Tag: Shira by-election

  • ಕೊಟ್ಟ ಮಾತು ಉಳಿಸಿಕೊಂಡ ಸಿಎಂ – ಮದಲೂರು ಕೆರೆಗೆ ತಲುಪಿದ ಹೇಮಾವತಿ ನೀರು

    ಕೊಟ್ಟ ಮಾತು ಉಳಿಸಿಕೊಂಡ ಸಿಎಂ – ಮದಲೂರು ಕೆರೆಗೆ ತಲುಪಿದ ಹೇಮಾವತಿ ನೀರು

    ತುಮಕೂರು: ಇಂದು ಹೇಮಾವತಿ ನಾಲೆಯಿಂದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿದು ಬಂದಿದ್ದು, ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಶಿರಾ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

    ಕಳೆದ ತಿಂಗಳು ನಡೆದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಮದಲೂರು ಕೆರೆಗೆ ನೀರನ್ನು ಹರಿಸುತ್ತೇವೆ ಎಂಬ ಪ್ರಮುಖ ಅಜೆಂಡಾವನ್ನು ಇಟ್ಟುಕೊಂಡಿತ್ತು. ಅದರಂತೆ ಇಂದು ಮದಲೂರು ಕೆರೆಗೆ ನೀರು ಬಂದು ತಲುಪಿದೆ. ನವೆಂಬರ್ 30ರಂದು ಕಳ್ಳಂಬೆಳ್ಳ ಕೆರೆಯಿಂದ ನೀರು ಬಿಡಲಾಗಿತ್ತು. ಸತತ 6 ದಿನಗಳ ಬಳಿಕ ಇಂದು ಸಂಜೆ 6 ಗಂಟೆ ಸುಮಾರಿಗೆ ಮದಲೂರು ಕೆರೆಗೆ ನೀರು ಹರಿದು ಬಂದಿದೆ.

    250 ಕ್ಯುಸೆಕ್ ನೀರು ಹರಿಯುತಿದ್ದು ಒಂದು ತಿಂಗಳ ಬಳಿಕ ಮದಲೂರು ಕೆರೆ ಭರ್ತಿಯಾಗಲಿದೆ. ಶಿರಾ ತಾಲೂಕಿನ 40 ಹಳ್ಳಿಗಳಿಗೆ ಕುಡಿಯುವ ನೀರು ಈ ಕೆರೆಯಿಂದ ಒದಗಿಸಲಾಗುತ್ತದೆ. ಉಪಚುನಾವಣೆಯ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ಕೆರೆಗೆ ನೀರು ಹರಿಸುವ ವಾಗ್ದಾನ ಮಾಡಿದ್ದರು. ಅದರಂತೆ ನೀರು ಹರಿಸಿದ್ದಾರೆ.

  • ಶಿರಾ ‘ಕೈ’ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು: ಬಿ.ಜೆ.ಪುಟ್ಟಸ್ವಾಮಿ

    ಶಿರಾ ‘ಕೈ’ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು: ಬಿ.ಜೆ.ಪುಟ್ಟಸ್ವಾಮಿ

    – ಬಿಜೆಪಿಯ ರಾಜೇಶ್ ಗೌಡ ಯುವ ಎತ್ತು
    – ಶಿರಾದಲ್ಲಿ ಮರಿ ರಾಜಾಹುಲಿ ಪ್ರಚಾರ

    ತುಮಕೂರು: ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿ ರಾಜೇಶ್ ಗೌಡ ಯುವ ಎತ್ತು ಎಂದು ರಾಜ್ಯ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪುಟ್ಟಸ್ವಾಮಿ, ಯುವ ಎತ್ತಿಗೆ ಶಿರಾ ಜನತೆ ಮತ ನೀಡಿದ್ರೆ ಪ್ರಯೋಜನೆ. ಏಳು ಬಾರಿ ಗೆದ್ದಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿಯಾಗಿರುವ ರಾಜೇಶ್ ಗೌಡ ಯುವಕರು. ಹಾಗಾಗಿ ಯುವ ಎತ್ತಿಗೆ ಮತ ನೀಡಿದ್ರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರ ವೈಯಕ್ತಿಕ ದ್ವೇಷದಿಂದಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾಯ್ತು. ಸರ್ಕಾರ ಬಿದ್ದು ಒಂದು ವರ್ಷ ಕಳೆದರೂ ಇಬ್ಬರ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಬಳಿ ಅಭಿವೃದ್ಧಿ ಮಂತ್ರ ಇಲ್ಲ. ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ಯಾಕೆ ಅಂತ ಗೊತ್ತಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

    ಸಿಎಂ ಯಡಿಯೂರಪ್ಪ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೊರೊನಾ ವೇಳೆ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ ಇರದಿದ್ರೆ ಅಲ್ಲೋಲ ಕಲ್ಲೋಲವಾಗುತ್ತಿತ್ತು. ಸಿಎಂ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯತೆ ಮತ್ತು ಆರ್ಥಿಕ ನೆರವು ನೀಡಿದ್ದಾರೆ. ರಾಜಾಹುಲಿ ಯಡಿಯೂರಪ್ಪನವರ ಪುತ್ರ ಮರಿ ರಾಜಾಹುಲಿ ವಿಜಯೇಂದ್ರ ಶಿರಾದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ನಮ್ಮ ಅಭ್ಯರ್ಥಿಗೆ ಗೆದ್ದರೆ ಈ ಕ್ಷೇತ್ರ ಅಭಿವೃದ್ಧಿಯಾಗಲಿದ್ದು, ಬಿಜೆಪಿಗೆ ಮತ ನೀಡಿ ಎಂದು ಮತದಾರರ ಬಳಿ ಬಿ.ಜೆ.ಪುಟ್ಟಸ್ವಾಮಿ ಮನವಿ ಮಾಡಿಕೊಂಡರು.

  • ಮಧ್ಯಾಹ್ನ ಟಿಕೆಟ್ ಘೋಷಣೆ – ಶಿರಾ ಜೆಡಿಎಸ್ ಅಭ್ಯರ್ಥಿಗೆ ಕೊರೊನಾ ಪಾಸಿಟಿವ್

    ಮಧ್ಯಾಹ್ನ ಟಿಕೆಟ್ ಘೋಷಣೆ – ಶಿರಾ ಜೆಡಿಎಸ್ ಅಭ್ಯರ್ಥಿಗೆ ಕೊರೊನಾ ಪಾಸಿಟಿವ್

    ತುಮಕೂರು: ಉಪಚುನಾವಣೆಯಲ್ಲಿ ಶಿರಾ ಜೆಡಿಎಸ್ ಅಭ್ಯರ್ಥಿಯಾಗಿರುವ ಅಮ್ಮಾಜಮ್ಮ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

    ಇಂದು ಮಧ್ಯಾಹ್ನವೇ ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡರು, ದಿವಂಗತ ಶಾಸಕ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಪಕ್ಷದಿಂದ ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಅಮ್ಮಾಜಮ್ಮ ಅವರಿಗೆ ಇಂದೇ ಕೊರೊನಾ ಪಾಸಿಟಿವ್ ಬಂದಿದೆ. ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆಯುತ್ತಿದ್ದಾರೆ.

    ತಾಯಿಗೆ ಕೊರೊನಾ ಬಂದ ವಿಚಾರವಾಗಿ ಮಾತನಾಡಿರುವ ಅಮ್ಮಾಜಮ್ಮ ಪುತ್ರ ಸತ್ಯ ಪ್ರಕಾಶ್, ವಿಧಿ ನಮ್ಮ ಕುಟುಂಬದ ಜೊತೆ ಚೆಲ್ಲಾಟ ಆಡುತಿದೆ. ಎರಡು ತಿಂಗಳ ಹಿಂದೆ ತಂದೆ ತೀರಿಸಿಕೊಂಡರು. ಈಗ ತಾಯಿಗೆ ಕೊರೊನಾ ಬಂದಿದೆ. ಪಕ್ಷದಿಂದ ಟಿಕೆಟ್ ಘೋಷಣೆ ಮಾಡಿರೋದು ಸಂತಸ ತಂದಿದೆ. ನಮ್ಮ ತಾಯಿ ಕೊರೊನಾ ಗೆದ್ದು ಬಂದು ಚುನಾವಣೆನೂ ಗೆಲ್ಲುತ್ತಾರೆ. ಇನ್ನು ಐದು ದಿನದಲ್ಲಿ ಡಿಸ್ಚಾರ್ಜ್ ಆಗಿ ಪ್ರಚಾರಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.

    ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದ ಹಿನ್ನೆಲೆ, ನವೆಂಬರ್ 3 ರಂದು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಸ್ಪರ್ಧಿಸಲಿದ್ದಾರೆ. ಈಗ ಜೆಡಿಎಸ್ ಪಕ್ಷ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ಮೊದಲು ಸತ್ಯನಾರಾಯಣ ಅವರ ಮಗ ಸತ್ಯ ಪ್ರಕಾಶ್‍ಗೆ ಟಿಕೆಟ್ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇಂದು ದೇವೇಗೌಡರು ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.

  • ಮುಖ್ಯಮಂತ್ರಿಯಾಗಲು ಕೇಂದ್ರದಿಂದ ಮೋದಿಯವರೇ ಆಫರ್ ನೀಡಿದ್ರು: ಹೆಚ್‍ಡಿಕೆ

    ಮುಖ್ಯಮಂತ್ರಿಯಾಗಲು ಕೇಂದ್ರದಿಂದ ಮೋದಿಯವರೇ ಆಫರ್ ನೀಡಿದ್ರು: ಹೆಚ್‍ಡಿಕೆ

    – ಕಾಂಗ್ರೆಸ್ಸಿನವರ ಸಹವಾಸ ಮಾಡಿದ್ದಕ್ಕೆ ಜನ ನನ್ನ ಒಪ್ಪಿಕೊಂಡಿಲ್ಲ
    – ಶಿರಾ ಜನ್ರು ನನ್ಗೆ ವಿಷ ಕೊಡ್ತಿರೋ ಹಾಲು ಕೊಡ್ತಿರೋ

    ತಮಕೂರು: ಬಿಜೆಪಿಯವರೂ ನನ್ನನ್ನು ಮುಖ್ಯಮಂತ್ರಿ ಮಾಡಲೂ ಮುಂದಾಗಿದ್ದರು ಕೇಂದ್ರದಿಂದ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಹೇಳಿದ್ದಾರೆ.

    ಇಂದು ತುಮಕೂರಿನ ಶಿರಾದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ಹೆಚ್‍ಡಿಕೆ, ಮೋದಿಯವರೇ ಮುಖ್ಯಮಂತ್ರಿಯಾಗಲು ನನಗೆ ಆಫರ್ ನೀಡಿ. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಆದರೆ ಕಾಂಗ್ರೆಸ್ಸಿನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಎಂದು ವಿಪಕ್ಷಗಳ ಮೇಲೆ ಕಿಡಿಕಾರಿದರು.

    ತಹಶೀಲ್ದಾರ್ ಗುರುಮೂರ್ತಿಗೆ ಯಲಹಂಕದಲ್ಲಿ ಪೋಸ್ಟಿಂಗ್ ಮಾಡುವಂತೆ ನಾನು ಸಿಎಂ ಆದಾಗ ಹೇಳಿದ್ದರು. 1 ಕೋಟಿ ರೂ. ಲಂಚ ಕೊಡುವ ಆಮಿಷ ಒಡಿದ್ದರು. ನಾನು ಒಪ್ಪಿಕೊಂಡಿರಲಿಲ್ಲ. ಇಂದು ಬಿಜೆಪಿ ಅವರು ಆತನಿಗೆ ಪೋಸ್ಟಿಂಗ್ ಕೊಟ್ಟಿದ್ದಾರೆ. ಬಿಜೆಪಿಗೆ ಒಂದೂವರೆ ಕೋಟಿ ಪೇಮೆಂಟ್ ಆಗಿದೆ. ಅಲ್ಲಿಯ ಶಾಸಕರಿಗೆ 50 ಲಕ್ಷ ರೂ. ಹಣ ಹೋಗಿದೆ. ಇಂಥಹ ತಹಶೀಲ್ದಾರನ ಅಮಾನತಿಗೆ ಈಗ ಶಿಪಾರಸ್ಸು ಮಾಡಲಾಗಿದೆ. ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ಲುತ್ತೇವೆ ಎಂದು ಬಂದಿದ್ದಾರೆ. ಲೂಟಿ ಸರ್ಕಾರದವರು ಶಿರಾ ಗೆಲ್ಲಲು ಮುಂದಾಗಿದ್ದಾರೆ ಎಂದು ಸಿಎಂ ಪುತ್ರ ವಿಜಯೇಂದ್ರಗೆ ಟಾಂಗ್ ನೀಡಿದರು.

    ಕೆಲ ಕಾರಣಗಳಿಂದ ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಬಹಳ ವೇಗದಲ್ಲಿ ಹೊರಟಿದೆ. ಸಭೆ ಸಮಾರಂಭ ಮಾಡಿದೆ. ಆದರೂ ಇದರಿಂದ ಕಾರ್ತಕರ್ತರು ಎದೆಗುಂದಬೇಕಿಲ್ಲ. ಈ ಕ್ಷೇತ್ರದ ಕಾಡುಗೊಲ್ಲರು ನನಗೆ ಸತ್ಕಾರ ನೀಡಿದ್ದಾರೆ. ನಾನು ಗ್ರಾಮ ವಾಸ್ತವ್ಯ ಮಾಡಿದ್ದು ಕಾಡುಗೊಲ್ಲರ ಮನೆಯಲ್ಲಿ ಎಂದು ಹೇಳುವ ಮೂಲಕ ಕಾಡುಗೊಲ್ಲರ ಮತ ಸೆಳೆಯುವಲ್ಲಿ ಕುಮಾರಸ್ವಾಮಿ ಗಮನಹರಿಸಿದರು.

    ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಅಂದುಕೊಂಡೆ. ಆದರೆ ಕಾಂಗ್ರೆಸ್ಸಿನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದರು. ಆಗ ದೇವೇಗೌಡರು ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ ಅಂದಿದ್ದರು. ಎಷ್ಟೇ ಹೇಳಿದರೂ ಕೇಳದೇ ನನಗೆ ಕಾಂಗ್ರೆಸ್ಸಿನವರೇ ಮುಖ್ಯಮಂತ್ರಿ ಪಟ್ಟ ಕಟ್ಟಿದರು. ನನಗೆ ಮುಖ್ಯಮಂತ್ರಿ ಆಗುವ ಆಸೆ ಇರಲಿಲ್ಲ ಎಂದು ಹೆಚ್‍ಡಿಕೆ ತಿಳಿಸಿದ್ದಾರೆ.

    ಕಾಂಗ್ರೆಸ್ಸಿನವರ ಸಹವಾಸ ಮಾಡಿದಕ್ಕೆ ಜನ ನನ್ನ ಒಪ್ಪಿಕೊಂಡಿಲ್ಲ. ಅಷ್ಟೇ ಯಾಕೆ ನನ್ನ ಕಾರ್ಯಕರ್ತರೇ ಒಪ್ಪಿಕೊಂಡಿಲ್ಲ. ಶಿರಾ ಜನರು ನನಗೆ ವಿಷ ಕೊಡುತ್ತಿರೋ ಅಥವಾ ಹಾಲು ಕೊಡುತ್ತಿರೋ ನಿಮಗೆ ಬಿಟ್ಟಿದ್ದು. ಇಲ್ಲಿಂದ ಹೊಸ ರಾಜಕೀಯ ಆರಂಭವಾಗಬೇಕು. ಸರ್ಕಾದಲ್ಲಿ ದುಡ್ಡಿಗೆ ತೊಂದರೆ ಇಲ್ಲ. ರಾಜ್ಯ ಸಂಪದ್ಭರಿತವಾಗಿದೆ ಎಂದು ಕುಮಾರಸ್ವಾಮಿಯವರು ತಿಳಿಸಿದ್ದಾರೆ.

  • ಶಿರಾದಲ್ಲಿ ಬಿಜೆಪಿ ಗೆಲುವಿನ ವಾತಾವರಣ ಕಂಡು ಬರ್ತಿದೆ: ನಳಿನ್

    ಶಿರಾದಲ್ಲಿ ಬಿಜೆಪಿ ಗೆಲುವಿನ ವಾತಾವರಣ ಕಂಡು ಬರ್ತಿದೆ: ನಳಿನ್

    ಬೆಳಗಾವಿ: ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಾತಾವರಣ ಕಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಇತ್ತೀಚೆಗೆ ನಿಧನರಾದ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮನೆಗೆ ಇಂದು ಭೇಟಿ ನೀಡಿರುವ ನಳಿನ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಎಲ್ಲವನ್ನೂ ಗಮನಿಸಿ ಯೋಚನೆ ಮಾಡಿಕೊಂಡು ತೀರ್ಮಾನ ತೆಗೆದುಕೊಳ್ಳುತ್ತದೆ. ನಾಲ್ಕೈದು ಹೆಸರುಗಳು ಕೇಳಿ ಬಂದಿದ್ದು, ಪರಿಶೀಲನೆ ಮಾಡುತ್ತಿದ್ದೇವೆ. ನಮ್ಮ ಕೆಲಸ ಕಾರ್ಯ ಆರಂಭವಾಗಿವೆ. ಶಿರಾದಲ್ಲಿ ಬಿಜೆಪಿ ಗೆಲುವಿನ ವಾತಾವರಣ ಕಂಡು ಬರುತ್ತಿದೆ. ಹತ್ತರಿಂದ ಹದಿನೈದು ದಿನಗಳಲ್ಲಿ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದರು.

    ಇದೇ ವೇಳೆ ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹೋರಾಟ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ. ರೈತರನ್ನ ಎತ್ತಿಕಟ್ಟಿ ರಾಷ್ಟ್ರದಲ್ಲಿ ಜನವಿರೋಧಿ ನೀತಿ ಅನುಸರಿಸುತ್ತಿದೆ. ರಾಜಕಾರಣಕ್ಕೋಸ್ಕರ ದ್ವೇಷ ಹುಟ್ಟಿಸುವ ಕೆಲಸ ಕಾಂಗ್ರೆಸ್ ಮಾಡ್ತಿದೆ ಎಂದು ಕಿಡಿಕಾರಿದರು.

    ಚುನಾವಣೆ ಪ್ರಣಾಳಿಕೆಯಲ್ಲೇ ಈ ಎಲ್ಲ ಕಾಯ್ದೆಗಳನ್ನ ತರಬೇಕು ಅಂತ ಹೇಳಿತ್ತು. ಅತ್ಯುತ್ತಮವಾಗಿರುವ ರೈತರ ಪರವಾಗಿರುವ ಕಾಯ್ದೆ ಇದು. ಹೋರಾಟ ಮಾಡುವವರ ಬೇಡಿಕೆ ರೈತರಿಗೆ ನೇರವಾಗಿರುವ ಮಾರುಕಟ್ಟೆ ಕೊಡಿ ಅಂತ ಇತ್ತು. ಅವರ ಬೇಡಿಕೆ ಅಂತೆ ಸರ್ಕಾರ ಕಾಯ್ದೆ ಮಾಡಿದೆ. ರೈತರಿಗೆ ಮನದಟ್ಟು ಮಾಡುವ ಕೆಲಸ ಪಕ್ಷದಿಂದ ಮಾಡುತ್ತೇವೆ ಎಂದರು.

    ಕಾಂಗ್ರೆಸ್ ಇದರ ಮಧ್ಯೆ ಬೆಂಕಿ ಹಾಕಿ ಬೆಳೆ ಬೇಯಿಸಿಕೊಳ್ಳುವ ಮಾಡದಿರಲಿ. ಕಾಂಗ್ರೆಸ್ ಅಧಿಕಾರ ಇಲ್ಲದಿದ್ದಾಗ ಬೆಂಕಿ ಹಾಕುವ ಕೆಲಸ, ಅಧಿಕಾರ ಇದ್ದಾಗ ಭ್ರಷ್ಟಾಚಾರ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಸುರೇಶ್ ಅಂಗಡಿ ಮನೆಗೆ ಭೇಟಿ ವೇಳೆ ನಳಿನ್ ಗೆ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಸ್ಥಳೀಯ ನಾಯಕರು ಸಾಥ್ ನೀಡಿದರು.

  • ಶಿರಾ ಉಪಚುನಾವಣೆ – ಟಿಬಿ ಜಯಚಂದ್ರ ಕೈ ಅಭ್ಯರ್ಥಿ

    ಶಿರಾ ಉಪಚುನಾವಣೆ – ಟಿಬಿ ಜಯಚಂದ್ರ ಕೈ ಅಭ್ಯರ್ಥಿ

    – ಕೊರೊನಾ ಮುಕ್ತರಾಗಿ ಕೆಪಿಸಿಸಿ ಕಚೇರಿಗೆ ಡಿಕೆಶಿ

    ಬೆಂಗಳೂರು; ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಂದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಶಿರಾ ಉಪಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ

    ಇಂದು ಶಿರಾ ಬೈ ಎಲೆಕ್ಷನ್ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜೊತೆ ಡಿಕೆಶಿ ಸಭೆ ಮಾಡಿದ್ದರು. ಈ ಸಭೆಯಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ, ಕೆ.ಎನ್ ರಾಜಣ್ಣ, ಷಡಾಕ್ಷರಿ, ಚಂದ್ರಪ್ಪ ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಟಿ.ಬಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನು ಓದಿ: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ದುಡ್ಡು ಕೊಡಬೇಕು: ಕೆ.ಎನ್.ರಾಜಣ್ಣ

    ಈ ವಿಚಾರವಾಗಿ ಮಾತನಾಡಿದ ಡಿಕೆಶಿ, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವತ್ವದಲ್ಲಿ ನಡೆಸುತ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡುತ್ತಾರೆ. ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಇರುತ್ತಾರೆ. ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

    ಇಂದು ಬೆಳಗ್ಗೆ ತಾನೇ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜಣ್ಣ, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತನಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ. ಪಕ್ಷ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಜೊತೆಗೆ ಚುನಾವಣೆಗಾಗಿ ದುಡ್ಡು ಕೂಡ ಕೊಡಬೇಕು ಎಂದು ಹೇಳಿದ್ದರು. ಆದರೆ ಸಭೆ ನಂತರ ಅಧ್ಯಕ್ಷರ ಅಭಿಪ್ರಾಯಕ್ಕೆ ನಾವೆಲ್ಲರೂ ಸಾಥ್ ನೀಡುತ್ತೇವೆ ಎಂದು ಉಲ್ಟಾ ಹೊಡೆದಿದ್ದಾರೆ.

  • ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ದುಡ್ಡು ಕೊಡಬೇಕು: ಕೆ.ಎನ್.ರಾಜಣ್ಣ

    ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ದುಡ್ಡು ಕೊಡಬೇಕು: ಕೆ.ಎನ್.ರಾಜಣ್ಣ

    – ಪಕ್ಷ ಟಿಕೆಟ್ ಕೊಟ್ಟರೆ ಆಗಲ್ಲ, ದುಡ್ಡು ಕೊಡಬೇಕು

    ತುಮಕೂರು: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ಅಭ್ಯರ್ಥಿಗಳು ದುಡ್ಡು ಕೊಡಬೇಕು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.

    ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದು ತಿಳಿಸಿದರು.

    ಬಿಹಾರ ಚುನಾವಣೆ ಸಂದರ್ಭದಲ್ಲಿ ಶಿರಾ ಉಪ ಚುನಾವಣೆ ನಡೆಯಬಹುದು ಎಂದು ಅಂದುಕೊಂಡಿದ್ದೇನೆ. ಅದಕ್ಕೂ ಮುಂಚೆಯೇ ನಡೆಯಬಹುದು ಹೇಳುವುದಕ್ಕೆ ಬರುವುದಿಲ್ಲ. ಟೆಕೆಟ್ ವಿಚಾರದಲ್ಲಿ ರಾಜ್ಯದ ಮುಖಂಡರು ಯಾವ ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಆಗಲ್ಲ. ಪಕ್ಷದಿಂದ ದುಡ್ಡು ಕೊಡಬೇಕು. ದುಡ್ಡು ಇಲ್ಲದೇ ಟಿಕೆಟ್ ತಗೊಂಡು ಏನ್ ಮಾಡಲಿ ಎಂದು ಕೆ.ಎನ್ ರಾಜಣ್ಣ ಪ್ರಶ್ನಿಸಿದರು.

    ನಂತರ ಯಾರು ದುಡ್ಡು ಕೊಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿರುವ ರಾಜಣ್ಣ, ಪಕ್ಷವೇ ನಮಗೆ ದುಡ್ಡುಕೊಡಬೇಕು. ಇದೇನು ದೇವೇಗೌಡರ ಪಕ್ಷಣ ಅಭ್ಯರ್ಥಿಗಳೇ ದುಡ್ಡು ಕೊಟ್ಟು ಬಿ-ಫಾರ್ಮ್ ಇಸ್ಕೊಂಡು ಬರೋಕೆ. ಇದು ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟ ಹಣವನ್ನು ಕೊಡಬೇಕು. ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲೂ ಅಭ್ಯರ್ಥಿಗಳು ದುಡ್ಡು ಕೊಡಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಟ್ಟು ಪಕ್ಷವೇ ಅಭ್ಯರ್ಥಿಗಳಿಗೆ ಹಣ ಕೊಡುತ್ತದೆ ಎಂದು ತಿಳಿಸಿದ್ದಾರೆ.