Tag: Shiruru Landslide

  • ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆ-ತಾಯಿ ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ ಭಾಗ್ಯ

    ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆ-ತಾಯಿ ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ ಭಾಗ್ಯ

    – ಯುವತಿಗೆ ನೇಮಕಾತಿ ಪತ್ರ ನೀಡಿದ ಹೆಚ್.ಡಿ.ಕುಮಾರಸ್ವಾಮಿ

    ಮಂಡ್ಯ: ಕಾರವಾರದ ಶಿರೂರು ಗುಡ್ಡ ಕುಸಿತದಲ್ಲಿ (Shiruru Landslide) ಹೆತ್ತವರನ್ನು ಕಳೆದುಕೊಂಡು ಅನಾಥಳಾಗಿದ್ದ ಯುವತಿಗೆ ಮಂಡ್ಯದ ಉದ್ಯೋಗ ಮೇಳದಲ್ಲಿ ಉದ್ಯೋಗ ಭಾಗ್ಯ ಲಭಿಸಿದೆ. ಯುವತಿಗೆ ನೇಮಕಾತಿ ಪತ್ರ ನೀಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅಭಿನಂದಿಸಿದ್ದಾರೆ.

    ಮಂಡ್ಯ ಟೂ ಇಂಡಿಯಾ (Mandya To India) ಘೋಷದೊಂದಿದೆ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಮಂಡ್ಯದಲ್ಲಿ ನಡೆಯಿತು. ಎರಡನೇ ದಿನವೂ ಉದ್ಯೋಗ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತು. ಇದನ್ನೂ ಓದಿ: 2028ರ ವರೆಗೆ ಈ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಸಿಎಂ: ಹೆಚ್‌ಡಿಕೆ

    ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆ-ತಾಯಿ ಕಳೆದುಕೊಂಡ ಯುವತಿಯೂ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದರು. ಮೃತ ಹೋಟಲ್ ಮಾಲೀಕನ ಪುತ್ರಿ ಕೃತಿಗೆ ಬಿಹೆಚ್‌ಇಎಲ್‌ನಲ್ಲಿ ಉದ್ಯೋಗ ಲಭಿಸಿತು. ಆಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ನೇಮಕಾತಿ ಪತ್ರ ನೀಡಿದರು.

    ಉದ್ಯೋಗ ಮೇಳದಲ್ಲಿ ನವ್ಯ ಹಾಗೂ ನಂದಿತ ಎಂಬ ಅವಳಿ ಸಹೋದರಿಯರಿಗೂ ಉದ್ಯೋಗ ಸಿಕ್ಕಿತು. ಟಾಟಾ ಮೋಟಾರ್ಸ್ನಲ್ಲಿ ಸಹೋದರಿಯರು ಉದ್ಯೋಗಕ್ಕೆ ನೇಮಕಗೊಂಡರು. ಇದನ್ನೂ ಓದಿ: ʻಮಂಡ್ಯ To ಇಂಡಿಯಾʼ – ಮಂಡ್ಯದಲ್ಲಿ ಇಂದಿನಿಂದ 2 ದಿನ ಬೃಹತ್ ಉದ್ಯೋಗ ಮೇಳ

    ಸಾವಿರಾರು ಮಂದಿ ಯುವಕ-ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದರು. ಉದ್ಯೋಗಕ್ಕೆ ಆಯ್ಕೆ ಆದವರಿಗೆ ಕುಮಾರಸ್ವಾಮಿ ಅವರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು.

  • ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

    ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

    ಕಾರವಾರ: ಶಿರೂರು ಭೂ ಕುಸಿತ ದುರಂತದ (Shiruru LandSlide) ಹಿನ್ನೆಲೆ ನಡೆಯುತ್ತಿದ್ದ ಮೂರನೇ ಹಂತದ ಡ್ರಜ್ಜಿಂಗ್ ಕಾರ್ಯಾಚರಣೆಯನ್ನು (Dregding Operation) ಸ್ಥಗಿತಮಾಡಲಾಗಿದೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲದ (Ankola) ಶಿರೂರು ಭೂ ಕುಸಿತದ ಹಿನ್ನೆಲೆ ಮೂರನೇ ಹಂತದ ಕಾರ್ಯಾಚರಣೆಯು ನಡೆಯುತ್ತಿತ್ತು. 13 ದಿನ ಪೂರೈಸಿದ ಡ್ರಜ್ಜಿಂಗ್ ಬೋಟ್ ಮೂಲಕ ನಡೆಯುತ್ತಿದ್ದ ಕಾರ್ಯಾಚರಣೆಯನ್ನು ಇಂದು ಸ್ಥಗಿತಮಾಡಲಾಗಿದೆ.ಇದನ್ನೂ ಓದಿ: ಒಳಮೀಸಲಾತಿಗೆ ಆಗ್ರಹಿಸಿ ರಾಯಚೂರು ಬಂದ್: ಬಸ್ ಸಂಚಾರ ಸಂಪೂರ್ಣ ಸ್ಥಗಿತ

    ಕಳೆದ 13 ದಿನದಿಂದ ಅಂಕೋಲದ ಗಂಗಾವಳಿ ನದಿಯಲ್ಲಿ ಓಷಿಯನ್ ಕಂಪನಿ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿತ್ತು. 90 ಲಕ್ಷದ ಮೊತ್ತದಲ್ಲಿ 13 ದಿನ ಕಾರ್ಯಾಚರಣೆ ಪೂರ್ಣಗೊಂಡಿದೆ. 13 ದಿನದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಶವ ಹಾಗೂ ಲಾರಿ ಹೊರತೆಗೆದಿದ್ದು, ನಂತರ ಮನುಷ್ಯನ ಮೂಳೆಗಳು ಹಾಗೂ ಕೆಲವು ವಸ್ತುಗಳನ್ನು ಸಹ ಹೊರತೆಗೆಯಲಾಗಿದೆ.

    ಇದಾದ ಬಳಿಕ ಗಂಗಾವಳಿ ನದಿಯಲ್ಲಿ ಬಿದ್ದಿದ್ದ ಬೃಹತ್ ಆಲದ ಮರ ಹೊರತೆಗೆಯಲಾಗಿತ್ತು. ಆದರೆ ಇದೀಗ ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ. ಇದರ ಬದಲಿಗೆ ಇಂದಿನಿಂದ ಇಬ್ಬರು ಮುಳುಗು ತಜ್ಞರು ಹಾಗೂ ಪೋಕ್ ಲೈನ್ ಮೂಲಕ ಹೋಟೆಲ್ ಕುಸಿದುಹೋದ ಸ್ಥಳದಲ್ಲಿ ನಿಗದಿ ಮಾಡಿದ ಎರಡನೇ ಪಾಯಂಟ್‌ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಭೂಕುಸಿತ ದುರಂತದಲ್ಲಿ ಸತತ 77 ದಿನದ ದೀರ್ಘ ಕಾರ್ಯಾಚರಣೆ ಇದಾಗಿದ್ದು, ಒಟ್ಟು ಮೂರು ಹಂತದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಸಿಕ್ಕ ಮೂಳೆಗಳ ಡಿ.ಎನ್.ಎ ವರದಿ ಬರಬೇಕಿದ್ದು, ಕಾಣೆಯಾದ ಜಗನ್ನಾಥ್, ಲೋಕೇಶ್ ಶವ ಶೋಧ ನಡೆಯಬೇಕಿದೆ.ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು

  • ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಶವಗಳಿಗೆ ಶೋಧ – ಕಾರವಾರ ಬಂದರಿಗೆ ಡ್ರಜ್ಜಿಂಗ್ ಬೋಟ್!

    ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಶವಗಳಿಗೆ ಶೋಧ – ಕಾರವಾರ ಬಂದರಿಗೆ ಡ್ರಜ್ಜಿಂಗ್ ಬೋಟ್!

    – 90 ಲಕ್ಷ ರೂ. ವೆಚ್ಚದಲ್ಲಿ ಕಾಣೆಯಾದವರ ಶೋಧ ಕಾರ್ಯ

    ಕಾರವಾರ: ಜುಲೈ ತಿಂಗಳಿನಲ್ಲಿ ಸಂಭವಿಸಿದ್ದ ಶಿರೂರು ಭೂಕುಸಿತ ದುರಂತದ (Shiruru LandSlide) ಹಿನ್ನಲೆ ಇದೀಗ ಮತ್ತೆ ಶವಗಳ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾದ (Ankola) ಶಿರೂರಿನಲ್ಲಿ (Shiruru) ಜುಲೈ 16ರಂದು ಭೂಕುಸಿತವಾಗಿ 11 ಜನ ಮೃತಪಟ್ಟಿದ್ದು, 8 ಜನರ ಶವ ಶೋಧ ಮಾಡಲಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಮೃತದೇಹಗಳು ದೊರೆಯದೇ ಮುಳುಗು ತಜ್ಞರು ಶೋಧ ನಡೆಸಿದರೂ ಮಳೆಯ ಕಾರಣ ಯತ್ನಗಳು ವಿಫಲವಾಗಿದ್ದವು. ಹೀಗಾಗಿ ಜುಲೈ 28 ರಂದು ಕಾರ್ಯಾಚರಣೆ ಸ್ಥಗಿತ ಮಾಡಲಾಗಿತ್ತು. ಇದರ ನಂತರ ಶೋಧಕ್ಕೆ ಪ್ರಯತ್ನ ನಡೆಸಿದರೂ ಗಂಗಾವಳಿ ನದಿಯಲ್ಲಿ ಮಳೆಯಿಂದ ನೀರು ಹೆಚ್ಚಾದ ಪರಿಣಾಮ ಮುಳುಗು ತಜ್ಞರು ಸಹ ಕೈಚೆಲ್ಲಿ ಕೂರುವಂತಾಗಿತ್ತು.ಇದನ್ನೂ ಓದಿ: ಪೇಜರ್‌ ಆಯ್ತು ಈಗ ಹಿಜ್ಬುಲ್ಲಾ ಘಟಕಗಳಲ್ಲಿ ವಾಕಿಟಾಕಿಗಳ ಸ್ಫೋಟ – 14 ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ

    ಈ ಹಿನ್ನೆಲೆಯಲ್ಲಿ ಗೋವಾದ ಅಭಿಷೇನಿಯ ಓಷನ್ ಸರ್ವಿಸಸ್ ಕಂಪನಿಗೆ 90 ಲಕ್ಷದ ಟೆಂಡರ್ ನೀಡಿ ಇದೀಗ ಕಾರವಾರಕ್ಕೆ ಡ್ರಜ್ಜಿಂಗ್ ಬೋಟ್ (Dredging Boat) ತರಿಸಲಾಗಿದ್ದು, ಶುಕ್ರವಾರದಿಂದ ಕಾರ್ಯಾಚರಣೆ ನಡೆಸಲಿದೆ.

    ಇನ್ನೂ ಹೆದ್ದಾರಿ ಪ್ರಾಧಿಕಾರ, ಶಾಸಕರ ನಿಧಿ ಹಾಗೂ ದಾನಿಗಳ ಸಹಾಯದಿಂದ 90 ಲಕ್ಷ ಹಣ ಒದಗಿಸಲಾಗಿದ್ದು, ಮುಂಗಡವಾಗಿ ಡ್ರಜ್ಜಿಂಗ್ ಬೋಟ್‌ಗೆ 40 ಲಕ್ಷ ರೂ. ಹಣ ಸಂದಾಯ ಮಾಡಲಾಗಿದೆ. ಈ ಮೊದಲು ಶವ ಶೋಧದ ನಂತರ ಗಂಗಾವಳಿ ನದಿಯಲ್ಲಿ ಭೂ ಕುಸಿತದಿಂದ ಉಂಟಾದ ಗುಡ್ಡದ ಮಣ್ಣನ್ನು ತೆರವು ಮಾಡುವುದಾಗಿ ಕಾರವಾರದ ಶಾಸಕ ಸತೀಶ್ ಸೈಲ್ ತಿಳಿಸಿದ್ದರು. ಕಾರವಾರದ ಬಂದರಿನಿಂದ ಗಂಗಾವಳಿ ನದಿಯವರೆಗೆ ಸಮುದ್ರದ ಮೂಲಕ ಡ್ರಜ್ಜಿಂಗ್ ಬೋಟ್ ಕೊಂಡೊಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

    ಸದ್ಯ ಅಬ್ಬರದ ಮಳೆ ನಿಂತಿದೆ. ಈಗಾಗಲೇ ಭೂ ಕುಸಿತದಿಂದ ಹಾನಿಯಾಗಿರುವ ಪ್ರದೇಶದ ಮಣ್ಣು ತೆರವಿಗೆ ಕೋಟಿಗಟ್ಟಲೇ ಹಣ ವ್ಯಯಿಸಲಾಗಿದೆ. ಜೊತೆಗೆ ದೆಹಲಿಯಿಂದ ಬಂದ ಕ್ವಿಕ್ ಸೆಕ್ಯುರಿಟಿ ಸರ್ವಿಸ್ ಸೆಲ್ಯೂಷನ್‌ನ ದ್ರೋಣ್ ವಿಶೇಷ ತಂಡಕ್ಕೆ ಲಕ್ಷಗಟ್ಟಲೆ ಹಣ ನೀಡಬೇಕಿದ್ದು, ಇದೀಗ ಹಣದ ಕೊರತೆಯಿದ್ದರೂ ದಾನಿಗಳು, ಶಾಸಕರ ನಿಧಿಯ ಹಣ ಬಳಸಿ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.

  • ಶಿರೂರು ಗುಡ್ಡ ಕುಸಿತ – ಸಂತ್ರಸ್ತರಿಗೆ ಮರೀಚಿಕೆಯಾಗಿಯೇ ಉಳಿದ ಉದ್ಯೋಗದ ಭರವಸೆ

    ಶಿರೂರು ಗುಡ್ಡ ಕುಸಿತ – ಸಂತ್ರಸ್ತರಿಗೆ ಮರೀಚಿಕೆಯಾಗಿಯೇ ಉಳಿದ ಉದ್ಯೋಗದ ಭರವಸೆ

    ಕಾರವಾರ: ಅಂಕೋಲದ ಶಿರೂರಿನಲ್ಲಿ ಭೂಕುಸಿತವಾಗಿ (Shiruru Landslide) ಒಂದು ತಿಂಗಳು ಕಳೆದಿದೆ. ಆದರೆ ಸಂತ್ರಸ್ತರಿಗೆ ಸರ್ಕಾರ ನೀಡಿದ್ದ ಭರವಸೆ ಹುಸಿಯಾಗಿಯೇ ಉಳಿದಿದೆ. ಇದರಿಂದ ಸಂತ್ರಸ್ತ ಕುಟುಂಬಗಳು ಸಂಕಷ್ಟದಲ್ಲೇ ದಿನ ಕಳೆಯುವಂತಾಗಿದೆ.

    ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಹಾಗೂ ಜಗನ್ನಾಥ ಕುಟುಂಬದ ಇಬ್ಬರು ಮಕ್ಕಳಿಗೆ ತಹಶೀಲ್ದಾರ್ ಕಚೇರಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡುವುದಾಗಿ ಖುದ್ದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಭರವಸೆ ನೀಡಿದ್ದರು. ಇದೀಗ ಕೆಲಸ ಕೇಳಿ ಹೋದ ಜಗನ್ನಾಥ್ ಮಕ್ಕಳಿಗೆ, ಕೆಲಸ ಸದ್ಯ ಕಾಲಿ ಇಲ್ಲ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

    ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಕೊಟ್ಟ ಭರವಸೆಯೂ ಹುಸಿಯಾಗಿದೆ. ಇತ್ತ ಮನೆ ಕಳೆದುಕೊಂಡವರ ಕಷ್ಟ ಕೇಳುವವರೇ ಇಲ್ಲದಂತಾಗಿದೆ ಎಂದು ಸಂತ್ರಸ್ತರ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

    ಜುಲೈ 16 ರಂದು ಶಿರೂರಿನಲ್ಲಿ ಗುಡ್ಡ ಕುಸಿತವಾಗಿತ್ತು. ಈ ದುರಂತದಲ್ಲಿ 11 ಜನ ಮೃತಪಟ್ಟಿದ್ದರು. ಇನ್ನೂ ಈ ದುರಂತದಿಂದ ಉಳುವೆರೆ ಗ್ರಾಮದಲ್ಲಿ ಆರು ಮನೆಗಳು ಸಂಪೂರ್ಣ ನಾಶವಾಗಿದ್ದವು.

  • ಶಿರೂರು ಭೂಕುಸಿತ – ತಿಂಗಳು ಕಳೆದರೂ ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ ಕಾರ್ಯ

    ಶಿರೂರು ಭೂಕುಸಿತ – ತಿಂಗಳು ಕಳೆದರೂ ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ ಕಾರ್ಯ

    ಕಾರವಾರ: ಶಿರೂರಿನಲ್ಲಿ ಭೂಕುಸಿತವಾಗಿ (Shiruru Landslide) ಒಂದು ತಿಂಗಳು ಕಳೆದಿದ್ದು, ಶುಕ್ರವಾರ ಸಹ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಕಾಣೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

    ಘಟ್ಟ ಪ್ರದೇಶದಲ್ಲಿ ಮಳೆಯಿಂದ ನದಿ ನೀರು ಮಣ್ಣು ಮಿಶ್ರಿತವಾಗಿದೆ. ಇದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಗಂಗಾವಳಿ ನದಿಯಲ್ಲಿ ಬಿದ್ದಿರುವ ಎರಡು ಆಲದ ಮರವನ್ನು ಹೊರೆತೆಗೆಯಲು ನೌಕಾದಳ (Indian Navy) ಸಿದ್ಧತೆ ಮಾಡಿಕೊಂಡಿದೆ. ಕಾರ್ಯಾಚರಣೆಯಲ್ಲಿ NDRF ಹಾಗೂ SDRF ತಂಡ ಸಹ ಭಾಗಿಯಾಗಿದೆ.

    ಇಂದು ಏನೆಲ್ಲಾ ಕಾರ್ಯಾಚರಣೆ?
    ಬೆಳಗ್ಗಿನಿಂದ ಮೊದಲು ಶವ ಶೋಧಕ್ಕಾಗಿ ಕಾರ್ಯಾಚರಣೆ ಮಾಡಲಾಯಿತು. ಆದರೇ ಯಲ್ಲಾಪುರ ಭಾಗದಲ್ಲಿ ಮಳೆಯಿಂದ ಗಂಗಾವಳಿ ನದಿ ನೀರು ಮಣ್ಣು ಮಿಶ್ರಣವಾಗಿ ಕೆಂಪಾಗಿದೆ. ಹೀಗಾಗಿ ಶವ ಶೋಧಕ್ಕೆ ಅಡ್ಡಿಯಾಗಿದೆ. ನದಿ ನೀರಿನ ಪ್ರಮಾಣ ಕಮ್ಮಿ ಇದ್ದು ಈ ಕಾರಣ ಗಂಗಾವಳಿ ನದಿಯಲ್ಲಿ ಬಿದ್ದಿರುವ ಎರಡು ಆಲದ ಮರವನ್ನು ಮೇಲೆತ್ತಲು ರೋಪ್ ಅಳವಡಿಸಿ ಕ್ರೇನ್ ಮೂಲಕ ಎಳೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಈಶ್ವರ್ ಮಲ್ಪೆ ತಂಡ ನೀರಿನಲ್ಲಿ ಮುಳುಗಿರುವ ಲಾರಿಗೆ ರೋಪ್ ಕಟ್ಟಿ ಮೇಲೆತ್ತಲು ವ್ಯವಸ್ಥೆ ಮಾಡುತ್ತಿದ್ದಾರೆ.

    ಜೊತೆಗೆ ಭೂ ಕುಸಿತವಾದ ಪ್ರದೇಶದಲ್ಲಿ ಇದ್ದ ಅಂಗಡಿ ಬಳಿ ಮೆಟಲ್ ಡಿಟೆಕ್ಟರ್ ಮೂಲಕ ಹುಡುಕಾಟ ಮಾಡಲಾಗುತ್ತಿದೆ. ಜೊತೆಗೆ ಇದೇ ಭಾಗದಲ್ಲಿ ಹೆಸ್ಕಾಂನಿಂದ ವಿದ್ಯುತ್ ತಂತಿ ಹಾಗೂ ಕಂಬ ಅಳವಡಿಸುವ ಕಾರ್ಯ ನಡೆಯುತ್ತಿದೆ.

    ನದಿ ತೀರದ ಪ್ರದೇಶದಲ್ಲಿ ಎರಡು ಭಾಗಗಳಲ್ಲಿ ಮೆಟಲ್ ಡಿಟೆಕ್ಟರ್‌ ಅಳವಡಿಸಲಾಗಿದ್ದು, ರೆಡಾರ್ ಮೂಲಕ ನದಿ ಭಾಗದಲ್ಲಿ ಹುಡುಕಾಟ ಮಾಡಲಾಗುತ್ತಿದೆ. ಎರಡು ಭಾಗದಲ್ಲಿ ಭಾರವಾದ ಕಬ್ಬಿಣದ ವಸ್ತುಗಳು ಇರುವುದು ಪತ್ತೆಯಾಗಿದೆ. ಕಾರ್ಯಾಚರಣೆ ನಡೆಸಿ ಇದನ್ನೂ ತೆಗೆಯಲು ರಕ್ಷಣಾ ತಂಡ ಮುಂದಾಗಿದೆ.