Tag: shivajinagar

  • ರೋಷನ್ ಬೇಗ್‍ಗೆ ಶಾಕ್ – ಶರವಣಗೆ ಬಿಜೆಪಿ ಟಿಕೆಟ್

    ರೋಷನ್ ಬೇಗ್‍ಗೆ ಶಾಕ್ – ಶರವಣಗೆ ಬಿಜೆಪಿ ಟಿಕೆಟ್

    ಬೆಂಗಳೂರು: ರೋಷನ್ ಬೇಗ್‍ಗೆ ಬಿಜೆಪಿ ಶಾಕ್ ನೀಡಿದ್ದು ಶಿವಾಜಿ ನಗರ ಕ್ಷೇತ್ರದ ಟಿಕೆಟ್ ಬಿಬಿಎಂಪಿ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ.

    ಅನರ್ಹಗೊಂಡಿರುವ ಶಾಸಕ ರೋಷನ್ ಬೇಗ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಐಎಂಎ ಕೇಸ್‍ನಲ್ಲಿ ರೋಷನ್ ಬೇಗ್ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರೆ ಕೆಟ್ಟ ಹೆಸರು ಬರಬಹುದು ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಪಕ್ಷದ ಬಾವುಟವನ್ನು ಬಿಜೆಪಿ ಇಂದು ನೀಡಿರಲಿಲ್ಲ. ಶರವಣ ಅವರು ಹಲಸೂರು ವಾರ್ಡ್ ಪಾಲಿಕೆ ಸದಸ್ಯೆ ಮಮತಾ ಅವರ ಪತಿಯಾಗಿದ್ದಾರೆ.

    ತುಮಕೂರಿನಲ್ಲಿ ರೋಷನ್ ಬೇಗ್ ಬಗ್ಗೆ ಬಿಜೆಪಿ ಸೇರ್ಪಡೆ ಬಗ್ಗೆ ಕೇಳಲಾದ ಪ್ರಶ್ನೆಗೆ ಸಿಎಂ ಬಿಎಸ್‍ವೈ ಇನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಮಾಡಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರತಿಕ್ರಿಯಿಸಿದ್ದರು.

    ಇಂದು ಬಿಜೆಪಿಗೆ 16 ಮಂದಿ ಅನರ್ಹ ಶಾಸಕರು ಸೇರ್ಪಡೆಯಾಗಿದ್ದಾರೆ. ಸೇರ್ಪಡೆಯಾದ ಬೆನ್ನಲ್ಲೇ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ಟಿಕೆಟ್ ಗಳನ್ನು ಅನರ್ಹರಿಗೆ ಬಿಜೆಪಿ ಹಂಚಿಕೆ ಮಾಡಿದೆ. ಈ ಮೂಲಕ ಅನರ್ಹರಿಗೆ ನೀಡಿದ ವಚನವನ್ನು ಸಿಎಂ ಈಡೇರಿಸಿದ್ದಾರೆ.

    ರಮೇಶ್ ಜಾರಕಿಹೊಳಿ(ಗೋಕಾಕ್), ಎಂಟಿಬಿ ನಾಗರಾಜ್(ಹೊಸಕೋಟೆ), ಎಚ್. ವಿಶ್ವನಾಥ್(ಹುಣಸೂರು), ಮಹೇಶ್ ಕುಮಟಳ್ಳಿ(ಅಥಣಿ) ಶ್ರೀಮಂತ ಪಾಟೀಲ್(ಕಾಗವಾಡ) ಶಿವರಾಂ ಹೆಬ್ಬಾರ್(ಯಲ್ಲಾಪುರ) ಬಿಸಿ ಪಾಟೀಲ್(ಹಿರೇಕೆರೂರು) ಆನಂದ್ ಸಿಂಗ್ (ವಿಜಯ ನಗರ), ಡಾ.ಸುಧಾಕರ್(ಚಿಕ್ಕಬಳ್ಳಾಪುರ) ಬೈರತಿ ಬಸವರಾಜ್(ಕೆಆರ್ ಪುರ) ಎಸ್‍ಟಿ ಸೋಮಶೇಖರ್(ಯಶವಂತಪುರ), ಗೋಪಾಲಯ್ಯ(ಮಹಾಲಕ್ಷ್ಮಿ ಲೇಔಟ್), ನಾರಾಯಣ ಗೌಡ(ಕೆ.ಆರ್.ಪೇಟೆ) ಅವರಿಗೆ ಟಿಕೆಟ್ ನೀಡಲಾಗಿದೆ.

  • ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್‍ನಲ್ಲಿ ಜಟಾಪಟಿ

    ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್‍ನಲ್ಲಿ ಜಟಾಪಟಿ

    ಬೆಂಗಳೂರು: ಉಪಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‍ನಲ್ಲಿ ಟಿಕೆಟ್ ಲಾಬಿ ಜೋರಾಗಿದೆ. ಉಪಸಮರದ ಸಮಯದಲ್ಲಿ ಕಾಂಗ್ರೆಸ್ ಆಂತರಿಕ ಕಲಹ ಹೆಚ್ಚಾಗುತ್ತಿದ್ದು, ಮೂಲ ಕಾಂಗ್ರೆಸ್ಸಿಗರು ಮತ್ತು ವಲಸೆ ಕಾಂಗ್ರೆಸ್ ನಾಯಕರ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟಿದೆ. ಶಿವಾಜಿನಗರದ ಟಿಕೆಟ್ ಯಾರಿಗೆ ನೀಡಬೇಕೆಂಬ ವಿಚಾರದಲ್ಲಿ ಕಳೆದೊಂದು ವಾರದಿಂದ ಕಾಂಗ್ರೆಸ್ ನಾಯಕರ ನಡುವೆ ಚರ್ಚೆಗಳು ನಡೆಯುತ್ತಿವೆ.

    ವಿಪಕ್ಷ ನಾಯಕ ಸಿದ್ದರಾಮಯ್ಯನವರು ಶಿವಾಜಿನಗರದ ಟಿಕೆಟ್ ನ್ನು ರಿಜ್ವಾನ್ ಅರ್ಷದ್ ಅವರಿಗೆ ಕೊಡಿಸುವ ಪ್ರಯತ್ನದಲ್ಲಿದ್ದಾರೆ. ರಿಜ್ವಾನ್ ಅರ್ಷದ್ ಅವರಿಗೆ ಎರಡು ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಈಗ ಮತ್ತೆ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡೋದು ಬೇಡ ಎಂದು ಮೂಲ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೇಲೆ ಒತ್ತಡ ಹಾಕಿದ್ದಾರೆ. ಸಲೀಂ ಅಹಮ್ಮದ್ ಅಥವಾ ಹುಸೇನ್‍ಗೆ ಟಿಕೆಟ್ ನೀಡುವಂತೆ ಮೂಲ ಕಾಂಗ್ರೆಸ್ಸಿಗರು ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

    ಪ್ರತಿಯೊಂದು ವಿಚಾರದಲ್ಲಿ ಸಿದ್ದರಾಮಯ್ಯರದದೆ ಮೇಲುಗೈ ಏಕೆ? ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಿದ್ದರೂ ಅವರು ಗೆಲ್ಲಲಿಲ್ಲ. ಪದೇ ಪದೇ ಒಬ್ಬರಿಗೆ ಅವಕಾಶ ನೀಡೋದು ಸರಿ ಅಲ್ಲ. ಬೇರೆಯವರಿಗೂ ಅವಕಾಶ ನೀಡಬೇಕೆಂದು ಮೂಲ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

  • ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ಬೆಂಗಳೂರು: ನಮ್ಮ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟವು ಒತ್ತಾಯಿಸಿದೆ.

    ಈ ಹಿಂದೆ ವೀರಶೈವ ಸಮಾಜದ ಮುಖಂಡರು ತಮ್ಮ ಸಮಾಜದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಮತ್ತು 5 ಮಂದಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಬೆನ್ನಲ್ಲೆ, ಶಿವಾಜಿನಗರದ ಶಾಸಕ ಆರ್.ರೋಷನ್ ಬೇಗ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ಸಮಿಉಲ್ಲಾ ಖಾನ್ ಒತ್ತಾಯಿಸಿದ್ದಾರೆ.

    ರಾಜಕೀಯದಲ್ಲಿ ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಕಾಂಗ್ರೆಸ್‍ನಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರೋಷನ್ ಬೇಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

  • ವಿಶ್ವದಾದ್ಯಂತ ಕ್ರಿಸ್‍ಮಸ್ ಸಂಭ್ರಮ – ಕಣ್ಮನ ಸೆಳೀತಿದೆ ಶಿವಾಜಿನಗರದ ಸೆಂಟ್ ಬೆಸಿಲಿಕಾ ಚರ್ಚ್

    ವಿಶ್ವದಾದ್ಯಂತ ಕ್ರಿಸ್‍ಮಸ್ ಸಂಭ್ರಮ – ಕಣ್ಮನ ಸೆಳೀತಿದೆ ಶಿವಾಜಿನಗರದ ಸೆಂಟ್ ಬೆಸಿಲಿಕಾ ಚರ್ಚ್

    ಬೆಂಗಳೂರು: ದೇಶಾದ್ಯಂತ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಎಲ್ಲಾ ಚರ್ಚ್‍ಗಳಲ್ಲಿ ಕ್ರಿಶ್ಚಿಯನ್ನರು ಯೇಸುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಕೆಜಿಎಫ್ ಸೇರಿದಂತೆ ರಾಜ್ಯದ ಎಲ್ಲಾ ಚರ್ಚ್‍ಗಳು ವರ್ಣರಂಜಿತವಾಗಿದ್ದು, ಕಣ್ಮನ ಸೆಳೀತಿದೆ.

    ಬೆಂಗಳೂರಿನಲ್ಲಿ ಕ್ರಿಸ್‍ಮಸ್ ಆಚರಣೆ ಜೋರಾಗಿದೆ. ಕ್ಯಾಥೋಲಿಕರ ಅತ್ಯಂತ ಪ್ರಾಚೀನ ಚರ್ಚ್‍ಗಳಲ್ಲಿ ಒಂದಾದ ಶಿವಾಜಿನಗರದ ಸಂತ ಮರಿಯ ಬೆಸಲಿಕ್ ಚರ್ಚಿನಲ್ಲಿ ತಡರಾತ್ರಿಯಿಂದಲೇ ಕ್ರಿಸ್‍ಮಸ್ ಆಚರಣೆ ಜೋರಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನ ಚರ್ಚಿನ ಪ್ರಾರ್ಥನೆಯಲ್ಲಿ ಭಾಗವಹಿಸಿದ್ರು. ವಿದ್ಯುತ್ ದೀಪಾಲಂಕಾರದೊಂದಿಗೆ ಚರ್ಚ್ ಝಗಮಗಿಸುತ್ತಿತ್ತು. ಯುವ ಜನತೆ ಸಾಂತಾ ಕ್ಲಾಸ್ ಟೋಪಿಗಳನ್ನ ಧರಿಸಿ ಸೆಲ್ಫೀ ಮೂಡ್ ನಲ್ಲಿದ್ರು.

    ಬೆಸಿಲಿಕ ಚರ್ಚಿಗೆ ಕೇವಲ ಕ್ರೈಸ್ತರು ಮಾತ್ರವಲ್ಲದೇ ಎಲ್ಲಾ ಧರ್ಮಿಯರು ಆಗಮಿಸಿ ಕ್ರಿಸ್ ಮಸ್ ಆಚರಣೆ ಮಾಡಿದ್ರು. ಅತ್ತ ಬೇಥ್ಲೆಹೇಮ್, ಜೆರುಸಲೇಂ, ರೋಮ್, ವ್ಯಾಟಿಕನ್ ಸಿಟಿಗಳಲ್ಲಿ ಕ್ರಿಸ್‍ಮಸ್ ಸಂಭ್ರಮ ಉಕ್ಕಿ ಹರೀತಿದೆ. ಈ ಮಧ್ಯೆ ಒಡಿಶಾದ ಪುಚಿ ಸಮುದ್ರ ತೀರದಲ್ಲಿ ವಿಶ್ವದ ಅತಿದೊಡ್ಡ ಸಾಂತಾ ಕ್ಲಾಸ್ ಚಿತ್ರವನ್ನ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಬಿಡಿಸಿದ್ದಾರೆ.

    ಮಂಗಳೂರಿನ ಬಹುತೇಕ ಎಲ್ಲ ಚರ್ಚ್‍ಗಳಲ್ಲಿಯೂ ರಾತ್ರಿಯೇ ವಿಶೇಷ ಪ್ರಾರ್ಥನೆ ನಡೆದ್ವು. ಕುಲಶೇಖರ, ಆಗ್ನೆಸ್, ಮಿಲಾಗ್ರಿಸ್ ಸೇರಿದಂತೆ ಮಂಗಳೂರಿನ ಹೆಸರಾಂತ ಚರ್ಚ್ ಗಳಲ್ಲಿ ಭಾರೀ ಸಂಖ್ಯೆಯಲ್ಲಿ ಕ್ರೈಸ್ತರು ಸೇರಿದ್ದರು.

    ಉತ್ತರ ಕನ್ನಡ ಜಿಲ್ಲೆಯಲ್ಲೂ ಕ್ರಿಸ್‍ಮಸ್ ಸಂಭ್ರಮ ಮನೆ ಮಾಡಿದೆ. ಕಾರವಾರ ನಗರದ ಕ್ಯಾಥಡ್ರಲ್ ಚರ್ಚನಲ್ಲಿ ಕ್ರೈಸ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ರು.

    ಶಿವಮೊಗ್ಗದಲ್ಲಿ ಕ್ರೈಸ್ತರು ಕ್ರಿಸ್‍ಮಸ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದರು. ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಮಧ್ಯರಾತ್ರಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಿವಮೊಗ್ಗ ಪ್ರಾಂತ್ಯ ಧರ್ಮಾಧ್ಯಕ್ಷ ಪ್ರಾಸಿಸ್ ಮೊರಾಸ್ ವಿಶೇಷ ಪೂಜೆ ಸಲ್ಲಿಸಿ, ಎಲ್ಲರ ಒಳಿತಿಗಾಗಿ ಪ್ರಾರ್ಥಿಸಿದರು.