Tag: Shivanna

  • ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!

    ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!

    ಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದ ನಟ ಕಮಲ್ ಹಾಸನ್ (Kamal Haasan) ವಿಚಾರದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಶಿವಣ್ಣರನ್ನು (Shivanna) ಪ್ರಶ್ನಿಸಿದ್ದಕ್ಕೆ ಅವರು ಕೈಮುಗಿದಿದ್ದಾರೆ. ಇದನ್ನೂ ಓದಿ:ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್

    ಇಂದು (ಮೇ 31) ‘ಕಣ್ಣಪ್ಪ’ ಚಿತ್ರದ ಪ್ರಚಾರಕ್ಕಾಗಿ ಮೋಹನ್ ಬಾಬು, ವಿಷ್ಣು ಮಂಚು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ಕಾರ್ಯಕ್ರಮಕ್ಕೆ ಶಿವಣ್ಣ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ, ಕಮಲ್ ಹಾಸನ್ ಕಾಂಟ್ರವರ್ಸಿ ಬಗ್ಗೆ ಕೇಳಿದ್ದಕ್ಕೆ ಕೈಮುಗಿದು ನಮಸ್ಕರಿಸುತ್ತಾ ತೆರಳಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿದೆ. ಇದನ್ನೂ ಓದಿ:ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ

    ತಮಿಳು ನಟ ಮಾತಾಡಿರೋದರ ಬಗ್ಗೆ ತಪ್ಪು ಎಂದು ಎಲ್ಲೂ ಶಿವಣ್ಣ ಹೇಳುತ್ತಿಲ್ಲವಲ್ಲ ಎಂದು ಅಭಿಮಾನಿಗಳಲ್ಲಿ ಬೇಸರ ಮೂಡಿದೆ. ಇಷ್ಟೆಲ್ಲಾ ಆದ ಮೇಲೆಯೂ ಶಿವಣ್ಣ ಮೌನವಹಿಸಿರೋದ್ಯಾಕೆ? ಕಮಲ್ ಬಗ್ಗೆ ಕೇಳ್ತಿದ್ದಂತೆ ಕೈಮುಗಿದು ಹೋಗಿದ್ದು ಯಾಕೆ. ಹಾಗಾದ್ರೆ ಕಮಲ್ ಮಾಡಿದ್ದು ಸರಿ ಅಂತನಾ? ತಪ್ಪು ಅಂತನಾ ಎಂದೆಲ್ಲಾ ಪ್ರಶ್ನಿಸುತ್ತಿದ್ದಾರೆ. ಶಿವಣ್ಣ ಉತ್ತರದ ನಿರೀಕ್ಷೆಯಲ್ಲಿದ್ದ ಫ್ಯಾನ್ಸ್‌ಗೆ ನಿರಾಸೆ ಆಗಿದೆ.

    ಇದೆಲ್ಲದರ ನಡುವೆ ಹೇಳಿಕೆ ಬಗ್ಗೆ ನಾನು ಬದ್ಧನಾಗಿದ್ದೇನೆ ಎಂದ ಕಮಲ್‌ಗೆ ಕನ್ನಡಪರ ಸಂಘಟನೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗುತ್ತಿದೆ.

    ನಿನ್ನೆ (ಮೇ 30) ಮತ್ತೆ ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು. ಅಲ್ಲದೇ ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದಿದ್ದರು. ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ.

  • ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ

    ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ

    ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ (Kannappa) ಚಿತ್ರ ಜೂನ್ 27ಕ್ಕೆ ಬಹುಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜಾಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಮೋಹನ್ ಬಾಬು, ವಿಷ್ಣು ಮಂಚು ಬೆಂಗಳೂರಿಗೆ ಆಗಮಿಸಿದ್ದು, ಶಿವಣ್ಣ ಕೂಡ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!

    ಸುದ್ದಿಗೋಷ್ಠಿಯಲ್ಲಿ ಶಿವಣ್ಣ (Shivanna) ಮಾತನಾಡಿ, ‘ಕಣ್ಣಪ್ಪ’ ಚಿತ್ರ ಮಾಡಲು ಧೈರ್ಯ ಬೇಕು. ವಿಷ್ಣು ಮಂಚು ಅವರು ಭಕ್ತಿಯಿಂದ ಚಿತ್ರ ಮಾಡಿದ್ದಾರೆ. ಚಿತ್ರದ ಲುಕ್ ಅದ್ಭುತವಾಗಿ ಮೂಡಿ ಬಂದಿದೆ. ವಿಷ್ಣು ಈ ರೀತಿಯ ಸಿನಿಮಾ ಮಾಡಿದ್ದಕ್ಕೆ ಅವರ ಮೇಲಿನ ಗೌರವ ಹೆಚ್ಚಾಯ್ತು ಎಂದರು.

    ಮೋಹನ್ ಬಾಬು ಈ ತರ ಸಿನಿಮಾ ಒಪ್ಪಿ ಮಾಡಿದ್ದು ಗ್ರೇಟ್. ಜನ ಈ ತರ ಸಿನಿಮಾ ನೋಡಬೇಕು. ಕಾಳಹಸ್ತಿ ಅಂದರೆ ಏನು ತಿಳಿದುಕೊಳ್ಳಬೇಕು. ನ್ಯೂಜಿಲ್ಯಾಂಡ್‌ಗೆ ತೆರಳಿ ಶೂಟಿಂಗ್ ಮಾಡಿದ್ದಾರೆ. ನಿರ್ದೇಶಕರು ಆಸಕ್ತಿಯಿಂದ ಸಿನಿಮಾ ಮಾಡಿದ್ದಾರೆ. 100% ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುತ್ತದೆ ಎಂದಿದ್ದಾರೆ. ಶಿವನ ಲೀಲೆ ಯಾವಾಗಲೂ ಕಾಪಾಡುತ್ತದೆ ಎಂದು ಚಿತ್ರತಂಡಕ್ಕೆ ನಟ ಭರವಸೆ ತುಂಬಿದರು.

     

    View this post on Instagram

     

    A post shared by Vishnu Manchu (@vishnumanchu)

    ನಾನು ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ನಟಿಸಬೇಕಿತ್ತು. ಆದರೆ ಡೇಟ್ ಹೊಂದಾಣಿಕೆ ಆಗದ ಕಾರಣ ನಟಿಸಲು ಆಗಲಿಲ್ಲ. ಸಂಭಾವನೆ ಕೊಡಲಿಲ್ಲ ಅಂದ್ರು ನಿಮ್ಮೊಂದಿಗೆ ನಟಿಸುತ್ತೇನೆ. ನಿಮ್ಮ ಜೊತೆ ನಟಿಸೋದೇ ಒಂದು ಖುಷಿ, ಅದಕ್ಕೆ ಸಂಭಾವನೆ ಬೇಕಿಲ್ಲ. ವಿಲನ್ ಆಗಿ ನಟಿಸಲ್ಲ, ಅದರ ಬದಲು ಒಂದೊಳ್ಳೆಯ ಪಾತ್ರ ಮಾಡೋಣ ಮೋಹನ್ ಅಂಕಲ್ ಎಂದರು ಶಿವಣ್ಣ. ಅವರ ಮಾತಿಗೆ ಮೋಹನ್ ಬಾಬು ಸಮ್ಮತಿ ಸೂಚಿಸಿದರು. ಅಲ್ಲದೇ ಈ ಚಿತ್ರವನ್ನು ಮೊದಲ ದಿನವೇ ನೋಡೋದಾಗಿ ಹೇಳಿದರು.

     

    View this post on Instagram

     

    A post shared by Vishnu Manchu (@vishnumanchu)

    ಈ ವೇಳೆ, ‘ಶಿವ ಮೆಚ್ಚಿದ ಕಣ್ಣಪ್ಪ’ ಚಿತ್ರದಲ್ಲಿ ನಟಿಸಿದ್ದರ ಬಗ್ಗೆ ಶಿವಣ್ಣ ಸ್ಮರಿಸಿ, ಇದರಲ್ಲಿ ನಟಿಸಲು ನನಗೆ ಭಯವಿತ್ತು. ಏಕೆಂದರೆ ಅಪ್ಪಾಜಿ ನಟಿಸಿದ ‘ಬೇಡರ ಕಣ್ಣಪ್ಪ’ ಸೂಪರ್ ಹಿಟ್ ಆಗಿತ್ತು. ಹೀಗಾಗಿ ನಾನು ಆ ಪಾತ್ರದಲ್ಲಿ ನಟಿಸಲ್ಲ ಎಂದಾಗ, ಅಮ್ಮ ಇದು ನನ್ನ ಆಸೆ ಈಡೇರಿಸು ಅಂದಿದ್ರು. ಅದರಂತೆ ಸಿನಿಮಾ ಮಾಡಿದೆ. ಅದು ಸೂಪರ್ ಹಿಟ್ ಆಯ್ತು ಎಂದರು.

     

    View this post on Instagram

     

    A post shared by Vishnu Manchu (@vishnumanchu)

    ಅಂದಹಾಗೆ, ಈ ಸಿನಿಮಾದಲ್ಲಿ ವಿಷ್ಣು ಮಂಚು ಜೊತೆ ಪ್ರಭಾಸ್, ‘ಮಗಧೀರ’ ನಟಿ ಕಾಜಲ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಜೂನ್ 27ಕ್ಕೆ ಚಿತ್ರ ರಿಲೀಸ್ ಆಗಲಿದೆ.

  • ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

    ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

    ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಪೈಶಾಚಿಕ ಕೃತ್ಯಕ್ಕೆ 27 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹೇಯ ಕೃತ್ಯದ ಬಗ್ಗೆ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಖಂಡಿಸಿದ್ದಾರೆ. ಇದನ್ನೂ ಓದಿ:ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

    ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ ಎಂದು ಶಿವಣ್ಣ (Shivarajkumar) ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಆಘಾತ ಮತ್ತು ದುಃಖವಾಗಿದೆ. ಇಂತಹ ಘಟನೆಗಳಿಗೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅವುಗಳನ್ನು ಬಲವಾಗಿ ಖಂಡಿಸಬೇಕು. ಸಂತ್ರಸ್ತರ ಕುಟುಂಬದ ಪರವಾಗಿ ರಾಮ್‌ ಚರಣ್‌ ಬರೆದುಕೊಂಡಿದ್ದಾರೆ.

    ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ರಿಯಾಕ್ಟ್ ಮಾಡಿ, ನನ್ನ ಹೃದಯ ಒಡೆದಿದೆ ಎಂದು ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ.

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಕೇಳಿ ನೋವಾಗಿದೆ. ಅವರ ಕುಟುಂಬಗಳಿಗೆ ಹೃದಯಪೂರ್ವಕ ಪ್ರಾರ್ಥನೆ ಮತ್ತು ಸಂತಾಪಗಳು. ಇದು ಎಂದಿಗೂ ಮರೆಯಲಾಗದ ಘೋರ ದಾಳಿ ಎಂದು ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ (Anushka Sharma) ಪ್ರತಿಕ್ರಿಯೆ ನೀಡಿದ್ದಾರೆ.

    ಓಂ ಶಾಂತಿ, ನನ್ನ ಕಡೆಯಿಂದ ಸಂತಾಪ ಸೂಚಿಸುತ್ತೇನೆ. ಆಘಾತ ಮತ್ತು ಕೋಪ ಬರುತ್ತಿದೆ. ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ನಾವು ಸಣ್ಣ ಪುಟ್ಟ ಜಗಳಗಳನ್ನು ಬಿಟ್ಟು, ಒಗ್ಗೂಡಿ ನಿಜವಾದ ಶತ್ರುಗಳನ್ನು ಅರಿತುಕೊಳ್ಳುವ ಸಮಯ ಎಂದು ರವೀನಾ ಟಂಡನ್ ಬರೆದುಕೊಂಡಿದ್ದಾರೆ.


    ಸಂಜಯ್ ದತ್ (Sanjay Dutt) ಎಕ್ಸ್‌ನಲ್ಲಿ, ಅವರು ನಮ್ಮ ಜನರನ್ನು ರಕ್ತದಲ್ಲಿ ಕೊಂದಿದ್ದಾರೆ. ಇದನ್ನೂ ಕ್ಷಮಿಸಲು ಸಾಧ್ಯವಿಲ್ಲ. ನಾವು ಪ್ರತಿಕಾರ ತೀರಿಸಿಕೊಳ್ಳಬೇಕು. ನಮ್ಮ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರು ಹೈಯ ಕೃತ್ಯ ಮಾಡಿದವರಿಗೆ ಅರ್ಹವಾದದ್ದನ್ನು ನೀಡಬೇಕೆಂದು ನಾನು ವಿನಂತಿಸುತ್ತೇನೆ.

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಾಗರಿಕ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಈ ಹೇಯ ಕೃತ್ಯವು ಸ್ವೀಕಾರಾರ್ಹವಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

  • ರಜನಿಕಾಂತ್‌ ನಟನೆಯ ‘ಜೈಲರ್ 2’ನಲ್ಲಿಯೂ ನಟಿಸಲಿದ್ದಾರೆ ಶಿವಣ್ಣ

    ರಜನಿಕಾಂತ್‌ ನಟನೆಯ ‘ಜೈಲರ್ 2’ನಲ್ಲಿಯೂ ನಟಿಸಲಿದ್ದಾರೆ ಶಿವಣ್ಣ

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ‘ಜೈಲರ್‌ 2’ನಲ್ಲಿ (Jailer 2) ನಟಿಸುತ್ತಾರಾ ಎಂಬ ಸುದ್ದಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಸುದ್ದಿಗೋಷ್ಠಿವೊಂದರಲ್ಲಿ ‘ಜೈಲರ್ 2’ನಲ್ಲಿ ನಟಿಸೋದಾಗಿ ಶಿವಣ್ಣ (Shivanna) ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಶ್ರೀದೇವಿ ಬಯೋಪಿಕ್‌ನಲ್ಲಿ ನಟಿಸಲು ಸಿದ್ಧ ಎಂದ ಪೂಜಾ ಹೆಗ್ಡೆ

    ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ‘ಜೈಲರ್ 2’ನಲ್ಲಿ ನಟಿಸುತ್ತೀರಾ ಎಂದು ಶಿವಣ್ಣಗೆ ವರದಿಗಾರರೊಬ್ಬರು ಕೇಳಿದ್ದಾರೆ. ಅದಕ್ಕೆ ನಟ ಮಾತನಾಡಿ, ನಾನು ‘ಜೈಲರ್ 2’ ಸಿನಿಮಾದ ಭಾಗವಾಗಲಿದ್ದೇನೆ. ಈ ಕುರಿತು ನಿರ್ದೇಶಕ ನೆಲ್ಸನ್ ನನ್ನ ಬಳಿ ಮಾತನಾಡಿದ್ದಾರೆ. ಈಗಾಗಲೇ ಇದರ ಶೂಟಿಂಗ್ ಶುರುವಾಗಿದೆ. ಆದರೆ ನನ್ನ ಭಾಗದ ಶೂಟಿಂಗ್ ಶುರು ಆಗಿಲ್ಲ. ‘ಜೈಲರ್‌’ನಲ್ಲಿ ನಾನು ನಟಿಸಿದ ಪಾತ್ರಕ್ಕೆ ಅಷ್ಟೊಂದು ಮಹತ್ವ ಸಿಗುತ್ತೆ ಎಂದು ನಾನು ಅಂದುಕೊಂಡಿರಲಿಲ್ಲ. ಇದನ್ನೂ ಓದಿ:RCB ಅಂದ್ರೆ ಜೀವ, ನಮ್ಮ ಪ್ರಾಣ: ಶಿವಣ್ಣ ಗುಣಗಾನ

    ನಾನು ಈ ಸಿನಿಮಾ ಮಾಡಲು ರಜನಿಕಾಂತ್ (Rajinikanth) ಅವರೇ ಕಾರಣ. ಅವರು ನನ್ನ ಕುಟುಂಬವಿದ್ದಂತೆ. ಚಿಕ್ಕ ವಯಸ್ಸಿನಿಂದ ಅವರನ್ನು ನೋಡುತ್ತಾ ಬೆಳೆದಿದ್ದೇವೆ. ಜೈಲರ್‌ನಲ್ಲಿ ನಟಿಸಲು ಕೇಳಿದಾಗ ಕಥೆಯನ್ನು ಕೇಳದೇ ಸಿನಿಮಾ ಒಪ್ಪಿಕೊಂಡೆ. ರಜನಿಕಾಂತ್ ಸಿನಿಮಾದಲ್ಲಿ ಒಂದು ಕ್ಷಣ ಕಾಣಿಸಿಕೊಳ್ಳುವ ಪಾತ್ರವಾದರೂ ನಟಿಸಲು ಸಿದ್ಧನಿದ್ದೆ ಎಂದಿದ್ದಾರೆ. ಜೈಲರ್‌ನಲ್ಲಿ ನನ್ನನ್ನು ಅತ್ಯುತ್ತಮವಾಗಿ ತೋರಿಸಿದ ಛಾಯಾಗ್ರಾಹಕರಿಗೆ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್‌ಗೆ ನನ್ನ ಧನ್ಯವಾದಗಳು ಎಂದಿದ್ದಾರೆ.

    ಈ ವೇಳೆ, ‘ಜೈಲರ್ 2’ನಲ್ಲಿ ಬಾಲಯ್ಯ ಅವರು ನಟಿಸುವ ಬಗ್ಗೆ ಶಿವಣ್ಣಗೆ ಕೇಳಲಾಗಿದೆ. ನನಗೆ ಇದರ ಬಗ್ಗೆ ತಿಳಿದಿಲ್ಲ. ಒಂದು ವೇಳೆ ಬಾಲಯ್ಯ ನಟಿಸೋದಾದ್ರೆ, ಅವರೊಂದಿಗೆ ತೆರೆಹಂಚಿಕೊಳ್ಳಲು ಖುಷಿಯಿದೆ ಎಂದಿದ್ದಾರೆ. ಸದ್ಯ ನಟನ ‘ಜೈಲರ್ 2’ ಅಪ್‌ಡೇಟ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • ಕೆಎಲ್‌ ರಾಹುಲ್‌ ಬ್ಯಾಟಿಂಗ್‌ ಅಂದ್ರೆ ತುಂಬಾನೇ ಇಷ್ಟ: ಶಿವಣ್ಣ

    ಕೆಎಲ್‌ ರಾಹುಲ್‌ ಬ್ಯಾಟಿಂಗ್‌ ಅಂದ್ರೆ ತುಂಬಾನೇ ಇಷ್ಟ: ಶಿವಣ್ಣ

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ (Shiva Rajkumar) ಸಿನಿಮಾ ಹೊರತುಪಡಿಸಿ ಕ್ರಿಕೆಟ್ ಮೇಲೆಯೂ ಅಪಾರ ಅಭಿಮಾನವಿದೆ. ಇದೀಗ ಆರ್‌ಸಿಬಿ ಮತ್ತು ಕ್ರಿಕೆಟಿಗ್ ಕೆ.ಎಲ್ ರಾಹುಲ್ ಬಗ್ಗೆ ಮಾತನಾಡಿದ್ದಾರೆ. ಕೆ.ಎಲ್ ರಾಹುಲ್ (K L Rahul) ಬ್ಯಾಟಿಂಗ್ ತುಂಬಾನೇ ಇಷ್ಟ ಎಂದಿದ್ದಾರೆ. ಇದನ್ನೂ ಓದಿ:ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ರವಿತೇಜ ಪುತ್ರಿ

    RCB ಬೆಂಗಳೂರನ್ನು ಪ್ರತಿನಿಧಿಸುತ್ತದೆ. ಆರ್‌ಸಿಬಿ ಅಂದ್ರೆ ಪ್ರೀತಿ ಇದ್ದೆ ಇರುತ್ತದೆ. ಆಟದಲ್ಲಿ ಸೋಲು ಗೆಲುವು ಬರಲ್ಲ. ಆದರೆ ಅಭಿಮಾನ ಅಂತೂ ಹೋಗಲ್ಲ. ಅದು ಯಾವಾಗಲೂ ಇದ್ದೇ ಇರುತ್ತದೆ. ಅದೇ ಆರ್‌ಸಿಬಿ ಪವರ್ ಎಂದಿದ್ದಾರೆ ಶಿವಣ್ಣ. ಇದನ್ನೂ ಓದಿ:RCB ಅಂದ್ರೆ ಜೀವ, ನಮ್ಮ ಪ್ರಾಣ: ಶಿವಣ್ಣ ಗುಣಗಾನ

    ಕೆ.ಎಲ್ ರಾಹುಲ್ ಹೋಂ ಗ್ರೌಂಡ್ ವೈರಲ್ ವಿಡಿಯೋ ಬಗ್ಗೆ ಶಿವಣ್ಣ ಪ್ರತಿಕ್ರಿಯಿಸಿ, ರಾಹುಲ್ ಕರ್ನಾಟಕದವರು. ಅವರು ಎಲ್ಲೇ ಆಡಿದ್ರು, ಕರ್ನಾಟಕದವರು ತಾನೇ ಎಂದಿದ್ದಾರೆ. ನನಗೆ ಅವರ ಬ್ಯಾಟಿಂಗ್ ತುಂಬಾ ಇಷ್ಟ. ಆವರು ಆಡಿದಾಗಲೆಲ್ಲಾ ಔಟೇ ಆಗಬಾರದು ಎಂದುಕೊಳ್ಳುತ್ತಿರುತ್ತೇನೆ. ವಿರಾಟ್ ಕೊಹ್ಲಿ ಚೆನ್ನಾಗಿ ಆಡ್ತಾರೆ. ಹಾಗೆಯೇ ರಾಹುಲ್ ಬ್ಯಾಟಿಂಗ್ ಸ್ಟೈಲ್ ನೋಡಿದಾಗ ಹೆಮ್ಮೆ ಎಂದೆನಿಸುತ್ತದೆ. ಯಾರ್ ಗೆದ್ರೂ ಕೂಡ ಕಪ್ ಇಂಡಿಯಾದಲ್ಲೇ ಇರುತ್ತದೆ ಎಂದು ಶಿವಣ್ಣ ಹೇಳಿದ್ದಾರೆ.

    ಅಂದಹಾಗೆ, ಏ.10ರಂದು ನಡೆದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಿತ್ತು. ಗೆಲುವಿನ ಸಂಭ್ರಮದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಸ್ಪೆಷಲ್ ಸಿಗ್ನೇಚರ್ ಸ್ಟೈಲ್ ಮಾಡಿದ್ದರು. ಬಳಿಕ ‘ಕಾಂತಾರ’ ನನ್ನ ಫೆವರಿಟ್ ಸಿನಿಮಾ. ಸಿನಿಮಾದಲ್ಲಿರುವಂತೆ ಮಾಡಿದೆ ಎಂದು ಅವರು ಹೇಳಿಕೊಂಡಿದ್ದರು.

    ಹೊಸ ಸ್ಟೈಲ್ ಹಿಂದಿನ ಕಾರಣವನ್ನು ಬಿಚ್ಚಿಟ್ಟಿರುವ ಕೆಎಲ್ ರಾಹುಲ್, ಇದು ನನಗೆ ವಿಶೇಷವಾದ ಜಾಗ, ಕಾಂತಾರ ಸಿನಿಮಾ ನೆನಪಿಸಿಕೊಂಡೆ. ನಾನು ಸಿನಿಮಾ ನೋಡಿದ್ದೇನೆ. ಸಿನಿಮಾದ ದೃಶ್ಯವೊಂದು ನನ್ನೊಳಗೆ ಹಾಗೆಯೇ ಇದೆ. ಪಂದ್ಯದಲ್ಲಿ ಗೆದ್ದಾಗ ನನಗೆ ಆ ಸಿನಿಮಾದ ದೃಶ್ಯ ನೆನಪಾಯಿತು. ಹಾಗಾಗಿ ನಾನು ಅದೇ ರೀತಿ ಮಾಡಿದೆ. ಅದು ನನ್ನ ನೆಚ್ಚಿನ ಸಿನಿಮಾ. ಈ ಕ್ರೀಡಾಂಗಣ, ಈ ನೆಲ ಇದೆಲ್ಲ ನಾನು ಹುಟ್ಟಿ ಬೆಳೆದ ಜಾಗ. ಇದೆಲ್ಲ ನನ್ನದು ಎಂದಿದ್ದರು.

  • ಸಂಬಂಧಗಳು ಇಂದು ಗಟ್ಟಿಯಾಗಿ ಉಳಿದಿದೆ ಅಂದ್ರೆ ಅಪ್ಪಾಜಿ ಸಿನಿಮಾಗಳೇ ಕಾರಣ: ಶಿವಣ್ಣ

    ಸಂಬಂಧಗಳು ಇಂದು ಗಟ್ಟಿಯಾಗಿ ಉಳಿದಿದೆ ಅಂದ್ರೆ ಅಪ್ಪಾಜಿ ಸಿನಿಮಾಗಳೇ ಕಾರಣ: ಶಿವಣ್ಣ

    ಡಾ.ರಾಜ್‌ಕುಮಾರ್ 19ನೇ ಪುಣ್ಯಸ್ಮರಣೆ ಹಿನ್ನೆಲೆ ಇಂದು (ಏ.12) ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸ್ಮಾರಕಕ್ಕೆ ಅಭಿಮಾನಿಗಳು, ಕುಟುಂಬಸ್ಥರು ಭೇಟಿ ನೀಡಿದ್ದಾರೆ. ರಾಘಣ್ಣ, ಶಿವಣ್ಣ, ಅಶ್ವಿನಿ ಪುನೀತ್‌ರಾಜ್‌ಕುಮಾರ್ ಆಗಮಿಸಿ ಅಪ್ಪಾಜಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ಅಣ್ಣಾವ್ರರನ್ನು ನೆನೆದು ಶಿವಣ್ಣ (Shivarajkumar) ಭಾವುಕರಾಗಿದ್ದಾರೆ. ಇದನ್ನೂ ಓದಿ:ಇಸ್ರೇಲ್‌ನಿಂದ ರಕ್ಷಿಸಿದ್ದಕ್ಕೆ ಪಿಎಂಗೆ ಥ್ಯಾಂಕ್ಯೂ ಎಂದ ನಟಿ ನುಶ್ರತ್ ಭರೂಚಾ

    ಅಣ್ಣಾವ್ರ (Rajkumar) ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಶಿವಣ್ಣ ಮಾತನಾಡಿ, ಒಂದು ಬಾರಿ ಹಚ್ಚೆ ಹಾಕಿಸಿಕೊಂಡ್ರೆ ಹೇಗೆ ಹೋಗೋದಿಲ್ಲೋ ಹಾಗೇ ಅಭಿಮಾನಿಗಳಿಗೆ ಅವರ ಮೇಲಿನ ಅಭಿಮಾನ ಹೋಗಲ್ಲ. ಅಪ್ಪಾಜಿ ಮಾಡಿರೋ ಕಲಾ ಸೇವೆಯಿಂದ ಇವತ್ತಿಗೂ ಅಭಿಮಾನ ಹಾಗೆ ಉಳಿಸಿಕೊಂಡಿದೆ. ಇದನ್ನೂ ಓದಿ:RCB ಅಂದ್ರೆ ಜೀವ, ನಮ್ಮ ಪ್ರಾಣ: ಶಿವಣ್ಣ ಗುಣಗಾನ

    ರಾಜಕೀಯವಾಗಿ ಯೋಚಿಸದೇ ಗೋಕಾಕ್ ಚಳುವಳಿಯಲ್ಲಿ ಅಪ್ಪಾಜಿ ಭಾಗವಹಿಸಿದ್ದರು. ಸದಾ ನೆಲ, ಜಲ, ಭಾಷೆ ಅಂತಾ ಬಂದಾಗ ಅವರು ಮುಂದೆ ಇರೋರು. ಅದಕ್ಕೂ ದೇವರ ಕೃಪೆ ಬೇಕು. ಇಂತಹ ತಂದೆಗೆ ನಾವು ಮಕ್ಕಳಾಗಿರೋದು ಹೆಮ್ಮೆ ಅನಿಸುತ್ತದೆ. ಈ ಚಿಕ್ಕ ಮಕ್ಕಳನ್ನ ಕೇಳಿದ್ರು ರಾಜ್‌ಕುಮಾರ್ ಯಾರು ಅಂತಾ ಹೇಳುತ್ತಾರೆ. ಅಪ್ಪಾಜಿ ಪಾಠದ ಹಾಗೆ ಅಭಿಮಾನ ಜಾಸ್ತಿ ಆಗುತ್ತೆ ಹೊರತು ಎಂದಿಗೂ ಕಮ್ಮಿಯಾಗಲ್ಲ. ಇಂದು ಸಂಬಂಧಗಳು ಗಟ್ಟಿಯಾಗಿ ಉಳಿದಿದೆ ಅಂದರೆ ಅಪ್ಪಾಜಿ ಸಿನಿಮಾಗಳೇ ಕಾರಣ ಎಂದಿದ್ದಾರೆ.

    ಈ ವೇಳೆ, ಆರೋಗ್ಯ ಈಗ ಚೆನ್ನಾಗಿದೆ. ಡ್ಯಾನ್ಸ್ ಶುರು ಮಾಡಿದ್ದೀನಿ. ಐದಾರು ತಿಂಗಳು ವಿಶ್ರಾಂತಿ ಪಡೆದಿದ್ದೇನೆ. ಆದರೆ ನಾನು ಬೇಗನೇ ರಿಕವರಿ ಆಗಿದ್ದೇನೆ. ರಾಮ್ ಚರಣ್ ನಟನೆಯ ಸಿನಿಮಾದ ಶೂಟಿಂಗ್‌ನಲ್ಲಿ ಎರಡು ದಿನ ಭಾಗವಹಿಸಿ ಬಂದಿದ್ದೇನೆ. ನನ್ನ 131ನೇ ಸಿನಿಮಾ ಪವನ್ ಒಡೆಯರ್ ಜೊತೆ ಶುರು ಮಾಡಬೇಕು ಎಂದು ಆರೋಗ್ಯ ಹಾಗೂ ಸಿನಿಮಾ ಬಗ್ಗೆ ಶಿವಣ್ಣ ಮಾಹಿತಿ ಹಂಚಿಕೊಂಡಿದ್ದಾರೆ.

  • ರಾಮ್ ಚರಣ್ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ ಶಿವಣ್ಣ

    ರಾಮ್ ಚರಣ್ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ ಶಿವಣ್ಣ

    ಗ್ಲೋಬಲ್ ಸ್ಟಾರ್ ರಾಮ್ ಚರಣ್‌ಗೆ (Ram Charan) ಇಂದು (ಮಾ.27) ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ರಾಮ್ ಚರಣ್‌ಗೆ ಶಿವಣ್ಣ ವಿಶೇಷವಾಗಿ ಹುಟ್ಟುಹಬ್ಬಕ್ಕೆ (Birthday) ಶುಭಕೋರಿದ್ದಾರೆ. ಇದನ್ನೂ ಓದಿ:ಸಂಕ್ರಾಂತಿಗೆ ಸ್ಟಾರ್ ವಾರ್- ವಿಜಯ್ ನಟನೆಯ ‘ಜನ ನಾಯಗನ್’ ಎದುರು ಅಬ್ಬರಿಸಲಿದೆ ಜ್ಯೂ.ಎನ್‌ಟಿಆರ್ ಸಿನಿಮಾ

    ‘ರಾಮ್ ಚರಣ್ ಯುವ ಶಕ್ತಿ’ ಎಂಬ ಬೆಂಗಳೂರು ಫ್ಯಾನ್ಸ್ ಟೀಮ್‌ವೊಂದು ಶಿವಣ್ಣ ನಿವಾಸಕ್ಕೆ ಭೇಟಿ ನೀಡಿದೆ. ರಾಮ್ ಚರಣ್ ಹುಟ್ಟುಹಬ್ಬದ ಪ್ರಯುಕ್ತ ಶಿವಣ್ಣ ಕೈಯಲ್ಲಿ ಕೇಕ್ ಕಟ್ ಮಾಡಿಸಿದ್ದಾರೆ. ಅದಷ್ಟೇ ಅಲ್ಲ, ನಟನ ಹುಟ್ಟುಹಬ್ಬಕ್ಕೆ ಬ್ಲಡ್ ಕ್ಯಾಂಪ್ ಕೂಡ ಮಾಡುತ್ತಿದ್ದಾರೆ.

    ಈ ವೇಳೆ ಅಭಿಮಾನಿಗಳ ಜೊತೆ ರಾಮ್ ಚರಣ್ ಜೊತೆಗಿನ ಬಾಂಧವ್ಯದ ಬಗ್ಗೆ ಶಿವಣ್ಣ ಮಾತನಾಡಿ, ರಾಮ್ ಚರಣ್ ಸರ್‌ಗೆ ದೇವರು ಆರೋಗ್ಯ ಕೊಟ್ಟು ಕಾಪಾಡಲಿ. ಫಸ್ಟ್ ಟೈಮ್ ಅವರೊಂದಿಗೆ ‘ಪೆಡ್ಡಿ’ ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂಬುದು ಖುಷಿಯಾದ ವಿಷಯ. ನನಗೆ ಅವರು ತುಂಬಾ ಇಷ್ಟವಾದ ವ್ಯಕ್ತಿ. ಅವರಿಗೆ ಆ್ಯಕ್ಟಿಂಗ್ ಅನ್ನು ಸರಾಗವಾಗಿ ಮಾಡುತ್ತಾರೆ. ತಂದೆಯ ಗುಣವೇ ಅವರಿಗೆ ಬಂದಿದೆ. ಅವರ ಕುಟುಂಬ ಜೊತೆಗಿನ ನಮ್ಮ ಒಡನಾಟ ಎಂದಿಗೂ ನಾನು ಮರೆಯೋದಿಲ್ಲ. ರಾಮ್ ಚರಣ್ ಸರ್ ದೇವರು ನಿಮಗೆ ಒಳ್ಳೆಯದು ಮಾಡಲಿ, ವಿ ಲವ್ ಯೂ ಎಂದು ಶಿವಣ್ಣ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

    ಇನ್ನೂ ರಾಮ್ ಚರಣ್ ಹುಟ್ಟುಹಬ್ಬದ ಹಿನ್ನೆಲೆ ‘ಆರ್‌ಸಿ 16’ ಚಿತ್ರದ ಟೈಟಲ್ ರಿವೀಲ್ ಆಗಿದೆ. ‘ಪೆಡ್ಡಿ’ (Peddi) ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ. ರಾಮ್‌ಗೆ ನಾಯಕಿಯಾಗಿ ಜಾನ್ವಿ ಕಪೂರ್ (Janhvi Kapoor) ನಟಿಸುತ್ತಿದ್ದಾರೆ. ಶಿವಣ್ಣ ಕೂಡ ಪವರ್‌ಫುಲ್ ರೋಲ್ ಮಾಡುವ ಮೂಲಕ ಸಾಥ್ ನೀಡುತ್ತಿದ್ದಾರೆ. ಈ ಚಿತ್ರವನ್ನು ‘ಉಪ್ಪೇನ’ (Uppena) ಖ್ಯಾತಿಯ ನಿರ್ದೇಶಕ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡ್ತಿದ್ದಾರೆ.

  • ಶಿವಣ್ಣ ನಿವಾಸಕ್ಕೆ ಯಶ್‌ ದಂಪತಿ ಭೇಟಿ

    ಶಿವಣ್ಣ ನಿವಾಸಕ್ಕೆ ಯಶ್‌ ದಂಪತಿ ಭೇಟಿ

    ಹ್ಯಾಟ್ರಿಕ್ ಹೀರೋ ಶಿವಣ್ಣ ನಿವಾಸಕ್ಕೆ ಯಶ್ (Yash) ಮತ್ತು ರಾಧಿಕಾ ಪಂಡಿತ್ (Radhika Pandit) ಭೇಟಿ ನೀಡಿದ್ದಾರೆ. ಶಿವಣ್ಣ ಆರೋಗ್ಯದಲ್ಲಿ ಚೇತರಿಕೆಯ ನಂತರ ಮೊದಲ ಬಾರಿಗೆ ಯಶ್ ದಂಪತಿ ಭೇಟಿ ಕೊಟ್ಟಿದ್ದಾರೆ. ಇದನ್ನೂ ಓದಿ:ಮತ್ತೆ ನಿವೇದಿತಾ ಜೊತೆ ಒಂದಾಗಲ್ಲ: ಚಂದನ್ ಶೆಟ್ಟಿ ಸ್ಪಷ್ಟನೆ

    ಇತ್ತೀಚೆಗೆ ಚಿಕಿತ್ಸೆಗಾಗಿ ಶಿವಣ್ಣ (Shivarajkumar) ಅಮೆರಿಕಗೆ ಹೊರಟ ಸಂದರ್ಭದಲ್ಲಿ ಯಶ್ ಸಿನಿಮಾ ಕೆಲಸದಲ್ಲಿ ಬ್ಯುಸಿಯಿದ್ದರು. ಆ ನಂತರ ಗುಣಮುಖರಾಗಿ ವಿದೇಶದಿಂದ ಬಂದ್ಮೇಲೆಯೂ ಶಿವಣ್ಣರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ನಟನ ವಿವಾಸಕ್ಕೆ ಯಶ್ ಮತ್ತು ರಾಧಿಕಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

    ಇನ್ನೂ ಇಂದು ಶಿವಣ್ಣರನ್ನು ಭೇಟಿಯಾಗಲೆಂದೇ ಯಶ್ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್‌ಗೆ ಬ್ರೇಕ್ ಹಾಕಿದ್ದಾರೆ.

  • ಸರ್ಜರಿ ಬಳಿಕ ಜಾಲಿ ಮೂಡ್‌ನಲ್ಲಿ ಶಿವಣ್ಣ

    ಸರ್ಜರಿ ಬಳಿಕ ಜಾಲಿ ಮೂಡ್‌ನಲ್ಲಿ ಶಿವಣ್ಣ

    ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ (Shivarajkumar) ಅವರು ಸರ್ಜರಿ ಬಳಿಕ ವೆಕೇಷನ್‌ ಮೂಡ್‌ಗೆ ಜಾರಿದ್ದಾರೆ. ಅಮೆರಿಕದ ಕಡಲ ಕಿನಾರೆಯಲ್ಲಿ ಕಾಲ ಕಳೆದಿದ್ದಾರೆ. ಇದನ್ನೂ ಓದಿ:ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ: ಜೈಲಿನಿಂದ ಬಿಡುಗಡೆ ಬಳಿಕ ದರ್ಶನ್‌ ಮೊದಲ ಮಾತು

    ಸರ್ಜರಿ ಬಳಿಕ ಶಿವಣ್ಣ ಚೇತರಿಸಿಕೊಂಡಿದ್ದಾರೆ. ಬಿಡುವಿನ ಸಮಯದಲ್ಲಿ ಅಮೆರಿಕದ ಸುಂದರ ಜಾಗಗಳಿಗೆ ನಟ ಭೇಟಿ ಕೊಡುತ್ತಿದ್ದಾರೆ. ಅಮೆರಿಕದಲ್ಲಿ ಪತ್ನಿ ಗೀತಾ ಜೊತೆ ಸಮುದ್ರ ವೀಕ್ಷಿಸುತ್ತ ಕಾಲ ಕಳೆದಿದ್ದಾರೆ.

    ಮೊನ್ನೆಯಷ್ಟೇ ‘ನನ್ನ ಸಮುದ್ರ ನೀವು’ ಎಂದು ಫ್ಯಾನ್ಸ್ ಕುರಿತು ಶಿವಣ್ಣ ಲವ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಇನ್ನೂ ಜ.26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ಅವರು ತೊಡಗಿಸಿಕೊಳ್ಳಲಿದ್ದಾರೆ.

  • ಶಿವಣ್ಣ, ಉಪೇಂದ್ರ ಸಿನಿಮಾಗೆ ಕೈಜೋಡಿಸಿದ ಹಾಲಿವುಡ್ ತಂತ್ರಜ್ಞರು

    ಶಿವಣ್ಣ, ಉಪೇಂದ್ರ ಸಿನಿಮಾಗೆ ಕೈಜೋಡಿಸಿದ ಹಾಲಿವುಡ್ ತಂತ್ರಜ್ಞರು

    ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ (Raj B Shetty) ನಟನೆಯ ’45’ ಸಿನಿಮಾಗೆ ಮೊದಲ ಬಾರಿ ಅರ್ಜುನ್ ಜನ್ಯ (Arjun Janya) ನಿರ್ದೇಶನ ಮಾಡ್ತಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಈ ಚಿತ್ರಕ್ಕೆ ಹಾಲಿವುಡ್ ತಂತ್ರಜ್ಞರು ಕೈಜೋಡಿಸಿದ್ದಾರೆ. ಇದನ್ನೂ ಓದಿ:ಗೀತಾ ಶಿವರಾಜ್‌ಕುಮಾರ್ ನಿರ್ಮಾಣದಲ್ಲಿ ಧೀರೆನ್‌ ಹೊಸ ಸಿನಿಮಾ

    ಹಾಲಿವುಡ್‌ನ ಹಲವು ಸಿನಿಮಾಗಳಿಗೆ ವಿಎಫ್‌ಎಕ್ಸ್ ಮತ್ತು ಗ್ರಾಫಿಕ್ಸ್ ಕೆಲಸ ಮಾಡಿರುವ ಮಾರ್ಜ್ ಅನ್ನು ಸಂಪರ್ಕ ಮಾಡಿರುವ ಅರ್ಜುನ್ ಜನ್ಯ. ’45’ ಸಿನಿಮಾದ ವಿಎಫ್‌ಎಕ್ಸ್ ಕೆಲಸವನ್ನು ಸಂಸ್ಥೆಯ ನುರಿತ ತಂತ್ರಜ್ಞರಾದ ಮಿಸ್ಟರ್ ರಾಫೆಲ್ ಹಾಗೂ ಮಿಸ್ಟರ್ ಜಸ್ಟಿನ್ ಅವರು ಮಾಡಲಿದ್ದಾರೆ.

    ಹಾಲಿವುಡ್‌ನ ಜನಪ್ರಿಯ ಸಿನಿಮಾಗಳಾದ ‘ಆಂಟ್‌ಮ್ಯಾನ್’, ‘ವಾಂಡಾ ವಿಷನ್’, ‘ಮೂನ್ ಲೈಟ್’, ‘ವೆಡ್‌ನಸ್ ಡೇ’, ‘ಸ್ಟೇಂಜರ್ ಥಿಂಗ್ಸ್ 4’, ‘ಫ್ಯಾಂಟಸಿ ಐಲೆಂಡ್’, ‘ಸ್ಪೈಡರ್ ಮ್ಯಾನ್ ನೋ ವೇ ಹೋಮ್’ ಇನ್ನೂ ಹಲವಾರು ಇಂಗ್ಲೀಷ್ ಸಿನಿಮಾ ಹಾಗೂ ವೆಬ್ ಸರಣಿಗಳಿಗೆ ಈ ಸಂಸ್ಥೆ ಕೆಲಸ ಮಾಡಿದೆ.