Tag: Shiva-Parvati

  • ಶಿವ, ಪಾರ್ವತಿ ವೇಷ ಧರಿಸಿ ಹಣದುಬ್ಬರದ ಬಗ್ಗೆ ನಾಟಕ- ಶಿವ ವೇಷಧಾರಿಯ ಬಂಧನ

    ಶಿವ, ಪಾರ್ವತಿ ವೇಷ ಧರಿಸಿ ಹಣದುಬ್ಬರದ ಬಗ್ಗೆ ನಾಟಕ- ಶಿವ ವೇಷಧಾರಿಯ ಬಂಧನ

    ದಿಸ್ಪುರ್: ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ಕಾಳಿ ಸಾಕ್ಷ್ಯಚಿತ್ರದ ಪೋಸ್ಟರ್‌ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಇದರ ನಡುವೆಯೇ ಶಿವ-ಪಾರ್ವತಿಯ ವೇಷ ಧರಿಸಿ ಬೀದಿ ನಾಟಕದ ಮೂಲಕ ಪ್ರತಿಭಟನೆ ನಡೆಸಿರುವ ಕಲಾವಿದರ ಮೇಲೆ ಕೇಸ್ ದಾಖಲಾಗಿದೆ. ಈಶ್ವರ ಪಾತ್ರಧಾರಿಯ ಬಂಧನವೂ ಆಗಿದೆ.

    ಅಸ್ಸಾಂನ ನಾಗಾಂವ್‌ನಲ್ಲಿ ಇಬ್ಬರು ಶಿವ ಹಾಗೂ ಪಾರ್ವತಿ ದೇವಿಯ ವೇಷ ಧರಿಸಿ ದೇಶದ ಹಣದುಬ್ಬರದ ಬಗ್ಗೆ ನಾಟಕವಾಡಿದ್ದಾರೆ. ಇದು ಹಿಂದೂ ಸನಾತನ ಧರ್ಮದವರ ಭಾವನೆಗೆ ಧಕ್ಕೆ ಉಂಟುಮಾಡಿದೆ ಎಂದು ನಾಗಾಂವ್ ಜಿಲ್ಲೆಯ ಹಿಂದೂ ಪರಿಷತ್ ಹಾಗೂ ಭಜರಂಗದಳ ಆರೋಪಿಸಿ, ತೀವ್ರವಾಗಿ ಖಂಡಿಸಿದೆ.

    ಘಟನೆ ಏನು?
    ಶನಿವಾರ ಸಂಜೆ ನಾಟಕ ಕಲಾವಿದರಾದ ಬಿರಿಂಚಿ ಬೋರಾ ಮತ್ತು ಕರಿಷ್ಮಾ, ಶಿವ ಮತ್ತು ಪಾರ್ವತಿ ವೇಷ ಧರಿಸಿ, ರಸ್ತೆಗಿಳಿದು ಇಂಧನ, ಆಹಾರ ಪದಾರ್ಥ ಹಾಗೂ ಇತರ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿದ್ದಾರೆ. ಇಬ್ಬರೂ ಬೈಕ್‌ನಲ್ಲಿ ನಾಗಾಂವ್‌ನ ಕಾಲೇಜು ಚೌಕ್‌ಗೆ ಆಗಮಿಸಿ, ವಾಹನದಲ್ಲಿ ಇಂಧನ ಖಾಲಿಯಾಗುತ್ತಿರುವ ಬಗ್ಗೆ ನಾಟಕವಾಡಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನದ ಊಟ ಇಲ್ಲ, ಶಿಕ್ಷಕರಿಗೆ ಮಸಾಜ್ ಬೇಕಂತೆ – ವಿದ್ಯಾರ್ಥಿಗಳಿಂದಲೇ ಶಾಲೆಯ ಆಸ್ತಿ ಧ್ವಂಸ

    ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಶಿವ ವೇಷಧಾರಿ, ಸರ್ಕಾರ ಕೇವಲ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನು ಸ್ಥಳದಲ್ಲಿ ನೆರೆದವರು ಕುತೂಹಲದಿಂದ ನೋಡಿದ್ದಾರೆ ಹಾಗೂ ಪಾತ್ರಧಾರಿಗಳು ಏರುತ್ತಿರುವ ಹಣದುಬ್ಬರವನ್ನು ಪ್ರತಿಭಟಿಸುವಂತೆ ಒತ್ತಾಯಿಸಿದ್ದಾರೆ.

    ಇದಾದ ಬಳಿಕ ಬಡಾ ಬಜಾರ್ ಪ್ರದೇಶಕ್ಕೂ ಆಗಮಿಸಿದ ಕಲಾವಿದರು ಇದೇ ರೀತಿ ಬೀದಿ ನಾಟಕ ಪ್ರದರ್ಶಿಸಿದರು. ಇದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಗಮನಕ್ಕೆ ಬಂದಿದ್ದು, ಅವರಿಬ್ಬರೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪೊಲೀಸ್ ವಾಹನದಲ್ಲಿ ಕುರಿ ದರ್ಬಾರ್ – ಮುಗ್ದ ಪ್ರಾಣಿಯ ಜಾಲಿ ರೈಡ್ ನೋಡಿ ನೆಟ್ಟಿಗರು ಫಿದಾ

    ಶಿವ-ಪಾರ್ವತಿ ಪಾತ್ರಧಾರಿಗಳಾದ ಬಿರಿಂಚಿ ಬೋರಾ ಹಾಗೂ ಕರೀಶ್ಮಾ ವಿರುದ್ಧ ನಾಗೋನ್ ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಶಿವ ಪಾತ್ರಧಾರಿ ಬೋರಾನನ್ನು ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿನಲ್ಲಿ ನಡೆಯಿತು ಭೂಲೋಕದ ಶಿವ-ಪಾರ್ವತಿ ಮದುವೆ!

    ಬೆಂಗ್ಳೂರಿನಲ್ಲಿ ನಡೆಯಿತು ಭೂಲೋಕದ ಶಿವ-ಪಾರ್ವತಿ ಮದುವೆ!

    ಬೆಂಗಳೂರು: ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿ ಭೂಮಿಯಲ್ಲಿ ಜರಗುತ್ತದೆ ಎನ್ನುವ ನುಡಿಯನ್ನು ನೀವು ಕೇಳಿರಬಹುದು. ಆದರೆ ಸ್ವರ್ಗದಲ್ಲಿರುವ ದೇವತೆಗಳಂತೆ ಭೂಲೋಕದಲ್ಲಿ ಶಿವ-ಪಾರ್ವತಿಯಂತೆ ವೇಷಧರಿಸಿ ನಗರದಲ್ಲಿ ನವ ಜೋಡಿಯ ಮದುವೆ ವೈಭವದಿಂದ ನಡೆದಿದೆ.

    ಬೆಂಗಳೂರಿನಲ್ಲಿ ಬನ್ನೇರುಘಟ್ಟದಲ್ಲಿ ಈ ರೀತಿಯ ವಿಶೇಷ ಮದುವೆ ನಡೆದಿದ್ದು, ಪಾರ್ವತಿ ಅವತಾರದಲ್ಲಿದ್ದ ಕುಸಮಾರನ್ನು ಶಿವ ವೇಷಧಾರಿಯಾಗಿದ್ದ ಲಕ್ಷ್ಮೀಶ ವರಿಸಿದ್ದಾರೆ. ವಧು ಕುಸುಮಾ ಪಾರ್ವತಿ, ವಧು ಲಕ್ಷ್ಮೀಶ ಶಿವನ ವೇಷ ಧರಿಸಿದದ್ದರು. ಮಂತ್ರ ಹೇಳುವ ಪೂಜಾರಿಗಳು ಋಷಿ ಮುನಿಗಳ ವೇಷ ಧರಿಸಿದ್ದು, ಹತ್ತಿರದ ಸಂಬಂಧಿಕರು ದೇವತೆಗಳ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದರು.

     

    ಲಕ್ಷ್ಮೀಶ ಮೂಲತಃ ಅರ್ಚಕರ ಕುಟುಂದವರಾಗಿದ್ದು, ಕಾಲಬೈರೇವಶ್ವರ ಆರಾಧಕರು. ಲಕ್ಷ್ಮೀಶ ತಂದೆ ತನ್ನ ಮಗನ ಮದುವೆಯನ್ನು ಇದೇ ರೀತಿ ಶಿವ ಪಾರ್ವತಿ ಕಲ್ಯಾಣದಂತೆ ನಡೆಸಬೇಕು ಎಂದು ಸಂಕಲ್ಪ ಮಾಡಿದ್ದರು. ಆದ್ದರಿಂದ ಮಗನ ಮದುವೆಯನ್ನು ಅದೇ ರೀತಿಯಲ್ಲಿ ಮಾಡಿದ್ದಾರೆ.

    ಮಧು ಮಕ್ಕಳು ಮಾತ್ರವಲ್ಲದೇ ಅವರ ಹತ್ತಿರ ಸಂಬಂಧಿಕರು ಬ್ರಹ್ಮ, ವಿಷ್ಣು, ಗಣೇಶ, ನಾರದ, ಷಣ್ಮುಖ ವೇಷಧರಿಸಿದ್ದರು. ಇದನ್ನು ಓದಿ: ದೇವತೆಗಳ ಸಮ್ಮುಖದಲ್ಲಿ ನಡೆಯಿತು ಮದುವೆ! ಫೋಟೋ ಗಳಲ್ಲಿ ನೋಡಿ

    https://www.youtube.com/watch?v=sSub2PwQShk