Tag: Shivakumar Swamiji

  • ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ತುಮಕೂರು: ಡಾ. ಶಿವಕುಮಾರ್ ಮಹಾಶಿವಯೋಗಿಗಳ (Shivakumar Swamiji) ಜೀವನ ಪಯಣ ಸೇವೆ, ಸಮರ್ಪಣೆ ಮತ್ತು ಪರೋಪಕಾರದ ವಿಶಿಷ್ಟ ಉದಾಹರಣೆಯಾಗಿದೆ. ನಿಜವಾದ ಮಾನವೀಯತೆ ಜಾತಿ, ಧರ್ಮ ಮತ್ತು ಭೌತಿಕತೆಯನ್ನು ಮೀರಿದೆ ಎಂದು ಅವರ ಜೀವನ ನಮಗೆ ಕಲಿಸುತ್ತದೆ. ಅವರ ಕೊಡುಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದರು.

    ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಮಹಾಶಿವಯೋಗಿಗಳ 6ನೇ ಪುಣ್ಯ ಸಂಸ್ಮರಣೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ – ಮಲ್ಲಿಕಾರ್ಜುನ ಖರ್ಗೆ

    ಶಿವಕುಮಾರ ಮಹಾಸ್ವಾಮೀಜಿ ಅವರು ಸರಳ ಜೀವನ ಮತ್ತು ಉನ್ನತ ಚಿಂತನೆಯ ತತ್ವವನ್ನು ಅನುಸರಿಸಿ, ಇತರರನ್ನು ಅದೇ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸಿದರು. ಅವರು ಮಾನವೀಯತೆಯ ನಿಜವಾದ ಸಂಕೇತವಾಗಿದ್ದಾರೆ. ಅವರು ಜಾತಿ ಮತ್ತು ಧರ್ಮವನ್ನು ಮೀರಿ ಸಮಾಜಕ್ಕೆ ಸೇವೆ ಸಲ್ಲಿಸಿದ ಮಹಾನ್ ಜ್ಞಾನಿ. ಅವರಿಗೆ ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ಭಾರತ ಸರ್ಕಾರವು ಅವರಿಗೆ 2015ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂದರು. ಇದನ್ನೂ ಓದಿ: ಸಿ.ಟಿ ರವಿಯನ್ನ ಊರೆಲ್ಲ ತಿರುಗಿಸಿದ್ದೇ ಸಾಧನೆ ಅಲ್ಲ – ಸಾಲು ಸಾಲು ದರೋಡೆಗೆ ಕೋಟಾ ಕಿಡಿ

    ಭಾರತೀಯ ಸಂಸ್ಕೃತಿ ಅನಂತವಾದುದು. ಇದನ್ನು ನಮ್ಮ ಸಂತರು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಿದ್ದಾರೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ನಮ್ಮ ಧರ್ಮದ ಏಕತೆ ಮತ್ತು ಸಮಗ್ರತೆಗೆ ಮತ್ತು ಸನಾತನ ಧರ್ಮದ ಪರಂಪರೆಯನ್ನು ಶ್ರೀಮಂತಗೊಳಿಸಲು ಸಾಧುಗಳು ಮತ್ತು ಸಂತರು ದೊಡ್ಡ ಕೊಡುಗೆ ನೀಡಿದ್ದಾರೆ. ಸಾಧುಗಳು, ಸಂತರು, ಆಚಾರ್ಯರು ಮತ್ತು ಋಷಿಮುನಿಗಳು ವಿಶ್ವ ವೇದಿಕೆಯಲ್ಲಿ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜವನ್ನು ಹಾರಿಸಿದ್ದಾರೆ. ಪ್ರಸ್ತುತ ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ‘ಮಹಾ ಕುಂಭ’ ಒಂದು ಉದಾಹರಣೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಟ ದರ್ಶನ್‌ ಗನ್‌ ಸೀಜ್‌ ಮಾಡಿದ ಪೊಲೀಸರು

    111 ವರ್ಷಗಳಿಂದ ಮಾನವೀಯತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಪರಮ ಪೂಜ್ಯ ಡಾ.ಶಿವಕುಮಾರ್ ಸ್ವಾಮೀಜಿಯವರ ಆರನೇ ಪುಣ್ಯತಿಥಿಗೆ ಆಗಮಿಸುವ ಮೂಲಕ ಪೂಜ್ಯರ ದರ್ಶನ ಮತ್ತು ಆಶೀರ್ವಾದ ಪಡೆಯುವ ಅವಕಾಶ ನನಗೆ ದೊರತಿರುವುದು ಸಂತಸ ತಂದಿದೆ. ಧಾರ್ಮಿಕತೆ, ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ನಾಡಾಗಿರುವ ಶ್ರೀ ಸಿದ್ದಗಂಗಾ ಮಠವು ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ ಎಂದು ನುಡಿದರು. ಇದನ್ನೂ ಓದಿ: Ramanagara | ಮೈಕ್ರೋ ಫೈನಾನ್ಸ್ ಹಾವಳಿ – ಮಹಿಳೆ ಆತ್ಮಹತ್ಯೆ

    ಸಿದ್ದಗಂಗಾ ಮಠಕ್ಕೆ 600 ವರ್ಷಗಳ ಇತಿಹಾಸವಿದೆ. ಈ ಮಠವು ಧಾರ್ಮಿಕ ಸ್ಥಳವಾಗಿದೆ ಮತ್ತು ಶಿಕ್ಷಣ, ಸೇವೆ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿದೆ. ಈ ಮಠ ಸಮಾಜವನ್ನು ಸಮರ್ಪಣೆ, ದಾನ, ಮಾನವೀಯತೆಯ ಸೇವೆ ಮತ್ತು ಜ್ಞಾನದ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸುತ್ತಿದೆ. ಅಲ್ಲದೇ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಪ್ರಚಾರ ಮತ್ತು ಸಾಮಾಜಿಕ ಪ್ರಗತಿಯಲ್ಲಿ ಪ್ರಮುಖ ಕೊಡುಗೆಯನ್ನು ನೀಡಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ – ಅಡಿಕೆ, ಕೊಬ್ಬರಿ ಬೆಳೆಗಾರರ ಸಮಸ್ಯೆ ಪರಿಹಾರದ ಬಗ್ಗೆ ಸಚಿವರ ಚರ್ಚೆ

    ಸಿದ್ಧಗಂಗಾ ಮಠವು ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ತರುವ ಮೂಲಕ ಸಮಾಜವನ್ನು ಸ್ವಾವಲಂಬಿ ಮಾಡುವ ಮಹತ್ವದ ಕೆಲಸವನ್ನು ಮಾಡುತ್ತಿದೆ ಮತ್ತು ಸಾಮಾಜಿಕ ಸಮಾನತೆ ಮತ್ತು ಸಮಾನತೆ, ಸಮೃದ್ಧಿ, ಶ್ರೇಷ್ಠತೆ, ಸಬಲೀಕರಣ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಮೌಲ್ಯಯುತವಾದ ಶಿಕ್ಷಣವನ್ನು ನೀಡುತ್ತಿದೆ. ‘ನಡೆದಾಡುವ ದೇವರು’ ಎಂದು ಕರೆಯಲ್ಪಡುವ ಡಾ.ಶಿವಕುಮಾರ್ ಮಹಾಶಿವಯೋಗಿ ಅವರು ತನ್ನ ಸಂಪೂರ್ಣ ಜೀವನವನ್ನು ಮಾನವ ಸೇವೆ, ಶಿಕ್ಷಣ ಮತ್ತು ಸಾಮಾಜಿಕ ಉನ್ನತಿಗೆ ಮುಡಿಪಾಗಿಟ್ಟವರು. ಕರ್ನಾಟಕ ಮತ್ತು ಭಾರತದಾದ್ಯಂತ ಅವರ ಕೊಡುಗೆ ಅನನ್ಯ ಮತ್ತು ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನ ವದಂತಿ – ಕಿಲೋ ಮೀಟರ್‌ಗಟ್ಟಲೇ ಕ್ಯೂ ನಿಂತ ಜನ!

    ಡಾ.ಶಿವಕುಮಾರ ಸ್ವಾಮೀಜಿಯವರು ಶಿಕ್ಷಣವನ್ನು ಸಮಾಜದ ಬದಲಾವಣೆಯ ಪ್ರಮುಖ ಸಾಧನವೆಂದು ಪರಿಗಣಿಸಿದ್ದಾರೆ. ಅವರು ಶಾಲೆಗಳು, ಕಾಲೇಜುಗಳು ಮತ್ತು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳನ್ನು ಒಳಗೊಂಡಂತೆ 125 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. ಮಠದ ಅಡಿಯಲ್ಲಿ ನಡೆಯುವ ಸಂಸ್ಥೆಗಳು ಜಾತಿ, ಧರ್ಮ, ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೇ ಶಿಕ್ಷಣವನ್ನು ನೀಡುತ್ತಿವೆ. ಲಕ್ಷಾಂತರ ಬಡ ಮತ್ತು ಹಿಂದುಳಿದ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಗದ್ಗುರು ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ತಮ್ಮ ದೂರದೃಷ್ಟಿ ಮತ್ತು ಸದ್ಭಾವನೆಯಿಂದ ಮಠದ ಶ್ರೇಷ್ಠ ಸಂಪ್ರದಾಯಗಳು ಮತ್ತು ಪ್ರಯತ್ನಗಳನ್ನು ಮುನ್ನಡೆಸುತ್ತಿದ್ದಾರೆ ಮತ್ತು ಮಠದ ಸೇವಾ ಮನೋಭಾವ ಮತ್ತು ಕೀರ್ತಿಯನ್ನು ಜಾಗತಿಕ ಆಯಾಮಗಳಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಪ್ರಶಂಸಿದರು. ಇದನ್ನೂ ಓದಿ: ವಕೀಲೆಗೆ ಲೈಂಗಿಕ ಕಿರುಕುಳ ಆರೋಪ – ಐಟಿ ಅಧಿಕಾರಿ ವಿರುದ್ಧ ಎಫ್‍ಐಆರ್

    ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್, ಸಿದ್ದಲಿಂಗ ಮಹಾಸ್ವಾಮಿಗಳು ಮತ್ತು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಕೇಂದ್ರ ಮಾನವಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಶಾಸಕರಾದ ಬಿ. ಸುರೇಶ್ ಗೌಡ ಉಪಸ್ಥಿತರಿದ್ದರು. ಇದನ್ನೂ ಓದಿ: Kotekar Bank Robbery | ಬ್ಯಾಂಕ್‌ನಲ್ಲಿ ಚಿನ್ನ ದೋಚಲು ನಮಾಜ್ ಟೈಂ ಸೂಚಿಸಿದ್ದೇ ಆ ಸ್ಥಳೀಯ ವ್ಯಕ್ತಿ – ರಹಸ್ಯ ಸ್ಫೋಟ

  • ಸಿದ್ಧಗಂಗಾ ಶ್ರೀಗಳು ಮತ್ತು ಸ್ಯಾಂಡಲ್ ವುಡ್ ನಂಟು

    ಸಿದ್ಧಗಂಗಾ ಶ್ರೀಗಳು ಮತ್ತು ಸ್ಯಾಂಡಲ್ ವುಡ್ ನಂಟು

    ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೂ ಸ್ಯಾಂಡಲ್ ವುಡ್ ಗೂ ಗುರು ಶಿಷ್ಯರ ನಂಟಿದೆ. ಹಾಗಾಗಿ ಕನ್ನಡ ಸಿನಿಮಾ ರಂಗದಲ್ಲಿ ಅವರ ಕುರಿತಾಗಿ ಡಾಕ್ಯುಮೆಂಟರಿ, ವೆಬ್ ಸೀರಿಸ್ ಮತ್ತು ಸಿನಿಮಾಗಳ ರೂಪದಲ್ಲಿಯೂ ಶಿವಕುಮಾರ ಸ್ವಾಮೀಜಿ ದರ್ಶನ ಭಾಗ್ಯ ನೀಡಿದ್ದಾರೆ.

    ಅಲ್ಲದೇ, ಸಿನಿಮಾ ಸಂಬಂಧಿ ಅನೇಕ ಕಾರ್ಯಕ್ರಮಗಳಿಗೆ ಶ್ರೀಗಳು ಆಗಮಿಸಿದ ಆಶೀರ್ವಾದ ಮಾಡಿದ್ದಾರೆ. ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಡಾ. ಅಂಬರೀಶ್, ಶಿವರಾಜ್ ಕುಮಾರ್, ಜಗ್ಗೇಶ್, ಯಶ್, ಸುದೀಪ್, ರಶ್ಮಿಕಾ ಮಂದಣ್ಣ, ಅರ್ಜುನ್ ಸರ್ಜಾ, ಉಪೇಂದ್ರ ಸೇರಿದಂತೆ  ಸಾಕಷ್ಟು ಕಲಾವಿದರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಕೂಡ ಪಡೆದಿದ್ದಾರೆ. ಇದನ್ನೂ ಓದಿ:  ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ಶ್ರೀಗಳೇ ನಟಿಸಿರುವ ಸಿನಿಮಾ

    ಓಂಕಾರ್ ನಿರ್ದೇಶನದಲ್ಲಿ ಮೂಡಿ ಬಂದ ಜ್ಞಾನ ಜ್ಯೋತಿ ಸಿದ್ಧಗಂಗಾ ಸಿನಿಮಾದಲ್ಲಿ ಸ್ವತಃ ಶಿವಕುಮಾರ ಸ್ವಾಮೀಜಿ ಕೂಡ ನಟಿಸಿದ್ದಾರೆ. ಇದು ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾವಾಗಿದ್ದು, ಸಿದ್ಧಗಂಗಾ ಮಠದ ಇತಿಹಾಸವನ್ನೇ ಹೇಳುವಂತಹ ಚಿತ್ರ ಇದಾಗಿದೆ. ವಿಷ್ಣುವರ್ಧನ್, ಭಾರತಿ ವಿಷ್ಣುವರ್ಧನ್, ರಾಷ್ಟ್ರ ಕವಿ ಜಿ.ಎಸ್. ಶಿವರುದ್ರಪ್ಪ, ಶ್ರೀಧರ್ ಸೇರಿದಂತೆ ಅನೇಕ ಹಿರಿಯ ಕಲಾವಿದರು ನಟಿಸಿದ ಸಿನಿಮಾ ಇದಾಗಿದೆ. ಸಿನಿಮಾದ ಮತ್ತೊಂದು ವಿಶೇಷ  ಅಂದರೆ, ಮಠದಲ್ಲಿ ಓದುತ್ತಿದ್ದ ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಹಾಡೊಂದರಲ್ಲಿ ತೋರಿಸಿದ್ದಾರೆ ನಿರ್ದೇಶಕರು.

    ಶ್ರೀಗಳ ಕುರಿತು ವೆಬ್ ಸಿರೀಸ್

    ಸಿದ್ಧಗಂಗಾ ಶ್ರೀಗಳ ಕುರಿತಾಗಿ ಹಂಸಲೇಖ ವೆಬ್ ಸೀರಿಸ್ ವೊಂದನ್ನು ತಯಾರಿಸಲು ರೆಡಿ ಮಾಡಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಸಂಸ್ಕೃತ ಸೇರಿದಂತೆ ಹತ್ತು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಈ ವೆಬ್ ಸೀರಿಸ್ ನಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಶ್ರೀಗಳ ಪಾತ್ರ ಮಾಡಬೇಕು ಎನ್ನುವುದು ಹಂಸಲೇಖಾ ಆಸೆ. ಹಾಗಾಗಿ ಅಮಿತಾಭ್ ಅವರಿಗೆ ಈ ವಿಷಯವನ್ನು ಮುಟ್ಟಿಸಿದ್ದಾರೆ. ಇನ್ನಷ್ಟೇ ಇದರ ಶೂಟಿಂಗ್ ಆರಂಭವಾಗಬೇಕಿದೆ. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

    ನಿಡಸಾಲೆ ಪುಟ್ಟಸ್ವಾಮಯ್ಯ ತಯಾರಿಸಿದ ಸಿದ್ದಗಂಗಾ

    ಕನ್ನಡದ ಹೆಸರಾಂತ ಪ್ರಕಾಶಕ, ಲೇಖಕ ಹಾಗೂ ನಟ ನಿಡಸಾಲೆ ಪುಟ್ಟಸ್ವಾಮಯ್ಯ ನಿರ್ಮಾಣದಲ್ಲಿ ‘ಸಿದ್ದಗಂಗಾ’ ಹೆಸರಿನಲ್ಲಿ ಸಿನಿಮಾ ಮೂಡಿ ಬಂದಿದೆ. ಸಿದ್ಧಗಂಗಾ ಚಿತ್ರವು ಸಿದ್ದ ಮತ್ತು ಗಂಗಾರ ಬದುಕಿನ ಕಥೆಯಾಗಿದ್ದರೂ, ಸಿದ್ದಗಂಗಾ ಮಠದ ಇತಿಹಾಸವನ್ನೂ ಈ ಚಿತ್ರ ಹೇಳುತ್ತದೆ. ಈ ಸಿನಿಮಾದ ಆಡಿಯೋವನ್ನು ಸ್ವತಃ ಸಿದ್ಧಗಂಗಾ ಶ್ರೀಗಳೇ ಮಾಡಿದ್ದು ವಿಶೆಷ. ಜಿ ಮೂರ್ತಿ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ನೈಜ ಬದುಕಿನ ಕಥಾಹಂದರ ಹೊಂದಿತ್ತು.

    ಕಾಯಕ ಯೋಗಿ ಸಿನಿಮಾ

    ನಿರ್ದೇಶಕ ಪುರುಷೋತ್ತಮ್ ಅವರು ‘ಕಾಯಕಯೋಗಿ’ ಶೀರ್ಷಿಕೆಯೊಂದಿಗೆ ಶ್ರೀಗಳ ಕುರಿತಾಗಿ ಸಿನಿಮಾ ಮಾಡಿದ್ದರು. ಈ ಚಿತ್ರಕ್ಕೆ ಸ್ವತಃ ಶ್ರೀಗಳೇ ಚಾಲನೆ ನೀಡಿದ್ದರು. ಭಕ್ತಿ ಪ್ರದಾನ ಸಿನಿಮಾಗಳಿಗೆ ಹೆಸರಾಗಿದ್ದ ಪುರುಷೋತ್ತಮ್, ಸಿದ್ಧಗಂಗಾ ಮಠದ ಚರಿತ್ರೆಯನ್ನು ಈ ಸಿನಿಮಾದ ಮೂಲಕ ಕಟ್ಟಿಕೊಟ್ಟಿದ್ದರು. ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ

    ಟಗರು ಸಿನಿಮಾದಲ್ಲಿ ಶ್ರೀಗಳು

    ಶಿವರಾಜ್ ಕುಮಾರ್ ನಟನೆಯ ಟಗರು ಸಿನಿಮಾದಲ್ಲಿಯೂ ಒಂದು ಸಣ್ಣ ಪಾತ್ರದಲ್ಲಿ ಶಿವಕುಮಾರ ಸ್ವಾಮಿಗಳು ಕಾಣಿಸಿಕೊಂಡಿದ್ದರು. ಈ ಮಠದಲ್ಲಿ ಬೆಳೆದ ಹುಡುಗನೊಬ್ಬ ದೊಡ್ಡ ಅಧಿಕಾರಿಯಾಗಿ ಬೆಳೆಯುತ್ತಾನೆ ಎನ್ನುವ ಕಥೆಯನ್ನು ಈ ಸಿನಿಮಾ ಹೊಂದಿತ್ತು. ಹಾಗಾಗಿ ಶ್ರೀಗಳು ನಾಯಕನಿಗೆ ಆಶೀರ್ವಾದ ಮಾಡುವಂತಹ ದೃಶ್ಯವನ್ನು ಈ ಸಿನಿಮಾದಲ್ಲಿ ತೋರಿಸಲಾಗಿತ್ತು.

  • ಜ.2ರಂದು ತುಮಕೂರಿಗೆ ಮೋದಿ- ತ್ರಿವಿಧ ದಾಸೋಹಿಗೆ ಭಾರತ ರತ್ನಕ್ಕೆ ಆಗ್ರಹ

    ಜ.2ರಂದು ತುಮಕೂರಿಗೆ ಮೋದಿ- ತ್ರಿವಿಧ ದಾಸೋಹಿಗೆ ಭಾರತ ರತ್ನಕ್ಕೆ ಆಗ್ರಹ

    ತುಮಕೂರು: ಜನವರಿ 2 ರಂದು ಪ್ರಧಾನಿ ಮೋದಿ ಕಲ್ಪತರು ನಾಡು ತುಮಕೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡಬೇಕು ಎಂಬ ಭಕ್ತಾದಿಗಳ ಆಗ್ರಹ ಮತ್ತೇ ಮನ್ನೆಲೆಗೆ ಬಂದಿದೆ. ಸಂತರ ತಪೋ ಭೂಮಿಗೆ ಬರುತ್ತಿರುವ ಪ್ರಧಾನಿ ಮೋದಿ ತ್ರಿವಿಧ ದಾಸೋಹಿಗಳಿಗೆ ಭಾರತ ರತ್ನ ಘೋಷಿಸಬೇಕು ಎಂದು ಭಕ್ತಾದಿಗಳು ಆಗ್ರಹಿಸಿದ್ದಾರೆ.

    ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರದ ರೈತ ಸಮ್ಮಾನ್ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ ಜನವರಿ 2 ರಂದು ನಡೆಯಲಿದೆ. ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿ ಮಠಕ್ಕೆ ಭೇಟಿ ನೀಡುತ್ತಿದ್ದಾರೆ ಎಂಬ ವಿಚಾರ ತಿಳಿಯುತಿದ್ದಂತೆಯೇ ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂಬ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಜನವರಿ 21 ರಂದು ಶ್ರೀಗಳ ವರ್ಷದ ಸಮಾರಾಧನೆ ಇದ್ದು ಮಠಕ್ಕೆ ಭೇಟಿ ನೀಡುವ ಪ್ರಧಾನಿಗಳು ಭಾರತ ರತ್ನ ಘೋಷಣೆ ಮಾಡುವ ಮೂಲಕ ಸಿಹಿ ಸುದ್ದಿ ಕೊಡಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.

    ಕಳೆದ ವರ್ಷ ಜನವರಿ 21 ರಂದು ಶಿವಕುಮಾರ ಶ್ರೀಗಳು ಶಿವೈಕ್ಯರಾಗಿದ್ದರು. ಜನವರಿ 25 ರಂದು ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಬಹುದು ಎಂದು ಕೋಟ್ಯಂತರ ಭಕ್ತಾದಿಗಳು ಎದುರು ನೋಡುತ್ತಿದ್ದರು. ಆದರೆ ಭಕ್ತರ ನಿರೀಕ್ಷೆ ಹುಸಿಯಾಗಿತ್ತು. ತ್ರಿವಿಧ ದಾಸೋಹಿ, ಶತಾಯುಷಿಗಳಾಗಿದ್ದ ಶ್ರೀಗಳಿಗೆ ಭಾರತ ರತ್ನ ಕೊಡಮಾಡದ ಕೇಂದ್ರದ ವಿರುದ್ಧ ಶ್ರೀಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಈಗ ಸ್ವತಃ ಮೋದಿಯವರೇ ಮಠಕ್ಕೆ ಬರುತ್ತಿದ್ದು ಪ್ರಶಸ್ತಿ ಘೋಷಣೆ ಮಾಡಲಿ ಅನ್ನೋದು ಭಕ್ತರ ಒತ್ತಾಸೆಯಾಗಿದೆ. ಭಕ್ತ ಗಣದ ಆಗ್ರಕ್ಕೆ ವಸತಿ ಸಚಿವ ವಿ.ಸೋಮಣ್ಣ ಕೂಡ ದನಿಗೂಡಿಸಿದ್ದಾರೆ. ಭಾರತ ರತ್ನ ನೀಡುವ ಕುರಿತು ಈಗಾಗಲೇ ಕೇಂದ್ರದ ಗಮನಕ್ಕೆ ತಂದಿದ್ದೇವೆ. ಪ್ರಧಾನಿಗಳು ಮಠಕ್ಕೆ ಬಂದಾಗ ಆ ಕುರಿತು ಇನ್ನೊಮ್ಮೆ ಒತ್ತಾಯ ಮಾಡುತ್ತೇವೆ ಎಂದಿದ್ದಾರೆ.

    ಅನ್ನ, ಅಕ್ಷರ ಹಾಗೂ ಆಶ್ರಯ ದಾಸೋಹ ಮಾಡಿ ತ್ರಿವಿಧ ದಾಸೋಹಿ ಎನಿಸಿ ಮೋದಿ ನಡೆದಾಡಿದ ದೇವರಿಗೆ ಭಾರತ ರತ್ನ ಕೊಟ್ಟರೆ ಆ ಪ್ರಶಸ್ತಿಯ ಮೌಲ್ಯವೇ ಹೆಚ್ಚಾಗಲಿದೆ ಎಂದು ಭಕ್ತರು ನಂಬಿದ್ದಾರೆ.

  • ಹುಳಿಯಾರು ಕನಕ ವೃತ್ತ ತೆರವು ವಿವಾದ- ಮಾಧುಸ್ವಾಮಿ ಸ್ಪಷ್ಟನೆ

    ಹುಳಿಯಾರು ಕನಕ ವೃತ್ತ ತೆರವು ವಿವಾದ- ಮಾಧುಸ್ವಾಮಿ ಸ್ಪಷ್ಟನೆ

    ಮಂಡ್ಯ: ಚಿಕ್ಕನಾಯಕನಹಳ್ಳಿಯಲ್ಲಿನ ವೃತ್ತಕ್ಕೆ ಹೆಸರಿಡುವ ಕುರಿತ ವಿವಾದ ತಾರಕಕ್ಕೇರಿದ್ದು, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರಿಡಲ್ಲ, ಬದಲಿಗೆ ಕನಕ ವೃತ್ತ ಎಂದು ಹೆಸರಿಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ಕೆ.ಆರ್.ಪೇಟೆಯಲ್ಲಿ ಹುಳಿಯಾರು ಕನಕ ವೃತ್ತ ತೆರವುಗೊಳಿಸಿದ ವಿವಾದದ ಕುರಿತು ಪ್ರತಿಕ್ರಿಯಿಸಿದ್ದು, ನಾನು ಬೆಳಗಾವಿಯಲ್ಲಿದ್ದಾಗ ಕನಕ ವೃತ್ತ, ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ ಎಂಬ ಹೆಸರಿನ ನಾಮಫಲಕಗಳನ್ನು ಹಾಕಲು ಎರಡು ಗುಂಪುಗಳು ಮುಂದಾಗಿದ್ದವು. ಈ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಶಾಂತಿಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡೋಣ ಎಂದು ಮುಂದಾಗಿದ್ದೆ. ಸ್ವಾಮೀಜಿಯವರಿಗಾಗಿ ಎರಡು ಗಂಟೆಗಳ ಕಾಲ ಕಾದು ಕುಳಿತಿದ್ದೆ. ಬಳಿಕ ನಡೆದ ಸಭೆಯಲ್ಲಿ ಕನಕ ವೃತ್ತ ಹೆಸರಿಡಲು ಎದುರಾಗಿರುವ ಕಾನೂನು ತೊಡಕುಗಳನ್ನ ಗಮನಕ್ಕೆ ತಂದಿದ್ದೆ. ನಂತರ ಕನಕ ವೃತ್ತ ಎಂದೆ ಹೆಸರಿಡೋಣ ಎಂದು ಸ್ವಾಮೀಜಿಗೆ ತಿಳಿಸಿದೆ.

    ಹುಳಿಯಾರು ಈ ಹಿಂದೆ ಗ್ರಾಮ ಪಂಚಾಯಿತಿಯಾಗಿತ್ತು. ಈಗ ಹುಳಿಯಾರು ಪಟ್ಟಣ ಪಂಚಾಯಿತಿಯಾಗಿ ಮೇಲ್ದೆರ್ಜೆಗೇರಿದೆ. ಪಟ್ಟಣ ಪಂಚಾಯಿತಿ ಸಭೆಯಲ್ಲಿ ಅನುಮೋದನೆ ಪಡೆದು ಕನಕ ವೃತ್ತ ಎಂದು ಹೆಸರಿಡೋಣ ಅಂತ ಹೇಳಿದೆ. ಈ ವೇಳೆ ಕಾಗಿನೆಲೆ ಶ್ರೀಗಳು ಈಗಲೇ ಆಗಬೇಕೆಂದು ಪಟ್ಟು ಹಿಡಿದರು. ಆ ವೇಳೆ ನಾನು ಶ್ರೀಗಳ ಮೇಲೆ ರೇಗಿದ್ದು ನಿಜ. ಇದಾದ ಬಳಿಕ ಯಾರ್ಯಾರೋ ದಿನ ನಿತ್ಯ ಕರೆ ಮಾಡಿ ನೀವು ಕುರುಬರ ವಿರೋಧಿ ಎಂದು ಕೇಳುತ್ತಿದ್ದರು. ನಾನು ಕುರುಬ ಸಮುದಾಯದ ಬೆಂಬಲದಿಂದಲೇ ಚಿಕ್ಕನಾಯಕನಹಳ್ಳಿಯಲ್ಲಿ ಗೆದ್ದು ಬಂದಿದ್ದೇನೆ. ನನ್ನ ಜೊತೆ ಆ ಸಮುದಾಯದ ಮುಖಂಡರು ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಅವರಿಗೆ ಹೆಚ್ಚು ಆದ್ಯತೆ ನೀಡಿದ್ದೇನೆ ಎಂದು ತಿಳಿಸಿದರು.

    ನಾನು ಅಧಿಕಾರದಲ್ಲಿ ಇರುವವರೆಗೂ ಆ ವೃತ್ತಕ್ಕೆ ಸಿದ್ದಗಂಗಾ ಶ್ರೀಗಳ ಹೆಸರಿಡಲು ಬಿಡಲ್ಲ. ಶ್ರೀಗಳ ಹೆಸರಿಟ್ಟು ನಾನು ಜಾತಿವಾದಿ ಆಗಲು ತಯಾರಿಲ್ಲ. ದಾಸ ಶ್ರೇಷ್ಠ ಕನಕ ವೃತ್ತ ಎಂದೇ ನಾಮಕರಣ ಮಾಡುತ್ತೇನೆ ಎಂದು ಹೇಳಿದ್ದೇನೆ. ಹೀಗಿರುವಾಗ ಇವತ್ತು ಒಬ್ಬ ಕರೆ ಮಾಡಿ ನೀವು ಒಂದು ಸಮಾಜಕ್ಕೆ ಮಾತ್ರ ಮಂತ್ರೀನ ಎಂದು ಕೇಳಿದ, ಹೂ ಅಂದೆ. ಸಿಟ್ಟಾಗಿ ಬೈದು ಫೋನ್ ಕಟ್ ಮಾಡಿದೆ. ಆ ಆಡಿಯೋವನ್ನು ವಾಟ್ಸಪ್ ಮೂಲಕ ವೈರಲ್ ಮಾಡಿ ವಿವಾದ ಸೃಷ್ಠಿಸುತ್ತಿದ್ದಾರೆ. ಉಪ ಚುನಾವಣೆ ಗುರಿಯಾಗಿಟ್ಟುಕೊಂಡೇ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.

  • ಏ.1ರಂದು ಶಿವೈಕ್ಯ ಸಿದ್ದಗಂಗಾ ಶ್ರೀಗಳ 112ನೇ ಜಯಂತಿ- 112 ಕಂದಮ್ಮಗಳಿಗೆ ನಾಮಕರಣ

    ಏ.1ರಂದು ಶಿವೈಕ್ಯ ಸಿದ್ದಗಂಗಾ ಶ್ರೀಗಳ 112ನೇ ಜಯಂತಿ- 112 ಕಂದಮ್ಮಗಳಿಗೆ ನಾಮಕರಣ

    ತುಮಕೂರು: ಏಪ್ರಿಲ್ 1ರಂದು ಶ್ರೀ ಸಿದ್ದಗಂಗಾ ಸ್ವಾಮೀಜಿಗಳ 112ನೇ ಜಯಂತಿ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಸ್ವಾಮೀಜಿಗಳ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮಕ್ಕೆ ವಿವಿಧ ಸಿದ್ಧತೆಗಳು ನಡೆಯುತ್ತಿವೆ. ಸ್ವಾಮೀಜಿಗಳು ಇಲ್ಲ ಎನ್ನುವ ನೋವಿನಲ್ಲೂ ಅವರ ನೆನಪನ್ನು ಮರುಕಳಿಸುವ ಹಲವು ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ “ದೇವರ” ಹುಟ್ಟುಹಬ್ಬದಂದು 112 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರನಿಟ್ಟು ನಾಮಕರಣ ಮಾಡಲಾಗುತ್ತಿದೆ.

    ನಡೆದಾಡುವ ದೇವರು ಶಿವೈಕ್ಯ ಶಿವಕುಮಾರ ಶ್ರೀಗಳು ಈಗ ನಮ್ಮೊಂದಿಗೆ ಇಲ್ಲ. ಅವರಿಲ್ಲದ ಮೊದಲ ಜನ್ಮದಿನ ಅಂದರೆ ಶಿವಕುಮಾರ ಶ್ರೀಗಳ ಜಯಂತಿಗೆ ಶ್ರೀಮಠ ಸಕಲ ಸಿದ್ಧತೆ ಮಾಡಿಕೊಂಡಿದೆ. ಏಪ್ರಿಲ್ 1 ರಂದು ಶ್ರೀಗಳ 112ನೇ ಜಯಂತಿ ನಡೆಯಲಿದೆ. ವಿವಿಧ ಮಠಾಧೀಶರು, ಮೈಸೂರು ರಾಜವಂಶಸ್ಥ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಶ್ರೀಗಳ ಸ್ಮರಣೆ, ಗದ್ದುಗೆ ಪೂಜೆ, ಪ್ರವಚನ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ಅಂದು ನಡೆಯಲಿದೆ.

    ಇಂದಿನಿಂದಲೇ ಹಲವು ಸಿದ್ಧತೆಗಳು ನಡೆಯುತ್ತಿವೆ. ಚುನಾವಣೆಯ ಹಿನ್ನೆಲೆ ಯಾವುದೇ ರಾಜಕೀಯ ನಾಯಕರು ಬರೋದಿಲ್ಲ. ವಿಶೇಷ ಅಂದರೆ ಶ್ರೀಗಳ 112ನೇ ಜಯಂತಿಯಂದು 112 ಮಕ್ಕಳಿಗೆ ನಾಮಕರಣ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. 112 ಮಕ್ಕಳಿಗೂ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಲಾಗುವುದು. ಈಗಾಗಲೇ ನೂರಕ್ಕೂ ಹೆಚ್ಚು ಮಕ್ಕಳ ಹೆಸರು ನೋಂದಣಿಯಾಗಿದೆ. ನಾಮಕರಣದಲ್ಲಿ ಭಾಗಿಯಾದ ಮಕ್ಕಳಿಗೆ ಮಠದ ವತಿಯಿಂದ ತೊಟ್ಟಿಲು, ಹಾಸಿಗೆ ಹಾಗೂ ನಾಮಕರಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಡಲಾಗುತ್ತಿದೆ.

    ಪ್ರತಿ ವರ್ಷ ಹುಟ್ಟುಹಬ್ಬಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಬಂದು ಸ್ವಾಮೀಜಿಗಳ ದರ್ಶನ ಪಡೆಯುತ್ತಿದ್ದರು. ಆದರೆ ಈ ಬಾರಿ ಸ್ವಾಮೀಜಿಗಳು ಇಲ್ಲ ಎನ್ನುವ ನೋವಿನಲ್ಲಿಯೇ ಭಕ್ತಗಣ ಏಪ್ರಿಲ್ 1ಕ್ಕೆ ಬರಲು ಸಜ್ಜಾಗಿ ನಿಂತಿದೆ. ಈ ನಡುವೆ ಮಠದ ಆಡಳಿತ ಮಂಡಳಿ 112 ಮಕ್ಕಳಿಗೆ ಶ್ರೀಗಳ ಹೆಸರನ್ನೇ ನಾಮಕರಣ ಮಾಡುವುದರ ಮೂಲಕ ಶ್ರೀಗಳಿಲ್ಲದ ಮೊದಲ ಜಯಂತಿಯನ್ನು ಸದಾ ಸ್ಮರಿಸುವಂತೆ ಮಾಡುತ್ತಿರುವುದು ಶ್ಲಾಘನೀಯ.

  • ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ- ವೈದ್ಯರಿಗೆ ಧನ್ಯವಾದ ಹೇಳಿ ಭಕ್ತರಲ್ಲಿ ಸಿಎಂ ಮನವಿ

    ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ- ವೈದ್ಯರಿಗೆ ಧನ್ಯವಾದ ಹೇಳಿ ಭಕ್ತರಲ್ಲಿ ಸಿಎಂ ಮನವಿ

    ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಧನ್ಯವಾದ ಹೇಳಿದ್ದಾರೆ. ಅಲ್ಲದೇ ಇದೇ ವೇಳೆ ಮಠದ ಭಕ್ತರಲ್ಲಿ ಸಿಎಂ ಮನವಿಯನ್ನೂ ಮಾಡಿಕೊಂಡಿದ್ದಾರೆ.

    ಇಂದು ಮಠಕ್ಕೆ ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಿದ್ದಗಂಗಾ ಶ್ರೀಗಳ ಆರೋಗ್ಯ ಅತ್ಯುತ್ತಮವಾಗಿದೆ. ಅವರ ಆರೋಗ್ಯವನ್ನ ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ವೈದ್ಯರು ಉತ್ತಮ ರೀತಿಯಲ್ಲಿ ತಮ್ಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಅಂತ ಹೇಳಿದ್ರು.

    ಶ್ರೀಗಳಿಗೆ ಚಿಕಿತ್ಸೆ ಕೊಡೋದು ವೈದ್ಯರಿಗೆ ಸವಾಲಿನ ವಿಷಯವಾಗಿದೆ. ಅಂತದ್ದರಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಭಕ್ತರಿಗೆ ಆತಂಕ ಬೇಡ. ಸ್ವಾಮೀಜಿಗಳ ವಿಶ್ರಾಂತಿಗೆ ಅಡಚಣೆಯಾಗಬಾರದು ಅಂತ ಇದೇ ವೇಳೆ ಭಕ್ತರಲ್ಲಿ ಮನವಿ ಮಾಡಿಕೊಂಡರು.

    ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಪರಮಪೂಜ್ಯರು ಚೆನ್ನಾಗಿದ್ದಾರೆ. ಅವರ ವಿಶ್ರಾಂತಿಗೆ ತೊಂದರೆ ಕೊಡಬಾರದು ಅಂತಿದ್ದೆ. ಧಾರವಾಡದ 84 ನೇ ಸಾಹಿತ್ಯ ಸಮ್ಮೇಳನಕ್ಕೆ ಹೋಗುತ್ತಿದ್ದೇನೆ. ಮಾರ್ಗ ಮಧ್ಯೆ ಪರಮಪೂಜ್ಯರ ದರ್ಶನಕ್ಕೆ ಬಂದಿದ್ದೇನೆ. ಕಿರಿಯ ಶ್ರೀಗಳ ಬಳಿ ಬರಬಹುದಾ ಅಂತಾ ಕೇಳಿ ಬಂದಿದ್ದೇನೆ ಅಂದ್ರು.

    ಆಸ್ಪತ್ರೆಗೆ ದಾಖಲು:
    ಶ್ರೀಗಳು ಬೇಗ ಗುಣಮುಖರಾಗಲು ಉತ್ತಮ ಆರೈಕೆ ಅಗತ್ಯವಿದ್ದು, ಸೋಂಕು ಬೇಗ ವಾಸಿಯಾಗಬೇಕು ಎಂಬ ಉದ್ದೇಶದಿಂದ ಅವರನ್ನು ಗುರುವಾರ ರಾತ್ರಿ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    “ಮಠದಲ್ಲಿ ನಾವು ಎಷ್ಟೇ ಜಾಗೃತಿ ವಹಿಸಿದರೂ ಕೂಡ ಸೋಂಕು ತಗಲುವ ಸಾಧ್ಯತೆ ಇತ್ತು. ಅಲ್ಲದೇ ಚಿಕಿತ್ಸೆಗೆ ಬೇಕಾದ ಸೌಲಭ್ಯಗಳು ಕೂಡ ಆಸ್ಪತ್ರೆಯಲ್ಲಿ ಲಭ್ಯವಾಗುವ ಕಾರಣ ಈ ನಿರ್ಧಾರ ಕೈಗೊಳ್ಳಲಾಯಿತು. ಶ್ರೀ ಗಳಿಗೆ ಎಂದಿನಂತೆ ತಪಾಸಣೆ ಹಾಗೂ ಚಿಕಿತ್ಸೆ ಆಸ್ಪತ್ರೆಯಲ್ಲೇ ಮುಂದುವರಿಯುತ್ತದೆ. ಇಂದು ರೇಲಾ ಆಸ್ಪತ್ರೆಯಿಂದ ತಜ್ಞ ವೈದ್ಯರು ಕೂಡ ಆರೋಗ್ಯವನ್ನು ಚೆಕ್ ಮಾಡಿದ್ದಾರೆ. ಆದ್ದರಿಂದ ಯಾರು ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ” ಅಂತ ನಿನ್ನೆ ಕಿರಿಯ ಶ್ರೀಗಳು ಹೇಳಿದ್ದರು.

    https://www.youtube.com/watch?v=pdPt-TVIzFE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ – ದೇವರ ಸ್ಪಂದನೆ ನೋಡಿ ವೈದ್ಯರಿಗೇ ಆಶ್ಚರ್ಯ

    ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ – ದೇವರ ಸ್ಪಂದನೆ ನೋಡಿ ವೈದ್ಯರಿಗೇ ಆಶ್ಚರ್ಯ

    ಚೆನ್ನೈ: ಸಿದ್ದಗಂಗಾ ಶ್ರೀಗಳಿಗೆ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿ ಆಗಿದೆ. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ವೈದ್ಯ ಮೊಹಮ್ಮದ್ ರೇಲಾ ನೇತೃತ್ವದ ತಂಡ 4 ಗಂಟೆಗಳ ಕಾಲ ಪಿತ್ತಕೋಶ ಸೋಂಕಿನ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿತು.

    ಶ್ರೀಗಳಿಗೆ ಈ ಹಿಂದೆ ಅಳವಡಿಸಲಾಗಿದ್ದ ಲೋಹ ಮತ್ತು ಸ್ಟೆಂಟ್‍ಗಳನ್ನು ತೆಗೆದು ಹಾಕಲಾಗಿದೆ. ಸದ್ಯ ಶ್ರೀಗಳನ್ನ ಐಸಿಯು ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಐಸಿಯುನಲ್ಲೇ 3 ದಿನ ಇರಲಿದ್ದಾರೆ. ಬಳಿಕ ವಿಐಪಿ ವಾರ್ಡ್‍ಗೆ ಶಿಫ್ಟ್ ಮಾಡಿ. ಅವರಲ್ಲಿ ಮತ್ತಷ್ಟು ಚೇತರಿಕೆ ಕಂಡ ಬಳಿಕವಷ್ಟೇ ಡಿಸ್ಚಾರ್ಜ್ ಮಾಡುವ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ ಅಂತ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.

    ಸಾಮಾನ್ಯವಾಗಿ ಅನಸ್ತೇಶಿಯಾ ಕೊಟ್ಟರೆ ಆಯಾಸ ಆಗುತ್ತೆ. ಆದರೆ ಶ್ರೀಗಳಿಗೆ ಆ ಮಟ್ಟದಲ್ಲಿ ಆಯಾಸವೇ ಆಗಿಲ್ಲ. ಅರವಳಿಕೆಯಿಂದ ಶ್ರೀಗಳು ಎಚ್ಚರಗೊಂಡು 111 ವರ್ಷಗಳ ವಯಸ್ಸಿನಲ್ಲಿ ಈ ಪಾಟಿ ಲವಲವಿಕೆಯಿಂದ ಇರುವುದನ್ನು ಕಂಡ ರೇಲಾ ಆಸ್ಪತ್ರೆ ವೈದ್ಯರೇ ಅಚ್ಚರಿಗೊಂಡಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲದೆ ಮೌನ ಆವರಿಸಿದ್ದನ್ನು ಕಂಡ ಶ್ರೀಗಳು, ಎಲ್ಲಿ ಯಾರೂ ಕಾಣಿಸುತ್ತಿಲ್ಲ ಎಂದು ವೈದ್ಯರನ್ನ ಪ್ರಶ್ನಿಸಿದ್ದು, ಗ್ಲೂಕೋಸ್ ಪೈಪ್ ತೆಗೆಯುವಂತೆಯೂ ಹೇಳಿದ್ದಾರೆ ಎನ್ನಲಾಗಿದೆ.

    ಬಿಜಿಎಸ್ ಖ್ಯಾತ ವೈದ್ಯ ಡಾ.ರವೀಂದ್ರ, ಕಿರಿಯ ಶ್ರೀಗಳು ಈ ವೇಳೆ ಚೆನ್ನೈ ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದಾರೆ. ಈ ನಡುವೆ ರೇಲಾ ಆಸ್ಪತ್ರೆಗೆ ಸುತ್ತೂರಿನ ಶಿವಕುಮಾರ್ ದೇಶೀಕೇಂದ್ರ ಸ್ವಾಮೀಜಿಗಳು, ಶಾಸಕರಾದ ಸೋಮಣ್ಣ ಮತ್ತು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳ ಆರೋಗ್ಯ ವಿಚಾರಿಸಲು ಸಚಿವ ಡಿ.ಕೆ.ಶಿವಕುಮಾರ್ ಚೆನ್ನೈನ ರೇಲಾ ಆಸ್ಪತ್ರೆ ತಲುಪಿದ್ದಾರೆ. ನಾಳೆ ಸಿಎಂ ಕುಮಾರಸ್ವಾಮಿ ಅವರು ಸಹ ಚೆನ್ನೈಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಾರ ನೆರವಿಲ್ಲದೇ ಹೆಜ್ಜೆ ಹಾಕಿದ್ರು ಸಿದ್ದಗಂಗಾ ಶ್ರೀಗಳು- ಭಕ್ತರಲ್ಲಿ ಖುಷಿಯೋ ಖುಷಿ

    ಯಾರ ನೆರವಿಲ್ಲದೇ ಹೆಜ್ಜೆ ಹಾಕಿದ್ರು ಸಿದ್ದಗಂಗಾ ಶ್ರೀಗಳು- ಭಕ್ತರಲ್ಲಿ ಖುಷಿಯೋ ಖುಷಿ

    ತುಮಕೂರು: ನಡೆದಾಡುವ ದೇವರು 111 ವರ್ಷ ವಯಸ್ಸಿನ ಸಿದ್ದಗಂಗಾ ಶ್ರೀಗಳು ಯಾರ ನೆರವಿಲ್ಲದೆ ನಡೆದಾಡುವ ಮೂಲಕ ಭಕ್ತಾಧಿಗಳಲ್ಲಿ ಬೆರಗನ್ನು ಮೂಡಿಸಿದ್ದಾರೆ. ಹಳೇ ಮಠದಿಂದ ಹೊಸಮಠಕ್ಕೆ ತೆರಳುವ ವೇಳೆ ತುಸು ದೂರ ಯಾರ ಸಹಾಯವೂ ಇಲ್ಲದೆ ಹೆಜ್ಜೆ ಹಾಕಿ ಭಕ್ತವೃಂದವನ್ನು ಪುಳಕಿತಗೊಳಿಸಿದ್ದಾರೆ.

    ಅನಾರೋಗ್ಯದಿಂದ ಕೆಲ ಕಾಲಚಿಕಿತ್ಸೆಯಲ್ಲಿದ್ದ ಶ್ರೀಗಳು ಪರಿಚಾರಕರ ನೆರವಿನೊಂದಿಗೆ ಕಾರಿನಲ್ಲಿ ಓಡಾಡುತ್ತಿದ್ದರು. ಈ ನಡುವೆ ಸ್ವತಃ ತಾವೇ ಊರುಗೋಲಿನ ಸಹಾಯದಿಂದ ನಡೆದಾಡಿದ್ದಾರೆ. ಭಕ್ತಾಧಿಗಳು ಶ್ರೀಗಳು ನಡೆದಾಡುವುದನ್ನು ಮೊಬೈಲನಲ್ಲಿ ಸೆರೆ ಹಿಡಿದು ಸಂತೋಷಪಟ್ಟಿದ್ದಾರೆ.

    ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನೆಲೆಯಲ್ಲಿ ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು, ಇತ್ತೀಚೆಗೆ ಜನರಲ್ ಚೆಕ್ ಅಪ್ ಗಾಗಿ ಬೆಂಗಳೂರಿನ ಕೆಂಗೇರಿಯಲ್ಲಿರೋ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದರು. ಮುಂಜಾನೆ ಆಗಮಿಸಿದ ಶ್ರೀಗಳು ಕಾರಿನಿಂದ ಇಳಿದು ವ್ಹೀಲ್ ಚೇರ್ ನಂತಹ ಸೌಲಭ್ಯ ನಿರಾಕರಿಸಿ ನಡೆದುಕೊಂಡೇ ಆಸ್ಪತ್ರೆ ಒಳಗೆ ಹೋಗಿದ್ದರು.

    ಜನವರಿ 27 ರಂದು ಬಿಜಿಎಸ್‍ಗೆ ದಾಖಲಾಗಿದ್ದ ಶ್ರೀಗಳಿಗೆ ಮೂರು ಸ್ಟಂಟ್ ಅಳವಡಿಸಲಾಗಿತ್ತು. ಅದಕ್ಕೂ ಮುನ್ನ 5 ಸ್ಟಂಟ್ ಸೇರಿ ಒಟ್ಟು 8 ಸ್ಟಂಟ್ ಅಳವಡಿಸಲಾಗಿದೆ. ಸ್ಟಂಟ್ ಅಳವಡಿಸಿದ ಆರು ತಿಂಗಳಾದ ಕಾರಣ ಜನರಲ್ ಚೆಕ್ ಅಪ್ ಗಾಗಿ ಶ್ರೀಗಳು ಆಸ್ಪತ್ರೆಗೆ ಚಿಕಿತ್ಸೆಗೆ ಮತ್ತೆ ಆಗಮಿಸಿದ್ದರು. ಡಾ. ರವೀಂದ್ರ ನೇತೃತ್ವದಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದು, ಬಳಿಕ ಹಳೇ ಮಠದ ಕೊಠಡಿಯಲ್ಲಿ ವಿಶ್ರಾಂತಿ ಪಡೆದಿದ್ದರು.

  • 111ರ ಇಳಿವಯಸ್ಸಿನಲ್ಲೂ ಲವಲವಿಕೆಯಿಂದಲೇ ಮತಹಾಕಿದ್ರು ಸಿದ್ದಗಂಗಾ ಶ್ರೀ!

    111ರ ಇಳಿವಯಸ್ಸಿನಲ್ಲೂ ಲವಲವಿಕೆಯಿಂದಲೇ ಮತಹಾಕಿದ್ರು ಸಿದ್ದಗಂಗಾ ಶ್ರೀ!

    ತುಮಕೂರು: ಇಂದು ರಾಜ್ಯದೆಲ್ಲೆಡೆ ಮತದಾನ ನಡೆಯುತ್ತಿದ್ದು, ತುಮಕೂರಿನಲ್ಲಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

    ಮಠದ ಆವರಣದಲ್ಲಿರುವ ಮತಗಟ್ಟೆ ಸಂಖ್ಯೆ 133 ರಲ್ಲಿ ಶ್ರೀಗಳು ಮತದಾನ ಮಾಡಿದ್ದಾರೆ. 111 ರ ಇಳಿವಯಸ್ಸಿನಲ್ಲೂ ಅತ್ಯಂತ ಲವಲವಿಕೆಯಿಂದಲೇ ಶ್ರೀಗಳು ವೋಟ್ ಹಾಕಿರುವುದು ವಿಶೇಷವಾಗಿದೆ.

    ನೆಲಮಂಗಲದಲ್ಲೂ ಶತಾಯುಷಿ ಮತದಾನ:
    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಲೇಕ್ಯಾತನಹಳ್ಳಿ ಹಾಗೂ ನಿಡವಂದ ಗಳಲ್ಲಿ ಎಲೇಕ್ಯಾತನಹಳ್ಳಿಯ 102 ವರ್ಷದ ಪುಟ್ಟ ಅರಸಯ್ಯ ಹಾಗೂ ನಿಡವಂದದಲ್ಲಿ 110 ವರ್ಷದ ಅಟ್ಟಮ್ಮ ಮತದಾನ ಮಾಡಿ ಮಾದರಿಯಾದರು.

    ಬೇರೆಯವರ ಸಹಾಯ ಪಡೆದು ಪುಟ್ಟ ಅರಸಯ್ಯ ಮತದಾನ ಮಾಡಿದರೆ ವ್ಹೀಲ್ ಚೇರ್ ಮುಖಾಂತರ ಆಗಮಿಸಿದ ಅಟ್ಟಮ್ಮ ತನ್ನ ಸಂಬಂಧಿಯ ಸಹಾಯ ಪಡೆದು ಮತ ಚಲಾಯಿಸಿದರು. ಒಟ್ಟಿನಲ್ಲಿ ತಮ್ಮ ವಯೋಮಾನ ವನ್ನು ಲೆಕ್ಕಿಸಿದೆ ಮತ ಹಾಕಿದ್ದು ವಿಶೇಷವಾಗಿತ್ತು.

    ಜಯನಗರ ಮತ್ತು ಆರ್ ಆರ್ ನಗರ ಬಿಟ್ಟು ಕರ್ನಾಟಕದ ಒಟ್ಟು 222 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದೆ. ಹಲವೆಡೆ ಮತಯಂತ್ರಗಳು ಕೈ ಕೊಟ್ಟಿದ್ದು, ಮತದಾರರು ನಿರಾಶರಾಗಿ ಹಿಂದಿರುಗಿದ್ದಾರೆ. ಇನ್ನು ಮತದಾನ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

  • ನಾನ್ ಇಲ್ಲಿರಲ್ಲ..ನನ್ನ ಮಠಕ್ಕೆ ಕಳುಹಿಸಿ – ಆಸ್ಪತ್ರೆಯಲ್ಲಿ ಹಠ ಹಿಡಿದ ಸಿದ್ದಗಂಗಾ ಶ್ರೀ

    ನಾನ್ ಇಲ್ಲಿರಲ್ಲ..ನನ್ನ ಮಠಕ್ಕೆ ಕಳುಹಿಸಿ – ಆಸ್ಪತ್ರೆಯಲ್ಲಿ ಹಠ ಹಿಡಿದ ಸಿದ್ದಗಂಗಾ ಶ್ರೀ

    ಬೆಂಗಳೂರು: ಶತಾಯುಷಿ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಆಸ್ಪತ್ರೆಯಲ್ಲಿ ನಾನಿರಲ್ಲ.. ನನ್ನನ್ನು ಮಠಕ್ಕೆ ಕಳುಹಿಸಿ ಎಂದು ಶ್ರೀಗಳು ಹಠ ಮಾಡುತ್ತಿದ್ದಾರೆ.

    ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮುಂಜಾನೆ 6 ಗಂಟೆಗೆ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ.

    ಇಂದು ಬೆಳಗ್ಗೆ 7.30ರ ಲಿಂಗ ಪೂಜೆ ಬಳಿಕ ಬಿಜಿಎಸ್ ವೈದ್ಯರ ತಂಡ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಸಿಟಿ ಸ್ಕ್ಯಾನ್ ಬಳಿಕ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಲ್ಲಿ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ಶ್ರೀಗಳು ನಾನು ಆಸ್ಪತ್ರೆಯಲ್ಲಿ ಇರಲ್ಲ. ನನ್ನನ್ನ ಮಠಕ್ಕೆ ಕಳುಹಿಸಿ ಎಂದು ಹಠ ಮಾಡಿದ್ದಾರೆ. ಆದ್ದರಿಂದ ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಶ್ರೀಗಳನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ರವೀಂದ್ರ, ಶ್ರೀಗಳಿಗೆ ಎಲ್ಲಾ ತಪಾಸಣೆ ಮಾಡಿದ್ದೇವೆ. ನಾವು ಮುಂದಿನ ತಿರ್ಮಾನ ತೆಗೆದುಕೊಳ್ಳುತ್ತಿದ್ದು, ಡಿಸ್ಚಾರ್ಜ್ ಮಾಡಲು ನಿರ್ಧಾರ ಮಾಡಿದ್ದೇವೆ, ಆದರೆ ಮಠಕ್ಕೆ ಹೋದ ನಂತರ 10 ದಿನಗಳ ವಿಶ್ರಾಂತಿ ಪಡೆಯಬೇಕು. ಆದ್ದರಿಂದ ಅಲ್ಲಿಯೂ ಎಲ್ಲಾ ಸಿದ್ಧತೆ ಮಾಡಿದ್ದೇವೆ. ಈಗಾಗಲೇ ಬಂದವರಿಗೆ ದರ್ಶನ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.