Tag: shiruru math

  • ಉತ್ತರಾಯಣ ನಂತರ ಶೀರೂರು ಮಠಕ್ಕೆ ಉತ್ತರಾಧಿಕಾರಿ: ವಿಶ್ವವಲ್ಲಭ ಸ್ವಾಮೀಜಿ ಘೋಷಣೆ

    ಉತ್ತರಾಯಣ ನಂತರ ಶೀರೂರು ಮಠಕ್ಕೆ ಉತ್ತರಾಧಿಕಾರಿ: ವಿಶ್ವವಲ್ಲಭ ಸ್ವಾಮೀಜಿ ಘೋಷಣೆ

    ಉಡುಪಿ: ಜಿಲ್ಲೆಯ ಶಿರೂರು ಮಠಕ್ಕೆ ಉತ್ತರಾಯಣ ನಂತರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.

    ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಶಿರೂರು ಮಠಕ್ಕೆ ಉತ್ತರಾಧಿಕಾರಿ ಯಾರು ಎಂಬ ನಿರೀಕ್ಷೆ ಎಲ್ಲರಲ್ಲಿತ್ತು. ಉತ್ತರಾಧಿಕಾರಿ ಉತ್ತರಾಯಣ ನಂತರ ಆಗಲಿದೆ. ಯೋಗ್ಯ ವಟುವನ್ನು ಆಯ್ಕೆ ಮಾಡಲಾಗಿದೆ. ಆ ವಟುವಿಗೆ ಈಗ ತರಬೇತಿ ನಡೆಯುತ್ತಿದೆ. ಮುಂದಿನ ವರ್ಷದ ಉತ್ತರಾಯಣದಲ್ಲಿ ಅವರಿಗೆ ಪಟ್ಟಾಭಿಷೇಕ ನಡೆಯಲಿದೆ ಎಂದರು.

    ಶಿರೂರು ಮಠದ ಭಕ್ತರ ಸಹಕಾರದಿಂದ, ಅಷ್ಟ ಮಠದ ಹಿರಿಯ ಯತಿಗಳ ಸಹಕಾರ, ಪ್ರೋತ್ಸಾಹದಿಂದ ಶೀರೂರು ಮಠ ಉತ್ತಮ ಸ್ಥಿತಿಯಲ್ಲಿ ಮುನ್ನಡೆಯಬೇಕು ಎಂಬೂದು ದೇವರಲ್ಲಿ ಪ್ರಾರ್ಥನೆ. ಉತ್ತರಾಧಿಕಾರಿ ಯಾರು ಎಂದು ಮುಂದಿನ ದಿನಗಳಲ್ಲಿ ಘೋಷಣೆ ಮಾಡುತ್ತೇನೆ. ಈಗಲೇ ಘೋಷಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

    ಲಕ್ಷ್ಮೀವರ ತೀರ್ಥರ ನಿಧನಾ ನಂತರ ತೆರವಾಗಿದ್ದ ಪೀಠ, ಜುಲೈ 19, 2018ರಿಂದ ಖಾಲಿಯಾಗಿತ್ತು. ಶೀರೂರು ಮಠದ ಆರ್ಥಿಕ ಸಂಕಷ್ಟಗಳಿಗೂ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಮಠದ ತೆರಿಗೆ ಬಾಕಿ, ಕಟ್ಟಡ ವಿವಾದ ಇತ್ಯರ್ಥ ಆಗುವ ಭರವಸೆ ಇದೆ ಎಂದು ಸೋದೆ ಮಠಾಧೀಶ ವಿಶ್ವವಲ್ಲಭ ತೀರ್ಥರು ಹೇಳಿದ್ದಾರೆ.

  • ಶಿರೂರು ಪಟ್ಟದ ದೇವರು ಸೋದೆ ಮಠಕ್ಕೆ ಹಸ್ತಾಂತರ

    ಶಿರೂರು ಪಟ್ಟದ ದೇವರು ಸೋದೆ ಮಠಕ್ಕೆ ಹಸ್ತಾಂತರ

    ಉಡುಪಿ: ಪಟ್ಟದ ದೇವರಾದ ವಿಠ್ಠಲ ದೇವರ ವಿಗ್ರಹವನ್ನು ಇಂದು ಕೃಷ್ಣಮಠದಿಂದ ಶಿರೂರು ಮಠದ ದ್ವಂದ್ವ ಮಠವಾಗಿರುವ ಸೋದೆ ಮಠಕ್ಕೆ ಹಸ್ತಾಂತರ ಮಾಡಿದ್ದಾರೆ.

    ಉಡುಪಿಯ ಅಷ್ಟ ಮಠಗಳಲ್ಲೊಂದಾದ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಶ್ರೀಪಾದರು ವೃಂದಾವನಸ್ಥರಾದ ಮೇಲೆ ಪಟ್ಟದ ದೇವರು ದ್ವಂದ್ವ ಮಠಕ್ಕೆ ಹಸ್ತಾಂತರ ಆಗಬೇಕು. ಈ ಹಿನ್ನೆಲೆಯಲ್ಲಿ ಅನ್ನವಿಠಲ ದೇವರನ್ನು ದ್ವಂದ್ವ ಮಠವಾದ ಸೋದೆ ವಿಶ್ವವಲ್ಲಭ ತೀರ್ಥ ಶ್ರೀಪಾದರ ಪಾಲಾಗಿದೆ.

    ನಾಲ್ಕು ತಿಂಗಳಿಂದ ಕೃಷ್ಣಮಠದಲ್ಲೇ ಪೂಜಿಸಲ್ಪಡುತ್ತಿದ್ದ ಶಿರೂರು ಮಠದ ಅನ್ನ ವಿಠಲ ದೇವರನ್ನು ಕೃಷ್ಣಮಠದಿಂದ ವಿಶ್ವವಲ್ಲಭ ತೀರ್ಥ ಶ್ರೀಗಳು ಪಡೆದು ಉತ್ತರ ಕನ್ನಡ ಜಿಲ್ಲೆಯ ಸೋದೆ ಮಠಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸುತ್ತಿದ್ದಾರೆ.

    ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಗಳು ಪಟ್ಟದ ದೇವರನ್ನು ಹಸ್ತಾಂತರ ಮಾಡಿದ್ದಾರೆ. ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕದ ತನಕ ಸೋದೆ ಶ್ರೀಗಳಿಂದ ಪಟ್ಟದ ದೇವರಿಗೆ ಪೂಜೆ ನಡೆಯಲಿದೆ. ಶಿರೂರು ಸಾವಿಗೂ ಮುನ್ನ ಪಟ್ಟದ ದೇವರ ಹಸ್ತಾಂತರ ವಿಚಾರಕ್ಕೆ ಭಾರೀ ವಿವಾದ ಏರ್ಪಟ್ಟಿತ್ತು. ಅನ್ನ ವಿಠಲ ದೇವರ ವಿಗ್ರಹಕ್ಕಾಗಿ ಪಟ್ಟು ಹಿಡಿದಿದ್ದ ಶಿರೂರು ಶ್ರೀಗಳು ಕೋರ್ಟ್ ಮೆಟ್ಟಿಲು ಸಹ ಏರಿದ್ದರು. ಆದರೆ ವಿವಾದದಲ್ಲಿರುವಾಗಲೇ ಶಿರೂರು ಶ್ರೀ ಸಾವನ್ನಪ್ಪಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews