Tag: shivakumaraswamiji

  • ನಡೆದಾಡೋ ದೇವರು ಶಿವೈಕ್ಯರಾಗಿ 1 ವರ್ಷ- ಪುಣ್ಯಸ್ಮರಣೆಗೆ ಸಿದ್ದಗಂಗಾ ಮಠ ಸಜ್ಜು

    ನಡೆದಾಡೋ ದೇವರು ಶಿವೈಕ್ಯರಾಗಿ 1 ವರ್ಷ- ಪುಣ್ಯಸ್ಮರಣೆಗೆ ಸಿದ್ದಗಂಗಾ ಮಠ ಸಜ್ಜು

    – 50 ಕೆ.ಜಿ ಬೆಳ್ಳಿ ಪುತ್ಥಳಿ ಅನಾವರಣ
    – ಭಕ್ತರಿಗೆ ಬೂಂದಿ, ಪಾಯಸದ ವ್ಯವಸ್ಥೆ

    ತುಮಕೂರು: ತ್ರಿವಿಧ ದಾಸೋಹಿ, ನಡೆದಾಡೋ ದೇವರು, ಶಿವೈಕ್ಯ ಸಿದ್ದಗಂಗಾಶ್ರೀ ಶಿವಕುಮಾರ ಸ್ವಾಮೀಜಿಗಳು ನಮ್ಮನ್ನಗಲಿ ಇಂದಿಗೆ ಒಂದು ವರ್ಷ. ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವಕ್ಕಾಗಿ ಸಿದ್ದಗಂಗಾ ಮಠದಲ್ಲಿ ವಿಶೇಷ ಪೂಜೆ, ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಸಿಎಂ ಸೇರಿದಂತೆ ಮಾಜಿ ಸಿಎಂಗಳು ಭಾಗಿಯಾಗ್ತಿದ್ದಾರೆ. ಭಕ್ತರಿಗೆ ಬೂಂದಿ-ಪಾಯಸದ ಊಟ ತಯಾರಿಸಲಾಗುತ್ತಿದೆ.

    ಸಿದ್ದಗಂಗಾ ಮಠದಲ್ಲಿ ಶಿವೈಕ್ಯ ಶ್ರೀಗಳ ಒಂದು ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಸಕಲ ತಯಾರಿ ನಡೆದಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಭಾಗವಹಿಸುವ ಸಾಧ್ಯತೆ ಇದ್ದು, ಸರ್ವ ತಯಾರಿ ನಡೆದಿದೆ. ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರು ಕೂರಲು ಆಸನದ ವ್ಯವಸ್ಥೆ ಮಾಡಲಾಗಿದೆ. ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪುಣ್ಯಸ್ಮರಣೆ ನಡೆಯಲಿದ್ದು, ಸುತ್ತೂರು ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮಿಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಿಎಂ ಯಡಿಯೂರಪ್ಪ ಉದ್ಘಾಟಿಸಲಿದ್ದು, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಮಠಾಧೀಶರು, ಸಾಧು -ಸಂತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿ ಮಖೇಶ್ ಗರ್ಗ್ ಹಾಗೂ ಉಗ್ರ ನಿಗ್ರಹ ದಳದ ಮುಖ್ಯಸ್ಥ ಮಣೀಂದರ್ ಜಿತ್ ಸಿಂಗ್ ಬಿಟ್ಟ ಅವ್ರಿಗೆ ಸನ್ಮಾನಿಸಲಾಗುತ್ತಿದೆ.

    50 ಕೆಜಿ ಬೆಳ್ಳಿ ಪುತ್ಥಳಿ ಪ್ರತಿಷ್ಠಾಪನೆ:
    ಪ್ರಾತಃ ಕಾಲದಿಂದಲೇ ಶ್ರೀಗಳ ಸಮಾಧಿ, ಗದ್ದುಗೆಯಲ್ಲಿ ವಿವಿಧ ಪೂಜಾ ಕೈಂಕರ್ಯ ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಶ್ರೀಗಳ ಗದ್ದುಗೆ ಮೇಲೆ ಭಕ್ತರೊಬ್ಬರು ನೀಡಿದ್ದ 50 ಕೆಜಿ ಬೆಳ್ಳಿಯ ಪುತ್ಥಳಿ ಪ್ರತಿಷ್ಠಾಪನೆ ಕೂಡ ಆಗಲಿದೆ. ಜನವರಿ 21 ಕ್ಕೆ ಶ್ರೀಗಳು ಲಿಂಗೈಕ್ಯರಾಗಿ ಒಂದು ವರ್ಷ ಕಳೆಯಲಿದೆ. ಆದರೆ ಶಾಸ್ತ್ರದ ಪ್ರಕಾರ ಎರಡು ದಿನದ ಮುಂಚಿತವಾಗಿ ಅಂದರೆ ಇಂದು ಪುಣ್ಯ ಸ್ಮರಣೆ ನಡೆಯಲಿದೆ.

    ಬೂಂದಿ-ಪಾಯಸದ ವ್ಯವಸ್ಥೆ:
    ಪುಣ್ಯಸ್ಮರಣೆಗೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇದ್ದು, ಭಕ್ತರಿಗಾಗಿ ಪ್ರಸಾದ ವ್ಯವಸ್ಥೆಯನ್ನೂ ಮಾಡಲಾಗಿದೆ. 7 ಕಡೆ ದಾಸೋಹದ ವ್ಯವಸ್ಥೆ ಮಾಡಲಾಗಿದ್ದು, ಬೂಂದಿ, ಪಾಯಸ ಸೇರಿದಂತೆ ವಿವಿಧ ಖಾದ್ಯ ತಯಾರಾಗಿದೆ. ಸ್ವತಃ ಸಿದ್ದಲಿಂಗ ಸ್ವಾಮೀಜಿಗಳೇ ಎಲ್ಲಾ ಉಸ್ತುವಾರಿ ವಹಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

    ಇಂದಿನ ಕಾರ್ಯಕ್ರಮದಲ್ಲಿ ಡಾ. ಶ್ರೀಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ ನಿಂದ ಕಾರ್ಯಸೂಚಿ ಕೈಪಿಡಿ ಮತ್ತು ವೆಬ್‍ಸೈಟ್ ಬಿಡುಗಡೆ ಆಗಲಿದೆ. ಒಟ್ಟಾರೆ ಶಿವೈಕ್ಯ ಶ್ರೀಗಳ ಪ್ರಥಮ ಪುಣ್ಯಸ್ಮರಣೆಗೆ ಒಂದ್ಕಡೆಯಾಗಿದ್ರೆ, ಮಠಕ್ಕೆ ಭಕ್ತರ ದೇಣಿಗೆ ಅಪಾರ ಪ್ರಮಾಣದಲ್ಲಿ ಹರಿದು ಬಂದಿದೆ.

  • ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ ಪಾಂಡಿಚೇರಿ ಸಿಎಂ

    ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ ಪಾಂಡಿಚೇರಿ ಸಿಎಂ

    ಚಿಕ್ಕಬಳ್ಳಾಪುರ: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಲಿಂಗೈಕ್ಯರಾಗಿದ್ದು, ಇಂದು ಶ್ರೀಗಳ ಅಂತಿಮ ದರ್ಶನ ಪಡೆಯಲು ಪಾಂಡಿಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಆಗಮಿಸಿದ್ದಾರೆ.

    ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ನಂತರ ನೇರವಾಗಿ ರಸ್ತೆ ಮಾರ್ಗವಾಗಿ ತುಮಕೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ನಟ ದರ್ಶನ್, ಪ್ರಕಾಶ್ ರೈ ಸೇರಿದಂತೆ ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಕುಮಾರ ಸ್ವಾಮೀಜಿ(111)ಯವರು ಸೋಮವಾರ ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ನಡೆದಾಡುವ ದೇವರು ಎಂದೇ ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿದ್ದಾರೆ. ಸ್ವಾಮೀಜಿ ನಿಧನರಾಗಿರುವ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಲಕ್ಷಾಂತರ ಮಂದಿ ಭಕ್ತರು ಶ್ರೀಗ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಹರಿದುಬರುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಳಿಕ ಕ್ರಿಯಾ ಸಮಾಧಿಯ ವಿಧಿವಿಧಾನಗಳು ನಡೆಯಲಿದೆ. ಇದನ್ನೂ ಓದಿ: 70ರ ದಶಕದಲ್ಲೇ ಗದ್ದುಗೆ ನಿರ್ಮಾಣಕ್ಕೆ ಜಾಗ ಸೂಚಿಸಿದ್ದ ಶ್ರೀ: ಭವನದ ವಿಶೇಷತೆ ಏನು?

    https://www.youtube.com/watch?v=g5NjZlf4B-8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರಿಗೆ ಚಿಕಿತ್ಸೆ ಕೊಟ್ಟ ವೈದ್ಯರಿಗೆ `ಧರ್ಮ’ದ ಪಟ್ಟ ಕೊಟ್ಟ ಡಿಕೆಶಿ!

    ನಡೆದಾಡುವ ದೇವರಿಗೆ ಚಿಕಿತ್ಸೆ ಕೊಟ್ಟ ವೈದ್ಯರಿಗೆ `ಧರ್ಮ’ದ ಪಟ್ಟ ಕೊಟ್ಟ ಡಿಕೆಶಿ!

    ಬೆಳಗಾವಿ: ಒಂದ್ಕಡೆ ವೈದ್ಯೋ ನಾರಾಯಣೋ ಹರಿ. ವೈದ್ಯರು ದೇವರಿಗೆ ಸರಿ ಸಮಾನ ಅಂತ ಹೇಳುತ್ತಾರೆ. ಮಾತೃದೇವೋಭವ, ಪಿತೃದೇವೋಭವ, ಗುರುದೇವೋ ಭವ ಬಳಿಕ ವೈದ್ಯರಿಗೆ ದೇವರ ಸ್ಥಾನ ಕೊಟ್ಟಿದ್ರೆ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ನಡೆದಾಡುವ ದೇವರಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ `ಧರ್ಮ’ದ ಹಣೆ ಪಟ್ಟವನ್ನು ಕಟ್ಟಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.

    ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಸ್ಲಿಮ್ ಆಡಳಿತವಿದ್ದರೂ ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಪಸಂಖ್ಯಾತ ಆಡಳಿತ ಮಂಡಳಿ ಇದ್ದರೂ ಶ್ರೀಗಳನ್ನ ಚೆನ್ನಾಗಿ ನೋಡ್ಕೊಂಡಿದ್ದಾರೆ. ಡಾಕ್ಟರ್ ಮೊಹಮ್ಮದ್ ರೆಲಾ ಮಾಲೀಕತ್ವದ ರೆಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ.

    ನನಗೆ ಬಹಳ ಸಂತೋಷವಾಯ್ತು. ನಿಜವಾಗಲೂ ಕರ್ನಾಟಕ ರಾಜ್ಯದಲ್ಲಿ ಅಂತಹ ಆಸ್ಪತ್ರೆಯನ್ನು ನಾನು ನೋಡಿಲ್ಲ. ಜಾತಿ-ಧರ್ಮದ ಬಗ್ಗೆ ಮಾತನಾಡುತ್ತಿರುವ ನಾವು ಒಂದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮೊಹಮ್ಮದ್ ರೇಲಾ ಎಂಬಂತಹ ಮುಸಲ್ಮಾನ ಅಲ್ಪಸಂಖ್ಯಾತರು. ಅವರ ಹೆಸರಿನಲ್ಲಿ ರೇಲಾ ಅನ್ನುವ ಆಸ್ಪತ್ರೆಯೊಂದನ್ನು ಮಾಡಿದ್ದಾರೆ. ಅವರು ಒಬ್ಬ ಜಗತ್ತಿನ ಫೇಮಸ್ ಸರ್ಜನ್ ಆಗಿದ್ದಾರೆ. ನಮ್ಮ ಶ್ರೀಗಳಿಗೆ ಅವರು ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಾರೆ ಅಂತ ಹೇಳಿದ್ರು.

    ಒಂದು 5 ದಿನದ ಮಗು ಇನ್ನೊಂದು 111 ವರ್ಷದ ಒಬ್ಬರು ಹಿರಿಯ ಶ್ರೀಗಳು. ನಾವೆಲ್ಲ ನಡೆದಾಡುವ ದೇವರು ಅಂತ ಕರೆಯುತ್ತೇವೆ. ಆಸ್ಪತ್ರೆ, ಸಿಬ್ಬಂದಿ ಹಾಗೂ ಸೌಲಭ್ಯಗಳು ತುಂಬಾ ಚೆನ್ನಾಗಿದೆ. 450 ಬೆಡ್ ನಲ್ಲಿ 150 ಬೆಡ್ ಐಸಿಯುನಲ್ಲಿದೆ. ಇಂತಹ ಸೌಲಭ್ಯವಿರುವ ಆಸ್ಪತ್ರೆಯನ್ನು ಎಲ್ಲೂ ನೋಡಿಲ್ಲ ಎಂದು ಹೊಗಳಿದರು.

    ಸ್ವಾಮೀಜಿಗಳು ಬಹಳ ಲವಲವಿಕೆಯಿಂದ ಇದ್ದಾರೆ. ಚೆನ್ನಾಗಿಯೇ ಮಾತನಾಡುತ್ತಿದ್ದಾರೆ. ಯಾವಾಗ ಬಂದ್ರಿ, ಏನ್ ಬಂದ್ರಿ ಅಂತ ನನ್ನನ್ನು ಸ್ವಾಮೀಜಿಗಳು ಕೇಳಿದ್ರು. ಬೆಳಗ್ಗೆ ಆಪರೇಷನ್ ಆಗಿದ್ದಷ್ಟೇ, ನಾನು ಹೋದಾಗ ಎದ್ದು ಕುಳಿತುಕೊಳ್ಳಬೇಕು ಅಂತ ಸ್ವಾಮೀಜಿಗಳು ಹೇಳಿದ್ರು. ಆಗ ನಾನು, ಸ್ವಾಮಿಗಳೇ ಇವತ್ತು ಒಂದು ದಿನ ಇರಿ ಅಂತ ಹೇಳಿದೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಅಂತ ಹೇಳಿದ್ರು.

    ಮುಸ್ಲಿಮರ ಆಸ್ಪತ್ರೆ ಆದ್ರೂ ಸಿದ್ದಗಂಗಾ ಶ್ರೀಗಳಿಗೆ ಉತ್ತಮ ಚಿಕಿತ್ಸೆ..! ಡಿಕೆ ಶಿವಕುಮಾರ್ ಈ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿದ್ದು ಸರಿಯೇ? ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ ತಿಳಿಸಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv