Tag: Shivanagouda Naik

  • ರಾಯಚೂರು ಏಮ್ಸ್ ಹೋರಾಟಗಾರರಿಂದ ಶಾಸಕನ ಮನೆಗೆ ಮುತ್ತಿಗೆ

    ರಾಯಚೂರು ಏಮ್ಸ್ ಹೋರಾಟಗಾರರಿಂದ ಶಾಸಕನ ಮನೆಗೆ ಮುತ್ತಿಗೆ

    ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ (AIIMS Hospital) ಒತ್ತಾಯಿಸಿ ನಡೆದಿರುವ ಹೋರಾಟ 150 ದಿನಗಳನ್ನು ದಾಟಿದ್ದರೂ, ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ದೇವದುರ್ಗದ ಅರಕೇರಾದಲ್ಲಿನ ಶಾಸಕ ಶಿವನಗೌಡ ನಾಯಕ್ (Shivanagouda Naik) ನಿವಾಸಕ್ಕೆ ಹೋರಾಟಗಾರರು ಮುತ್ತಿಗೆ ಹಾಕಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿದರು.

    ರಾಯಚೂರಿನಿಂದ ಅರಕೇರಾವರೆಗೆ 51 ಕಿ.ಮೀ ಪಾದಯಾತ್ರೆ ಮೂಲಕ ಬಂದ ಹೋರಾಟಗಾರರು ವಚನ ಭ್ರಷ್ಟರಾದ ಶಾಸಕ ಶಿವನಗೌಡ ನಾಯಕ್ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಬೇಕು. ಏಮ್ಸ್ ಸ್ಥಾಪನೆ ಕುರಿತು ಸರ್ಕಾರದಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆ ಶಾಸಕ ಶಿವನಗೌಡ ನಾಯಕ್‌ ಮಾತನಾಡಿ, ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಒಂದು ಲಕ್ಷ ಕೋಟಿ ರೂ. ಅನುದಾನದ ಬೇಕಾಗುತ್ತದೆ. ರಾಯಚೂರಿಗೆ ಆ ರೀತಿಯ ಸಂಸ್ಥೆ ಬಂದರೆ ನನಗೂ ಖುಷಿಯಾಗುತ್ತದೆ, ಈ ಹಿನ್ನೆಲೆಯಲ್ಲಿ ಹೋರಾಟಗಾರರ ಆಕ್ರೋಶಕ್ಕೆ ಮಣಿದು ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದ ಕಾಶ್ಮೀರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ಸ್ಥಗಿತ

    ಅರಕೇರಾ ಗ್ರಾಮ ವಾಸ್ತವ್ಯದಲ್ಲಿದ್ದ ಕಂದಾಯ ಸಚಿವ ಆರ್. ಅಶೋಕ್‌ಗೂ (R Ashok) ಹೋರಾಟಗಾರರ ಪ್ರತಿಭಟನೆ ಬಿಸಿ ತಟ್ಟಿತು. ಸಚಿವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು ಹಿಂದುಳಿದ ಭಾಗಕ್ಕೆ ಅನ್ಯಾಯ ಮಾಡಬೇಡಿ ಅಂತ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಆರ್‌. ಅಶೋಕ್‌ ನಿಮ್ಮ ಹೋರಾಟಕ್ಕೆ ಧ್ವನಿಯಾಗಿ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹಾಸನದಲ್ಲಿ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

    Live Tv
    [brid partner=56869869 player=32851 video=960834 autoplay=true]

  • ಬಸವರಾಜ್ ಬೊಮ್ಮಾಯಿ 12 ವರ್ಷ ಸಿಎಂ ಆಗಿರ್ತಾರೆ: ಶಿವನಗೌಡ ನಾಯಕ್

    ಬಸವರಾಜ್ ಬೊಮ್ಮಾಯಿ 12 ವರ್ಷ ಸಿಎಂ ಆಗಿರ್ತಾರೆ: ಶಿವನಗೌಡ ನಾಯಕ್

    ರಾಯಚೂರು: ಬಸವರಾಜ್ ಬೊಮ್ಮಾಯಿ ಅವರು ಮುಂದಿನ 12 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿ ಈಗ ಸಿಎಂ ಆಗಿದ್ದಾರೆ, 2023ರ ಚುನಾವಣೆಯೂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತದೆ. 125 ಸೀಟ್ ಗಳನ್ನು ಸಹ ನಾವು ಗೆಲ್ಲುತ್ತೇವೆ. ಮತ್ತೆ ಬೊಮ್ಮಾಯಿ ಅವರನ್ನು ಸಿಎಂ ಮಾಡುತ್ತೇವೆ. ಶಾಸಕ ಕೆ.ಶಿವನಗೌಡ ನಾಯಕ್ 2023 ಮತ್ತು 2028ರ ಮುಖ್ಯಮಂತ್ರಿಯೂ ಬೊಮ್ಮಾಯಿ ಅಂತ ಹೇಳಿದ್ದಾರೆ.

    ಇದೇ ವೇಳೆ ರಾಯಚೂರು ಕೊಪ್ಪಳ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬೇರೆ ಜಿಲ್ಲೆಯವರು ಅನ್ನೋ ಬಗ್ಗೆ ಕಾಂಗ್ರೆಸ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಏನಾದರೂ ಬುದ್ಧಿ ಇದೆಯಾ? ಕಾಂಗ್ರೆಸ್‍ನವರಿಗೆ ಜ್ಞಾನವೇ ಇಲ್ಲ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ದೆಹಲಿ ವರಿಷ್ಠರು ಇದ್ದಾರೆ ಅಂತ ನಾನು ಜೀವಂತ ಇದ್ದೀನಿ: ರಮೇಶ್ ಜಾರಕಿಹೊಳಿ

    ರಾಹುಲ್ ಗಾಂಧಿ ಕೇರಳದಲ್ಲಿ ನಿಂತು ಚುನಾವಣೆ ಗೆದ್ದಿದ್ದು ಅದು ಬೇರೆ ರಾಜ್ಯ ಅಲ್ವಾ? ಕಾಂಗ್ರೆಸ್ ನವರು 100 ತಪ್ಪು ಮಾಡಿ ಬೇರೆಯವರಿಗೆ ಬೆಟ್ಟು ಮಾಡಿ ತೋರಿಸುತ್ತಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕೋವಿಡ್ ಬಂತು, ಪ್ರವಾಹ ಬಂತು. ಮಹಾರಾಷ್ಟ್ರದಲ್ಲಿ ಶಿಕ್ಷಕರಿಗೆ ಸಂಬಳ ನೀಡಲು ಆಗಿಲ್ಲ. ಸರ್ಕಾರ ನಡೆಸುವವರಿಗೆ ಹಣಕಾಸಿನ ಸಂಕಷ್ಟದ ಬಗ್ಗೆ ಗೊತ್ತಿದೆ. ವಿರೋಧ ಪಕ್ಷದವರಿಗೆ ಬಾಯಿ ಇದೆ ಅಂತ ಏನೋನೋ ಮಾತನಾಡುತ್ತಿದ್ದಾರೆ. ನಿಜವಾದ ರಾಜಕಾರಣಿಗಳು ವಸ್ತುಸ್ಥಿತಿ ಅವಲೋಕನ ಮಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ವರಿಷ್ಠರ ಸಲಹೆ ಮೇರೆಗೆ ನಿರ್ಧಾರ: ಬೊಮ್ಮಾಯಿ

    ಇನ್ನೂ ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಭವಿಷ್ಯ ನುಡಿದ ಕೆ. ಶಿವನಗೌಡ ನಾಯಕ್ 20 ಕ್ಷೇತ್ರದಲ್ಲಿ ನಾವು ಸ್ಪರ್ಧೆ ಮಾಡಿದ್ದೇವೆ. 17-18 ಸ್ಥಾನದಲ್ಲಿ ನಾವು ಗೆಲ್ಲಬಹುದು. 20ಕ್ಕೆ 20 ಸ್ಥಾನ ಗೆದ್ದರೂ ನಾವು ಅಚ್ಚರಿಪಡುವಂತಿಲ್ಲ. 18ಸ್ಥಾನ ಮಾತ್ರ ನಾವು ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.