Tag: Shiroor sree

  • ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ

    ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ

    – ಶಿರೂರು ಬಗ್ಗೆ ಬಹಳ ಪ್ರೀತಿಯಿತ್ತು

    ಬೆಂಗಳೂರು: ಕೊಡಗು ಮತ್ತು ಕೇರಳ ರಾಜ್ಯಕ್ಕೆ ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ತಲಾ 10 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಅಂತ ಪೇಜಾವರ ವಿಶ್ವೇಶ ತೀರ್ಥ ಶ್ರೀ ಘೋಷಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಶೀಘ್ರದಲ್ಲೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಾಗುವುದು ಅಂದ ಅವರು, ಸರ್ಕಾರ ಹಾಗೂ ರಾಜಕಾರಣಿಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ರು. ಪರಿಸರ ಕಾಳಜಿ ಇಲ್ಲದ ಸರ್ಕಾರದ ನಿರ್ಲಕ್ಷ್ಯದಿಂದಾಗಿಯೇ ಕೇರಳ, ಕೊಡಗಿನಲ್ಲಿ ಇಂತಹ ಅನಾಹುತಗಳು ಆಗಿದೆ. ಈ ಬಗ್ಗೆ ವಿಜ್ಞಾನಿಗಳ ಜೊತೆ ಚರ್ಚೆ ನಡೆಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕೆಂದು ಸಲಹೆಯಿತ್ತರು.

    ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಉಡುಪಿಯ ಪಾಜಕದಲದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲಾಗ್ತಿದೆ. ಹುಬ್ಬಳ್ಳಿ, ರಾಯಚೂರು, ಕೊಪ್ಪಳ ವಿದ್ಯಾನಂದ ಗುರುಕುಲ ವಸತಿ ಶಾಲೆ ಕಾಲೇಜು ಆರಂಭಿಸಲಾಗುವುದು. ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಅಲ್ಲಿನ ಜನರ ಅಭಿಪ್ರಾಯ ಪಡೆಯಬೇಕು. ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ ಅಂದ್ರು.

    ಎತ್ತಿನ ಹೊಳೆ ಯೋಜನೆಯೇ ಕೊಡಗಿನ ಸ್ಥಿತಿಗೆ ಕಾರಣ ಅನ್ನುವ ಮಾತುಗಳು ಕೇಳಿ ಬರ್ತಿದೆ. ಈ ಬಗ್ಗೆ ನನಗೆ ಅಷ್ಟು ಗೊತ್ತಿಲ್ಲ, ನಾನು ವಿಜ್ಞಾನಿ ಅಲ್ಲ. ಎತ್ತಿನ ಹೊಳೆ ಯೋಜನೆಯಲ್ಲಿ ರಾಜಕೀಯ ಮಾಡಲಾಗ್ತಿದೆ. ನಾನು ಎತ್ತಿನ ಹೊಳೆ ಯೋಜನೆ ವಿರೋಧಿ ಅಲ್ಲ. ಎತ್ತಿನ ಹೊಳೆ ಯೋಜನೆ ಉತ್ತಮ ಯೋಜನೆಯಾಗಿದೆ. ಸರ್ಕಾರ ಪರಿಶೀಲಿಸಿ, ವಿಚಾರ ಮಾಡಿ ಯೋಜನೆ ಮುಂದುವರಿಸಿ. ನಾನು ಪರಿಸರ ಪ್ರೇಮಿ. ಎತ್ತಿನ ಹೊಳೆ ಯೋಜನೆ ಅನುಷ್ಠಾನದಲ್ಲಿ ವಿಜ್ಞಾನಿಗಳ ಜತೆ ಚರ್ಚಿಸಿ ಪರಿಶೀಲನೆ ನಡೆಸಿ, ಪಕ್ಷಾತೀತವಾಗಿ ಚರ್ಚೆ ನಡೆಸಿ, ನಂತರ ತೀರ್ಮಾನ ಕೈಗೊಳ್ಳಲಿ ಅಂತ ಹೇಳಿದ್ರು.

    ಸಮ್ಮಿಶ್ರ ಸರ್ಕಾರ ಕಾರ್ಯವೈಖರಿ ವಿಚಾರದ ಕುರಿತು ಮಾತನಾಡಿದ ಅವರು, ಸದ್ಯದ ರಾಜಕೀಯ ವಿದ್ಯಮಾನಗಳು ನನಗೆ ಬೇಸರ ತರಿಸಿದೆ. ಮೂರು ರಾಜಕೀಯ ಪಕ್ಷಗಳ ಬಗ್ಗೆ ಬೇಸರ ಇದೆ. ಒಬ್ಬರು ಮತ್ತೊಬ್ಬರನ್ನ ಟೀಕೆ ಮಾಡುವಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಮೂರು ಪಕ್ಷಗಳೂ ದ್ವೇಷ ಬಿಟ್ಟು ರಾಜ್ಯದ ಅಭಿವೃದ್ಧಿ ಕೈ ಜೋಡಿಸಲಿ ಎಂದು ಸಲಹೆ ನೀಡಿದ್ರು.

    ಶಿರೂರು ಬಗ್ಗೆ ಪ್ರೀತಿಯಿತ್ತು:
    ಶಿರೂರು ಶ್ರೀಗಳ ಬಗ್ಗೆ ಬಹಳ ಪ್ರೀತಿ ಇತ್ತು. ನಾನು ಮರಣೋತ್ತರ ದಲ್ಲಿ ಟೀಕೆ ಮಾಡಿದ್ದೆ ಎಂದು ಬಿಂಬಿಸಲಾಗಿತ್ತು. ನಾನು ಹಾಗೆ ಮಾತನಾಡಲಿಲ್ಲ. ಮದ್ಯ, ಮಾನಿನಿ ಸಹವಾಸ ಇದ್ದ ಕಾರಣ ಪಟ್ಟದ ದೇವರನ್ನ ಕೊಟ್ಟಿಲ್ಲ. ನನಗೆ ಶಿರೂರು ಶ್ರೀಗಳ ಮೇಲೆ ವೈಯುಕ್ತಿಕ ದ್ವೇಷ ಇಲ್ಲ. ಅವರಿಗೆ ಎಷ್ಟೋ ಸಲ ತೊಂದರೆ ಆದಾಗ ನಾನೇ ಅವರನ್ನ ಕಾಪಾಡಿದ್ದೇನೆ. ನನ್ನ ಮೇಲೆ ಅನೈತಿಕ ಆರೋಪ ಮಾಡಲಾಗ್ತಿದೆ. ಇದು ನನಗೆ ಬೇಸರ ತರಿಸಿದೆ. ಒಟ್ಟಿನಲ್ಲಿ ಸತ್ಯ ಏನು ಅನ್ನೋದು ಎಲ್ಲರಿಗೂ ಗೊತ್ತು. ನಾನು ನನ್ನ ಬಗ್ಗೆ ಕೇಳಿ ಬಂದಿರುವ ಆರೋಪದ ಬಗ್ಗೆ ಮಾತ್ರ ಪ್ರತಿಕ್ರಿಯೆ ನೀಡ್ತಿನಿ. ಶಿರೂರುವ ಶ್ರೀಗಳ ವಿಚಾರದಲ್ಲಿ ಮೊದಲಿನಿಂದಲೂ ಟೀಕೆ ಮಾಡ್ತಿದ್ದೆ. ಈಗಲೂ ಅದನ್ನೇ ಮಾಡ್ತಾ ಇದ್ದೀನಿ ಅಂತ ತಿಳಿಸಿದ್ರು.

    ಉತ್ತರ ಭಾರತದಲ್ಲಿ ಹಿಂದೂ ನ್ಯಾಯಾಲಯ ಆರಂಭಿಸುವ ವಿಚಾರದ ಕುರಿತು ಹೆಚ್ಚಿಗೆ ಮಾತನಾಡಲ್ಲ. ಗೋಕರ್ಣ ಮಠ ಸರ್ಕಾರ ಅಧೀನಕ್ಕೆ ಪಡೆಯುವ ವಿಚಾರದ ಕುರಿತೂ ಹೆಚ್ಚು ಮಾತನಾಡೋಲ್ಲ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಹು ಅಂಗಾಂಗ ವೈಫಲ್ಯದಿಂದ ಶಿರೂರು ಶ್ರೀ ಸಾವು?

    ಬಹು ಅಂಗಾಂಗ ವೈಫಲ್ಯದಿಂದ ಶಿರೂರು ಶ್ರೀ ಸಾವು?

    ಉಡುಪಿ: ಇಲ್ಲಿನ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯದ್ದು ಸಹಜ ಸಾವು ಎಂದು ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬಂದಿದೆ ಎನ್ನಲಾಗಿದೆ.

    ಶಿರೂರು ಸ್ವಾಮೀಜಿಯವರದ್ದು ಅನುಮನಾಸ್ಪದ ಸಾವು ಪ್ರಕರಣವಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದರು. ಈ ಎರಡೂ ವರದಿಗಳನ್ನು ಹೋಲಿಕೆ ಮಾಡಿ ಅಂತಿಮ ವರದಿಯನ್ನು ಕೆಎಂಸಿ ವೈದ್ಯರು ನೀಡಲಿದ್ದಾರೆ. ಮರಣೋತ್ತರ ಪರೀಕ್ಷೆ ಅಂತಿಮ ವರದಿ ಎಫ್.ಎಸ್.ಎಲ್ ಇಂದು ಅಥವಾ ನಾಳೆ ಬರುವ ಸಾಧ್ಯತೆಯಿದೆ.

    ಮರಣೋತ್ತರ ವರದಿಯಲ್ಲಿ ಸಹಜ ಸಾವು ಎಂಬ ಉಲ್ಲೇಖವಿದೆ ಎನ್ನಲಾಗಿದೆ. ಶ್ರೀಗಳ ದೇಹದಲ್ಲಿ ವಿಷದ ಅಂಶವಿಲ್ಲ ಎಂಬ ವರದಿ ಪೊಲೀಸರ ಕೈಸೇರಿರುವ ಸಾಧ್ಯತೆ ಇದೆ. ಎರಡು ವರದಿ ಬಂದ ಬಳಿಕ ಸ್ವಾಮೀಜಿ ಸಾವಿಗೆ ಕಾರಣವನ್ನು ಮಣಿಪಾಲ ವೈದ್ಯರು ಪೊಲೀಸರಿಗೆ ವಿವರಿಸಲಿದ್ದಾರೆ.

    ಜುಲೈ 19ರಂದು ಸಾವನಪ್ಪಿದ್ದ ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಹೊಟ್ಟೆಯಲ್ಲಿ ವಿಷಕಾರಿ ಅಂಶ ಸಿಕ್ಕಿದೆ ಅಂತ ಕೆಎಂಸಿ ವೈದ್ಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಬಹುಅಂಗಾಂಗ ವೈಫಲ್ಯದಿಂದ ಸ್ವಾಮೀಜಿ ಸಾವನ್ನಪ್ಪಿದ್ದಾರೆ ಎಂದೂ ವೈದ್ಯರು ಹೇಳಿದ್ದರು. ಈ ಹೇಳಿಕೆ ನಂತರ ಸ್ವಾಮೀಜಿ ಸಾವು ಸಾಕಷ್ಟು ಚರ್ಚೆಗಳಿಗೆ, ಅನುಮಾನಗಳಿಗೆ ಕಾರಣವಾಗಿತ್ತು. ಪೊಲೀಸರಿಗೆ ತನಿಖೆ ಕೂಡಾ ಬಹಳ ಸವಾಲಿನದ್ದಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಉಡುಪಿ: ಶಿರೂರು ಸ್ವಾಮೀಜಿ ಅವರು ತುಳುವಿನಲ್ಲಿ ಮಾತನಾಡಿರುವ ವಾಟ್ಸಪ್ ವಾಯ್ಸ್ ನೋಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಜ್ಜರಿಗೆ ಒಂದು ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್ ಆಗುತ್ತೆ. 50 ಲಕ್ಷ ಪಲಿಮಾರು ಸ್ವಾಮೀಜಿಗೆ. 50 ಲಕ್ಷ ಅವರಿಗೆ ಕೊಡಬೇಕಂತೆ ಎಂದು ಮಾತನಾಡಿದ್ದಾರೆ. ಸೋದೆ ಸ್ವಾಮೀಜಿ ವಿಶ್ವವಲ್ಲಭ ತೀರ್ಥಶ್ರಿಗಳ ಹೆಸರು ಪ್ರಸ್ತಾಪ ಮಾಡಿದ್ದಾರೆ.

    ಅವರ ಎಂಟು ಸಾವಿರ ಭಕ್ತರಿಂದ ಪ್ರತಿ ಮನೆಯಿಂದ ಒಂದು ಪವನ್ ಚಿನ್ನ ಒಟ್ಟುಗೂಡಿಸ್ತಾರಂತೆ. ಆದ್ರೆ ಆಡಿಯೋದಲ್ಲಿ ಯಾವುದೂ ಸ್ಪಷ್ಟ ಮಾಹಿತಿ ಇಲ್ಲ. ಯಾವ ಸಂದರ್ಭದಲ್ಲಿ ಯಾರಿಗೆ ಈ ಆಡಿಯೋ ಕಳುಹಿಸಿದ್ದಾರೋ ಎಂಬ ಬಗ್ಗೆ ಮಾಹಿತಿಯಿಲ್ಲ.

    ಪಟ್ಟದ ದೇವರನ್ನು ಮರಳಿ ನೀಡುವ ವಿಚಾರದಲ್ಲಿ ವ್ಯವಹಾರ ಮಾತುಕತೆ ನಡೆದಿತ್ತಾ? ಅಥವಾ ಯಾವುದೊ ಮಹತ್ವದ ಯೋಜನೆಗೆ ಹಣ ಸಂಗ್ರಹಿಸುವ ಬಗ್ಗೆ ನಡೆದ ಮಾತುಕತೆಯೋ ಸ್ಪಷ್ಟವಾಗಿಲ್ಲ. ಆಡಿಯೊದ ಮೂಲ ತನಿಖೆ ಮಾಡಿದ್ರೆ ಸಾಕಷ್ಟು ವಿಚಾರ ಬೆಳಕಿಗೆ ಬರುವ ಸಾಧ್ಯತೆ ಇದೆ.

    ಶಿರೂರು ಶ್ರೀ ವಾಟ್ಸಾಪ್ ವಾಯ್ಸ್ ನೋಟ್:

    ಆಗ ನೋಡಿದೆ ನಿನ್ನ ವಾಟ್ಸಪ್…
    ಭಾರಿ ಖುಷಿ ಆಯ್ತು.
    ಅಜ್ಜರದ್ದು ಒಂದು ಡಿಮ್ಯಾಂಡ್ ಉಂಟು ಮಾರಾಯಾ.
    ಅವರಿಗೆ ಒಂದು ಕೋಟಿ ಕೊಡಬೇಕಂತೆ.
    ಐವತ್ತು ಲಕ್ಷ ಪಲಿಮಾರು ಸ್ವಾಮೀಜಿಗೆ ಕೊಡಬೇಕಂತೆ.
    ಐವತ್ತು ಲಕ್ಷ ಅವರಿಗೆ (ಪೇಜಾವರ?) ಬೇಕಂತೆ.
    ಆಮೇಲೆ ಈ ಮ್ಯಾಟರ್ ಫಿನೀಷ್ ಅಂತೆ.

    ಆಮೇಲೆ ಏನೂಂತ ಅಂದ್ರೆ… ಕರ್ನಾಟಕದಲ್ಲಿ ಸೋದೆ ಮಠದ ಶಿಷ್ಯಂದಿರ ಒಟ್ಟು ಎಂಟು ಸಾವಿರ ಮನೆ ಉಂಟಂತೆ. ಎಂಟು ಸಾವಿರ ಮನೆಗೆ ಒಂದೊಂದು ಮನೆಯಿಂದ ಒಂದೊಂದು ಪವನ್ ಚಿನ್ನ ವ್ಯವಸ್ಥೆ ಮಾಡಿ ಕೊಡುತ್ತೇನೆ ಅಂತ ಹೇಳಿದ್ದಾನೆ. ವಿಶ್ವವಲ್ಲಭ (ಸೋದೆ ಮಠಾಧೀಶರು) ಹೇಳಿದ್ದಾನೆ. ಅದನ್ನು ಇವರು ಬೇಡುತ್ತಿದ್ದಾರೆ.

    ವಿಷಯ ಇವತ್ತು ಬೆಳಗ್ಗೆ ಗೊತ್ತಾಯ್ತು. ಇಷ್ಟೇ ವಿಷಯ, ಎಲ್ಲರಿಗೂ ತಿಳಿಸು ಆಯ್ತಾ ಅಂತ ಹೇಳಿದ್ದಾರೆ.