರ ಸಿಂಧೂರ ಅಳಿಸುವ ಕೆಲಸ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಭಾರತ ಕೂಡ ಕೆಲಸ ಆರಂಭಿಸಿದೆ ಎಂದರು. ಇದನ್ನೂ ಓದಿ: ಉಗ್ರರ ಮೇಲಿನ ದಾಳಿಗೆ ಭಾರತದ ಪ್ರಜೆಗಳ ಮೇಲೆ ಗುಂಡು – 7 ಸಾವು

    ಭಾರತೀಯ ಸೇನೆಯು ಉಗ್ರರ ಮೇಲೆ ದಾಳಿ ಮಾಡಿದೆಯೇ ಹೊರತು ನಾಗರೀಕರ ಮೇಲೆ ಮಾಡಿಲ್ಲ. ಆಪರೇಷನ್ ಸಿಂಧೂರವು ಪಹಲ್ಗಾಮ್ ದಾಳಿಯಲ್ಲಿ ಮೃತರಾದವರಿಗೆ ಸಲ್ಲಿಸಿದ ಗೌರವ. ಉಗ್ರರು ದಾಳಿ ಮಾಡುವಾಗ ಮೋದಿಗೆ ಹೇಳಿ ಅಂದಿದ್ದರು. ನಾವು ಮೋದಿಗೆ ಹೇಳಿದ್ದೆವು. ಇಂದು ನಮಗೆ ಉತ್ತರ ಸಿಕ್ಕಿದೆ. ಈಗ ಅವರು ಯಾರಿಗೆ ಹೇಳ್ತಾರೆ ಎಂದು ಕೇಳಲು ಬಯಸ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕಸಬ್‌, ಡೇವಿಡ್‌ ಹೆಡ್ಲಿ ತರಬೇತಿ ಪಡೆದ ಕ್ಯಾಂಪ್‌ ಧ್ವಂಸ: ಭಾರತ

    ಭಾರತೀಯ ಸೇನೆಗೆ(Indian Army) ಎಲ್ಲರೂ ಕೂಡ ಸಹಕಾರ ನೀಡಬೇಕು. ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಾಶ ಮಾಡುವ ಕೆಲಸ ಮುಂದುವರೆಯಲಿ ಎಂದರು. ಇದನ್ನೂ ಓದಿ: ಆಪರೇಷನ್ ಸಿಂಧೂರದ ಮೂಲಕ ನರಮೇಧಕ್ಕೆ ಉತ್ತರ: ಅಮಿತ್ ಶಾ ಶ್ಲಾಘನೆ

    ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಇಂದು ತಡರಾತ್ರಿ 1:44ರ ಸುಮಾರಿಗೆ ಭಾರತೀಯ ಸೇನೆಯು ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಕಾರ್ಯಚರಣೆಗೆ `ಆಪರೇಷನ್ ಸಿಂಧೂರ’ ಎಂದು ಹೆಸರಿಡಲಾಗಿತ್ತು. ಪಹಲ್ಗಾಮ್ ದಾಳಿಯ ಮೂಲಕ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ್ದ ಉಗ್ರರಿಗೆ ಭಾರತವು ಆಪರೇಷನ್ ಸಿಂಧೂರದ ಮೂಲಕ ತಕ್ಕ ಪ್ರತ್ಯುತ್ತರ ನೀಡಿದೆ.

  • ಮಾಜಿ ಗೆಳೆಯನ ಲೈಂಗಿಕ ಪ್ರಕರಣ ಕೆದಕಿ ಟಾಂಗ್ ಕೊಟ್ಟ ಬೇಳೂರು ಗೋಪಾಲಕೃಷ್ಣ

    ಮಾಜಿ ಗೆಳೆಯನ ಲೈಂಗಿಕ ಪ್ರಕರಣ ಕೆದಕಿ ಟಾಂಗ್ ಕೊಟ್ಟ ಬೇಳೂರು ಗೋಪಾಲಕೃಷ್ಣ

    ಶಿವಮೊಗ್ಗ: ಕ್ಷೇತ್ರದಲ್ಲಿ ಉಪಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಾಗೂ ಬಿಜೆಪಿ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತನಾಗಿದ್ದ ಶಾಸಕ ಹರತಾಳು ಹಾಲಪ್ಪ ಅವರ ಲೈಂಗಿಕ ಪ್ರಕರಣವನ್ನು ಕೆದಕಿ ಬೇಳೂರು ಗೋಪಾಲಕೃಷ್ಣ ಟಾಂಗ್ ಕೊಟ್ಟಿದ್ದಾರೆ.

    ಲೈಂಗಿಕ ಹಗರಣದಲ್ಲಿ ಸಾಕ್ಷಿ ಮುಚ್ಚಿ ಹರತಾಳು ಹಾಲಪ್ಪ ಅವರು ಜಯ ಸಾಧಿಸಿರಬಹುದು. ಆದರೆ ಆಕೆಯೊಂದಿಗೆ ಅವರು ಸಂಬಂಧ ಹೊಂದಿರಲಿಲ್ಲವೇ? ಒಂದು ವೇಳೆ ಸಂಬಂಧ ಇಲ್ಲ ಅಂತಾ ಹೇಳುವುದಾದರೆ ಸಿಗಂದೂರಿಗೆ ಬಂದು ಪ್ರಮಾಣ ಮಾಡಲಿ. ನಾನು, ಮಧು ಬಂಗಾರಪ್ಪ ಅವರನ್ನು ಕರೆದುಕೊಂಡು ಬಂದು, ಶರಾವತಿ ಡೆಂಟಲ್ ಕಾಲೇಜು ವಿಷಯ ಬಗ್ಗೆ ಪ್ರಮಾಣ ಮಾಡಿಸುತ್ತೇನೆ ಎಂದು ತಿರುಗೇಟು ಕೊಟ್ಟಿದ್ದಾರೆ.

    ಕುಮಾರ್ ಬಂಗಾರಪ್ಪ ಅವರು ಡೆಂಟಲ್ ಕಾಲೇಜು ಅಧ್ಯಕ್ಷರಾಗಿದ್ದರು. ಆಗ ಅಧ್ಯಕ್ಷ ಸ್ಥಾನ ಈಡಿಗರಿಗೆ ಸೇರಬೇಕು ಎಂಬುದು ಮರೆತುಹೋಗಿತ್ತಾ? ಅಥವಾ ನಿಮ್ಮ ಬಾಯಲ್ಲಿ ಕಡುಬು ಹಾಕಿಕೊಂಡಿದ್ದರಾ ಎಂದು ಪ್ರಶ್ನಿಸಿ ಕಿರಿಕಾರಿದ ಅವರು, ಬಿ.ಎಸ್.ಯಡಿಯೂರಪ್ಪ ಅವರು ಮನಸ್ಥಿತಿ ಕಳೆದುಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರದ ಕುರಿತಾಗಿ ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಕುಟುಕಿದರು.

    ಬಿ.ವೈ.ರಾಘವೇಂದ್ರ ಹಾಗೂ ಬಿ.ವೈ.ವಿಜಯೇಂದ್ರ ಅವರು ನಕಲಿ ಸಹಿ ಮಾಡಿ, ತಮ್ಮ ತಂದೆ ಬಿ.ಎಸ್.ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದರು. ಆದರೆ ಈ ವಿಚಾರವನ್ನು ಹೇಳಿಕೊಳ್ಳದೇ ಮಕ್ಕಳನ್ನು ಶಿಕ್ಷೆಯಿಂದ ತಪ್ಪಿಸಿ ತಾವೇ ಜೈಲಿಗೆ ಹೋದರು ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಬಿಜೆಪಿ ನಾಯಕರ ಬಗ್ಗೆ ತಿಳಿದುಕೊಂಡಿದ್ದಾರೆ. ಯಾರನ್ನು ಹತ್ತಿಕ್ಕಬೇಕು, ಮುಗಿಸಬೇಕು ಅಂತಾ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಿಸಿ ಈಗ ಬಿ.ಎಸ್.ಯಡಿಯೂಪ್ಪನವರಿಗೂ ತಟ್ಟಿದ್ದು, ಒದ್ದಾಡುವಂತಾಗಿದೆ. ಪ್ರಧಾನಿ ಮೋದಿ ಹೀಗೆ ಮಾಡದಿದ್ದರೇ ಸಂಸದೆ ಶೋಭಾ ಕರಂದ್ಲಾಜೆ ಮೇಡಂ ಎಂದೋ ಹೊಸ ಪಕ್ಷ ಕಟ್ಟಲು ಸಿದ್ಧರಾಗಿದ್ದರು ಎಂದು ಲೇವಡಿ ಮಾಡಿದರು.

    ಬಿಜೆಪಿಯವರಿಗೆ ಹಾಗೂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾನ ಮರ್ಯಾದೆ ಇಲ್ಲ. ಸುಳ್ಳು-ಡೊಂಗಿ ಅವರ ಬಾಯಲ್ಲಿ ಬರುತ್ತವೆ. ಸಿಗಂದೂರು ದೇವಾಲಯ ಸಮೀಪದಲ್ಲಿ ತುಮರಿ ಸೇತುವೆ ನಿರ್ಮಿಸುತ್ತೇವೆ ಅಂತಾ 2008ರಲ್ಲಿ ಭರವಸೆ ನೀಡಿದ್ದರು. ಆದರೆ ಹತ್ತು ವರ್ಷ ಕಳೆದರೂ ಇನ್ನೂ ಸೇತುವೆ ನಿರ್ಮಾಣವಾಗಿಲ್ಲ ಎಂದು ದೂರಿದರು.

    ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ, ಈಡಿ, ಐಟಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‍ನ ದೊಡ್ಡ ದೊಡ್ಡ ನಾಯಕರನ್ನು ಬಗ್ಗು ಬಡಿಯಲು ಪಿತೂರಿ ನಡೆಸಿದ್ದಾರೆ. ಕುತಂತ್ರದ ಮೂಲಕ ಎಲ್ಲರನ್ನು ಹೆದರಿಸಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಆಟ ಆಡುತ್ತಿದ್ದಾರೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೇವಣ್ಣ ಹೇಳಲು ಹೋಗಿ ರಾವಣ ಎಂದು ಉಚ್ಚರಿಸಿದ್ರು ಈಶ್ವರಪ್ಪ!

    ರೇವಣ್ಣ ಹೇಳಲು ಹೋಗಿ ರಾವಣ ಎಂದು ಉಚ್ಚರಿಸಿದ್ರು ಈಶ್ವರಪ್ಪ!

    ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ಲೋಕೋಪಯೋಗಿ ಸಚಿವ ರೇವಣ್ಣ ಅವರ ಹೆಸರನ್ನು ರಾವಣ ಎಂದು ತಪ್ಪಾಗಿ ಉಚ್ಛರಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.

    ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಭದ್ರಾವತಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು ರಾಜ್ಯದಲ್ಲಿ ದೇವೇಗೌಡ, ಕುಮಾರಸ್ವಾಮಿ ಮತ್ತು ರಾವಣ ಈ ಮೂವರದ್ದೇ ಸರ್ಕಾರ ಎಂದು ಹೇಳುವ ವೇಳೆ ರೇವಣ್ಣ ಎಂದು ಹೇಳುವ ಬದಲು ರಾವಣ ಎಂದು ಕರೆದಿದ್ದಾರೆ.

    ವಿಧಾನಸಭೆಗೆ ಬಾರದೇ ಭೂತದ ಬಂಗಲೆ ಆಗಿದೆ. ಮೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಇನ್ನೂ ಘೋಷಣೆ ಮಾಡಲು ಸಾಧ್ಯವಾಗಿಲ್ಲ. ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬೇಕು ಎಂದು ಡಿಕೆ ಶಿವಕುಮಾರ್ ಕರೆದ ಸಭೆಗೆ ಅಲ್ಲಿಯ ಕೈ ಶಾಸಕರೇ ಗೈರಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ದಯನೀಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ ಎಂದರು.

    ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಡಿಕೆಶಿ ಅನಿತಾ ಪರವಾಗಿ ಪ್ರಚಾರಕ್ಕೆ ಬಂದರೆ ನಾವು ನೇಣು ಹಾಕಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಕೆಲವರು ಪ್ರಚಾರಕ್ಕೆ ನಮ್ಮ ಹೆಣ ಕೂಡ ಹೋಗುವುದಿಲ್ಲ ಅಂತ ಬಹಿರಂಗ ಹೇಳಿಕೆ ಮೂಲಕ ಜೆಡಿಎಸ್ ಅಭ್ಯರ್ಥಿಯ ಸ್ಪರ್ಧೆಗೆ ವಿರೋಧಿಸಿದ್ದಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಬೇಬಿ ಕೇರ್ ಕೊಠಡಿ ನಿರ್ಮಾಣ: ಡಿ.ಸಿ ತಮ್ಮಣ್ಣ

    ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಬೇಬಿ ಕೇರ್ ಕೊಠಡಿ ನಿರ್ಮಾಣ: ಡಿ.ಸಿ ತಮ್ಮಣ್ಣ

    ಶಿವಮೊಗ್ಗ: ಮಹಿಳೆಯರು ಮಕ್ಕಳಿಗೆ ಬಸ್ ನಿಲ್ದಾಣದಲ್ಲಿ ಹೊರಗಡೆ ಹಾಲುಣಿಸಬೇಕಾಗುತ್ತದೆ. ಹೀಗಾಗಿ ಅವರಿಗೆ ಸಹಾಯವಾಗಲೇಂದು ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ತಾಯಿ ಮಡಿಲ (ಬೇಬಿ ಕೇರ್) ಕೊಠಡಿಯನ್ನು ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆಎಸ್ಆರ್‌ಟಿಸಿ ಸೇರಿ ಯಾವುದೇ ಸಾರಿಗೆ ಸಂಸ್ಥೆ ಖಾಸಗೀಕರಣ ಇಲ್ಲ. 1.16 ಲಕ್ಷ ಕನ್ನಡಿಗರಿಗೆ ಅದರಲ್ಲೂ ಗ್ರಾಮೀಣ ಜನರಿಗೆ ಉದ್ಯೋಗ ನೀಡಿರುವ ಸಂಸ್ಥೆ ಇದು. ಇಂಥ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದಿಲ್ಲ. ರಾಜ್ಯದ ಸಾರಿಗೆ ಸಂಸ್ಥೆಗಳು ವಾರ್ಷಿಕ 500 ಕೋಟಿ ರೂ. ನಷ್ಟದಲ್ಲಿವೆ. ಈ ನಷ್ಟ ಸರಿದೂಗಿಸಲು ಹಲವು ಯೋಜನೆ ಹಮ್ಮಿಕೊಳ್ಳಲಾಗಿದೆ. ಸುಸ್ಥಿತಿಯಲ್ಲಿರುವ ಹಳೇ ಚಾಸಿಗಳಿಗೆ ಹೊಸ ಬಾಡಿ ಕಟ್ಟಿಸಿ ಓಡಿಸಲಾಗುವುದು. ಬಸ್ ನಿಲ್ದಾಣಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚು ಅವಕಾಶ ನೀಡಲಾಗುವುದು ಎಂದು ಹೇಳಿದರು.

    ಎಂಎಸ್‍ಐಎಲ್ ಅವರ ಸಹಯೋಗದೊಂದಿಗೆ ಎಲ್ಲಾ ಬಸ್ ನಿಲ್ದಾಣದಲ್ಲೂ ಅವರದೊಂದು ಸಣ್ಣ ಮಳಿಗೆ ಇರಿಸಲಾಗುತ್ತದೆ. ಅದರಲ್ಲಿ ಪುಸ್ತಕ ಇತರ ವಸ್ತುಗಳ ಮಾರಾಟ ಮಾಡುವ ವ್ಯವಸ್ಥೆ ಇದೆ. ಯಾರು ಬಸ್ಸಿನಲ್ಲಿ ಪ್ರಯಾಣ ಮಾಡುತ್ತಾರೋ ಆ ಬಸ್ಸಿನ ಟಿಕೆಟ್ ತೋರಿಸಿದರೆ ಅವರಿಗೆ 35 ರಿಂದ 40% ಡಿಸ್ಕೌಂಟ್‍ನಲ್ಲಿ ಎಂಎಸ್‍ಐಎಲ್ ಪದಾರ್ಥಗಳು ದೊರಕುತ್ತವೆ. ಅದರೊಂದಿಗೆ ಮಹಿಳೆಯರಿಗಾಗಿ ನ್ಯಾಪ್‍ಕಿನ್ ವ್ಯವಸ್ಥೆ ಕೂಡ ಮಾಡಲಾಗುತ್ತದೆ. ಮಹಿಳೆಯ ಶೌಚಾಲಯದಲ್ಲಿ ನ್ಯಾಪ್‍ಕಿನ್ ಬರ್ನಿಂಗ್ ಸೆಂಟರ್ ಅನ್ನು ಇಡಲಾಗುತ್ತದೆ. ಮುಂದಿನ ದಿನಗಳಲ್ಲಿ ಹೈಟೆಕ್ ನಿಲ್ದಾಣಗಳನ್ನು ಮಾಡುತ್ತೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • KSRTC ಡಿಪೋದ ನೀರಿನ ಗುಂಡಿಯಲ್ಲಿ ಬಿದ್ದ ಐದು ವರ್ಷದ ಬಾಲಕ ಸಾವು

    KSRTC ಡಿಪೋದ ನೀರಿನ ಗುಂಡಿಯಲ್ಲಿ ಬಿದ್ದ ಐದು ವರ್ಷದ ಬಾಲಕ ಸಾವು

    ಶಿವಮೊಗ್ಗ: ಮಳೆ ನೀರು ತುಂಬಿದ್ದ ಗುಂಡಿಯಲ್ಲಿ ಐದು ವರ್ಷದ ಬಾಲಕ ಬಿದ್ದು ಮೃತಪಟ್ಟ ಘಟನೆ ಜಿಲ್ಲೆ ಸಾಗರದಲ್ಲಿ ಕೆಎಸ್‍ಆರ್ ಟಿಸಿ ಡಿಪೋದಲ್ಲಿ ನಡೆದಿದೆ.

    ಶಿವಪ್ಪ ನಾಯಕ ನಗರದಲ್ಲಿರುವ ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಮುನೀಂದ್ರ ಎಂಬವರ ಮಗ ಭುವನ್ (5) ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಡಿಪೋ ಕಂಪೌಂಡ್ ಕಟ್ಟಲು ಗುಂಡಿ ತಗೆಯಲಾಗಿತ್ತು. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಂಡಿ ತುಂಬಿದ್ದು, ಸಮೀಪದಲ್ಲಿಯೇ ಆಟವಾಡುತ್ತಿದ್ದ ಭುವನ್ ಕಾಲು ಜಾರಿ ಗುಂಡಿಗೆ ಬಿದ್ದಿದ್ದಾನೆ.

    ತಕ್ಷಣವೇ ಅಲ್ಲಿದ್ದ ಜನರು ಬಾಲಕನನ್ನು ಮೇಲೆದ್ದಾರೆ. ನೀರು ಕುಡಿದು ಹೊಟ್ಟೆ ಭಾರವಾಗಿದ್ದ ಭುವನ್‍ಗೆ ಪ್ರಥಮ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆ ತಲುಪುತ್ತಿದ್ದಂತೆ ಬಾಲಕ ಮೃತಪಟ್ಟಿದ್ದಾನೆ.

    ಗುಂಡಿ ತೆಗೆದು ಸೂಚನಾ ಫಲಕ ಹಾಕುವಲ್ಲಿ ಕಾಮಗಾರಿ ಗುತ್ತಿಗೆದಾರರು ನಿರ್ಲಕ್ಷ್ಯ ತೋರಿದ್ದಾರೆ. ನನ್ನ ಮಗನ ಸಾವಿಗೆ ಅವರೇ ಕಾರಣ ಎಂದು ಗುತ್ತಿಗೆದಾರರ ವಿರುದ್ಧ ಮೃತ ಬಾಲಕನ ತಂದೆ ಮುನೀಂದ್ರ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಸಾರ್ವಜನಿಕರು ಸಂಚರಿಸುವ ಸ್ಥಳದಲ್ಲಿ ಕಂಪೌಂಡ್ ನಿರ್ಮಾಣಕ್ಕೆ ಅನೇಕ ಗುಂಡಿಗಳನ್ನು ತೆಗೆಯಲಾಗಿದೆ. ಅಲ್ಲದೇ ಯಾವುದೇ ಸೂಚನಾ ಫಲಕಗಳನ್ನು ಹಾಕಿಲ್ಲ. ಹೀಗಾಗಿ ಈ ದುರ್ಘಟನೆ ನಡೆದಿದೆ ಎಂದು ಕೆಎಸ್‍ಆರ್ ಟಿಸಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಒಲಿಂಪಿಕ್ ಮೆಡಲ್ ಪಡೆಯುವ ತನಕ ನನಗೆ ಏನು ಆಗಲ್ಲ: ಜ್ಯೋತಿರಾಜ್ – ವಿಡಿಯೋ ನೋಡಿ

    ಒಲಿಂಪಿಕ್ ಮೆಡಲ್ ಪಡೆಯುವ ತನಕ ನನಗೆ ಏನು ಆಗಲ್ಲ: ಜ್ಯೋತಿರಾಜ್ – ವಿಡಿಯೋ ನೋಡಿ

    ಶಿವಮೊಗ್ಗ: ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ಚಿರಋಣಿ ಎಂದು ಜೋಗ ಜಲಪಾತದ ಬುಡದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್ ಹೇಳಿದ್ದಾರೆ.

    ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಒಂದು ಕುಟುಂಬದ ನೋವು ನಿವಾರಿಸಲು ನನ್ನ ಕೈಲಾದ ಸಹಾಯ ಮಾಡಲು ಮುಂದಾಗಿದ್ದೆ, ಆದರೆ ಮೃತ ದೇಹದ ಪತ್ತೆ ಮಾಡುವ ವೇಳೆ ನನ್ನ ಕಾಲು ಜಾರಿ ಬಂಡೆಗಳ ನಡುವೆ ಸಿಲುಕಿಕೊಳ್ಳಬೇಕಾಯಿತು. ಆದರೆ ನಾನು ಅಲ್ಲಿಂದ ಮತ್ತೆ ಹತ್ತಿ ಬರಲು ಪ್ರಯತ್ನಿಸಿದೆ ಸದಾ ನೀರು ಹರಿಯುವ ಕಾರಣ ನನ್ನ ಪ್ರಯತ್ನ ವಿಫಲವಾಯಿತು. ಇಂತಹ ಸನ್ನಿವೇಶಗಳನ್ನು ಹೇಗೆ ಎದುರಿಸಬೇಕು ಎಂಬ ಮಾಹಿತಿ ಇದ್ದ ಕಾರಣ ದೇಹಕ್ಕೆ ಹೆಚ್ಚು ಶ್ರಮ ನೀಡದೇ ಬಂಡೆ ಹತ್ತಿಬರಲು ಪ್ರಯತ್ನಿಸಿದೆ ಎಂದರು.

    ಸಂಜೆ ವೇಳೆ ಎಷ್ಟೇ ಪ್ರಯತ್ನಿಸಿದರೂ ಮೇಲೆ ಬರಲು ಸಾಧ್ಯವಾಗಲಿಲ್ಲ, ಅದ್ದರಿಂದ ರಾತ್ರಿ ಪೂರ್ತಿ ಅಲ್ಲಿಯೇ ಉಳಿಯಬೇಕಾಯಿತು. ನನ್ನ ಜೀವನದಲ್ಲಿ ಮೊದಲ ಬಾರಿಗೆ ಇಂತಹ ಅನುಭವ ಆಗಿದೆ. ಕಲ್ಲು ಬಂಡೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇದ್ದರೂ ಈ ರೀತಿ ನಡೆಯುವ ಕುರಿತು ಊಹೆ ಮಾಡಿರಲಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ತಿಳಿಸದರು.

    ಇದೇ ವೇಳೆ ನನ್ನ ಯೋಗ ಕ್ಷೇಮದ ಕುರಿತು ಇಷ್ಟು ಪ್ರೀತಿ ತೋರಿದ ಕರ್ನಾಟಕ ಜನತೆಗೆ ಚಿರಋಣಿ ಎಂದ ಅವರು, ಭಾರತಕ್ಕೆ ಒಲಿಂಪಿಕ್ ನಲ್ಲಿ ಪದಕ ತರುವ ತನಕ ನನಗೆ ಏನು ಆಗುವುದಿಲ್ಲ ಎಂದು ಮುಗುಳುನಕ್ಕರು. ಇದನ್ನೂ ಓದಿ: ಜ್ಯೋತಿ ರಾಜ್ ಪತ್ತೆಯಾಗಿದ್ದು ಹೇಗೆ? 

    https://www.youtube.com/watch?v=wzQj6XUCYj0