Tag: Shivam dube

  • ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

    ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

    ದುಬೈ: ಆರಂಭದಲ್ಲಿ ವಿಕೆಟ್‌ ಕಳೆದುಕೊಂಡಿದ್ದರೂ ತಿಲಕ್‌ ವರ್ಮಾ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿ 9ನೇ ಬಾರಿ ಭಾರತ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

    ಭಾನುವಾರದ ಏಷ್ಯಾ ಕಪ್‌ ಫೈನಲ್‌ ಹೈವೋಲ್ಟೇಜ್‌ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ 7 ಬಾಲ್‌ಗೆ 10 ರನ್‌ ಬೇಕಾಗಿತ್ತು. ಫಹೀಮ್ ಅಶ್ರಫ್‌ ಕೊನೆ ಎಸೆತಕ್ಕೆ ಸಿಕ್ಸರ್‌ ಹೊಡೆಯಲು ಮುಂದಾಗಿ ಶಿವಂ ದುಬೆ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ನಿರ್ಗಮಿಸಿದ್ದು, ಭಾರತೀಯರಿಗೆ ಅರೆಕ್ಷಣ ಶಾಕ್‌ ನೀಡಿತು. ಕೊನೆ ಓವರ್‌ನಲ್ಲಿ 10 ರನ್‌ ಬೇಕಿತ್ತು. ಆಗ ತಿಲಕ್‌ ವರ್ಮಾಗೆ ರಿಂಕು ಸಿಂಗ್‌ ಜೊತೆಯಾದರು. ಲಾಸ್ಟ್‌ ಓವರ್‌ನ ಮೊದಲ ಬಾಲ್‌ಗೆ ತಿಲಕ್‌ 2 ರನ್‌ ಗಳಿಸಿದರು. ಮತ್ತೆ ಸಿಕ್ಸರ್‌ ಬಾರಿಸಿದರು. 3ನೇ ಬಾಲ್‌ಗೆ ಸಿಂಗಲ್‌ ಬಂದರು. 4ನೇ ಬಾಲ್‌ಗೆ ರಿಂಗ್‌ ಸಿಂಗ್‌ ಫೋರ್‌ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ‘ಆಪರೇಷನ್‌ ಸಿಂಧೂರ’ದಂತಿದ್ದ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಗೂ ಗೆದ್ದು ಬೀಗಿತು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 19.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸಿತು. ನಂತರ ಬ್ಯಾಟಿಂಗ್‌ ಮಾಡಿದ ಭಾರತ 19.4 ಬಾಲ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

    ಟೀಂ ಇಂಡಿಯಾ ಬ್ಯಾಟಿಂಗ್‌ ವೇಳೆ ಆರಂಭಿಕ ಆಘಾತಗಳನ್ನು ನೀಡಿತು. ಟೂರ್ನಿಯ ಕಳೆದ ಪಂದ್ಯಗಳಲ್ಲಿ ಅಬ್ಬರಿಸಿದ್ದ ಅಭಿಷೇಕ್‌ ವರ್ಮಾ ಹೈವೋಲ್ಟೇಜ್‌ ಪಂದ್ಯದಲ್ಲೇ ಕೇವಲ 5 ರನ್‌ ಗಳಿಸಿ ಕ್ಯಾಚ್‌ ನೀಡಿ ನಿರ್ಗಮಿಸಿದ್ದು, ಆಘಾತ ನೀಡಿತು. ಹೀಗಿರುವಾಗಲೇ ಕೇವಲ 1 ರನ್‌ಗೆ ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌ ಔಟಾಗಿದ್ದು ತಂಡಕ್ಕೆ ಬರಸಿಡಿಲು ಬಡಿದಂತಾಯಿತು. ಶುಭಮನ್‌ ಗಿಲ್‌ ಕೂಡ ದೊಡ್ಡ ಹೊಡೆತಕ್ಕೆ ಮುಂದಾಗಿ 12 ರನ್‌ ಗಳಿಸಿ ನಿರ್ಗಮಿಸಿದರು. ತಂಡವು ಕೇವಲ 20 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಆಘಾತ ಅನುಭವಿಸಿತ್ತು.

    ಆಗ ತಂಡಕ್ಕೆ ತಿಲಕ್‌ ವರ್ಮಾ ನೆರವಾದರು. ಜವಾಬ್ದಾರಿಯುತ ಆಟವಾಡಿದರು. ಅವರಿಗೆ ಸಂಜು ಸ್ಯಾಮ್ಸನ್‌ ಸಾಥ್‌ ನೀಡಿದರು. ನಿಧಾನಗತಿಯ ಆಟದ ಮೂಲಕ ಈ ಜೋಡಿ ಅರ್ಧಶತಕದ ಜೊತೆಯಾಟವಾಡಿದರು. ಗೆಲುವಿನತ್ತ ತಂಡವನ್ನು ಮುನ್ನಡೆಸಿದರು. ಈ ಮಧ್ಯೆ 24 ರನ್‌ಗಳಿಸಿ ಸ್ಯಾಮ್ಸನ್‌ ಔಟಾದರು. ಆಗ ತಿಲಕ್‌ಗೆ ಶಿವಂ ದುಬೆ ಜೊತೆಯಾದರು. ಈ ಜೋಡಿ 64 ರನ್‌ಗಳ ಜೊತೆಯಾಟವಾಡಿತು. ತಿಲಕ್ ಅರ್ಧಶತಕ ಸಿಡಿಸಿದರು. ಸಿಕ್ಸರ್‌, ಫೋರ್‌ಗಳ ಸುರಿಮಳೆ ಹರಿದುಬಂತು. ಇವರಿಬ್ಬರ ಜವಾಬ್ದಾರಿಯುತ ಆಟ ತಂಡದ ಗೆಲುವಿಗೆ ಕೊಡುಗೆ ನೀಡಿತು. ತಿಲಕ್‌ ವರ್ಮಾ ಔಟಾಗದೇ 69 ರನ್‌ ಸಿಡಿಸಿ ಆಪದ್ಬಾಂಧವನಂತೆ ಕಂಡರು. ಕೊನೆಗೆ ಭಾರತ ತಂಡ ಪಾಕ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿ ಏಷ್ಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತು.

    ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕಿಸ್ತಾನ 146 ರನ್‌ ಗಳಿಸಿತ್ತು. ಆರಂಭಿಕರಾಗಿ ಕಣಕ್ಕಿಳಿದ ಸಾಹಿಬ್‌ಜಾದಾ ಫರ್ಹಾನ್, ಫಖರ್ ಜಮಾನ್ ಜೋಡಿ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್‌ಗೆ 84 ರನ್‌ಗಳ ಜೊತೆಯಾಟವಾಡಿ ಗಮನ ಸೆಳೆದರು. ಫರ್ಹಾನ್‌ 38 ಬಾಲ್‌ಗೆ ಅರ್ಧಶತಕ (57 ರನ್) ಗಳಿಸಿದರು. ವರುಣ್‌ ಚಕ್ರವರ್ತಿ 9ನೇ ಓವರ್‌ನಲ್ಲಿ ಮೊದಲ ವಿಕೆಟ್‌ ಪಡೆಯುವ ಮೂಲಕ ಜೊತೆಯಾಟಕ್ಕೆ ಬ್ರೇಕ್‌ ಹಾಕಿದರು.

    ತಂಡದ ಮೊತ್ತ 113 ಇದ್ದಾಗ ಸೈಮ್ ಅಯೂಬ್ ಔಟಾದರು. ಈ ಮಧ್ಯೆ ಜಮಾನ್‌ಗೆ ಯಾವೊಬ್ಬ ಬ್ಯಾಟರ್‌ ಕೂಡ ಸಾಥ್‌ ನೀಡಲಿಲ್ಲ. ನಂತರ ಬಂದ ಮೊಹಮ್ಮದ್ ಹ್ಯಾರಿಸ್ ಶೂನ್ಯ ಸುತ್ತಿ ಪೆವಿಲಿಯನ್‌ ಸೇರಿದರು. 46 ರನ್‌ ಗಳಿಸಿದ್ದ ಜಮಾನ್‌ ಕ್ಯಾಚ್‌ ನೀಡಿ ಔಟಾದರು.

    ಆರಂಭದಲ್ಲಿ ರನ್‌ ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಬೌಲರ್‌ಗಳು ನಂತರ ಪಾಕ್‌ ವಿರುದ್ಧ ಆರ್ಭಟಿಸಿದರು. ಬ್ಯಾಟರ್‌ಗಳ ಬೆವರಿಳಿಸಿದರು. ವಿಕೆಟ್‌ಗಳು ತರಗೆಲೆಯಂತೆ ಉರುಳಿದವು. ಯಾರೊಬ್ಬರು ಕೂಡ ಒಂದಂಕಿ ರನ್‌ ದಾಟಲು ಅವಕಾಶ ನೀಡಲಿಲ್ಲ. ಅಂತಿಮವಾಗಿ ಪಾಕಿಸ್ತಾನ 19.1 ಓವರ್‌ಗೆ ಆಲೌಟ್‌ ಆಗಿ 146 ರನ್‌ ಗಳಿಸಿತು.

    ಟೀಂ ಇಂಡಿಯಾ ಪರ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಜಾದು ಮಾಡಿದರು. ಪಂದ್ಯದಲ್ಲಿ ನಾಲ್ಕು ವಿಕೆಟ್‌ ಕಿತ್ತು ಮಿಂಚಿದರು. ಜಸ್ಪ್ರಿತ್‌ ಬುಮ್ರಾ, ವರುಣ್‌ ಚಕ್ರವರ್ತಿ, ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಕಿತ್ತರು.

  • ಬ್ಯಾಟಿಂಗ್‌, ಬೌಲಿಂಗ್‌ ಪರಾಕ್ರಮ, ಆಂಗ್ಲ ಪಡೆ ತತ್ತರ – ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ ಸರಣಿ ಗೆದ್ದ ಭಾರತ

    ಬ್ಯಾಟಿಂಗ್‌, ಬೌಲಿಂಗ್‌ ಪರಾಕ್ರಮ, ಆಂಗ್ಲ ಪಡೆ ತತ್ತರ – ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ ಸರಣಿ ಗೆದ್ದ ಭಾರತ

    ಪುಣೆ: ಶಿವಂ ದುಬೆ, ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್‌ ಪರಾಕ್ರಮ, ರವಿ ಬಿಷ್ಣೋಯಿ, ಹರ್ಷಿತ್‌ ರಾಣಾ ಉರಿ ಚೆಂಡಿನ ದಾಳಿ ನೆರವಿನಿಂದ ಭಾರತ 4ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ 15 ರನ್‌ಗಳ ರೋಚಕ ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-1 ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ಕೈವಶ ಮಾಡಿಕೊಂಡಿತು.

    19ನೇ ಓವರ್‌ ರೋಚಕ:
    ಕೊನೇ 12 ಎಸೆತಗಳಲ್ಲಿ ಇಂಗ್ಲೆಂಡ್‌ ಗೆಲುವಿಗೆ 25 ರನ್‌ ಅಗತ್ಯವಿತ್ತು. ಹರ್ಷಿತ್‌ ರಾಣಾ ಬೌಲಿಂಗ್‌ನಲ್ಲಿದ್ದರೆ, ಕೊನೆಯ ಬ್ಯಾಟಿಂಗ್‌ ಭರವಸೆಯಾಗಿದ್ದ ಜೇಮೀ ಓವರ್ಟನ್ ಕ್ರೀಸ್‌ನಲ್ಲಿದ್ದರು. ಹರ್ಷಿತ್‌ ರಾಣಾ ಮೊದಲ ಎಸೆತವನ್ನೇ ಓವರ್ಟನ್‌ ಬೌಂಡರಿಗಟ್ಟಿದರು. ಬಳಿಕ 2ನೇ ಬಾಲ್‌ ಡಾಟ್‌ ಆಯಿತು. 3ನೇ ಎಸೆತದಲ್ಲಿ 2 ರನ್‌ ಕದ್ದಾಗ ಪಂದ್ಯ ಕೊಂಚವೇ ಇಂಗ್ಲೆಂಡ್‌ನತ್ತ ವಾಲುತ್ತಿತ್ತು. ಆದ್ರೆ 4, 5ನೇ ಎಸೆತದಲ್ಲಿ ಯಾವುದೇ ರನ್‌ ಬಿಟ್ಟುಕೊಡದ ರಾಣಾ 6ನೇ ಎಸೆತದಲ್ಲಿ ಓವರ್ಟನ್‌ ವಿಕೆಟ್‌ ಉಡೀಸ್‌ ಮಾಡಿದ್ರು. ಇದರೊಂದಿಗೆ ಇಂಗ್ಲೆಂಡ್‌ ತಂಡದ ಗೆಲುವೂ ಕಸಿಯಿತು.

    ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿಂದು ನಡೆದ 4ನೇ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 181 ರನ್‌ ಗಳಿಸಿತ್ತು. 181 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ 19.4 ಓವರ್‌ಗಳಲ್ಲಿ 166 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತು

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಇಂಗ್ಲೆಂಡ್‌ ಆರಂಭದಲ್ಲೇ ಅಬ್ಬರಿಸಲು ಶುರು ಮಾಡಿತು. ಆರಂಭಿಕರಾದ ಫಿಲ್‌ ಸಾಲ್ಟ್‌ ಹಾಗೂ ಬೆನ್‌ ಡಕೆಟ್‌ ಸ್ಫೋಟಕ ಇನ್ನಿಂಗ್ಸ್‌ ಕಟ್ಟಲು ಶುರು ಮಾಡಿದರು. ಪವರ್‌ ಪ್ಲೇ ಮುಗಿಯುವ ಹೊತ್ತಿಗೆ ಈ ಜೋಡಿ ಮೊದಲ ವಿಕೆಟ್‌ಗೆ 62 ರನ್‌ ಗಳಿಸಿತ್ತು. ಡಕೆಟ್‌ 19 ಎಸೆತಗಳಲ್ಲಿ 39 ರನ್‌ ಚಚ್ಚಿದ್ರೆ, ಸಾಲ್ಟ್‌ 21 ಎಸೆತಗಳಲ್ಲಿ ಕೇವಲ 23 ರನ್‌ ಸಿಡಿಸಿದ್ರು. ಆದ್ರೆ ಬೆಂಕಿ ಆಟವಾಡುತ್ತಿದ್ದ ಡಕೆಟ್‌ ವೇಗಕ್ಕೆ ರವಿ ಬಿಷ್ಣೋಯಿ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿದರು. ಆರಂಭಿಕ ಜೋಡಿ ಔಟಾಗುತ್ತಿದ್ದಂತೆ ಜೋಸ್‌ ಬಟ್ಲರ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಾಕೋಬ್‌ ಬೇಥೆಲ್‌ ಹಾಗೂ ಆಲ್‌ರೌಂಡರ್‌ ಬ್ರೈಡನ್ ಕಾರ್ಸ್ ಅವರ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಕಳೆದುಕೊಂಡು ಇಂಗ್ಲೆಂಡ್‌ ಸಂಕಷ್ಟಕ್ಕೀಡಾಯಿತು.

    ಬ್ರೂಕ್‌ ಸ್ಫೋಟಕ ಬ್ಯಾಟಿಂಗ್‌:
    ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಇಂಗ್ಲೆಂಡ್‌ ತಂಡಕ್ಕೆ ಹ್ಯಾರಿ ಬ್ರೂಕ್‌ ಅವರ ಅರ್ಧಶತಕ ಬಲ ತುಂಬಿತು. 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್‌ 26 ಎಸೆತಗಳಲ್ಲಿ ಸ್ಫೋಟಕ 51 ರನ್‌ (5 ಬೌಂಡರಿ, 2 ಸಿಕ್ಸರ್)‌ ಚಚ್ಚಿದರು. ಇದು ಇಂಗ್ಲೆಂಡ್‌ ತಂಡಕ್ಕೆ ಜೀವದಾನ ನೀಡಿತ್ತು. ಹ್ಯಾರಿ ಬ್ರೂಕ್‌ ವಿಕೆಟ್‌ ಬೀಳುತ್ತಿದ್ದಂತೆ ಮತ್ತೆ ಉಳಿದ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಿದರು. ಆದ್ರೆ ಕ್ರೀಸ್‌ನಲ್ಲಿದ್ದ ಆಲ್‌ರೌಂಡರ್‌ ಜೇಮೀ ಓವರ್ಟನ್ (19 ರನ್‌ ಗಳಿಸಿ) ಇಂಗ್ಲೆಂಡ್‌ ತಂಡಕ್ಕೆ ಗೆಲುವು ತಂದುಕೊಡುವ ನಿರೀಕ್ಷೆ ಹೆಚ್ಚಿಸಿದ್ದರು. ಈ ವೇಳೆ ಟೀಂ ಇಂಡಿಯಾ ವೇಗಿ ಹರ್ಷಿತ್‌ ರಾಣಾ 19ನೇ ಓವರ್‌ನ ಕೊನೇ ಎಸೆತದಲ್ಲಿ ಓವರ್ಟನ್‌ಗೆ ಪೆವಿಲಿಯನ್‌ ದಾರಿ ತೋರಿ ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 181 ರನ್‌ ಗಳಿಸಿತ್ತು. ಮೊದಲ 12 ರನ್‌ಗಳಿಗೆ 3 ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಭಾರತ ತಂಡಕ್ಕೆ ಒಂದೆಡೆ ಅಭಿಷೇಕ್‌ ಶರ್ಮಾ, ರಿಂಕು ಸಿಂಗ್‌, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ ಬ್ಯಾಟಿಂಗ್‌ನಲ್ಲಿ ಬಲ ತುಂಬಿದರು.

    ಪಾಂಡ್ಯ, ದುಬೆ ಅರ್ಧಶತಕಗಳ ಬ್ಯಾಟಿಂಗ್‌:
    ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಪಾಂಡ್ಯ ಇಂಗ್ಲೆಂಡ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಚೆಂಡಾಡಿದರು. 27 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್‌ನೊಂದಿಗೆ ಸ್ಫೋಟಕ ಅರ್ಧಶತಕ ಸಿಡಿಸಿದ್ರು. ಒಟ್ಟು 30 ಎಸೆತಗಳಲ್ಲಿ 53 ರನ್‌ ಸಿಡಿಸಿ ಔಟಾದರು. ಇದರೊಂದಿಗೆ ತಾಳ್ಮೆಯ ಬ್ಯಾಟಿಂಗ್‌ ಮಾಡಿದ ಶಿವಂ ದುಬೆ 34 ಎಸೆತಗಳಲ್ಲಿ 53 ರನ್‌ (7 ಬೌಂಡರಿ, 2 ಸಿಕ್ಸರ್)‌ ಚಚ್ಚಿದರು. ಇದರೊಂದಿಗೆ ಅಭಿಷೇಕ್‌ ಶರ್ಮಾ 29 ರನ್‌, ರಿಂಕು ಸಿಂಗ್‌ 30 ರನ್‌ಗಳ ಕೊಡುಗೆ ನೀಡಿದರು.

  • ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ ಮಂಗಳೂರಿಗೆ ಭೇಟಿ – ಕಟೀಲು ದುರ್ಗಾಪರಮೇಶ್ವರಿಯ ದರ್ಶನ

    ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ ಮಂಗಳೂರಿಗೆ ಭೇಟಿ – ಕಟೀಲು ದುರ್ಗಾಪರಮೇಶ್ವರಿಯ ದರ್ಶನ

    – ಪಿಲಿನಲಿಕೆ ಹುಲಿವೇಷ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗಿ

    ಮಂಗಳೂರು: ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ (Shivam Dube) ಮಂಗಳೂರಿಗೆ (Mangaluru) ಭೇಟಿ ನೀಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ (Kateel Durgaparameshwari Temple) ಭೇಟಿ ನೀಡಿದ ದುಬೆ, ದೇವಿಯ ದರ್ಶನ ಪಡೆದಿದ್ದಾರೆ.

    ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭ ದೇವಳದ ವತಿಯಿಂದ ಶಿವಂ ದುಬೆ ಅವರಿಗೆ ದೇವಳದ ಶೇಷ ವಸ್ತ್ರ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ವೇಳೆ ದೇವಳದ ಅರ್ಚಕರು, ಆಡಳಿತ ಮಂಡಳಿಯವರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಪಿಲಿನಲಿಕೆ ಹುಲಿವೇಷ ಸ್ಪರ್ಧೆ ಕಾರ್ಯಕ್ರಮದಲ್ಲಿ ದುಬೆ ಪಾಲ್ಗೊಂಡರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಈ ಬಾರಿಯೂ ಜನ ಜೆಡಿಎಸ್‌ ಕೈ ಹಿಡಿಯುತ್ತಾರೆ: ನಿಖಿಲ್‌ ಕುಮಾರಸ್ವಾಮಿ

    ಮಂಗಳೂರಿನಲ್ಲಿ ಹುಲಿವೇಷ ಸ್ಪರ್ಧೆಯ ಅಬ್ಬರ ಜೋರಾಗಿ ನಡೆಯುತ್ತಿದ್ದು, ನಟ ಡಾಲಿ ಧನಂಜಯ್, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ, ಪ್ರಮೋದ್ ಸೇರಿದಂತೆ ಅನೇಕ ಬಾಲಿವುಡ್ ಹಾಗೂ ಸ್ಯಾಂಡಲ್‌ವುಡ್ ಕಲಾವಿದರು ಇದರಲ್ಲಿ ಭಾಗವಹಿಸಿದ್ದಾರೆ. ನವರಾತ್ರಿಯ ಸಂಭ್ರಮದಲ್ಲಿ ಮಂಗಳೂರಿನ ವಿವಿಧೆಡೆ ಹುಲಿ ಕುಣಿತ ಸ್ಪರ್ಧೆ ನಡೆಯುತ್ತಿದೆ. ನಗರದ ನೆಹರೂ ಮೈದಾನದಲ್ಲಿ ನಡೆದ ಪಿಲಿಪರ್ಬ ಹುಲಿವೇಷ ಕುಣಿತದ ಸ್ಪರ್ಧೆಗೆ ಅತಿಥಿಯಾಗಿ ಆಗಮಿಸಿದ ಚಿತ್ರನಟ ರಾಜ್ ಬಿ ಶೆಟ್ಟಿ ವೇದಿಕೆಯಲ್ಲಿ ಹುಲಿ ಕುಣಿತಕ್ಕೆ ಸ್ಟೆಪ್ ಹಾಕಿದರು. ಇದನ್ನೂ ಓದಿ: Mysuru Dasara Photo Gallery: ಜಂಬೂಸವಾರಿ ಮೆರವಣಿಗೆ ವೈಭವ ಕಣ್ತುಂಬಿಕೊಂಡ ಕೋಟ್ಯಂತರ ಜನರು

    ಹುಲಿವೇಷಧಾರಿಗಳು ವೇದಿಕೆಯಲ್ಲಿ ಹುಲಿಡ್ಯಾನ್ಸ್ ಮಾಡುತ್ತಿದ್ದಂತೆ ರಾಜ್ ಬಿ ಶೆಟ್ಟಿಯೂ ಅವರೊಂದಿಗೆ ಸ್ಟೆಪ್ ಹಾಕಿ ಎಲ್ಲರನ್ನೂ ರಂಜಿಸಿದರು. ಬಳಿಕ ಇದೇ ವೇದಿಕೆಗೆ ಆಗಮಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹುಲಿವೇಷ ಹಾಕಿ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಿದರು. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಜಯ್ ದತ್ ಭೇಟಿ

  • ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಹರಾರೆ: ಸಂಜು ಸ್ಯಾಮ್ಸನ್ (Sanju Samson)​ ಅಮೋಘ ಅರ್ಧ ಶತಕ, ಶಿವಂ ದುಬೆ ಆಲ್‌ರೌಂಡ್‌ ಆಟ ಹಾಗೂ ಮುಕೇಶ್‌ ಕುಮಾರ್‌ ಮಾರಕ ಬೌಲಿಂಗ್‌ ದಾಳಿಯಿಂದ ಭಾರತ ತಂಡ (Team India) ಜಿಂಬಾಬ್ವೆ ವಿರುದ್ಧ ಟಿ20 ಸರಣಿಯ 5ನೇ ಪಂದ್ಯದಲ್ಲೂ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1ರಲ್ಲಿ ಗೆದ್ದುಕೊಂಡಿದೆ.

    ಆರಂಭಿಕ ಪಂದ್ಯದಲ್ಲಿ ಅತ್ಯಲ್ಪ ಮೊತ್ತವಿದ್ದರೂ ಅಚ್ಚರಿ ಸೋಲು ಕಂಡಿದ್ದ ಯುವ ಬಳಗದ ಭಾರತ ತಂಡ ಬಳಿಕ ಸತತ ನಾಲ್ಕೂ ಪಂದ್ಯಗಳಲ್ಲೂ ಭರ್ಜರಿ ಗೆಲುವಿನೊಂದಿಗೆ ಸರಣಿ ತನ್ನದಾಗಿಸಿಕೊಂಡಿದೆ. ಅಲ್ಲದೇ ತನ್ನ ನಾಯಕತ್ವದಲ್ಲಿ ನಡೆದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಗೆಲುವು ಸಾಧಿಸುವ ಮೂಲಕ ಶುಭಮನ್‌ ಗಿಲ್‌ (Shubman Gill) ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

    ಭಾನುವಾರ ಹರಾರೆ ಸ್ಪೋರ್ಟ್ಸ್‌ಕ್ಲಬ್‌ ಮೈದಾನದಲ್ಲಿ ನಡೆದ ಕೊನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 6 ವಿಕೆಟ್‌ ನಷ್ಟಕ್ಕೆ 167 ರನ್‌ ಬಾರಿಸಿತ್ತು. 168 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ (Zimbabwe), ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ 18.3 ಓವರ್‌ಗಳಲ್ಲೇ 125 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

    ಆರಂಭದಲ್ಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಗಿದ್ದ ಭಾರತ ತಂಡಕ್ಕೆ ಆಘಾತ ಎದುರಾಗಿತ್ತು. ಮೊದಲ ಐದು ಓವರ್‌ಗಳಲ್ಲೇ 40 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ಕ್ರೀಸ್‌ನಲ್ಲಿ ನೆಲೆಯೂರಿದ ಸಂಜು ಸ್ಯಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾಯಿತು. 56 ಎಸೆತಗಳಲ್ಲಿ ಈ ಜೋಡಿ 4ನೇ ವಿಕೆಟ್‌ಗೆ 65 ರನ್‌ ಬಾರಿಸಿತ್ತು. ಈ ವೇಳೆ ಸಿಕ್ಸರ್‌ ಬಾರಿಸಲು ಮುಂದಾದ ರಿಯಾನ್‌ ಪರಾಗ್‌ ಕ್ಯಾಚ್‌ ನೀಡಿ ಔಟಾದರು. ಬಳಿಕ ಕ್ರೀಸ್‌ಗಿಳಿದ ಶಿವಂ ದುಬೆ (Shivam Dube) ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಅಬ್ಬರಿಸಲು ಶುರು ಮಾಡಿದರು. ಇದರಿಂದ ಭಾರತ ತಂಡ 160 ರನ್‌ ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಸಂಜು 110 ಮೀಟರ್‌ ಸಿಕ್ಸರ್‌:
    ಸಂಕಷ್ಟ ಸಮಯದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟಿದ ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ನೊಂದಿಗೆ 58 ರನ್‌ ಚಚ್ಚಿದರು. ಈ ವೇಳೆ ಸಂಜು ಸ್ಯಾಮ್ಸನ್‌ ಬಾರಿಸಿದ ಸಿಕ್ಸರ್‌ವೊಂದು 110 ಮೀಟರ್‌ ಸಾಗಿತು. ಸಂಜು ಸಿಡಿಲಬ್ಬರದ ಸಿಕ್ಸರ್‌ ಕಂಡು ಪ್ರೇಕ್ಷಕರೇ ದಂಗಾದರು. ಇದರೊಂದಿಗೆ ಶಿವಂ ದುಬೆ 28 ರನ್‌ (12 ಎಸೆತ, 2 ಸಿಕ್ಸರ್‌, 2 ಬೌಂಡರಿ), ರಿಯಾನ್‌ ಪರಾಗ್‌ 22 ರನ್‌, ಯಶಸ್ವಿ ಜೈಸ್ವಾಲ್‌ 12 ರನ್‌, ಶುಭಮನ್‌ ಗಿಲ್‌ 13 ರನ್‌, ಅಭಿಷೇಕ್‌ ಶರ್ಮಾ 14 ರನ್‌, ರಿಂಕು ಸಿಂಗ್‌ 11 ರನ್‌, ವಾಷಿಂಗ್ಟನ್‌ 10 ರನ್‌ಗಳ ಕೊಡುಗೆ ನೀಡಿದರು.  ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

    ಮುಕೇಶ್‌ ಮಾರಕ ದಾಳಿ:
    ಭಾರತ ನೀಡಿದ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ 15 ರನ್​ಗೆ 2 ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಸಿಲುಕಿತ್ತು. ಬಳಿಕ ಡಿಯೋನ್​ ಮೈರ್ಸ್​ 34 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಲ್ಲದೇ ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಬಾರಿಸಿದರು. ಮರುಮಣಿ 27 ರನ್ ಕೊಡುಗೆ ನೀಡಿದ್ದು ಬಿಟ್ಟರೆ ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ನೆಲೆಯೂರದ ಕಾರಣ ಜಿಂಬಾಬ್ವೆ ಕೊನೇ ಪಂದ್ಯದಲ್ಲೂ ಹೀನಾಯ ಸೋಲಿಗೆ ತುತ್ತಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಮುಕೇಶ್ ಕುಮಾರ್​ 3.3 ಓವರ್‌ಗಳಲ್ಲಿ 22 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಿತ್ತರೆ ಶಿವಂ ದುಬೆ 2 ವಿಕೆಟ್ ಪಡೆದರು. ಇದರೊಂದಿಗೆ ತುಷಾರ್‌ ದೇಶ್‌ಪಾಂಡೆ, ವಾಷಿಂಗ್ಟನ್‌ ಸುಂದರ್‌, ಅಭಿಷೇಕ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌! 

  • ಸ್ಟೊಯಿನಿಸ್‌ ಶತಕ; ಚೆನ್ನೈ ವಿರುದ್ಧ ಲಕ್ನೋಗೆ 6 ವಿಕೆಟ್‌ ಜಯ

    ಸ್ಟೊಯಿನಿಸ್‌ ಶತಕ; ಚೆನ್ನೈ ವಿರುದ್ಧ ಲಕ್ನೋಗೆ 6 ವಿಕೆಟ್‌ ಜಯ

    – ಧೋನಿ ದಾಖಲೆ ಉಡೀಸ್‌ ಮಾಡಿದ ಗಾಯಕ್ವಾಡ್‌
    – IPLನಲ್ಲಿ ಶತಕ ಸಿಡಿಸಿದ ಮೊದಲ ಸಿಎಸ್‌ಕೆ ನಾಯಕ ಋತುರಾಜ್‌

    ಚೆನ್ನೈ: ಮಾರ್ಕಸ್‌ ಸ್ಟೊಯಿನಿಸ್‌ ಅಬ್ಬರದ ಶತಕದಾಟದ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ 6 ವಿಕೆಟ್‌ಗಳ ಜಯ ಸಾಧಿಸಿತು.

    ಚೆನ್ನೈನಲ್ಲಿ ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಕೆ.ಎಲ್‌.ರಾಹುಲ್‌ ಪಡೆ ಫೀಲ್ಡಿಂಗ್‌ ಆಯ್ದುಕೊಂಡಿತು. ಮೊದಲು ಬ್ಯಾಟ್‌ ಮಾಡಿದ ಚೆನ್ನೈ ನಾಯಕ ಋತುರಾಜ್‌ ಶತಕದಾಟ ಮತ್ತು ಶಿವಂ ದುಬೆ ಸ್ಫೋಟಕ ಶೈಲಿಯ ಅರ್ಧಶತಕ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 210 ರನ್‌ ಗಳಿಸಿತು. 211 ರನ್‌ ಗುರಿ ಬೆನ್ನತ್ತಿದ ಲಕ್ನೋ 20 ಓವರ್‌ಗೆ 3 ಬಾಲ್‌ ಬಾಕಿ ಇರುವಾಗಲೇ 4 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿ ಗೆಲುವು ಸಾಧಿಸಿತು.

    ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಆರಂಭದಲ್ಲೇ ಆಘಾತ ಎದುರಿಸಿತು. ಅಜಿಂಕ್ಯ ರಹಾನೆ ಕೇವಲ 1 ರನ್‌ ಗಳಿಸುತ್ತಿದ್ದಂತೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ಈ ವೇಳೆ ಜವಾಬ್ದಾರಿಯುತ ಆಟವಾಡಿದ ಋತುರಾಜ್‌ ಗಾಯಕ್ವಾಡ್‌ ಶತಕ ಗಳಿಸಿ ಗಮನ ಸೆಳೆದರು. ಚೆನ್ನೈ ತಂಡದ ಇತಿಹಾಸದಲ್ಲೇ ನಾಯಕ ಸಿಡಿಸಿದ ಮೊದಲ ಶತಕ ಎಂಬ ದಾಖಲೆಯನ್ನು ಗಾಯಕ್ವಾಡ್‌ ಬರೆದರು. ಗಾಯಕ್ವಾಡ್‌ ಔಟಾಗದೇ ಶತಕ ಸಿಡಿಸಿ (108 ರನ್‌, 60 ಬಾಲ್, 12‌ ಫೋರ್‌, 3 ಸಿಕ್ಸರ್‌) ಮಿಂಚಿದರು.

    ಇವರಿಗೆ ರವೀಂದ್ರ ಜಡೇಜಾ ಉತ್ತಮ ಜೊತೆಯಾಟ ನೀಡಿದರು. ಗಾಯಕ್ವಾಡ್‌ ಮತ್ತು ಜಡೇಜಾ ಜೋಡಿ 39 ಬಾಲ್‌ಗೆ 52 ರನ್‌ಗಳ ಜೊತೆಯಾಟವಾಡಿತು. ಈ ವೇಳೆ ಜಡೇಜಾ 16 ರನ್‌ ಗಳಿಸಿ ಔಟಾದರು. ರನ್‌ ಗಳಿಕೆ ವೇಗ ಕಡಿಮೆಯಿದ್ದರೂ ಇನ್ನಿಂಗ್ಸ್‌ಗೆ ಸ್ಥಿರತೆ ಒದಗಿಸುವಲ್ಲಿ ಈ ಜೊತೆಯಾಟ ನೆರವಾಯಿತು.

    ತಂಡದ ಮೊತ್ತ 200 ರ ಗಡಿ ದಾಟಲು ದುಬೆ ಕೊಡುಗೆಯೂ ಇದೆ. 244 ರ ಸ್ಟೈಕ್‌ರೇಟ್‌ನಲ್ಲಿ ಬ್ಯಾಟ್‌ ಮಾಡಿದ ದುಬೆ 22 ಎಸೆತಕ್ಕೆ 66 ರನ್‌ ಸಿಡಿಸಿ ಮಿಂಚಿದರು. ದುಬೆ ಆಟದ ರಭಸಕ್ಕೆ ಲಕ್ನೋ ಬೌಲರ್‌ಗಳು ಬಸವಳಿದರು. ನಂತರ ದುಬೆ ರನ್‌ಔಟ್‌ ಆಗಿ ಪೆವಿಲಿಯನ್‌ ಸೇರಿದರು. ನಂತರ ಕ್ರೀಸ್‌ಗೆ ಬಂದ ಮಹೇಂದ್ರ ಸಿಂಗ್‌ ಧೋನಿ ತಮಗೆ ಸಿಕ್ಕ ಏಕೈಕ ಎಸೆತವನ್ನು ಬೌಂಡರಿಗೆ ಅಟ್ಟುವ ಮೂಲಕ ಅಭಿಮಾನಿಗಳಿಗೆ ಖುಷಿ ಕೊಟ್ಟರು.

    ಲಕ್ನೋ ಪರ ಮ್ಯಾಟ್ ಹೆನ್ರಿ, ಮೊಹ್ಸಿನ್ ಖಾನ್, ಯಶ್ ಠಾಕೂರ್ ತಲಾ 1 ವಿಕೆಟ್‌ ಕಿತ್ತರು.

    ಚೆನ್ನೈ ನೀಡಿದ 211 ರನ್‌ ಗುರಿ ಬೆನ್ನತ್ತಿದ ಲಕ್ನೋ ಕೂಡ ಆರಂಭಿಕ ಆಘಾತ ಎದುರಿಸಿತು. ಓಪನರ್‌ ಕ್ವಿಂಟನ್‌ ಡಿ ಕಾಕ್‌ 3 ಎಸೆತಗಳನ್ನು ಎದುರಿಸಲು ತಿಣುಕಾಡಿ ಕೊನೆಗೆ ಶೂನ್ಯ ವಿಕೆಟ್‌ ಒಪ್ಪಿಸಿ ಹೊರನಡೆದರು. ನಾಯಕ ಕೆ.ಎಲ್‌.ರಾಹುಲ್‌ ಕೂಡ ಕೇವಲ 16 ರನ್‌ಗಳಿಸಲಷ್ಟೇ ಶಕ್ತರಾದರು.

    ಈ ವೇಳೆ ತಂಡಕ್ಕೆ ಆಸರೆಯಾದವರು ಸ್ಟೊಯಿನಿಸ್‌. ಕೊನೆವರೆಗೂ ಹೋರಾಡಿ ಲಕ್ನೋವನ್ನು ಗೆಲುವಿನ ದಡ ಸೇರಿದರು. ಸ್ಟೊಯಿನಿಸ್‌ ಶತಕದಾಟದೊಂದಿಗೆ ಅಬ್ಬರಿಸಿದರು. 63 ಬಾಲ್‌ಗೆ 124 ರನ್‌ (13 ಫೋರ್‌, 6 ಸಿಕ್ಸರ್‌) ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

    ದೇವದತ್ ಪಡಿಕ್ಕಲ್ 13, ನಿಕೋಲಸ್ ಪೂರನ್ 34, ದೀಪಕ್ ಹೂಡಾ ಔಟಾಗದೇ 17 ರನ್‌ ಗಳಿಸಿದರು. ಚೆನ್ನೈ ಪರ ಮತೀಶ ಪತಿರಾನ 2, ದೀಪಕ್ ಚಹಾರ್ ಹಾಗೂ ಮುಸ್ತಫಿಜುರ್ ರೆಹಮಾನ್ ತಲಾ 1 ವಿಕೆಟ್‌ ಕಬಳಿಸಿದರು.

  • ಕಳಪೆ ಬೌಲಿಂಗ್‌, ಬ್ಯಾಟಿಂಗ್‌ನಿಂದ ಚೆನ್ನೈಗೆ ಸೋಲು – ತವರಿನಲ್ಲಿ ಸನ್‌ ರೈಸರ್ಸ್‌ಗೆ 6 ವಿಕೆಟ್‌ ಜಯ

    ಕಳಪೆ ಬೌಲಿಂಗ್‌, ಬ್ಯಾಟಿಂಗ್‌ನಿಂದ ಚೆನ್ನೈಗೆ ಸೋಲು – ತವರಿನಲ್ಲಿ ಸನ್‌ ರೈಸರ್ಸ್‌ಗೆ 6 ವಿಕೆಟ್‌ ಜಯ

    ಹೈದರಾಬಾದ್‌: ಅಗ್ರ ಕ್ರಮಾಂಕದ ಆಟಗಾರರ ಕಳಪೆ ಬ್ಯಾಟಿಂಗ್‌ ಹಾಗೂ ಕಳಪೆ ಬೌಲಿಂಗ್‌ನಿಂದಾಗಿ ಚೆನ್ನೈ ಸೂಪರ್‌‌ ಕಿಂಗ್ಸ್‌ (hennai Super Kings) ಎದುರು ಹೀನಾಯ ಸೋಲು ಅನುಭವಿಸಿದೆ. ಸಂಘಟಿತ ಪ್ರದರ್ಶನ ತೋರಿದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತವರಿನಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿದೆ.

    ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 18.1 ಓವರ್‌ಗಳಲ್ಲೇ 4 ವಿಕೆಟ್‌ ನಷ್ಟಕ್ಕೆ 166 ರನ್‌ ಗಳಿಸಿ ಗೆಲುವು ಸ್ಥಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದೆ.

    ಚೇಸಿಂಗ್‌ ಆರಂಭಿಸಿದ ಹೈದರಾಬಾದ್‌ ತಂಡದ ಬ್ಯಾಟರ್‌ಗಳು ಆರಂಭದಲ್ಲೇ ಚೆನ್ನೈ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದರು. ಪವರ್‌ ಪ್ಲೇ ನಲ್ಲಿ ಅಭಿಷೇಕ್‌ ಶರ್ಮಾ (Abhishek Sharma), ಏಡನ್‌ ಮಾರ್ಕ್ರಮ್‌ ಹಾಗೂ ಟ್ರಾವಿಸ್‌ ಹೆಡ್‌ ಅವರ ಸ್ಫೋಟಕ ಪ್ರದರ್ಶನ ತಂಡದ ಗೆಲುವಿಗೆ ನೆರವಾಯಿತು. ಮೊದಲ ವಿಕೆಟ್‌ಗೆ ಕೇವಲ 2.4 ಓವರ್‌ಗಳಲ್ಲೇ 46 ರನ್‌ ಸಿಡಿಸಿದ್ದ ಸನ್‌ ರೈಸರ್ಸ್‌, 6 ಓವರ್‌ಗಳಲ್ಲಿ ಬರೋಬ್ಬರಿ 78 ರನ್‌ ಬಾರಿಸಿತ್ತು. ಪವರ್‌ ಪ್ಲೇ ಬಳಿಕ ಸ್ಪಿನ್‌ ಬೌಲರ್‌ಗಳು ಬಿಗಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರೂ ಗೆಲುವು ಕೈತಪ್ಪಿತು.

    ಸನ್‌ ರೈಸರ್ಸ್‌ ಪರ 308.33 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಅಭಿಷೇಕ್‌ ಶರ್ಮಾ 12 ಎಸೆತಗಳಲ್ಲಿ 37 ರನ್‌ (4 ಸಿಕ್ಸರ್‌, 3 ಬೌಂಡರಿ) ಸಿಡಿಸಿದರು. ಏಡನ್‌ ಮಾರ್ಕ್ರಮ್‌ 50 ರನ್‌ (36 ಎಸೆತ, 1 ಸಿಕ್ಸರ್‌, 4 ಬೌಂಡರಿ), ಟ್ರಾವಿಸ್‌ ಹೆಡ್‌ 31 ರನ್‌, ಶಾಬಾಜ್‌ ಅಹ್ಮದ್‌ 18 ರನ್‌, ಹೆನ್ರಿಕ್‌ ಕ್ಲಾಸೆನ್‌ 10 ರನ್‌, ನಿತಿಶ್‌ ಕುಮಾರ್‌ ರೆಡ್ಡಿ 14 ರನ್‌ ಗಳಿಸಿದರು. ಸಿಎಸ್‌ಕೆ ಪರ ಮೊಯಿನ್‌ ಅಲಿ 2 ವಿಕೆಟ್‌ ಕಿತ್ತರೆ, ದೀಪಕ್‌ ಚಹಾರ್‌ ಮತ್ತು ಮಹೀಶ್‌ ತೀಕ್ಷಣ ತಲಾ ಒಂದೊಂದು ವಿಕೆಟ್‌ ಪಡೆದರು.

    ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ವೈಫಲ್ಯ ಅನುಭವಿಸಿದರು. ರಚಿನ್‌ ರವೀಂದ್ರ 12 ರನ್‌ಗಳಿಗೆ ಔಟಾಗುತ್ತಿದ್ದಂತೆ, ನಾಯಕ ರುತುರಾಜ್‌ ಗಾಯಕ್ವಾಡ್‌ ಸಹ ಶೀಘ್ರವೇ ಪೆವಿಲಿಯನ್‌ಗೆ ಮರಳಿದರು.

    ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ತಂಡಕ್ಕೆ ಅಗತ್ಯ ರನ್‌ ಕಲೆಹಾಕುವಲ್ಲಿ ಯಶಸ್ವಿಯಾದರು. ಆದ್ರೆ ಡೆತ್‌ ಓವರ್‌ನಲ್ಲಿ ಕಳಪೆ ಬ್ಯಾಟಿಂಗ್‌ ಪ್ರಸರ್ಶನದಿಂದಾಗಿ ಸಿಎಸ್‌ಕೆ 170 ರನ್‌ಗಳ ಗಡಿ ದಾಟುವಲ್ಲಿಯೂ ವಿಫಲವಾಯಿತು. ಸಿಎಸ್‌ಕೆ ಪರ ಶಿವಂ ದುಬೆ 45 ರನ್‌, ರಹಾನೆ 35 ರನ್‌, ಜಡೇಜಾ 31 ರನ್‌, ರುತುರಾಜ್‌ (Ruturaj Gaikwad) 26 ರನ್‌, ರಚಿನ್‌ 12 ರನ್‌, ಡೇರಿಲ್‌ ಮಿಚೆಲ್‌ 13 ರನ್‌, ಎಂ.ಎಸ್‌ ಧೋನಿ (MS Dhoni) 1 ರನ್‌ ಗಳಿಸಿದರು.

    ಹೈದರಾಬಾದ್‌ ಪರ ಅಭಿಷೇಕ್‌ ಶರ್ಮಾ, ಭುನೇಶ್ವರ್‌ ಕುಮಾರ್‌, ಟಿ ನಟರಾಜನ್‌, ಪ್ಯಾಟ್‌ ಕಮ್ಮಿನ್ಸ್‌ (Pat Cummins), ಶಹಬಾಜ್‌ ಅಹ್ಮದ್‌ ಹಾಗೂ ಜಯದೇವ್‌ ಉನದ್ಕಟ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

    ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

    ಇಂದೋರ್‌: ಅಫ್ಘಾನಿಸ್ತಾನ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದ ಟೀಂ ಇಂಡಿಯಾ ಆಲ್‌ರೌಂಡರ್‌ ಶಿವಂ ದುಬೆ (Shivam Dube), ತನ್ನ ಯಶಸ್ಸನ್ನು ಎಂ.ಎಸ್‌ ಧೋನಿ (MS Dhoni) ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಅರ್ಪಿಸಿದ್ದಾರೆ.

    ಪಂದ್ಯದ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಶಿವಂ ದುಬೆ, ತಮ್ಮ ವೃತ್ತಿಜೀವನದಲ್ಲಿ ಮೇಲೇಳುವಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ಕೊಡುಗೆ ಅಪಾರ. ನಾಯಕ ಎಂ.ಎಸ್ ಧೋನಿ, ಕೋಚ್ ಸ್ಟೀಫನ್ ಫ್ಲೆಮಿಂಗ್ ಸೇರಿದಂತೆ ಸೂಪರ್ ಕಿಂಗ್ಸ್‌ ತಂಡದ ಹಿರಿಯ ಆಟಗಾರರು ನನ್ನ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ವಿರಾಟ್‌ ಪಾದ ಮುಟ್ಟಿ‌, ಅಪ್ಪಿಕೊಂಡ – ಭದ್ರತೆ ಉಲ್ಲಂಘಿಸಿದ ಕೊಹ್ಲಿ ಅಪ್ಪಟ ಅಭಿಮಾನಿಗೆ ಸಂಕಷ್ಟ

    ನನಗೆ ಸಲ್ಲುತ್ತಿರುವ ಶ್ರೇಯಸ್ಸು, ಸಿಎಸ್‌ಕೆ ತಂಡ ಮತ್ತು ಮಹಿ ಅಣ್ಣನಿಗೆ ಸಲ್ಲಬೇಕು. ನಾನು ನನ್ನ ಆಟ ಆಡುತಿದ್ದೆ, ಆದರೆ ಸಿಎಸ್‌ಕೆ ನನ್ನ ನಿಜವಾದ ಪ್ರತಿಭೆಯನ್ನು ಹೊರತಂದಿದೆ. ತಂಡವು ನನ್ನಲ್ಲಿ ಆ ಆತ್ಮವಿಶ್ವಾಸ ತುಂಬಿದೆ. ನಾನು ಐಪಿಎಲ್‌ನಲ್ಲಿ ರನ್ ಗಳಿಸಲು ಸಾಧ್ಯವಿದೆ ಎಂಬುದನ್ನು ಅವರು ನನಗೆ ಮನವರಿಕೆ ಮಾಡಿದರು. ಅಲ್ಲದೇ ನನ್ನ ಮೇಲೆ ನಂಬಿಕೆ ಇಟ್ಟರು. ಮೈಕ್‌ ಹಸ್ಸಿ ಮತ್ತು ಫ್ಲೆಮಿಂಗ್ ಅವರಂಥ ಹಿರಿಯರು ನನ್ನ ಮೇಲೆ ನಂಬಿಕೆಯಿಟ್ಟಿದ್ದಾರೆ ಎಂದು ಭಾವುಕರಾಗಿದ್ದಾರೆ.

    ನಾನು ಸಿಎಸ್‌ಕೆ ತಂಡದಲ್ಲಿದ್ದಾಗ, ಮಹಿ ಅಣ್ಣ ನನಗೆ ಚೆನ್ನಾಗಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯವಿದೆ ಎಂದು ಹೇಳಿದ್ದರು. ಆದರೆ ಸ್ಮಾರ್ಟ್‌ ಆಗಿ ಆಡಲು ಅವರು ಹೇಳಿದರು. ಹೀಗಾಗಿ ನಾನು ನನ್ನ ಮಿತಿಗಳನ್ನು ನೋಡಿಕೊಂಡು ಇನ್ನೂ ಉತ್ತಮವಾಗಿ ಆಡಲು ಏನು ಮಾಡಬಹುದು ಎಂಬುದರ ಮೇಲೆ ಗಮನ ಹರಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಕ್ಸರ್‌, ಬೌಂಡರಿ ಸುರಿಮಳೆ – ಯಶಸ್ವಿ, ದುಬೆ ಸ್ಫೋಟಕ ಫಿಫ್ಟಿ; ಅಫ್ಘಾನ್‌ ವಿರುದ್ಧ ಭಾರತಕ್ಕೆ ಸರಣಿ ಜಯ

    ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ:
    ಯುವ ಆಲ್‌ರೌಂಡರ್‌ ಶಿವಂ ದುಬೆ ಬ್ಯಾಕ್‌ ಟು ಬ್ಯಾಕ್‌ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಹಿರಿಯ ಆಟಗಾರರ ಗಮನ ಸೆಳೆದಿದ್ದಾರೆ. ಅಫ್ಘಾನ್‌ ವಿರುದ್ಧ ಮೊದಲ ಪಂದ್ಯದಲ್ಲಿ 40 ಎಸೆತಗಳಲ್ಲಿ 2 ಸಿಕ್ಸರ್‌, 5 ಬೌಂಡರಿಗಳೊಂದಿಗೆ 60 ರನ್‌ ಚಚ್ಚಿದ ದುಬೆ, 2ನೇ ಪಂದ್ಯದಲ್ಲಿ 32 ಎಸೆತಗಳಲ್ಲಿ ಸ್ಫೋಟಕ 63 ರನ್‌ (4 ಸಿಕ್ಸರ್‌, 5 ಬೌಂಡರಿ) ಬಾರಿಸಿ ಮಿಂಚಿದ್ದಾರೆ. ಅಲ್ಲದೇ ಎರಡೂ ಪಂದ್ಯಗಳಲ್ಲಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದ್ದಾರೆ. ಜನವರಿ 17ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3ನೇ ಪಂದ್ಯ ನಡೆಯಲಿದ್ದು, ಅಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

    ಭಾರತಕ್ಕೆ ಸರಣಿ ಜಯ: ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಆರಂಭಿಕ ಎರಡು ಪಂದ್ಯಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿರುವ ಭಾರತ, ತವರಿನಲ್ಲೇ ವೈಟ್‌ವಾಶ್‌ ಮಾಡುವ ಗುರಿ ಹೊಂದಿದೆ. ಭಾನುವಾರ ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು.

    ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡವು ಗುಲ್ಬದೀನ್ ನಯೀಬ್ ಅವರ ಅರ್ಧಶತಕದ ನೆರವಿನಿಂದ 20 ಓವರ್​​​ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ್ದ ಭಾರತ ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಸ್ಫೋಟಕ ಅರ್ಧಶತಕಗಳ ನೆರವಿನಿಂದ 15.4 ಓವರ್‌ಗಳಲ್ಲೇ 173 ರನ್‌ ಗಳಿಸಿ ಗೆಲುವು ಸಾಧಿಸಿತು.

  • ಸಿಕ್ಸರ್‌, ಬೌಂಡರಿ ಸುರಿಮಳೆ – ಯಶಸ್ವಿ, ದುಬೆ ಸ್ಫೋಟಕ ಫಿಫ್ಟಿ; ಅಫ್ಘಾನ್‌ ವಿರುದ್ಧ ಭಾರತಕ್ಕೆ ಸರಣಿ ಜಯ

    ಸಿಕ್ಸರ್‌, ಬೌಂಡರಿ ಸುರಿಮಳೆ – ಯಶಸ್ವಿ, ದುಬೆ ಸ್ಫೋಟಕ ಫಿಫ್ಟಿ; ಅಫ್ಘಾನ್‌ ವಿರುದ್ಧ ಭಾರತಕ್ಕೆ ಸರಣಿ ಜಯ

    – ಭಾರತ ತಂಡಕ್ಕೆ ಸರಣಿ ಕೈವಶ

    ಇಂದೋರ್: ಆಫ್ಘಾನಿಸ್ತಾನ ವಿರುದ್ಧದ ಟಿ20 (T20I) ಸರಣಿಯ 2ನೇ ಪಂದ್ಯ ಗೆದ್ದು, ಭಾರತ 2-0 (IND vs AFG) ಮುನ್ನಡೆ ಸಾಧಿಸಿದೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.

    173 ರನ್ ಟಾರ್ಗೆಟ್ ಬೆನ್ನತ್ತಿದ ಭಾರತ 15.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವು ಸಾಧಿಸಿತು. ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅರ್ಧ ಶತಕ ಬಾರಿಸಿ ಗೆಲುವಿನ ರೂವಾರಿಯಾದರು. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್

    34 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ ಜೈಸ್ವಾಲ್ 68 ರನ್ ಬಾರಿಸಿ ಔಟಾದರು. 32 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 63 ರನ್ ಬಾರಿಸಿ ಅಜೇಯರಾಗಿ ಉಳಿದರು. ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲೂ ಶೂನ್ಯ ಸಂಪಾದಿಸಿದರು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 29 ರನ್ ಗಳಿಸಿದರು.

    ಆಫ್ಘನ್ ತಂಡದ ಪರವಾಗಿ ಕರೀಂ ಜನತ್ 2 ವಿಕೆಟ್ ಪಡೆದರೆ, ಫಝಲ್ ಹಖ್ ಫರೂಖಿ ಹಾಗೂ ನವೀನ್ ಉಲ್ ಹಖ್ ತಲಾ 1 ವಿಕೆಟ್ ಪಡೆದರು. ಇದನ್ನೂ ಓದಿ: ಅಂಧ ಮಹಿಳೆಯರ ಕಣ್ಣಲ್ಲಿ ಗೆಲುವಿನ ಹೊಳಪು – ನ್ಯಾಷನಲ್‌ T20 ಕ್ರಿಕೆಟ್ ಟೂರ್ನಿಯಲ್ಲಿ ಒಡಿಶಾ ಚಾಂಪಿಯನ್

    ಟಾಸ್ ಸೋತು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಆಫ್ಘನ್ ತಂಡದ ಪರವಾಗಿ ಗುಲಬ್ದೀನ್ ನಯೀಬ್ 35 ಬಾಲ್‌ನಲ್ಲಿ 57 ರನ್ ಬಾರಿಸಿದರು. ಟೀಂ ಇಂಡಿಯಾ ಪರವಾಗಿ ಆರ್ಷದೀಪ್ ಸಿಂಗ್ ಮೂರು ವಿಕೆಟ್ ಉರುಳಿಸಿದರು.

    ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳಿಂದ ಗೆದ್ದಿತ್ತು. ಸರಣಿಯ ಕೊನೆಯ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ನಡೆಯಲಿದೆ. ಇದನ್ನೂ ಓದಿ: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 – ಭಾರತಕ್ಕೆ ಗೆಲುವು!

  • ರಂಗೇರಿಸಿದ ರಹಾನೆ, ಧೂಳೆಬ್ಬಿಸಿದ ದುಬೆ – ಚೆನ್ನೈ ಸೂಪರ್‌ ಕಿಂಗ್ಸ್‌ಗೆ 49 ರನ್‌ಗಳ ಭರ್ಜರಿ ಜಯ

    ರಂಗೇರಿಸಿದ ರಹಾನೆ, ಧೂಳೆಬ್ಬಿಸಿದ ದುಬೆ – ಚೆನ್ನೈ ಸೂಪರ್‌ ಕಿಂಗ್ಸ್‌ಗೆ 49 ರನ್‌ಗಳ ಭರ್ಜರಿ ಜಯ

    – ರನ್‌ ಹೊಳೆಯಲ್ಲಿ ತೇಲಾಡಿದ ಕಿಂಗ್ಸ್‌

    ಕೋಲ್ಕತ್ತಾ: ಅಜಿಂಕ್ಯಾ ರಹಾನೆ (Ajinkya Rahane), ಶಿವಂ ದುಬೆ (Shivam Dube), ಡಿವೋನ್‌ ಕಾನ್ವೆ (Devon Conway) ಭರ್ಜರಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ದಾಳಿ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 49 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು 20 ಓವರ್‌ಗಳಲ್ಲಿ ಭರ್ಜರಿ 235 ರನ್‌ ಸಿಡಿಸಿತ್ತು. 236 ರನ್‌ಗಳ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 186 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡಿತ್ತು. ನಾರಾಯಣ್‌ ಜಗದೀಶನ್‌ 1 ರನ್‌ ಗಳಿಸಿದರೆ, ಸುನೀಲ್‌ ನರೇನ್‌ ಶೂನ್ಯ ಸುತ್ತಿದರು. ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ವೆಂಕಟೇಶ್‌ ಅಯ್ಯರ್‌ (Venkatesh Iyer) ಕೇವಲ 20 ರನ್‌, ನಾಯಕ ನಿತೀಶ್‌ ರಾಣಾ 27 ರನ್‌ ಗಳಿಸಿ ವಿಕೆಟ್‌ ಕೈಚೆಲ್ಲಿದರು. ಇದರಿಂದ ತಂಡಕ್ಕೆ ಸೋಲು ಖಚಿತವಾಗಿತ್ತು. ಇದನ್ನೂ ಓದಿ: ಮ್ಯಾಕ್ಸಿ, ಡುಪ್ಲೆಸಿಸ್‌ ಭರ್ಜರಿ ಫಿಫ್ಟಿ; ಬೆಂಗ್ಳೂರಿನಲ್ಲಿ RCB ʻಹಸಿರು ಕ್ರಾಂತಿʼ- ರಾಯಲ್ಸ್‌ ವಿರುದ್ಧ 7 ರನ್‌ ರೋಚಕ ಜಯ

    ಮಧ್ಯಮ ಕ್ರಮಾಂಕದಲ್ಲಿ ಒಂದಾದ ಜೇಸನ್‌ ರಾಯ್‌ ಹಾಗೂ ರಿಂಕು ಸಿಂಗ್‌ ಜೋಡಿ 37 ಎಸೆತಗಳಲ್ಲಿ 65 ರನ್‌ ಸಿಡಿಸಿತ್ತು. ಇವರಿಬ್ಬರ ಸ್ಫೋಟಕ ಬ್ಯಾಟಿಂಗ್‌ನಿಂದ ತಂಡ ಚೇತರಿಕೆ ಕಂಡಿತ್ತು. ಆದರೆ ಜೇಸನ್‌ ರಾಯ್‌ (Jason Roy) ಔಟಾಗುತ್ತಿದ್ದಂತೆ ರನ್‌ ವೇಗವೂ ಕಡಿಮೆಯಾಯಿತು. ರಿಂಕು ಸಿಂಗ್‌ ಏಕಾಂಗಿ ಹೋರಾಟ ನಡೆಸಬೇಕಾಯಿತು. ಜೇಸನ್‌ ರಾಯ್‌ 26 ಎಸೆತಗಳಲ್ಲಿ 61 ರನ್‌ ಗಳಿಸಿದರೆ, ಕೊನೆಯವರೆಗೂ ಹೋರಾಡಿದ ರಿಂಕು ಸಿಂಗ್‌ (Rinku Singh) 33 ಎಸೆತಗಳಲ್ಲಿ 53 ರನ್‌ (3 ಬೌಂಡರಿ, 4 ಸಿಕ್ಸರ್)‌ ಗಳಿಸಿ ಅಜೇಯರಾಗುಳಿದರು. ಆ್ಯಂಡ್ರೆ ರಸ್ಸೆಲ್‌ 9 ರನ್‌, ಡೇವಿಡ್‌ ವೈಸ್‌ 1 ರನ್‌, ಉಮೇಶ್‌ ಯಾದವ್‌ 4 ರನ್‌ ಗಳಿಸಿದರು.

    ಚೆನ್ನೈ ಸೂಪರ್‌ ಕಿಂಗ್ಸ್‌ ಪರ ತುಶಾರ್‌ ದೇಶ್‌ಪಾಂಡೆ ಹಾಗೂ ಮಹೀಶ್‌ ತೀಕ್ಷಣ ತಲಾ 2 ವಿಕೆಟ್‌ ಕಿತ್ತರೆ, ಆಕಾಶ್‌ ಸಿಂಗ್‌, ಮೊಯಿನ್‌ ಅಲಿ, ರವೀಂದ್ರ ಜಡೇಜಾ ಹಾಗೂ ಮಥೀಶ ಪತಿರಾಣಾ ತಲಾ ಒಂದೊಂದು ವಿಕೆಟ್‌ ಗಳಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ʻಕಾಂತಾರʼ ಸಾಂಗ್‌ – RCB ಗೆಲುವಿಗೆ ದೈವ ಕಾರಣ ಅಂದ್ರು ಫ್ಯಾನ್ಸ್‌

    ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಅಜಿಂಕ್ಯಾ ರಹಾನೆ, ಶಿವಂ ದುಬೆ, ಡಿವೋನ್‌ ಕಾನ್ವೆ ಅವರ ಅಮೋಘ ಪ್ರದರ್ಶನದಂದಾಗಿ ದಾಖಲೆಯ ಮೊತ್ತ ಪೇರಿಸಿತು. ಚೆನ್ನೈ ತಂಡದ ಅಗ್ರ ಕ್ರಮಾಂಕದ ಎಲ್ಲಾ ಆಟಗಾರರೂ ಅಬ್ಬರದ ಪ್ರದರ್ಶನ ನೀಡಿದರು. ಅದರಲ್ಲೂ ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲರ್‌ಗಳನ್ನು ಧೂಳಿಪಟ ಮಾಡಿದರು. ಈ ಜೋಡಿ ಕೇವಲ 32 ಎಸೆತಗಳಲ್ಲಿ 85 ರನ್‌ಗಳ ಜೊತೆಯಾಟ ನೀಡುವ ಮೂಲಕ ಸಿಎಸ್‌ಕೆ ತಂಡ ಬೃಹತ್ ಮೊತ್ತ ಗಳಿಸಲು ಕಾರಣವಾದರು. ಇದಕ್ಕೂ ಮುನ್ನ ಆರಂಭಿಕರಾದ ಡಿವೋನ್‌ ಕಾನ್ವೆ ಹಾಗೂ ಋತುರಾಜ್‌ ಗಾಯಕ್ವಾಡ್‌ 45 ಎಸೆತಗಳಲ್ಲಿ 73 ರನ್‌ ಸಿಡಿಸಿದ್ದರು.

    ಋತುರಾಜ್ 20 ಎಸೆತಗಳಲ್ಲಿ 35 ರನ್‌ಗಳಿಸಿ ಔಟಾದರು. ನಂತರ ಅರ್ಧ ಶತಕ ಸಿಡಿಸಿದ ಕಾನ್ವೆ 40 ಎಸೆತಗಳಲ್ಲಿ 56 ರನ್‌ (4 ಬೌಂಡರಿ, 3 ಸಿಕ್ಸರ್‌) ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಜೊತೆಯಾಗಿದ್ದು ರಹಾನೆ ಹಾಗೂ ದುಬೆ ಜೋಡಿ. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲೇ 50 ರನ್‌ (5 ಸಿಕ್ಸರ್‌, 2 ಬೌಂಡರಿ) ಗಳಿಸಿ ಚಚ್ಚಿದರು. ಆದರೆ ಅಜಿಂಕ್ಯಾ ರಹಾನೆ ಕೊನೆಯ ವರೆಗೂ ವಿಕೆಟ್ ಕಳೆದುಕೊಳ್ಳದೇ ಕೆಕೆಆರ್‌ ಬೌಲರ್‌ಗಳನ್ನ ಚೆಂಡಾಡಿದರು. ಕೇವಲ 29 ಎಸೆತಗಳಲ್ಲಿ ಅವರು 71 ರನ್‌ (5 ಸಿಕ್ಸರ್‌, 6 ಬೌಂಡರಿ) ಬಾರಿಸಿ ಅಜೇಯರಾಗುಳಿದರು.

    ಕೊನೆಯ ಕ್ಷಣದಲ್ಲಿ ರವೀಂದ್ರ ಜಡೇಜಾ 8 ಎಸೆತಗಳಲ್ಲಿ ಎದುರಿಸಿ 18 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಎಂ.ಎಸ್ ಧೋನಿ 2 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಸಿಎಸ್‌ಕೆ ಈ ಪಂದ್ಯದಲ್ಲಿ 4 ವಿಕೆಟ್ ಕಳೆದುಕೊಂಡು 235 ರನ್‌ಗಳಿಸಿತು. ಇದು ಈ ವರ್ಷದ ಐಪಿಎಲ್‌ನಲ್ಲಿ ಬೃಹತ್‌ ಮೊತ್ತ ಎಂಬ ದಾಖಲೆ ಸಹ ಬರೆಯಿತು.

    ಕೆಕೆಆರ್‌ ಪರ ಕುಲ್ವಂತ್ ಖೇಜ್ರೋಲಿಯಾ 2 ವಿಕೆಟ್‌ ಕಿತ್ತರೆ, ವರುಣ್‌ ಚಕ್ರವರ್ತಿ ಹಾಗೂ ಸುಯಶ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

  • ಕೆಟ್ಟ ದಾಖಲೆಗೆ ಗುರಿಯಾದ ಶಿವಂ ದುಬೆ

    ಕೆಟ್ಟ ದಾಖಲೆಗೆ ಗುರಿಯಾದ ಶಿವಂ ದುಬೆ

    ಮೌಂಟ್ ಮಾಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಟೀಂ ಇಂಡಿಯಾ ಕ್ಲೀನ್‍ಸ್ವಿಪ್ ಮೂಲಕ ತನ್ನ ಮುಡಿಗೇರಿಸಿಕೊಂಡಿದೆ. ಆದರೆ ಮೌಂಟ್ ಮಾಂಗನುಯಿಯಲ್ಲಿ ಇಂದು ನಡೆದ ಕೊನೆಯ ಪಂದ್ಯದಲ್ಲಿ ಭಾರತ ತಂಡದ ಆಲ್‍ರೌಂಡರ್ ಶಿವಂ ದುಬೆ ಕೆಟ್ಟ ದಾಖಲೆಗೆ ಗುರಿಯಾಗಿದ್ದಾರೆ.

    ನ್ಯೂಜಿಲೆಂಡ್ ಇನ್ನಿಂಗ್ಸ್ ನ 10ನೇ ಓವರಿನಲ್ಲಿ ಬೌಲಿಂಗ್ ಮಾಡಿದ ಶಿವಂ ದುಬೆ ಕ್ರಮವಾಗಿ 6, 6, 4, 1, ನೋಬಾಲ್ + 4, 6 ಹಾಗೂ 6 ಸೇರಿ ಒಟ್ಟು 34 ರನ್ ನೀಡಿದರು. ಈ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ನೀಡಿದ ವಿಶ್ವದ ಬೌಲರ್‌ಗಳ ಪಟ್ಟಿಯಲ್ಲಿ ಶಿವಂ ದುಬೆ ಎರಡನೇ ಸ್ಥಾನ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಭಾರತದ ಪಟ್ಟಿಯಲ್ಲಿ ಶಿವಂ ದುಬೆ ಅಗ್ರ ಸ್ಥಾನದಲ್ಲಿದ್ದರೆ, ಸ್ಟುವರ್ಟ್ ಬಿನ್ನಿ ನಂತರ ಸ್ಥಾನದಲ್ಲಿದ್ದಾರೆ.  ಇದನ್ನೂ ಓದಿ:  10 ರನ್ ಅಂತರದಲ್ಲಿ 4 ವಿಕೆಟ್ ಪತನ- ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

    ಶಿವಂಗೆ ಮೊದಲು ಸ್ಟುವರ್ಟ್ ಬಿನ್ನಿ 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರಿನಲ್ಲಿ 32 ರನ್ ನೀಡಿದ್ದರು. ಒಂದೇ ಓವರಿನಲ್ಲಿ ಅತಿ ಹೆಚ್ಚು ರನ್ ನೀಡಿದ ವಿಶ್ವದ ಬೌಲರ್‍ಗಳ ಪಟ್ಟಿಯಲ್ಲಿ ಇಂಗ್ಲೆಂಡ್‍ನ ಸ್ಟುವರ್ಟ್ ಬ್ರಾಡ್ ಅಗ್ರ ಸ್ಥಾನದಲ್ಲಿದ್ದಾರೆ. ಅವರು 2007ರಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ 36 ರನ್ ನೀಡಿದ್ದರು. ಇದನ್ನೂ ಓದಿ: ಫ್ಲಿಂಟಾಫ್ ಕಿರಿಕ್‍ಗೆ ಚಿಮ್ಮಿತು 6 ಸಿಕ್ಸ್ – ಸಿಕ್ಸರ್ ಸುರಿಮಳೆಗೈದ ಯುವಿ

    ಎರಡನೇ ಸ್ಥಾನದಲ್ಲಿ ಶಿವಂ ದುಬೆ ಇದ್ದಾರೆ. ಮೂರನೇ ಸ್ಥಾನದಲ್ಲಿ ಅಫ್ಘಾನಿಸ್ತಾನದ ಎಜತುಲ್ಲಾ ದೌಲತ್ ಜೈ ಇಂಗ್ಲೆಂಡ್ ವಿರುದ್ಧ 2012ರಲ್ಲಿ ನಡೆದ ಪಂದ್ಯದಲ್ಲಿ ಒಂದೇ ಓವರಿನಲ್ಲಿ 32 ರನ್ ನೀಡಿದ್ದರು. ದಕ್ಷಿಣ ಆಫ್ರಿಕಾದ ವೇಯ್ನ್ ಪೆರ್ನೆಲ್ ಇಂಗ್ಲೆಂಡ್ ವಿರುದ್ಧ 2012ರಲ್ಲಿ 32ರನ್, ಭಾರತದ ಸ್ಟುವರ್ಟ್ ಬಿನ್ನಿ ವೆಸ್ಟ್ ಇಂಡೀಸ್ ವಿರುದ್ಧ 2016ರಲ್ಲಿ 32 ರನ್ ಹಾಗೂ ಮ್ಯಾಕ್ಸ್ ಒ’ಡೌಡ್ ಜಿಂಬಾಬ್ವೆ ಸ್ಕಾಟ್ಲೆಂಡ್ ವಿರುದ್ಧ 2019ರಲ್ಲಿ 32 ರನ್ ನೀಡಿದ್ದರು. ಇದನ್ನೂ ಓದಿ: ಕೀಪಿಂಗ್ ಆಯ್ತು, ಈಗ ಟೀಂ ಇಂಡಿಯಾ ಕ್ಯಾಪ್ಟನ್ ಜವಾಬ್ದಾರಿ ಹೊತ್ತ ಕನ್ನಡಿಗ ರಾಹುಲ್