Tag: Shivaprakash

  • ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ, ನನಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್‌

    ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ, ನನಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್‌

    ಬೆಂಗಳೂರು: ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ ಸಚಿವ, ಕೆಆರ್‌ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ (Byrati Basavaraj ) ಹೇಳಿದ್ದಾರೆ.

    ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ (Shivaprakash) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ಕೊಲೆಯಾದವನು ಮತ್ತು ಕೊಲೆ ಮಾಡಿದ ಆರೋಪಿಗಳು ನನಗೆ ಗೊತ್ತಿಲ್ಲ. ದೂರು ನೀಡಿದವರು ನನಗೆ ಗೊತ್ತಿಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್‌ಎಆರ್ ದಾಖಲಿಸಬಹುದೇ ಎಂದು ಪ್ರಶ್ನಿಸಿದರು.

    ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ನನಗೆ ಈ ವಿಚಾರ ಗೊತ್ತಾಯಿತು. ನನಗೆ ಸಂಬಂಧ ಇಲ್ಲದ ಪ್ರಕರಣದಲ್ಲಿ ನನ್ನ ಹೆಸರು ಬಂದಿದೆ. ಎಫ್‌ಐಆರ್‌ನಿಂದ ನನ್ನ ಹೆಸರು ತೆಗೆಯಲು ನಾನು ಕಾನೂನು ಸಮರ ಮಾಡುತ್ತೇನೆ. ಗೃಹ ಸಚಿವ ಪರಮೇಶ್ವರ್‌ ಅವರಿಗೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್

     

    ಏನಿದು ಪ್ರಕರಣ?
    ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ಮಂಗಳವಾರ ರಾತ್ರಿ ಶಿವಪ್ರಕಾಶ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದೆ. ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ ಭಾರತಿನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಬೈರತಿ ಬಸವರಾಜ್‌ ಎ5 ಆರೋಪಿಯಾಗಿದ್ದು ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ.

    ತಾಯಿ ನೀಡಿದ ದೂರಿನಲ್ಲಿ ಏನಿದೆ?
    ಕಿತ್ತಕನೂರು ಜಾಗದ ವಿಚಾರವಾಗಿ ರಿಯಲ್‌ ಎಸ್ಟೇಟ್‌ ಕೆಲಸ ಮಾಡುತ್ತಿದ್ದ ಮಗನನ್ನು ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್, ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ.

  • ರೌಡಿಶೀಟರ್ ಶಿವಪ್ರಕಾಶ್ ಕೊಲೆ ಕೇಸ್‌ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ

    ರೌಡಿಶೀಟರ್ ಶಿವಪ್ರಕಾಶ್ ಕೊಲೆ ಕೇಸ್‌ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ

    ಬೆಂಗಳೂರು: ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ (Shivaprakash) ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ,  ಕೆಆರ್‌ ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್ (Byrathi Basavaraj) ಹೆಸರು ತಳುಕು ಹಾಕಿಕೊಂಡಿದೆ.

    ಕೊಲೆ ಸಂಬಂಧ ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ ಭಾರತಿನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಬೈರತಿ ಬಸವರಾಜ್‌ ಎ5 ಆರೋಪಿಯಾಗಿದ್ದು ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

     

    ತಾಯಿ ನೀಡಿದ ದೂರಿನಲ್ಲಿ ಏನಿದೆ?
    ಕಿತ್ತಕನೂರು ಜಾಗದ ವಿಚಾರವಾಗಿ ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್ , ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ.

    ದೂರು ನೀಡಿದ್ದ ಶಿವಪ್ರಕಾಶ್‌:
    ಈ ಫೆಬ್ರವರಿ 21 ರಂದು ಶಿವಪ್ರಕಾಶ್‌ ಜಗದೀಶ್‌ ಮತ್ತು ಇತರರ ವಿರುದ್ಧ ಭಾರತಿ ನಗರ ಠಾಣೆಯಲ್ಲಿ ದೂರು ನೀಡಿದ್ದ. ಕಿತ್ತಕನೂರು ಬಳಿ ನಾನು ಜಾಗವನ್ನು ಖರೀದಿಸಿದ್ದೆ. ಈ ಜಾಗವನ್ನು ಮಾರಾಟ ಮಾಡಬೇಕೆಂದು ಜಗದೀಶ್‌ ಮತ್ತು ಇತರರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ನೀಡಿದ್ದ. ಈ ಸಂಬಂಧ ಜಗದೀಶ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

  • ಡ್ರಗ್ಸ್ ಪ್ರಕರಣ: ಶಿವಪ್ರಕಾಶ್ ಎ1, ರಾಗಿಣಿ ಎ2 ಆಗಿದ್ದು ಯಾಕೆ?

    ಡ್ರಗ್ಸ್ ಪ್ರಕರಣ: ಶಿವಪ್ರಕಾಶ್ ಎ1, ರಾಗಿಣಿ ಎ2 ಆಗಿದ್ದು ಯಾಕೆ?

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಡ್ರಗ್ಸ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಸಿಸಿಬಿ ವಿಚಾರಣೆಯ ವೇಳೆ ಹೊಸ ಹೊಸ ವಿಷಯಗಳು ಹೊರ ಬರುತ್ತಿವೆ. ಸದ್ಯ ಈ ಡ್ರಗ್ಸ್ ಕೇಸ್‍ನಲ್ಲಿ ಆರೋಪಿ ನಂಬರ್ 2 ಆಗಿರುವ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಜೀವರಾಜ್‌ ಆಳ್ವಾ ಪುತ್ರ ಸೇರಿದಂತೆ 12 ಮಂದಿ ವಿರುದ್ಧ ಕೇಸ್‌ – ಯಾವೆಲ್ಲ ಸೆಕ್ಷನ್‌? ಶಿಕ್ಷೆ ಏನು?

    ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತ ರವಿಶಂಕರ್ ಅರೆಸ್ಟ್ ಆದ ಬಳಿಕ ಒಬ್ಬೊಬ್ಬರಾಗಿ ಅರೆಸ್ಟ್ ಆಗುತ್ತಿದ್ದಾರೆ. ರವಿಶಂಕರ್ ಬಾಯಿಬಿಡುತ್ತಿದ್ದಂತೆ ನಟಿ ರಾಗಿಣಿ ಸಹ ಸಿಸಿಬಿ ಬಂಧನದಲ್ಲಿದ್ದಾರೆ. ನಂತರ ಶಿವಪ್ರಕಾಶ್ ಪಾತ್ರ ಗೊತ್ತಾಗಿದ್ದು, ಅಲ್ಲದೇ ವಿಚಾರಣೆ ವೇಳೆ ರವಿಶಂಕರ್ ಡೀಲರ್ ಅನ್ನೋದು ಬೆಳಕಿಗೆ ಬಂದಿದೆ.

    ಅಷ್ಟೇ ಅಲ್ಲದೇ ಶಿವಪ್ರಕಾಶ್ ಕೂಡ ಡ್ರಗ್ ಡೀಲ್ ಮಾಡುತ್ತಿದ್ದು, ಪಾರ್ಟಿಗಳಿಗೆ ಡ್ರಗ್ಸ್ ಕೊಡುತ್ತಿದ್ದನು. ರಾಗಿಣಿ ಸೇರಿ ಹಲವು ಮಾಡೆಲ್‍ಗಳಿಗೂ ಪಾರ್ಟಿಗಳಲ್ಲಿ ಡ್ರಗ್ಸ್ ಕೊಡುತ್ತಿದ್ದನು ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಈ ಡ್ರಗ್ಸ್ ಕೇಸ್‍ನಲ್ಲಿ ಶಿವಪ್ರಕಾಶ್ ಆರೋಪಿ ನಂಬರ್ 1 ಆಗಿದ್ದು, ನಟಿ ರಾಗಿಣಿ ಆರೋಪಿ ನಂಬರ್ 2 ಆಗಿದ್ದಾರೆ.

    ಪ್ರಕರಣದಲ್ಲಿ ಎ1 ಶಿವಪ್ರಕಾಶ್, ರಾಗಿಣಿಯನ್ನ ಎ2 ಏಕೆ ಮಾಡಲಾಯಿತು:
    ರವಿಶಂಕರ್ ಅರೆಸ್ಟ್ ಆದ ನಂತರವೇ ಶಿವಪ್ರಕಾಶ್ ರೋಲ್ ಗೊತ್ತಾಗಿದ್ದು, ವಿಚಾರಣೆ ವೇಳೆ ತಾನೂ ಡೀಲರ್ ಅನ್ನೋದನ್ನ ರವಿಶಂಕರ್ ಹೇಳಿದ್ದನು. ಸಾಕಷ್ಟು ಬಾರಿ ಶಿವಪ್ರಕಾಶ್ ಡೀಲ್ ಮಾಡಿ ರಾಗಿಣಿ ಸೇರಿದಂತೆ ಪಾರ್ಟಿಗಳಲ್ಲಿ ಡ್ರಗ್ಸ್ ಕೊಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿತ್ತು. ಅಲ್ಲದೇ ಶಿವಪ್ರಕಾಶ್ ಡ್ರಗ್ ಪೆಡ್ಲರ್‌ಗಳ ಜೊತೆ ವ್ಯವಹಾರ ಮಾಡಿರುವ ಸಾಕ್ಷಿ ಸಿಕ್ಕ ಹಿನ್ನೆಲೆ ಆತನನ್ನು ಆರೋಪಿ ನಂಬರ್ 1 ಮಾಡಲಾಗಿದೆ.

    ಇತ್ತ ಪ್ರಕರಣದಲ್ಲಿ ರಾಗಿಣಿ ಎಲ್ಲೂ ನೇರವಾಗಿ ಭಾಗಿಯಾಗಿರಲಿಲ್ಲ. ಶಿವಪ್ರಕಾಶ್ ಅಥವಾ ರವಿಶಂಕರ್ ಕೊಟ್ಟ ಡ್ರಗ್ಸ್ ಪಡೆದು ಪಾರ್ಟಿಯಲ್ಲಿ ನಟಿ ರಾಗಿಣಿ ಹಂಚಿಕೆ ಮಾಡಿದ್ದರು. ಅಲ್ಲದೇ ಎಲ್ಲೂ ಕೂಡ ರಾಗಿಣಿ ಹಣಕ್ಕಾಗಿ ಡ್ರಗ್ಸ್ ಮಾರಿಲ್ಲ ಅನ್ನೋದು ಗೊತ್ತಾಗಿದೆ. ಹೀಗಾಗಿ ಶಿವಪ್ರಕಾಶ್ ಎ1, ರಾಗಿಣಿ ಎ2 ಆಗಿದ್ದಾರೆ.