Tag: Shivakumar Sri

  • ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಕೊಡುವಂತೆ ಯಾರೂ ಆಗ್ರಹಿಸಬೇಡಿ: ಸಿದ್ದಲಿಂಗ ಸ್ವಾಮೀಜಿ

    ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಕೊಡುವಂತೆ ಯಾರೂ ಆಗ್ರಹಿಸಬೇಡಿ: ಸಿದ್ದಲಿಂಗ ಸ್ವಾಮೀಜಿ

    ತುಮಕೂರು: ಶ್ರೀ ಶಿವಕುಮಾರ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಕೊಡುವಂತೆ ಯಾರೂ ಆಗ್ರಹಿಸಬೇಡಿ ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗಸ್ವಾಮಿಜಿಗಳು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶಸ್ತಿ ಕೊಡಿ ಎನ್ನುವ ಮಾತನ್ನು ಯಾರು ಕೂಡಾ ಆಡಬಾರದು. ಅದನ್ನ ಕೇಳಿ ಪಡೆಯುವ ಪ್ರಶ್ನೆ ಇಲ್ಲ. ಅದಾಗಿಯೇ ಬಂದದ್ದು ಅಮೃತಕ್ಕೆ ಸಮಾನ, ಕೇಳಿ ಬಂದಿದ್ದು ವಿಷಕ್ಕೆ ಸಮಾನ ಆದ್ದರಿಂದ ಬಾಯ್ಬಿಟ್ಟು ಕೇಳುವಂತಹ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಶೀಘ್ರವೇ ಕೋವಿಡ್-19 ಕಾಲರ್ ಟ್ಯೂನ್ ಬಂದ್?

    ಯಾರು ಕೇಳಲೇ ಬಾರದು ಅದರ ಬಗ್ಗೆ ಚರ್ಚೆ ಮಾಡಲೇಬಾರದು. ಶ್ರೀಗಳು ಭಾರತ ರತ್ನ ವನ್ನು ಮೀರಿರುವಂತವರು. ಅದು ಬಂದ ಕ್ಷಣಕ್ಕೆ ಅವರ ಗೌರವ ಹೆಚ್ಚುವಂತಹದ್ದಲ್ಲ. ಅದನ್ನ ನಾವು ಯಾರು ನಿರೀಕ್ಷೆ ಮಾಡಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಟ್ಟು 48 ಕೇಸ್ – ಬೆಂಗಳೂರು ಸಹಿತ 4 ಜಿಲ್ಲೆಗಳಲ್ಲಿ ಮಾತ್ರ ಕೊರೊನಾ ಪ್ರಕರಣ

  • ಶತಾಯುಷಿ ಶ್ರೀಗಳ ಪಾದಮುಟ್ಟಿ ನಮಸ್ಕರಿಸಿದ ಯಶ್

    ಶತಾಯುಷಿ ಶ್ರೀಗಳ ಪಾದಮುಟ್ಟಿ ನಮಸ್ಕರಿಸಿದ ಯಶ್

    ತುಮಕೂರು: ರಾಕಿಂಗ್ ಸ್ಟಾರ್ ಯಶ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

    ನಟ ಯಶ್ ಶುಕ್ರವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ತುಮಕೂರಿಗೆ ಬಂದಿದ್ದರು. ನಂತರ ಅವರು ಶ್ರೀಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಶತಾಯುಷಿ ಶಿವಕುಮಾರ ಸ್ವಾಮೀಜಿಗಳ ಪಾದಮುಟ್ಟಿ ನಮಸ್ಕರಿಸಿದ್ದು, ಅಷ್ಟೇ ಅಲ್ಲದೇ ಕೆಲ ಹೊತ್ತು ಅವರ ಮುಂದೆ ಕುಳಿತುಕೊಂಡಿದ್ದಾರೆ. ಇನ್ನು ಮಠದ ವತಿಯಿಂದ ಯಶ್ ವರಿಗೆ ಹಣ್ಣು ನೀಡಿ, ಶಾಲು ಹಾಕಿ ಗೌರವಿಸಲಾಯಿತು.

    ಇತ್ತೀಚೆಗಷ್ಟೆ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದ್ದು, ಜ್ವರ ಹಾಗೂ ಕಫ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಯಶ್ ಶ್ರೀಗಳನ್ನು ಭೇಟಿಯಾಗಿದ್ದಾರೆ ಅಂತಾ ತಿಳಿದು ಬಂದಿದೆ.

    ಪ್ರಸ್ತುತ ಯಶ್ ದಕ್ಷಿಣ ಭಾರತದ ಬಹುನಿರೀಕ್ಷಿತ ಕೆ.ಜಿ.ಎಫ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಿನಿಮಾ ತೆರೆಕಾಣಲಿದೆ. ಇದನ್ನು ಓದಿ: ಮಗುವಿನೊಂದಿಗಿರೋ ಯಶ್ ಫೋಟೋ ಹಾಕಿ ಪತ್ನಿ ರಾಧಿಕಾ ಹೀಗೆ ತಮಾಷೆ ಮಾಡಿದ್ರು!