Tag: Shivaji

  • ಅಫ್ಜಲ್‌ ಖಾನ್‌ ಕೊಲ್ಲಲು ಛತ್ರಪತಿ ಶಿವಾಜಿ ಬಳಿಸಿದ್ದ ‘ವಾಘ್‌ ನಖ್‌’ ಅಸ್ತ್ರ ಜು.19ಕ್ಕೆ ಲಂಡನ್‌ನಿಂದ ಭಾರತಕ್ಕೆ

    ಅಫ್ಜಲ್‌ ಖಾನ್‌ ಕೊಲ್ಲಲು ಛತ್ರಪತಿ ಶಿವಾಜಿ ಬಳಿಸಿದ್ದ ‘ವಾಘ್‌ ನಖ್‌’ ಅಸ್ತ್ರ ಜು.19ಕ್ಕೆ ಲಂಡನ್‌ನಿಂದ ಭಾರತಕ್ಕೆ

    ನವದೆಹಲಿ: ಮೊಘಲ್ ದೊರೆ ಅಫ್ಜಲ್ ಖಾನ್ ಕೊಲ್ಲಲು ಛತ್ರಪತಿ ಶಿವಾಜಿ ಮಹಾರಾಜ (Shivaji Maharaj) ಬಳಸಿದ್ದ ‘ವಾಘ್ ನಖ್’ (ಹುಲಿ ಉಗುರು ಮಾದರಿ ಅಸ್ತ್ರ) ಲಂಡನ್‌ನಿಂದ ಭಾರತಕ್ಕೆ ವಾಪಸ್‌ ಆಗುತ್ತಿದೆ.

    ಮೂರು ವರ್ಷಗಳ ಅವಧಿಗೆ ಜು.19 ರಂದು ಲಂಡನ್‌ನ ವಿಕ್ಟೋರಿಯಾ ಮತ್ತು ಆಲ್ಬರ್ಟ್ ಮ್ಯೂಸಿಯಂನಿಂದ ಭಾರತಕ್ಕೆ ಅಸ್ತ್ರವನ್ನು ತರಲಾಗುತ್ತಿದೆ ಎಂದು ಮಹಾರಾಷ್ಟ್ರ ಸಂಸ್ಕೃತಿ ಸಚಿವ ಸುಧೀರ್ ಮುಂಗಂಟಿವಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ಅದೇ ದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಸತಾರಾದ ಶಿವಾಜಿ ಮ್ಯೂಸಿಯಂನಲ್ಲಿ ಈ ಅಸ್ತ್ರವನ್ನು ಇರಿಸಲಾಗುವುದು.

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದ ಸಚಿವರಾದ ಸುಧೀರ್ ಮುಂಗಂಟಿವಾರ್‌ ಮತ್ತು ಉದಯ್ ಸಾಮಂತ್, ಲಂಡನ್‌ನ ವಿಕ್ಟೋರಿಯಾ ಮತ್ತು ಆಲ್ಬರ್ಟ್ ಮ್ಯೂಸಿಯಂನೊಂದಿಗೆ ಛತ್ರಪತಿ ಶಿವಾಜಿ ಮಹಾರಾಜರ ‘ವಾಘ್ ನಖ್’ (Wagh Nakh) ಅನ್ನು ಮೂರು ವರ್ಷಗಳ ಅವಧಿಗೆ ಭಾರತಕ್ಕೆ ಮರಳಿ ತರಲು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ತಿರುಪತಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ

    ಛತ್ರಪತಿ ಶಿವಾಜಿ ಮಹಾರಾಜರು ಬುದ್ಧಿವಂತಿಕೆಯಿಂದ ಅಫ್ಜಲ್ ಖಾನ್‌ನನ್ನು ವಾಘ್ ನಖ್‌ನೊಂದಿಗೆ ಕೊಂದರು. ಶಿವಾಜಿ ಪಟ್ಟಾಭಿಷಿಕ್ತರಾಗಿ ಇಲ್ಲಿಗೆ 350 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಯಲಿವೆ. ಮಹಾರಾಷ್ಟ್ರದಲ್ಲಿ ವಾಘ್ ನಖ್ ಅನ್ನು ಮ್ಯೂಸಿಯಂನಲ್ಲಿ ಜನರ ವೀಕ್ಷಣೆಗೆ ಇಡಲಾಗುವು ಎಂದು ಸಚಿವರು ತಿಳಿಸಿದ್ದಾರೆ.

  • ಸಾಮಾಜಿಕ ಜಾಲತಾಣದಲ್ಲಿ ಶಿವಾಜಿಗೆ ಅಪಮಾನ – ಧಾರವಾಡದ ಇಬ್ಬರು ಅರೆಸ್ಟ್‌

    ಸಾಮಾಜಿಕ ಜಾಲತಾಣದಲ್ಲಿ ಶಿವಾಜಿಗೆ ಅಪಮಾನ – ಧಾರವಾಡದ ಇಬ್ಬರು ಅರೆಸ್ಟ್‌

    ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ (Social Media) ಛತ್ರಪತಿ ಶಿವಾಜಿ ಮಹಾರಾಜರಿಗೆ (Chhatrapati Shivaji Maharaj) ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಧಾರವಾಡ (Dharawada) ಜಿಲ್ಲೆಯ ಕಲಘಟಗಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ಅಶ್ಪಕ್ ಹಾಗೂ ಶೌಖಲ್ ಅಲಿ ಬಂಧಿತ ಆರೋಪಿಗಳು. ಇವರಿಬ್ಬರು ಟಿಪ್ಪು ಸುಲ್ತಾನ್ (Tipu Sultan) ಕಾಲಿನಡಿ ಕುಳಿತು ಶಿವಾಜಿ ಬೇಡಿಕೊಳ್ಳುವ ಹಾಗೆ ಫೊಟೋವನ್ನು ಎಡಿಟ್ ಮಾಡಿ, ಆ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.  ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ಗೆ ಆಹ್ವಾನ – ಆಹ್ವಾನಿಸಿದ್ದಕ್ಕೆ ಸ್ಪಷ್ಟನೆ ಕೊಟ್ಟ ಕೈ ಶಾಸಕ

    ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಕಲಘಟಗಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಅಶ್ಫಕ್‌ ಹಾಗೂ ಶೌಖತ್ ಅಲಿಯನ್ನು ಬಂಧಿಸಿದ್ದಾರೆ.

     

  • ದಕ್ಷಿಣದ ಸಿನಿಮಾಗಳನ್ನೇ ಕಾಪಿ ಮಾಡಿದ್ರಾ ‘ಜವಾನ್’ ಶಾರುಖ್ ಖಾನ್

    ದಕ್ಷಿಣದ ಸಿನಿಮಾಗಳನ್ನೇ ಕಾಪಿ ಮಾಡಿದ್ರಾ ‘ಜವಾನ್’ ಶಾರುಖ್ ಖಾನ್

    ನಿನ್ನೆಯಷ್ಟೇ ಶಾರುಖ್ ಖಾನ್ (Shah Rukh Khan) ನಟನೆಯ ಜವಾನ್ (Jawan) ಸಿನಿಮಾದ ಪ್ರಿವ್ಯೂ ರಿಲೀಸ್ ಆಗಿದೆ. ಈ ಪ್ರವ್ಯೂ ದಾಖಲೆಯ ರೀತಿಯಲ್ಲಿ ಜನರಿಗೆ ತಲುಪಿದೆ. ಅದರಲ್ಲೂ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ಈ ಎಲ್ಲದರ ನಡುವೆಯೂ ಈ ಸಿನಿಮಾದ ಕೆಲವ ದೃಶ್ಯಗಳನ್ನು ಬೇರೆ ಬೇರೆ ಸಿನಿಮಾಗಳಿಗೆ ಹೋಲಿಕೆ ಮಾಡಲಾಗುತ್ತಿದೆ. ಅದರಲ್ಲೂ ದಕ್ಷಿಣದ ಸಿನಿಮಾಗಳಿಗೆ ಹೋಲಿಕೆ ಮಾಡಿ ಟ್ರೋಲ್ ಕೂಡ ಮಾಡಲಾಗುತ್ತಿದೆ.

    ವಿಕ್ರಮ್ ನಟನೆಯ ಅಪರಿಚಿತ್, ಪ್ರಭಾಸ್ ನಟನೆಯ ಬಾಹುಬಲಿ 2 (Baahubali 2), ರಜನಿಕಾಂತ್ ನಟನೆಯ ಶಿವಾಜಿ (Shivaji) ಸಿನಿಮಾಗಳ ಜೊತೆಗೆ ಹಾಲಿವುಡ್ ನ ಡಾರ್ಕ್ ಮ್ಯಾನ್ ಚಿತ್ರಕ್ಕೂ ಹೋಲಿಕೆ ಮಾಡಲಾಗುತ್ತಿದೆ. ನಿನ್ನೆಯಷ್ಟೇ ರಿಲೀಸ್ ಆದ ಜವಾನ್ ಸಿನಿಮಾದ ಪ್ರಿವ್ಯೂನಲ್ಲಿ ಮಗುವನ್ನು ಎತ್ತಿಕೊಳ್ಳುವ ದೃಶ್ಯವಿದೆ. ಅದನ್ನು ಬಾಹುಬಲಿ ಚಿತ್ರಕ್ಕೆ ಹೋಲಿಸಿದರೆ, ಶಾರುಖ್ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿರುವ ದೃಶ್ಯವನ್ನು ಬಾಲಿವುಡ್ ನ ಡಾರ್ಕ್ ಮ್ಯಾನ್ ಹಾಗೂ ಮುಖಕ್ಕೆ ಶಾರುಖ್ ಮಾಸ್ಕ್ ಹಾಕಿಕೊಂಡಿರುವ ದೃಶ್ಯವನ್ನು ಅಪರಿಚಿತ್ (Aparichith) ದೃಶ್ಯಕ್ಕೆ ಹಾಗೂ ತಲೆಯಲ್ಲಿ ಕೂದಲು ಇಲ್ಲದ ಶಾರುಖ್ ನನ್ನು ಶಿವಾಜಿ ಚಿತ್ರಕ್ಕೆ ಹೋಲಿಸಿದ್ದಾರೆ.

    ಆದರೆ, ಇದ್ಯಾವುದೂ ಹೋಲಿಕೆ ಅಲ್ಲ ಎಂದು ಶಾರುಖ್ ಅಭಿಮಾನಿಗಳು ವಾದಿಸುತ್ತಿದ್ದಾರೆ. ಶಾರುಖ್ ಯಾವಾಗಲೂ ಸ್ವಂತದ್ದನ್ನು ಮಾಡುವವರು, ಅವರಿಗೆ ಕಾಪಿ (Copy) ಮಾಡುವ ಗುಣವಿಲ್ಲ. ಹೋಲಿಕೆ ಅದು ನಿಮಗೆ ಕಂಡಿರಬಹುದು ಎಂದು ಟ್ರೋಲ್ ಮಾಡುವವರಿಗೆ ಶಾರುಖ್ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ. ಪೂರ್ತಿ ಸಿನಿಮಾವನ್ನು ವೀಕ್ಷಿಸಿ ಆಮೇಲೆ ಕಾಮೆಂಟ್ ಮಾಡಿ ಎಂದಿದ್ದಾರೆ.

    ಹೇಗಿದೆ ಜವಾನ್ ಪ್ರಿವ್ಯೂ?

    ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಜವಾನ್’ನ ಪ್ರಿವ್ಯೂ ಇಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸಮಾಜದಲ್ಲಾಗುತ್ತಿರುವ ತಪ್ಪುಗಳನ್ನು ತಿದ್ದುವ ಒಬ್ಬ ಜವಾಬ್ದಾರಿಯುತ ಮತ್ತು ಪ್ರಾಮಾಣಿಕ ವ್ಯಕ್ತಿಯ ಕಥೆಯಾಗಿದೆ.  ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಆರಂಭದಿಂದಲೂ ಬಹಳ ಕುತೂಹಲವಿತ್ತು. ಇಂದು ಬಿಡುಗಡೆಯಾದ ಟೀಸರ್, ಆ ನಿರೀಕ್ಷೆ ಮತ್ತು ಕುತೂಹಲಗಳನ್ನು ಇನ್ನೊಂದು ಹಂತಕ್ಕೆ ತಲುಪಿಸಿದೆ. ದೊಡ್ಡ ಬಜೆಟ್ ನಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಚಿತ್ರವು ಆಕ್ಷನ್ ಮತ್ತು ಎಮೋಷನ್ ಗಳನ್ನು ಹದವಾಗಿ ಹಿಡಿದಿಟ್ಟಿದೆ. ಚಿತ್ರದ ಕೆಲವು ಅದ್ಭುತ ಕ್ಷಣಗಳನ್ನು ಹಿಡಿದಿಡುವುದರ ಜೊತೆಗೆ, ‘ಜವಾನ್ ಪ್ರಪಂಚವನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.

    ‘ಕಿಂಗ್ ಖಾನ್’ ಅವರ ಧ್ವನಿಯಲ್ಲಿ ಪ್ರಾರಂಭವಾಗುವ ಈ ಪ್ರಿವ್ಯೂ, ನಂತರ ಚಿತ್ರ ಏನಿರಬಹುದು ಎಂದು ಪರಿಚಯಿಸಿಕೊಡುತ್ತದೆ. ಈ ಪ್ರಿವ್ಯೂನ ಒಂದು ವಿಶೇಷತೆಯೆಂದರೆ, ಇದುವರೆಗೂ ನೀವು ನೋಡದೆ ಇರುವ ಶಾರುಖ್ ಅವರನ್ನು ಇಲ್ಲಿ ಹಲವು ಅವತಾರಗಳಲ್ಲಿ ನೋಡಬಹುದು. ಶಾರುಖ್ ಖಾನ್ ಅಲ್ಲದೆ, ಚಿತ್ರದಲ್ಲಿ ನಟಿಸಿರುವ ಹಲವು ಪ್ರತಿಭಾವಂತರ ತುಣುಕುಗಳು ಸಹ ಈ ಪ್ರಿವ್ಯೂನಲ್ಲಿ ಪರಿಚಯಿಸಲಾಗಿದೆ. ರೋಮಾಂಚನಗೊಳಿಸುವ ಆಕ್ಷನ್ ದೃಶ್ಯಗಳು, ಅದ್ದೂರಿ ಹಾಡುಗಳು, ‘ಬೇಕರಾರ್ ಕರಕೇ ಹಮೇ’ ಹಾಡಿಗೆ ಶಾರುಖ್ ಖಾನ್ ಅಭಿನಯ … ಇವೆಲ್ಲವೂ ಈ ಪ್ರಿವ್ಯೂ ಚಿತ್ರದ ಹೈಲೈಟ್ ಗಳಾಗಿದ್ದು, ಚಿತ್ರ ಬಿಡುಗಡೆಗೆ ಕಾಯುವಂತಾಗಿದೆ.

    ದಕ್ಷಿಣ ಭಾರತದ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರಾದ ಅಟ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಅನಿರುದ್ಧ್ ರವಿಚಂದರ್ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವಿದೆ. ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿರುವ ಅನಿರುದ್ಧ್ ಅವರ ಹಿನ್ನೆಲೆ ಸಂಗೀತ ಈ ಪ್ರಿವ್ಯೂನ ಇನ್ನೊಂದು ಹೈಲೈಟ್. ಈ ಪ್ರಿವ್ಯೂನಲ್ಲಿ ಗಮನಸೆಳೆಯುವ ಇನ್ನೊಂದು ಅಂಶವೆಂದರೆ ಅದು ಗ್ರಾಮಿ ಪ್ರಶಸ್ತಿಗೆ ನಾಮಿನೇಟ್ ಆಗಿರುವ ರಾಜಕುಮಾರಿ ಅವರು ಹಾಡಿರುವ ‘ದಿ ಕಿಂಗ್ ಖಾನ್ ರಾಪ್’ ಎಂಬ ಹಾಡು.

    ‘ಜವಾನ್’, ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಚಿತ್ರವಾಗಿದ್ದು, ಅತ್ಯಂತ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ಶಾರುಖ್ ಜೊತೆಗೆ ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ವಿವಿಧ ಭಾಷೆಯ ನಟ-ನಟಿಯರು ಕಾಣಿಸಿಕೊಂಡಿದ್ದಾರೆ. ನಯನತಾರಾ, ವಿಜಯ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಗೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ದೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಿಯಾ ನಟಿಸಿರುವ ಈ ಚಿತ್ರವು ಎಲ್ಲ ಭಾಷೆಗಳ ಜನರಿಗೂ ತಲುಪವಂತೆ ಚಿತ್ರಿಸಲಾಗಿದೆ.

     

    ಇದಕ್ಕೂ ಮುನ್ನ ಪೋಸ್ಟರ್ ಮತ್ತು ಸಣ್ಣ ಟೀಸರ್ ಮೂಲಕ ಜನರ ಗಮನ ಸೆಳೆದ ಟೀಸರ್, ಈಗ ಪ್ರಿವ್ಯೂ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದೆ. ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ನಡಿ ಗೌರಿ ಖಾನ್ ನಿರ್ಮಾಣ ಮಾಡಿದರೆ, ಗೌರವ್ ವರ್ಮ ಸಹ-ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ‘ಜವಾನ್’ ಚಿತ್ರವು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿ.12ರಂದು ರಜನಿಕಾಂತ್ ಕುರಿತಾದ ‘ಗೆಳೆಯ ಶಿವಾಜಿ’ ಪುಸ್ತಕ ಬಿಡುಗಡೆ

    ಡಿ.12ರಂದು ರಜನಿಕಾಂತ್ ಕುರಿತಾದ ‘ಗೆಳೆಯ ಶಿವಾಜಿ’ ಪುಸ್ತಕ ಬಿಡುಗಡೆ

    ಹಿರಿಯ ನಟ ಅಶೋಕ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಆತ್ಮೀಯ ಸ್ನೇಹಿತರು. ರಜನಿ ಬಗ್ಗೆ ಯಾರಾದರೂ ವಸ್ತುನಿಷ್ಠವಾಗಿ ಬರೆಯಬಲ್ಲರು ಅಂದರೆ, ಅದು ಅಶೋಕ್ ಅವರಿಗೆ ಮಾತ್ರ ಸಾಧ್ಯವಾಗುವಂಥದ್ದು. ರಜನಿ ಅವರ ಕಷ್ಟದ ದಿನಗಳಿಂದ ಸೂಪರ್ ಸ್ಟಾರ್ ಆಗಿ ಬೆಳೆದ ಪರಿಯನ್ನು ಕಣ್ಣಾರೆ ಕಂಡವರು. ಕಂಡುಂಡು ಮೆರೆದವರು. ಹಾಗಾಗಿ ಗೆಳೆಯನ ಜೊತೆಗಿನ ಅಪರೂಪದ ಭಾವನೆಗಳನ್ನು ಈ ಪುಸ್ತಕದಲ್ಲಿ ಹಿಡಿದಿಟ್ಟಿದ್ದಾರೆ ಅಶೋಕ್.

    ಇದು ಕೇವಲ ಭಾವನೆಗಳ ಗುಚ್ಛವಲ್ಲವಂತೆ. ಸಾಕಷ್ಟು ಘಟನೆಗಳಿಗೆ ಸಾಕ್ಷಿಯಾಗಿಯೂ ಇರಲಿದೆಯಂತೆ. ಅಲ್ಲದೇ, ಅನೇಕ ಊಹಾಪೋಹಗಳಿಗೆ ಈ ಪುಸ್ತಕ ಉತ್ತರವಾಗಿ ನಿಲ್ಲಬಲ್ಲದು. ಗೊತ್ತಿರದ ರಜನಿಯನ್ನು ಗೆಳೆಯ ಅನ್ನುವ ಆಪ್ತತೆಯ ಮೂಲಕ ಅಶೋಕ್ ಅವರು ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ. ಹಾಗಾಗಿ ‘ಗೆಳೆಯ ಶಿವಾಜಿ’ ರಜನಿಕಾಂತ್ ಜೀವನದ ದಿ ಬೆಸ್ಟ್ ಪುಸ್ತಕವೂ ಆಗಿದೆ. ಗಿರಿಜಾ ಲೋಕೇಶ್ ಈ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದರೆ, ಬೆಂಗಳೂರಿನ ಬೀ ಕಲ್ಚರ್ ಪ್ರಕಾಶನ ಈ ಪುಸ್ತಕವನ್ನು ಹೊರ ತಂದಿದೆ.  ಇದನ್ನೂ ಓದಿ: `ಬಿಗ್ ಬಾಸ್’ ಖ್ಯಾತಿಯ ಭೂಮಿ ಶೆಟ್ಟಿ ಫಿಟ್ನೆಸ್ ನೋಡಿ ವಾವ್ ಎಂದ ಫ್ಯಾನ್ಸ್

    ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಡಿಸೆಂಬರ್ 12ರ ಸಂಜೆ 5.30ಕ್ಕೆ ಈ ಪುಸ್ತಕ ಬಿಡುಗಡೆ ಆಗುತ್ತಿದ್ದು, ಅಗ್ರಹಾರ ಕೃಷ್ಣಮೂರ್ತಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ನಟ ನೀನಾಸಂ ಸತೀಶ್ ಈ ಪುಸ್ತಕವನ್ನು ಬಿಡುಗಡೆ ಮಾಡಿದರೆ, ನಿರ್ದೇಶಕಿ ಸುಮನಾ ಕಿತ್ತೂರ್ ಕೃತಿಯನ್ನು ಪರಿಚಯಿಸುತ್ತಾರೆ. ಸಿ.ಎಸ್.ದ್ವಾರಕನಾಥ್ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ಷಯ್ ಕುಮಾರ್ ನಟನೆಯ ಮರಾಠಿ ಚಿತ್ರದ ಫಸ್ಟ್ ಲುಕ್ ರಿಲೀಸ್

    ಅಕ್ಷಯ್ ಕುಮಾರ್ ನಟನೆಯ ಮರಾಠಿ ಚಿತ್ರದ ಫಸ್ಟ್ ಲುಕ್ ರಿಲೀಸ್

    ತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ ಖ್ಯಾತ ನಟ  ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದು, ಇದು ಶಿವಾಜಿ ಜೀವನವನ್ನು ಆಧರಿಸಿದ ಸಿನಿಮಾವಾಗಿದೆ. ಈ ಚಿತ್ರಕ್ಕೆ ‘ವೇಡಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಹೆಸರು ಇಡಲಾಗಿದ್ದು, ಈ ಸಿನಿಮಾದ ಫಸ್ಟ್ ಲುಕ್ ನಿನ್ನೆ ಬಿಡುಗಡೆಯಾಗಿದೆ.

    ಇತ್ತೀಚೆಗಷ್ಟೇ ರಿಲೀಸ್ ಆದ, ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ತಂದುಕೊಡಲಿಲ್ಲ. ಈ ಹಿಂದಿನ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ ಗೆಲ್ಲುವಲ್ಲಿ ವಿಫಲವಾದವು. ಈ ಕಾರಣದಿಂದಾಗಿಯೇ ಅವರು ಮರಾಠಿ ಸಿನಿಮಾ ರಂಗದತ್ತ ಹೊರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲ ಪ್ರಯತ್ನದಲ್ಲೇ ಅವರು ಮರಾಠ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಅವರ ಜೀವನವನ್ನು ಆಧರಿಸಿದ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುತ್ತವೆ ಮೂಲಗಳು. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಈ ಸಿನಿಮಾವನ್ನು ಮಹೇಶ್ ಮಂಜರೇಕರ್ ನಿರ್ದೇಶನ ಮಾಡುತ್ತಿದ್ದು, ವಸೀಮ್ ಖುರೇಷಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾದ ಮುಹೂರ್ತ ಕೂಡ ಆಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮತ್ತೊಂದು ವಿಶೇಷ ಅಂದರೆ, ಇದೇ ಕಾರ್ಯಕ್ರಮದಲ್ಲಿ ಎಂ.ಎನ್.ಸಿ ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಭಾಗಿಯಾಗಿ, ಏಕನಾಥ್ ಶಿಂಧೆಗೆ ಮುಖಾಮುಖಿ ಆಗಿದ್ದಾರೆ.

    ಸಿನಿಮಾ ಕುರಿತು ಮಾತನಾಡಿರುವ ಅಕ್ಷಯ್ ಕುಮಾರ್, ‘ಇಂತಹ ದೊಡ್ಡ ಪಾತ್ರ ನನಗೆ ಸಿಕ್ಕಿದ್ದು ಖುಷಿಯಾಗಿದೆ. ಇದು ನನ್ನ ಕನಸಿನ ಪಾತ್ರ ಕೂಡ ಆಗಿತ್ತು. ಇದೇ ಮೊದಲ ಬಾರಿಗೆ ನಿರ್ದೇಶಕ ಮಹೇಶ್ ಅವರ ಜೊತೆ ಕೆಲಸ ಮಾಡುತ್ತಿದ್ದೇನೆ. ತೆರೆಯ ಮೇಲೆ ನನ್ನನ್ನು ನಾನು ನೋಡಲು ಉತ್ಸುಕನಾಗಿದ್ದೇನೆ; ಎಂದು ಅವರು ಹೇಳಿದ್ದಾರೆ. ನಿರ್ದೇಶಕರು ಈ ಚಿತ್ರಕ್ಕಾಗಿ ಸತತ ಏಳು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ

    ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ

    ಚಿಕ್ಕೋಡಿ: ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ (Hindu) ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ (Persian) ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್‌ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮಾ ಜ್ಯೋತಿಬಾ ಫುಲೆ ಇಲ್ಲದಿದ್ದರೇ ಛತ್ರಪತಿ ಶಿವಾಜಿ (Shivaji) ಅವರ ಇತಿಹಾಸ ಹೊರಗೆ ಬರುತ್ತಿರಲಿಲ್ಲ. ಅವರ ಇತಿಹಾಸವನ್ನು ಮುಚ್ಚಿಡಲಾಗಿತ್ತು. ಸತ್ಯ ಶೋಧಕ ಸಂಸ್ಥೆಯಿಂದ ಅವರ ಇತಿಹಾಸ ಹೊರಗೆ ಬಂದಿದೆ. ಶಿವಾಜಿ ಎಲ್ಲರನ್ನು ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್‌ ಇರುವುದು ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಮೊಹಮ್ಮದ್‌ ಮದಾರಿ ಎನ್ನುವ ಚಿತ್ರಕಾರ ಆ ಪೇಂಟಿಂಗ್‌ ತಯಾರಿಸಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ಪ್ರತಾಪಗಡ್ ಕೋಟೆಯಲ್ಲಿ ಶಿವಾಜಿ ಮಸೀದಿ ನಿರ್ಮಾಣ ಮಾಡಿರುವ ಇತಿಹಾಸವಿದೆ. ಅವರ ಕಾಲದಲ್ಲಿ ಸಮಾನತೆಯಿತ್ತು. ಆದರೆ ಈಗ ಮರಾಠಾ, ಮುಸ್ಲಿಂ, ದಲಿತರ ನಡುವೆ ದಿನನಿತ್ಯ ಜಗಳವಾಗುತ್ತಿವೆ. ಇತಿಹಾಸ ಬೇರೆ ಇದೆ. ನಮಗೆ ಬೇರೆ ಇತಿಹಾಸ ತೋರಿಸಲಾಗುತ್ತಿದೆ. ಬಸವಣ್ಣ, ಶಿವಾಜಿ, ಸಂತ ತುಕಾರಾಮ ಸೇರಿದಂತೆ ಮಹಾನ್ ಪುರುಷರ ಇತಿಹಾಸವನ್ನು ಬೇರೆ ತೋರಿಸಲಾಗುತ್ತಿದೆ. ಬಸವಣ್ಣವರ ಕಾಲದಲ್ಲಿ ಸಾಕಷ್ಟು ಹತ್ಯೆಗಳು ನಡೆದವು ಅದನ್ನು ಮುಸ್ಲಿಮರು ಮಾಡಿದ್ರಾ? ಒಂದು ಲಕ್ಷ ಜೈನರ ಹತ್ಯೆಗಳಾಗಿವೆ ಎಂದು ಜೈನ್ ಸ್ವಾಮೀಜಿ ಹೇಳಿದ್ದಾರೆ. ಜೈನರ ಹತ್ಯೆಯನ್ನು ಆದೀಲ್ ಶಾ ಮಾಡಿದ್ರಾ? ಈ ಎಲ್ಲದರ ಕುರಿತು ಚರ್ಚೆ ಆಗಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಚಂದ್ರು ದೇಹದಲ್ಲಿ ಒಳ ಉಡುಪು ಇರಲಿಲ್ಲ – ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದ್ರಾ ಯುವ ನಾಯಕ?

    Live Tv
    [brid partner=56869869 player=32851 video=960834 autoplay=true]

  • ಮರಾಠಿ ಸಿನಿಮಾ ರಂಗಕ್ಕೆ ಹಾರಿದ ಅಕ್ಷಯ್ ಕುಮಾರ್ : ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಕಿ

    ಮರಾಠಿ ಸಿನಿಮಾ ರಂಗಕ್ಕೆ ಹಾರಿದ ಅಕ್ಷಯ್ ಕುಮಾರ್ : ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಕಿ

    ತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ ಖ್ಯಾತ ನಟ  ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದಾರೆ. ಶಿವಾಜಿ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ‘ವೇಡಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಹೆಸರು ಇಡಲಾಗಿದೆ.

     

    ಇತ್ತೀಚೆಗಷ್ಟೇ ರಿಲೀಸ್ ಆದ, ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ತಂದುಕೊಡಲಿಲ್ಲ. ಈ ಹಿಂದಿನ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ ಗೆಲ್ಲುವಲ್ಲಿ ವಿಫಲವಾದವು. ಈ ಕಾರಣದಿಂದಾಗಿಯೇ ಅವರು ಮರಾಠಿ ಸಿನಿಮಾ ರಂಗದತ್ತ ಹೊರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲ ಪ್ರಯತ್ನದಲ್ಲೇ ಅವರು ಮರಾಠ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಅವರ ಜೀವನವನ್ನು ಆಧರಿಸಿದ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುತ್ತವೆ ಮೂಲಗಳು

     

    ಈ ಸಿನಿಮಾವನ್ನು ಮಹೇಶ್ ಮಂಜರೇಕರ್ ನಿರ್ದೇಶನ ಮಾಡುತ್ತಿದ್ದು, ವಸೀಮ್ ಖುರೇಷಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾದ ಮುಹೂರ್ತ ಕೂಡ ಆಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮತ್ತೊಂದು ವಿಶೇಷ ಅಂದರೆ, ಇದೇ ಕಾರ್ಯಕ್ರಮದಲ್ಲಿ ಎಂ.ಎನ್.ಸಿ ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಭಾಗಿಯಾಗಿ, ಏಕನಾಥ್ ಶಿಂಧೆಗೆ ಮುಖಾಮುಖಿ ಆಗಿದ್ದಾರೆ.

     

    ಸಿನಿಮಾ ಕುರಿತು ಮಾತನಾಡಿರುವ ಅಕ್ಷಯ್ ಕುಮಾರ್, ‘ಇಂತಹ ದೊಡ್ಡ ಪಾತ್ರ ನನಗೆ ಸಿಕ್ಕಿದ್ದು ಖುಷಿಯಾಗಿದೆ. ಇದು ನನ್ನ ಕನಸಿನ ಪಾತ್ರ ಕೂಡ ಆಗಿತ್ತು. ಇದೇ ಮೊದಲ ಬಾರಿಗೆ ನಿರ್ದೇಶಕ ಮಹೇಶ್ ಅವರ ಜೊತೆ ಕೆಲಸ ಮಾಡುತ್ತಿದ್ದೇನೆ. ತೆರೆಯ ಮೇಲೆ ನನ್ನನ್ನು ನಾನು ನೋಡಲು ಉತ್ಸುಕನಾಗಿದ್ದೇನೆ; ಎಂದು ಅವರು ಹೇಳಿದ್ದಾರೆ. ನಿರ್ದೇಶಕರು ಈ ಚಿತ್ರಕ್ಕಾಗಿ ಸತತ ಏಳು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಶಿವಾಜಿ ಮಹಾರಾಜರೇ ಹಿಂದವೀ ಸ್ವರಾಜ್ ಸ್ಥಾಪಿಸಿದ್ದಾರೆ – ಈಗ ಏನ್ ಬಿಜೆಪಿಯ ಹೊಸ ವರಸೆ: ಅಂಜಲಿ ನಿಂಬಾಳ್ಕರ್

    ಶಿವಾಜಿ ಮಹಾರಾಜರೇ ಹಿಂದವೀ ಸ್ವರಾಜ್ ಸ್ಥಾಪಿಸಿದ್ದಾರೆ – ಈಗ ಏನ್ ಬಿಜೆಪಿಯ ಹೊಸ ವರಸೆ: ಅಂಜಲಿ ನಿಂಬಾಳ್ಕರ್

    ಬೆಳಗಾವಿ: ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಸಾಧ್ಯವಾಗಿಲ್ಲ. ಅಂದು ಹಿಂದೂ ಧರ್ಮ ಇತ್ತು, ಇಂದು ಸಹ ಹಾಗೇ ಇದೆ. ಶಿವಾಜಿ ಮಹಾರಾಜರು ಹಿಂದವೀ ಸ್ವರಾಜ್ ಸ್ಥಾಪನೆ ಮಾಡಿದ್ದಾರೆ. ಬಿಜೆಪಿಯವರು ಈಗ ಏನ್ ಹೊಸ ಹಿಂದೂ ರಾಷ್ಟ್ರ ಮಾಡಲು ಹೊರಟ್ಟಿದ್ದಾರೆ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ.

    ಬೆಳಗಾವಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಮೇಲೆ ಮೊಘಲರು, ಬ್ರಿಟಿಷರು ದಾಳಿ ಮಾಡಿದ್ದಾರೆ. ಆದರೂ ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಸಾಧ್ಯವಾಗಿಲ್ಲ. ಹಿಂದೂ ಧರ್ಮದ ಮೇಲೆ ಯಾರಿಂದಲೂ ಆಕ್ರಮಣ ಮಾಡಲು ಆಗಲ್ಲ ಎಂದು ಆರ್‌ಎಸ್‌ಎಸ್‌ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪುಸ್ತಕದಿಂದ ತೆಗೆದರೂ ಭಾರತೀಯರ ಹೃದಯದಲ್ಲಿ ಟಿಪ್ಪು ಸದಾ ನೆಲೆಸಿರುತ್ತಾರೆ: ಹೆಚ್.ವಿಶ್ವನಾಥ್

    ಬಿಜೆಪಿ ಕೇವಲ ವೋಟ್ ಬ್ಯಾಂಕ್‍ಗಾಗಿ ಧರ್ಮ, ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ. ಶಿವಾಜಿ ಮಹಾರಾಜರು ಹಿಂದವೀ ಸ್ವರಾಜ್ ಸ್ಥಾಪನೆ ಮಾಡಿದ್ದಾರೆ. ಈಗ ಏನ್ ಹೊಸ ಹಿಂದು ರಾಷ್ಟ್ರ ಮಾಡಲು ಹೊರಟ್ಟಿದ್ದಾರೆ. ಆರ್‌ಎಸ್‌ಎಸ್‌ನ ಹಿಂದೂ ರಾಷ್ಟ್ರವನ್ನು ನಾವು ಒಪ್ಪಲ್ಲ. ಹಿಂದೂ ಧರ್ಮದ ಬಗ್ಗೆ ಆರ್‌ಎಸ್‌ಎಸ್‌ ಮೊದಲು ತಿಳಿದುಕೊಳ್ಳಬೇಕು. ಹಿಂದೂ ಧರ್ಮದಲ್ಲಿ ಬ್ರಾಹ್ಮಣ, ದಲಿತ, ಮುಸ್ಲಿಮರು ಎಲ್ಲರೂ ಇದ್ದಾರೆ. ಹಿಂದೂ ಧರ್ಮದ ಸಂಸ್ಕೃತಿ ಬಹಳ ದೊಡ್ಡದಿದೆ. ಅದನ್ನು ತಿಳಿದುಕೊಳ್ಳುವ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ

  • ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

    ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

    ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ಮುಖಾಂತರ ಎಲ್ಲಾ ಸಮಾಜದವರು ಸೇರಿ ಬಗೆಹರಿಸಲಿ. ಇಲ್ಲವಾದಲ್ಲಿ ಸುಪ್ರೀಂಕೊರ್ಟ್ ತೀರ್ಪಿನಂತೆ ನಡೆದುಕೊಳ್ಳಲು ನಾವು ಸಿದ್ಧ ಅಂತ ಹೇಳಿದ್ದಾರೆ.

    ಈ ಬಾರಿ ಟಿಪ್ಪು ಜಯಂತಿ ಆಚರಣೆ ನಿರಾಸೆ ತಂದಿದೆ. ಫೋಟೋ ಇಡುವುದು, ಮೆರವಣಿಗೆ ಮಾಡೋದು ನಮ್ಮ ಸಂಪ್ರದಾಯವಲ್ಲ. ಮುಂದಿನ ಬಾರಿ ಬೇರೆ ರೀತಿ ಆಚರಣೆ ಮಾಡಲು ಯೋಚಿಸಿದ್ದೇವೆ. ಇದರ ಬಗ್ಗೆ ಡಿಸೆಂಬರ್ ನಲ್ಲಿ ಎಲ್ಲ ಸಾಧು, ಸಂತರು ಪ್ರಮುಖವಾಗಿ ಶೃಂಗೇರಿ ಶ್ರೀಗಳು, ಸುತ್ತೂರು ಶ್ರೀಗಳು ಸೇರಿದಂತೆ ಪಕ್ಷಾತೀತವಾಗಿ ಸಭೆ ನಡೆಸುತ್ತೇವೆ. ಅಲ್ಲಿ ಯಾವ ರೀತಿ, ಯಾರ ನೇತೃತ್ವದಲ್ಲಿ ಟಿಪ್ಪು ಜಯಂತಿ ಮಾಡಬೇಕೆಂದು ತಿರ್ಮಾನ ಮಾಡುತ್ತೇವೆ ಅಂತ ಅವರು ತಿಳಿಸಿದ್ರು.

    ಈ ಬಾರಿ ಶಿವಾಜಿ ಜಯಂತಿಯನ್ನ ಸಾಬರೆಲ್ಲ ಸೇರಿ ಆಚರಿಸುತ್ತೇವೆ. ಶಿವಾಜಿ ಒಬ್ಬ ಭಾರತದ ಅಪ್ರತಿಮ ರಾಜರಾಗಿದ್ದಾರೆ. ಅದೇ ರೀತಿ ಮರಾಠರು ಟಿಪ್ಪು ಜಯಂತಿ ಆಚರಿಸಬೇಕು. ಶಿವಾಜಿ ಜಯಂತಿ ಆಚರಣೆ ಬಗ್ಗೆ ರಾಜ್ಯದ ಎಲ್ಲ ಅಂಜುಮನ್ ಕಮೀಟಿಗಳಿಗೆ ಪತ್ರ ಬರೆಯುತ್ತೇವೆ. ಯಾವ ರೀತಿ ಆಚರಣೆ ಮಾಡಬೇಕು ಅನ್ನೋದು ಸಭೆಯಲ್ಲಿ ತೀರ್ಮಾನಿಸುತ್ತೇವೆ ಅಂತ ಭರವಸೆ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯೋಗಿ ಆದಿತ್ಯನಾಥ್‍ಗೆ ಅವರ ಚಪ್ಪಲಿಯಿಂದಲೇ ಹೊಡೆಯಬೇಕು ಅನ್ನಿಸಿತು: ಉದ್ದವ್ ಠಾಕ್ರೆ

    ಯೋಗಿ ಆದಿತ್ಯನಾಥ್‍ಗೆ ಅವರ ಚಪ್ಪಲಿಯಿಂದಲೇ ಹೊಡೆಯಬೇಕು ಅನ್ನಿಸಿತು: ಉದ್ದವ್ ಠಾಕ್ರೆ

    ಮುಂಬೈ: ಯೋಗಿ ಆದಿತ್ಯನಾಥ್ ಅವರ ಇತ್ತೀಚೆಗೆ ಪಾಲ್ಗರ್ ಭೇಟಿ ವೇಳೆ ಅವರ ಚಪ್ಪಲಿಯಿಂದಲೇ ಅವರಿಗೆ ಹೊಡೆಯಬೇಕು ಅಂತ ಅನ್ನಿಸಿತು ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಕಿಡಿ ಕಾರಿದ್ದಾರೆ.

    ಯೋಗಿಯವರು ಚಪ್ಪಲಿ ಹಾಕಿಕೊಂಡೆ ಮರಾಠ ಯೋಧ ಛತ್ರಪತಿ ಶಿವಾಜಿಯವರ ಫೋಟೋಕ್ಕೆ ಹಾರವನ್ನು ಹಾಕಿದ್ದನ್ನು ನೋಡಿ ಅದೇ ಚಪ್ಪಲಿಯಿಂದ ಅವರ ಮುಖಕ್ಕೆ ಹೊಡೆಯುವ ಮನಸ್ಸಾಯಿತು. ಯೋಗಿಯವರು ಕಪಟವೇಷಧಾರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿಎಂ ಆದಿತ್ಯನಾಥ್ ಯೋಗಿ ಅಲ್ಲ ಒಬ್ಬ ಭೋಗಿ. ಯೋಗಿ ಅಗಿದ್ದರೆ ಎಲ್ಲವನ್ನು ತ್ಯಜಿಸಿ ಗುಹೆಯಲ್ಲಿ ಕೂರಬೇಕಿತ್ತು. ಇವರು ಮುಖ್ಯಮಂತ್ರಿ ಗಾದಿಯಲ್ಲಿ ಕೂತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಈ ಹಿಂದಿನ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು ತಮ್ಮ ದಾರಿಯಲ್ಲಿ ಬರುವವರನ್ನು ಬಿಜೆಪಿ ಕೊಲೆಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

    ಮುಂದಿನ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ. ನಾಸಿಕ್ ಮತ್ತು ಪರ್ಭಾನಿ ಹಾಗೂ ಪಾಲ್ಗರ್ ಲೋಕಸಭಾ ಉಪಚುನಾವಣೆ ಗೆಲುವು ವಿಜಯದ ಟ್ರೇಲರ್ ಅಷ್ಟೆ. ಮುಂದಿನ ನಮ್ಮ ಹೆಜ್ಜೆಗಳು ಮಹಾರಾಷ್ಟ್ರ ರಾಜಕಾರಣದ ದಿಶೆಯನ್ನೇ ಬದಲಾಯಿಸುತ್ತದೆ ಎಂದು ಗುಡುಗಿದರು.